ಮೇಲೆ ಬೆಂಕಿ ಬಿಸಿಲು, ಒಳಗೆ ಮಸಾಲೆಯ ಭುಗಿಲು- ಬೇಸಿಗೆಯಲ್ಲಿ ಇದು ಬೇಡ - Vistara News

ಆಹಾರ/ಅಡುಗೆ

ಮೇಲೆ ಬೆಂಕಿ ಬಿಸಿಲು, ಒಳಗೆ ಮಸಾಲೆಯ ಭುಗಿಲು- ಬೇಸಿಗೆಯಲ್ಲಿ ಇದು ಬೇಡ

ಗರಂ ಮಸಾಲೆ ಹೆಚ್ಚು ಇರುವ ಆಹಾರ ಬಾಯಿಗೆ ರುಚಿ. ಆದರೆ ಬೇಸಿಗೆಯಲ್ಲಿ, ಹೆಚ್ಚು ಬಾಯಾರುವಾಗ ಈ ಬಗೆಯ ಆಹಾರಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. ಅದ್ಯಾವುದು ಇಲ್ಲಿ ನೋಡಿ.

VISTARANEWS.COM


on

garam masala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾವು ಭಾರತೀಯರಿಗೆ ಮಸಾಲೆಯಿಲ್ಲದ ಅಡುಗೆಯನ್ನು ಊಹನೆ ಮಾಡಲೂ ಸಾಧ್ಯವಿಲ್ಲ. ಸರಿಯಾದ ಸಂಪರ್ಕ, ಸಂವಹನ ಸಾಧನಗಳಿಲ್ಲದ ಕಾಲದಲ್ಲೇ, ಮಸಾಲೆ ಪದಾರ್ಥದ ಮೂಲಕವೇ ಇಡೀ ಪ್ರಪಂಚವನ್ನು ಭಾರತ ತನ್ನೆಡೆಗೆ ಆಕರ್ಷಿಸಿದ್ದು ಈಗ ಇತಿಹಾಸ. ಇಂತಹ ಮಸಾಲೆ ಪದಾರ್ಥಗಳು ಭಾರತದ ಪ್ರತಿ ರಾಜ್ಯದಲ್ಲೂ ಒಂದಿಲ್ಲೊಂದು ರೀತಿಯಲ್ಲಿ, ನಾನಾ ಅಡುಗೆಗಳ ರೂಪದಲ್ಲಿ ಜನಮಾನಸವನ್ನು ತನ್ನ ಬಿಗಿಮುಷ್ಟಿಯಲ್ಲಿ ಇಟ್ಟಿರುವುದೂ ಸುಳ್ಳಲ್ಲ. ಮಸಾಲೆ ಪದಾರ್ಥಗಳೆಡೆಗಿನ ಭಾರತೀಯರ ಮೋಹವೇ ಅಂತಹದ್ದು. ಅದಿಲ್ಲದೆ ಅಸ್ತಿತ್ವವೇ ಇಲ್ಲ ಎಂಬಷ್ಟು ಪ್ರತಿ ಅಡುಗೆಯಲ್ಲೂ ಮಸಾಲೆ ಪದಾರ್ಥಗಳು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿವೆ.

ಆಹಾರದ ರುಚಿಯನ್ನು ಇನ್ನಷ್ಟು ಮತ್ತಷ್ಟು ಉತ್ತಮಗೊಳಿಸುವಲ್ಲಿ ಮಸಾಲೆ ಪದಾರ್ಥಗಳ ಪಾತ್ರ ದೊಡ್ಡದು. ಆದರೆ, ಭಾರತದಲ್ಲಿ ಬೇಸಗೆಯ ಧಗೆ ಬಹುತೇಕ ರಾಜ್ಯಗಳಲ್ಲಿ ತೀವ್ರ ಸ್ವರೂಪನ್ನೇ ಪಡೆದಿರುತ್ತದೆ. ಹಾಗಾಗಿ ಇಂಥ ಮಸಾಲೆಗಳ ಅತಿಯಾದ ಬಳಕೆ ಬೇಸಗೆಯಲ್ಲಿ ಮಾತ್ರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರಬಹುದು.

ಕೆಂಪು ಮೆಣಸು: ಖಾರ ಎಂಬ ರುಚಿಯ ಅಮಲನ್ನು ಒಮ್ಮೆ ಹತ್ತಿಸಿಕೊಂಡರೆ ಬಹುತೇಕರು, ಮತ್ತೆ ಸಪ್ಪೆಯ ರುಚಿಯನ್ನು ಅಪ್ಪಿಕೊಳ್ಳುವುದಿಲ್ಲ. ಖಾರವಿಲ್ಲದ ಅಡುಗೆಯನ್ನು ಕನಸಿನಲ್ಲೂ ಯೋಚಿಸಲಾರರು. ರುಚಿಯೇ ಇಲ್ಲದ, ಪೇಲವ ಆಹಾರವೆಂಬಂತೆ ಖಾರವಿಲ್ಲದ ಅಡುಗೆಯನ್ನು ಮೂದಲಿಸಿಯಾರು. ಆದರೆ, ವಿಪರೀತ ಖಾರದಡುಗೆ ಖಂಡಿತ ದೇಹಕ್ಕೆ ಒಳ್ಳೆಯದಲ್ಲ. ಎಷ್ಟೇ ಅಭ್ಯಾಸಬಾದರೂ, ಬೇಸಗೆಯಲ್ಲಿ ಖಾರದಿಂದ ಸ್ವಲ್ಪ ದೂರ ಉಳಿಯುವುದೇ ಒಳ್ಳೆಯದು. ಮೂಗು ಬಾಯಿ, ಮೈಯಿಡೀ, ನೀರಿಳಿಸಿಕೊಂಡು ಧಗಧಗ ಉರಿವ ಬಿಸಿಲಲ್ಲಿ ಖಾರವಾದ ಅಡುಗೆ ಉಂಡರೆ ಹೊಟ್ಟೆ ಹೇಗೆ ತಂಪಾಗಿದ್ದೀತು? ಹೊಟ್ಟೆ ಹಾಗೂ ಎದೆಯುರಿಯನ್ನು ಇದು ಖಂಡಿತಾ ತಂದೊಡ್ಡಬಹುದು. ಹಾಗಾಗಿ, ಖಾರವನ್ನು ಬೇಸಿಗೆಯಲ್ಲಾದರೂ ಕಡಿಮೆ ಮಾಡಿ.

ಶುಂಠಿ: ಶುಂಠಿ ಕೂಡಾ ಖಾರವೇ! ಶುಂಠಿ ಹೇರಳವಾಗಿ ಉಪಯೋಗವಾಗುವುದು ಚಹಾದಲ್ಲಿ. ಪ್ರತಿದಿನ ಎದ್ದು ಚಹಾವೊಂದನ್ನು ಹೀರುತ್ತಾ ಪತ್ರಿಕೆ ಕೈಲಿ ಹಿಡಿಯದಿದ್ದರೆ ಬಹುತೇಕರಿಗೆ ಇಂದೂ ಬೆಳಗು ಬೆಳಗೆನಿಕೊಳ್ಳುವುದಿಲ್ಲ. ಶುಂಠಿ ಹಾಕಿದ ಚಹಾದ ಸ್ವಾದವೇ ಬೇರೆ. ಅದರಲ್ಲೂ ಧೋ ಎಂದು ಸುರಿವ ಮಳೆಯ ಹಿನ್ನೆಲೆಯಿದ್ದರೆ ಮುಗೀತು, ಶುಂಠಿ ಚಹಾದ ಸ್ಥಾನ ಯಾರಿಗೂ ಕದಿಯಲು ಸಾಧ್ಯವಿಲ್ಲ. ಒಮ್ಮೆ ಶುಂಠಿಯ ಹಾಕಿದ ಚಹಾ ಮೋಡಿ ಮಾಡಿದರೆ, ಆಗಾಗ ಇದೇ ಚಹಾ ಬೇಕೆನಿಸುವುದು ಸಹಜ. ಉತ್ತರ ಭಾರತದೆಲ್ಲೆಡೆ, ಶುಂಠಿ ಹಾಕಿದ ಚಹಾವೇ ಹೆಚ್ಚು ಜನಪ್ರಿಯವಾದರೂ ಅವರು ಬೇಸಗೆಯಲ್ಲಿ ಚಹಾಕ್ಕೆ ಶುಂಠಿ ಬಳಕೆ ನಿಲ್ಲಿಸಿಬಿಡುತ್ತಾರೆ. ಇದಲ್ಲದೆ, ಹಲವು ದಿನನಿತ್ಯದ ಆಹಾರಗಳಿಗೆ ನಾವು ಶುಂಠಿ ಬಳಸುತ್ತೇವೆ. ಆದರೆ, ಬೇಸಿಗೆಯಲ್ಲಿ ಅತಿಯಾದ ಶುಂಠಿ ಬಳಕೆ, ಎದೆಯುರಿ, ಹೊಟ್ಟೆನೋವು, ಬೇಧಿಯನ್ನು ತರಬಹುದು ಎಂದು ನೆನಪಿರಲಿ.

ಇದನ್ನೂ ಓದಿ: ಪ್ರಾಚೀನ ಭಾರತದ ಈ 5 ಆಹಾರಗಳನ್ನು ಜನರು ಈಗಲೂ ಸೇವಿಸುತ್ತಾರೆ

ಬೆಳ್ಳುಳ್ಳಿ: ಬೆಳ್ಳುಳ್ಳಿ ಬಹುತೇಕ ಭಾರತೀಯರ ಅಡುಗೆಯಲ್ಲಿ ಮುಖ್ಯಪಾತ್ರ ವಹಿಸುತ್ತದೆ. ಆರೋಗ್ಯಕ್ಕೆ ಒಳ್ಳೆಯದು ಕೂಡಾ. ಆದರೆ ಉಷ್ಣಗುಣವನ್ನು ಹೊಂದಿದ ಇದು ಬೇಸೆಗೆಗೆ ಮಾತ್ರ ತಾಳೆಯಾಗುವುದಿಲ್ಲ. ಇದನ್ನು ಬೇಸಿಗೆಯಲ್ಲಿ ಮಿತಿಗಿಂತ ಹೆಚ್ಚು ಸೇವಿಸಿದರೆ ದೇಹದ ಉ಼ಷ್ಣ ಪ್ರಕೃತಿ ಹೆಚ್ಚಾಗಿ, ದೇಹದಲ್ಲಿ ಆಮ್ಲೀಯತೆಯನ್ನು ಸೃಷ್ಟಿಸಿ ರಕ್ತಸ್ರಾವ, ಹೊಟ್ಟೆನೋವನ್ನು ತರಬಹುದು. ಇದನ್ನು ಹೆಚ್ಚು ತಿಂದರೆ ವಾಸನೆಯುಕ್ತ ಬೆವರು, ಬಾಯಿಯ ಕೆಟ್ಟವಾಸನೆಯ ಸಮಸ್ಯೆಯನ್ನಂತೂ ಪ್ರತ್ಯೇಕ ಹೇಳಬೇಕಾಗಿಲ್ಲ.

ಗರಂ ಮಸಾಲೆ: ಕೆಲವು ದಿಢೀರ್‌ ಅಡುಗೆಗಳ ಸ್ವಾದವನ್ನು ದಿಢೀರ್‌ ಹೆಚ್ಚಿಸುವಲ್ಲಿ ಗರಂ ಮಸಾಲೆಯ ಪಾತ್ರ ದೊಡ್ಡದು. ವಿವಿಧ ಮಸಾಲೆಗಳನ್ನು ಪುಡಿ ಮಾಡಿ ಮಾಡುವ ಈ ಗರಂ ಮಸಾಲೆ ಎಂಬ ಮಿಶ್ರಣವನ್ನು ಆದಷ್ಟು ಕಡಿಮೆ ಬಳಸಿದರೆ, ಬೇಸಗೆಯಲ್ಲಿ ಆರೋಗ್ಯವೇ ಭಾಗ್ಯವಾಗಬಹುದು. ಇಲ್ಲವಾದಲ್ಲಿ ಪದೇ ಪದೆ ಎದೆಯುರಿ ಕಟ್ಟಿಟ್ಟ ಬುತ್ತಿ. ಹಾಗಾಗಿ ಆದಷ್ಟೂ ಮಸಾಲೆಯುಕ್ತ ಆಹಾರ ಸೇವನೆ ಬೇಸಗೆಯಲ್ಲಿ ಕಡಿಮೆ ಮಾಡಿ, ತಂಪಾದ ಹಿತಮಿತ ಆಹಾರ ಸೇವನೆ ಜೊತೆಗೆ ದೇಹಕ್ಕೆ ತಂಪೆರೆಯುವ ಪ್ರಕೃತಿದತ್ತ ಪಾನೀಯಗಳನ್ನು ಇವುಗಳ ಸ್ಥಾನದಲ್ಲಿ ಸೇರಿಸಿಕೊಳ್ಳುವುದು ಒಳ್ಳೆಯದು.

ಇದನ್ನೂ ಓದಿ: World Food Safety Day: ನಿಮ್ಮ ಆಹಾರ ಆರೋಗ್ಯಕರ ಎನಿಸಬೇಕಾದರೆ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Chemicals in Food: ಗೋಬಿ- ಕಬಾಬ್‌ ಆಯ್ತು‌, ಈಗ ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಿ ವಿಷ ಪತ್ತೆ; ಸದ್ಯದಲ್ಲೇ ಬ್ಯಾನ್?

Chemicals in Food: ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನು ಸಂಗ್ರಹ ಮಾಡಿಕೊಂಡು ಟೆಸ್ಟ್ ಮಾಡಲಾಗಿದೆ. ಬೆಂಗಳೂರಿನ 19 ಕಡೆಗಳಲ್ಲಿ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿರುವುದು ಕಂಡುಬಂದಿದೆ.

VISTARANEWS.COM


on

chemicals in food panipuri
Koo

ಬೆಂಗಳೂರು: ಮಳೆ ಬರುತ್ತಿದೆ, ಸ್ವಲ್ಪ ಚಳಿ ಇದೆ. ಸಂಜೆ ಬಿಸಿಬಿಸಿ ಪಾನಿಪುರಿ (Panipuri) ಸವಿಯೋಣ ಎಂದು ಸವಾರಿ ಹೊರಡುವವರಿಗೆ ಬೆಚ್ಚಿ ಬೀಳಿಸುವಂಥ ಸುದ್ದಿ ಇಲ್ಲಿದೆ. ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ ಕೊಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (food safety and standards authority of india) ತಯಾರಿ ಮಾಡಿಕೊಳ್ಳುತ್ತಿದೆ. ಅದಕ್ಕೆ ಕಾರಣ, ಪಾನಿಪುರಿಯಲ್ಲಿ ಕಂಡುಬಂದಿರುವ ಕ್ಯಾನ್ಸರ್‌ಕಾರಕ (Carcinogenic), ಹಾನಿಕಾರಕ ರಾಸಾಯನಿಕ (Chemicals in Food) ವಿಷಗಳು.

ಹೌದು. ಗೋಬಿ ಮಂಚೂರಿ (Gobi Manchurian) ಹಾಗೂ ಕಬಾಬ್ (Kebab) ಬಳಿಕ ಇದೀಗ ಪಾನಿಪುರಿಯಲ್ಲಿಯೂ ಕ್ಯಾನ್ಸರ್ ಕಾರಕ ಅಂಶಗಳು ಇರುವುದನ್ನು ಪತ್ತೆ ಮಾಡಲಾಗಿದೆ. ಇದರ ಪರಿಶೀಲನೆಗಾಗಿ ಬೆಂಗಳೂರಿನ 49 ಪ್ರದೇಶಗಳಿಂದ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ಪರಿಶೀಲಿಸಿದಾಗ, ಎಲ್ಲ 19 ಕಡೆಯ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಲ್ಯಾಬ್‌ ಟೆಸ್ಟಿಂಗ್‌ನಲ್ಲಿ, ಪಾನಿಪೂರಿಗೆ ಬಳಸುವ ಐದು ಸಾಸ್, ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳಿರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳನ್ನು ಬ್ಯಾನ್ ಮಾಡಲು ನಿರ್ಧರಿಸಲಾಗಿದೆ. ಕ್ಯಾನ್ಸರ್ ಕಾರಕಗಳು ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡಲಾಗುತ್ತದೆ.

ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನು ಸಂಗ್ರಹ ಮಾಡಿಕೊಂಡು ಟೆಸ್ಟ್ ಮಾಡಲಾಗಿದೆ. ಬೆಂಗಳೂರಿನ 19 ಕಡೆಗಳಲ್ಲಿ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಈ ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗುತ್ತದೆ. ಹೀಗಾಗಿ, ಇನ್ನೊಂದು ವಾರದಲ್ಲಿ ಪಾನಿಪುರಿಗೆ ಹಾಕುವ ಸಾಸ್ ಮತ್ತು ಮಿಟಾ ಬ್ಯಾನ್ ಮಾಡಲು ನಿರ್ಧರಿಸಲಾಗಿದ್ದು, ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ.

ಪಾನಿಪುರಿಯಲ್ಲಿ ವಿಷಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್, ಜನತೆ ವಿವೇಚನೆಯಿಂದ ಈ ಆಹಾರ ಸೇವಿಸಬೇಕು ಎಂದಿದ್ದಾರೆ.

“ನಾವು ರಾಜ್ಯಾದ್ಯಂತ ಸುಮಾರು 260 ಪಾನಿಪುರಿ ಮಾದರಿಗಳನ್ನು ಸಂಗ್ರಹ ಮಾಡಿದ್ದೆವು. ಸಂಗ್ರಹ ಮಾಡಿದ ಮಾದರಿಗಳನ್ನು ಲ್ಯಾಬ್‌ಗಳಿಗೆ ಕಳುಹಿಸಿಕೊಟ್ಟಿದ್ದೆವು. ಪಾನಿಪುರಿ ಸಾಸ್ ಅಥವಾ ಪಾನಿಗಳನ್ನು ನಾವು ಟೆಸ್ಟ್ ಮಾಡಿಸಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಾದರಿಗಳು ಹೆಚ್ಚಾಗಿ ಅಪಾಯಕಾರಿ ಅಂತ ಕಂಡುಬಂದಿವೆ. ಜನರನ್ನು ಭಯಭೀತರಾಗಿ ಮಾಡುವ ಉದ್ದೇಶ ನಮಗಿಲ್ಲ. ಈ ರೀತಿಯ ಸ್ಟ್ರೀಟ್ ಫುಡ್‌ಗಳು ನಿಧಾನವಾಗಿ ದೇಹಕ್ಕೆ ಅಪಾಯ ತಂದೊಡ್ಡುತ್ತವೆ. ಕ್ಯಾನ್ಸರ್ ಸೇರಿ ಡೇಂಜರ್ ರೋಗಗಳನ್ನು ತರುತ್ತವೆ. ಹೀಗಾಗಿ ಜನರೂ ಸಹ ಈ ಬಗ್ಗೆ ಯೋಚನೆ ಮಾಡಿ ಹೊರಗಿನ ಆಹಾರ ಸೇವನೆ ಮಾಡಬೇಕು” ಎಂದು ಶ್ರೀನಿವಾಸ್‌ ಹೇಳಿದ್ದಾರೆ.

ಗೋಬಿ ಬಳಿಕ ಕಬಾಬ್‌ಗೂ ಕೃತಕ ಬಣ್ಣ ನಿಷೇಧ

ಗೋಬಿ ಬಳಿಕ ಕಬಾಬ್‌ಗೂ ಕೃತಕ ಬಣ್ಣ (Artificial Colours Ban) ಬಳಕೆಗೂ ರಾಜ್ಯ ಸರ್ಕಾರ ನಿಷೇಧ ಹೇರಿದೆ. ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್‌ (chicken, fish kebab) ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ.

ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ, ಬಾಂಬೆ ಮಿಠಾಯಿಗೆ ಕಲರ್‌ ಹಾಕುವುದನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಕಬಾಬ್‌ ಸರದಿಯಾಗಿದೆ. ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗೆ (artificial colours in Kebab) ಬೆರಸುವ ಕೃತಕ ಬಣ್ಣ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು.

ರಾಜ್ಯಾದ್ಯಂತ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ ಎಂದು ಸೂಚಿಸಿದೆ.

ಇದನ್ನೂ ಓದಿ | Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

Continue Reading

ಆಹಾರ/ಅಡುಗೆ

Empty Stomach Foods: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಉತ್ತಮ!

Empty Stomach Foods: ಬೆಳಗ್ಗೆ ಒಳ್ಳೆಯ ಆಹಾರ ತಿಂದರೆ, ಸಹಜವಾಗಿಯೇ ಇಡೀ ದಿನ ನಿಮ್ಮ ದೇಹ ಉಲ್ಲಸಿತವಾಗಿರುತ್ತದೆ. ಇಲ್ಲವಾದರೆ, ಉತ್ಸಾಹ ಕಡಿಮೆಯಾಗುತ್ತದೆ. ದೇಹ ಬಳಸುತ್ತದೆ. ಉದಾಸೀನತೆ, ಮೈಗಳ್ಳತನ ಕಾಡುತ್ತದೆ. ನಿದ್ದೆ, ಸೋಮಾರಿತನ ಎಳೆಯುತ್ತದೆ. ದೇಹ ಚುರುಕಾಗಿರಬೇಕಾದರೆ, ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು ಎಂಬುದು ನಮಗೆ ಗೊತ್ತಿರಬೇಕು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Empty Stomach Foods
Koo

ಬೆಳಗ್ಗೆ ಎದ್ದ ಕೂಡಲೇ ಏನು ತಿನ್ನುತ್ತೇವೆ (Empty Stomach Foods) ಎಂಬುದರ ಮೇಲೆ ಇಡೀ ದಿನ ನಮ್ಮ ದೇಹ ಹೇಗಿರುತ್ತದೆ ಎಂಬುದು ಅವಲಂಬಿತವಾಗುತ್ತದೆ ಎಂಬುದು ತಿಳಿದವರ ಮಾತು. ಆರೋಗ್ಯದ ವಿಚಾರಕ್ಕೆ ಬಂದರೆ ಈ ಮಾತು ನೂರಕ್ಕೆ ನೂರರಷ್ಟು ಸತ್ಯ. ಯಾಕೆಂದರೆ, ಬೆಳಗ್ಗೆ ಒಳ್ಳೆಯ ಆಹಾರ ತಿಂದರೆ, ಸಹಜವಾಗಿಯೇ ಇಡೀ ದಿನ ನಿಮ್ಮ ದೇಹ ಉಲ್ಲಸಿತವಾಗಿರುತ್ತದೆ. ಇಲ್ಲವಾದರೆ, ಉತ್ಸಾಹ ಕಡಿಮೆಯಾಗುತ್ತದೆ. ದೇಹ ಬಳಸುತ್ತದೆ. ಉದಾಸೀನತೆ, ಮೈಗಳ್ಳತನ ಕಾಡುತ್ತದೆ. ನಿದ್ದೆ, ಸೋಮಾರಿತನ ಎಳೆಯುತ್ತದೆ. ದೇಹ ಚುರುಕಾಗಿರಬೇಕಾದರೆ, ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು ಎಂಬುದು ನಮಗೆ ಗೊತ್ತಿರಬೇಕು. ಬಹಳಷ್ಟು ಮಂದಿ ಬೆಳಗ್ಗೆದ್ದ ಕೂಡಲೇ ಚಹಾದ ಮೊರೆ ಹೋಗುವುದು ಸಾಮಾನ್ಯವೇ ಆದರೂ, ಅದನ್ನು ಬಿಟ್ಟು ಒಳ್ಳೆಯ ಆಹಾರದತ್ತ ಗಮನ ಹರಿಸುವುದಿದ್ದರೆ, ನೀವು ಖಾಲಿ ಹೊಟ್ಟೆಯಲ್ಲಿ ಏನೇನೆಲ್ಲ ತಿಂದರೆ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದು ನೋಡೋಣ ಬನ್ನಿ.

Egg Protein Foods

ಮೊಟ್ಟೆ

ದಿನದ ಆರಂಭವನ್ನು ಮಾಡುವುದಿದ್ದಲ್ಲಿ ಮೊಟ್ಟೆ ಅತ್ಯುತ್ತಮ ಆಹಾರ. ಮೊಟ್ಟೆಯಲ್ಲಿ ಪ್ರೊಟೀನ್‌ ಸೇರಿದಂತೆ ದೇಹಕ್ಕೆ ಬೇಕಾದ ಬಹಳಷ್ಟು ಪೋಷಕಾಂಶಗಳು ಇವೆ. ದೇಹ ಜಡವಾಗಿದ್ದಾಗ, ಮಲಗಿ ಎದ್ದ ಕೂಡಲೇ ಚುರುಕುಗೊಳಿಸಲು, ಉಲ್ಲಾಸ ನೀಡಿ ತಕ್ಷಣ ಚಿಗಿತುಕೊಳ್ಳಲು ಮೊಟ್ಟೆ ಬಹಳ ಒಳ್ಳೆಯದು. ಬೇಯಿಸಿ, ಆಮ್ಲೆಟ್‌ ಮಾಡಿ, ಅಥವಾ ಇನ್ನಾವುದೇ ತಿನಿಸಿನ ರೂಪದಲ್ಲಿ ಅದನ್ನು ನೀವು ತಿನ್ನಬಹುದು. ಹಾಗಾಗಿ ಇದು ಒಂದು ಅತ್ಯುತ್ತಮವಾದ ಬ್ರೇಕ್‌ಫಾಸ್ಟ್‌ ಆಯ್ಕೆ.

Mixed Nuts and Seeds Weight Loss Snacks

ಬೀಜಗಳು

ಒಂದು ಮುಷ್ಟಿ ಒಂದು ಬೀಜಗಳನ್ನು ಬೆಳಗ್ಗೆ ಎದ್ದ ಕೂಡಲೇ ಬಾಯಿಗೆ ಹಾಕಿಕೊಳ್ಳುವುದು ಒಳ್ಳೆಯ ಅಭ್ಯಾಸ. ಇದು ನಿಮ್ಮ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳಗ್ಗೆ ಬೇಕಾದ ಶಕ್ತಿಯನ್ನು ಇದು ಒಡನೆಯೇ ನೀಡುತ್ತದೆ. ರಾತ್ರಿ ಬೀಜಗಳನ್ನು ನೆನೆ ಹಾಕಿ ಬೆಳಗ್ಗೆ ಎದ್ದ ಕೂಡಲೇ ತಿನ್ನುವುದರಿಂದ ಬೀಜಗಳ ಎಲ್ಲ ಬಗೆಯ ಪೋಷಕಾಂಶಗಳ ಲಾಭವನ್ನೂ ದೇಹ ಪಡೆದುಕೊಳ್ಳುತ್ತದೆ.

Papaya Digestive Boosting Foods

ಪಪ್ಪಾಯಿ

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದು ಕೂಡಾ ಒಳ್ಳೆಯದು. ಪಪ್ಪಾಯಿಯಲ್ಲಿ ಕಡಿಮೆ ಕ್ಯಾಲರಿಯಿದ್ದು, ಅತ್ಯಂತ ಹೆಚ್ಚು ಪೋಷಕಾಂಶಗಳನ್ನು ಹೊಂದಿದೆ. ಇದು ಹೊಟ್ಟೆ ಹಾಗೂ ಜೀರ್ಣಾಂಗವ್ಹೂಹಕ್ಕೆ ಒಳ್ಳೆಯದು. ತೂಕ ಇಳಿಸುವ ಮಂದಿಗೂ ಅತ್ಯಂತ ಒಳ್ಳೆಯದು.

Berries Abdominal Obesity

ಬೆರ್ರಿ

ಬೆಳಗಿನ ಖಾಲಿ ಹೊಟ್ಟೆಗೆ ಬೆರ್ರಿ ಹಣ್ಣುಗಳು ಉತ್ತಮ. ಬೆರ್ರಿ ಹಣ್ಣುಗಳಲ್ಲಿ ಹೆಚ್ಚು ನಾರಿನಂಶ ಇರುವುದರಿಂದ ಇದು ನಿಮ್ಮನ್ನು ಹೆಚ್ಚು ಹೊತ್ತು ಹೊಟ್ಟೆ ತುಂಬಿರುವಂತೆ ನೋಡಿಕೊಳ್ಳುತ್ತದೆ. ಕಡಿಮೆ ಕ್ಯಾಲರಿಯ ಆಹಾರ ಇದಾಗಿದ್ದು, ಸ್ವಲ್ಪ ಹೆಚ್ಚು ತಿಂದರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸ್ಟ್ರಾಬೆರ್ರಿ, ಬ್ಲೂಬೆರ್ರಿ ಮತ್ತಿರರ ಯಾವುದೇ ಬೆರ್ರಿ ವಿಧಗಳನ್ನು ಬೆಳಗ್ಗೆ ಸೇವಿಸುವುದು ಉತ್ತಮ.

Oats Vegetarian foods for stamina

ಓಟ್ಸ್‌

ಓಟ್ಸ್‌ ಅಥವಾ ಓಟ್‌ಮೀಲ್‌ ಬೆಳಗ್ಗೆ ತಿನ್ನುವುದು ಒಳ್ಳೆಯದು. ಇದರಲ್ಲೂ ನಾರಿನಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿದ್ದು, ಹೊಟ್ಟೆ ತುಂಬಿಸಲು ಸರಿಯಾದ ಆಹಾರ. ಇದರ ಜೊತೆಗೆ ಒಣ ಬೀಜಗಳು ಹಾಗೂ ನಿಮ್ಮ ಇಷ್ಟ ಹಣ್ಣುಗಳನ್ನೂ ಸೇರಿಸಬಹುದು. ಸಕ್ಕರೆ ಸೇರಿಸದೆ, ಹಾಗೆಯೇ ಹಾಲಿನ ಜೊತೆಗೆ ಮಾಡಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಗ್ಯಾಸ್‌, ಹೊಟ್ಟೆಯುಬ್ಬರ ಇತ್ಯಾದಿ ಸಮಸ್ಯೆಯಿರುವ ಮಂದಿಗೂ ಇದು ಒಳ್ಳೆಯದು.

ಇದನ್ನೂ ಓದಿ: Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Continue Reading

ಆರೋಗ್ಯ

Nandini Milk: ನಂದಿನಿ ಹಾಲಿನ ಯಾವ ಬಣ್ಣದ ಪ್ಯಾಕೆಟ್ ಯಾವುದಕ್ಕೆ ಸೂಕ್ತ? ಖರೀದಿಸುವಾಗ ಈ ಸಂಗತಿ ನೆನಪಿನಲ್ಲಿರಲಿ

ವಿವಿಧ ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ನಂದಿನಿ ಹಾಲು (Nandini Milk) ಬೇರೆಬೇರೆಯಾಗಿರುತ್ತದೆ. ವಿವಿಧ ರೀತಿಯ ಬಳಕೆಗೆ ಬೇರೆಬೇರೆ ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ಹಾಲನ್ನು ಬಳಸಿದರೆ ರುಚಿ, ಸುವಾಸನೆಯಲ್ಲಿ ವ್ಯತ್ಯಾಸ ಕಾಣಬಹುದು. ಎಲ್ಲ ಹಾಲು ಎಲ್ಲರಿಗೂ ಸೂಕ್ತವಲ್ಲ. ಯಾವ ಹಾಲು ಯಾರಿಗೆ ಹೆಚ್ಚು ಸೂಕ್ತ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Nandini Milk
Koo

ನಾವು ದಿನ ನಿತ್ಯ ಬಳಸುವ ನಂದಿನಿ ಹಾಲಿನ (Nandini Milk) ಬಗ್ಗೆ ನಮಗೆಷ್ಟು ಗೊತ್ತಿದೆ ಎನ್ನುವುದನ್ನು ಪರೀಕ್ಷಿಸಬೇಕು. ಯಾಕೆಂದರೆ ಮನೆ (Home) ಬಳಕೆಗೆ ನಾವು ಇಷ್ಟವಾಗುವ ಹಾಲನ್ನು (milk) ಹೊತ್ತುಕೊಂಡು ಬರುತ್ತೇವೆ. ಆದರೆ ಅದರ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ವಿವಿಧ ಬಣ್ಣದ (different colour) ಪ್ಯಾಕೆಟ್ ನಲ್ಲಿರುವ ನಂದಿನಿ ಹಾಲು ಯಾರಿಗೆ, ಯಾವುದು ಸೂಕ್ತ ಎಂದು ತಿಳಿದುಕೊಂಡು ಬಳಸಿದರೆ ಅದರ ಸಂಪೂರ್ಣ ಪ್ರಯೋಜನ ಪಡೆಯಲು ಸಾಧ್ಯ. ಹಲವಾರು ಕಂಪನಿಗಳ ಹಾಲು ಪ್ಯಾಕೆಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದರೂ ಕರ್ನಾಟಕದ ಜನರು ಇಷ್ಟಪಡುವ ಹೆಮ್ಮೆಯ ಬ್ರಾಂಡ್ ನಂದಿನಿ. ಲಕ್ಷಾಂತರ ಮನೆಗಳನ್ನು ತಲುಪುವ ಇದರೊಂದಿಗೆ ನಮ್ಮ ನಂಟು ಕೂಡ ಬಿಡಿಸಲಾಗದ್ದು ಎಂದರೆ ತಪ್ಪಾಗಲಾರದು. ನೀಲಿ, ಹಸಿರು, ಕೇಸರಿ.. ಸೇರಿ ವಿವಿಧ ಬಣ್ಣದ ಪ್ಯಾಕೆಟ್ ನಲ್ಲಿ ಇದು ಲಭ್ಯವಿದ್ದು, ಇದರ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ.

Good life

ಗುಡ್ ಲೈಫ್ ಪ್ಯಾಕೆಟ್

ಬೆಳಗ್ಗೆ ಎದ್ದು ಹಾಲು ಕಾಯಿಸಲು ಪುರುಸೊತ್ತು ಇಲ್ಲ ಎನ್ನುವವರು ಈ ಹಾಲನ್ನು ಮನೆಗೆ ತರಬಹುದು. ಟೆಟ್ರಾ ಪ್ಯಾಕೆಟ್ ನಲ್ಲಿ ಲಭ್ಯವಿರುವ ಈ ಹಾಲನ್ನು ಕಾಯಿಸದೇ ಕುಡಿಯಬಹುದು. ಯಾಕೆಂದರೆ ಈ ಹಾಲು ಪ್ಯಾಕ್ ಮೊದಲು 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ ನಾಲ್ಕು ನಿಮಿಷಗಳವರೆಗೆ ಕಾಯಿಸಲಾಗುತ್ತದೆ. ಬಳಿಕ ತಕ್ಷಣವೇ ತಣ್ಣಗೆ ಮಾಡಿ ಪ್ಯಾಕ್ ಮಾಡಲಾಗುತ್ತದೆ. ಹೀಗಾಗಿ ಇದರಲ್ಲೂ ಬ್ಯಾಕ್ಟೀರಿಯಾ ಬೆಳೆಯುವುದಿಲ್ಲ. ಟೆಟ್ರಾ ಪ್ಯಾಕ್ ನಲ್ಲಿ ಇರುವುದರಿಂದ ಹಾಲು ಹಾಳಾಗುವುದಿಲ್ಲ. ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗೋದಿಲ್ಲ ಎಂಬ ಚಿಂತೆ ಇರುವವರು ಗುಡ್ ಲೈಫ್ ಟೆಟ್ರಾ ಪ್ಯಾಕ್ ಖರೀದಿ ಮಾಡಿ ಹತ್ತು ದಿನದವರೆಗೆ ಇಟ್ಟುಕೊಳ್ಳಬಹುದು. ಕಾಯಿಸದೇ ಹಾಗೇ ಕುಡಿಯಬಹುದು.

Nandini Milk green color

ಹಸಿರು ಬಣ್ಣದ ಪ್ಯಾಕೆಟ್

ಕಾಫಿ, ಟೀ ಮಾಡಿ ಕುಡಿಯುವವರು ಹಸಿರು ಬಣ್ಣದ ಪ್ಯಾಕೆಟ್ ಅನ್ನು ಬಳಸಬಹುದು. ಇದು ಹೊಮೊಜಿನೈಸೆಡ್ ಪಾಸ್ಚರೀಕರಿಸಿದ ಹಸುವಿನ ಹಾಲು ಕೊಂಚ ಗಾಢವಾಗಿರುತ್ತದೆ. ಕಾಫಿ, ಟೀ ರುಚಿಯನ್ನು ಹೆಚ್ಚಿಸುತ್ತದೆ. ಈ ಹಾಲನ್ನು ಮನೆಯಲ್ಲಿರುವ ಪುಟ್ಟ ಮಕ್ಕಳಿಗೂ ಕೊಡಬಹುದು. ಯಾಕೆಂದರೆ ಬೇರೆ ಪ್ಯಾಕೆಟ್ ಹಾಲಿನಲ್ಲಿ ಹಸುಗಳ ಹಾಲಿನ ಜೊತೆಗೆ ಎಮ್ಮೆ ಹಾಲು ಸೇರಿಕೊಂಡಿರುತ್ತದೆ. ಕೇವಲ ಹಾಲು ಕುಡಿಯುವವರಿಗೂ ಇದು ಒಳ್ಳೆಯದು. ಗಟ್ಟಿ ಮೊಸರು ಮಾಡಬೇಕಿದ್ದರೆ ಹಸಿರು ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ಸ್ಪೆಷಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ಖರೀದಿ ಮಾಡುವುದು ಒಳ್ಳೆಯದು.

purpel colour

ನೇರಳೆ ಬಣ್ಣದ ಪ್ಯಾಕೆಟ್

ಕಾಫಿಯಲ್ಲಿ ಕೆನೆ ಸಮೃದ್ದವಾಗಿರಬೇಕು ಎಂದು ಬಯಸುವವರು ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ಖರೀದಿ ಮಾಡಬಹುದು. ಇದರಲ್ಲಿ ಪೂರ್ತಿ ಕೆನೆಯ ಅಂಶ ಇರುತ್ತದೆ. ಆದರೂ ಇದು ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕೆಂದರೆ ಇದನ್ನು ಹೊಮೊಜಿನೈಸ್ಡ್ ಹದಕ್ಕೆ ತಂದು ಪ್ಯಾಕ್ ಮಾಡಲಾಗುತ್ತದೆ. ಇದನ್ನು ಸಿಹಿ ಪದಾರ್ಥ, ಪಾಯಸ ಮಾಡಲು ಬಳಸಬಹುದು. ಯಾಕೆಂದರೆ ಇದು ಖಾದ್ಯದ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸುತ್ತದೆ.

Nandini Milk Orange color

ಕಿತ್ತಳೆ ಬಣ್ಣದ ಪ್ಯಾಕೆಟ್

ಕಿತ್ತಳೆ ಬಣ್ಣದ ಶುಭಂ ಪ್ಯಾಕೆಟ್ ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ಹಾಲು ಬೆಳೆಯುವ ಮಕ್ಕಳಿಗೆ ಒಳ್ಳೆಯದು. ಇದರಲ್ಲಿ ಮಕ್ಕಳಿಗೆ ಬೇಕಾಗುವ ಕೊಬ್ಬಿನಾಂಶ ಇರತ್ತದೆ. ಮಕ್ಕಳ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ತುಂಬುತ್ತದೆ.

Yellow color

ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್

ಗುಡ್ ಲೈಫ್ ಸ್ಲಿಮ್ಡ್ ಸ್ಕಿಮ್ ಮಿಲ್ಕ್ ಪ್ಯಾಕೆಟ್ ಹಿರಿಯರಿಗೆ ಒಳ್ಳೆಯದು. ಇದರಲ್ಲಿ ಕೊಬ್ಬಿನಾಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ. ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ ನಲ್ಲಿರುವ ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ನಲ್ಲೂ ಕೊಬ್ಬಿನಾಂಶ ಕಡಿಮೆ ಇರುತ್ತದೆ. ದೇಹದ ಕೊಬ್ಬು ಕರಗಬೇಕು ಎನ್ನುವವರೂ ಈ ಹಾಲನ್ನು ಬಳಸಬಹುದು. ಹಳದಿ ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ ಸೂಕ್ತವಾಗಿದೆ. ಹಾಲನ್ನು ಚೆನ್ನಾಗಿ ಕುದಿಸಿ ಕುಡಿಯುವವರು ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಹಾಲನ್ನು ಬೇಕಾದರೂ ಬಳಸಬಹುದು.

ಇದನ್ನೂ ಓದಿ: Health Tips: ನೀವು ಕುಡಿಯುವ ಹಾಲಿನಲ್ಲಿ ಕಲಬೆರಕೆಯೇ? ಹೀಗೆ ಸುಲಭವಾಗಿ ಪತ್ತೆ ಹಚ್ಚಿ!

Continue Reading

ಕರ್ನಾಟಕ

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

Pralhad Joshi: ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMT ನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Central Government monitoring wheat price stability: Union Minister Pralhad Joshi
Koo

ನವದೆಹಲಿ: ದೇಶದಲ್ಲಿ ಗೋಧಿ ಬೆಲೆ ಸ್ಥಿರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಗಾ ವಹಿಸಲು ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಮಿತಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಆಹಾರೋತ್ಪನ್ನಗಳ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಇರುವ ಮಾರ್ಗಗಳ ಕುರಿತು ಮಾಹಿತಿ ಕಲೆ ಹಾಕಲಾಯಿತು ಎಂದು ಹೇಳಿದ್ದಾರೆ.

ಅಗತ್ಯ ವಸ್ತುಗಳ ಬೆಲೆಗಳನ್ನು ಪರಿಶೀಲಿಸಲೆಂದೇ ನಡೆದ ಈ ಸಭೆಯಲ್ಲಿ ವಿಶೇಷವಾಗಿ ಗೋಧಿ ದಾಸ್ತಾನು ಮತ್ತು ಬೆಲೆ ಬಗ್ಗೆ ಪ್ರಸ್ತಾಪಿಸಿ, ಚರ್ಚಿಸಲಾಯಿತು.

ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

2024ರ ಜೂನ್ 18ರವರೆಗೆ 266 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹಿಸಲಾಗಿದೆ. 2023ರಲ್ಲಿ ಇದೇ ವೇಳೆಗೆ 262 LMT ಗೋಧಿ ಸಂಗ್ರಹ ಇತ್ತು ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMTನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಹೇಳಿದ್ದಾರೆ.

ಗೋಧಿ ಬೆಲೆಗಳ ಮೇಲೆ ನಿಕಟವಾಗಿ ನಿಗಾ ಇಡಲು ಮತ್ತು ದೇಶದ ಗ್ರಾಹಕರಿಗೆ ಬೆಲೆ ಸ್ಥಿರತೆಗಾಗಿ ಸೂಕ್ತ ನೀತಿ ರೂಪಿಸಿ ಕ್ರಮ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಲಹೆ ನೀಡಿದ್ದಾರೆ.

ರಾಜ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಸಭೆ: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ರಾಜ್ಯ ಸಚಿವರು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಪ್ರತ್ಯೇಕ ಸಭೆ ನಡೆಸಿದರು.‌

ಇದನ್ನೂ ಓದಿ: Shivamogga News: ಕಾರ ಹುಣ್ಣಿಮೆ; ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಅಧ್ಯಕ್ಷತೆ ವಹಿಸಿದ್ದ ಸಚಿವರು, ಸಚಿವಾಲಯದ ವಿವಿಧ ಕಾರ್ಯಗಳ ಬಗ್ಗೆ ಕುರಿತು ಚರ್ಚೆ ನಡೆಸಿದರು. ಸಚಿವಾಲಯ ಮತ್ತು ಅದರ ಕಚೇರಿಗಳ ಕಾರ್ಯನಿರ್ವಹಣೆ ಪರಿಶೀಲಿಸಿ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

Continue Reading
Advertisement
IND vs ENG Semi Final
ಕ್ರೀಡೆ1 hour ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ4 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ5 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ5 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು11 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ15 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌