New year 2023: ಹೊಸವರ್ಷದ ಹರುಷಕ್ಕೆ ಹತ್ತು ಸರಳ ಸೂತ್ರಗಳು! - Vistara News

New year 2023

New year 2023: ಹೊಸವರ್ಷದ ಹರುಷಕ್ಕೆ ಹತ್ತು ಸರಳ ಸೂತ್ರಗಳು!

ಹೊಸ ವರ್ಷದಲ್ಲಿ ಬದಲಾವಣೆಯೆಡೆಗೆ ನೀವು ಪ್ರಯತ್ನ ಮಾಡಿದರೆ ಆತ್ಮತೃಪ್ತಿ ನಿಮ್ಮದೇ. ನಿಮ್ಮ ಹೊಸ ಕನಸುಗಳಲ್ಲಿ ನಿಯಮಗಳಲ್ಲಿ ಇವೂ ಒಂದಿಷ್ಟು ಇದ್ದರೆ ಬದುಕು ಸುಂದರ.

VISTARANEWS.COM


on

hill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸ ವರ್ಷ ಎಂದರೆ ʻಕಾಲೆಂಡರ್‌ನ ಪುಟ ಮಾತ್ರ ಬದಲಾಗುತ್ತದೆ, ಅದೇ ಬದುಕುʼ ಎಂಬುದು ನಿಜವಾದರೂ, ನಾವು ʻಈ ವರ್ಷವಾದರೂ ಬದುಕಿನಲ್ಲಿ ಇಂಥದ್ದನ್ನು ಮಾಡಬೇಕು, ಇಂಥ ಚಟವನ್ನು ಬಿಡಬೇಕು, ಇರುವುದೊಂದೇ ಜೀವನ ಎಂದ ಮೇಲೆ ಇನ್ನಾದರೂ ನನ್ನ ಸಂತೋಷಗಳನ್ನು ಕಂಡುಕೊಳ್ಳುವುದನ್ನು ಅಭ್ಯಾಸ ಮಾಡಬೇಕು ಎಂದು ಬಹುತೇಕ ಎಲ್ಲರೂ ಅಂದುಕೊಂಡೇ ಇರುತ್ತೇವೆ. ಈ ವರ್ಷ ಹಿಂಗಿರಲಿ, ಖುಷಿ ತರಲಿ ಎಂದು ಬಯಸುವುದು ತಪ್ಪಲ್ಲ. ಹೊಸ ಆರಂಭಕ್ಕೆ ಮುನ್ನುಡಿ ಬರೆದು ಬದುಕಿನ ಕೆಟ್ಟ ಅಧ್ಯಾಯಗಳನ್ನು ಮರೆತು ಒಳ್ಳೆಯದೇ ಆಗಲಿ ಎಂದು ಖುಷಿಯಿಂದ ಬದುಕಿನ ಸಂತೋಷಕ್ಕಾಗಿ ಆಸೆ ಪಟ್ಟರೆ ಅದು ಆಶಾವಾದ. ಅಂದುಕೊಂಡದ್ದು ಎಲ್ಲ ನಡೆಯದಿದ್ದರೂ, ಮಾಡಲಾಗದಿದ್ದರೂ, ಆ ಕಡೆಗಿನ ಪ್ರಯತ್ನವಂತೂ ಜೀವನಪ್ರೀತಿಯೇ ಅಲ್ಲವೇ!

ಬದುಕಿನಲ್ಲಿ ದೊಡ್ಡ ದೊಡ್ಡ್‌ ಆಸೆ ಕನಸುಗಳ ವಿಷಯ ಸೈಡಿಗಿರಲಿ. ಮೊದಲು ತೀರಾ ಸರಳವಾದ ವಿಷಯವನ್ನೇ ಕೈಗೆತ್ತಿಕೊಳ್ಳೋಣ. ಇವುಗಳಲ್ಲಿ ಸಣ್ಣ ಮಟ್ಟಿನ ಬದಲಾವಣೆ ಮಾಡಿಕೊಂಡರೂ ಅದು ನಮ್ಮ ಮಟ್ಟಿಗೆ ಸಾಧನೆಯೇ, ಖುಷಿಯೇ. ನಾನು ಬದಲಾಗಿದ್ದೇನೆ ಎಂದು ಎಷ್ಟೇ ನೀವು ಹೇಳಿಕೊಂಡರೂ ನಿಮ್ಮ ಮಾಜಿ ಪ್ರೇಮಿಯ ಹೊರತು ಇನ್ಯಾರೂ ನಿಮ್ಮ ಮಾತುಗಳನ್ನು ಒಪ್ಪಿಕೊಳ್ಳಲಿಕ್ಕಿಲ್ಲ ಎಂಬುದು ಕಟು ಸತ್ಯವೇ. ಆದರೂ, ಬದಲಾವಣೆಯೆಡೆಗೆ ನೀವು ಪ್ರಯತ್ನ ಮಾಡಿದರೆ ಆತ್ಮತೃಪ್ತಿ ನಿಮ್ಮದೇ. ನಿಮ್ಮ ಹೊಸ ಕನಸುಗಳಲ್ಲಿ ನಿಯಮಗಳಲ್ಲಿ ಇವೂ ಒಂದಿಷ್ಟು ಇದ್ದರೆ ಬದುಕು ಸುಂದರ.

೧. ಬದಲಾಗದಿರಿ, ಹಾಗೆಯೇ ಇರಿ. ಬದಲಾವಣೆ ಮಾಡಿಕೊಳ್ಳುವುದೆಂದರೆ ಇದ್ದಕ್ಕಿದ್ದಂತೆ ಸಂಪೂರ್ಣ ಬದಲಾಗಿಬಿಡುವುದಲ್ಲ. ಬದಲಾವಣೆಯ ತುಡಿತ ಇದ್ದರೂ ನಿಮ್ಮತನ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹಾಗಾಗಿ, ನೀವು ನೀವಾಗಿಯೇ ಇರಿ. ಇಲ್ಲಿ ಬದಲಾಗದೆ ಇರಲು ಪ್ರಯತ್ನಪಡಿ. ಬೆಳವಣಿಗೆ ಬೇಕು. ಆದರೆ ನಾವು ನಾವಾಗಿಯೇ ಇರುವುದು ಮುಖ್ಯ. ಗೆಳೆಯರೆಲ್ಲ ಹೊಸವರ್ಷಕ್ಕೆ ಪಾರ್ಟಿ ಮಾಡುತ್ತಿದ್ದಾರಾ? ಊರೂರು ಅಲೆಯುತ್ತಿದ್ದಾರಾ? ಬಿಡಿ, ನೀವು ಮನೆಯಲ್ಲಿದ್ದರೂ ಖುಷಿಪಡಿ.

travel tips

೨. ಕುಟುಂಬ ಎಲ್ಲವೂ ಹೌದು ನಿಜ. ಕುಟುಂಬದ ಜೊತೆ ಸಮಯ ಕಳೆಯಬೇಕು ಎಂಬುದೂ ನಿಜವೇ. ಆದರೆ, ಇದರರ್ಥ ಯಾವಾಗಲೂ ಜೊತೆಗೇ ಇರಬೇಕು ಎಂದಲ್ಲ. ನಿಮಗಾಗಿ, ಅಂದರೆ ಕೇವಲ ನಿಮಗಾಗಿ ಅಂತ ಸಮಯ ಮೀಸಲಿಡುವುದು ಬಹಳ ಅಗತ್ಯ ಎಂಬುದನ್ನು ಇನ್ನಾದರೂ ಅರ್ಥ ಮಾಡಿಕೊಳ್ಳಿ.

೩. ರಜೆ ಬೇಕು, ಆದರೆ ಕೇಳುವುದು ಹೇಗೆ? ಬಾಸ್‌ ಬೈತಾರೆ, ಏನಂದುಕೊಂಡಾರು ಇತ್ಯಾದಿ ಇತ್ಯಾದಿ ಅಂಜಿಕೆಗಳನ್ನು ಬದಿಗಿಡುವುದನ್ನು ಕಲಿಯುವುದು ಬಹಳ ಅಗತ್ಯ. ಮೈಬಗ್ಗಿಸಿ ವರ್ಷಪೂರ್ತಿ ದುಡಿಯುತ್ತೇವಲ್ಲ, ನಮಗೆ ಅಂತ ಒಂದಿಷ್ಟು ಸಂಸ್ಥೆಯ ನಿಯಮಗಳ ಪ್ರಕಾರ ಇದ್ದೇ ಇರುತ್ತದೆ. ಅದನ್ನು ತೆಗೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು ಕೂಡಾ. ಅಂಥ ರಜೆಗಳನ್ನು ಈ ವರ್ಷ ಉಪಯೋಗಿಸಿಕೊಂಡು ಒಂದಿಷ್ಟು ಅಂದುಕೊಂಡದ್ದನ್ನು ಮಾಡುತ್ತೇನೆ ಎಂದು ಪಣ ತೊಡಿ ನೋಡೋಣ!

೪. ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತೀರಿ ಎಂದರೆ ಆ ಕೆಲಸಕ್ಕೆ ತಕ್ಕಂತೆ ಒಂದಿಷ್ಟು ಪ್ರಯೋಜನಗಳೂ ಸಂಬಳದ ಜೊತೆ ಇರುತ್ತದೆ. ಉದಾಹರಣೆಗೆ, ಸಂಸ್ಥೆ ನಿಮಗೆ ಒಂದಿಷ್ಟು ದಿನಸಿ ಸಾಮಾನು ಕೊಳ್ಳಲು ಕೂಪನ್‌ ಕೊಡಬಹುದು ಅಥವಾ, ನಿಮ್ಮ ಇಂಟರ್ನೆಟ್‌ ಬಿಲ್‌ ಕಟ್ಟಬಹುದು, ಇವನ್ನೆಲ್ಲ ಉತ್ತಮವಾಗಿ ಬಳಸಿಕೊಳ್ಳುವುದನ್ನು ಕಲಿಯಬಹುದು.

೫. ಎಲ್ಲರೂ ತಮ್ಮ ಜಾಲತಾಣದ ಅಕೌಂಟ್‌ನಲ್ಲಿ ದಿನಾ ರೀಲ್ಸ್‌, ಸ್ಟೇಟಸ್‌ ಹಾಕ್ತಾ ಇರ್ತಾರೆ ಎಂದರೆ, ಅದಕ್ಕೆ ನೀವು ಲೈಕ್‌ ಮಾಡುತ್ತಲೇ ಇರಬೇಕು ಎಂದೇನಿಲ್ಲ. ಲೈಕ್‌ ಮಾಡದಿರುವುದೂ ಕೂಡಾ ಈಗ ಬುದ್ದೀವಂತರ ಲಕ್ಷಣ. ಅಷ್ಟಾದರೂ ಧೈರ್ಯ ಮಾಡಿ!

Social Media IT Rules

೬. ಇಷ್ಟಪಡುವುದನ್ನು ಮಾಡಲು ಪ್ರಯತ್ನಿಸಿ. ಜನರೇನಂದಾರು, ತಮಾಷೆಯಾಗಿದೆ ಎಂದು ಅನಿಸಿದರೂ, ಮಾಡುವುದರಲ್ಲಿ ತಪ್ಪಿಲ್ಲ. ಬೇರೆಯವರಿಗೆ ತೊಂದರೆಯಾಗದಿದ್ದರೆ ಸಾಕು. ಅಷ್ಟೇ ಸಿಂಪಲ್.‌ ಈಗ ಇದು ಟ್ರೆಂಡ್‌ನಲ್ಲಿಲ್ಲ, ಈ ಫ್ಯಾಷನ್‌ ಈಗ ಓಡ್ತಿಲ್ಲ, ಇದನ್ನು ತೊಟ್ಟರೆ ಜನ ನಕ್ಕಾರು. ನಾ ಹೀಗೆ ಮಾಡಿದರೆ ಜನರೇನಂದುಕೊಂಡಾರು ಇತ್ಯಾದಿ ಇತ್ಯಾದಿ ಸಣ್ಣಸಣ್ಣದಕ್ಕೆಲ್ಲ ತಲೆಕೆಡಿಸಿಕೊಳ್ಳೋದು ಬಿಡೋದು ಸುಲಭವಾ? ಒಮ್ಮೆ ಬಿಟ್ಟು ನೋಡಿ. ಬದುಕು ಚಂದ ಅನಿಸಿಬಿಡುತ್ತದೆ!

೭. ಸಾಮಾಜಿಕ ಜಾಲತಾಣಗಳ ಯುಗ ಇದು. ದಿನಕ್ಕೆ ಸಾವಿರ ವಿಷಯ ಕಣ್ಣಿಗೆ ಬೀಳುತ್ತಲೇ ಇರುತ್ತದೆ. ಕಂಡ ತಕ್ಷಣ ನಿಮಗೆ ಇಷ್ಟವಾಗಲಿಲ್ಲ ಎಂದರೆ ಹೋಗಿ ಅಲ್ಲಿ ಮೇಜು ಕುಟ್ಟಿ ಭಾಷಣ ಬಿಗಿದು ಬರಬೇಕೆಂದೇನಿಲ್ಲ. ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿರುವುದನ್ನೂ ಕಲಿಯಿರಿ. ಇಷ್ಟವಾಗದಿದ್ದರೆ ಅವುಗಳಿಂದ ಹೊರಬನ್ನಿ.

೮. ಪ್ರಪಂಚದಲ್ಲಿ ಕಣ್ಣೆದುರಿಗೇ ನೂರೆಂಟು ವಿಷಯಗೂ ನಡೆಯುತ್ತಲೇ ಇರುತ್ತದೆ. ಕಣ್ಣಿದ್ದೂ ಕುರುಡರಂತೆ ನಾವು ಮುಂದೆ ಸಾಗುತ್ತಲೇ ಇರುತ್ತೇವೆ. ನಾವೊಬ್ಬರು ಮಾಡಿ ಏನು ಪ್ರಯೋಜನ ಎಂದು ಸಿನಿಕರಾಬೇಡಿ. ಒಂದಿಷ್ಟು ಕಾಳಜಿ ಮಾಡುವುದನ್ನು ಕಲಿಯಿರಿ. ಅವುಗಳ ಬಗ್ಗೆ ಯೋಚಿಸಿ. ಅದು ಜನರೇ ಆಗಬೇಕಿಲ್ಲ. ಬದಲಾಗುತ್ತಿರುವ ಹವಾಮಾನವಿರಬಹುದು, ಮಾಲಿನ್ಯವಿರಬಹುದು!

ಇದನ್ನೂ ಓದಿ | New Year Nail Art | ಹೊಸ ವರ್ಷದ ಸೆಲೆಬ್ರೇಷನ್‌ಗೆ ಎಂಟ್ರಿ ಕೊಟ್ಟ ಗ್ಲಿಟ್ಟರ್ ನೇಲ್‌ ಆರ್ಟ್

೯. ಒಮ್ಮೆಯಾದರೂ ಅಡುಗೆ ಮಾಡಿದ್ದೀರಾ? ನೀರಿ ಬಿದ್ದಾಗ ಕೈಕಾಲು ಬಡಿದು ಈಜಲು ಗೊತ್ತಿದೆಯಾ? ನಿಮ್ಮನೆ ಪಂಪ್‌ಸೆಟ್‌  ಹಾಳಾಯಿತು, ನೀರು ಬರಲಿಲ್ಲ ಎಂದರೆ ನಿಮಗೇ ರಿಪೇರಿ ಮಾಡುವುದು ಗೊತ್ತಾ? ಹೋಗಲಿ, ನಲ್ಲಿ ಲೀಕಾಗುತ್ತಿದೆ ಎಂದರೆ ಸರಿ ಮಾಡುವ ವಿದ್ಯೆಯಾದರೂ ಗೊತ್ತಾ? ಬದುಕಿಗೆ ಅಗತ್ಯ ಬೇಕಾಗುವ ಇಂಥ ಕೌಶಲ್ಯಗಳು ಗೊತಿರಬೇಕು ಕಣ್ರೀ!

kitchen

೧೦. ಅನ್ಯಾಯದ ವಿರುದ್ಧ ದನಿಯೆತ್ತಬೇಕು ನಿಜವೇ. ಆದರೆ, ಕೆಲವನ್ನು ಕ್ಷಮಿಸುವ ದೊಡ್ಡಗುಣ ಕಲಿಯಿರಿ. ಅವರು ನನಗೆ ಮಾಡಿದ ಅನ್ಯಾಯಕ್ಕೆ ಪಾಠ ಕಲಿಸದೆ ಇರಲ್ಲ ಎಂದು ಕತ್ತಿ ಮಸೆಯುತ್ತಿದ್ದರೆ, ಒಮ್ಮೆ ಕತ್ತಿ ಕೆಳಗಿಟ್ಟು ನೋಡಿ. ಅವರು ಮಾಡಿದ ತಪ್ಪನ್ನು ಮರೆತುಬಿಡಿ. ಅವರಿಂದ ನೀವು ಬದುಕಿನಲ್ಲಿ ಒಂದು ಪಾಠವಾದರೂ ಕಲಿತಿರಲ್ಲ. ಅದು ನಿಮ್ಮ ಪಾಲಿನ ಗಳಿಕೆ ಎಂದು ಸುಮ್ಮನಾಗಿಬಿಡಿ, ಸಿಂಪಲ್.‌ ಮನಸ್ಸು ನಿರಾಳವಾಗುತ್ತದೆ. ಇಂಥದ್ದೆಲ್ಲ ಬದುಕಿನ ಸಣ್ಣಪುಟ್ಟ ಸಂಗತಿಗಳು ನಿಮಗೆ ಸಂತೃಪ್ತಿ ನೀಡದಿದ್ದರೆ ಕೇಳಿ!

ಬದುಕು ಸಿಂಪಲ್ ಕಣ್ರೀ.‌ ಸುಲಭವಾಗಿ ಸರಳವಾಗಿ ಬದುಕಿದರೆ, ಇಡೀ ವರ್ಷವೇ ನಿತ್ಯ ಹರುಷ!

ಹೊಸವರ್ಷದ ಶುಭಾಶಯಗಳು!

ಇದನ್ನೂ ಓದಿ | New Year 2023 | ಹೊಸ ವರ್ಷಾಚರಣೆಗೆ ರಾಜಧಾನಿ ರೆಡಿ; ಪ್ರೇಮಿಗಳು, ಪತಿ-ಪತ್ನಿ ಡ್ಯಾನ್ಸ್‌ಗೆ ಸ್ಪೆಷಲ್ ಫ್ಲೋರ್, ರಕ್ಷಣೆಗೆ ಲೇಡಿ ಬೌನ್ಸರ್ಸ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

New year 2023

Bharat Jodo Yatra | ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್​ ಪ್ರಮುಖರು; ಆಶೀರ್ವದಿಸಿ ಪತ್ರ ಬರೆದ ಮುಖ್ಯ ಅರ್ಚಕ

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಮೂರು ದಿನ ಸಂಚರಿಸಲಿದೆ. ಜನವರಿ 6ರಂದು ಹರ್ಯಾಣಕ್ಕೆ ಕಾಲಿಡಲಿದೆ. ಜನವರಿ 20ಕ್ಕೆ ಜಮ್ಮು-ಕಾಶ್ಮೀರಕ್ಕೆ ಪ್ರವೇಶಿಸಿ, ಜನವರಿ 30ರಂದು ಕೊನೆಗೊಳ್ಳಲಿದೆ.

VISTARANEWS.COM


on

Congress Leader Rahul Gandhi to address British Parliament
ರಾಹುಲ್ ಗಾಂಧಿ
Koo

ಅಯೋಧ್ಯೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಅಯೋಧ್ಯಾ ರಾಮಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರಾಯ್ ಶ್ಲಾಘಿಸಿದ್ದಾರೆ. ಇಂಥ ಪಾದಯಾತ್ರೆಗಳನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮಂಗಳವಾರ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಸಹಚರರೊಂದಿಗೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಅಯೋಧ್ಯಾ ರಾಮ ಜನ್ಮಭೂಮಿ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರು ಆಶೀರ್ವಾದಪೂರ್ವಕ ಪತ್ರವನ್ನು ಬರೆದು ತಲುಪಿಸಿದ್ದಾರೆ. ಅದರ ಬೆನ್ನಲ್ಲೇ ಚಂಪತ್ ರಾಯ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇಡೀ ದೇಶವನ್ನು ಕಾಲ್ನಡಿಗೆಯಲ್ಲಿ ಸುತ್ತುತ್ತಿರುವ ರಾಹುಲ್ ಗಾಂಧಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಾನೊಬ್ಬ ಆರ್ ಎಸ್ ಎಸ್ ಕಾರ್ಯಕರ್ತ. ಆರ್ ಎಸ್ ಎಸ್ ಯಾವತ್ತೂ ಭಾರತ್ ಜೋಡೋ ಯಾತ್ರೆಯನ್ನು ವಿರೋಧಿಸಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ನನಗೆ ತಪ್ಪೇನೂ ಕಾಣುತ್ತಿಲ್ಲ. ಇಷ್ಟು ಕೆಟ್ಟ ಚಳಿ ಮಧ್ಯೆ ರಾಹುಲ್ ಗಾಂಧಿ ಯಾತ್ರೆ ನಡೆಸುತ್ತಿದ್ದಾರೆ. ಅವರಂತೆ ಪ್ರತಿಯೊಬ್ಬರೂ ದೇಶಕ್ಕಾಗಿ ಯಾತ್ರೆ ಮಾಡಬೇಕು ಎಂದು ಹೇಳಿದ್ದಾರೆ.

ಹಾಗೇ, ರಾಮಮಂದಿರ ಟ್ರಸ್ಟ್ ನ ಹಿರಿಯ ಟ್ರಸ್ಟಿ ಗೋವಿಂದ ದೇವ ಗಿರಿ ಅವರೂ ರಾಹುಲ್ ಗಾಂಧಿಯವರನ್ನು ಹರಿಸಿದ್ದಾರೆ. ಈ ದೇಶ ಒಗ್ಗಟ್ಟಾಗಿರಬೇಕು, ಸಾಮರಸ್ಯದಿಂದ ಇರಬೇಕು ಮತ್ತು ಇನ್ನಷ್ಟು ಬಲಶಾಲಿಯಾಗಬೇಕು ಎಂದು ಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಗೆ ಶ್ರೀರಾಮ ಆಶೀರ್ವಾದಿಸಲಿ ಎಂದಿದ್ದಾರೆ. ಹಾಗೇ, ಭಾರತ್ ಜೋಡೋ ಎಂಬ ಹೆಸರೇ ಚೆನ್ನಾಗಿದೆ. ಭಾರತ ಒಂದಾಗಬೇಕು ಎಂದೂ ಹೇಳಿದ್ದಾರೆ.

ಮುಖ್ಯ ಅರ್ಚಕ ಬರೆದ ಪತ್ರದಲ್ಲಿ ಏನಿದೆ?
ಮಂಗಳವಾರ ಭಾರತ್​ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಕಾಲಿಟ್ಟ ಬೆನ್ನಲ್ಲೇ ಅಯೋಧ್ಯಾ ರಾಮ ದೇಗುಲದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್​ ಅವರಿಗೆ ಆಶೀರ್ವಾದ ಪೂರ್ವಕ ಪತ್ರ ಬರೆದಿದ್ದರು. ‘ನೀವು ಸರ್ವಜನ ಹಿತ ಮತ್ತು ಸುಖಕ್ಕಾಗಿ ಒಂದೊಳ್ಳೆ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಶ್ರೀರಾಮ ಒಳ್ಳೆಯದು ಮಾಡಲಿ’ ಎಂದು ರಾಹುಲ್​ ಗಾಂಧಿಯವರಿಗೆ ಹಾರೈಸಿದ್ದರು. ‘ಯಾತ್ರೆಗೆ ಶುಭವಾಗಲಿ, ನಿಮ್ಮ ಆರೋಗ್ಯ ಚೆನ್ನಾಗಿರಲಿ’ ಎಂದೂ ಹೇಳಿದ್ದರು.

ಇದನ್ನೂ ಓದಿ: ಭಾರತ್​ ಜೋಡೋ ಯಾತ್ರೆ ದೆಹಲಿಗೆ ಕಾಲಿಟ್ಟಾಗಿನಿಂದಲೂ ರಾಹುಲ್​ ಗಾಂಧಿ ಭದ್ರತೆಯಲ್ಲಿ ವೈಫಲ್ಯ; ಅಮಿತ್​ ಶಾಗೆ ಕಾಂಗ್ರೆಸ್​ ಪತ್ರ

Continue Reading

New year 2023

BMTC Income | ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷಾರಂಭದಲ್ಲಿ ಹರ್ಷ!

ಹೊಸ ವರ್ಷ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ನಡೆಸಿದ್ದ ಬಿಎಂಟಿಸಿಗೆ ಮೊದಲ ದಿನವೇ ಭರ್ಜರಿ (BMTC Income) ಆದಾಯ ಗಳಿಸಿದೆ. ನಷ್ಟದ ಸುಳಿಯಲಿ ಸಿಲುಕಿ ನರಳಾಡುತ್ತಿದ್ದ ಬಿಎಂಟಿಸಿಗೆ ಕೊಂಚ ಹರ್ಷ ತಂದಿದೆ.

VISTARANEWS.COM


on

By

Demand for implementation of 6th Pay Commission Transport employees call for protest from March 1
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.

ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್‌ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್‌ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್‌ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.

ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ

Continue Reading

New year 2023

Swiggy Order | ಹೊಸ ವರ್ಷದ ಪಾರ್ಟಿಗೆ ಸ್ವಿಗ್ಗಿಯಲ್ಲಿ 3.5 ಲಕ್ಷ ಬಿರ್ಯಾನಿ, 1.76 ಲಕ್ಷ ಚಿಪ್ಸ್‌ ಪ್ಯಾಕೆಟ್‌ ಆರ್ಡರ್!

ಹೊಸ ವರ್ಷದ ಪಾರ್ಟಿ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ಆಹಾರ, ಚಿಪ್ಸ್‌ ಪ್ಯಾಕೆಟ್‌ಗಳನ್ನು ಆರ್ಡರ್‌ (Swiggy Order) ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸ್ವಿಗ್ಗಿ ತಿಳಿಸಿದೆ.

VISTARANEWS.COM


on

Swiggy Order On New Years Eve
Koo

ನವದೆಹಲಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಶನಿವಾರವೇ ದೇಶಾದ್ಯಂತ ಸಂಭ್ರಮ ಮನೆಮಾಡಿತ್ತು. ಪಾರ್ಟಿ ಆಯೋಜನೆ, ಪಾರ್ಟಿ ಸಿದ್ಧತೆ, ಕೇಕ್‌ ಕತ್ತರಿಸುವುದು ಸೇರಿ ಹಲವು ರೀತಿಯಲ್ಲಿ ಜನ ಸಂಭ್ರಮಾಚರಣೆ ಮಾಡಿದರು. ಅದರಲ್ಲೂ, ಪಾರ್ಟಿಗಾಗಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಫುಡ್‌ ಆರ್ಡರ್‌ (Swiggy Order) ಮಾಡಿದ್ದು, ಇಲ್ಲೂ ಬಿರ್ಯಾನಿಯೇ ಅಗ್ರ ಸ್ಥಾನ ಪಡೆದಿದೆ. ಮದ್ಯಪಾನದ ಪಾರ್ಟಿಗಾಗಿ ಲಕ್ಷಾಂತರ ಚಿಪ್ಸ್‌ ಪ್ಯಾಕೆಟ್‌ಗಳನ್ನೂ ಸ್ವಿಗ್ಗಿಯಲ್ಲಿ ಆರ್ಡರ್‌ ಮಾಡಲಾಗಿದೆ.

ಹೌದು, ಹೊಸ ವರ್ಷದ ಹಿಂದಿನ ದಿನವಾದ ಶನಿವಾರ ರಾತ್ರಿ 10.45ರ ವೇಳೆಗೆ ಸ್ವಿಗ್ಗಿಯಲ್ಲಿ 3.5 ಲಕ್ಷಕ್ಕೂ ಅಧಿಕ ಬಿರ್ಯಾನಿಗಳನ್ನು ಆರ್ಡರ್‌ ಮಾಡಲಾಗಿದೆ. ಹಾಗೆಯೇ, ನಂತರದ ಬೇಡಿಕೆಗೆ ಪಿಜ್ಜಾಗೆ ಇದ್ದು, 61 ಸಾವಿರ ಪಿಜ್ಜಾ ಆರ್ಡರ್‌ ಮಾಡಲಾಗಿದೆ ಎಂದು ಸ್ವಿಗ್ಗಿ ಕಂಪನಿ ತಿಳಿಸಿದೆ.

ಸ್ವಿಗ್ಗಿ ಈ ಕುರಿತು ಸಮೀಕ್ಷೆಯನ್ನೂ ನಡೆಸಿದ್ದು, ಶೇ.75.4ರಷ್ಟು ಜನ ಹೈದರಾಬಾದ್‌ ಬಿರ್ಯಾನಿ, ಶೇ.14.2ರಷ್ಟು ಮಂದಿ ಲಖನೌವಿ ಬಿರ್ಯಾನಿ ಹಾಗೂ ಶೇ.10.4ರಷ್ಟು ಜನ ಕೋಲ್ಕೊತಾ ಬಿರ್ಯಾನಿ ಆರ್ಡರ್‌ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಹಾಗೆಯೇ, ಸ್ವಿಗ್ಗಿಯ ಇನ್‌ಸ್ಟಾಮಾರ್ಟ್‌ನಲ್ಲಿ ಸಂಜೆ 7 ಗಂಟೆ ವೇಳೆಗೆ 1.76 ಚಿಪ್ಸ್‌ ಪ್ಯಾಕೆಟ್‌, 2,757 ಪ್ಯಾಕೆಟ್‌ ಡ್ಯುರೆಕ್ಸ್‌ ಕಾಂಡೋಮ್‌ಗಳನ್ನು ಆರ್ಡರ್‌ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ | New Year 2023 | ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭ್ರಮದ ಹೊಸ ವರ್ಷಾಚರಣೆ

Continue Reading

New year 2023

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

ಹೊಸ ವರ್ಷಾಚರಣೆಗೆ ಹೇಳಿ ಮಾಡಿಸಿದಂತಿರುವ ರಸ್‌ ಅಲ್‌ ಖೈಮಾ (Ras Al Khaimah) ನಗರವು ಈ ಬಾರಿಯೂ ಅದ್ಧೂರಿ ಆಚರಣೆ ಮೂಲಕ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

VISTARANEWS.COM


on

Ras Al Khaimah New Year Celebration
Koo

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Continue Reading
Advertisement
CJI Chandrachud
ದೇಶ11 mins ago

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

Forest bathing activity begins at Cubbon Park
ಬೆಂಗಳೂರು13 mins ago

Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

Modi in Karnataka HD Deve Gowda attack on Congess
Lok Sabha Election 202413 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Lok Sabha Election 2024
ಕರ್ನಾಟಕ16 mins ago

Lok Sabha Election 2024: ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Job Alert
ಉದ್ಯೋಗ18 mins ago

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Viral Video
ವೈರಲ್ ನ್ಯೂಸ್23 mins ago

Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Vinay Gowda Lunch With Kichcha Sudeep
ಸಿನಿಮಾ26 mins ago

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Viral Video
ವೈರಲ್ ನ್ಯೂಸ್29 mins ago

Viral Video: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವೈರಲ್ ಆದ ವಿಡಿಯೊ

Case of bringing gun to CM Siddaramaiah Four policemen suspended
Lok Sabha Election 202436 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Elon Musk
ವಿದೇಶ43 mins ago

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka HD Deve Gowda attack on Congess
Lok Sabha Election 202413 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ4 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ5 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

ಟ್ರೆಂಡಿಂಗ್‌