Site icon Vistara News

ಕೃಷ್ಣ ಜನ್ಮಾಷ್ಟಮಿ ದಿನ ಅವಳಿ ಮಕ್ಕಳನ್ನು ಪರಿಚಯಿಸಿದ ಸ್ಯಾಂಡಲ್‌ವುಡ್‌ ಕ್ವೀನ್‌ ಅಮೂಲ್ಯ

Amulya

ಬೆಂಗಳೂರು : ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರು ತಮ್ಮಿಬ್ಬರು ಮಕ್ಕಳನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯ ತಿಳಿಸಿದ್ದಾರೆ. ಮಕ್ಕಳ ವಿಶೇಷ ಫೋಟೊಗ್ರಫಿಯನ್ನು ಮಾಡಿರುವ ಅಮೂಲ್ಯ- ಜಗದೀಶ್‌ ದಂಪತಿ ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್ ಮಾಡಿದ್ದಾರೆ. ಈ ಮಕ್ಕಳು ಶಿವರಾತ್ರಿ ದಿನ ಹುಟ್ಟಿದ್ದು, ಜನ್ಮಾಷ್ಟಮಿ ದಿನ ಎಲ್ಲರಿಗೂ ಪರಿಚಿತರಾಗಿದ್ದಾರೆ.

ಸ್ಯಾಂಡಲ್‌ವುಡ್ ಕ್ವೀನ್‌ ಅಮೂಲ್ಯ ಅವರು ಕಳೆದ ಮಾರ್ಚ್‌ ೨೧ರಂದು ಅಂದರೆ ಶಿವರಾತ್ರಿ ದಿನ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅವರ ಪತಿ ಜಗದೀಶ್ ಆರ್‌. ಚಂದ್ರ ಅವರು ಆ ಸುದ್ದಿಯನ್ನು ಟ್ವೀಟ್‌ ಮೂಲಕ ಪ್ರಕಟಿಸಿದ್ದರು. ಇದೀಗ ಮಕ್ಕಳ ಚಿತ್ರವನ್ನು ಪ್ರಕಟಿಸಿ ಹರಸುವಂತೆ ಕೋರಿದ್ದಾರೆ.

ಮಕ್ಕಳ ಫೋಟೋಗೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದ ಅಮೂಲ್ಯ ಅವರ ಮಕ್ಕಳ ಚಿತ್ರಗಳನ್ನು ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಸ್ಯಾಂಡಲ್‌ವುಡ್‌ ಕ್ವೀನ್‌ ಬೆಳೆದು ಬಂದ ಹಾದಿ

ಬಾಲನಟಿಯಾಗಿದ್ದ ಅಮೂಲ್ಯ ‘ಚೆಲುವಿನ ಚಿತ್ತಾರ’ ಸಿನಿಮಾದ ಮೂಲಕ ನಾಯಕಿಯಾಗಿ ಬಡ್ತಿ ಪಡೆದಿದ್ದರು. ಸಣ್ಣ ವಯಸ್ಸಿನಲ್ಲಿಯೇ ಪ್ರಮುಖ ಕಲಾವಿದರೊಂದಿಗೆ ನಟಿಸಿ ಖ್ಯಾತಿ ಗಳಿಸಿಕೊಂಡಿದ್ದರು. ಗಣೇಶ್​, ಯಶ್​, ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರ ಜತೆ ಅಮೂಲ್ಯ ನಟಸಿದ್ದಾರೆ. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ನಟಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು ಅಮೂಲ್ಯ. ‘ಮುಗುಳು ನಗೆ’ ಚಿತ್ರದಲ್ಲಿ ಕೊನೆಯ ಬಾರಿಗೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 

ಚಿತ್ರರಂಗದಲ್ಲಿ ​ಬೇಡಿಕೆ ಇರುವಾಗಲೇ ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಉದ್ಯಮಿ ಜಗದೀಶ್​ ಚಂದ್ರ ಜೊತೆ 017ರ ಮೇ ತಿಂಗಳಲ್ಲಿ ವಿವಾಹವಾಗಿದ್ದರು. ಬಳಿಕ ಸಿನಿಮಾ ಕ್ಷೇತ್ರದಿಂದ ದೂರವುಳಿದಿದ್ದಾರೆ.

Exit mobile version