ಕೃಷ್ಣ ಜನ್ಮಾಷ್ಟಮಿ ದಿನ ಅವಳಿ ಮಕ್ಕಳನ್ನು ಪರಿಚಯಿಸಿದ ಸ್ಯಾಂಡಲ್‌ವುಡ್‌ ಕ್ವೀನ್‌ ಅಮೂಲ್ಯ - Vistara News

ಲೈಫ್‌ಸ್ಟೈಲ್

ಕೃಷ್ಣ ಜನ್ಮಾಷ್ಟಮಿ ದಿನ ಅವಳಿ ಮಕ್ಕಳನ್ನು ಪರಿಚಯಿಸಿದ ಸ್ಯಾಂಡಲ್‌ವುಡ್‌ ಕ್ವೀನ್‌ ಅಮೂಲ್ಯ

ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರು ತಮ್ಮ ಅವಳಿ ಮಕ್ಕಳನ್ನು ಕೃಷ್ಣ ಜನ್ಮಾಷ್ಟಮಿ ದಿನ ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.

VISTARANEWS.COM


on

Amulya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಸ್ಯಾಂಡಲ್‌ವುಡ್‌ ನಟಿ ಅಮೂಲ್ಯ ಅವರು ತಮ್ಮಿಬ್ಬರು ಮಕ್ಕಳನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯ ತಿಳಿಸಿದ್ದಾರೆ. ಮಕ್ಕಳ ವಿಶೇಷ ಫೋಟೊಗ್ರಫಿಯನ್ನು ಮಾಡಿರುವ ಅಮೂಲ್ಯ- ಜಗದೀಶ್‌ ದಂಪತಿ ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್ ಮಾಡಿದ್ದಾರೆ. ಈ ಮಕ್ಕಳು ಶಿವರಾತ್ರಿ ದಿನ ಹುಟ್ಟಿದ್ದು, ಜನ್ಮಾಷ್ಟಮಿ ದಿನ ಎಲ್ಲರಿಗೂ ಪರಿಚಿತರಾಗಿದ್ದಾರೆ.

ಸ್ಯಾಂಡಲ್‌ವುಡ್ ಕ್ವೀನ್‌ ಅಮೂಲ್ಯ ಅವರು ಕಳೆದ ಮಾರ್ಚ್‌ ೨೧ರಂದು ಅಂದರೆ ಶಿವರಾತ್ರಿ ದಿನ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಅವರ ಪತಿ ಜಗದೀಶ್ ಆರ್‌. ಚಂದ್ರ ಅವರು ಆ ಸುದ್ದಿಯನ್ನು ಟ್ವೀಟ್‌ ಮೂಲಕ ಪ್ರಕಟಿಸಿದ್ದರು. ಇದೀಗ ಮಕ್ಕಳ ಚಿತ್ರವನ್ನು ಪ್ರಕಟಿಸಿ ಹರಸುವಂತೆ ಕೋರಿದ್ದಾರೆ.

ಮಕ್ಕಳ ಫೋಟೋಗೆ ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದ ಅಮೂಲ್ಯ ಅವರ ಮಕ್ಕಳ ಚಿತ್ರಗಳನ್ನು ನೋಡಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.

ಸ್ಯಾಂಡಲ್‌ವುಡ್‌ ಕ್ವೀನ್‌ ಬೆಳೆದು ಬಂದ ಹಾದಿ

ಬಾಲನಟಿಯಾಗಿದ್ದ ಅಮೂಲ್ಯ ‘ಚೆಲುವಿನ ಚಿತ್ತಾರ’ ಸಿನಿಮಾದ ಮೂಲಕ ನಾಯಕಿಯಾಗಿ ಬಡ್ತಿ ಪಡೆದಿದ್ದರು. ಸಣ್ಣ ವಯಸ್ಸಿನಲ್ಲಿಯೇ ಪ್ರಮುಖ ಕಲಾವಿದರೊಂದಿಗೆ ನಟಿಸಿ ಖ್ಯಾತಿ ಗಳಿಸಿಕೊಂಡಿದ್ದರು. ಗಣೇಶ್​, ಯಶ್​, ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರ ಜತೆ ಅಮೂಲ್ಯ ನಟಸಿದ್ದಾರೆ. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ನಟಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು ಅಮೂಲ್ಯ. ‘ಮುಗುಳು ನಗೆ’ ಚಿತ್ರದಲ್ಲಿ ಕೊನೆಯ ಬಾರಿಗೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 

ಚಿತ್ರರಂಗದಲ್ಲಿ ​ಬೇಡಿಕೆ ಇರುವಾಗಲೇ ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಉದ್ಯಮಿ ಜಗದೀಶ್​ ಚಂದ್ರ ಜೊತೆ 017ರ ಮೇ ತಿಂಗಳಲ್ಲಿ ವಿವಾಹವಾಗಿದ್ದರು. ಬಳಿಕ ಸಿನಿಮಾ ಕ್ಷೇತ್ರದಿಂದ ದೂರವುಳಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

ಬೇಸಿಗೆಯಿನ್ನೂ ಮುಗಿದಿಲ್ಲ. ದೆಹೆಲಿಯಲ್ಲಿ ತಾಪಮಾನ 50 ಡಿ.ಸೆ. ದಾಟಿದೆ. ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಂತೆ ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಉಷ್ಣತೆಗೂ ಕಣ್ಣಿಗೂ ಏನು ಸಂಬಂಧ? ಇದರಿಂದ ಕಣ್ಣುಗಳಿಗೆ ಆಗುವ ಹಾನಿಯೇನು? ಹಾಗಾಗದಂತೆ ಕಾಪಾಡಿಕೊಳ್ಳುವುದು ಹೇಗೆ- ಇತ್ಯಾದಿ ವಿವರಗಳು (Heatwave Effect) ಇಲ್ಲಿವೆ.

VISTARANEWS.COM


on

Heatwave Effect
Koo

ದೆಹೆಲಿಯಲ್ಲಿ ತಾಪಮಾನ (Heatwave Effect) 50 ಡಿಗ್ರಿ ಸೆಲ್ಶಿಯಸ್‌ ದಾಟಿಯಾಗಿದೆ. ದೇಶದ ಇನ್ನೂ ಕೆಲವೆಡೆಗಳಲ್ಲಿ ತಾಪಮಾನ ಗಗನಕ್ಕೇರಿದೆ. ದಕ್ಷಿಣದ ರಾಜ್ಯಗಳು ಮುಂಗಾರಿನ ಪ್ರವೇಶಕ್ಕೆ ಅಣಿಯಾಗುತ್ತಿದ್ದರೆ, ಉತ್ತರ ಭಾರತದಲ್ಲಿನ್ನೂ ಉಷ್ಣತೆಯ ಹೊಡೆತ ನಿಂತಿಲ್ಲ. ಬಿಸಿಲಿಗೆ ಎಚ್ಚರ ತಪ್ಪುವುದು, ನಿರ್ಜಲೀಕರಣದಿಂದ ಪ್ರಾಣಾಪಾಯಕ್ಕೆ ಒಳಗಾಗುವುದು ನಿಂತಿಲ್ಲ. ಮಾತ್ರವಲ್ಲ, ಕಣ್ಣಿನ ಪಾರ್ಶ್ವವಾಯುವಿಗೆ ತುತ್ತಾಗುವ ಪ್ರಕರಣಗಳೂ ವರದಿಯಾಗುತ್ತಿವೆ. ಏನು ಹಾಗೆಂದರೆ? ಬಿಸಿಲಿ ಹೆಚ್ಚಾದರೆ ಕಣ್ಣಿಗೆ ಏನಾಗುತ್ತದೆ?

Protection From Heatwave

ಏನು ನಂಟು?

ಅತಿಯಾದ ಬಿಸಿಲಿನ ಅಥವಾ ಉಷ್ಣತೆಯ ಹೊಡೆತವೇ ಈ ಸಮಸ್ಯೆಗೆ ನೇರವಾದ ಕಾರಣವಲ್ಲ. ಇದರಿಂದಾಗಿ ಉಂಟಾಗುವ ನಿರ್ಜಲೀಕರಣದಿಂದ ರಕ್ತ ಮಂದವಾಗುವುದು ಅಥವಾ ಹೆಪ್ಪುಗಟ್ಟುವಂತಾಗಬಹುದು. ಹೀಗೆ ಹೆಪ್ಪುಗಟ್ಟಿದ ರಕ್ತವು ಕಣ್ಣಿನ ಸಣ್ಣ ರಕ್ತನಾಳಗಳಲ್ಲಿ ಜಮೆಯಾಗಿ, ಕಣ್ಣಿಗೆ ಅಗತ್ಯವಾಗಿ ಬೇಕಾದ ರಕ್ತಸಂಚಾರವನ್ನು ತಡೆಯುತ್ತದೆ. ಇದರಿಂದ ಪಾರ್ಶ್ವವಾಯುವಿಗೆ ಕಾರಣವಾಗಿ, ಅಕ್ಯುಲರ್‌ ಸ್ಟ್ರೋಕ್‌ ಎಂದು ಕರೆಯಲಾಗುವ ಈ ಸಮಸ್ಯೆಯಿಂದ ದೃಷ್ಟಿಹೀನತೆಯೂ ಉಂಟಾಗಬಹುದು. ರಕ್ತ ಹೆಪ್ಪುಗಟ್ಟುವುದರಿಂದ ನಾಳಗಳು ಮುಚ್ಚಿಹೋಗಿ ಅಥವಾ ರಕ್ತಸಂಚಾರ ಸರಾಗ ಆಗದಿರುವಾಗ, ಮೆದುಳಿನಲ್ಲಿ ಸಂಭವಿಸುವ ಪಾರ್ಶ್ವವಾಯುವಿನ ಮಾದರಿಯಲ್ಲಿಯೇ ಇದು ಕಣ್ಣಿನಲ್ಲಿ ಸಂಭವಿಸುವಂಥದ್ದು. ಆಪ್ಟಿಕ್‌ ನರಗಳ ಮುಂಭಾಗಕ್ಕೆ ರಕ್ತಸಂಚಾರ ಇಲ್ಲದಿರುವಾಗ ಈ ತೊಂದರೆ ತಲೆದೋರುತ್ತದೆ. ಅಂದರೆ ಆಪ್ಟಿಕ್‌ ನರಗಳಿಗೆ ರಕ್ತ ಸಂಚಾರ ನಿಂತಾಗ ಹೀಗಾಗುತ್ತದೆ.

ಲಕ್ಷಣಗಳೇನು?

ಮೊದಲಿಗೆ ನಿರ್ಜಲೀಕರಣದ ಲಕ್ಷಣಗಳು ಕಂಡುಬರಬಹುದು. ಕೆಲವೊಮ್ಮೆ ಅದೂ ಕಾಣುವುದಿಲ್ಲ. ಬದಲಿಗೆ, ಯಾವುದೇ ನೋವಿಲ್ಲದೆ ಕಣ್ಣಿನ ಬೆಳಕು ಇದ್ದಕ್ಕಿದ್ದಂತೆ ಆರಬಹುದು. ಕಣ್ಣು ಪೂರ್ಣವಾಗಿ ಕಾಣದೆ ಹೋಗಬಹುದು ಅಥವಾ ಅರ್ಧ ಮಾತ್ರವೇ ಕಾಣಿಸಬಹುದು. ದೃಷ್ಟಿ ಮಸುಕಾಗಬಹುದು, ನೆರಳು ಬಿದ್ದಂತೆ ಕಾಣಬಹುದು, ಎದುರಿಗಿನ ವಸ್ತುವಿನ ನಡುವಿನ ಭಾಗ ಕಾಣದೆ ಕೇವಲ ಹೊರಗಿನ ಆವರಣವಷ್ಟೇ ಕಾಣಬಹುದು. ಕಪ್ಪಾಗಿ ಅಥವಾ ಅಸ್ಪಷ್ಟವಾಗಿ ಕಾಣಬಹುದು.

What is a heatwave?

ಏನು ಮಾಡಬೇಕು?

ಇಂಥ ಸಂದರ್ಭದಲ್ಲಿ ತ್ವರಿತವಾಗಿ ವೈದ್ಯರನ್ನು ಕಾಣಬೇಕು. ತಡಮಾಡಿದರೆ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಹೆಪ್ಪುಗಟ್ಟಿರುವ ರಕ್ತಕಣಗಳನ್ನು ಕರಗಿಸಲು ವೈದ್ಯರು ತುರ್ತಾಗಿ ಔಷಧಿ ನೀಡುತ್ತಾರೆ. ರೆಟಿನಾಗೆ ಶಾಶ್ವತ ಹಾನಿ ಆಗದಂತೆ, ದೇಹಕ್ಕೆ ಹೆಚ್ಚಿನ ಪ್ರಮಾಣದ ಆಮ್ಲಜನಕವನ್ನು ಪೂರೈಕೆ ಮಾಡುವ ಅಗತ್ಯ ಬರಬಹುದು. ಹೃದಯ ಸಮಸ್ಯೆಗಳಿದ್ದರೆ, ರಕ್ತ ನೀರಾಗಿಸುವ ಬಗ್ಗೆ ಮತ್ತು ರಕ್ತದೊತ್ತಡವನ್ನು ನಿರ್ವಹಿಸುವ ಬಗ್ಗೆ ಇನ್ನಷ್ಟು ಎಚ್ಚರಿಕೆಯನ್ನು ವೈದ್ಯರು ತೆಗೆದುಕೊಳ್ಳಬೇಕಾಗಬಹುದು.

ಇದನ್ನೂ ಓದಿ: Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ತಡೆಯುವುದು ಹೇಗೆ?

ಉಷ್ಣತೆ ತೀವ್ರವಾಗಿರುವಾಗ, ತಾಪಮಾನ 42 ಡಿಗ್ರಿ ಸೆಲ್ಶಿಯಸ್‌ ದಾಟಿದರೆ, ಮನೆಯಿಂದ ಹೊರಗೆ ಹೋಗುವುದು ಅಪಾಯ ತರಬಹುದು. ಮನೆಯೊಳಗೇ ಇದ್ದರೂ ಚೆನ್ನಾಗಿ ನೀರು ಕುಡಿಯುವುದು ಕಡ್ಡಾಯ. ಬಿಸಿಲಿನಲ್ಲಿದ್ದರಂತೂ ನಿರ್ಜಲೀಕರಣದ ಅಪಾಯದಿಂದ ಪಾರಾಗಲು ಆ ಕುರಿತ ಮಾರ್ಗಸೂಚಿಯನ್ನು ಪಾಲಿಸದಿದ್ದರೆ ಪ್ರಾಣಾಪಾಯವೇ ಉಂಟಾಗಬಹುದು. ಜೀವನಶೈಲಿಯನ್ನು ಆರೋಗ್ಯವಾಗಿ ಇರಿಸಿಕೊಳ್ಳಿ. ಬೇಸಿಗೆಗೆ ಸೂಕ್ತವಾದ ಆಹಾರವನ್ನೇ ಸೇವಿಸಿ. ಎಣ್ಣೆ-ಜಿಡ್ಡಿನ ಆಹಾರಗಳು, ಕರಿದ ಪದಾರ್ಥಗಳು ಬೇಡ. ಋತುಮಾನದ ಹಣ್ಣು-ತರಕಾರಿ ಮತ್ತು ಡೇರಿ ಉತ್ಪನ್ನಗಳು ಆಹಾರದಲ್ಲಿ ಸೇರಿರಲಿ. ನೀರು ಕುಡಿಯುವುದಕ್ಕೆ ಬೋರು ಎನ್ನುವಂಥ ನೆವಗಳನ್ನು ಹೇಳಿ ಯದ್ವಾತದ್ವಾ ಫ್ರೂಟ್‌ಜ್ಯೂಸ್‌ ಗಳನ್ನು ಕುಡಿಯಬೇಡಿ. ಇದರಿಂದ ರಕ್ತದಲ್ಲಿನ ಸಕ್ಕರೆಯಂಶ ಹೆಚ್ಚಾಗಿ, ಮಧುಮೇಹವಿದ್ದರೆ ಕಣ್ಣಿನ ಸಮಸ್ಯೆ ಬರಬಹುದು. ಮಧುಮೇಹ, ಹೃದ್ರೋಗಗಳಿದ್ದರೆ ಕಾಲಕಾಲಕ್ಕೆ ಕಣ್ಣಿನ ತಪಾಸಣೆಯನ್ನೂ ಮಾಡಿಸಿಕೊಳ್ಳಿ. ಧೂಮಪಾನ ಬೇಡ, ಆಲ್ಕೋಹಾಲ್‌ ನಿರ್ಜಲೀಕರಣವನ್ನು ಹೆಚ್ಚಿಸುತ್ತದೆ ಎನ್ನುವುದನ್ನು ನೆನಪಿಡಿ.

Continue Reading

ಫ್ಯಾಷನ್

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

ಡಿಸೈನರ್‌ ಪಾರ್ಟಿವೇರ್‌ ಸೀರೆಯಲ್ಲಿ (Star Saree Fashion) ನಟಿ ತಾನ್ಯಾ ಹೋಪ್‌ರಂತೆ ಗ್ಲಾಮರಸ್‌ ಆಗಿ ಕಾಣಿಸಲು ನಿಮಗೂ ಆಸೆಯಾಗಿದೆಯೇ! ಹಾಗಾದಲ್ಲಿ, 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ ಎನ್ನುವ ಸ್ಟೈಲಿಸ್ಟ್ ಗಳು ಒಂದಿಷ್ಟು ಸಲಹೆ ನೀಡಿದ್ದಾರೆ.

VISTARANEWS.COM


on

Star Saree Fashion
ಚಿತ್ರಗಳು: ತಾನ್ಯಾ ಹೋಪ್‌, ನಟಿ
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಸ್ಯಾಂಡಲ್‌ವುಡ್‌ ಹಾಗೂ ಬಹುಭಾಷಾ ನಟಿ ತಾನ್ಯಾ ಹೋಪ್‌ ಸೀರೆಯಲ್ಲಿ (Star Saree Fashion) ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಡಿಸೈನರ್‌ ಪಾರ್ಟಿವೇರ್‌ ಸೀರೆಯುಟ್ಟರೂ ಆಕರ್ಷಕವಾಗಿ ಹಾಗೂ ಗ್ಲಾಮರಸ್‌ ಆಗಿ ಕಾಣಿಸಬಹುದು ಎಂಬುದನ್ನು ನಟಿ ತಾನ್ಯಾ ಪ್ರೂವ್‌ ಮಾಡಿದ್ದಾರೆ. ಅವರು ಧರಿಸಿರುವ ಸೀರೆ ಅವರ ಸೌಂದರ್ಯವನ್ನು ಇಮ್ಮಡಿಗೊಳಿಸಿದೆ. “ಪಾರ್ಟಿವೇರ್‌ ಸೀರೆಗಳು ಇದೀಗ ಅತಿ ಹೆಚ್ಚು ಟ್ರೆಂಡಿಯಾಗಿರುವ ಸೀರೆಗಳು! ಶಿಮ್ಮರ್‌ ಸೀರೆಗಳನ್ನು ಹೊರತುಪಡಿಸಿದಲ್ಲಿ, ಜಾರ್ಜೆಟ್ ಶೈಲಿಯ ಡಿಸೈನರ್‌ ಸೀರೆಗಳು ಇದೀಗ ಪಾರ್ಟಿ ಪ್ರಿಯ ಮಾನಿನಿಯರನ್ನು ಆಕರ್ಷಿಸಿವೆ. ಹಾಗೆಂದು ಇವುಗಳ ಬೆಲೆಯೇನೂ ಕಡಿಮೆಯೇನಿಲ್ಲ! ಎಂಬ್ರಾಯ್ಡರಿ ಹಾಗೂ ಅವುಗಳ ಡಿಸೈನ್‌ ಮತ್ತು ಫ್ಯಾಬ್ರಿಕ್‌ನ ಆಧಾರದ ಮೇಲೆ ಬೆಲೆ ನಿಗಧಿಯಾಗಿರುತ್ತವೆ. ಇನ್ನು ಇತ್ತೀಚೆಗೆ ಸೆಲೆಬ್ರೆಟಿಗಳು ಕೂಡ ಇಂತಹ ಸೀರೆಗಳತ್ತ ವಾಲಿದ್ದಾರೆ. ಮಾಮೂಲಿಯಂತೆ ಸ್ಟೈಲಿಂಗ್‌ ಮಾಡುವ ಬದಲು ಗ್ಲಾಮರಸ್‌ ಆಗಿ ಮಾಡುತ್ತಾರೆ. ಹಾಗಾಗಿ ನೋಡಲು ಚೆಂದನಾಗಿ ಕಾಣಿಸುತ್ತಾರೆ” ಎನ್ನುತ್ತಾರೆ ಸೀರೆ ಡ್ರೇಪಿಸ್ಟ್ ಧವನ್‌. ಇನ್ನು, ನಟಿ ತಾನ್ಯಾ ಹೋಪ್‌ರಂತೆ ಡಿಸೈನರ್‌ ಪಾರ್ಟಿವೇರ್‌ ಸೀರೆಯಲ್ಲಿ ಗ್ಲಾಮರಸ್‌ ಆಗಿ ಕಾಣಿಸಲು ಯಾರಿಗೆ ಇಷ್ಟವಿಲ್ಲ ಹೇಳಿ! ಹಾಗಾದಲ್ಲಿ ಒಂದಿಷ್ಟು ಸಿಂಪಲ್‌ ಟಿಪ್ಸ್ ಫಾಲೋ ಮಾಡಿ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಈ ಕುರಿತಂತೆ 5 ಟಿಪ್ಸ್ ನೀಡಿದ್ದಾರೆ.

Star Saree Fashion

ಪಾರ್ಟಿ ಥೀಮ್‌ಗೆ ತಕ್ಕ ಸೀರೆ ಆಯ್ಕೆ ಮಾಡಿ

ನೀವು ಭಾಗವಹಿಸುವ ಕಾಯರ್ಕ್ರಮಕ್ಕೆ ತಕ್ಕಂತೆ ಮ್ಯಾಚ್‌ ಆಗುವಂತಹ ಡಿಸೈನರ್‌ ಪಾರ್ಟಿವೇರ್ ಸೀರೆಗಳನ್ನು ಆಯ್ಕೆ ಮಾಡಿ. ಅದು ಟ್ರೆಡಿಷನಲ್‌ ಸಮಾರಂಭವೇ ಅಥವಾ ಕ್ಯಾಶುವಲ್‌ ಪಾರ್ಟಿಯಾ ಎಂಬುದು ತಿಳಿದು ಆರಿಸಿ.

ಮಿನುಗುವ ಡಿಸೈನ್ಸ್/ ಹ್ಯಾಂಡ್‌ವರ್ಕ್ ಸೀರೆಯ ಆಯ್ಕೆ

ಪಾರ್ಟಿಗೆ ಧರಿಸುವ ಸೀರೆಗಳು ಆದಷ್ಟೂ ಮಿನುಗುವ ಡಿಸೈನ್ಸ್ ಹೊಂದಿರಲಿ. ಎಂಬ್ರಾಯ್ಡರಿ ಹ್ಯಾಂಡ್‌ ವರ್ಕ್, ಕಟ್‌ವರ್ಕ್ ಡಿಸೈನ್ಸ್ ಇರುವಂತಹ ಡಿಸೈನರ್‌ ಸೀರೆ ಆಯ್ಕೆ ಮಾಡಿ. ಟ್ರೆಡಿಷನಲ್‌ ಲುಕ್‌ ಇರುವಂತವು ಬೇಡ!

Star Saree Fashion

ಡಿಸೈನರ್ ಸೀರೆಗೆ ಗ್ಲಾಮರಸ್‌ ಬ್ಲೌಸ್‌

ಡಿಸೈನರ್‌ ಸೀರೆಗೆ ಯಾವುದೇ ಕಾರಣಕ್ಕೂ ಟ್ರೆಡಿಷನಲ್‌ ಲುಕ್‌ ನೀಡುವಂತಹ ಎಥ್ನಿಕ್‌ ಡಿಸೈನ್‌ನ ಬ್ಲೌಸ್‌ ಆಯ್ಕೆ ಮಾಡಬೇಡಿ. ಹಾಲ್ಟರ್‌ ನೆಕ್‌ ಬ್ಲೌಸ್‌, ಸ್ಲಿವ್‌ಲೆಸ್‌ ಬ್ಲೌಸ್‌, ಬ್ಯಾಕ್‌ ಬಟನ್‌ ಬ್ಲೌಸ್‌, ಸ್ಟ್ರಾಪ್‌ ಬ್ಲೌಸ್‌ ಹಾಗೂ ಡಿಸೈನರ್‌ ಸ್ಲೀವ್‌ ಬ್ಲೌಸ್‌ಗಳನ್ನು ಸೆಲೆಕ್ಟ್ ಮಾಡಿ, ಧರಿಸಿ.

ಮಿನಿಮಲ್‌ ಆಭರಣ ಧರಿಸಿ

ಮೊದಲೇ ಪಾರ್ಟಿವೇರ್‌ ಡಿಸೈನರ್‌ ಸೀರೆಗಳು ಜಗಮಗಿಸುತ್ತಿರುತ್ತವೆ. ಇಲ್ಲವೇ ಎಂಬ್ರಾಯ್ಡರಿ ಹೈಲೈಟಾಗುತ್ತಿರುತ್ತವೆ. ಇವುಗಳನ್ನು, ಮಾಸುವಂತೆ ಮಾಡುವ ಹೆವ್ವಿ ಜ್ಯುವೆಲರಿಗಳನ್ನು ಧರಿಸುವುದು ಬೇಡ. ಬದಲಿಗೆ ಮಿನಿಮಲ್‌ ಆಭರಣಗಳನ್ನು ಧರಿಸಿ. ಸೀರೆ ಎದ್ದು ಕಾಣಿಸುವುದು.

Star Saree Fashion

ಸೀರೆಯ ಡ್ರೇಪಿಂಗ್‌

ಉಡುವ ಸೀರೆಯ ಡ್ರೇಪಿಂಗ್‌ ಬಾಡಿ ಮಾಸ್‌ ಇಂಡೆಕ್ಸ್ ಹೈ ಲೈಟ್‌ ಮಾಡುವಂತಿರಲಿ. ಆಗಷ್ಟೇ ಬಳುಕುವ ಬಳ್ಳಿಯಂತೆ ಕಾಣಬಹುದು. ಡ್ರೇಪಿಂಗ್‌ ಮಾಡುವ ಶೈಲಿ ಸೀರೆಯ ಇಡೀ ಲುಕ್ಕನ್ನು ಬದಲಿಸಬಲ್ಲದು.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Holiday Fashion: ಹಾಲಿ ಡೇ ಫ್ಯಾಷನ್‌ಗೆ ಮರಳಿ ಬಂತು ಹಿಪ್ಪಿ ಪ್ಯಾಂಟ್ಸ್!

Continue Reading

ಆರೋಗ್ಯ

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಹಾಲು ಸರ್ವರಿಗೂ ಸಲ್ಲುವಂಥ ಆಹಾರ. ವಿಶ್ವದ ಎಲ್ಲ ದೇಶಗಳಲ್ಲಿ ಇದನ್ನು ಒಂದಿಲ್ಲೊಂದು ರೀತಿಯಲ್ಲಿ ನಿಶ್ಚಿತವಾಗಿ ಬಳಸುತ್ತಾರೆ. ಹಾಗಾಗಿಯೇ ಜೂನ್‌ ತಿಂಗಳ ಮೊದಲ ದಿನವನ್ನು ವಿಶ್ವ ಕ್ಷೀರ ದಿನವೆಂದು ಗುರುತಿಸಿದ್ದಾರೆ. ಆದರೆ ಅದೇ ದಿನಕ್ಕೆ ಕಾಯಬೇಕಿಲ್ಲ, ವರ್ಷವಿಡೀ ಕ್ಷೀರ ದಿನವನ್ನು (World Milk Day) ಆಚರಿಸಬಹುದು.

VISTARANEWS.COM


on

World Milk Day
Koo

ಹಾಲನ್ನೇಕೆ ಕುಡಿಯಬೇಕು ಎಂದು ಕೇಳಿದರೆ ಯಾರಾದರೂ ನಕ್ಕಾರು. ಹಾಗಂತ ನಗುವವರಿಗೆಲ್ಲ ಹಾಲಿನ ಸದ್ಗುಣಗಳು ಗೊತ್ತಿರುತ್ತವೆ ಎಂದಲ್ಲ. ಆದರೆ ಹಾಲು ಪೌಷ್ಟಿಕವಾದ ಆಹಾರ ಎಂಬುದನ್ನಂತೂ ಎಲ್ಲರೂ ಕೇಳಿ ತಿಳಿದಿರುತ್ತಾರೆ. ಏನಿವೆ ಅಂಥ ಪೌಷ್ಟಿಕಾಂಶಗಳು ಹಾಲಿನಲ್ಲಿ? ಎಲ್ಲರೂ ಹಾಲನ್ನು ಕುಡಿಯುವುದಕ್ಕೆ ಮಾತ್ರ ಬಳಸುತ್ತಾರೆಂದಿಲ್ಲ. ಮೊಸರು, ಬೆಣ್ಣೆ, ತುಪ್ಪ, ಚೀಸ್‌, ಪನೀರ್‌ಗಳನ್ನು ಮಾಡಬಹುದು. ಹಾಲಿನಲ್ಲಿ ಸಿಹಿಗಳನ್ನು ತಯಾರಿಸಬಹುದು, ಶೇಖ್‌ ಮತ್ತು ಸ್ಮೂದಿಗಳಿಗೆ ಬಳಸಬಹುದು, ಸೀರಿಯಲ್‌ಗಳಿಗೆ ಹಾಕಿ ತಿನ್ನಬಹುದು. ಅಂತೂ ಹಾಲು ಎಲ್ಲರಿಗೂ ಎಲ್ಲ ಹೊತ್ತಿಗೂ ಸಲ್ಲುವಂಥದ್ದು. ಹಾಗಾಗಿ ಜೂನ್‌ ತಿಂಗಳ ಮೊದಲ ದಿನವನ್ನು ವಿಶ್ವ ಕ್ಷೀರ ದಿನವೆಂದು ಗುರುತಿಸಿದ್ದರೂ, ನಾವು ವರ್ಷವಿಡೀ ಕ್ಷೀರ ದಿನವನ್ನು (World Milk Day) ಆಚರಿಸಬಹುದು.

glass of milk

ಕ್ಯಾಲ್ಶಿಯಂ ಹೇರಳ

ನಮ್ಮ ಮೂಳೆಗಳು, ಹಲ್ಲುಗಳೆಲ್ಲ ಬಲಯುತವಾಗಿ ಇರಬೇಕೆಂದರೆ ಕ್ಯಾಲ್ಶಿಯಂ ಬೇಕು. ಕೇವಲ ಅದಕ್ಕಷ್ಟೇ ಅಲ್ಲ, ನಾವು ಮಾಡುವ ಪ್ರತಿಯೊಂದು ದೈಹಿಕ ಚಟುವಟಿಕೆಗೂ ಕ್ಯಾಲ್ಶಿಯಂ ಬಲದ ಅಗತ್ಯವಿದೆ. ಮೂಳೆಗಳು ಟೊಳ್ಳಾಗದಂತೆ, ಅವುಗಳ ಸಾಂದ್ರತೆ ಕಾಪಾಡಿಕೊಳ್ಳುವುದಕ್ಕೂ ಇದು ಬೇಕು. ಹಾಗಾಗಿ ದಿನಕ್ಕೆ 150 ಎಂ.ಎಲ್‌. ಗ್ಲಾಸ್‌ನಲ್ಲಿ ಮೂರು ಗ್ಲಾಸ್‌ ಹಾಲು ನಮ್ಮ ನಿತ್ಯದ ಕ್ಯಾಲ್ಶಿಯಂ ಅಗತ್ಯವನ್ನು ಪೂರೈಸುತ್ತದೆ.

ಉತ್ಕೃಷ್ಟ ಪ್ರೊಟೀನ್‌

ಹಾಲಿನಲ್ಲಿ ಉತ್ಕೃಷ್ಟ ಗುಣಮಟ್ಟದ ಪ್ರೊಟೀನ್‌ ದೊರೆಯುತ್ತದೆ. ಸ್ನಾಯುಗಳ ಬೆಳವಣಿಗೆ ಮತ್ತು ದುರಸ್ತಿಗೆ ಇಂಥ ಪರಿಪೂರ್ಣ ಪ್ರೊಟೀನ್‌ ಅಗತ್ಯ. ಅದರಲ್ಲೂ ಬೆಳೆಯುವ ಮಕ್ಕಳ ದೇಹಕ್ಕೆ ಆವಶ್ಯಕವಾದ ಪ್ರೊಟೀನ್‌ಗಳು ಹಾಲಿನಲ್ಲಿವೆ. ಗರ್ಭಿಣಿಯರಿಗೆ, ಬಾಣಂತಿಯರಿಗೆ, ಋತುಬಂಧದ ಆಚೀಚೆ ಇರುವ ಮಹಿಳೆಯರಿಗೆ, ವೃದ್ಧರಿಗೆ- ಹೀಗೆ ಎಲ್ಲ ವಯಸ್ಸಿನವರಿಗೂ ಅವರವರ ಅಗತ್ಯಗಳನ್ನು ಪೂರೈಸುವಂಥ ಪೋಷಕಾಂಶಗಳು ಹಾಲಿನಲ್ಲಿವೆ.

Fresh Milk

ವಿಟಮಿನ್‌, ಖನಿಜಗಳು

ಬಹಳಷ್ಟು ರೀತಿಯ ಜೀವಸತ್ವಗಳು ಮತ್ತು ಖನಿಜಗಳು ಹಾಲಿನಲ್ಲಿವೆ. ವಿಟಮಿನ್‌ ಡಿ, ವಿಟಮಿನ್‌ ಬಿ12, ರೈಬೊಪ್ಲೇವಿನ್‌, ಫಾಸ್ಫರಸ್‌, ಪೊಟಾಶಿಯಂ, ಸೆಲೆನಿಯಂ, ಮೆಗ್ನೀಶಿಯಂ ಮುಂತಾದ ಸತ್ವಗಳು ಇದರಲ್ಲಿವೆ. ಇವೆಲ್ಲವೂ ನಮ್ಮ ಶರೀರದ ಶಕ್ತಿಯನ್ನು ಸುಸ್ಥಿರವಾಗಿ ಕಾಯ್ದುಕೊಳ್ಳುವುದಕ್ಕೆ ಬೇಕಾದಂಥವು. ಅದಲ್ಲದೆ, ನರಗಳ ಕ್ಷಮತೆ ಕಾಯ್ದುಕೊಳ್ಳುವುದಕ್ಕೆ ಮತ್ತು ಶರೀರದ ಚಯಾಪಚಯ ನಿರ್ವಹಣೆಯಲ್ಲೂ ಇವು ಪ್ರಮುಖವಾಗಿವೆ.

ಸತ್ವಗಳು ಇಷ್ಟೇ ಅಲ್ಲ

ಒಂದು ಲೋಟ ಹಸುವಿನ ಹಾಲಿನಿಂದ 145 ಕ್ಯಾಲರಿ ಶಕ್ತಿ ದೊರೆಯುತ್ತದೆ. ಅದರಲ್ಲಿ ಸುಮಾರು 8 ಗ್ರಾಂ ಪ್ರೊಟೀನ್‌, ಅಷ್ಟೇ ಪ್ರಮಾಣದ ಕೊಬ್ಬು, ಶೇ. 28ರಷ್ಟು ಕ್ಯಾಲ್ಶಿಯಂ, 24% ವಿಟಮಿನ್‌ ಡಿ, 26% ವಿಟಮಿನ್‌ ಬಿ2, 18% ವಿಟಮಿನ್‌ ಬಿ12, 22% ಫಾಸ್ಫರಸ್‌, 13% ಸೆಲೆನಿಯಂ ಇದರಲ್ಲಿ ಪ್ರಮುಖವಾಗಿ ದೊರೆಯುತ್ತದೆ. ಇದಲ್ಲದೆ, ವಿಟಮಿನ್‌ ಎ, ಸತು ಮತ್ತು ಥಿಯಮಿನ್‌ ಸಹ ಇವೆ.

Food Tips Kannada adulterated food effect health

ಎಲ್ಲದಕ್ಕೂ ಸಲ್ಲುತ್ತದೆ

ಕಾಫಿ, ಚಹಾ, ಮಿಲ್ಕ್‌ಶೇಖ್‌, ಸ್ಮೂದಿ, ಸೀರಿಯಲ್‌ಗಳು, ಪಾಯಸ, ಖೀರು, ಹಲ್ವಾಗಳು, ಕೇಕ್‌ಗಳು, ಗ್ರೇವಿಗಳು ಮುಂತಾದ ಬಹಳಷ್ಟು ರೀತಿಯ ಅಡುಗೆಗಳಿಗೆ ಹಾಲು ನೇರವಾಗಿ ಸಲ್ಲುತ್ತದೆ. ಅದಲ್ಲದೆ, ಮೊಸರು, ಚೀಸ್‌, ಪನೀರ್‌, ಬೆಣ್ಣೆ-ತುಪ್ಪಗಳನ್ನು ಇನ್ನೂ ಹೆಚ್ಚಿನ ಆಹಾರಗಳಿಗೆ ಪೂರಕವಾಗಿ ಬಳಸಬಹುದು. ಹಾಗೆಂದು ಹಾಲಿನ ಕೊಬ್ಬಿನಿಂದ ಮಾಡಿದ ಪದಾರ್ಥಗಳನ್ನು ಅತಿಯಾಗಿ ಸೇವಿಸಿದರೆ ತೂಕ ಹೆಚ್ಚಬಹುದು.

ಇದನ್ನೂ ಓದಿ: Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

ಜಾಗ್ರತೆ ಮಾಡಿ

ಹಾಲು ಸರ್ವರಿಗೂ ಸಲ್ಲುವಂಥ ಆಹಾರ. ಅನಾರೋಗ್ಯದ ಸಂದರ್ಭಗಳಲ್ಲೂ ಕೆಲವೊಮ್ಮೆ ಹಾಲಿನ ಸೇವನೆ ಪ್ರಯೊಜನ ನೀಡಬಹುದು. ಆದರೆ ಅತಿ ಸ್ಥೂಲ ದೇಹಿಗಳು ಮತ್ತು ಕೆಲವು ಆರೋಗ್ಯ ಸಮಸ್ಯೆ ಇರುವವರು ಎಚ್ಚರ ವಹಿಸುವುದು ಅಗತ್ಯ. ಈಗಾಗಲೇ ಬೊಜ್ಜಿನ ಸಮಸ್ಯೆ ಇದ್ದವರು ಕಡಿಮೆ ಕೊಬ್ಬಿನ ಹಾಲನ್ನು ಸೇವಿಸುವುದು ಉತ್ತಮ. ಏರಿದ ಕೊಲೆಸ್ಟ್ರಾಲ್‌, ಹೃದಯ ರೋಗಗಳನ್ನು ಹೊಂದಿದವರು ಸಹ ಕೊಬ್ಬು ರಹಿತ ಹಾಲು ಕುಡಿಯುವುದು ಒಳ್ಳೆಯ ಆಯ್ಕೆ. ಲ್ಯಾಕ್ಟೋಸ್‌ ಅಲರ್ಜಿ ಇರುವವರಿಗೆ ಹಾಲು ಆಗಿ ಬರುವುದಿಲ್ಲ. ಒಂದೊಮ್ಮೆ ಹಾಲು ಸೇವಿಸಿದರೂ ಹೊಟ್ಟೆ ನೋವು, ಹೊಟ್ಟೆಯುಬ್ಬರ, ಡಯರಿಯಾದಂಥ ತೊಂದರೆಗಳು ಬಾಧಿಸಬಹುದು.

Continue Reading

ಆರೋಗ್ಯ

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

ಯಾವುದೇ ಆಹಾರ ತಯಾರಿಸುವ ಸಂದರ್ಭ ಚಿಟಿಕೆ ಏಲಕ್ಕಿಯನ್ನು ಅದಕ್ಕೆ ಹಾಕಿದರೂ ಸಾಕು, ಅದು ಏಲಕ್ಕಿಯ ಘಮವನ್ನು ಪಡೆದುಕೊಂಡುಬಿಡುತ್ತದೆ. ಅದಕ್ಕಾಗಿಯೇ, ಇದು ಸಿಹಿತಿಂಡಿಗಳಿಗೆ ಹೇಳಿ ಮಾಡಿಸಿದ ಮಸಾಲೆ. ಒಂದು ಚಿಟಿಕೆ ಏಲಕ್ಕಿ ಹಾಕಿದ ಪಾಯಸದ ರುಚಿಯೇ ಬೇರೆ. ಆದರೆ, ಏಲಕ್ಕಿ, ಕೇವಲ ತನ್ನ ಘಮದಲ್ಲಷ್ಟೇ ಶ್ರೀಮಂತಿಕೆ ಮೆರೆದಿಲ್ಲ. ಗುಣದಲ್ಲೂ ಏಲಕ್ಕಿ ಶ್ರೀಮಂತಿಕೆಯಲ್ಲಿ ಯಾವುದಕ್ಕೂ (cardamom benefits) ಕಡಿಮೆಯಿಲ್ಲ.

VISTARANEWS.COM


on

Cardamom Benefits
Koo

ಮಸಾಲೆಗಳ ರಾಣಿ ಎಂದೇ ಹೆಸರಾದ ಏಲಕ್ಕಿಗೆ ಒಂದು ಅಪರೂಪದ ಘಮವಿದೆ. ತನ್ನ ಘಮದ ಮೂಲಕ ಯಾವುದೇ ಆಹಾರವನ್ನು ಕ್ಷಣ ಮಾತ್ರದಲ್ಲಿ ತನ್ನತನವನ್ನು ಅದಕ್ಕೆ ಕೊಡುವ ಶಕ್ತಿಯಿದೆ. ಯಾವುದೇ ಆಹಾರ ತಯಾರಿಸುವ ಸಂದರ್ಭ ಚಿಟಿಕೆ ಏಲಕ್ಕಿಯನ್ನು ಅದಕ್ಕೆ ಹಾಕಿದರೂ ಸಾಕು, ಅದು ಏಲಕ್ಕಿಯ ಘಮವನ್ನು ಪಡೆದುಕೊಂಡುಬಿಡುತ್ತದೆ. ಅದಕ್ಕಾಗಿಯೇ, ಇದು ಸಿಹಿತಿಂಡಿಗಳಿಗೆ ಹೇಳಿ ಮಾಡಿಸಿದ ಮಸಾಲೆ. ಒಂದು ಚಿಟಿಕೆ ಏಲಕ್ಕಿ ಹಾಕಿದ ಪಾಯಸದ ರುಚಿಯೇ ಬೇರೆ. ಆದರೆ, ಏಲಕ್ಕಿ, ಕೇವಲ ತನ್ನ ಘಮದಲ್ಲಷ್ಟೇ ಶ್ರೀಮಂತಿಕೆ ಮೆರೆದಿಲ್ಲ. ಗುಣದಲ್ಲೂ ಏಲಕ್ಕಿ ಶ್ರೀಮಂತಿಕೆಯಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಬನ್ನಿ, ಏಲಕ್ಕಿಯ ಆರೋಗ್ಯಕರ ಲಾಭಗಳನ್ನು (cardamom benefits) ತಿಳಿಯೋಣ.

Blood Pressure Regulation Cucumber Benefits

ರಕ್ತದೊತ್ತಡಕ್ಕೆ ಪರಿಹಾರ

ಅಧಿಕ ರಕ್ತದೊತ್ತಡ ಇರುವ ಮಂದಿಗೆ ಏಲಕ್ಕಿಯಿಂದ ಲಾಭಗಳಿವೆ. ಒಂದು ಸಂಶೋಧನೆಯ ಪ್ರಕಾರ, ಅಧಿಕ ರಕ್ತದೊತ್ತಡ ಸಮಸ್ಯೆ ಆರಂಭವಾದ 20 ಮಂದಿಗೆ ಪ್ರತಿದಿನ ಮೂರು ಗ್ರಾಂಗಳಷ್ಟು ಏಲಕ್ಕಿ ಪುಡಿ ಪ್ರತಿಯೊಬ್ಬರೂ ಸೇವಿಸದಾಗ 12 ವಾರಗಳಲ್ಲೇ ಅವರ ರಕ್ತದೊತ್ತಡ ಸಮತೋಲನಕ್ಕೆ ಬಂದಿರುವುದು ಸಾಬೀತಾಗಿದೆ. ಇದಕ್ಕೆ ಕಾರಣ, ಏಲಕ್ಕಿಯಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು.

ealthy internal organs of human digestive system / highlighted blue organs

ಜೀರ್ಣಕಾರಿ ಗುಣಗಳಿವೆ

ಏಲಕ್ಕಿಯಲ್ಲಿ ಜೀರ್ಣಕಾರಿ ಗುಣಗಳಿವೆ. ಏಲಕ್ಕಿಯಲ್ಲಿರುವ ಮೆಂಥೋನ್‌ ಎಂಬ ಎಣ್ಣೆಯಂಶಕ್ಕೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಗುಣವಿದೆ. ಇದು ಅಸಿಡಿಟಿ, ಅಜೀರ್ಣ ಹಾಗೂ ಹೊಟ್ಟೆ ನೋವಿನಂಥ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ಇದಕ್ಕೆ ಜೀರ್ಣಕ್ರಿಯೆಯನ್ನು ಪ್ರಚೋದಿಸುವ ಗುಣವಿದೆ.

ವಾಂತಿಗೆ ಪರಿಹಾರ

ಏಲಕ್ಕಿಯಲ್ಲಿ ವಾಂತಿ ಹಾಗೂ ತಲೆಸುತ್ತಿನಂಥ ಸಮಸ್ಯೆಗೆ ಪರಿಹಾರವಿದೆ. ವಾಂತಿಯಾದ ಮೇಲೆ ಆಗುವ ಗಂಟಲಿನ ಹುಳಿ ರುಚಿಯಂಥ ಕಿರಿಕಿರಿ ಗಂಟಲು ಕೆರೆತದ ಭಾವಕ್ಕೆ ಏಲಕ್ಕಿ ಒಳ್ಳೆಯ ಪರಿಹಾರ. ಅಷ್ಟೇ ಅಲ್ಲ, ಪ್ರಯಾಣದಲ್ಲಿ ಆಗುವ ವಾಂತಿಯಂಥ ಸಮಸ್ಯೆಗೂ ಏಲಕ್ಕಿಯನ್ನು ಬಾಯಲ್ಲಿ ಇಟ್ಟುಕೊಳ್ಳುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ.

Woman Suffering from Toothache Benefits Of Drinking Green Tea

ಹಲ್ಲು ನೋವು ನಿವಾರಣೆ

ಏಲಕ್ಕಿಯಲ್ಲಿ ಆಂಟಿ ಸೆಪ್ಟಿಕ್‌ ಹಾಗೂ ಆಂಟಿ ಮೈಕ್ರೋಬಿಯಲ್‌ ಗುಣಗಳಿವೆ. ಇದರಿಂದಾಗಿ ಇದು ಹಲ್ಲಿನ ಸಮಸ್ಯೆಗಳಿಗೆ ಒಳ್ಳೆಯದು. ಏಲಕ್ಕಿಯಲ್ಲಿರುವ ಎಣ್ಣೆಯ ಅಂಶ ಹಲ್ಲು ನೋವಿಗೆ ಒಳ್ಳೆಯ ಔಷಧಿ. ಯಾಕೆಂದರೆ ಇದರಲ್ಲಿರುವ ಆಂಟಿ ಸೆಪ್ಟಿಕ್‌ ಗುಣವು ಕ್ಯಾವಿಟಿಗೆ ಬಹಳ ಒಳ್ಳೆಯದು. ಅಷ್ಟೇ ಅಲ್ಲ, ಹಲ್ಲು ಹುಳುಕಾಗುವುದನ್ನೂ ಇದು ತಡೆಯುತ್ತದೆ.

ಶೀತ ಬಾಧೆ ನಿವಾರಣೆ

ಶೀತ ಹಾಗೂ ನೆಗಡಿಗೂ ಏಲಕ್ಕಿ ಒಳ್ಳೆಯದು ಎಂದರೆ ನಂಬುತ್ತೀರಾ? ಹೌದು, ನಂಬಲೇಬೇಕು. ಏಲಕ್ಕಿಯಲ್ಲಿರುವ ವಿಶೇಷ ಗುಣವು ಕಫ ಕಟ್ಟುವುದನ್ನು ತಡೆಯುತ್ತದೆ. ಇದು ಶ್ವಾಸಕೋಶದಲ್ಲಿ ರಕ್ತ ಪರಿಚಲನೆಯನ್ನು ಚುರುಕಾಗಿಸುತ್ತದೆ. ಇದರಿಂದ ಉಸಿರಾಟದ ಗತಿಯೂ ಚುರುಕಾಗುತ್ತದೆ.

ಅತ್ಯುತ್ತಮ ಡಿಟಾಕ್ಸ್‌

ಏಲಕ್ಕಿ ಅತ್ಯುತ್ತಮ ಡಿಟಾಕ್ಸ್‌ ಕೂಡಾ ಹೌದು. ಇದು ರಕ್ತದಲ್ಲಿರುವ ವಿಷಕಾರಿ ಅಂಶವನ್ನು ದೇಹದಿಂದ ಹೊರಕ್ಕೆ ಕಳುಹಿಸುತ್ತದೆ. ಏಲಕ್ಕಿಯಲ್ಲಿರುವ ಏಸೆನ್ಶಿಯಲ್ ಆಯಿಲ್‌ ಹಾಗೂ ಫೈಟೋಕೆಮಿಕಲ್‌ಗಳಲ್ಲಿ ಡಿಟಾಕ್ಸ್‌ ಗುಣವಿದೆ.

ನಿಕೋಟಿನ್‌ನಿಂದ ಹೊರ ಬರಲು ಮದ್ದು

ನಿಕೋಟಿನ್‌ ಚಟಕ್ಕೆ ಬಿದ್ದ ಮಂದಿ, ಇದರಿಂದ ಹೊರಬರುವ ಇಚ್ಛೆಯಿದ್ದರೆ ನೈಸರ್ಗಿಕ ಉಪಾಯ ಎಂದರೆ ಅದು ಏಲಕ್ಕಿ. ಏಲಕ್ಕಿಯನ್ನು ದಿನಕ್ಕೆ ನಾಲ್ಕೈದು ಬಾರಿ ಜಗಿಯುವ ಮೂಲಕ ನಿಕೋಟಿನ್‌ ಬಯಕೆಯನ್ನು ನಿಧಾನವಾಗಿ ಹತ್ತಿಕ್ಕಬಹುದು. ಖಿನ್ನತೆಯಂತ ಸಮಸ್ಯೆ ಇರುವ ಮಂದಿಯ ನಿದ್ದೆಗೂ ಇದು ಒಳ್ಳೆಯದು.

Women with Breast Cancer Prevention Benefits Of Drinking Green Tea

ಕ್ಯಾನ್ಸರ್‌ ವಿರೋಧಿ ಗುಣ

ಏಲಕ್ಕಿಯಲ್ಲಿ ಕ್ಯಾನ್ಸರ್‌ ವಿರೋಧಿ ಗುಣಗಳೂ ಇವೆ. ದೇಹದಲ್ಲಿರುವ ಕ್ಯಾನ್ಸರ್‌ ವಿರೋಧಿ ಕಿಣ್ವಗಳನ್ನು ಮತ್ತಷ್ಟು ಚುರುಕಾಗಿಸುವ ಮೂಲಕ ಏಲಕ್ಕಿ ಕ್ಯಾನ್ಸರ್‌ನಂತಹ ಕಾಯಿಲೆಯ ವಿರುದ್ಧವೂ ಹೋರಾಡುವ ಗುಣ ಹೊಂದಿದೆ. ಇತ್ತೀಚೆಗೆ ನಡೆದ ಅಧ್ಯಯನವೊಂದು ಇದನ್ನು ಪುಷ್ಠೀಕರಿಸುತ್ತದೆ. ಕ್ಯಾನ್ಸರ್‌ನ ಗಡ್ಡೆಯ ಅಂಗಾಂಶಗಳನ್ನು ಕೊಲ್ಲಲು ಏಲಕ್ಕಿಯಲ್ಲಿರುವ ವಿಶೇಷ ಗುಣವು ಸಹಾಯ ಮಾಡುತ್ತದೆ.

ಇದನ್ನೂ ಓದಿ: Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

ಏನು ಮಾಡಬಹುದು?

ಏಲಕ್ಕಿಯ ಈ ಆರೋಗ್ಯಕರ ಗುಣಗಳನ್ನು ಪಡೆಯಲು ನಾವು ಏನು ಮಾಡಬಹುದು, ಹೇಗೆ ಇದನ್ನು ಸೇವಿಸಬೇಕು ಎಂಬುದು ಈಗ ಬಹುತೇಕರಲ್ಲಿರುವ ಪ್ರಶ್ನೆ. ಏಲಕ್ಕಿಯ ಒಂದೆರಡು ಬೀಜಗಳನು ಬಾಯಲ್ಲಿ ಹಾಕಿ ಮೌತ್‌ ಫ್ರೆಶ್ನರ್‌ನ ಹಾಗೆ ಬಳಸಬಹುದು. ಅಥವಾ ಏಲಕ್ಕಿ, ಜಾಯಿಕಾಯಿ, ಅರಿಶಿನ, ಕರಿಮೆಣಸು ಇತ್ಯಾದಿಗಳ ಪುಡಿ ಮಾಡಿ ಇಟ್ಟುಕೊಂಡು ರಾತ್ರಿ ಮಲಗುವ ಮುನ್ನ ಕುಡಿಯುವ ಹಾಲಿಗೆ ಚಿಟಿಕೆ ಪುಡಿ ಸೇರಿಸಿ ಕುಡಿಯಬಹುದು. ಇದರಿಂದ ಸೊಂಪಾದ ನಿದ್ರೆಯೂ ಬರುತ್ತದೆ. ಅಥವಾ ನಿತ್ಯವೂ ಕುಡಿಯುವ ನೀರಿಗೆ ಏಲಕ್ಕಿಯ ಎಸಳೊಂದನ್ನು ಹಾಕಿಡಬಹುದು. ಇನ್ನುಳಿದಂತೆ, ಆಹಾರದ ಮೂಲಕ, ಸಿಹಿತಿಂಡಿಗಳ ಮೂಲಕ ಏಲಕ್ಕಿ ಆಗಾಗ ದೇಹ ಸೇರುತ್ತಲೇ ಇರುತ್ತದೆ. ಈ ಎಲ್ಲ ವಿಧಾನಗಳ ಮೂಲಕ ಏಲಕ್ಕಿಯ ಲಾಭವನ್ನು ನಾವು ಪಡೆಯಬಹುದು.

Continue Reading
Advertisement
cyber attack ನನ್ನ ದೇಶ ನನ್ನ ದನಿ
ಅಂಕಣ9 mins ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ19 mins ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Karnataka weather Forecast
ಮಳೆ49 mins ago

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Heatwave Effect
ಆರೋಗ್ಯ1 hour ago

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Stray dogs attack in Shira 4 children one woman injured
ಪ್ರಮುಖ ಸುದ್ದಿ7 hours ago

Stray Dogs Attack: ಶಿರಾದಲ್ಲಿ ಬೀದಿ ನಾಯಿಗಳ ದಾಳಿ: 4 ಮಕ್ಕಳು, ಒಬ್ಬ ಮಹಿಳೆಗೆ ಗಂಭೀರ ಗಾಯ

Somnath Bharti
ದೇಶ7 hours ago

Somnath Bharti: ಮೋದಿ 3ನೇ ಸಲ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುವೆ ಎಂದ ಆಪ್‌ ನಾಯಕ!

T 20 world cup
ಕ್ರೀಡೆ7 hours ago

T20 World Cup : ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 60 ರನ್​ ಭರ್ಜರಿ ವಿಜಯ ಸಾಧಿಸಿದ ಭಾರತ

Exit Poll
ಪ್ರಮುಖ ಸುದ್ದಿ8 hours ago

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Poll Of Polls
ದೇಶ8 hours ago

Poll Of Polls: ಎನ್‌ಡಿಎಗೆ 350+ ಸೀಟು, ದಕ್ಷಿಣದಲ್ಲೂ ಬಿಜೆಪಿಗೆ ಸ್ವೀಟು, ಇಂಡಿಯಾ ‌ಕೂಟಕ್ಕೆ ಹಿನ್ನಡೆಯ ಏಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು15 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌