Tender Coconut Benefits: ಎಳನೀರೆಂಬ ಅಮೃತ: ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು! - Vistara News

ಆರೋಗ್ಯ

Tender Coconut Benefits: ಎಳನೀರೆಂಬ ಅಮೃತ: ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು!

ಎಳನೀರು ಎಂಬ ಅಮೃತ ಮಾಡುವ ಉಪಕಾರ ಒಂದೆರಡಲ್ಲ. ಮುಖ್ಯವಾಗಿ ಬೇಸಗೆಯಲ್ಲಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಎಳನೀರಿನಿಂದ ಯಾವೆಲ್ಲ ಬಗೆಯ ಪಾನೀಯಗಳನ್ನು ತಯಾರಿಸಿ ಕುಡಿಯಬಹುದು ಎಂಬುದನ್ನು ನೋಡೋಣ.

VISTARANEWS.COM


on

drink tender coconut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತೀಯರ ಆಹಾರದಲ್ಲಿ ಎಳನೀರು ಪ್ರಮುಖವಾದದ್ದು. ಬೇಸಗೆ ಬಂತೆಂದರೆ ನಿಸರ್ಗದತ್ತವಾದ ಎಳನೀರಿನ ಮೊರೆ ಹೋಗಿ ದೇಹ ತಂಪಾಗಿಸಿಕೊಳ್ಳುವುದು ಸಹಜ. ದಕ್ಷಿಣ ಭಾರತದಲ್ಲಿ ತೆಂಗಿನಕಾಯಿ ಬಳಕೆ ವ್ಯಾಪಕವಾಗಿರುವಂತೆಯೇ ಸಹಜವಾಗಿ ಎಳನೀರಿನ ಬಳಕೆಯೂ ಹೆಚ್ಚೇ. ಎಳನೀರಿನಿಂದ ಸಾಕಷ್ಟು ಬಗೆಯ ಸಿಹಿತಿಂಡಿಗಳೂ, ತಿನಿಸುಗಳೂ ಸೇರಿದಂತೆ ಹಲವು ಅಡುಗೆ ಪ್ರಯೋಗಗಳನ್ನೂ ಮಾಡಲಾಗಿದೆ. ಎಳನೀರಿನ ಐಸ್‌ಕ್ರೀಂ ಕೂಡಾ ಇಂದು ಮಾರುಕಟ್ಟೆಯಲ್ಲಿದೆ.

ತೂಕ ಇಳಿಸಿಕೊಳ್ಳುವುದು, ರಕ್ತದೊತ್ತಡ ಕಡಿಮೆ ಮಾಡುವುದು, ಜೀರ್ಣಕ್ರಿಯೆಯನ್ನು ಉತ್ತೇಜಿಸುವುದು, ದೇಹವನ್ನು ತಂಪಾಗಿರಿಸುವುದು, ಕಿಡ್ನಿಯನ್ನು ಆರೋಗ್ಯವಾಗಿಟ್ಟಿರುವುದೂ ಸೇರಿದಂತೆ ಎಳನೀರು ಎಂಬ ಅಮೃತ ಮಾಡುವ ಉಪಕಾರ ಒಂದೆರಡಲ್ಲ. ಮುಖ್ಯವಾಗಿ ಬೇಸಗೆಯಲ್ಲಿ ದೇಹಕ್ಕೆ ಅಗತ್ಯವಾಗಿ ಬೇಕಾಗಿರುವ ಎಳನೀರಿನಿಂದ ಯಾವೆಲ್ಲ ಬಗೆಯ ಪಾನೀಯಗಳನ್ನು ತಯಾರಿಸಿ ಕುಡಿಯಬಹುದು ಎಂಬುದನ್ನು ನೋಡೋಣ.

1. ತೆಂಗಿನ ಹಾಲು: ಎಳನೀರು ಕೊಂಚ ಬೆಳೆದು ತೆಂಗಿನಕಾಯಿಯಾದಾಗ ಅದರ ಹಾಲನ್ನೂ ಪಾನೀಯವಾಗಿ ಬಳಸಬಹುದು. ತೆಂಗಿನ ಹಾಲು ರೋಗನಿರೋಧಕತೆ ಹೆಚ್ಚು ಮಾಡುವ ಅದ್ಭುತ ಪಾನೀಯ. ತೆಂಗಿನಕಾಯಿಯನ್ನು ತುರಿದು ಮಿಕ್ಸಿಯಲ್ಲಿ ರುಬ್ಬಿ ಅದರಿಂದ ಹಿಂಡಿದ ಕಾಯಿಹಾಲಿಗೆ, ಜೇನು ಹಾಗೂ ಕೊಂಚ ಕರಿಮೆಣಸಿನ ಪುಡಿ ಸೇರಿಸಿ ತಣ್ಣಗೆ ಕುಡಿದರೆ ಅದ್ಭುತ ಪಾನೀಯ.

2.ಸೋಲ್‌ ಕಡಿ: ಇದು ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಾಡುವ ಪಾನೀಯ. ಎಳನೀರಿಗೆ ಕೋಕಂ, ಅಥವಾ ಪುನರ್ಪುಳಿ ಎಂಬ ಇನ್ನೊಂದು ಹಣ್ಣಿನ ರಸವನ್ನು ಹಾಕಿ ಮಾಡುವ ಪಾನೀಯ. ಬೇಸಿಗೆಗೆ ದೇಹದಲ್ಲಿರುವ ಪಿತ್ತದ ಅಂಶಗಳನ್ನು ಕಳೆಯಲು ಹಾಗೂ ಬೇಸಿಗೆಯಲ್ಲಿ ದೇಹ ತಂಪಾಗಲು ಖನಿಜಾಂಶ ಹಾಗೂ ಪೋಷಕಾಂಶಯುಕ್ತ ಪಾನೀಯವಿದು. ಇದು ಜೀರ್ಣಕ್ರಿಯೆಯಲ್ಲೂ ಸಹಾಯ ಮಾಡುತ್ತದೆ. ಕೊಂಕಣ ಪ್ರಾಂತ್ಯದ ಮಂದಿ ಈ ಪಾನೀಯವನ್ನು ಮಾಡುತ್ತಾರೆ.

ಇದನ್ನೂ ಓದಿ: Food Tips: ತೂಕ ಇಳಿಕೆಯ ಸಂಗಾತಿ ಓಟ್ಸ್‌ನಲ್ಲೂ ರುಚಿಕರ ಆಯ್ಕೆಗಳು!

3. ಸೌತೆಕಾಯಿ ಹಾಗೂ ಎಳನೀರಿನ ಗಾಝ್ಪಾಚೋ: ಹೆಸರೇ ಬೇಸಿಗೆಗೆ ಹೇಳಿ ಮಾಡಿಸಿದಂಥದ್ದು. ಸೌತೆಕಾಯಿ ಹಾಗೂ ಎಳನೀರಿನ ಗಾಝ್‌ಪಾಚೋ ದಿನವಿಡೀ ದೇಹದಲ್ಲಿ ಸಾಕಷ್ಟು ನೀರಿನಂಶ ಇರುವಂತೆ ನೋಡಿಕೊಳ್ಳುವುದಲ್ಲದೆ ದೇಹವನ್ನು ತಂಪು ಮಾಡುವ ಗುಣವನ್ನೂ ಹೊಂದಿದೆ. ಸೌತೆಕಾಯಿ ರಸ, ಎಳನೀರು, ಕಾಯಿಹಾಲು ಹಾಗೂ ಪುದಿನವನ್ನು ಹಾಕಿ ಮಾಡುವ ರುಚಿಯಾದ ಕೂಲ್‌ಡ್ರಿಂಕ್‌ ಇದು.

4. ಎಳನೀರು ಮಾವಿನಹಣ್ಣಿನ ಸ್ಮೂದಿ: ಇದು ಹೊಟ್ಟೆ ತುಂಬಿಸಬಲ್ಲ ಸ್ಮೂದಿ. ಓಟ್ಸ್‌, ನಿಂಬೆರಸ, ತೆಂಗಿನ ಹಾಲು, ಎಳನೀರು, ಮಾವಿನಹಣ್ಣು, ಕೊಂಚ ಮೊಸರು, ಸ್ವಲ್ಪ ಜೇನುತುಪ್ಪ ಹಾಗೂ ಸೂರ್ಯಕಾಂತಿ ಬೀಜಗಳು ಇತ್ಯಾದಿಗಳೆಲ್ಲವನ್ನು ಮಿಕ್ಸಿಗೆ ಹಾಕಿ ತೆಗೆದಾಗ ಆಗುವುದೇ ಈ ಸ್ಮೂದಿ! ಹೆಚ್ಚು ಹೊತ್ತು ಬೇಕಾಗದ, ಸುಲಭವಾಗಿ ಮಾಡಬಹುದಾದ ಹಾಗೂ ಹೊಟ್ಟೆ ತುಂಬಿಸುವ ತಾಕತ್ತಿರುವ ಡ್ರಿಂಕ್‌ ಇದು. ಚೆನ್ನಾಗಿ ಹಸಿವಾದಾಗ ಪೋಷಕಾಂಶಯುಕ್ತ ಆದರೆ, ಹೆಚ್ಚು ತಿಂದಂತೆ ಫೀಲ್‌ ಆಗದ, ಹೆಚ್ಚು ಹೊತ್ತು ಹೊಟ್ಟೆ ತುಂಬಿದಂತಿಡುವ ಆದರೆ ಹಗುವಾಗಿರಿಸುವ ಆಯ್ಕೆಯಿದು.

5. ಎಳನೀರಿನ ಜ್ಯೂಸ್‌: ಸಿಕ್ಕಾಪಟ್ಟೆ ಸೆಖೆಯಾದಾಗ, ಎಲ್ಲೋ ಓಡಾಡಿ ಬಂದು ಸುಸ್ತಾದಾಗ, ಬಿಸಿಲಲ್ಲಿ ತಿರುಗಾಡಿ ಶಕ್ತಿಯೆಲ್ಲ ಬಸಿದು ಹೋಗಿದೆ ಅನಿಸಿದಾಗ ಕುಡಿಯಬೇಕಾದ ಪೇಯ ಎಂದರೆ ಎಳನೀರು ಜ್ಯೂಸ್‌. ಇದನ್ನು ಮಾಡುವುದು ಸುಲಭ. ಎಳನೀರಿಗೆ ಕೊಂಚ ಪುದಿನ ಎಲೆಗಳನ್ನು ಹಾಕಿ, ನಿಂಬೆರಸ ಹಿಂಡಿದರೆ ಈ ರಿಫ್ರೆಶಿಂಗ್‌ ಪಾನೀಯ ರೆಡಿ!

ಇದನ್ನೂ ಓದಿ: Food Tips: ಇಡ್ಲಿ ಎಂಬ ಆರಾಧ್ಯ ದೈವ: ಇಲ್ಲಿದೆ ಹಬೆಯಾಡುವ ಬಗೆಬಗೆಯ ಇಡ್ಲಿಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

ಆರೋಗ್ಯದ ಹೆಸರಿನಲ್ಲಿ ಬಗೆಬಗೆಯ ಜ್ಯೂಸುಗಳು ಮಾರುಕಟ್ಟೆಯನ್ನು ಆವರಿಸಿವೆ. ಆದರೆ, ಇವೆಲ್ಲ ತಾಜಾ ಜ್ಯೂಸ್‌ಗಳಲ್ಲ. ಎಷ್ಟಾದರೂ ಅಡ್ಡ ಪರಿಣಾಮಗಳಿದ್ದೇ ಇರುತ್ತವೆ. ಬೆಳ್ಳಂಬೆಳಗ್ಗೆ ಮನೆಯಲ್ಲಿ ಇದನ್ನು ಮಾಡಲಾಗದವರು ಪಾರ್ಕುಗಳ ಬದಿಯಲ್ಲೋ ಅಥವಾ ರಸ್ತೆ ಬದಿಯಲ್ಲೋ ಇಂತಹ ಜ್ಯೂಸ್‌ಗಳನ್ನು ಕುಡಿಯುವುದುಂಟು. ಆದರೆ ಬೂದು ಕುಂಬಳಕಾಯಿ (Ash Gourd Juice Benefits) ಸಕಲ ಗುಣ ಸಂಪನ್ನ. ಇದರ ಸೇವನೆ ಆರೋಗ್ಯಕ್ಕೆ ಪೂರಕ.

VISTARANEWS.COM


on

Ash Gourd Juice Benefits
Koo

ಬೆಳಗ್ಗೆದ್ದ ಕೂಡಲೇ ಕಾಫಿ, ಚಹಾ ಸೇವನೆಗಿಂತ ಯಾವುದಾದರೂ ಬಗೆಯ ತರಕಾರಿಗಳ ಜ್ಯೂಸ್‌ ಸೇವನೆಯಿಂದ ಹಲವು ಆರೋಗ್ಯದ ಲಾಭಗಳನ್ನು ಪಡೆಯುವುದು ನಿಮಗೆ ಗೊತ್ತೇ ಇದೆ. ಆರೋಗ್ಯದ ಹೆಸರಿನಲ್ಲಿ ಬಗೆಬಗೆಯ ಇಂತಹ ಜ್ಯೂಸುಗಳು ಇಂದು ಮಾರುಕಟ್ಟೆಯನ್ನೂ ಆವರಿಸಿವೆ. ಆದರೆ, ಇವೆಲ್ಲ ತಾಜಾ ಜ್ಯೂಸ್‌ಗಳಲ್ಲ. ಎಷ್ಟಾದರೂ ಅಡ್ಡ ಪರಿಣಾಮಗಳಿದ್ದೇ ಇರುತ್ತವೆ. ಬೆಳ್ಳಂಬೆಳಗ್ಗೆ ಮನೆಯಲ್ಲಿ ಇದನ್ನು ಮಾಡಲಾಗದವರು ಪಾರ್ಕುಗಳ ಬದಿಯಲ್ಲೋ ಅಥವಾ ರಸ್ತೆ ಬದಿಯಲ್ಲೋ ಇಂತಹ ಜ್ಯೂಸ್‌ಗಳನ್ನು ಕುಡಿಯುವುದುಂಟು. ಸಕಲ ಗುಣ ಸಂಪನ್ನವಾಗಿರುವ ಬೂದು ಕುಂಬಳಕಾಯಿಯನ್ನು ನಿರ್ಲಕ್ಷ್ಯ ಮಾಡದೇ ಆಗಾಗ ಆಹಾರದ ರೂಪದಲ್ಲಿ ಬಳಕೆ ಮಾಡುವುದರಿಂದಲೂ ಸಾಕಷ್ಟು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. ಬನ್ನಿ, ಬೂದುಕುಂಬಳ ಕಾಯಿ ಜ್ಯೂಸನ್ನು (Ash Gourd Juice Benefits) ನಿತ್ಯವೂ ಕುಡಿಯುವುದರಿಂದ ಯಾವೆಲ್ಲ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ ಬನ್ನಿ.

Ash Gourd Juice

ಬೇಸಿಗೆಯ ಮಿತ್ರ

ಆಯುರ್ವೇದದ ಪ್ರಕಾರ, ಕೂಷ್ಮಾಂಡ ಎಂದು ಕರೆಯಲ್ಪಡುವ ಬಿಳಿ ಅಥವಾ ಬೂದು ಬಣ್ಣದ ಕುಂಬಳಕಾಯಿ ಬೇಸಿಗೆಯ ಮಿತ್ರ.‌ ನಿತ್ಯವೂ ಈ ಬೂದುಗುಂಬಳಕಾಯಿ ಜ್ಯೂಸನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯದ ಪ್ರಯೋಜನಗಳನ್ನು ಪಡೆಯಬಹುದು. ಇದು ಇಡಿಯ ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು. ಇದರಲ್ಲಿ ಅನೇಕ ಒಳ್ಳೆಯ ಗುಣಗಳಿವೆ ಹಾಗೂ ಹಲವು ರೋಗಗಳನ್ನು ಬರದಂತೆ ತಡೆಯುವ ಶಕ್ತಿಯಿದೆ. ಇನ್ನೂ ಹಲವು ರೋಗಗಳಿಗೆ, ಆರೋಗ್ಯ ಸಮಸ್ಯೆಗಳಿಗೆ ಉತ್ತರವಿದೆ.

ತಂಪುಕಾರಕ ಗುಣ

ಬೂದು ಕುಂಬಳಕಾಯಿ ತನ್ನ ತಂಪುಕಾರಕ ಗುಣಗಳಿಂದಲೇ ಬೇಸಿಗೆಗೆ ಸರಿಯಾದ ಆಹಾರ. ಪ್ರಕೃತಿ ನೀಡಿದ ಅದ್ಭುತ ವರದಾನಗಳಲ್ಲಿ ಇದೂ ಒಂದು. ದೇಹದೊಳಗಿನ ಉಷ್ಣಕಾರಕ ಗುಣಗಳನ್ನು ಕಡಿಮೆ ಮಾಡಿ, ಅದನ್ನು ಸಮತೋಲನಕ್ಕೆ ತರುವಲ್ಲಿ ಇದು ಉತ್ತಮ ಪಾತ್ರ ವಹಿಸುತ್ತದೆ. ಸೂರ್ಯ ತನ್ನ ಪ್ರಖರ ಬಿಸಿಲಿನಿಂದ ಸುಡುವ ಸಂದರ್ಭ ಇವನ್ನು ಕುಡಿದರೆ, ದೇಹ ತಂಪಾಗಿರುತ್ತದೆ. ಮೊದಲೇ ಉಷ್ಣ ಪ್ರಕೃತಿಯ ದೇಹ ಅಥವಾ ಪಿತ್ತ ಪ್ರಕೃತಿಯ ಉಳ್ಳವರಿಗಂತೂ ಇದು ಅತ್ಯುತ್ತಮ ಪರಿಹಾರ ನೀಡಬಲ್ಲುದು.

ealthy internal organs of human digestive system / highlighted blue organs

ಜೀರ್ಣಕ್ರಿಯೆಗೆ ಸಹಕಾರಿ

ಬೂದು ಕುಂಬಳಕಾಯಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದೆ. ಇದರಿಂದಾಗಿ ಬೇಸಿಗೆಯಲ್ಲಿ ದೇಹಕ್ಕೆ ಬೇಕಾದ ನೀರನ್ನು ಇದರ ಮೂಲಕ ಪಡೆಯುವುದರಿಂದ ಸಾಕಷ್ಟು ಪ್ರಯೋಜನಗಳ ಪಡೆಯಬಹುದು. ಯಾಕೆಂದರೆ, ಇದು ದೇಹದ ಇತರ ಕೆಲಸಗಳಿಗೆ ಅಂದರೆ, ಜೀರ್ಣಕ್ರಿಯೆ, ರಕ್ತಪರಿಚಲನೆ, ಕಶ್ಮಲಗಳನ್ನು ಹೊರಹಾಕುವ ಪ್ರಕ್ರಿಯೆ ಇತ್ಯಾದಿಗಳಿಗೆ ಪೂರಕವಾಗಿ ಕೆಲಸ ಮಾಡಿ ಪ್ರಚೋದನೆ ನೀಡುತ್ತದೆ.
ಆಯುರ್ವೇದದ ಪ್ರಕಾರ ಬೂದು ಕುಂಬಳ ಕಾಯಿ ಜೀರ್ಣಕ್ರಿಯೆಯ ಸಾಮರ್ಥ್ಯ ವೃದ್ಧಿಯಾಗುತ್ತದೆ. ಆಗಾಗ ಮಲಬದ್ಧತೆಯ ಸಮಸ್ಯೆಯಿರುವ ಮಂದಿಗೆ ಇದರ ಜ್ಯೂಸ್‌ ನಿತ್ಯವೂ ಕುಡಿಯುವ ಮೂಲಕ ಸಮಸ್ಯೆಗೆ ಪರಿಹಾರ ಕಾಣಬಹುದು.

ಅತ್ಯುತ್ತಮ ಡಿಟಾಕ್ಸಿಫೈಯರ್‌

ಬೂದು ಕುಂಬಳಕಾಯಿ ಅತ್ಯುತ್ತಮ ಡಿಟಾಕ್ಸಿಫೈಯರ್‌ ಕೂಡ ಹೌದು. ಇದರ ಜ್ಯೂಸನ್ನು ನಿತ್ಯವೂ ಬೆಳಗ್ಗೆ ಎದ್ದ ಕೂಡಲೇ ಕುಡಿಯುವುದರಿಂದ ದೇಹದ ಕಶ್ಮಲಗಳೆಲ್ಲ ಹೊರ ಕಳಿಸುವಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ. ಇದರಿಂದ ಆರೋಗ್ಯ ವೃದ್ಧಿಸುತ್ತದೆ. ಅಷ್ಟೇ ಅಲ್ಲ ರಕ್ತ ಶುದ್ಧಿಯಾಗಿ ಸಾಕಷ್ಟು ಸಮಸ್ಯೆಗಳೂ ಕಡಿಮೆಯಾಗುತ್ತದೆ. ಮುಖ್ಯವಾಗಿ ಚರ್ಮವೂ, ಆರೋಗ್ಯಯುತ ಕಾಂತಿ ಪಡೆದುಕೊಳ್ಳುತ್ತದೆ.

weight loss

ತೂಕ ಇಳಿಸಲು ಸಹಕಾರಿ

ಬಹುತೇಕ ಎಲ್ಲ ಬಗೆಯ ಅತ್ಯಗತ್ಯ ಪೋಷಕಾಂಶಗಳು ಇದರಲ್ಲಿ ಇರುವುದರಿಂದ, ಹಾಗೂ ಇದು ಕಡಿಮೆ ಕ್ಯಾಲರಿ ಹೊಂದಿರುವುದರಿಂದ ಇದು ತೂಕ ಇಳಿಸುವ ಮಂದಿಗೆ ಅತ್ಯಂತ ಒಳ್ಳೆಯ ಡ್ರಿಂಕ್‌. ದೇಹಕ್ಕೆ ಬೇಕಾದ ನೀರಿನಂಶವನ್ನೂ ನೀಡುವ ಜೊತೆಗೆ ಪೋಷಕಾಂಶವನ್ನೂ ನೀಡುತ್ತದೆ.

ಮಾರಕ ರೋಗ ದೂರ

ಇದರ ಜ್ಯೂಸನ್ನು ನಿತ್ಯವೂ ಕುಡಿಯುವುದರಿಂದ ಕ್ಯಾನ್ಸರ್‌ನಂತಹ ಮಾರಕ ರೋಗಗಳ ಸಾಧ್ಯತೆಗಳೂ ಕುಂಠಿತಗೊಳ್ಳುತ್ತವಂತೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆಗಾಗ ಸುಲಭವಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಂಭವವನ್ನು ಕಡಿಮೆ ಮಾಡುತ್ತದೆ.

Woman Meditating in the Workplace Sitting in Front of a Laptop Practicing Stress Relief Exercises Diabetes Control

ಶಾಂತಿ, ನೆಮ್ಮದಿ

ಬೂದು ಕುಂಬಳಕಾಯಿ ಒತ್ತಡ ನಿವಾರಣೆಗೆ ಅತ್ಯಂತ ಒಳ್ಳೆಯ ಪರಿಹಾರ ನೀಡುತ್ತದೆ. ನರಮಂಡಲಕ್ಕೆ ಬೇಕಾದ ಶಾಂತಿ ಹಾಗೂ ನೆಮ್ಮದಿಯ ಬಗೆಯ ಭಾವವನ್ನು ಇದು ನೀಡುತ್ತದೆ.

Heart Health In Winter

ಹೃದಯಸ್ನೇಹಿ

ಬೂದುಕುಂಬಳಕಾಯಿ ಹೃದಯಸ್ನೇಹಿಯಾದ್ದರಿಂದ ಹೃದಯದ ತೊಂದರೆ ಇರುವ ಮಂದಿಗೂ ಇದು ಒಳ್ಳೆಯದು.

ಕಣ್ಣಿನ ಆರೋಗ್ಯಕ್ಕೆ ಮುಖ್ಯ

ಇದರಲ್ಲಿ ವಿಟಮಿನ್‌ ಎ ಹೇರಳವಾಗಿ ಇರುವುದರಿಂದ ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಉತ್ತಮ. ಕಣ್ಣಿನ ಸಮಸ್ಯೆ ಇರುವ ಮಂದಿ ಬೂದುಕುಂಬಳ ಕಾಯಿ ತಿನ್ನುವ ಹಾಘೂ ಜ್ಯೂಸ್‌ ಕುಡಿಯುವ ಮೂಲಕ ಪ್ರಯೋಜನ ಪಡೆಯಬಹುದು.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

Continue Reading

ಆರೋಗ್ಯ

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

ಬಿಸಿಲು ಬ್ರಹ್ಮಾಂಡವನ್ನೇ (Heat stroke) ಸುಡುತ್ತಿದೆ. ಈ ತೀಕ್ಷ್ಣ ಬಿಸಿಲಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ, ಸಾಕಷ್ಟು ನೀರು ಕುಡಿಯದಿರುವುದರಿಂದ ಮೊದಲಿಗೆ ಸುಸ್ತು, ಆಯಾಸ ಕಾಣಿಸಿಕೊಳ್ಳುತ್ತದೆ. ಇದನ್ನು ಸೂಕ್ತವಾಗಿ ನಿರ್ವಹಿಸದಿದ್ದಲ್ಲಿ ಹೀಟ್‌ಸ್ಟ್ರೋಕ್‌ (heat stroke) ಉಂಟಾಗಬಹುದು. ಈ ಬಿಸಿಲ ಆಘಾತದಿಂದ ಪಾರಾಗುವುದು ಹೇಗೆ? ಈ ಲೇಖನದಲ್ಲಿದೆ ಮಾಹಿತಿ.

VISTARANEWS.COM


on

Heat Stroke
Koo

ಬಿಸಿಲಿನ ತಾಪ (Heat stroke) ಮುಗಿಲು ಮುಟ್ಟುತ್ತಿದೆ. ಮಾರ್ಚ್‌ ತಿಂಗಳಲ್ಲಿ ವಿಪರೀತ ಎನಿಸುವಷ್ಟು ಸೂರ್ಯ ತನ್ನ ಕಿರಣಗಳನ್ನು ಝಳಪಿಸುತ್ತಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ತಾಪಮಾನ 40 ಡಿ.ಸೆ. ಈಗಾಗಲೇ ದಾಟಿದ್ದು, ಈ ಬೇಸಿಗೆ ಕಳೆಯುವುದು ಹೇಗಪ್ಪಾ ಎಂಬ ಚಿಂತೆ ಎಲ್ಲರ ಮುಖದಲ್ಲಿ ಕಾಣುತ್ತಿದೆ. ಉಷ್ಣತೆ ಇನ್ನೂ ಹೆಚ್ಚಬಹುದು ಎಂಬ ಎಚ್ಚರಿಕೆ ಸರಕಾರದಿಂದ, ತಜ್ಞರಿಂದ ಬಂದಿದೆ. ಇಂಥ ತೀಕ್ಷ್ಣ ಉರಿ ಸೆಕೆಯಲ್ಲಿ ಬಿಸಿಲಿನ ಆಘಾತದ ಅಪಾಯ ಹೆಚ್ಚುತ್ತದೆ. ಕಾರಣ, ದೇಹದ ತಾಪಮಾನವನ್ನು ಕಾಯ್ದುಕೊಳ್ಳುವ ಸಹಜ ತಂತ್ರಗಳು ಕೆಲವೊಮ್ಮೆ ದೇಹಕ್ಕೇ ಕೈಕೊಟ್ಟಾಗ ಆರೋಗ್ಯ ಏರುಪೇರಾಗುವುದು ನಿಶ್ಚಿತ. ಸುಸ್ತು, ಆಯಾಸ, ಡಯರಿಯಾ, ವಾಂತಿ, ನಿರ್ಜಲೀಕರಣ, ಮಾನಸಿಕ ಗೊಂದಲ, ಹೀಟ್‌ ಸ್ಟ್ರೋಕ್‌ ಮುಂತಾದ ಹಲವು ರೀತಿಯ ಸಮಸ್ಯೆಗಳು ಎರಗಬಹುದು. ಈಗಾಗಲೇ ಇರುವಂಥ ಆರೋಗ್ಯ ಸಮಸ್ಯೆಗಳು ಉಲ್ಭಣಿಸಬಹುದು. ಬಿಸಿಲಿನ ಆಘಾತದಿಂದ ವ್ಯಕ್ತಿಗಳ ವರ್ತನೆಯಲ್ಲೂ ವ್ಯತ್ಯಾಸ ಕಾಣಬಹುದು.

drink water

ನೀರು ಕಡಿಮೆ ಕುಡಿಯಬೇಡಿ

ತೀಕ್ಷ್ಣ ಬಿಸಿಲಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ, ಚೆನ್ನಾಗಿ ನೀರು ಕುಡಿಯದಿರುವುದರಿಂದ ಮೊದಲಿಗೆ ಸುಸ್ತು, ಆಯಾಸ ಕಾಣಿಸಿಕೊಳ್ಳುತ್ತದೆ. ಇದನ್ನು ಸೂಕ್ತವಾಗಿ ನಿರ್ವಹಿಸದಿದ್ದಲ್ಲಿ ಹೀಟ್‌ಸ್ಟ್ರೋಕ್‌ ಉಂಟಾಗಬಹುದು. ಅಂದರೆ, ಜ್ವರದ ಯಾವುದೇ ಲಕ್ಷಣವಿಲ್ಲದಿದ್ದರೂ, ದೇಹದ ಉಷ್ಣತೆ 104 ಡಿಗ್ರಿ ಫ್ಯಾರನ್‌ಹೀಟ್‌ ಅಥವಾ ಅದಕ್ಕಿಂತಲೂ ಹೆಚ್ಚು ತಲುಪಬಹುದು. ಇದಕ್ಕೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಬೇಕು. ಸೂಕ್ತ ಚಿಕಿತ್ಸೆ ದೊರೆಯದಿದ್ದಲ್ಲಿ ಜೀವಕ್ಕೆ ಅಪಾಯ ಕಟ್ಟಿಟ್ಟಿದ್ದು. ಏನಿದರ ಲಕ್ಷಣಗಳು?

sun stroke sunny hot day heat migraine pain.

ತೀವ್ರವಾಗಿ ಹೆಚ್ಚುವ ದೇಹದ ಉಷ್ಣತೆ

ತೀವ್ರವಾದ ಜ್ವರದಲ್ಲಿ ಏರುವ ದೇಹದ ಉಷ್ಣತೆಯಂತೆಯೇ 40 ಡಿ. ಸೆ. ಅಥವಾ 104 ಡಿ. ಫ್ಯಾರನ್‌ಹೀಟ್‌ ತಲುಪುತ್ತದೆ. ಕೆಲವೊಮ್ಮೆ ಅದಕ್ಕಿಂತ ಹೆಚ್ಚೂ ಇರಬಹುದು. ಹೃದಯದ ಬಡಿತ ತೀವ್ರಗತಿಯಲ್ಲಿರುತ್ತದೆ. ಈ ಹಂತದಲ್ಲಿ ತಕ್ಷಣ ಎಚ್ಚೆತ್ತುಕೊಂಡು ಆಸ್ಪತ್ರೆಗೆ ಧಾವಿಸುವುದು ಕ್ಷೇಮ. ಚರ್ಮ ಒಣಗುವುದು, ಕೆಂಪಾಗುವುದು ಇಂಥವೆಲ್ಲಾ ಈ ಲಕ್ಷಣಗಳ ಜೊತೆಜೊತೆಗೇ ಕಾಣಬಹುದು.

Relaxed woman at home breathing fresh air Horse Gram Benefits

ಉಸಿರಾಟ

ಹೃದಯದ ಬಡಿತಕ್ಕೆ ಪೂರಕವಾಗಿ ಉಸಿರಾಟವೂ ತೀವ್ರವಾಗಿರುತ್ತದೆ. ಬಡಿತ ಮತ್ತು ಉಸಿರಾಟದ ಮೂಲಕ ಹೆಚ್ಚಿನ ಆಮ್ಲಜನಕ ಒದಗಿಸಿ, ಶರೀರವನ್ನು ತಂಪಾಗಿಸುವ ಯತ್ನವನ್ನು ದೇಹ ತಂತಾನೇ ಮಾಡುತ್ತಿರುತ್ತದೆ. ಈ ಹಂತದಲ್ಲಿ ಉಸಿರಾಟದ ತೊಂದರೆ ಮತ್ತು ಅತೀವ ಬೆವರು ಸಹ ಗೋಚರಿಸಬಹುದು ಅಥವಾ ಬೆವರೇ ಬಾರದೆಯೂ ಇರಬಹುದು.

ಗೊಂದಲ

ದೇಹದಲ್ಲಿನ ಈ ಬದಲಾವಣೆಯಿಂದ ಮೆದುಳಿನಲ್ಲೂ ಸಮಸ್ಯೆಗಳು ಕಂಡು ಬರುತ್ತವೆ. ಬಿಸಿಲಿನ ಆಘಾತಕ್ಕೆ ಒಳಗಾದ ವ್ಯಕ್ತಿಗಳಲ್ಲಿ ಗೊಂದಲ, ಕೋಪ, ದೇಹದ ಅಸಮತೋಲನ, ಕೆಲವೊಮ್ಮೆ ಅಪಸ್ಮಾರವೂ ಕಂಡುಬಂದೀತು. ಇಂಥವರಿಗೆ ವೈದ್ಯಕೀಯ ಚಿಕಿತ್ಸೆ ಅಗತ್ಯವಾಗಿ ಬೇಕು.

Unexplained frequent headaches Excessive Use Of Electronic Gadgets

ತಲೆನೋವು

ತೀವ್ರವಾದ ತಲೆನೋವು, ತಲೆಸುತ್ತುವುದು, ಹೊಟ್ಟೆ ತೊಳೆಸುವುದು, ವಾಂತಿ- ಇವೆಲ್ಲವೂ ನಿರ್ಜಲೀಕರಣದ ಲಕ್ಷಣಗಳಾಗಿರಬಹುದು. ಮೈ ಮುಟ್ಟಿದರೆ ಬಿಸಿಯ ಅನುಭವ ಮತ್ತು ಚರ್ಮ ಒಣಗಿದಂಥ ಲಕ್ಷಣಗಳು ಕಾಣಬಹುದು. ಮೊದಲಿಗೆ ಸಿಕ್ಕಾಪಟ್ಟೆ ಬೆವರುವ ದೇಹದಿಂದ ಕ್ರಮೇಣ ಒಂದು ಹನಿ ಬೆವರೂ ಬಾರದಿರಬಹುದು. ಇಂಥ ಸಂದರ್ಭಗಳಲ್ಲೂ ಚಿಕಿತ್ಸೆ ಬೇಕಾಗುತ್ತದೆ.

ಮಾಂಸಖಂಡಗಳಲ್ಲಿ ನೋವು

ಬಿಸಿಲಿನ ಆಘಾತದಿಂದ ಮಾಂಸಖಂಡಗಳಲ್ಲಿ ನೋವು, ಏಳಲಾರದಂಥ ಸುಸ್ತು ಆರಂಭವಾಗಿ ನಂತರ ಎಚ್ಚರ ತಪ್ಪಬಹುದು. ತೀವ್ರವಾದ ಸೆಖೆಯ ದಿನಗಳಲ್ಲಿ ಸಿಕ್ಕಾಪಟ್ಟೆ ವ್ಯಾಯಾಮ ಮಾಡಿದಾಗ ಮೊದಲಿಗೆ ಕಾಣುವ ಲಕ್ಷಣಗಳೆಂದರೆ ಕಾಲು, ತೋಳು ಅಥವಾ ಕಿಬ್ಬೊಟ್ಟೆಯಲ್ಲಿ ನೋವು. ಚೆನ್ನಾಗಿ ನೀರು, ಒಆರೆಸ್‌ನಂಥ ಎಲೆಕ್ಟ್ರೋಲೈಟಿಕ್‌ ಪೇಯಗಳು ದೇಹಕ್ಕೆ ತುರ್ತಾಗಿ ಬೇಕಾಗುತ್ತದೆ.

summer clothes

ತಂಪಾಗಿಸಿ

ದೇಹದ ಬಿಸಿ ಹೆಚ್ಚುತ್ತ ಹೋದಂತೆ ಜೀವಾಪಾಯವೂ ಹೆಚ್ಚುತ್ತಲೇ ಹೋಗುತ್ತದೆ. ಇಂಥ ಸಂದರ್ಭಗಳಲ್ಲಿ ಚಿಕಿತ್ಸೆಗಾಗಿ ಧಾವಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಆ ವ್ಯಕ್ತಿಯ ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಯನ್ನು ನೆರಳಿರುವ, ತಂಪಾದ, ತಾಜಾ ಗಾಳಿ ಬರುವ ಜಾಗಕ್ಕೆ ಸ್ಥಳಾಂತರಿಸಿ. ಒಆರೆಸ್‌ನಂಥ ಎಲೆಕ್ಟ್ರೋಲೈಟಿಕ್‌ ಪೇಯಗಳನ್ನು ಸ್ವಲ್ಪ ಸ್ವಲ್ಪವಾಗಿ ಕುಡಿಸುತ್ತಿರಿ. ಸಾಧ್ಯವಾದರೆ ಮೈಯನ್ನೆಲ್ಲಾ ತಂಪಾದ ಒದ್ದೆ ಬಟ್ಟೆಯಲ್ಲಿ ಒರೆಸಿ, ಚೆನ್ನಾಗಿ ಗಾಳಿ ಹಾಕಿ.

Continue Reading

ಮಳೆ

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Heat Wave : ವಿಪರೀತ ತಾಪಮಾನವು ಜನರಿಗೆ ತಲೆ ಬಿಸಿ (highest temperature) ಮಾಡಿದೆ. ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ದಾಖಲೆಯಲ್ಲಿ ಉಷ್ಣಾಂಶ ಏರಿಕೆ ಆಗುತ್ತಿದೆ. ಮುಂದಿನ ಐದು ದಿನಗಳಿಗೆ ಹೀಟ್‌ ವೇವ್ಸ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್‌ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಗರಿಷ್ಠ ತಾಪಮಾನದಿನ ಹಾಗೂ ವರ್ಷ
ಬೆಂಗಳೂರು37.3 ಡಿ.ಸೆ29th 1996
ಕಲಬುರಗಿ4331st 1996
ಬಾಗಲಕೋಟೆ41.631st 1996
ರಾಯಚೂರು44.627th 1992
ಬಳ್ಳಾರಿ4330th 1996
ಕೊಪ್ಪಳ40.224th 2019
ವಿಜಯಪುರ41.929, 30th 1996

ಇನ್ನೂ 5 ದಿನಗಳು ಸುಡುವ ಕೆಂಡ

ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್‌ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

BMTC Bus: ಬಿಎಂಟಿಸಿ ಬಸ್‌ ಏರಿದ ವೃದ್ಧರೊಬ್ಬರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಾಗ ಹಠಾತ್‌ ಹೃದಯಾಘಾತ (Heart Attack) ಸಂಭವಿಸಿದೆ. ಬಸ್‌ ಹತ್ತಿದ ಹತ್ತೇ ನಿಮಿಷದಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿದೆ.

VISTARANEWS.COM


on

By

Heart Attack
Koo

ಬೆಂಗಳೂರು: ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ನನಗೇಕೆ ಕುಕ್ಕರ್‌ ನೀಡಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಇನ್ನು, ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mukthar Ansari
ಪ್ರಮುಖ ಸುದ್ದಿ3 seconds ago

Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

Parliament Flashback
ಕರ್ನಾಟಕ5 mins ago

Parliament Flashback: ದೇಶದಲ್ಲಿ ಇಂದಿರಾ ಗಾಂಧಿ ವಿರೋಧಿ ಅಲೆ ಇದ್ದಾಗಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ಜಯಭೇರಿ!

Satyendar Jain
ಪ್ರಮುಖ ಸುದ್ದಿ19 mins ago

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Karnataka Weather
ಮಳೆ32 mins ago

Karnataka Weather : ಮುಂದಿನ 3 ದಿನ ಏರುತ್ತೆ ಟೆಂಪ್ರೇಚರು

Mussavir Hussain
ಪ್ರಮುಖ ಸುದ್ದಿ36 mins ago

Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

Provide infrastructure in polling booths says ZP Deputy Secretary Mallikarjuna thodalabagi
ಕೊಪ್ಪಳ37 mins ago

Koppala News: ಮತಗಟ್ಟೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ; ಜಿ.ಪಂ‌ ಉಪಕಾರ್ಯದರ್ಶಿ

18th CII ITC Sustainable Award Ceremony
ಬೆಂಗಳೂರು39 mins ago

Bengaluru News: ಸಿಎಸ್‌ಆರ್‌ ಮಹತ್ವದ ಸಾಧನೆಗಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ಗೆ ಪ್ರಶಂಸೆ

Car collided with electric pole The photographer died on the spot
ಕ್ರೈಂ42 mins ago

Road Accident: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಫೋಟೋಗ್ರಾಫರ್‌ ಸ್ಥಳದಲ್ಲೇ ಸಾವು

Ash Gourd Juice Benefits
ಆರೋಗ್ಯ43 mins ago

Ash Gourd Juice Benefits: ಬೂದುಕುಂಬಳಕಾಯಿ ಜ್ಯೂಸ್‌ ಕುಡಿಯುವುದರಿಂದ ಆಗುವ 10 ಪ್ರಯೋಜನಗಳಿವು

Lok Sabha Election 2024
ಕರ್ನಾಟಕ43 mins ago

Lok Sabha Election 2024: ಜೆಡಿಎಸ್ ಪಟ್ಟಿ ಬಿಡುಗಡೆ; ಮಂಡ್ಯದಿಂದ ಎಚ್‌ಡಿಕೆ, ಕೋಲಾರ, ಹಾಸನಕ್ಕೆ ಯಾರು?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌