World Hearing Day 2024: ಇಂದು ವಿಶ್ವ ಶ್ರವಣ ದಿನ: ಈ ಜಗತ್ತಿನ 150 ಕೋಟಿ ಜನರಿಗೆ ಕಿವುಡತನ ಸಮಸ್ಯೆ! - Vistara News

ಲೈಫ್‌ಸ್ಟೈಲ್

World Hearing Day 2024: ಇಂದು ವಿಶ್ವ ಶ್ರವಣ ದಿನ: ಈ ಜಗತ್ತಿನ 150 ಕೋಟಿ ಜನರಿಗೆ ಕಿವುಡತನ ಸಮಸ್ಯೆ!

ವಿಶ್ವ ಶ್ರವಣ ದಿನಾಚರಣೆಯ ಈ ಸಂದರ್ಭದಲ್ಲಿ ರಿಹ್ಯಾಬಿಲಿಟೇಷನ್ ಟ್ರಸ್ಟ್ ಸಹಯೋಗದೊಂದಿಗೆ “ನಾಯಕ್ – ವಾಕ್-ಶ್ರವಣ ಸಂಸ್ಥೆ” ಮಕ್ಕಳಿಗೆ ಉಚಿತ ಶ್ರವಣ ತಪಾಸಣಾ ಕೇಂದ್ರವನ್ನು ಆರಂಭಿಸಲಿದೆ.

VISTARANEWS.COM


on

World Hearing Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರವಣ ದೋಷದ ಸಮಸ್ಯೆ ವಿಶ್ವ ಪ್ರಮುಖ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ವಿಶ್ವ ಆರೋಗ್ಯ ಸಂಸ್ಥೆಯ ಆಧ್ಯಯನ ವರದಿಯ ಪ್ರಕಾರ ಜಗತ್ತಿನಲ್ಲಿ 150 ಕೋಟಿ ಮಂದಿ ಕಿವುಡುತನ ಸಹಿತ ನಾನಾ ರೀತಿಯ ಶ್ರವಣ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ. 2050ರಲ್ಲಿ ಈ ಸಮಸ್ಯೆಯಿಂದ ಬಳಲುವವರ ಸಂಖ್ಯೆ 250 ಕೋಟಿಗೆ ತಲುಪಲಿದೆ.
ಮಾರ್ಚ್ 3 ರಂದು ಪ್ರಪಂಚದಾದ್ಯಂತ ವಿಶ್ವ ಶ್ರವಣ ದಿನವನ್ನು (World Hearing Day 2024) ಆಚರಿಸಲಾಗುತ್ತದೆ. ಶ್ರವಣ ನ್ಯೂನ್ಯತೆಯನ್ನು ತಡೆಗಟ್ಟಲು ಮತ್ತು ಕಿವಿ ಹಾಗೂ ಶ್ರವಣ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಆರೋಗ್ಯಸಂಸ್ಥೆ ವಿಶ್ವ ಶ್ರವಣ ದಿನವನ್ನು ಆಚರಿಸುತ್ತದೆ.

2024ರ ವಿಷಯ “ಮನಸ್ಥಿತಿಗಳನ್ನು ಬದಲಾಯಿಸಿ: ಸರ್ವರಿಗೂ ಕಿವಿ ಮತ್ತು ಶ್ರವಣ ಆರೈಕೆಯನ್ನು ನಿಜವಾಗಿಸೋಣʼ.
ಈ ವರ್ಷ ವಿಶ್ವ ಶ್ರವಣ ದಿನ ಸಾರ್ವಜನಿಕರು ಮತ್ತು ವೈದ್ಯಕೀಯ ಸೇವೆ ಒದಗಿಸುವವರಲ್ಲಿ ಅರಿವು ಮೂಡಿಸುವುದು ಹಾಗೂ ಮಾಹಿತಿ ಹಂಚುವ ಮೂಲಕ ಸಮಾಜದ ತಪ್ಪುಗ್ರಹಿಕೆಗಳು ಮತ್ತು ಕಳಂಕಿತ ಮನಸ್ಥಿತಿಗಳಿಂದ ಎದುರಾಗುವ ಸವಾಲುಗಳನ್ನು ನಿವಾರಿಸುವ ಪ್ರಮುಖ ಉದ್ದೇಶವಾಗಿದೆ.

ಜಾಗತಿಕವಾಗಿ ಕಿವಿ ಮತ್ತು ಶ್ರವಣ ಆರೈಕೆಯ ಅಗತ್ಯವಿರುವ ಶೇ.80ರಷ್ಟು ಜನ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿಲ್ಲ ಎಂದು ವಿಶ್ವ ಸಂಸ್ಥೆ ಗುರುತಿಸಿದೆ. ನ್ಯೂನ್ಯತೆಯ ಬಗ್ಗೆ ಸಾಮಾಜಿಕ ತಪ್ಪುಗ್ರಹಿಕೆಗಳು ಮತ್ತು ಕಳಂಕಿತ ಮನಸ್ಥಿತಿಗಳು ಶ್ರವಣ ನ್ಯೂನ್ಯತೆಯನ್ನು ತಡೆಗಟ್ಟುವ ಮತ್ತು ಪರಿಹರಿಸುವ ಪ್ರಯತ್ನಗಳಿಗೆ ಅಡ್ಡಿಯಾಗುವ ಅಂಶಗಳಾಗಿವೆ. ಹೀಗಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಸಾರ್ವಜನಿಕರಲ್ಲಿ ಸರಿಯಾದ ಗ್ರಹಿಕೆಗಳನ್ನು ಮರುರೂಪಿಸಲು ಸತ್ಯಾಧಾರಿತ ಮಾಹಿತಿಗಳನ್ನು ಹಂಚುವುದು ಕಿವಿ ಮತ್ತು ಶ್ರವಣ ಆರೈಕೆಗೆ ಅಗತ್ಯವಿರುವ ಎಲ್ಲರಿಗೂ ಅತ್ಯಗತ್ಯವಾದ ಆರೋಗ್ಯ ಸೇವೆ ಪಡೆಯುವಂತಾಗಲು ಅವಕಾಶ ದೊರಕಿಸಿಕೊಡಲು ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ | Raja Marga Column : ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಇಲ್ಲಿದೆ 10 ಸೂತ್ರ

ಶ್ರವಣ ನ್ಯೂನ್ಯತೆಯು ವ್ಯಕ್ತಿಯ ಮಾತು – ಭಾಷೆ, ಕಲಿಕೆ, ಶೈಕ್ಷಣಿಕ, ಮಾನಸಿಕ, ಆರ್ಥಿಕ ಅಂಶಗಳ ಮೇಲೆ ಮತ್ತು ರಾಷ್ಟ್ರೀಯ ಉತ್ಪಾದಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಶ್ರವಣದೋಷವಿರುವ ಮಕ್ಕಳು ಪಠ್ಯ ಕಲಿಕೆಯಲ್ಲಿ ಹಿಂದೆ ಬೀಳುತ್ತಾರೆ, ಹೆಚ್ಚಿನ ವಯಸ್ಕರು ನಿರುದ್ಯೋಗದ ಸಮಸ್ಯೆ ಎದುರಿಸುತ್ತಾರೆ. ನ್ಯೂನ್ಯತೆಯು ಖಿನ್ನತೆ ಮತ್ತು ಆತಂಕ ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಗಮನಿಸಬೇಕಾದ ಸಂಗತಿಗಳು

ಶ್ರವಣ ದೋಷವು ವಿಶ್ವಾದ್ಯಂತ ಹೆಚ್ಚಾಗುತ್ತಿದೆ. ಪ್ರಸ್ತುತ ವಿಶ್ವಾದ್ಯಂತ 150 ಕೋಟಿ ಜನ ಒಂದಲ್ಲ ಒಂದು ಬಗೆಯ ಶ್ರವಣ ದೋಷ ಹೊಂದಿದ್ದಾರೆ. 2050ರ ವೇಳೆಗೆ ಈ ಸಂಖ್ಯೆ ಒಂದೂವರೆ ಪಟ್ಟು ಹೆಚ್ಚಾಗುವ ಸಂಭವವಿದೆ; ಆಗ ಶ್ರವಣ ನ್ಯೂನ್ಯತೆ ಹೊಂದುವವರ ಸಂಖ್ಯೆ 250 ಕೋಟಿಗೂ ಹೆಚ್ಚಾಗುತ್ತದೆ. 2050ರಲ್ಲಿ ನಾಲ್ಕು ಜನರಲ್ಲಿ ಒಬ್ಬರು ಶ್ರವಣ ದೋಷ ಪಡೆದರೆ, 10 ಜನರಲ್ಲಿ ಒಬ್ಬರಿಗೆ ತೀವ್ರ ಪ್ರಮಾಣದ ಶ್ರವಣ ನ್ಯೂನ್ಯತೆ ಹೊಂದುವ ಅಪಾಯವಿದೆ.

ವಿಶ್ವಾದ್ಯಂತ 3.4 ಕೋಟಿ ಮಕ್ಕಳೂ ಸೇರಿ 43 ಕೋಟಿ ಜನ ತೀವ್ರವಾದ ಶ್ರವಣ ನ್ಯೂನ್ಯತೆಯಿಂದ ಬಳಲುತಿದ್ದಾರೆ. 13 ರಿಂದ 35 ವರ್ಷ ವಯಸ್ಸಿನ 100 ಕೋಟಿ ಯುವಕರು ತಪ್ಪಿಸಬಹುದಾದ ಶ್ರವಣ ದೋಷ ಹೊಂದುವ ಅಪಾಯದಲ್ಲಿದ್ದಾರೆ, ಮಕ್ಕಳೂ ಸೇರಿ 20 ಕೋಟಿ ಜನ ತಪ್ಪಿಸಬಹುದಾದ ಕಿವಿ ನ್ಯೂನ್ಯತೆ ಪಡೆದಿರುತ್ತಾರೆ. 60 ವರ್ಷ ಮೇಲ್ಪಟ್ಟವರಲ್ಲಿ ಶೇ.25 ಕ್ಕಿಂತ ಹೆಚ್ಚು ಜನರು ಶ್ರವಣ ನ್ಯೂನ್ಯತೆ ಪಡೆದಿದ್ದಾರೆ.

ಭಾರತದಲ್ಲಿ 6.3 ಕೋಟಿ ಜನರು ಶ್ರವಣ ನ್ಯೂನ್ಯತೆ ಹೊಂದಿದ್ದಾರೆ. 2001ರ ಸಮೀಕ್ಷೆ ಪ್ರಕಾರ ಒಂದು ಲಕ್ಷ ಜನಸಂಖ್ಯೆಯಲ್ಲಿ 291 ವ್ಯಕ್ತಿಗಳು (ಹೆಚ್ಚಿನವರು 0 ರಿಂದ 14 ವಯೋಮಾನದ ಮಕ್ಕಳು) ತೀವ್ರವಾದ ನ್ಯೂನ್ಯತೆ ಹೊಂದಿದ್ದಾರೆ. ಕರ್ನಾಟಕದಲ್ಲಿ 6 ವರ್ಷದೊಳಗಿನ 20839 ಮಕ್ಕಳು ಸೇರಿದಂತೆ ಸುಮಾರು 40 ಲಕ್ಷ ಜನ ಶ್ರವಣ ನ್ಯೂನ್ಯತೆ ಪಡೆದಿದ್ದಾರೆ. ಅರ್ಧದಷ್ಟು ಪ್ರಕರಣಗಳನ್ನು ತಡೆಗಟ್ಟಬಹುದಾದರೂ ಸರಿಪಡಿಸದ ಶ್ರವಣ ನ್ಯೂನ್ಯತೆ ಶೈಕ್ಷಣಿಕ – ಸಾಮಾಜಿಕ ಬೆಂಬಲ ಮತ್ತು ಕಳೆದುಕೊಂಡ ಉತ್ಪಾದಕತೆಯ ಪರಿಣಾಮದಿಂದ ಜಾಗತೀಕವಾಗಿ ಸುಮಾರು US$ 1 ಟ್ರಿಲಿಯನ್ ಡಾಲರ್ (1 ಲಕ್ಷ ಕೋಟಿಯಷ್ಟು ವಾರ್ಷಿಕ ವೆಚ್ಚವನ್ನು ಉಂಟು ಮಾಡುತ್ತದೆ).

2030 ರ ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು, ಶ್ರವಣ ಆರೈಕೆ ಸೇರಿ ಎಲ್ಲಾ ಜನರು ಆರ್ಥಿಕ ಸಂಕಷ್ಠವನ್ನು ಎದುರಿಸದೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಹೊಂದಿರಬೇಕು. ಹೀಗಾಗಿ ಮುಂದಿನ 10 ವರ್ಷಗಳಲ್ಲಿ (ವಿಶ್ವ ಸಂಸ್ಥೆಯ ಮದ್ಯಸ್ಥಿಕೆಗಳ ಮೂಲಕ) ಶ್ರವಣ ಆರೈಕೆ ಒದಗಿಸಲು ತಲಾ US$ 1.33 ಮಿಲಿಯನ್ ಡಾಲರ್ ಹೆಚ್ಚುವರಿ ವಾರ್ಷಿಕ ಹೂಡಿಕೆಯ ಅಗತ್ಯವಿರುತ್ತದೆ.

ಭಾರತಕ್ಕೆ ಬರೋಬ್ಬರಿ 7000 ಕೋಟಿಗೂ ಹೆಚ್ಚಿನ ವಾರ್ಷಿಕ ಹೂಡಿಕೆಯ ವೆಚ್ಚ ತಗುಲುತ್ತದೆ. ಕಿವಿ ಮತ್ತು ಶ್ರವಣ ಆರೈಕೆಯಲ್ಲಿ ಹೂಡಿಕೆ ವೆಚ್ಚ ಫಲಪ್ರದವಾಗಿರುತ್ತದೆ. ಹೂಡಿಕೆ ಮಾಡಿದ ಪ್ರತಿ ಒಂದು ಡಾಲರ್‌ಗೆ ಸುಮಾರು 16 ಪಟ್ಟು ಅಂತಾರಾಷ್ಟ್ರೀಯ ಡಾಲರ್‌ಗಳ ಆರೋಗ್ಯ ಲಾಭವನ್ನು ನೋಡಬಹುದು. ಶ್ರವಣ ದೋಷವನ್ನು ಹೊಂದಿರುವ ಶೇ. 80 ರಷ್ಟು ಜನ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿದ್ದಾರೆ.

ನಮ್ಮ ದೇಶದಲ್ಲಿ ಕಿವುಡುತನ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ N.P.P.C.D. (National Programme for Prevention and Control of Deafness) ಎಂಬ ರಾಷ್ಟ್ರೀಯ ಕಾರ್ಯಕ್ರಮವನ್ನು 2007ರಲ್ಲಿ ಪ್ರಾರಂಭಿಸಲಾಗಿದೆ. ದೇಶಾದ್ಯಂತ 797 ಜಿಲ್ಲೆಗಳ ಪೈಕಿ 558 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಜಾರಿಯಲ್ಲಿದೆ. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಬಲಪಡಿಸಿ ಇಡೀ ದೇಶಕ್ಕೆ ವಿಸ್ತರಿಸಬೇಕು.

ನಾಯಕ್ – ವಾಕ್-ಶ್ರವಣ ಸಂಸ್ಥೆಯಿಂದ ಮಕ್ಕಳಿಗೆ ಉಚಿತ ಶ್ರವಣ ತಪಾಸಣಾ ಕೇಂದ್ರ

ವಿಶ್ವ ಶ್ರವಣ ದಿನಾಚರಣೆಯ ಈ ಸಂದರ್ಭದಲ್ಲಿ ರಿಹ್ಯಾಬಿಲಿಟೇಷನ್ ಟ್ರಸ್ಟ್ ಸಹಯೋಗದೊಂದಿಗೆ “ನಾಯಕ್ – ವಾಕ್-ಶ್ರವಣ ಸಂಸ್ಥೆ” ಮಕ್ಕಳಿಗೆ ಉಚಿತ ಶ್ರವಣ ತಪಾಸಣಾ ಕೇಂದ್ರವನ್ನು ಆರಂಭಿಸಲಿದೆ. ಈ ಸೌಲಭ್ಯದಿಂದ ಶೈಶಾವಸ್ಥೆಯಲ್ಲಿಯೇ ಕಿವುಡುತನ ಹೊಂದಿರುವ ಮಕ್ಕಳ ನ್ಯೂನ್ಯತೆಯನ್ನು ಗುರುತಿಸಿ ಹಸ್ತಕ್ಷೇಪ ಒದಗಿಸುವ ಮೂಲಕ ಸಾಮಾನ್ಯವಾಗಿ ಕಿವಿಕೇಳುವ ಮಕ್ಕಳಂತೆ ಕಿವಿ ಕೇಳದ ಮಕ್ಕಳೂ ಸಹ ಸ್ವಾಭಾವಿಕ ವಾಕ್ ಕೌಶಲ್ಯ ಕಲಿಯಲು ಸಹಾಯವಾಗಲಿದೆ.

ಪೋಷಕರಿಗೆ ತಮ್ಮ ಶಿಶುಗಳಿಗೆ ಕಿವಿ ಕೇಳುತ್ತಿಲ್ಲ ಎಂದು ಅನಿಸಿದಲ್ಲಿ ಅಥವಾ ಮಕ್ಕಳ ವಾಕ್ ಶ್ರವಣ ಬೆಳವಣಿಗೆಯ ಹಂತಗಳು ತಡವಾದಲ್ಲಿ ಈ ಕೇಂದ್ರದಲ್ಲಿ ಕಿವಿ ಪರೀಕ್ಷಿಸಿಕೊಳ್ಳಬಹುದು. ಇದೇ ಮಾರ್ಚ್ 3ರ ಭಾನುವಾರದಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ ಅವರು ಉಚಿತ ಶ್ರವಣ ತಪಾಸಣೆ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ | Raja Marga Column : ಬ್ರಿಟಿಷ್ ವಿಜ್ಞಾನಿಗಳು ವಿಷ ಎಂದು ಕೊಟ್ಟ ದ್ರಾವಣವನ್ನು ಆ ವಿಜ್ಞಾನಿ ಗಟಗಟ ಕುಡಿದಿದ್ದರು!

ಪ್ರತಿ ಮಂಗಳವಾರ ಈ ಕೇಂದ್ರದಲ್ಲಿ 3 ವರ್ಷದೊಳಗಿನ ಪುಟಾಣಿಗಳಿಗೆ ಉಚಿತವಾಗಿ ಶ್ರವಣ ತಪಾಸಣೆ ನಡೆಸಲಾಗುವುದು ಹೆಚ್ಚಿನ ಮಾಹಿತಿಗೆ 080-42075691 ದೂರವಾಣಿಗೆ ಸಂಪರ್ಕಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಹಿಳೆ

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

ಫ್ರಾನ್ಸ್ ನ 101 ವರ್ಷದ ಯೋಗ ಶಿಕ್ಷಕಿಯೊಬ್ಬರು (French Yoga Teacher) ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪುರಸ್ಕಾರ ಪಡೆದಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

VISTARANEWS.COM


on

By

French Yoga Teacher
Koo

ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ (French Yoga Teacher) ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ (Charlotte Chopin) ಅವರಿಗೆ ಭಾರತದ (India) ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ( Padma Shri award) ಅನ್ನು ನೀಡಿ ಗೌರವಿಸಲಾಯಿತು.

ನವದೆಹಲಿಯ (new delhi) ರಾಷ್ಟ್ರಪತಿ ಭವನದಲ್ಲಿ ( Rashtrapati Bhawan) ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಹಸಿರು ಸೀರೆಯನ್ನು ಧರಿಸಿದ ಶಾರ್ಲೆಟ್ ಚಾಪಿನ್ ವೇದಿಕೆಯತ್ತ ನಡೆದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಯೋಗ ಕ್ಷೇತ್ರದಲ್ಲಿ ಶಾರ್ಲೆಟ್ ಚಾಪಿನ್ ಅವರ ಪ್ರಯತ್ನವನ್ನು ಶ್ಲಾಘಿಸಿ ರಾಷ್ಟ್ರಪತಿಯವರ ಕಚೇರಿಯು ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯೋಗ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಶಾರ್ಲೆಟ್ ಚಾಪಿನ್ ಅವರಿಗೆ ಪ್ರದಾನ ಮಾಡಿದರು. ಅವರು ಪ್ರಸಿದ್ಧ ಫ್ರೆಂಚ್ ಯೋಗ ಶಿಕ್ಷಕಿಯಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯೋಗವನ್ನು ಕಲಿಸುತ್ತಿದ್ದಾರೆ ಮತ್ತು 101ನೇ ವಯಸ್ಸಿನಲ್ಲಿ ಯೋಗ ಶಿಕ್ಷಕರಾಗಿ ಸಕ್ರಿಯರಾಗಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.


ಶಾರ್ಲೆಟ್ ಚಾಪಿನ್ ಯಾರು?

ಚಾಪಿನ್ ಫ್ರಾನ್ಸ್ ಮೂಲದವರಾಗಿದ್ದು, ಪ್ರಸ್ತುತ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ವಯಸ್ಸಿನ ಮಿತಿಯ ಮಾನದಂಡಗಳನ್ನು ಮೀರಿ ಚಾಪಿನ್ ಅವರು 50 ವರ್ಷ ವಯಸ್ಸಿನ ಅನಂತರ ಯೋಗವನ್ನು ಕಲಿತರು. 1982 ರಲ್ಲಿ ಫ್ರಾನ್ಸ್ ನಲ್ಲಿ ಕಲಿಸಲು ಪ್ರಾರಂಭಿಸಿದರು. ಅವರು ದೇಶದಲ್ಲಿ ಯೋಗದ ಅಲೆಯನ್ನು ಸೃಷ್ಟಿಸಿದರು. ಇದು ಪ್ರಸಿದ್ಧ ಫಿಟ್ನೆಸ್ ಅಭ್ಯಾಸವನ್ನು ಮಾಡಿದರು. ಅವರು ಫ್ರೆಂಚ್ ಟಿವಿ ಶೋ, ‘ಫ್ರಾನ್ಸ್ ಗಾಟ್ ಇನ್‌ಕ್ರೆಡಿಬಲ್ ಟ್ಯಾಲೆಂಟ್’ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

2023ರ ಜುಲೈನಲ್ಲಿ ಅವರು ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಪ್ರವಾಸದಲ್ಲಿದ್ದಾಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಪ್ಯಾರಿಸ್‌ನಲ್ಲಿ ಭೇಟಿಯಾದರು. ಯೋಗ ಕ್ಷೇತ್ರದಲ್ಲಿ ಅವರ ಅಸಾಧಾರಣ ಕೆಲಸದಿಂದ ಪ್ರಭಾವಿತರಾದ ಪ್ರಧಾನಿ, ಯೋಗದಲ್ಲಿ ಚಾಪಿನ್ ಅವರ ಆಳವಾದ ನಂಬಿಕೆ ಮತ್ತು ಫ್ರಾನ್ಸ್‌ನಲ್ಲಿ ಯೋಗವನ್ನು ಉತ್ತೇಜಿಸಲು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಯೋಗವು ಸಂತೋಷವನ್ನು ತರುತ್ತದೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಎಂದು ಜುಲೈನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದಾಗ ಚಾಪಿನ್ ಹೇಳಿದ್ದರು.

Continue Reading

ಆರೋಗ್ಯ

Mental Health Awareness Month: ಮಾನಸಿಕ ಆರೋಗ್ಯ ಜಾಗೃತಿ ಮಾಸ; ಮತ್ತೆ ಮಗುವಿನಂತಾಗಲು ಪ್ರಯತ್ನಿಸಿ!

ನಮ್ಮೊಳಗಿನ ಮಗು ಅಥವಾ ಇನ್ನರ್‌ ಚೈಲ್ಡ್‌ (Mental Health Awareness Month) ಎಂದರೇನು? ಅದರೊಂದಿಗೆ ನಂಟು ಬೆಸೆಯಲು ಸಾಧ್ಯವೇ? ಎಂದೋ ಕಳೆದ ಬಾಲ್ಯ ಈಗ ಯಾಕೆ ಬರಬೇಕು… ಮುಂತಾದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದ ಮೇ ತಿಂಗಳನ್ನು ಮಾನಸಿಕ ಆರೋಗ್ಯ ಜಾಗೃತಿ ಮಾಸವನ್ನಾಗಿ ಆಚರಿಸಲಾಗುತ್ತದೆ. ಈ ಕುರಿತ ಸಲಹೆಗಳು ಇಲ್ಲಿವೆ.

VISTARANEWS.COM


on

Mental Health Awareness Month
Koo

ಮತ್ತೆ ಮಗುವಿನಂತಾಗಲು (Mental Health Awareness Month) ಸಾಧ್ಯವೇ? ಪ್ರಶ್ನೆಯೇ ಬಾಲಿಶ ಎನಿಸಬಹುದು. ಆದರೆ ನಮ್ಮ ಒಳಗಿನ ಮಗುವಿನೊಂದಿಗೆ ಮತ್ತೆ ನಂಟು ಬೆಸೆಯಲು ಸಾಧ್ಯವಾದರೆ ಮಾನಸಿಕ ಸ್ವಾಸ್ಥ್ಯ ಸಾಧಿಸುವಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದಂತಾಗುತ್ತದೆ ಎನ್ನುವುದು ಸ್ವಾಸ್ಥ್ಯ ತಜ್ಞರ ಮಾತು. ನಮ್ಮೊಳಗಿನ ಮಗು ಅಥವಾ ಇನ್ನರ್‌ ಚೈಲ್ಡ್‌ ಎಂದರೇನು? ಅದರೊಂದಿಗೆ ನಂಟು ಬೆಸೆಯಲು ಸಾಧ್ಯವೇ? ಎಂದೋ ಕಳೆದ ಬಾಲ್ಯ ಈಗ ಯಾಕೆ ಬರಬೇಕು… ಮುಂತಾದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದ ಮೇ ತಿಂಗಳನ್ನು ಮಾನಸಿಕ ಆರೋಗ್ಯ ಜಾಗೃತಿ ಮಾಸವನ್ನಾಗಿ ಆಚರಿಸಲಾಗುತ್ತದೆ.

Mental health image. Various emotion and maind.

ಬಾಲ್ಯದ ನಂಟೇಕೆ?

ನಮ್ಮೆಲ್ಲರ ಬಾಲ್ಯದ ಅನುಭವಗಳೇ ನಮ್ಮನ್ನು ಭವಿಷ್ಯದಲ್ಲಿ ರೂಪಿಸುವಂಥವು. ಬಾಲ್ಯ ಸಿಹಿಯಾಗಿದ್ದರೆ ಮುಂದಿನ ಬದುಕಿನಲ್ಲಿ ಆತ್ಮವಿಶ್ವಾಸ ಹೆಚ್ಚಿರುವಂತೆಯೇ, ಕಹಿ ಬಾಲ್ಯಗಳು ಭವಿಷ್ಯವನ್ನು ದಿಕ್ಕೆಡಿಸಬಹುದು ಎಂಬುದೂ ನಿಜ. ಹಾಗಾಗಿ ಎಳೆತನದ ದಿನಗಳೊಂದಿಗೆ ಮತ್ತೆ ನಂಟು ಬೆಸೆಯುವ ಅಗತ್ಯವನ್ನು ಮಾನಸಿಕ ಸ್ವಾಸ್ಥ್ಯದ ತಜ್ಞರು ಪುನರುಚ್ಚರಿಸುತ್ತಾರೆ. ಒಳ್ಳೆಯ ಅನುಭವಗಳು ಮರುಕಳಿಸಿದರೆ ಬದುಕಿನ ಸೊಗಸು ಮತ್ತೆ ಬಂದಂತೆ. ಒಂದೊಮ್ಮೆ ಅನುಭವಗಳು ಕಹಿಯಾಗಿದ್ದರೆ, ಆ ನೆನಪುಗಳನ್ನು ತೊಡೆಯುವುದು ಸಹ ʻಹೀಲಿಂಗ್‌ʼ ಎನ್ನುವ ಪ್ರಕ್ರಿಯೆಯ ಭಾಗ. ಅದಲ್ಲದೆ ಇನ್ನೇನು ಪ್ರಯೋಜನ?

Woman Meditating in the Workplace Sitting in Front of a Laptop Practicing Stress Relief Exercises Diabetes Control

ಒತ್ತಡ ನಿವಾರಣೆ

ಇಂದಿನ ಪ್ರೆಷರ್‌ ಕುಕ್ಕರ್‌ನಂಥ ಬದುಕಿನಲ್ಲಿ ಬೇಡದ್ದನ್ನೇ ತಲೆಯಲ್ಲಿ ತುಂಬಿಸಿಕೊಳ್ಳುವುದು, ಬದುಕಿನ ಹೊರೆಯನ್ನು ಹೆಚ್ಚಿಸುತ್ತದೆ. ಇದರಿಂದ ಒತ್ತಡದ ಹಾರ್ಮೋನುಗಳಾದ ಕಾರ್ಟಿಸೋಲ್‌ಗಳ ಸ್ರವಿಸುವಿಕೆ ಹೆಚ್ಚುತ್ತದೆ. ಈ ಕಾರ್ಟಿಸೋಲ್‌ ಪ್ರಮಾಣವನ್ನು ಕಡಿಮೆ ಮಾಡದಿದ್ದರೆ, ಅದರ ಅಡ್ಡ ಪರಿಣಾಮಗಳು ಹಲವು ರೀತಿಯಲ್ಲಿ ಕಂಡುಬರುತ್ತದೆ. ಬದಲಿಗೆ, ಮನಸ್ಸನ್ನು ಉಲ್ಲಸಿತವಾಗಿ ಇರಿಸಲು ಯತ್ನಿಸುವುದರಿಂದ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿದೆ.,ಕೆಲವೊಮ್ಮೆ ಉದ್ಯೋಗದ ಒತ್ತಡಗಳು ಮುಂದೆ ಯೋಚಿಸಲೇ ಆಗದಷ್ಟು ತಲೆಯನ್ನು ಖಾಲಿ ಮಾಡಿಬಿಡುತ್ತವೆ. ಇಂಥ ಸಂದರ್ಭದಲ್ಲಿ ಮನಸ್ಸಿಗೆ ಮುದ ನೀಡುವ ವಿಷಯಗಳ ಬಗ್ಗೆ ಯೋಚಿಸುವುದು ಮತ್ತು ಎಳೆತನದ ಹುಡುಗಾಟಿಕೆಗಳೊಂದಿಗೆ ಬೆಸೆಯುವುದು, ಹೊಸ ಆಲೋಚನೆಗಳಿಗೆ ದಾರಿ ಮಾಡುತ್ತವೆ. ಮಕ್ಕಳು ಎಂದಿಗೂ ಬದುಕುವುದು ವರ್ತಮಾನದಲ್ಲಿ. ನಿನ್ನೆಯದ್ದು ಅವುಗಳಿಗೆ ನೆನಪಿರುವುದಿಲ್ಲ, ನಾಳೆಯದ್ದು ಗೊತ್ತಿರುವುದಿಲ್ಲ. ಹಾಗಾಗಿ ತಾವಿದ್ದಂತೆಯೇ ತಮ್ಮನ್ನು ಖುಷಿಯಿಂದ ಒಪ್ಪಿಕೊಂಡೂ ಬಿಡುತ್ತವೆ ಆ ಮಕ್ಕಳು. ತಾನು ಅವರಂತೆ ಇಲ್ಲ, ಇವರಲ್ಲಿ ಇರುವಂಥದ್ದು ತನಗಿಲ್ಲ ಎಂದೆಲ್ಲ ಕೊರಗುವುದಿಲ್ಲ. ಇದನ್ನೇ ಮರಳಿ ಕಲಿಯಬೇಕು ನಾವು.

ಇದಕ್ಕಾಗಿ ಏನು ಮಾಡಬೇಕು?

ಹ್ಯಾಪಿ ಹಾರ್ಮೋನುಗಳು ಬಿಡುಗಡೆಯಾಗುವ ದಾರಿಗಳನ್ನು ಹುಡುಕಿ. ಎಳೆತನದ ಆಟಗಳನ್ನು ನೆನಪಿಸಿಕೊಳ್ಳಿ. ಚನ್ನೆಮಣೆ, ಚೌಕಾಬಾರ ಆಡಿ ಗೊತ್ತಿದ್ದರೆ ಸರಿ. ಅದಿಲ್ಲದಿದ್ದರೆ ಮನೆಯ ಮಕ್ಕಳೊಂದಿಗೆ ಕಣ್ಣಾಮುಚ್ಚಾಲೆ, ಅದಲುಬದಲು ಮುಂತಾದ ಹುಡುಗಾಟದ ಆಟಗಳು ಮನಸ್ಸಿನ ಉಲ್ಲಾಸ ಹೆಚ್ಚಿಸಬಲ್ಲವು. ಸಾಧ್ಯವಾದಷ್ಟು ಹೊತ್ತು ಹಿಂದಿನ-ಮುಂದಿನ ಕ್ಷಣಗಳನ್ನು ಮರೆತು ಬದುಕಲು ಪ್ರಯತ್ನಿಸಿ. ಇದರಿಂದ ಒತ್ತಡ ಕಡಿಮೆ ಮಾಡಲು ನಿಶ್ಚಿತವಾಗಿ ಸಾಧ್ಯವಿದೆ.

ಕಲಿಯಿರಿ

ಎಂದೋ ಏನೋ ಕಲಿಯುವ ಆಸೆ ಮನದಲ್ಲಿ ಇನ್ನೂ ಸುಪ್ತವಾಗಿ ಕುಳಿತಿದೆಯೇ? ಗಿಟಾರ್‌, ಡ್ರಮ್‌, ಪೇಟಿಂಗ್‌ ಅಥವಾ ಏನಾದರೂ ಸರಿ, ಕಲಿಯಬೇಕೆಂಬ ಬಯಕೆ ಇದ್ದರೆ ಅದಕ್ಕೆ ವಯಸ್ಸಿನ ಹಂಗನ್ನು ಅಂಟಿಸಬೇಡಿ. ಆವತ್ತು ಆಗದಿದ್ದರೇನು, ಇವತ್ತಾದರೂ ಸಾಧ್ಯವಾಗುತ್ತಿದೆ ಎಂಬ ಬಗ್ಗೆ ಖುಷಿ, ಹೆಮ್ಮೆ- ಎರಡೂ ಇರಲಿ.

Mental health issues concept.

ನಿಸರ್ಗದ ಸಾಂಗತ್ಯ

ಅದಕ್ಕಾಗಿ ಹಿಮಾಲಯಕ್ಕೇ ಚಾರಣ ಹೋಗಬೇಕೆಂದಿಲ್ಲ. ಯಾವುದಾದರೂ ಬೀಚಿನ ಮರಳಿನಲ್ಲಿ ಮನೆ ಕಟ್ಟುವುದು, ಬೀಚ್‌ನಲ್ಲಿ ಚೆಂಡು ಆಡುವುದು, ರಾತ್ರಿ ಮಹಡಿ ಮೇಲೆ ಮಲಗಿ ನಕ್ಷತ್ರ ಎಣಿಸುವುದು, ಪಾಟಿನಲ್ಲಿ ಒಂದಿಷ್ಟು ಬೀಜ ಬಿತ್ತಿ ದಿನಾ ಅದು ಮೊಳೆಯುವುದನ್ನು ಗಮನಿಸುವುದು- ಇಂಥ ಸರಳ ಚಟುವಟಿಕೆಗಳು ಮನಸ್ಸನ್ನು ಆರೋಗ್ಯಪೂರ್ಣವಾಗಿ ಇರಿಸುತ್ತವೆ.
ನೆನಪಿಡಿ, ಈ ಯಾವುವೂ ನಮ್ಮ ಗುರಿಯಲ್ಲ, ಗುರಿ ತಲುಪುವ ದಾರಿ. ನಮ್ಮ ಗುರಿ ಮನಸ್ಸಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳುವುದು, ಈ ಮೂಲಕ ಬದುಕಿನ ಸ್ವಾಸ್ಥ್ಯವನ್ನು ವೃದ್ಧಿಸಿಕೊಳ್ಳುವುದು. ಇದು ಜಾಗೃತಿ ಮಾಸದಲ್ಲಿ ಮಾತ್ರವಲ್ಲ, ಜೀವನದುದ್ದಕ್ಕೂ ನಡೆಸಿಕೊಂಡು ಬರಬೇಕಾದ ಪ್ರಕ್ರಿಯೆ.

Continue Reading

ವಿದೇಶ

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Pig Kidney: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ. ಆದರೆ ಅವರ ನಿಧನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

VISTARANEWS.COM


on

Pig Kidney
Koo

ಬೋಸ್ಟನ್: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ (Pig Kidney) ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ (Rick Slayman) ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದ ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ರಿಕ್ ಸ್ಲೇಮನ್ ಅವರಿಗೆ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ʼʼಹಂದಿ ಮೂತ್ರಪಿಂಡವು ಕನಿಷ್ಠ ಎರಡು ವರ್ಷಗಳವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದು ನಂಬಿದ್ದೆವು. ಆದರೆ ರಿಕ್ ಸ್ಲೇಮನ್ ಅವರ ಹಠಾತ್‌ ನಿಧನ ಆಘಾತ ತಂದಿದೆʼʼ ಎಂದು ವೈದ್ಯರು ತಿಳಿಸಿದ್ದಾರೆ.

“ರಿಕ್ ಸ್ಲೇಮನ್ ಅವರ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ. ಸ್ಲೇಮನ್ ಅವರನ್ನು ವಿಶ್ವಾದ್ಯಂತದ ಕಿಡ್ನಿ ಸಮಸ್ಯೆ ಇರುವವರ ಭರವಸೆ ಎಂದೇ ಪರಿಗಣಿಸಲಾಗುತ್ತದೆ. ಸ್ಲೇಮನ್ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತಿದ್ದೇವೆʼʼ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಂತಿಮ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಸ್ಲೇಮನ್ ಅವರಿಗೆ ಮಾರ್ಚ್ 16ರಂದು ಶಸ್ತ್ರಚಿಕಿತ್ಸೆ ನಡೆಸಿ ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಟೈಪ್ 2 ಮಧುಮೇಹಿಯಾಗಿದ್ದ ಅವರು ಈ ಹಿಂದೆ 2018ರಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಆದಾಗ್ಯೂ ಐದು ವರ್ಷಗಳ ನಂತರ ಕಸಿ ಮಾಡಿಸಿಕೊಂಡಿದ್ದ ಮೂತ್ರಪಿಂಡ ವಿಫಲವಾಗಲು ಪ್ರಾರಂಭಿಸಿತು ಮತ್ತು ಅಂದಿನಿಂದ ಅವರು ಡಯಾಲಿಸಿಸ್‌ನಲ್ಲಿದ್ದರು.

ಕೊನೆಗೆ ಅವರು ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಿಸಿಕೊಳ್ಳಲು ಒಪ್ಪಿಗೆ ನೀಡಿದ್ದರು. ಈ ವೇಳೆ ಅವರು ಇದು ತಾನು ಎದುರಿಸುವಂತಹ ಸಮಸ್ಯೆ ಇರುವವರಿಗೆ ಭರವಸೆಯ ಬೆಳಕನ್ನು ಒದಗಿಸಲಿದೆ ಎಂದು ಹೇಳಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ವೈದ್ಯರ ಪ್ರಯೋಗ ಯಶಸ್ವಿಯಾಗಿತ್ತು. ಆ ಮೂಲಕ ರಿಕ್ ಸ್ಲೇಮನ್ ಹಂದಿ ಮೂತ್ರಪಿಂಡ ಕಸಿ ಸ್ವೀಕರಿಸಿದ ವಿಶ್ವದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದು, ಬಳಿಕ ಮನೆಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು. ʼʼಸ್ಲೇಮನ್‌ಗೆ ಕಸಿ ಮಾಡಲಾದ ಹಂದಿಯ ಮೂತ್ರಪಿಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಕ್ತದಲ್ಲಿನ ತ್ಯಾಜ್ಯವನ್ನು ತೆಗೆದು ಹಾಕುತ್ತಿದ್ದು, ಮೂತ್ರವನ್ನು ಉತ್ಪಾದಿಸುತ್ತದೆ. ದೇಹದ ದ್ರವಗಳನ್ನು ಸಮತೋಲನಗೊಳಿಸುತ್ತದೆʼʼ ಎಂದು ಅಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಇದರಿಂದ ಮುಂಬರುವ ದಿನಗಳಲ್ಲಿ ಮಾನವನ ಮೇಲೆ ಪ್ರಾಣಿಗಳ ಅಂಗಾಂಗ ಕಸಿಯ ಪ್ರಯೋಗದ ಹೊಸ ಯುಗವೊಂದು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದೇ ವಿಶ್ಲೇಷಿಸಲಾಗಿತ್ತು.

ಈ ಹಿಂದೆ ಹಂದಿಯ ಹೃದಯವನ್ನು ಕಸಿ ಮಾಡಿದ ಕೆಲವೇ ವಾರಗಳಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಈ ಪ್ರಯೋಗ ಭರವಸೆ ಮೂಡಿತ್ತು.

ಇದನ್ನೂ ಓದಿ: Pig kidney: ಮನುಷ್ಯನಿಗೆ ಹಂದಿಯ ಕಿಡ್ನಿ ಅಳವಡಿಕೆ ಸಕ್ಸೆಸ್! ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Continue Reading

ಮಹಿಳೆ

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

ಎಲ್ಲರ ಬದುಕಿನಲ್ಲಿ ತಾಯಿಯಾಗಿ ಒಬ್ಬಳು ಇದ್ದೇ ಇರುತ್ತಾಳೆ. ಅದು ಹೆಂಡತಿಯಾಗಿರಬಹುದು, ಸಹೋದರಿಯಾಗಿರಬಹುದು ಅಥವಾ ಜನ್ಮವಿತ್ತ, ಸಾಕಿ ಸಲಹಿದ ತಾಯಿಯಾಗಿರಬಹುದು. ಇಲ್ಲಿ ಅವರ ಸ್ಥಾನಕ್ಕಿಂತ ಅವರು ಮಾಡುವ ಕರ್ತವ್ಯಕ್ಕೆ ಗೌರವ ಕೊಡಲೇಬೇಕು. ಇದಕ್ಕಾಗಿ ವರ್ಷದಲ್ಲೊಮ್ಮೆ ತಾಯಂದಿರ ದಿನವನ್ನು (Mother’s Day) ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಬಾರಿ ಇಂದು ಈ ದಿನ ವಿಶೇಷವಾಗಿದೆ.

VISTARANEWS.COM


on

By

Mother's Day
Koo

ತಾಳ್ಮೆ, ಸಹನೆ, ಶಾಂತಿ, ಪರಸ್ಪರ ಹೊಂದಾಣಿಕೆ ಇವನ್ನೆಲ್ಲ ಹೆಣ್ಣು (girl) ಮಕ್ಕಳಿಗೆ (child) ಯಾರೂ ಕಲಿಸಬೇಕಾಗಿಲ್ಲ. ಅದು ಅವರಿಗೆ ಹುಟ್ಟಿನಿಂದಲೇ ಬಂದಿರುತ್ತದೆ. ಎಂತಹ ಕಠಿಣ ಪರಿಸ್ಥಿತಿಯಾಗಿರಲಿ ತಾಯಿ (Mother’s Day) ಅದನ್ನು ಎದುರಿಸಲು ಕ್ಷಣ ಮಾತ್ರದಲ್ಲಿ ಸಜ್ಜಾಗುತ್ತಾಳೆ. ತಮ್ಮ ಮಕ್ಕಳ ವಿಚಾರಕ್ಕೆ ಬಂದರೆ ಆಕೆ ಯಾವುದೇ ತ್ಯಾಗಕ್ಕೂ ಸಜ್ಜಾಗುತ್ತಾಳೆ, ತನ್ನ ಪ್ರಾಣವನ್ನು ಒತ್ತೆ ಇಟ್ಟಾದರೂ ಸರಿ ಮಕ್ಕಳನ್ನು ಎಲ್ಲ ರೀತಿಯ ಸಂಕಷ್ಟದಿಂದ ಪಾರು ಮಾಡುತ್ತಾಳೆ.

ಎಲ್ಲರಿಗೂ ತಮ್ಮ ತಾಯಿಯ ಬಗ್ಗೆ ಹೇಳಬೇಕಾದ ಸಾವಿರಾರು ವಿಷಯಗಳಿರುತ್ತವೆ. ಇದಕ್ಕೆ ತಾಯಂದಿರ ದಿನಕ್ಕಿಂತ ಉತ್ತಮ ದಿನ ಬೇರೆ ಯಾವುದಿದೆ. ಹೆಣ್ಣು ತಾಯಿಯಾಗಿ, ಅಕ್ಕನಾಗಿ, ಅಜ್ಜಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ ತನ್ನ ಕರ್ತವ್ಯವನ್ನು ಚೆನ್ನಾಗಿ ನಿಭಾಯಿಸುತ್ತಾಳೆ. ಹೀಗಾಗಿಯೇ ತಾಯಂದಿರ ದಿನದ ಈ ಶುಭ ಸಂದರ್ಭದಲ್ಲಿ ಆಕೆಗೊಂದು ಶುಭ ಸಂದೇಶ ಕಳುಹಿಸಲು ಮರೆಯದಿರಿ.

ಸಿಹಿ ಶುಭಾಶಯಗಳೊಂದಿಗೆ ಆಕೆಯನ್ನು ಗೌರವಿಸುವ ಜೊತೆಗೆ ಸುಂದರವಾದ ಹೂಗೊಂಚಲು, ಅರ್ಥಪೂರ್ಣವಾದ ಉಡುಗೊರೆ ಅಥವಾ ಅವಳೊಂದಿಗೆ ಸಮಯ ಕಳೆಯುವ ಮೂಲಕ ಮೆಚ್ಚುಗೆಯನ್ನು ತೋರಿಸಿ. ಇದು ಯಾವಾಗಲೂ ಆಕೆಯನ್ನು ಸಂತೋಷದಲ್ಲಿ ಇರುವಂತೆ ಮಾಡುತ್ತದೆ ಮತ್ತು ಸದಾ ಆಕೆಯ ನೆನಪಿನಲ್ಲಿ ಇರುವಂತೆ ಮಾಡುತ್ತದೆ.

ತಾಯಂದಿರ ದಿನದ ವಿಶೇಷವಾಗಿ ತಾಯಿಗೆ ವಿಶೇಷ ಅಡುಗೆ ಮಾಡಿ ಬಡಿಸಿ, ಇಲ್ಲವಾದರೆ ಅವರ ನೆಚ್ಚಿನ ರೆಸ್ಟೋರೆಂಟ್ ಗೆ ಹೋಗಿ ಊಟ ಮಾಡಿಸಿ. ಇದರಿಂದ ಸಾಕಷ್ಟು ಸಮಯವನ್ನು ಆಕೆಗೆ ನೀವು ಕೊಟ್ಟಂತಾಗುತ್ತದೆ.


ತಾಯಂದಿರ ದಿನ ಯಾವಾಗ?

ತಾಯಂದಿರ ದಿನವನ್ನು ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ರಜಾ ದಿನದಲ್ಲಿ ಇದು ಬರುವುದರಿಂದ ಈ ದಿನವನ್ನು ಹೆಚ್ಚು ವಿಶೇಷವಾಗಿ ಆಚರಿಸಬಹುದಾಗಿದೆ.

ತಾಯಿಯಂದಿರ ದಿನವು ಈ ಬಾರಿ ಮೇ 12ರಂದು ಭಾನುವಾರ ಆಚರಿಸಲಾಗುತ್ತಿದೆ. ಪ್ರಪಂಚದಾದ್ಯಂತ ಈ ದಿನವನ್ನು ಬೇರೆಬೇರೆ ದಿನಗಳಂದು ಆಚರಿಸಲಾಗುತ್ತಿದೆ.

ಆಸ್ಟ್ರೇಲಿಯಾ, ಕೆನಡಾ, ಡೆನ್ಮಾರ್ಕ್, ಇಟಲಿ, ಫಿನ್‌ಲ್ಯಾಂಡ್, ಸ್ವಿಟ್ಜರ್ಲೆಂಡ್ ಮತ್ತು ಟರ್ಕಿ ಯಲ್ಲಿ ಈ ಬಾರಿ ಮೇ 12ರಂದು ಅಮ್ಮಂದಿರನ್ನು ಗೌರವಿಸಲಾಗುತ್ತಿದೆ. ಯುಕೆಯಲ್ಲಿ ಮಾರ್ಚ್‌ನಲ್ಲಿ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಮೆಕ್ಸಿಕೋ ಈ ವರ್ಷ ಮೇ 10 ರಂದು ತಾಯಂದಿರ ದಿನವನ್ನು ಆಚರಿಸಲಾಗಿದೆ. ಥೈಲ್ಯಾಂಡ್ ಆಗಸ್ಟ್ 12 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಯಾಕೆಂದರೆ ಈ ದಿನ ಇಲ್ಲಿ ರಾಣಿ ಸಿರಿಕಿಟ್ ಅವರ ಜನ್ಮದಿನವಾಗಿದೆ.

ಯಾಕೆ ಆಚರಣೆ ?

ತಾಯಂದಿರ ದಿನದ ಆಚರಣೆಯು 1800 ರ ದಶಕದ ಅಂತ್ಯದಲ್ಲಿ ಪ್ರಾರಂಭಿಸಲಾಯಿತು. ಹಲವಾರು ವಿಭಿನ್ನ ಘಟನೆಗಳ ಸಂಯೋಜನೆಯಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಸಾಮಾಜಿಕ ಕಾರ್ಯಕರ್ತೆ ಮತ್ತು ಸಮುದಾಯ ಸಂಘಟಕಿ ಅನ್ನಾ ಮಾರಿಯಾ ರೀವ್ಸ್ ಜಾರ್ವಿಸ್ ಅವರು ಮೊದಲ ಬಾರಿಗೆ ತಾಯಂದಿರ ದಿನದ ಪ್ರಸ್ತಾಪವನ್ನು ಮುಂದಿಟ್ಟರು.

ತಾಯಂದಿರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಸಹಾಯ ಮಾಡುವ ಮಹಿಳಾ ಕ್ಲಬ್‌ಗಳ ಸ್ಥಾಪಕರಾದ ಜಾರ್ವಿಸ್ ಅವರು 1868 ರಲ್ಲಿ ತಾಯಂದಿರ ಸ್ನೇಹ ದಿನವನ್ನು ಆಯೋಜಿಸಿದರು, ಇದು ಅಂತರ್ಯುದ್ಧದ ಅನಂತರ ಒಕ್ಕೂಟ ಮತ್ತು ಒಕ್ಕೂಟದ ಸೈನಿಕರ ತಾಯಂದಿರನ್ನು ಸಾಮರಸ್ಯದಿಂದ ಒಟ್ಟುಗೂಡಿಸುವ ಉದ್ದೇಶವನ್ನು ಹೊಂದಿತ್ತು.

ಬಳಿಕ ಎರಡು ವರ್ಷಗಳ ಅನಂತರ 1870 ರಲ್ಲಿ ಜೂಲಿಯಾ ವಾರ್ಡ್ ಹೋವ್ ಅವರು ವಿಶ್ವ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ತಾಯಿಯ ದಿನದ ಘೋಷಣೆಯನ್ನು ಮಾಡಿ ಜೂನ್‌ನಲ್ಲಿ ತಾಯಿಯ ದಿನವನ್ನು ಆಚರಿಸಲು ಒತ್ತಾಯಿಸಿದರು. ಆ ಸಮಯದಲ್ಲಿಯೇ ತಾಯಂದಿರನ್ನು ಗೌರವಿಸಲು ಕೆಲವು ರೀತಿಯ ಕಲ್ಪನೆಯನ್ನು ಅವರು ಮಂಡಿಸಿದ್ದರು. ಆದರೆ ಅದು ಸುಮಾರು 35 ವರ್ಷಗಳವರೆಗೆ ಸಾಧ್ಯವಾಗಲಿಲ್ಲ.

1905 ರಲ್ಲಿ ಜಾರ್ವಿಸ್ ಅವರ ಮರಣದ ಅನಂತರ ಅವರ ಮಗಳು ಅನ್ನಾ ಪತ್ರ ಬರೆಯುವ ಅಭಿಯಾನವನ್ನು ಪ್ರಾರಂಭಿಸಿದರು. ತನ್ನ ತಾಯಿಯ ಕೆಲಸವನ್ನು ಮಾತ್ರವಲ್ಲದೆ ಎಲ್ಲಾ ತಾಯಂದಿರಿಗೆ ಮತ್ತು ಅವರ ಮಕ್ಕಳ ಪರವಾಗಿ ಅವರು ಮಾಡುವ ತ್ಯಾಗವನ್ನು ಗೌರವಿಸಲು ತಾಯಂದಿರ ದಿನಾಚರಣೆಗೆ ಕರೆ ನೀಡಿದರು.

ತಾಯಂದಿರ ದಣಿವರಿಯದ ಕೆಲಸವನ್ನು ಗೌರವಿಸುವ ಸಲುವಾಗಿ ಅಧ್ಯಕ್ಷ ವುಡ್ರೊ ವಿಲ್ಸನ್ ಅವರು 1914 ರಲ್ಲಿ ಘೋಷಣೆಗೆ ಸಹಿ ಹಾಕಿ ಅಧಿಕೃತವಾಗಿ ಮೇ ತಿಂಗಳ ಎರಡನೇ ಭಾನುವಾರವನ್ನು ತಾಯಂದಿರ ದಿನವೆಂದು ಘೋಷಿಸಿದರು.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ಪ್ರಾರಂಭದಲ್ಲಿ ತಾಯಂದಿರ ದಿನಚರಣೆಯ ಉದ್ದೇಶವೇ ಬೇರೆಯಾಗಿತ್ತು. ಆದರೆ ಇವತ್ತು ವ್ಯಾಪಾರೀಕರಣವಾಗಿದೆ. ಹೀಗಾಗಿ ರಜಾ ದಿನದಂದೇ ಎಲ್ಲರೂ ತಮ್ಮ ತಾಯೊಂದಿಗೆ ಸ್ವಲ್ಪ ಸಮಯ ಕಳೆಯಲಿ ಎನ್ನುವ ಉದ್ದೇಶದಿಂದ ಎಲ್ಲರೂ ಮೇ ತಿಂಗಳ ಎರಡನೇ ಭಾನುವಾರ ಈ ದಿನಾಚರಣೆಗೆ ಇಷ್ಟಪಡುತ್ತಾರೆ. ಹೀಗಾಗಿ ಇಂದು ವಿಶ್ವದಾದ್ಯಂತ ತಾಯಂದಿರ ದಿನ ಆಚರಿಸಲಾಗುತ್ತಿದೆ.

ನಿತ್ಯದ ಕೆಲಸದ ಜಂಜಾಟದಲ್ಲಿರುವ ಎಲ್ಲರಿಗೂ ಇವತ್ತು ತಾಯಂದಿರ ದಿನ ಆಚರಿಸುವುದು ಅನಿವಾರ್ಯವಾಗಿರುವುದರಿಂದ ಈ ದಿನ ಅಮೂಲ್ಯವಾದ ದಿನವಾಗಿ ಉಳಿದಿದೆ. ಹೀಗಾಗಿ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲ ತಾಯಂದಿರಿಗೂ ಶುಭ ಹಾರೈಸೋಣ.

Continue Reading
Advertisement
Prajwal Revanna Case
ಕರ್ನಾಟಕ3 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ3 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ4 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest4 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ4 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ4 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ4 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ5 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ5 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ5 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ8 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ9 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ9 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ22 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌