Vastu Tips: ಹೊಸ ಮನೆ ನಿರ್ಮಿಸುವಾಗ ಈ ಅಂಶಗಳನ್ನು ಗಮನಿಸಿ - Vistara News

ಲೈಫ್‌ಸ್ಟೈಲ್

Vastu Tips: ಹೊಸ ಮನೆ ನಿರ್ಮಿಸುವಾಗ ಈ ಅಂಶಗಳನ್ನು ಗಮನಿಸಿ

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕು ಎಂದರೆ ಕೆಲವೊಂದು ವಾಸ್ತು ಟಿಪ್ಸ್‌ಗಳನ್ನು ಫಾಲೋ ಮಾಡಬೇಕು. ಆ ಕುರಿತಾದ ವಿವರ ಇಲ್ಲಿದೆ.

VISTARANEWS.COM


on

vastu tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮನೆ ಕೊಂಡುಕೊಳ್ಳುವ ಅಥವಾ ನಿರ್ಮಿಸುವ ಯೋಜನೆಯಲ್ಲಿದ್ದೀರಾ? ಹಾಗಾದರೆ ಕೆಲವೊಂದು ಅಂಶಗಳನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು. ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಲು ಕೆಲವೊಂದು ವಾಸ್ತು ಟಿಪ್ಸ್‌ (Vastu Tips)ಗಳನ್ನು ಅನುಸರಿಸಬೇಕಾಗುತ್ತದೆ. ಕಟ್ಟಡಗಳ ವಿನ್ಯಾಸವೂ ಕೂಡ ಜನರ ಆರೋಗ್ಯ, ಸಂಬಂಧ, ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಹಾಗಾದರೆ ಹೊಸ ಮನೆಯ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವ ಮಾಹಿತಿ ಇಲ್ಲಿದೆ.

ಯಾವ ದಿಕ್ಕಿನಲ್ಲಿರಬೇಕು?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮುಖ್ಯ ಬಾಗಿಲು ಜನರನ್ನು ಮಾತ್ರವಲ್ಲ ಶಕ್ತಿಯನ್ನೂ (Energy) ಆಕರ್ಷಿಸುತ್ತದೆ. ಶಕ್ತಿ ಮುಖ್ಯ ದ್ವಾರದ ಮುಖಾಂತರ ಒಳಗೆ ಮತ್ತು ಹೊರಗೆ ಸಂಚರಿಸುತ್ತದೆ. ಹೀಗಾಗಿ ಮನೆಯ ಮುಖ್ಯ ಬಾಗಿಲು ಯಾವ ಕಡೆಗಿದೆ ಎನ್ನುವುದೂ ಪ್ರಧಾನ ವಿಚಾರವಾಗುತ್ತದೆ. ಮನೆ ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿಗೆ ಮುಖ ಮಾಡಿರಲಿ. ನಿಮ್ಮ ಹೊಸ ಮನೆಯನ್ನು ನಿರ್ಮಿಸುವ ಮೊದಲು ಇದನ್ನು ಪರಿಶೀಲಿಸಿ ಅಥವಾ ಈ ಅಂಶವನ್ನು ಗಮನದಲ್ಲಿರಿಸಿಯೇ ಮನೆ ಹುಡುಕಿ.

ರೂಮ್‌ಗಳ ಮುಖ ಈ ಕಡೆಗಿರಲಿ

ಪ್ರತಿಯೊಂದು ಕೋಣೆಯನ್ನು ನಿರ್ದಿಷ್ಟ ದಿಕ್ಕಿನಲ್ಲೇ ನಿರ್ಮಿಸಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅದರ ಪ್ರಕಾರ ಈ ವಿಚಾರ ಗಮನಿಸಿ:

ಅಡುಗೆ ಕೋಣೆ: ವಾಸ್ತು ಪ್ರಕಾರ ಅಡುಗೆ ಕೋಣೆ ಮನೆಯ ಆಗ್ನೇಯ ದಿಕ್ಕಿನಲ್ಲಿರಬೇಕು. ಯಾವ ಕಾರಣಕ್ಕೂ ಉತ್ತರ ದಿಕ್ಕಿನಲ್ಲಿ ಅಡುಗೆ ಕೋಣೆ ಇರಬಾರದು.

ಮಾಸ್ಟರ್ ಬೆಡ್ ರೂಮ್: ಮಾಸ್ಟರ್ ಬೆಡ್ ರೂಮ್ ಅನ್ನು ನೈಋತ್ಯ ದಿಕ್ಕಿನಲ್ಲಿ ನಿರ್ಮಿಸುವುದು ಉತ್ತಮ. ಆಗ್ನೇಯದಲ್ಲಿ ಮಾಸ್ಟರ್ ಬೆಡ್ ರೂಮ್ ಹೊಂದಿರಲೇ ಬಾರದು. ಯಾಕೆಂದರೆ ಅಗ್ನಿ ಅಂಶವು ಆ ದಿಕ್ಕನ್ನು ನಿಯಂತ್ರಿಸುತ್ತದೆ.

ಮಕ್ಕಳ ಕೋಣೆ: ಮಕ್ಕಳ ಕೋಣೆ ಯಾವತ್ತೂ ನೈಋತ್ಯ ದಿಕ್ಕಿನಲ್ಲಿ ಇರುವುದು ಮುಖ್ಯ. ಮಕ್ಕಳು ದಕ್ಷಿಣ ಅಥವಾ ಪೂರ್ವದ ಕಡೆಗೆ ತಲೆ ಹಾಕಿ ಮಲಗುತ್ತಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

ಶೌಚಾಲಯ: ಶೌಚಾಲಯ / ಬಾತ್‌ ರೂಮ್‌ ಮನೆಯ ಪಶ್ಚಿಮ ಅಥವಾ ವಾಯುವ್ಯ ದಿಕ್ಕಿನಲ್ಲಿರಬೇಕು ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಕೋಣೆಯ ಆಕಾರ

ಕೋಣೆಯ ಆಕಾರದ ಬಗ್ಗೆಯೂ ಗಮನ ಹರಿಸುವುದು ಮುಖ್ಯ. ವೃತ್ತಾಕಾರದ ಕೋಣೆಗಳು ಹೆಚ್ಚು ಸ್ಟೈಲಿಶ್ ಮತ್ತು ಟ್ರೆಂಡಿಯಾಗಿ ಕಾಣುತ್ತಿದ್ದರೂ ಅವು ಮನೆಯ ವಾಸ್ತುವಿಗೆ ಅನುಗುಣವಾಗಿಲ್ಲ ಎನ್ನುವುದನ್ನು ಗಮನಿಸಿ. ಕೋಣೆಗಳು ಯಾವತ್ತೂ ಚೌಕಾಕಾರ ಅಥವಾ ಆಯತಾಕಾರದಲ್ಲಿರುವುದನ್ನು ಖಚಿತಪಡಿಸಿಕೊಳ್ಳಿ.

ನೀರಿನ ಟ್ಯಾಂಕ್‌ ಎಲ್ಲಿರಬೇಕು?

ಮನೆಯಲ್ಲಿ ನೀರಿನ ಟ್ಯಾಂಕ್‌ ಇರಿಸುವ ದಿಕ್ಕಿನತ್ತಲೂ ಗಮನ ಹರಿಸುವುದು ಮುಖ್ಯ. ಓವರ್ ಹೆಡ್ ಟ್ಯಾಂಕ್ ಅನ್ನು ಮನೆಯ ಪಶ್ಚಿಮ ಅಥವಾ ನೈಋತ್ಯ ದಿಕ್ಕಿನಲ್ಲಿ ಇರಿಸಬೇಕು. ಒಂದು ವೇಳೆ ನೀವು ಅದನ್ನು ನೈಋತ್ಯ ದಿಕ್ಕಿನಲ್ಲಿ ಇರಿಸಿದರೆ ಮೇಲ್ಛಾವಣಿಯಿಂದ ಎರಡು ಅಡಿ ಎತ್ತರದಲ್ಲಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

ಸೆಪ್ಟಿಕ್ ಟ್ಯಾಂಕ್ ಇಲ್ಲಿರಲಿ

ಸೆಪ್ಟಿಕ್ ಟ್ಯಾಂಕ್ ಅನ್ನು ತಪ್ಪಾದ ಸ್ಥಳದಲ್ಲಿ ಇರಿಸಿದರೆ ಮನೆಯಲ್ಲಿ ವಾಸಿಸುವ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಸೆಪ್ಟಿಕ್ ಟ್ಯಾಂಕ್ ಅನ್ನು ವಾಯವ್ಯ ದಿಕ್ಕಿನಲ್ಲಿ ಮಾತ್ರ ಇರಬೇಕು. ಅದು ಯಾವುದೇ ಕಾರಣಕ್ಕೂ ಕಾಂಪೌಂಡ್ ಗೋಡೆಯನ್ನು ಮುಟ್ಟುವುದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

ಉತ್ತಮ ಆರೋಗ್ಯಕ್ಕಾಗಿ ಹೀಗೆ ಮಾಡಿ

ಆರೋಗ್ಯವೇ ಸಂಪತ್ತು. ಹೀಗಾಗಿ ಉತ್ತಮ ಆರೋಗ್ಯಕ್ಕಾಗಿ ಈ ಅಂಶಗಳನ್ನು ಪಾಲಿಸಬೇಕು. ಮನೆಯೊಳಗೆ ಇನ್‌ ಡೋರ್‌ ಗಿಡಗಳನ್ನು ಬೆಳೆಸಬೇಕು, ಈಶಾನ್ಯ ದಿಕ್ಕಿನಲ್ಲಿ ದೀಪವನ್ನು ಬೆಳಗಿಸಬೇಕು, ಅಡುಗೆಮನೆಯಲ್ಲಿ ಆಹಾರವನ್ನು ನೈಋತ್ಯ ದಿಕ್ಕಿನಲ್ಲಿ ಸಂಗ್ರಹಿಸಬೇಕು, ಯಾವುದೇ ನಳ್ಳಿಯಲ್ಲಿ ನೀರು ತೊಟ್ಟಿಕ್ಕುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು, ಕನಿಷ್ಠ ವಾರಕ್ಕೊಮ್ಮೆಯಾದರೂ ಕರ್ಪೂರವನ್ನು ಉರಿಸಬೇಕು. ಇದರಿಂದ ಋಣಾತ್ಮಕ ಶಕ್ತಿಯನ್ನು ದೂರ ಮಾಡಬಹುದು.

ಇದನ್ನೂ ಓದಿ: Vastu Tips: ಸುಖ, ಸಮೃದ್ಧಿ ಹೆಚ್ಚಲು ಈ ವಾಸ್ತು ಟಿಪ್ಸ್‌ ಫಾಲೋ ಮಾಡಿ

ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿ

  • ಮನೆ ಮುಂಭಾಗ ತುಳಸಿ ಗಿಡ ಬೆಳೆಸಿ
  • ಮನೆಯೊಳಗೆ ಬುದ್ಧ ವಿಗ್ರಹ ಇಡುವುದರಿಂದ ಋಣಾತ್ಮಕ ಶಕ್ತಿ ಕಡಿಮೆಯಾಗುತ್ತದೆ
  • ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ
  • ಮುರಿದ ಪಾತ್ರೆ, ಬಿರುಕು ಬಿಟ್ಟ ಕನ್ನಡಿ ಬಳಸಬೇಡಿ
  • ಗೋಡೆ ಗಡಿಯಾರಗಳು ಯಾವಾಗಲೂ ಕೆಲಸ ಮಾಡುವ ಸ್ಥಿತಿಯಲ್ಲಿರಬೇಕು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Vijayanagara News: ರಾಷ್ಟ್ರೀಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

VISTARANEWS.COM


on

Dengue awareness rally in Hosapete
Koo

ಹೊಸಪೇಟೆ: ರಾಷ್ಟ್ರೀಯ ಡೆಂಗ್ಯು (Dengue) ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ (Vijayanagara News) ಜರುಗಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಡೆಂಗ್ಯು ಜ್ವರವನ್ನು ಜನರು ನಿರ್ಲಕ್ಷಿಸದೆ ಸೂಕ್ತವಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಡೆಂಗ್ಯು ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಗ್ಯು ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿದ್ದು, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಶಂಕರನಾಯ್ಕ ಮಾತನಾಡಿ, ರೋಗಗಳು ಬಂದ ಮೇಲೆ ಚಿಕಿತ್ಸೆ ನೀಡುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗ್ರತೆ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಗ್ಯು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ. ಸಿದ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

ಕರಪತ್ರ ವಿತರಣೆ

ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೇ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.

Continue Reading

ವಿದೇಶ

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳನ್ನು ನೇಪಾಳ ನಿಷೇಧಿಸಿದೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

VISTARANEWS.COM


on

MDH, Everest Spices
Koo

ಕಾಠ್ಮಂಡುಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳನ್ನು ನೇಪಾಳ ನಿಷೇಧಿಸಿದೆ. ಈ ಹಿಂದೆ ಇದೇ ಕಾರಣಕ್ಕೆ ಈ ಉತ್ಪನ್ನಗಳನ್ನು ಸಿಂಗಾಪುರ, ಹಾಂಕಾಂಗ್‌ ಮುಂತಾದೆಡೆ ಬ್ಯಾನ್‌ ಮಾಡಲಾಗಿತ್ತು. ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಎಥಿಲೀನ್ ಆಕ್ಸೈಡ್ (Ethylene Oxide) ಅಂಶ ಇದೆ ಎನ್ನುವ ದೂರು ಕೇಳಿ ಬಂದ ಕಾರಣಕ್ಕೆ ಈ ಉತ್ಪನ್ನಗಳ ಆಮದು, ಮಾರಾಟ ಮತ್ತು ಬಳಕೆಯನ್ನು ನೇಪಾಳದಲ್ಲಿ ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ನಿರ್ದಿಷ್ಟ ಬ್ರ್ಯಾಂಡ್‌ಗಳ ಮಸಾಲೆಗಳಲ್ಲಿನ ರಾಸಾಯನಿಕಗಳ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

“ಹಾಂಗ್‌ಕಾಂಗ್ ಮತ್ತು ಸಿಂಗಾಪುರ್ ಈಗಾಗಲೇ ಈ ಉತ್ಪನ್ನಗಳಿಗೆ ನಿಷೇಧ ಹೇರಿವೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾವು ಕೂಡ ಪರೀಕ್ಷೆ ನಡೆಸಲು ಮುಂದಾಗಿದ್ದೇವೆʼʼ ಎಂದು ಅವರು ವಿವರಿಸಿದ್ದಾರೆ. ಈ ಮಧ್ಯೆ ರಫ್ತಾಗುವ ಭಾರತೀಯ ಮಸಾಲೆಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸ್ಪೈಸ್ ಮಂಡಳಿ ಕ್ರಮ ಕೈಗೊಂಡಿದೆ. ಮಂಡಳಿ ಟೆಕ್ನೋ-ಸೈಂಟಿಫಿಕ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದಿದೆ. ಜತೆಗೆ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ.

ಅಖಿಲ ಭಾರತ ಸಾಂಬಾರ ಪದಾರ್ಥಗಳ ರಫ್ತುದಾರರ ವೇದಿಕೆ ಮತ್ತು ಭಾರತೀಯ ಮಸಾಲೆ ಮತ್ತು ಆಹಾರ ಪದಾರ್ಥ ರಫ್ತುದಾರರ ಸಂಘದಂತಹ 130ಕ್ಕೂ ಹೆಚ್ಚು ಸಂಘಗಳೊಂದಿಗೆ ಭಾರತೀಯ ಸ್ಪೈಸ್ ಮಂಡಳಿ ಸಮಾಲೋಚನೆಯನ್ನೂ ನಡೆಸಿದೆ. ಮಂಡಳಿಯು ಎಲ್ಲ ರಫ್ತುದಾರರಿಗೆ ಎಥಿಲೀನ್ ಆಕ್ಸೈಡ್ ಬಳಕೆ ಬಗ್ಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳ ಹಿಂದೆ ಎಂಡಿಎಚ್‌, ಎವರೆಸ್ಟ್‌ ಮಸಾಲೆ ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದರು. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ.

ಇನ್ನು ಅಪಾಯಕಾರಿ ರಾಸಾಯನಿಕಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading

ಆರೋಗ್ಯ

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Health Tips in Kannada: ಹೊರಗಿನ ಉಷ್ಣತೆಯ ಜೊತೆಗೆ ದೇಹಕ್ಕೂ ನಾವು ಉಷ್ಣ ಪ್ರಕೃತಿಯ ಆಹಾರವನ್ನೇ ನೀಡಿದರೆ ದೇಹಕ್ಕೆ ಬೇಸಿಗೆಯಲ್ಲಿ ಬೇಕಾದ ನಿಜವಾದ ತಂಪು ಸಿಗುವುದಿಲ್ಲ. ದೇಹವನ್ನು ತಂಪಾಗಿರಿಸಬೇಕೆಂದರೆ, ನಾವು ಬೇಸಗೆಯಲ್ಲಿ ಕೆಲವು ಆಹಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ಸೇವಿಸಬೇಕು. ಬನ್ನಿ, ನಿಮ್ಮ ದೇಹಕ್ಕೆ ಬೇಸಿಗೆಯಲ್ಲಿ ಬೇಕಾದ್ದೇನು ಎಂಬುದನ್ನು ನೋಡೋಣ.

VISTARANEWS.COM


on

These foods are really what our body needs in summer
Koo

ಬೆಂಗಳೂರು: ಬೇಸಿಗೆಯ ಬಿಸಿಗೆ ದೇಹ ತಂಪಾಗಬೇಕು. ಆಗಷ್ಟೇ ಆರೋಗ್ಯ ಸರಿಯಾಗುತ್ತದೆ (Health Tips in Kannada). ಹೊರಗಿನ ಉಷ್ಣತೆಯ ಜೊತೆಗೆ ದೇಹಕ್ಕೂ ನಾವು ಉಷ್ಣ ಪ್ರಕೃತಿಯ ಆಹಾರವನ್ನೇ ನೀಡಿದರೆ ದೇಹಕ್ಕೆ ಬೇಸಿಗೆಯಲ್ಲಿ ಬೇಕಾದ ನಿಜವಾದ ತಂಪು ಸಿಗುವುದಿಲ್ಲ. ದೇಹವನ್ನು ತಂಪಾಗಿರಿಸಬೇಕೆಂದರೆ, ನಾವು ಬೇಸಗೆಯಲ್ಲಿ ಕೆಲವು ಆಹಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ಸೇವಿಸಬೇಕು. ಬನ್ನಿ, ನಿಮ್ಮ ದೇಹಕ್ಕೆ ಬೇಸಿಗೆಯಲ್ಲಿ ಬೇಕಾದ್ದೇನು ಎಂಬುದನ್ನು ನೋಡೋಣ.

ಹೆಚ್ಚು ನೀರು ಸೇವಿಸಿ

ಬೇಸಿಗೆಯಲ್ಲಿ ದೇಹಕ್ಕೆ ಹೆಚ್ಚು ನೀರು ಬೇಕು. ಬಾಯಾರಿದಾಗಲೆಲ್ಲ ದೇಹಕ್ಕೆ ನೀರು ಕೊಡಲೇಬೇಖು. ಬೇಸಿಗೆಯ ಧಗೆ ಬಾಯಾರುವುದೂ ಕೂಡಾ ಹೆಚ್ಚು. ಇಂಥ ಸಂದರ್ಭದಲ್ಲಿ ಸಕ್ಕರೆ ಹೆಚ್ಚಿರುವ ಜ್ಯೂಸ್‌ಗಳ ಮೊರೆ ಹೋಗುವ ಬದಲು ಹೆಚ್ಚಾಗಿ ನೀರನ್ನು ಸೇವಿಸುವ ಅಭ್ಯಾಸ ರೂಢಿಸಿಕೊಳ್ಳಬೇಕು. ದಿನಕ್ಕೆ ಕಡಿಮೆಯೆಂದರೂ ಎಂಟರಿಂದ ಹತ್ತು ಗ್ಲಾಸ್‌ ನೀರನ್ನು ನಾವು ಸೇವಸಲೇಬೇಕು.

ನೀರಿನಂಶ ಹೆಚ್ಚಿರುವ ಹಣ್ಣು ಸೇವಿಸಿ

ಬೇಸಿಗೆಯಲ್ಲಿ ಹಣ್ಣು ತಂದು ಹಣ್ಣಿಗೆ ಒಂದಷ್ಟು ಸಕ್ಕರೆ ಸುರಿದು ಜ್ಯೂಸ್‌ ಮಾಡಿ ಕುಡಿಯುವ ಬದಲು ಹಣ್ಣನ್ನು ಹಾಗೆಯೇ ಸೇವಿಸಿ. ಅಥವಾ ಹಣ್ಣಿನ ರಸ ಹಿಂಡಿಯೂ ಸೇವಿಸಬಹುದು. ಆದರೆ, ಈ ಆಯ್ಕೆಯನ್ನು ಮಾಡುವಾಗ ರಸಭರಿತ, ನೀರಿನಂಶ ಹೆಚ್ಚಿರುವ ಹಣ್ಣು ತರಕಾರಿಗಳನ್ನು ಆಯ್ಕೆ ಮಾಡಿ. ಉದಾಹರಣೆಗೆ, ಬೇಸಿಗೆ ಬಂದ ಕೂಡಲೇ ಮಾರುಕಟ್ಟೆಗೆ ಬರುವ ಕಲ್ಲಂಗಡಿ, ಖರ್ಬೂಜ, ಲಿಚಿ, ಮಾವು, ಹಲಸು, ನಿಂಬೆ ಮತ್ತಿತರ ಹಣ್ಣುಗಳು. ಜೊತೆಗೆ ಸೌತೆಕಾಯಿಯಂತಹ ತರಕಾರಿಗಳು. ಇವುಗಳಲ್ಲಿ ಹೆಚ್ಚು ನೀರಿನಂಶ ಇದ್ದು, ಇವು ದೇಹವನ್ನು ತಂಪಾಗಿರಿಸುತ್ತವೆ. ಜೊತೆಗೆ ಪೋಷಕಾಂಶಗಳಿಂದಲೂ ಸಮೃದ್ಧವಾಗಿರುತ್ತವೆ.

ಇದನ್ನೂ ಓದಿ: Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ತಂಪಾಗಿರಿಸುವ ಮೂಲಿಕೆಗಳನ್ನು ಆಯ್ಕೆ ಮಾಡಿ

ದೇಹವನ್ನು ತಂಪಾಗಿರಿಸಲು, ಕೆಲವು ಮೂಲಿಕೆಗಳೂ ಸಹಾಯ ಮಾಡುತ್ತವೆ. ಉದಾಹರಣೆಗೆ ಪುದಿನ, ಕೊತ್ತಂಬರಿ ಸೊಪ್ಪು, ಸಬ್ಬಸ್ಸಿಗೆ ಸೊಪ್ಪು, ಬಡೇಸೋಂಪು, ಜೀರಿಗೆ, ಕೊತ್ತಂಬರಿ ಇತ್ಯಾದಿಗಳಲ್ಲಿ ತಂಪುಕಾರಕ ಗುಣಗಳಿವೆ. ಇವುಗಳನ್ನು ಆಹಾರಗಳನ್ನು ಬಳಸಿ. ಚಹಾ ಮಾಡಿ ಕುಡಿಯಿರಿ. ಮಜ್ಜಿಗೆ ಅಥವಾ ಇತರ ತಂಪು ಪೇಯಗಳಿಗೆ ಹಾಕಿ.

ಮಸಾಲೆಯುಕ್ತ ಆಹಾರಗಳಿಂದ ದೂರವಿರಿ

ಮಸಾಲೆಯುಕ್ತ ಆಹಾರಗಳು ದೇಹವನ್ನು ಬಿಸಿಯಾಗಿಸುತ್ತವೆ. ಆದರೂ ನಿಮಗೆ ಇಂತಹ ಆಹಾರಗಳು ಬೇಕೆನಿಸಿದರೆ, ಕೊಂಚ ಕಡಿಮೆ ಮಸಾಲೆಯ ಆಹಾರಗಳನ್ನು ಬಳಸಿ. ಆದರೆ, ಖಾರವಾದ ತಿನಿಸುಗಳು ಅಥವಾ ಅತಿಯಾದ ಮಸಾಲೆ ಹಾಕಿದ ಊಟ ಬೇಸಿಗೆಯಲ್ಲಿ ಒಳ್ಳೆಯದಲ್ಲ.

ಎಲೆಕ್ಟ್ರೋಲೈಟ್‌ಯುಕ್ತ ಆಹಾರ ಸೇವಿಸಿ

ಎಲೆಕ್ಟ್ರೋಲೈಟ್‌ಗಳಾದ ಸೋಡಿಯಂ, ಪೊಟಾಶಿಯಂ, ಮೆಗ್ನೀಶಿಯಂ ಹೆಚ್ಚಿರುವ ಆಹಾರಗಳಾದ, ಬಾಳೆಹಣ್ಣು, ಎಳನೀರು, ಸೊಪ್ಪು, ಮೊಸರು, ಮಜ್ಜಿಗೆ ಮತ್ತಿತರ ಆಹಾರಗಳನ್ನು ಸೇವಿಸಿ. ಇದರಿಂದ ದೇಹಕ್ಕೆ ಬೇಕಾದ ನೀರಿನಂಶದ ಜೊತೆಗೆ ಶಕ್ತಿ ಸಾಮರ್ಥ್ಯವೂ ಹೆಚ್ಚುತ್ತದೆ.

ಆಲ್ಕೋಹಾಲ್‌, ಕೆಫೀನ್ ಕಡಿಮೆ ಮಾಡಿ

ಬೇಸಿಗೆಯಲ್ಲಿ ಕೆಫೀನ್‌ಯುಕ್ತ ಪೇಯಗಳನ್ನು ಸೇವಿಸುವುದನ್ನು ಕಡಿಮೆ ಮಾಡಿ. ಆಲ್ಕೋಹಾಲ್‌ ಬಿಟ್ಟರೆ ಒಳ್ಳೆಯದು. ನೀರು, ಹರ್ಬಲ್‌ ಚಹಾಗಳು, ಕಷಾಯ, ಹಣ್ಣಿನ ಪಾನಕಗಳು ಇತ್ಯಾದಿಗಳನ್ನು ಸೇವಿಸಿ. ರಾಗಿ ಅಂಬಲಿ, ಬಾರ್ಲಿ ನೀರು, ಬಾದಾಮಿ ಹಾಲು, ಮಜ್ಜಿಗೆ ನೀರು ಇತ್ಯಾದಿಗಳು ದೇಹವನ್ನು ತಂಪು ಮಾಡುತ್ತವೆ.

ಸಾಮಾನ್ಯ ಉಷ್ಣತೆಯ ಅಥವಾ ತಂಪಾದ ಆಹಾರ ಸೇವಿಸಿ

ಕೋಣೆಯ ಉಷ್ಣತೆಯ ಆಹಾರಗಳನ್ನು ಹೆಚ್ಚು ತಿನ್ನಿ. ಸಲಾಡ್‌, ತಂಬುಳಿ, ತಣ್ಣಗೆ ಮಾಡಿದ ಸೂಪ್‌ಗಳು, ಫ್ರುಟ್‌ ಸಲಾಡ್‌ಗಳು ಇತ್ಯಾದಿಗಳು ಒಳ್ಳೆಯದು. ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದು, ಅಥವಾ ಹದ ಬಿಸಿಯ ಆಹಾರಗಳಾದರೆ ಸರಿ. ಬಿಸಿ ಬಿಸಿಯಾಗಿ ತಿನ್ನಬೇಕಾದ ಅಗತ್ಯವಿಲ್ಲ. ತಂಪಾದ ಆಹಾರವೆಂದರೆ, ಐಸ್‌ಕ್ರೀಂ ಅಲ್ಲ ಎಂಬುದು ನೆನಪಿರಲಿ!

Continue Reading

ಆರೋಗ್ಯ

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

World Hypertension Day: ತಲೆನೋವು, ತಲೆ ಸುತ್ತು, ಎದೆನೋವು, ಉಸಿರಾಡಲು ಕಷ್ಟವಾಗುವುದು, ಆತಂಕ, ಗೊಂದಲ, ಹೊಟ್ಟೆ ತೊಳೆಸುವುದು, ವಾಂತಿ, ದೃಷ್ಟಿ ಮಂಜಾಗುವುದು, ಅನಿಯಂತ್ರಿತ ಎದೆ ಬಡಿತ ಮುಂತಾದ ಲಕ್ಷಣಗಳು ಕಂಡುಬಂದರೆ, ರಕ್ತದೊತ್ತಡವನ್ನು ತಪ್ಪದೇ ಪರೀಕ್ಷಿಸಿಕೊಳ್ಳಿ. ಜನರಲ್ಲಿ ಬಿಪಿ ಸಮಸ್ಯೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದಲೇ ಮೇ 17ರಂದು ಜಾಗತಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ.

VISTARANEWS.COM


on

World Hypertension Day Today is Global Blood Pressure Day
Koo

ಬೆಂಗಳೂರು: ಶೀತ, ಜ್ವರ, ಕೆಮ್ಮು ಮುಂತಾದ ಸೋಂಕು ರೋಗಗಳು ಇಂದಿಲ್ಲದಿದ್ದರೂ ನಾಳೆಗೆ ಬಂದುಬಿಡಬಹುದು. ಆದರೆ ಜೀವನಶೈಲಿಯಿಂದ ಬರುವ ರೋಗಗಳು (World Hypertension Day) ಹಾಗಲ್ಲ, ನಮಗೇ ತಿಳಿಯದಂತೆ ನಾವೆಂದೋ ಬಿತ್ತಿದ ಬೀಜ, ಆಳವಾದ ಬೇರುಗಳನ್ನು ಬಿಟ್ಟ ಮೇಲೆಯೇ ಮೊಳಕೆ ಕಾಣುವುದು. ಉದಾ, ರಕ್ತದೊತ್ತಡದಂಥ ಸಮಸ್ಯೆಯನ್ನೇ ಗಮನಿಸಿದರೆ, ಎಂದಿನಿಂದ ಪ್ರಾರಂಭವಾಯಿತು ಎನ್ನುವುದೇ ತಿಳಿಯುವುದಿಲ್ಲ. ಆದರೆ ದೀರ್ಘಕಾಲದಿಂದಲೇ ಒತ್ತಡದ ಬದುಕು, ವ್ಯಾಯಾಮ ರಹಿತ ಜೀವನ, ಅನಾರೋಗ್ಯಕರ ಆಹಾರ ಮುಂತಾದ ಕಾರಣಗಳು ಈ ಬೀಜಕ್ಕೆ ನೀರು, ಗೊಬ್ಬರ ಹಾಕುತ್ತಲೇ ಇರುತ್ತವೆ. ಇದರಿಂದಲೇ ಹೃದಯದ ಸಮಸ್ಯೆಗಳು ಹುಟ್ಟಿಕೊಳ್ಳುವುದು. ಈ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಮೇ ತಿಂಗಳ ಹದಿನೇಳನೇ ದಿನವನ್ನು ಜಾಗತಿಕ ರಕ್ತದೊತ್ತಡದ ದಿನವೆಂದು ಘೋಷಿಸಲಾಗಿದೆ. ರಕ್ತದೊತ್ತಡ ಅಥವಾ ಬಿಪಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ಸಮಸ್ಯೆಯ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

ಬಿಪಿ ಎಂದರೆ?

ಬಿಪಿ ಏರಿಸಿಕೊಳ್ಳುವುದು ಎಂದು ಆಡು ಮಾತಿನಲ್ಲಿ ಹೇಳುವುದು ಸಾಮಾನ್ಯ. ಹಾಗೆಂದರೆ ಏನು? ರಕ್ತನಾಳಗಳಲ್ಲಿ ಪ್ರವಹಿಸುವ ರಕ್ತವು ನಿಗದಿತ ಅಥವಾ ಸಾಮಾನ್ಯಕ್ಕಿಂತ ಹೆಚ್ಚಿನ ಒತ್ತಡದಲ್ಲಿ ಹರಿಯುತ್ತಿದ್ದರೆ ಅದನ್ನು ರಕ್ತದ ಏರೊತ್ತಡ ಅಥವಾ ಬಿಪಿ ಎಂದು ಕರೆಯಲಾಗುತ್ತದೆ. ಇಂದಿನ ಜೀವನಶೈಲಿಯಲ್ಲಿ ವಯಸ್ಸು, ಲಿಂಗ ಮುಂತಾದ ಯಾವುದೇ ತಾರತಮ್ಯವಿಲ್ಲದೆ ಯಾರನ್ನೂ ಕಾಡಬಹುದಾದ ಸಮಸ್ಯೆಯಿದು. ಕೇವಲ ರಕ್ತದ ಏರೊತ್ತಡ ಎಂಬುದರಿಂದ ಆರಂಭವಾಗುವ ಸಮಸ್ಯೆಯು ಕ್ರಮೇಣ ಹೃದ್ರೋಗ, ಪಾರ್ಶ್ವವಾಯು ಮುಂತಾದ ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ.

ಮೊದಲಿಗೆ ತನ್ನ ಇರುವಿಕೆಯನ್ನು ಅಷ್ಟಾಗಿ ಪ್ರಕಟಿಸದ ಈ ಸಮಸ್ಯೆಯು, 180/120ರ ಆಜೂಬಾಜು ಬಿಪಿ ತಲುಪುತ್ತಿದ್ದಂತೆ ಕೆಲವು ಲಕ್ಷಣಗಳನ್ನು ತೋರಿಸುತ್ತದೆ. ಸಾಮಾನ್ಯವಾಗಿ- ತಲೆನೋವು, ತಲೆ ಸುತ್ತು, ಎದೆನೋವು, ಉಸಿರಾಡಲು ಕಷ್ಟವಾಗುವುದು, ಆತಂಕ, ಗೊಂದಲ, ಹೊಟ್ಟೆ ತೊಳೆಸುವುದು, ವಾಂತಿ, ದೃಷ್ಟಿ ಮಂಜಾಗುವುದು, ಅನಿಯಂತ್ರಿತ ಎದೆ ಬಡಿತ ಮುಂತಾದ ಲಕ್ಷಣಗಳು ಕಂಡುಬರುತ್ತವೆ. ಒಂದು ಅಂದಾಜಿನ ಪ್ರಕಾರ, ಸುಮಾರು ಶೇ. ೪೬ರಷ್ಟು ಮಂದಿಗೆ ತಮಗೆ ರಕ್ತದೊತ್ತಡ ಇರುವ ವಿಷಯವೇ ತಿಳಿದಿರುವುದಿಲ್ಲ. ಹಾಗಾಗಿ ಇಂಥ ಯಾವುದೇ ಲಕ್ಷಣಗಳು ಕಾಣುವವರೆಗೆ ಕಾಯದೆ, ನಿಯಮಮಿತವಾಗಿ ಬಿಪಿ ಪರೀಕ್ಷಿಸಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: Swati Maliwal: ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆಆರೋಪಿ ಕೇಜ್ರಿವಾಲ್‌ ಜೊತೆ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ

ಕಡಿಮೆ ಮಾಡುವುದು ಹೇಗೆ?

ಇದನ್ನು ಸಂಪೂರ್ಣ ಹತೋಟಿಯಲ್ಲಿ ಇರಿಸಿಕೊಳ್ಳಲು ಸಾಧ್ಯವಿದೆ. ಇದಕ್ಕಾಗಿ ಜೀವನಶೈಲಿಯಲ್ಲಿ ಕೆಲವು ಅಗತ್ಯ ಬದಲಾವಣೆಗಳನ್ನು ಮಾಡಿಕೊಂಡರೆ, ರಕ್ತದ ಏರೊತ್ತಡವನ್ನು ನಿಯಂತ್ರಣಕ್ಕೆ ತರಬಹುದು. ಮೊದಲಿಗೆ ಸೋಡಿಯಂ ಸೇವನೆಯ ಪ್ರಮಾಣವನ್ನು ಕಡಿಮೆ ಮಾಡಬೇಕು. ಅಂದರೆ ಉಪ್ಪು ಹೆಚ್ಚು ತಿನ್ನಬೇಡಿ. ಇದು ನೇರವಾಗಿ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕಾಗಿ ಯಾವುದೇ ಸಂಸ್ಕರಿತ ಆಹಾರಗಳು ಬೇಡ. ಸಾಫ್ಟ್‌ ಡ್ರಿಂಕ್‌, ಚಿಪ್ಸ್‌, ಪ್ಯಾಕೆಟ್‌ ಅಥವಾ ಕ್ಯಾನ್ಡ್‌ ಆಹಾರಗಳಲ್ಲಿ ಉಪ್ಪಿನ ಅಂಶ ಹೆಚ್ಚಿರುತ್ತದೆ. ಪ್ರಿಸರ್ವೇಟಿವ್‌ ಬಳಸಿದ ಬಹುತೇಕ ಆಹಾರಗಳಲ್ಲಿ ಸೋಡಿಯಂ ಪ್ರಮಾಣ ಹೆಚ್ಚು. ಹಾಗಾಗಿ ತಾಜಾ ಆಹಾರಗಳು, ಸತ್ವಭರಿತ ಆಹಾರಗಳ ಸೇವನೆಯತ್ತ ಗಮನ ನೀಡಿ. ಆಹಾರದ ರುಚಿ ಹೆಚ್ಚಿಸುವುದಕ್ಕೆ ಉಪ್ಪು ಹೆಚ್ಚು ಉಪಯೋಗಿಸುವ ಬದಲು ಹರ್ಬ್‌ಗಳ ಬಳಕೆಯನ್ನು ಹೆಚ್ಚಿಸಿ.

ಎಂಥಾ ಕೊಬ್ಬು?

ನಿತ್ಯ ತಿನ್ನುವ ಕೊಬ್ಬಿನ ಪ್ರಮಾಣ ಮತ್ತು ಗುಣಮಟ್ಟದ ಬಗ್ಗೆಯೂ ಗಮನ ಅಗತ್ಯ. ಸ್ಯಾಚುರೇಟೆಡ್ ಕೊಬ್ಬು ಹೆಚ್ಚಿರುವ ಆಹಾರಗಳ ಬದಲಿಗೆ ಆರೋಗ್ಯಕರ ಕೊಬ್ಬಿರುವ ಎಣ್ಣೆ ಬೀಜಗಳು, ಅವಕಾಡೊ ಮುಂತಾದವು ದೇಹಕ್ಕೆ ಹಿತವಾಗುತ್ತವೆ. ಬಳಸುವ ಎಣ್ಣೆಯ ಬಗ್ಗೆಯೂ ಸರಿಯಾದ ಅರಿವು ಅಗತ್ಯ. ಕರಿದ ತಿಂಡಿಗಳನ್ನು ದೂರ ಮಾಡಿದಷ್ಟೂ ಒಳ್ಳೆಯದು. ಬದಲಿಗೆ, ಋತುಮಾನಕ್ಕೆ ದೊರೆಯುವ ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚಾಗಿ ಆಹಾರದಲ್ಲಿ ಸೇರಿಸಿಕೊಳ್ಳುವುದು ಸೂಕ್ತ.

ವ್ಯಾಯಾಮ

ಹಾಗೆನ್ನುತ್ತಿದ್ದಂತೆ ಜಿಮ್‌ನಲ್ಲಿ ಬೆವರಿಳಿಸುವುದು, ಉಸಿರುಗಟ್ಟಿ ರಸ್ತೆ ಮೇಲೆ ಓಡುವವರೇ ನೆನಪಾಗಬಹುದು. ಇಂಥವೆಲ್ಲ ಮಾತ್ರವೇ ವ್ಯಾಯಾಮವಲ್ಲ. ನಡಿಗೆ, ಸೈಕಲ್‌ ಹೊಡೆಯುವುದು, ಈಜು, ನೃತ್ಯ, ಯಾವುದೇ ಆಟಗಳು, ಯೋಗ, ಏರೋಬಿಕ್ಸ್‌ ಮುಂತಾದ ಯಾವುದೇ ದೈಹಿಕ ಚಟುವಟಿಕೆಗಳು ವಾರದಲ್ಲಿ ಕನಿಷ್ಟ ೫ ದಿನವಾದರೂ ಇರಲಿ. ದೇಹದ ತೂಕ ಹೆಚ್ಚಾಗಿದ್ದರೆ, ಅದನ್ನು ಆದ್ಯತೆಯ ಮೇರೆಗೆ ಇಳಿಸಿಕೊಳ್ಳಿ.

ತಪಾಸಣೆ

ಕಾಲಕಾಲಕ್ಕೆ ವೈದ್ಯರಲ್ಲಿ ಹೋಗಿ ರಕ್ತದೊತ್ತಡವನ್ನು ಪರೀಕ್ಷಿಸಿಕೊಳ್ಳಿ. ನಿಯಂತ್ರಣಕ್ಕೆ ಔಷಧಿ ಅಗತ್ಯವಾಗಿದ್ದರೆ, ಅದನ್ನು ಮರೆಯಬೇಡಿ. ಧೂಮಪಾನ, ಆಲ್ಕೊಹಾಲ್‌ನಂಥ ಚಟಗಳಿದ್ದರೆ, ಅವುಗಳ ಹೊರತಾಗಿ ಬದುಕುವ ಮಾರ್ಗವಿದೆ ಎಂಬುದನ್ನು ತಿಳಿಯಿರಿ. ಮಾನಸಿನ ಒತ್ತಡ ದೂರ ಮಾಡಲು ಆರೋಗ್ಯಕರ ಮಾರ್ಗಗಳತ್ತ ಗಮನ ಹರಿಸಿ.

Continue Reading
Advertisement
Prajwal Revanna Case Lawyer Devarajegowda sent to judicial custody End of police custody
ಕ್ರೈಂ40 mins ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ54 mins ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್55 mins ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ58 mins ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Bal Jeevan Bima
ಮನಿ ಗೈಡ್1 hour ago

Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

road Accident in Bengaluru mysore
ಬೆಂಗಳೂರು1 hour ago

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Swati Maliwal
ದೇಶ1 hour ago

Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Viral Video
ವೈರಲ್ ನ್ಯೂಸ್2 hours ago

Viral Video: ಅಳುತ್ತಾ ವಿದಾಯ ಹೇಳಿದ್ದೇಕೆ ಪಾಕಿಸ್ತಾನದ ಅತ್ಯಂತ ಕಿರಿಯ ಯೂಟ್ಯೂಬರ್?

1 year of CM Siddaramaiah government BJP prepares chargesheet and Congress gears up for counter
ರಾಜಕೀಯ2 hours ago

CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

RCB vs CSK
ಕ್ರೀಡೆ2 hours ago

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ8 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌