World Suicide Prevention Day | ಮನವ ತಿನ್ನುವ ಚಿಂತೆ ಬದುಕು ಮುಗಿಸದಿರಲು ಹೀಗೆ ಮಾಡಿ Vistara News

ಪ್ರಮುಖ ಸುದ್ದಿ

World Suicide Prevention Day | ಮನವ ತಿನ್ನುವ ಚಿಂತೆ ಬದುಕು ಮುಗಿಸದಿರಲು ಹೀಗೆ ಮಾಡಿ

ಇಂದು ವಿಶ್ವ ಆತ್ಮಹತ್ಯೆ ತಡೆ ದಿನ (World Suicide Prevention Day).ʻಕೃತಿಯ ಮೂಲಕ ಭರವಸೆʼ ಹುಟ್ಟಿಸಬೇಕೆಂಬುದು ಈ ವರ್ಷದ ಆತ್ಮಹತ್ಯೆ ತಡೆ ದಿನದ ಧ್ಯೇಯವಾಗಿದೆ.

VISTARANEWS.COM


on

World Suicide Prevention Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಾಗತಿಕ ಆತ್ಮಹತ್ಯೆ ತಡೆ ದಿನ (ಸೆಪ್ಟೆಂಬರ್‌ ೧೦) ಮೊದಲಿಗೆ ಆರಂಭವಾಗಿದ್ದು ೨೦೦೩ರಲ್ಲಿ. ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ ಆತ್ಮಹತ್ಯೆ ತಡೆಗೆ ಇರುವ ಅಂತಾರಾಷ್ಟ್ರೀಯ ಸಂಸ್ಥೆ ಈ ದಿನದ ಆಚರಣೆಯನ್ನು ಆರಂಭಿಸಿದ್ದು, ಆತ್ಮಹತ್ಯೆ ತಡೆಯುವ ಮತ್ತು ಅಂಥ ಮನಸ್ಥಿತಿ ಇರುವವರಿಗೆ ಚಿಕಿತ್ಸೆ ನೀಡುವ ಬಗ್ಗೆ ವಿಶ್ವದೆಲ್ಲೆಡೆ ಅರಿವು ಮೂಡಿಸುವುದು ಇದರ ಉದ್ದೇಶ.

ಹುಟ್ಟಿದ ಪ್ರತಿಯೊಬ್ಬರಿಗೂ ಮಗ, ಮಗಳು, ಸೋದರ, ಸೋದರಿ, ಅಪ್ಪ, ಅಮ್ಮ, ಸ್ನೇಹಿತ, ಗೆಳತಿ…ಹೀಗೆ ಒಂದಿಲ್ಲೊಂದು ನಂಟು ಇರಲೇಬೇಕು. ಯಾರಾದರೊಬ್ಬರು ಆತ್ಮಹತ್ಯೆ ಮಾಡಿಕೊಂಡರೆಂದರೆ, ಅವರ ಸುತ್ತಲಿನ ಹಲವರನ್ನು ನೋವಿನ ಮಡುವಿಗೆ ತಳ್ಳಿದಂತಾಗುತ್ತದೆ. ಹಾಗಾಗಿ ಮಾನಸಿಕ ಸಮಸ್ಯೆಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಅಗತ್ಯವಿರುವವರಿಗೆ ಮಾನಸಿಕ ನೆರವು, ಸಾಂತ್ವನ ಒದಗಿಸಿ, ಎಲ್ಲರ ಬದುಕಿಗಾಗಿ ಸ್ವಸ್ಥ ಸಮಾಜವನ್ನು ನಿರ್ಮಿಸುವ ಮಹತ್ವದ ಉದ್ದೇಶ ಈ ಆಚರಣೆಯ ಹಿಂದಿದೆ. ʻಕೃತಿಯ ಮೂಲಕ ಭರವಸೆʼ ಹುಟ್ಟಿಸಬೇಕೆಂಬುದು ಈ ವರ್ಷದ ಆತ್ಮಹತ್ಯೆ ತಡೆ ದಿನದ ಧ್ಯೇಯ.

ಇದನ್ನೂ ಓದಿ | Sunday Read | ಸಾನಿಚರ್‌ ಮೌಗ್ಲಿಯಾದನೇ? ಇದು ʼಜಂಗಲ್‌ ಬುಕ್‌ʼ ಹಿಂದಿನ ಸ್ಫೂರ್ತಿ ಕಥೆ!

World Suicide Prevention Day

ಕಾರಣವೇನು?
ಹೆಚ್ಚಿನ ಆತ್ಮಹತ್ಯೆಗಳು ನಡೆಯುವುದು ಖಿನ್ನತೆ, ಒತ್ತಡ, ಮಾದಕ ದ್ರವ್ಯ ಬಳಕೆ ಇನ್ನಿತರ ಮಾನಸಿಕ ಕಾರಣಗಳಿಗಾಗಿ. ಒಂದಿಷ್ಟು ಒತ್ತಡ, ದುಗುಡಗಳು ಎಲ್ಲರ ಬದುಕಿನಲ್ಲೂ ಇರುವಂಥದ್ದೇ. ಆದರೆ ಅದನ್ನೂ ಮೀರಿ ಸಮಸ್ಯೆಗಳಿದ್ದರೆ ಅಥವಾ ಇರುವಂಥ ಸಮಸ್ಯೆಗಳನ್ನು ವ್ಯಕ್ತಿಗೆ ನಿಭಾಯಿಸಲಾಗದೆ (ಉದಾ, ನಿತ್ಯದ ಶಾಲೆಯ ಅಥವಾ ಕಚೇರಿಯ ಕೆಲಸಗಳನ್ನು ಸೂಕ್ತವಾಗಿ ನಿಭಾಯಿಸಲಾಗದಷ್ಟು ಸಮಸ್ಯೆಗಳು) ಇದ್ದರೆ, ಅಂಥವರಿಗೆ ಮಾನಸಿಕ ತಜ್ಞರ ನೆರವು ಅಗತ್ಯ.

ಏನು ಮಾಡಬಹುದು?
ಸಂವಹನ: ಇದು ಅಗತ್ಯವಾಗಿ ಬೇಕೇಬೇಕು. ನಂಬಿಕೆ ಇರುವಂಥ ಯಾವುದಾದರೂ ಒಂದು ವ್ಯಕ್ತಿ (ಗೆಳೆಯ, ಶಿಕ್ಷಕ, ಕುಟುಂಬದ ಯಾರಾದರೂ, ವೈದ್ಯರು…) ಜೊತೆಗೆ ಮಾನಸಿಕ ತುಮುಲದ ವಿಷಯವನ್ನು ಹಂಚಿಕೊಳ್ಳುವುದು ಅಗತ್ಯ. ಎಲ್ಲವನ್ನೂ ಮನಸ್ಸಿನಲ್ಲೇ ಇಟ್ಟುಕೊಂಡು ಬೆಟ್ಟದಂತೆ ಭಾರ ಮಾಡಿಕೊಳ್ಳುವುದು ಸರಿಯಲ್ಲ.

ಸಮಯ ಕೊಡಿ: ಅತೀವ ಬೇಸರ, ಖಿನ್ನತೆಯಂಥ ಲಕ್ಷಣಗಳಿದ್ದರೆ ನಮ್ಮ ಅಗತ್ಯಗಳಿಗೆ ಮೊದಲು ಆದ್ಯತೆ ನೀಡಬೇಕು. ನಮಗೇನಿಷ್ಟ? ಪ್ರವಾಸ ಹೋಗುವುದು, ಸಂಗೀತ ಕೇಳುವುದು, ಪುಸ್ತಕ ಓದುವುದು, ಮಿತ್ರರೊಂದಿಗೆ ಹರಟೆ, ಸಿನೆಮಾ ನೋಡುವುದು… ಹೀಗೆ ನಮಗೆ ನೆಮ್ಮದಿ ನೀಡುವ ಹವ್ಯಾಸ ಯಾವುದೋ ಅದಕ್ಕೆ ಒತ್ತು ನೀಡುವುದು ಮುಖ್ಯ.

World Suicide Prevention Day

ಚಟುವಟಿಕೆ ಬೇಕು: ಕೆಲಸಕ್ಕೆ ಬಾರದ ಯೋಚನೆಗಳಿಗೆ ಶಕ್ತಿ ವ್ಯಯಿಸುವುದಲ್ಲ. ಬದಲಿಗೆ, ಸೂಕ್ತ ದಿಕ್ಕಿನಲ್ಲಿ ಶಕ್ತಿಯನ್ನು ತೊಡಗಿಸುವುದು ಮುಖ್ಯ. ದಿನಕ್ಕೆ ಒಂದಿಷ್ಟು ಹೊತ್ತನ್ನು ವಾಕಿಂಗ್‌, ಸೈಕಲ್‌ ಹೊಡೆಯುವುದು, ನೃತ್ಯ, ವ್ಯಾಯಾಮ, ಯೋಗ, ಧ್ಯಾನದಂಥ ಇಷ್ಟದ ಚಟುವಟಿಕೆಗಳಿಗೆ ಮೀಸಲಿಡುವುದು ಸರಿ. ಅಂತೂ ದೇಹ ಮತ್ತು ಮನಸ್ಸಿಗೆ ಶಿಸ್ತುಬದ್ಧ ಚಟುವಟಿಕೆ ಬೇಕು.

ಆಹಾರ ಸರಿಯಿರಲಿ: ಸಮತೋಲಿತ ಆಹಾರದಿಂದ ಶರೀರ ಮಾತ್ರವಲ್ಲ, ಮನಸ್ಸೂ ಉಲ್ಲಾಸದಿಂದ ಇರುತ್ತದೆ. ಜಂಕ್‌ಗಳನ್ನು ಹೊಟ್ಟೆಗೆ ದೂಡುತ್ತಿದ್ದರೆ, ಮನಸ್ಸಿನಲ್ಲೂ ಬೇಡದ ಗುಜರಿ ಆಲೋಚನೆಗಳೇ ಬರಬಹುದು. ಸೌಂಡ್‌ ಮೈಂಡ್‌ ಇನ್‌ ಎ ಸೌಂಡ್‌ ಬಾಡಿ… ನೆನಪಿರಲಿ.

ನೆರವು ಪಡೆಯಿರಿ: ಇಷ್ಟೆಲ್ಲಾ ಪ್ರಯತ್ನಗಳೆಲ್ಲಾ ಮಾಡಿಯೂ ಮನಸ್ಸಿಗೆ ನೆಮ್ಮದಿಯಿಲ್ಲವೇ? ಬೇಡದ ಆಲೋಚನೆಗಳು ಬರುತ್ತಿವೆಯೇ? ಮಾನಸಿಕ ತಜ್ಞರ ನೆರವು ಬೇಕೇಬೇಕು. ಮಾನಸಿಕ ಚಿಕಿತ್ಸಕರನ್ನು ನೋಡಲು ಯಾವುದೇ ಹಿಂಜರಿಕೆಯ ಅಗತ್ಯವಿಲ್ಲ. ದೇಹದ ಇತರೆಲ್ಲಾ ಭಾಗಗಳಿಗೆ ಚಿಕಿತ್ಸೆ ಪಡೆಯುವಂತೆ, ಕೆಲವೊಮ್ಮೆ ಮನಸ್ಸಿಗೂ ಪಡೆಯಬೇಕಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ | Brand story | ಅಂದು ರಿಕ್ಷಾ ಚಾಲಕ, ಇಂದು ಬಿಸಿನೆಸ್‌ 500 ಕೋಟಿ ವಾರ್ಷಿಕ, ಅವರೇ ಬಿಂದು ಜೀರಾ ಮಾಲೀಕ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BY Vijayendra: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ನಡ್ಡಾ ಭೇಟಿಯಾದ ವಿಜಯೇಂದ್ರ; ಏನೇನು ಚರ್ಚೆ?

BY Vijayendra: ಜೆ.ಪಿ. ನಡ್ಡಾ ಅವರ ಜನ್ಮದಿನದಂದೇ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಇದೇ ವೇಳೆ ಅವರು ಜೆ.ಪಿ. ನಡ್ಡಾ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರು.

VISTARANEWS.COM


on

JP Nadda And BY Vijayendra
Koo

ನವದೆಹಲಿ/ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ (BY Vijayendra) ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲೂ, ಜೆ.ಪಿ. ನಡ್ಡಾ ಅವರ ಜನ್ಮದಿನದಂದೇ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದು, ಇದೇ ವೇಳೆ ರಾಜ್ಯದ ಹಲವು ವಿಚಾರಗಳ ಕುರಿತು ಚರ್ಚಿಸಲಾಗಿದೆ. ಹಾಗೆಯೇ, ನಡ್ಡಾ ಅವರಿಗೆ ವಿಜಯೇಂದ್ರ ಅವರು ಜನ್ಮದಿನದ ಶುಭಾಶಯಗಳನ್ನೂ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಬಳಿಕ ಬಿ.ವೈ.ವಿಜಯೇಂದ್ರ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಗೂ ಫೋಟೊಗಳನ್ನು ಹಂಚಿಕೊಂಡಿದ್ದಾರೆ. “ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಜನ್ಮದಿನವಾದ ಇಂದೇ (ಡಿಸೆಂಬರ್‌ 2) ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿದೆ. ಆಶೀರ್ವಾದ ಪಡೆದು, ಶುಭಾಶಯ ಕೋರುವ ಅಪೂರ್ವ ಸಂದರ್ಭ ಒದಗಿ ಬಂದದ್ದು ಧನ್ಯತೆಯ ಭಾವ ಮೂಡಿಸಿತು” ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ನಡ್ಡಾ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಇಂದು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು. ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ ಜಿ.ವಿ. ಅವರು ಉಪಸ್ಥಿತರಿದ್ದರು” ಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Shivamogga News: ಶಿಕಾರಿಪುರದ ಕಾಂಗ್ರೆಸ್ ಪುಡಾರಿಗಳ ಆರ್ಭಟ ಶೀಘ್ರವೇ ನಿಲ್ಲಲಿದೆ: ಬಿ.ವೈ. ವಿಜಯೇಂದ್ರ‌

ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್‌ ನವೆಂಬರ್‌ 10ರಂದು ಆಯ್ಕೆ ಮಾಡಿದ್ದು, ನವೆಂಬರ್‌ 15ರಂದು ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ ಮಾಡಿದ್ದಾರೆ. ರಾಜ್ಯಾಧ್ಯಕ್ಷರಾದ ಬಳಿಕ ವಿಜಯೇಂದ್ರ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇದರ ಬೆನ್ನಲ್ಲೇ, ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

ಕಾಫಿನಾಡಲ್ಲಿ ವಕೀಲರ ವಿರುದ್ಧ ಪೊಲೀಸರ ಪ್ರತಿಭಟನೆ; ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಪೊಲೀಸರ ವಿರುದ್ಧವೇ ಪೊಲೀಸರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕಾಫಿ ನಾಡಿನ ಪೊಲೀಸರು, ವಕೀಲರ ಸಂಘರ್ಷದ ಬಗ್ಗೆ ರಾಜ್ಯ ಸರ್ಕಾರ ಮೌನ ವಹಿಸಿದೆ.

VISTARANEWS.COM


on

police protest in Chikkamagaluru
Koo

ಚಿಕ್ಕಮಗಳೂರು: ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣದಲ್ಲಿ 6 ಪೊಲೀಸರನ್ನು ಅಮಾನತು ಮಾಡಿರುವುದಕ್ಕೆ ಕಾಫಿನಾಡಿನ ಪೊಲೀಸರು ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರಠಾಣೆ ಮುಂಭಾಗ ಶನಿವಾರ ರಾತ್ರಿ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ ಪೊಲೀಸರು (Police protest), ಸಹಪಾಠಿಗಳನ್ನು ಬಂಧಿಸಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್‌ ಹಾಕದ ಕಾರಣಕ್ಕೆ ಪ್ರೀತಮ್‌ ಎಂಬ ಯುವ ವಕೀಲನ ಮೇಲೆ ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಪ್ರಕರಣದಲ್ಲಿ ಪಿಎಸ್‌ಐ, ಎಎಸ್‌ಐ, ಮುಖ್ಯ ಪೇದೆ ಹಾಗೂ ಮೂವರು ಪೇದೆಗಳು ಸೇರಿ ಒಟ್ಟು ಆರು ಪೊಲೀಸರನ್ನು ಎಸ್‌ಪಿ ವಿಕ್ರಮ್‌ ಅಮಟೆ ಅಮಾನತು ಮಾಡಿದ್ದಾರೆ. ಜತೆಗೆ ಆರು ಮಂದಿ ವಿರುದ್ಧ ಎಫ್‌ಐಅರ್‌ ದಾಖಲಾಗಿದೆ. ಆದ್ದರಿಂದ ಪ್ರಕರಣದಲ್ಲಿ ಸಹಪಾಠಿಗಳನ್ನು ಯಾವುದೇ ಕಾರಣಕ್ಕೂ ಬಂಧಿಸಬಾರದು, ಪೊಲೀಸರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರು ನಗರದ 6 ಠಾಣೆಗಳ ಪೊಲೀಸರು ಪ್ರತಿಭಟನೆಗೆ ಇಳಿದಿದ್ದಾರೆ.

ಇದನ್ನೂ ಓದಿ | Fake Currency : ನಕಲಿ ನೋಟು ಜಾಲದ ಮೇಲೆ NIA ದಾಳಿ; ಬಳ್ಳಾರಿಯಲ್ಲಿ ಒಬ್ಬ ಅರೆಸ್ಟ್‌

ನಗರದ 6 ಠಾಣೆಗಳ 300ಕ್ಕೂ ಹೆಚ್ಚು ಪೊಲೀಸರು ಕೆಲಸ ನಿಲ್ಲಿಸಿ ಪ್ರತಿಭಟನೆಗೆ ಆಗಮಿಸಿದ್ದು, ನಾವ್ಯಾರು ಕೆಲಸ ಮಾಡಲ್ಲ. ಪೊಲೀಸರಿಗೆ ರಕ್ಷಣೆ ಇಲ್ಲ, ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ‌. ಒಂದು ವೇಳೆ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಸ್‌ಪಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ

ಅಣ್ಣಾಮಲೈ ಇದ್ದಿದ್ದರೆ ಚೆನ್ನಾಗಿರುತ್ತಿತ್ತು, ಅವರಿಗೆ ಪೋಲಿಸ್ ಸಿಬ್ಬಂದಿ ಬಗ್ಗೆ ಕಾಳಜಿ ಇತ್ತು. ಆದರೆ, ರಾಜ್ಯ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೈ ಮುಗಿದು ಕೇಳಿಕೊಳ್ತೀವಿ, ದಯಮಾಡಿ ನಮ್ಮ ಸಿಬ್ಬಂದಿಯನ್ನು ಬಂಧಿಸಬೇಡಿ ಎಂದು ಚಿಕ್ಕಮಗಳೂರು ಎಸ್‌ಪಿ ಮುಂದೆ ಕಣ್ಣೀರಿಟ್ಟರು.

ಕುಟುಂಬಗಳಿಗಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ, ನಾಳೆ ನಮಗೆ ಏನಾದ್ರು ಆದ್ರೆ ಜವಾಬ್ದಾರಿ ಯಾರು? ಪೊಲೀಸರಿಗೇ ರಕ್ಷಣೆ ಇಲ್ಲವೆಂದರೆ ಏನು ಮಾಡಬೇಕು, ಉಸ್ತುವಾರಿ ಸಚಿವರು ನಾಪತ್ತೆಯಾಗಿದ್ದಾರೆ. ಗೃಹ ಸಚಿವ ಪರಮೇಶ್ವರ್ ಕೂಡ ಮೌನ ವಹಿಸಿದ್ದಾರೆ ಎಂದು ಪೊಲೀಸರು ಅಸಮಾಧಾನ ಹೊರಹಾಕಿದ್ದಾರೆ.

ಕಡೂರು- ಮಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ

ಪೊಲೀಸರನ್ನು ಬಂಧಿಸದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಸಿಬ್ಬಂದಿ, ಚಿಕ್ಕಮಗಳೂರಿನಲ್ಲಿ ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಘಟನೆಯಿಂದಾಗಿ ಸಂಚಾರ ದಟ್ಟಣೆ ಉಂಟಾಯಿತು.

ಇದನ್ನೂ ಓದಿ | Pro Pak Slogan: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ

ಚಿಕ್ಕಮಗಳೂರು ಎಸ್ಪಿ ಮನವಿಗೂ ಬಗ್ಗದ ಸಿಬ್ಬಂದಿ, 6 ಜನರನ್ನು ಅಮಾನತು ಮಾಡಿದ್ದೀರಿ ಸಾಕು, ಆದರೆ ಅವರನ್ನು ಬಂಧಿಸುವಂತಿಲ್ಲ ಎಂದು ಆಗ್ರಹಿಸಿದರು. ನಗರದ ಹನುಮಂತಪ್ಪ ವೃತ್ತದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಭೇಟಿ ನೀಡಿ ಪ್ರತಿಭಟನಾನಿರತರ ಜತೆ ಮಾತುಕತೆ ನಡೆಸುತ್ತಿದ್ದಾರೆ.

Continue Reading

ಕ್ರೈಂ

ಪ್ರೇಯಸಿಯನ್ನು ಕೊಂದು, ಆಕೆಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ ಇಟ್ಟ ಯುವಕ

ತಮಿಳುನಾಡಿನಲ್ಲಿ 20 ವರ್ಷದ ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಇದಾದ ಬಳಿಕ ಆಕೆಯ ಶವದ ಫೊಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಅಪ್‌ಡೇಟ್‌ ಮಾಡಿ ವಿಕೃತಿ ಮೆರೆದಿದ್ದಾನೆ.

VISTARANEWS.COM


on

Man Kills Girlfriend
Koo

ಚೆನ್ನೈ: ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ, ಮನೆಯಲ್ಲಿ ಯಾವುದೇ ಸಂಭ್ರಮದ ಕಾರ್ಯಕ್ರಮಗಳು ನಡೆದಾಗ, ತುಂಬ ದಿನಗಳ ಬಳಿಕ ಗೆಳೆಯ ಅಥವಾ ಗೆಳತಿ ಸಿಕ್ಕಾಗ, ಗೆಳೆಯ, ಗೆಳತಿ ಸೇರಿ ಆತ್ಮೀಯರ ಬರ್ತ್‌ಡೇ ಇದ್ದಾಗ ಅವರ ಫೋಟೊಗಳನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಅಪ್‌ಡೇಟ್‌ (WhatsApp Status) ಮಾಡುತ್ತೇವೆ. ವಿಶೇಷ ತಿನಿಸು ತಿಂದ ಖುಷಿಯನ್ನೂ ವಾಟ್ಸ್‌ಆ್ಯಪ್ ಸ್ಟೇಟಸ್‌ ಮೂಲಕ ಹಂಚಿಕೊಳ್ಳುವವರು ಇದ್ದಾರೆ. ಆದರೆ, ತಮಿಳುನಾಡಿನಲ್ಲಿ (Tamil Nadu) ವ್ಯಕ್ತಿಯೊಬ್ಬ, ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ಶವದ ಫೋಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಅಪ್‌ಡೇಟ್‌ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ.

ಹೌದು, ತಮಿಳುನಾಡಿನ ಚೆನ್ನೈನಲ್ಲಿ 20 ವರ್ಷದ ಆಶಿಕ್‌ ಎಂಬ ಯುವಕನು ತನ್ನ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ. ಹೋಟೆಲ್‌ನಲ್ಲಿ ಆಕೆಯನ್ನು ಕೊಂದ ಬಳಿಕ, ಶವದ ಫೋಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ ಇಟ್ಟಿದ್ದಾನೆ. ಯುವತಿಯ ಗೆಳೆತಿಯರು ವಾಟ್ಸ್‌ಆ್ಯಪ್ ಸ್ಟೇಟಸ್‌ ನೋಡಿ, ಗಾಬರಿಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಹೋಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಪೊಲೀಸರು ಆಶಿಕ್‌ನನ್ನು ಬಂಧಿಸಿದ್ದಾರೆ.

Accident

ಹೋಟೆಲ್‌ನಲ್ಲಿ ನಡೆದಿದ್ದೇನು?

ದ್ವಿತೀಯ ವರ್ಷದ ನರ್ಸಿಂಗ್‌ ಅಧ್ಯಯನ ಮಾಡುತ್ತಿರುವ ಯುವತಿ ಹಾಗೂ ಆಶಿಕ್‌ ಕೆಲ ತಿಂಗಳಿಂದ ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳಿಂದ ಕಾಲೇಜಿಗೆ ಹೋಗದ ಯುವತಿಯು ಆಶಿಕ್‌ ಜತೆ ಹೋಟೆಲ್‌ನಲ್ಲಿ ತಂಗಿದ್ದಳು. ಯುವತಿಯ ಗೆಳತಿಯರು ಗಾಬರಿಗೊಂಡು ಪರಿಶೀಲಿಸಿದಾಗ, ಆಕೆ ಆಶಿಕ್‌ ಜತೆ ಚೆನ್ನೈ ಹೋಟೆಲ್‌ನಲ್ಲಿರುವುದು ಗೊತ್ತಾಗಿತ್ತು. ಬಾಯ್‌ಫ್ರೆಂಡ್‌ ಜತೆ ಇದ್ದಾಳೆ ಎಂದು ಅವರೂ ಸುಮ್ಮನಾಗಿದ್ದರು. ಆದರೆ, ಆಶಿಕ್‌ ಹೋಟೆಲ್‌ನಲ್ಲಿ ಯುವತಿಯನ್ನು ಕೊಲೆ ಮಾಡಿದ್ದಾನೆ. ಯಾವಾಗ ಯುವತಿಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಕಾಣಿಸಿತೋ, ಯುವತಿಯರು ಗಾಬರಿಗೊಂಡಿದ್ದಾರೆ.

ಇದನ್ನೂ ಓದಿ: Murder Case : ಪ್ರೇಯಸಿಯ ಕತ್ತು ಸೀಳಿದ ಪ್ರೇಮಿ; 4 ವರ್ಷದ ಪ್ರೀತಿ ಕೊಲೆಯಲ್ಲಿ ಅಂತ್ಯ

ಆಶಿಕ್‌ ಹೇಳುವುದೇನು?

ಹೋಟೆಲ್‌ನಲ್ಲಿ ಯುವತಿ ಜತೆ ಜಗಳ ನಡೆದಿದ್ದು, ಕೋಪದಲ್ಲಿ ಕೊಲೆ ಮಾಡಿದೆ ಎಂಬುದಾಗಿ ಬಂಧಿತ ಆಶಿಕ್‌ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. “ನಾನು ಬೇರೊಂದು ಯುವತಿ ಜತೆ ಸಂಬಂಧ ಇಟ್ಟುಕೊಂಡಿದ್ದೇನೆ ಎಂದು ಆಕೆ ಆರೋಪಿಸಿದಳು. ಇದೇ ವೇಳೆ ಇಬ್ಬರ ಮಧ್ಯೆ ಜಗಳ ನಡೆಯಿತು. ಆಗ ನಾನು ಟಿ ಶರ್ಟ್‌ನಿಂದ ಆಕೆಯ ಕತ್ತು ಹಿಸುಕಿದೆ” ಎಂಬುದಾಗಿ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

Tsunami Warning: ಫಿಲಿಪೈನ್ಸ್‌ನಲ್ಲಿ ಕಳೆದ ಒಂದು ತಿಂಗಳಲ್ಲಿ ಸಂಭವಿಸುತ್ತಿರುವ ಎರಡನೇ ಭೂಕಂಪ ಇದಾಗಿದೆ. ಕಳೆದ ತಿಂಗಳ ಆರಂಭದಲ್ಲಿ ಕೂಡ ಭೂಕಂಪ ಸಂಭವಿಸಿ 8 ಜನ ಮೃತಪಟ್ಟಿದ್ದರು.

VISTARANEWS.COM


on

Tsunami
Koo

ಮನಿಲಾ: ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದೆ. ಫಿಲಿಪೈನ್ಸ್‌ನ ಮಿಂಡಾನಾವೋ (Mindanao) ಎಂಬಲ್ಲಿ ಶನಿವಾರ (ನವೆಂಬರ್‌ 3) ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು, ದೇಶಾದ್ಯಂತ ಆತಂಕ ಮನೆಮಾಡಿದೆ. ರಿಕ್ಟರ್‌ ಮಾಪನದಲ್ಲಿ 7.6 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುರೋಪಿಯನ್‌ ಮೆಡಿಟೇರಿಯನ್‌ ಸೈಸ್ಮೊಲಾಜಿಕಲ್‌ ಸೆಂಟರ್‌ (EMSC) ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಅಮೆರಿಕವು ಸುನಾಮಿ ಅಪ್ಪಳಿಸುವ ಎಚ್ಚರಿಕೆ (Tsunami Warning) ನೀಡಿದೆ.

ಸುಮಾರು 63 ಕಿಲೋಮೀಟರ್‌ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಮಾಹಿತಿ ನೀಡಿದೆ. “ಭೂಕಂಪವು ಪ್ರಬಲವಾಗಿದೆ. ಇದು ದೇಶದಲ್ಲಿ ಸುನಾಮಿಗೆ ಕಾರಣವಾಗಬಹುದು. ದೊಡ್ಡ ದೊಡ್ಡ ಅಲೆಗಳು ಅಪ್ಪಳಿಸಬಹುದು” ಎಂಬುದಾಗಿ ಫಿಲಿಪೈನ್ಸ್‌ಗೆ ಅಮೆರಿಕ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಫಿಲಿಪೈನ್ಸ್‌ನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಭೂಕಂಪದಿಂದ ಯಾವುದೇ ಸಾವು-ನೋವಿನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ತಿಂಗಳಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ

ಕಳೆದ ಒಂದು ತಿಂಗಳಲ್ಲಿ ಫಿಲಿಪೈನ್ಸ್‌ನಲ್ಲಿ ಎರಡನೇ ಬಾರಿ ಭೂಕಂಪ ಸಂಭವಿಸಿದೆ. ನವೆಂಬರ್‌ ತಿಂಗಳ ಆರಂಭದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಎಂಟು ಜನ ಮೃತಪಟ್ಟಿದ್ದರು. ಸಾರಂಗಾನಿ, ಸೌತ್‌ ಕೊಟಾಬಟೊ ಹಾಗೂ ಡಾವಾವೋ ಪ್ರಾಂತ್ಯಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. 13ಕ್ಕೂ ಅಧಿಕ ಜನ ಗಾಯಗೊಂಡಿದ್ದರೆ, 50 ಅಧಿಕ ಮನೆಗಳು ಕುಸಿದಿದ್ದವು. ಇನ್ನು ಶನಿವಾರ ಸಂಜೆ ಭೂಕಂಪ ಸಂಭವಿಸಿದ ಕಾರಣ ಜಪಾನ್‌ನಲ್ಲೂ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Earthquake: ಕಾಶ್ಮೀರದಲ್ಲಿ ಪ್ರಬಲ ಭೂಕಂಪ; 24 ಗಂಟೆಯಲ್ಲಿ 3 ದುರಂತ

ನೇಪಾಳದಲ್ಲಿ 157 ಜನ ಸಾವು

ನೇಪಾಳದಲ್ಲೂ ಇತ್ತೀಚೆಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 157 ಜನ ಮೃತಪಟ್ಟಿದ್ದು, 250ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿದ್ದು, ಜನರ ರಕ್ಷಣೆಗೆ ಹರಸಾಹಸ ಮಾಡಬೇಕಾಗಿತ್ತು. ಮಹಿಳೆಯರು, ಮಕ್ಕಳು, ಹಿರಿಯರು ಭೂಕಂಪಕ್ಕೆ ಬಲಿಯಾಗಿದ್ದರು. ಅಷ್ಟಕ್ಕೂ, ನೇಪಾಳದಲ್ಲಿ ಕಳೆದ ಮೂರು ದಿನಗಳಲ್ಲಿ ಮೂರ್ನಾಲ್ಕು ಬಾರಿ ಭೂಮಿ ಕಂಪಿಸಿದ ಕಾರಣ ಜನರಲ್ಲಿ ಭಯ ಮನೆಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
JP Nadda And BY Vijayendra
ಕರ್ನಾಟಕ7 mins ago

BY Vijayendra: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ನಡ್ಡಾ ಭೇಟಿಯಾದ ವಿಜಯೇಂದ್ರ; ಏನೇನು ಚರ್ಚೆ?

police protest in Chikkamagaluru
ಪ್ರಮುಖ ಸುದ್ದಿ34 mins ago

ಕಾಫಿನಾಡಲ್ಲಿ ವಕೀಲರ ವಿರುದ್ಧ ಪೊಲೀಸರ ಪ್ರತಿಭಟನೆ; ಸಾಮೂಹಿಕ ರಾಜೀನಾಮೆ ಎಚ್ಚರಿಕೆ

Man Kills Girlfriend
ಕ್ರೈಂ1 hour ago

ಪ್ರೇಯಸಿಯನ್ನು ಕೊಂದು, ಆಕೆಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ ಇಟ್ಟ ಯುವಕ

Pro Pak Slogans
ಕರ್ನಾಟಕ2 hours ago

Pro Pak Slogan: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ

home
ಧಾರ್ಮಿಕ2 hours ago

Vastu Tips: ಇದು ಬರೀ ಬೆಳಕಲ್ಲ… ಅದೃಷ್ಟಕ್ಕಾಗಿ ವಾಸ್ತು ಪ್ರಕಾರ ಮನೆಯನ್ನು ಈ ರೀತಿ ಬೆಳಗಿ

december
ಮನಿ-ಗೈಡ್2 hours ago

Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

Tsunami
ಪ್ರಮುಖ ಸುದ್ದಿ2 hours ago

Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ABD Villiars
ಕ್ರಿಕೆಟ್2 hours ago

AB de Villiers : ನನ್ನ ಹೃದಯ ಆರ್​​ಸಿಬಿಯಲ್ಲೇ ಇದೆ ಎಂದ ಮಿಸ್ಟರ್​ 360

Dr Sankara Guha Dwarakanath
ಬೆಂಗಳೂರು2 hours ago

ಬ್ಯಾಂಕ್‌ ಹಗರಣಗಳ ಸಿಬಿಐ ತನಿಖೆ; ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದ ಡಾ. ಶಂಕರ್ ಗುಹಾ ದ್ವಾರಕನಾಥ್

Rohit Sharma1
ಕ್ರಿಕೆಟ್3 hours ago

Team India : ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದು ಯಾಕೆ? ದ್ರಾವಿಡ್, ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Cockroaches bite baby born 2 days ago in vanivilas hospital
ಆರೋಗ್ಯ6 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ1 day ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ1 day ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ2 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ2 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ5 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

ಟ್ರೆಂಡಿಂಗ್‌