PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ - Vistara News

Lok Sabha Election 2024

PM Narendra Modi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ; ಕರ್ನಾಟಕದಲ್ಲಿ ಶಿಕ್ಷಣ ನೀತಿಯಲ್ಲೂ ರಾಜಕೀಯ: ಮೋದಿ ಕಿಡಿ

PM Narendra Modi: ಕರ್ನಾಟಕ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಮಾಡಿದ್ದು ವೋಟ್‌ ಬ್ಯಾಂಕ್ ರಾಜಕೀಯವಾಗಿದೆ. ಕರ್ನಾಟಕ ಯುವಕರು, ವಿದ್ಯಾರ್ಥಿಗಳ ವಿಚಾರದಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ ನಡೆದಿದೆ. ಕರ್ನಾಟಕದ ಆರೋಗ್ಯ ಹಾಗೂ ನೀರಾವರಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಪಾಲಿಟಿಕ್ಸ್ ಮಾಡಲಾಗಿದೆ. ಭಗವಾನ್‌ ಬಸವೇಶ್ವರರ ನಾಡಿನಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾದ ರಾಜಕೀಯ ನಡೆಯುತ್ತಿದೆ. ಅತಿ ದೊಡ್ಡ ಪಾಪದ ಕೆಲಸದಲ್ಲಿ ಕಾಂಗ್ರೆಸ್ ತೊಡಗಿಕೊಂಡಿದೆ. ಎಸ್‌ಸಿ, ಎಸ್‌ಟಿ ಅಭಿವೃದ್ಧಿ ವಿಚಾರದಲ್ಲೂ ಕಾಂಗ್ರೆಸ್‌ ಹಗರಣ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

5 PM for 5 years if Congress comes to power says PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು (INDI Alliance) ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣದಲ್ಲೂ ರಾಜಕೀಯ

ಕರ್ನಾಟಕ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಮಾಡಿದ್ದು ವೋಟ್‌ ಬ್ಯಾಂಕ್ ರಾಜಕೀಯವಾಗಿದೆ. ಕರ್ನಾಟಕ ಯುವಕರು, ವಿದ್ಯಾರ್ಥಿಗಳ ವಿಚಾರದಲ್ಲೂ ಕಾಂಗ್ರೆಸ್‌ನಿಂದ ರಾಜಕೀಯ ನಡೆದಿದೆ. ಕರ್ನಾಟಕದ ಆರೋಗ್ಯ ಹಾಗೂ ನೀರಾವರಿ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಪಾಲಿಟಿಕ್ಸ್ ಮಾಡಲಾಗಿದೆ. ಭಗವಾನ್‌ ಬಸವೇಶ್ವರರ ನಾಡಿನಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾದ ರಾಜಕೀಯ ನಡೆಯುತ್ತಿದೆ. ಅತಿ ದೊಡ್ಡ ಪಾಪದ ಕೆಲಸದಲ್ಲಿ ಕಾಂಗ್ರೆಸ್ ತೊಡಗಿಕೊಂಡಿದೆ. ಎಸ್‌ಸಿ, ಎಸ್‌ಟಿ ಅಭಿವೃದ್ಧಿ ವಿಚಾರದಲ್ಲೂ ಕಾಂಗ್ರೆಸ್‌ ಹಗರಣ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ದೆಹಲಿಯಿಂದ 1 ರೂಪಾಯಿ ಕೊಟ್ಟರೆ ಬರೀ ಹದಿನೈದು ಪೈಸೆ ಮಾತ್ರ ತಲುಪ್ತಿತ್ತು. ಈ ವಿಷಯವನ್ನು ಕಾಂಗ್ರೆಸ್‌ನಿಂದ ಪ್ರಧಾನಿಯಾದವರೇ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನ ಎಲ್ಲ ಭ್ರಷ್ಟಾಚಾರಕ್ಕೆ ಇದೇ ಸಾಕ್ಷಿಯಾಗುತ್ತಿತ್ತು. ಇನ್ನೂ ಹುಟ್ಟದ ಮಕ್ಕಳ ಹೆಸರಲ್ಲಿ, ಸತ್ತವರ ಹೆಸರಲ್ಲೂ ಕಾಂಗ್ರೆಸ್‌ನಿಂದ ಲೂಟಿ ಮಾಡಲಾಗಿದೆ. ಯಾರೂ ಊಹಿಸದ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದವರು ಕಾಂಗ್ರೆಸಿಗರಾಗಿದ್ದಾರೆ. ಸರ್ಕಾರದ ಖಜಾನೆ ಲೂಟಿ ಮಾಡುವುದೇ ಕಾಂಗ್ರೆಸ್ ಪಕ್ಷದ ನಾಯಕರ ಗುರಿಯಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು.

ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲ

ದಾವಣಗೆರೆ: ಈ ಬಾರಿ ಕರ್ನಾಟಕದ ಜನತೆ ಕಾಂಗ್ರೆಸ್‌ನ ಪಾಪದ ಕೆಲಸಗಳಿಗೆ ತಕ್ಕ ಶಿಕ್ಷೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ (Congress Karnataka) ಪಕ್ಷವೂ ಖಾತೆ ತೆರೆಯುವುದೇ ಅನುಮಾನವಾಗಿದೆ. ಇನ್ನು ಮುಂದೆ ಕಾಂಗ್ರೆಸ್‌ನ ಲೂಟಿ ಪ್ರಕರಣಗಳು ಒಂದೊಂದಾಗಿಯೇ ಹೊರ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಾರ್ಟಿಯು ಬೇರೆ ಬೇರೆ ಲೂಟಿಯಲ್ಲಿ ತೊಡಗಿಕೊಂಡಿದೆ. ಈಗ ಒಳಗೊಳಗೆ ಯುದ್ಧ ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಲೂಟಿ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತದೆ ಎಂದು ಹೇಳಿದರು.

ಸೋಲುವ ಭೀತಿಯಿಂದ ಇವಿಎಂ ಪ್ರಸ್ತಾಪ

ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಕಿಡಿಕಾರಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ!

ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ. ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣ ನೀತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ

ಕಾಂಗ್ರೆಸ್‌ ಪಕ್ಷದವರಿಂದ ಜನಸಾಮಾನ್ಯರ ಜೀವನದಲ್ಲೂ ಆಟವಾಡಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸಹ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳ ಭವಿಷ್ಯದಲ್ಲಿಯೂ ಆಟವಾಡುತ್ತಿದೆ. ಆರೋಗ್ಯ, ನೀರಾವರಿ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಚೆಲ್ಲಾಟವಾಟುತ್ತಿದೆ. ದೇಶದ ಭವಿಷ್ಯವನ್ನು ಬರ್ಬಾದ್‌ ಮಾಡುವ ಕಾಂಗ್ರೆಸ್‌ ಪಕ್ಷವನ್ನು ನಂಬಲು ಆಗುತ್ತದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ಬಂದಾಗ ಭ್ರಷ್ಟಾಚಾರಕ್ಕೆ ಕಡಿವಾಣ

ಈ ಹಿಂದೆ ಕಾಂಗ್ರೆಸ್‌ನಿಂದ ಪ್ರಧಾನಿಯಾದವರೊಬ್ಬರು ಹೇಳಿಕೆ ಪ್ರಕಾರ, ದೇಶದಲ್ಲಿ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದು ಫಲಾನುಭವಿಗೆ ತಲುಪುವ ಹೊತ್ತಿನಲ್ಲಿ 15 ಪೈಸೆ ಆಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಸರ್ಕಾರ ಬಿಡುಗಡೆ ಮಾಡುವ 1 ರೂಪಾಯಿ ಪೂರ್ತಿಯಾಗಿ ಫಲಾನುಭವಿಯ ಖಾತೆಗೆ ಬೀಳುತ್ತಿದೆ. ಇದು ನಮ್ಮ ಭ್ರಷ್ಟಾಚಾರ ರಹಿತ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾವುದೇ ಒಬ್ಬ ತಂದೆ – ತಾಯಿ ಏನು ಯೋಚನೆ ಮಾಡುತ್ತಾರೆ? ನಾವು ದುಡಿದಿದ್ದರಲ್ಲಿ ಸ್ವಲ್ಪ ಉಳಿಕೆ ಮಾಡಿ, ನಮ್ಮ ಕಾಲಾನಂತರ ಮಕ್ಕಳಿಗೆ ಸ್ವಲ್ಪ ಆದಾಯವನ್ನು, ಆಸ್ತಿಯನ್ನು ಮಾಡಿಡಬೇಕು ಎಂದು ಚಿಂತೆ ಮಾಡುತ್ತಾರಲ್ಲವೇ? ಆದರೆ, ಕಾಂಗ್ರೆಸ್‌ ಈಗ ಆ ಆಸ್ತಿ ಮೇಲೆ ಕಣ್ಣಿಟ್ಟಿದೆ. ನೀವು ಮಾಡುವ ಆಸ್ತಿಯಲ್ಲಿ ನಿಮ್ಮ ಮಕ್ಕಳಿಗೆ 55 ಪರ್ಸೆಂಟ್‌ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವಂತೆ ನೀತಿ ನಿರೂಪಣೆ ಮಾಡಲು ಹೋಗಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಯಾವುದಾದರೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಅಲ್ಲಿ ಹೂಡಿಕೆ ಮಾಡಲು ಯಾರಾದರೂ ಮುಂದೆ ಬರುತ್ತಾರಾ? ಯಾವುದಾದರೂ ಕೈಗಾರಿಕೆಗಳು ಬರುತ್ತದೆಯೋ? ಬಂಗ್ಲೆ, ದುಡ್ಡು ಎಷ್ಟೇ ಇದ್ದರೂ ಸುರಕ್ಷತೆ ಇಲ್ಲದಿದ್ದರೆ ಹೇಗೆ? ಅದೇ ರೀತಿಯಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದ್ದಾಗ ಮೊದಲು ಏನೆಂದರು? ಸಿಲಿಂಡರ್‌ ಸ್ಫೋಟ ಎಂದು ಹೇಳಿದರು. ಕೊನೆಗೆ ಬಾಂಬ್‌ ಬ್ಲಾಸ್ಟ್‌ ಆಯಿತು ಎಂದು ಗೊತ್ತಾಗುತ್ತಿದ್ದಂತೆ, ಬ್ಯುಸಿನೆಸ್‌ ವಿರೋಧಿಗಳ ಕೃತ್ಯ ಎಂದು ಹೇಳಿದರು. ಇದು ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನೇಹಾ ಹತ್ಯೆ ಸಾಮಾನ್ಯವಲ್ಲ

ಪ್ರತಿ ತಂದೆ ತಾಯಿಯೂ ತಮ್ಮ ಮಕ್ಕಳ ಸುರಕ್ಷತೆಯನ್ನು ನೋಡುತ್ತಾರೆ. ಆದರೆ, ಶಾಲಾ -ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಪೋಷಕರು ಆತಂಕ ಪಡುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಹತ್ಯೆ ಸಾಮಾನ್ಯವಲ್ಲ. ವೋಟ್‌ ಬ್ಯಾಂಕ್‌ ಮಾಡುತ್ತಿರುವ ಕಾಂಗ್ರೆಸ್‌ನ ಆಡಳಿತಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ವೋಟ್‌ ಬ್ಯಾಂಕ್‌ ಚಿಂತೆಯಲ್ಲಿ ಕಾಂಗ್ರೆಸ್‌ ಇದೆ. ಇದು ಅತ್ಯಂತ ಅಪಾಯಕಾರಿ ಮನಃಸ್ಥಿತಿಯಾಗಿದೆ. ವಿದ್ವಂಸಕ ಸಂಘಟನೆಗಳು ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದೆ. ಹಾಗಾಗಿ ಸಂಘಟನೆಯೊಂದನ್ನು ನಾವು ನಿಷೇಧ ಮಾಡಿದ್ದೇವೆ. ಆದರೆ, ಅಂಥ ಸಂಘಟನೆಯನ್ನು ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ಸುರಕ್ಷತೆಯ ಗ್ಯಾರಂಟಿ, ವಿಕಾಸದ ಗ್ಯಾರಂಟಿ ಎಂದರೆ ಮೋದಿ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ನೀವು ಇಲ್ಲಿ ಕೊಡುವ ಪ್ರತಿಯೊಂದು ಮತವೂ ನರೇಂದ್ರ ಮೋದಿಗೆ ಸಲ್ಲುತ್ತದೆ. ನಿಮ್ಮ ಪ್ರತಿ ಮತವೂ ದೇಶದ ಅಭಿವೃದ್ಧಿಯನ್ನು ಮಾಡಲಿದೆ. ಈವರೆಗಿನ ರೆಕಾರ್ಡ್‌ ಬ್ರೇಕ್‌ ಮಾಡುವ ನಿಟ್ಟಿನಲ್ಲಿ ಈ ಬಾರಿ ನಿಮ್ಮ ಹಕ್ಕು ಚಲಾಯಿಸಿ ಎಂದು ನರೇಂದ್ರ ಮೋದಿ ಕರೆ ನೀಡಿದರು.

ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ

2014, 2019ರ ಚುನಾವಣೆಗಿಂತಲೂ ಹೆಚ್ಚಿನ ಜನ ಬೆಂಬಲ ಈ ಬಾರಿ ಇದೆ. ಈ ಬಾರಿಯ ಅಲೆಯೇ ಬೇರೆಯಾಗಿದೆ. ಕರ್ನಾಟಕದ ಎಲ್ಲಿ ಹೋದರೂ ಬಿಜೆಪಿ ಪರ ಅಲೆ ಎದ್ದು ಕಾಣುತ್ತಿದೆ. 10 ವರ್ಷ ಮೋದಿ ಮಾಡಿದ ಕೆಲಸಕ್ಕೆ ಜನರು ಮನ ಸೋತಿದ್ದಾರೆ. ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ, ಸಂಭ್ರಮ ಮನೆ ಮಾಡಿರುತ್ತದೆ. ಯಾರಿಗೆಲ್ಲ ನಾನು ಆಭಾರಿಯಾಗಲಿ ಎಂದು ಹೇಳಿಕೊಳ್ಳಲು ಆಗದು. ನಾನು ಯಾವತ್ತೂ ನಿಲ್ಲುವುದಿಲ್ಲ, ನನ್ನ ಕೆಲಸವೂ ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : 2019ರಲ್ಲಿ ಬಿಹಾರದ ಒಂದು ಕ್ಷೇತ್ರದಲ್ಲಿ ಸೋತಿದ್ದೆವು; ಈ ಬಾರಿ ಎಲ್ಲ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದ ಮೋದಿ

Narendra Modi: ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

VISTARANEWS.COM


on

Narendra modi
Koo

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ 2019ರ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಬಿಹಾರದಲ್ಲಿ ಒಂದು ಸ್ಥಾನ ಕಳೆದುಕೊಂಡಿತ್ತು. ಈ ಬಾರಿ ಈ ಬಾರಿ ನಾವು ಒಂದನ್ನೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi ) ಹೇಳಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಎಲ್ಲ ಸೀಟ್​ಗಳನ್ನು ಗೆಲ್ಲುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪಾಟ್ನಾದಲ್ಲಿ ರೋಡ್ ಶೋ (Modi Patna Road Show) ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆಡಳಿತಾರೂಢ ಮೈತ್ರಿಕೂಟವು 2019 ರ ಲೋಕಸಭಾ ಚುನಾವಣೆಗಿಂತ ರಾಜ್ಯದಲ್ಲಿ ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಕಳೆದ ಬಾರಿ ಕಳೆದುಕೊಂಡ ಏಕೈಕ ಕ್ಷೇತ್ರವನ್ನು ಸಹ ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಭಾನುವಾರ ರೋಡ್ ಶೋ ಸಂದರ್ಭದಲ್ಲಿ ಮಾತನಾಡಿದ್ದ ಪ್ರಧಾನಿ, ಬಿಹಾರದಲ್ಲಿ ಮೈತ್ರಿಕೂಟವು ಕ್ಲೀನ್ ಸ್ವೀಪ್ ಸಾಧನೆ ಮಾಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ನಾನು ಬಿಹಾರದ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು (2019 ರಲ್ಲಿ) ಒಂದು ಸ್ಥಾನವನ್ನು ಕಳೆದುಕೊಂಡಿದ್ದೇವೆ ಮತ್ತು ಈ ಬಾರಿ ನಾವು ಒಂದು ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಅವರೆಲ್ಲರೂ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಮೋದಿ ಹೇಳಿಕೊಂಡರು.

ರಾಜ್ಯ ಮತ್ತು ಅದರ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ನಾನು ಹಲವಾರು ಕೆಲಸಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ. ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಬಹಳ ಹಳೆಯ ಸಂಪರ್ಕಗಳಿವೆ ಎಂಬುದಾಗಿ ಅವರು ಹೇಳಿಕೊಂಡರು.

ಮುಂದುವರಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿ ಪೂರ್ವ ಭಾರತದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಲಿದೆ. ಇದು ಎನ್​ಡಿಎಯ 400 ಸ್ಥಾನಗಳ ಗಡಿ ಸುಲಭವಾಗಿ ತಲುಪಲು ನೆರವಾಗುತ್ತದೆ ಎಂದು ಹೇಳಿದರು. ಪೂರ್ವ ಭಾರತದಲ್ಲಿ ಬಿಜೆಪಿಯ ಏಳಿಗೆಯ ಬಗ್ಗೆ ಕೇಳಿದಾಗ, ವಲಯವನ್ನು ಬೆಳವಣಿಗೆಯ ಎಂಜಿನ್ ಆಗಿ ಅಭಿವೃದ್ಧಿಪಡಿಸಲು ವಿಶೇಷ ಗಮನ ಹರಿಸುವ ಬಗ್ಗೆ ಪ್ರಧಾನಿ ಮಾತನಾಡಿದರು.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ನೀವು ನನ್ನ 2013 ರ ಭಾಷಣವನ್ನು ಆಲಿಸಿದ್ದರೆ ನೆನಪಿರಬಹುದು. ನಾನು ಪ್ರಧಾನಿ ಆಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಲು ಬಯಸಿದ ವೇಳೆ ಪೂರ್ವ ಭಾರತವನ್ನು ಬೆಳವಣಿಗೆಯ ಎಂಜಿನ್ ಆಗಿ ಪರಿವರ್ತಿಸಿದ್ದೆನೆ ಎಂದು ನಾನು ಹೇಳಿದ್ದೆ” ಎಂದು ಅವರು ಪಾಟ್ನಾದಲ್ಲಿ ರೋಡ್ ಶೋ ನಡೆಸುವಾಗ ಹೇಳಿದರು.

ನಾವು ಮೂಲಸೌಕರ್ಯ, ಆರೋಗ್ಯ ಇತ್ಯಾದಿಗಳ ಮೇಲೆ ಗಮನ ಹರಿಸಿದ್ದೇವೆ. ಈ ಸಮೀಕ್ಷೆಯನ್ನು ಪರಿಗಣಿಸಿದರೆ, ಪೂರ್ವ ಭಾರತದ ಚುನಾವಣಾ ಫಲಿತಾಂಶಗಳು ಅದನ್ನು ಪ್ರತಿಬಿಂಬಿಸಲಿವೆ. ಜನರು ಆಶ್ಚರ್ಯಚಕಿತರಾಗಲಿದ್ದಾರೆ. ತೆಲಂಗಾಣ, ಒಡಿಶಾ, ಬಂಗಾಳ, ಬಿಹಾರ, ಜಾರ್ಖಂಡ್, ಅಸ್ಸಾಂನಲ್ಲಿ ಬಿಜೆಪಿ ಹೊಸ ಹುಟ್ಟುಪಡೆಯಲಿಎ ಎಂದು ಹೇಳಿದರು.

Continue Reading

ದೇಶ

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಎರ್ನಾಕುಲಂ- ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದ್ದು, ಇದರ ವೇಳಾಪಟ್ಟಿಯನ್ನು ಭಾರತೀಯ ರೈಲ್ವೆ ಇಲಾಖೆ ಪ್ರಕಟಿಸಿದೆ.

VISTARANEWS.COM


on

By

Vande Bharat Express
Koo

ಬೆಂಗಳೂರು: ಲೋಕಸಭೆ ಚುನಾವಣೆ- 2024 (lok sabha election-2024) ಮುಗಿದ ಬಳಿಕ ಎರ್ನಾಕುಲಂ- ಬೆಂಗಳೂರು ( Ernakulam-Bengaluru) ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಶೀಘ್ರದಲ್ಲೇ ಕೊಚ್ಚಿಯ (kochi) ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ. ಕೊಚ್ಚಿ ಮತ್ತು ಬೆಂಗಳೂರು ನಡುವೆ ಬಹು ನಿರೀಕ್ಷಿತ ಈ ರೈಲು ಪ್ರಾರಂಭವು ದೈನಂದಿನ ಪ್ರಯಾಣಿಕರಿಗೆ ಸಾಕಷ್ಟು ಪ್ರಯೋಜನಕಾರಿಯಾಗಲಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸಂಚಾರ ಸಮಯ

ರೈಲು ಎರ್ನಾಕುಲಂನಿಂದ ಬೆಳಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಮಧ್ಯಾಹ್ನ 2.05 ಕ್ಕೆ ಹೊರಟು ರಾತ್ರಿ 10.45 ಕ್ಕೆ ಮರಳಿ ಎರ್ನಾಕುಲಂ ತಲುಪಲಿದೆ.

ನಿಲುಗಡೆ

ಎರ್ನಾಕುಲಂ- ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ಈರೋಡ್ ಮತ್ತು ಸೇಲಂ ನಿಲ್ದಾಣಗಳಲ್ಲಿ ಕೆಲವು ನಿಮಿಷಗಳ ಕಾಲ ನಿಲುಗಡೆ ಮಾಡಲಿದೆ.

ತಿರುವನಂತಪುರಂ-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್

ತಿರುವನಂತಪುರಂ ಸೆಂಟ್ರಲ್ – ಮಂಗಳೂರು (Thiruvananthapuram-Managaluru) ಸೆಂಟ್ರಲ್ ವಂದೇ ಭಾರತ್ ರೈಲು ಸಂಖ್ಯೆ 20632 ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಮೇ 13ರಿಂದ ಭಾರತೀಯ ರೈಲ್ವೆಯು ತಿರುವನಂತಪುರಂ- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ನಿರ್ಗಮನ ಮತ್ತು ಆಗಮನದ ಸಮಯವನ್ನು ಬದಲಾಯಿಸಿದೆ.

ಪರಿಣಾಮ ಏನು?

ತಿರುವನಂತಪುರಂ- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಮಯ ಬದಲಾವಣೆಯಿಂದ ತಿರುವನಂತಪುರಂ, ಎರ್ನಾಕುಲಂ ಜಂಕ್ಷನ್, ತ್ರಿಶೂರ್, ಶೋರನೂರ್ ಜಂಕ್ಷನ್, ತಿರೂರ್, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ನಿಲ್ದಾಣಕ್ಕೆ ಆಗಮನ ಮತ್ತು ನಿರ್ಗಮನ ಸಮಯದಲ್ಲಿ ಬದಲಾವಣೆ ಆಗಲಿದೆ. ಆದ್ದರಿಂದ ಹೊಸ ವೇಳಾಪಟ್ಟಿಯನ್ನು ಪ್ರಯಾಣಿಕರು ಪರಿಶೀಲಿಸುವಂತೆ ಭಾರತೀಯ ರೈಲ್ವೆ ಇಲಾಖೆ ಸೂಚಿಸಿದೆ.

ಕೆಲವೇ ತಿಂಗಳುಗಳ ಹಿಂದೆ ರೈಲ್ವೇ ಸಚಿವಾಲಯವು ರೈಲು ಸಂಖ್ಯೆ 20631/ 632 ಕಾಸರಗೋಡು-ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಆದೇಶಿಸಿತ್ತು.

ಪರಿಷ್ಕೃತ ಸಮಯ

ಎರ್ನಾಕುಲಂ ಜಂಕ್ಷನ್ ಸಂಜೆ 6.35/ 6.38 ಆಗಮಿಸಲಿದ್ದು, 6.42/ 6.45ಕ್ಕೆ ನಿರ್ಗಮಿಸಲಿದೆ. ತ್ರಿಶೂರ್ ಗೆ ಸಂಜೆ 7.40/ 7.42ಕ್ಕೆ ಆಗಮಿಸಿ 7.56/7.58 ನಿರ್ಗಮಿಸಲಿದೆ.

ಶೋರನೂರು ಜಂಕ್ಷನ್ ಗೆ ರಾತ್ರಿ 8.15/ 8.17ಕ್ಕೆ ಆಗಮನ 8.30/ 8.32ಕ್ಕೆ ನಿರ್ಗಮನ, ತಿರುರ್ ಗೆ 8.52/ 8.54ಕ್ಕೆ ಆಗಮನ, 9.02/ 9.04ಕ್ಕೆ ನಿರ್ಗಮನ, ಕೋಝಿಕ್ಕೋಡ್ 9.23/ 9.25ಕ್ಕೆ ಆಗಮನ 9.32/9.34ಕ್ಕೆ ನಿರ್ಗಮನ, ಕಣ್ಣೂರು ಗೆ 10.24/ 10.36ಕ್ಕೆ ಆಗಮನ 10.36/ 10.38ಕ್ಕೆ ನಿರ್ಗಮನ, ಕಾಸರಗೋಡುಗೆ 11.45/ 11.48ಕ್ಕೆ ಆಗಮನ 11.46/ 11.48 ನಿರ್ಗಮನ ಮಾಡಲಿದೆ.

ಇದನ್ನೂ ಓದಿ: Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

ಇತರ ರೈಲುಗಳು

ತಿರುವನಂತಪುರಂ-ಮಂಗಳೂರು ಮಾರ್ಗದಲ್ಲಿ ಓಡುತ್ತಿರುವ ಪ್ರಸ್ತುತ ಎಕ್ಸ್‌ಪ್ರೆಸ್ ರೈಲುಗಳು ಅದೇ ಪ್ರಯಾಣವನ್ನು ಮಾಡಲು 13 ರಿಂದ 14 ಗಂಟೆಗಳವರೆಗೆ ಬೇಕಾಗುತ್ತದೆ. ಉದಾಹರಣೆಗೆ ಮಂಗಳೂರು ಸೆಂಟ್ರಲ್-ನಾಗರ್‌ಕೋಯಿಲ್ ಪರಶುರಾಮ್ ಎಕ್ಸ್‌ಪ್ರೆಸ್ ಟ್ರೇನ್ ನಂ. 16649, ಪ್ರತಿದಿನ ಬೆಳಗ್ಗೆ 5.05 ಕ್ಕೆ ಸೆಂಟ್ರಲ್‌ನಿಂದ ಹೊರಟು ಸಂಜೆ 6.40 ಕ್ಕೆ ತಿರುವನಂತಪುರವನ್ನು ತಲುಪುತ್ತದೆ, ಇದು ಸಾರಿಗೆಯಲ್ಲಿ 13 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹಿಂದಿರುಗುವ ಪ್ರಯಾಣದಲ್ಲಿ ತಿರುವನಂತಪುರದಿಂದ ಬೆಳಗ್ಗೆ 6.10ಕ್ಕೆ ಹೊರಟು ರಾತ್ರಿ 9 ಗಂಟೆಗೆ ಸೆಂಟ್ರಲ್ ತಲುಪುವ ರೈಲು ಸಂಖ್ಯೆ 16650 ಗಂಟೆಗೆ ಸರಾಸರಿ 42 ಕಿ.ಮೀ .ವೇಗದಲ್ಲಿ ಪ್ರಯಾಣಿಸಿದರೂ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

Continue Reading

ದೇಶ

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Adhir Ranjan: ಅಂಬಾನಿ-ಅದಾನಿ ಹಣದ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಅಂಬಾನಿ ಹಾಗೂ ಅದಾನಿ ದುಡ್ಡು ಕಳುಹಿಸಿದರೆ, ನಾವೂ ಅವರ ವಿರುದ್ಧ ಮಾತನಾಡುವುದಿಲ್ಲ” ಎಂದು ಹೇಳಿರುವ ವಿಡಿಯೊ ಈಗ ಸಂಚಲನ ಮೂಡಿಸಿದೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

VISTARANEWS.COM


on

Adhir Ranjan
Koo

ಕೋಲ್ಕೊತಾ: ಉದ್ಯಮಿಗಳಾದ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ. ಇದೇ ಕಾರಣಕ್ಕಾಗಿ ಅದಾನಿ-ಅಂಬಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮಾತನಾಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ದೂರಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (Adhir Ranjan Chowdhury) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಅಂಬಾನಿ ಹಾಗೂ ಅದಾನಿ ದುಡ್ಡು ಕಳುಹಿಸಿದರೆ, ನಾವೂ ಅವರ ವಿರುದ್ಧ ಮಾತನಾಡುವುದಿಲ್ಲ” ಎಂದು ಹೇಳಿರುವ ವಿಡಿಯೊ ಈಗ ಸಂಚಲನ ಮೂಡಿಸಿದೆ.

ಯುಟ್ಯೂಬ್‌ ಚಾನೆಲ್‌ನ ನಿರೂಪಕರೊಬ್ಬರ ಜತೆ ಮಾತನಾಡಿದ ಅಧೀರ್‌ ರಂಜನ್‌ ಚೌಧರಿ, “ಅಂಬಾನಿ ಹಾಗೂ ಅದಾನಿ ಅವರಿಂದ ಹಣ ಸಿಕ್ಕರೆ ನಾನು ಸಂತೋಷದಿಂದ ಇರುತ್ತೇನೆ. ಅಷ್ಟಕ್ಕೂ ನಾನು ಬಡತನ ರೇಖೆಗಿಂತ ಕೆಳಗಿರುವ (BPL) ಸಂಸದನಾಗಿದ್ದೇನೆ. ಚುನಾವಣೆ ಪ್ರಚಾರಕ್ಕಾಗಿ ನನಗೆ ಹಣ ಬೇಕು. ಟೆಂಪೋಗಟ್ಟಲೆ ಹಣ ಬಿಡಿ, ಒಂದು ಬ್ಯಾಂಗ್‌ ತುಂಬ ಅವರು ಹಣ ಕಳುಹಿಸಿದರೂ ನನಗೆ ಸಾಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ತಮಾಷೆಯಾಗಿ ಉತ್ತರ ನೀಡಿದ್ದಾರೆ.

ಉದ್ಯಮಿಗಳ ವಿರುದ್ಧ ಸಂಸತ್ತಿನಲ್ಲಿ ನೀವು ಮಾತನಾಡುತ್ತೀರಲ್ಲ ಎಂದು ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ, “ಅವರು ನಮಗೆ ಹಣ ಕಳುಹಿಸುವುದಿಲ್ಲ. ಹಾಗಾಗಿ, ನಾವು ಅವರ ವಿರುದ್ಧ ಮಾತನಾಡುತ್ತೇವೆ” ಎಂದರು. “ಅವರು ಹಣ ಕಳುಹಿಸಿದರೆ ನೀವು ಅವರ ವಿರುದ್ಧ ಮಾತನಾಡುವುದಿಲ್ಲವೇ” ಎಂದು ಕೇಳಿದ ಪ್ರಶ್ನೆಗೆ, “ಅವರು ನಮಗೆ ಹಣ ಕಳುಹಿಸಿದಾಗ ನೋಡೋಣ” ಎಂದು ಹಾರಿಕೆಯ ಉತ್ತರ ನೀಡಿದರು. ಈ ವಿಡಿಯೊ ಭಾರಿ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗುತ್ತಿವೆ.

ಕಾಲೆಳೆದ ಬಿಜೆಪಿ

ಅಂಬಾನಿ-ಅದಾನಿ ಕುರಿತು ಅಧೀರ್‌ ರಂಜನ್‌ ಚೌಧರಿ ಹೇಳಿಕೆ ನೀಡುತ್ತಲೇ ಬಿಜೆಪಿ ಟಾಂಗ್‌ ನೀಡಿದೆ. “ಉದ್ಯಮಿಗಳಿಂದ ಬ್ಯಾಗ್‌ ತುಂಬ ಹಣ ಸಿಕ್ಕರೆ ಸಂಸತ್ತಿನಲ್ಲಿ ಅವರ ವಿರುದ್ಧ ಮಾತನಾಡುವುದಿಲ್ಲ ಎಂಬುದಾಗಿ ಕಾಂಗ್ರೆಸ್‌ ನಾಯಕ ಹೇಳಿದ್ದಾರೆ. ಉದ್ಯಮಿಗಳಿಗೆ ಹಣ ಕೊಡಿ ಎಂಬುದಾಗಿ ಪರೋಕ್ಷವಾಗಿ ಹೇಳುವ ಜತೆಗೆ ಅವರನ್ನು ಟಾರ್ಗೆಟ್‌ ಮಾಡುತ್ತಿರುವುದನ್ನೂ ಒಪ್ಪಿಕೊಂಡಿದ್ದಾರೆ. ಇದು ಹಫ್ತಾ ವಸೂಲಿ ಕಾಂಗ್ರೆಸ್‌ ಹಾಗೂ ಇಂಡಿಯಾ ಒಕ್ಕೂಟ” ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲಾ ಟೀಕಿಸಿದ್ದಾರೆ. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಅಧೀರ್‌ ರಂಜನ್‌ ಚೌಧರಿ, “ಬಿಜೆಪಿಯವರಿಗೆ ಜೋಕ್‌ ಯಾವುದು, ಸೀರಿಯಸ್‌ ಯಾವುದು ಎಂಬುದರ ಪರಿಜ್ಞಾನವೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

ದೇಶ

Narendra Modi: ತಾಯಂದಿರ ದಿನದಂದು ಮೋದಿಗೆ ವಿಶೇಷ ಉಡುಗೊರೆ ಕೊಟ್ಟ ಫ್ಯಾನ್ಸ್; ಏನದು ನೋಡಿ!

Narendra Modi: ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ ಅವರಿಗೆ ಎರಡು ವಿಶೇಷ ಉಡುಗೊರೆಗಳು ದೊರೆತಿವೆ. ತಾಯಂದಿರ ದಿನದ ಹಿನ್ನೆಲೆಯಲ್ಲಿ ಮೋದಿ ಅವರ ಇಬ್ಬರು ಅಭಿಮಾನಿಗಳು ಮೋದಿ ಹಾಗೂ ಅವರ ತಾಯಿ ಹೀರಾಬೆನ್‌ ಮೋದಿ ಇರುವ ಚಿತ್ರ ಬಿಡಿಸಿ, ಅವುಗಳನ್ನು ಉಡುಗೊರೆ ನೀಡಿದ್ದಾರೆ. ಇದಕ್ಕೆ ಮೋದಿ ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕೊತಾ: ಭಾನುವಾರ (ಮೇ 12) ವಿಶ್ವ ತಾಯಂದಿರ (Mother’s Day) ದಿನ. ಭಾರತ ಸೇರಿ ಜಗತ್ತಿನಾದ್ಯಂತ ಎಲ್ಲರೂ ತಮ್ಮ ತಾಯಂದಿರಿಗೆ ಶುಭ ಕೋರುವ ಮೂಲಕ ಖುಷಿ, ಧನ್ಯತಾ ಭಾವ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪಶ್ಚಿಮ ಬಂಗಾಳದಲ್ಲಿ (West Bengal) ತಾಯಂದಿರ ದಿನದಂದು ವಿಶೇಷ ಉಡುಗೊರೆಗಳು ದೊರೆತಿವೆ. ಹೌದು, ತಾಯಂದಿರ ದಿನದ ಹಿನ್ನೆಲೆಯಲ್ಲಿ ಮೋದಿ ಅವರ ಇಬ್ಬರು ಅಭಿಮಾನಿಗಳು ಮೋದಿ ಹಾಗೂ ಅವರ ತಾಯಿ ಹೀರಾಬೆನ್‌ ಮೋದಿ ಇರುವ ಚಿತ್ರ ಬಿಡಿಸಿ, ಅವುಗಳನ್ನು ಉಡುಗೊರೆ ನೀಡಿದ್ದಾರೆ. ಇದಕ್ಕೆ ಮೋದಿ ಧನ್ಯವಾದ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದರು. ಇದೇ ವೇಳೆ, ಮೋದಿ ಅವರು ತಾಯಿ ಜತೆ ಇರುವ ಚಿತ್ರವನ್ನು ಬಿಡಿಸಿ, ಅದಕ್ಕೆ ಫ್ರೇಮ್‌ ಹಾಕಿಸಿ, ಸಮಾವೇಶದಲ್ಲಿ ಇಬ್ಬರು ಯುವಕರು ಅವುಗಳನ್ನು ಹಿಡಿದುಕೊಂಡು ನಿಂತಿದ್ದರು. ಮೋದಿ ಅವರು ಉಡುಗೊರೆ ನೋಡಿ ಖುಷಿ ಪಟ್ಟರು. “ನನ್ನ ತಾಯಿಯ ಫೋಟೊ ಉಡುಗೊರೆ ನೀಡಿರುವುದು ಖುಷಿ ತಂದಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಒಂದೇ ದಿನ ತಾಯಂದಿರ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ, ಭಾರತದಲ್ಲಿ ನಾವು ತಾಯಿ, ದುರ್ಗಾ ಮಾತೆ, ಕಾಳಿ ಮಾತೆ ಹಾಗೂ ಭಾರತ ಮಾತೆಯನ್ನು ವರ್ಷವಿಡೀ ಆರಾಧಿಸುತ್ತೇವೆ” ಎಂದರು.

5 ಗ್ಯಾರಂಟಿ ಘೋಷಿಸಿದ ಮೋದಿ

ಪಶ್ಚಿಮ ಬಂಗಾಳದ ಬರಾಕ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು 5 ಗ್ಯಾರಂಟಿ ಘೋಷಣೆ ಮಾಡಿದರು., “ನಾನು ಪಶ್ಚಿಮ ಬಂಗಾಳದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುತ್ತಿದ್ದೇನೆ. ನಾನು ಇರುವವರೆಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಬಿಡಲ್ಲ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಲು ಬಿಡುವುದಿಲ್ಲ. ನೀವು ರಾಮನವಮಿಯನ್ನು ಆಚರಿಸುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಬಿಡುವುದಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಯಾರಿಂದಲೂ ಬದಲಿಸಲು ಬಿಡಲ್ಲ” ಎಂದು ಮೋದಿ ಅವರು ಐದು ಗ್ಯಾರಂಟಿಗಳನ್ನು ಘೋಷಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ಭಾಷಣದ ವೇಳೆ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. “ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ನ ಒಂದು ಕುಟುಂಬದ ಸದಸ್ಯರು ದೇಶವನ್ನು ದಶಕಗಳವರೆಗೆ ಆಳಿದರು. ಆದರೆ, ಅವರು ಪೂರ್ವ ಭಾರತದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದರು. ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಶಾ ಸೇರಿ ಹಲವು ರಾಜ್ಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕಡೆಗಣಿಸಿತು. ಆದರೆ, ನೀವು 2014ರಲ್ಲಿ ಮೋದಿಯನ್ನು ಆಯ್ಕೆ ಮಾಡಿದಿರಿ. ಹಾಗಾಗಿ, ಈಗ ಇಡೀ ದೇಶವೇ ಏಳಿಗೆ ಹೊಂದುತ್ತಿದೆ. ಆರ್ಥಿಕತೆಯಲ್ಲಿ ನಾವು ದಾಪುಗಾಲು ಇಡುತ್ತಿದ್ದೇವೆ” ಎಂದರು.

ಇದನ್ನೂ ಓದಿ: Narendra Modi: ಚುನಾವಣೆ ಪ್ರಚಾರದ ವೇಳೆ 5 ಗ್ಯಾರಂಟಿಗಳನ್ನು ಘೋಷಿಸಿದ ಮೋದಿ; ಏನವು?

Continue Reading
Advertisement
Prajwal Revanna Case
ಕರ್ನಾಟಕ1 hour ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ1 hour ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ2 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest2 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ2 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ3 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ3 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ3 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ3 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ3 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ6 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ7 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ11 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ12 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ20 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌