Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು - Vistara News

Lok Sabha Election 2024

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Assault Case : ಕಾಂಗ್ರೆಸ್‌ಗೆ ಮತ ಹಾಕಲ್ಲ, ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ, ಕಾಂಗ್ರೆಸ್‌ನ ಕೆಲ ಕಾರ್ಯಕರ್ತರು ಹಲ್ಲೆ ಮಾಡಿ, ಬಿಜೆಪಿ ಮುಖಂಡನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

assault case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ದ್ಯಾಮಣ್ಣ ಬಾಲನಗೌಡರ್ ಹಲ್ಲೆಗೊಳಗಾದ ಬಿಜೆಪಿ ಮುಖಂಡರಾಗಿದ್ದಾರೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ಘಟನೆ ನಡೆದಿದೆ.

ಕಾಂಗ್ರೆಸ್‌ ಕಾರ್ಯಕರ್ತರಾದ ಗವಿಸಿದ್ದ, ಬಾಳಪ್ಪ, ನೀಲಪ್ಪ, ಗಂಗಣ್ಣ ಎಂಬುವವರು ದ್ಯಾಮಣ್ಣನಿಗೆ ಹಲ್ಲೆ ನಡೆಸಿದ್ದಾರೆ. ನಿನ್ನೆ ಶನಿವಾರ ರಾತ್ರಿ ದ್ಯಾಮಣ್ಣ ಮನೆಗೆ ಕಾಂಗ್ರೆಸ್ ಮುಖಂಡರು ಬಂದಿದ್ದಾರೆ. ಈ ವೇಳೆ ದ್ಯಾಮಣ್ಣ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ, ಬಿಜೆಪಿ ಪಕ್ಷಕ್ಕೆ ಮತ ಹಾಕುತ್ತೇವೆ ಎಂದಿದ್ದಾರೆ.

ಇದರಿಂದ ಸಿಟ್ಟಾದ ಕೈ ಕಾರ್ಯಕರ್ತರು, ಕಾಂಗ್ರೆಸ್‌ಗೆ ಯಾಕೆ ಮತ ಹಾಕುವುದಿಲ್ಲ ಎಂದು ದ್ಯಾಮಣ್ಣನ ಮೇಲೆ ಎರಗಿದ್ದಾರೆ. ಬಳಿಕ ದ್ಯಾಮಣ್ಣನನ್ನು ರಸ್ತೆಗೆಳೆದು ತಂದು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ದ್ಯಾಮಣ್ಣನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ದ್ಯಾಮಣ್ಣನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: 108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

ಹಿಮಾಚಲ ಪ್ರದೇಶ: ಲೋಕಸಭೆ ಚುನಾವಣೆ(Kangana Ranaut) ದೇಶದಲ್ಲಿ ದಿನೇ ದಿನೇ ರಂಗೇರಿದೆ. ಅಬ್ಬರದ ಪ್ರಚಾರ, ಪರ ವಿರೋಧ ವಾಗ್ದಾಳಿ ನಡೆಸಿದ್ದಾರೆ. ಎದುರಾಳಿ ನಾಯಕರನ್ನು ಟೀಕಿಸುವ ಭರದಲ್ಲಿ ಕೆಲವೊಮ್ಮೆ ತಮ್ಮದೇ ಪಕ್ಷಕ್ಕೆ ಮುಜುಗರ ತಂದಿರುವ ಘಟನೆಗಳೂ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಹೇಳಿಕೆ ಮೂಲಕ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಅಭ್ಯರ್ಥಿ ಕಂಗನಾ ರಾಣಾವತ್‌ ಆಭಾಸಕ್ಕೀಡಾಗಿದ್ದಾರೆ. ಪ್ರಚಾರ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಬಿಹಾರದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌(Tejaswi Yadav) ಅವರನ್ನು ಟೀಕಿಸುವ ಭರದಲ್ಲಿ ತಮ್ಮದೇ ಪಕ್ಷ ಬಿಜೆಪಿ ಮುಖಂಡ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿತೇಜಸ್ವಿ ಸೂರ್ಯ(Tejaswi Surya) ಹೆಸರು ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ. ಇದೀಗ ಈ ವಿಡಿಯೋ ವೈರಲ್‌(Viral Video) ಆಗಿದ್ದು, ಖುದ್ದು, ತೇಜಸ್ವಿ ಯಾದವ್‌ ಅವರೇ ಈ ವಿಡಿಯೋಗೆ ರಿಯಾಕ್ಟ್‌ ಮಾಡಿದ್ದಾರೆ.

ಕಂಗನಾ ಹೇಳಿದ್ದೇನು?

ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ:Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಏ.9ರಂದು ನವರಾತ್ರಿಯ ದಿನ ತೇಜಸ್ವಿ ಯಾದವ್‌ ಮೀನು ತಿನ್ನುವ ಫೋಟೋವನ್ನು ಶೇರ್‌ ಮಾಡಿಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದರು. ಇದೇ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಕಂಗನಾ, ರಾಹುಲ್‌, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದರು. ಸಂಪೂರ್ಣವಾಗಿ ಹಾಳಾದ ರಾಜಕುಮಾರರನ್ನು ಹೊಂದಿರುವ ಪಕ್ಷಗಳಿವೆ. ಅಲ್ಲಿ ಚಂದ್ರನ ಮೇಲೆ ಆಲೂಗೆಡ್ಡೆ ಬೆಳೆಯುವ ರಾಹುಲ್‌ ಗಾಂಧಿ, ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಮತ್ತು ಅಸಂಬದ್ದ ಹೇಳಿಕೆ ನೀಡುವ ಅಖಿಲೇಶ್‌ ಯಾದವ್‌ ಇದ್ದಾರೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ಭಾಷೆಯನ್ನು ಅರ್ಥ ಮಾಡಿಕೊಳ್ಳದಿರುವ ಇಂತಹ ನಾಯಕರು ಹೇಗೆ ತಾನೇ ದೇಶವನ್ನು ನಡೆಸಬಲ್ಲರು ಎಂದು ಅವರು ವ್ಯಂಗ್ಯವಾಡಿರುವ ವಿಡಿಯೋ ವೈರಲ್‌ ಆಗಿದೆ.

ಟಾಂಗ್‌ ಕೊಟ್ಟ ತೇಜಸ್ವಿ ಯಾದವ್‌

ಕಂಗನಾ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿದ್ದು, ರಾರು ಈ ಮಹಿಳೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಅವರು ಈ ವಿಡಿಯೋವನ್ನು ತನ್ನ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿ ಯಾರು ಈ ಮಹಿಳೆ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಜೂ.1ರಂದು ಹಿಮಾಚಲಪ್ರದೇಶದಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಕಂಗನಾ ವಿರುದ್ಧ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

PM Modi: ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ಇದರಿಂದ ಯಾರಿಗೆ ಅನುಕೂಲವಾಯಿತು ಎಂಬುದು ಅವರಿಗೆ ಮೂರು ಹಂತದ ಮತದಾನ ಮುಗಿದ ಬಳಿಕ ಬೇರೆಯವರು ಹೇಳಿದರು ಎಂಬುದಾಗಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹುತೇಕ ಸಂದರ್ಭದಲ್ಲಿ ಗಂಭೀರವಾಗಿರುತ್ತಾರೆ. ಚುನಾವಣೆ ಭಾಷಣಗಳು, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವಾಗಂತಲೂ ತೀಕ್ಷ್ಣವಾಗಿ ಮಾತನಾಡುತ್ತಾರೆ. ಟೀಕೆ, ಆರೋಪ, ಆಕ್ರೋಶ ಹೊರಹಾಕುತ್ತಾರೆ. ಹಾಗೆಯೇ, ಪ್ರತಿಪಕ್ಷಗಳನ್ನು ಅವರು ವ್ಯಂಗ್ಯ ಮಾಡುತ್ತಾರೆ. ಹಾಸ್ಯ ಚಟಾಕಿ ಮೂಲಕವೂ ಟಾಂಗ್‌ ಕೊಡುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ 400 ಸೀಟು ಗೆಲ್ಲುತ್ತದೆ ಎಂಬುದನ್ನು ಪದೇಪದೆ ಹೇಳಿ ಪ್ರತಿಪಕ್ಷಗಳು ಕೂಡ ತಮ್ಮ ಪರವಾಗಿ ಪ್ರಚಾರಕ್ಕೆ ಹೇಗೆ ಬಳಸಿಕೊಂಡರು ಎಂಬುದನ್ನು ಖುದ್ದು ನರೇಂದ್ರ ಮೋದಿ ಅವರೇ ಹೇಳಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ಗೆ ಸಂದರ್ಶನ ನೀಡುವ ವೇಳೆ ಚಾರ್‌ ಸೌ ಪಾರ್‌ ಅಭಿಯಾನದ ಕುರಿತು ತಮಾಷೆಯಾಗಿ ಮಾತನಾಡಿದ್ದಾರೆ. “ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ನಾನು ಅವರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂಬುದು ಪ್ರತಿಪಕ್ಷಗಳ ನಾಯಕರಿಗೆ ಗೊತ್ತೇ ಆಗಲಿಲ್ಲ. 3 ಹಂತಗಳ ಮತದಾನ ಮುಗಿದ ಬಳಿಕ, ನೀವೇಕೆ 400 ಸೀಟು ಗೆಲ್ಲುತ್ತಾರೋ, ಇಲ್ಲವೋ ಎಂಬುದರ ಕುರಿತು ಚುನಾವಣೆ ಪ್ರಚಾರ ಮಾಡುತ್ತಿದ್ದೀರಿ ಎಂಬುದಾಗಿ ಬೇರೆ ಯಾರೋ ಪಕ್ಷಗಳಿಗೆ ಹೇಳಿದರು” ಎಂದು ನಗುತ್ತಲೇ ಪ್ರತಿಪಕ್ಷಗಳನ್ನು ಯಾಮಾರಿಸಿದ ರೀತಿಯನ್ನು ಮೋದಿ ವಿವರಿಸಿದರು.

ಪಾಕ್‌ನಲ್ಲಿ ಉಗ್ರರ ಹತ್ಯೆ ಹಿಂದೆ ಇರೋದು ಯಾರು?

ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬುದಾಗಿ ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ಪಾಕಿಸ್ತಾನದವರು ಇದರ ಕುರಿತು ಚಿಂತೆ ಮಾಡುತ್ತಾರೆ. ಆದರೆ, ಪಾಕಿಸ್ತಾನದಲ್ಲಿ ಉಗ್ರರು ಹತ್ಯೆಗೀಡಾದರೆ, ಭಾರತದಲ್ಲಿರುವ ಕೆಲವರ ಕಣ್ಣಿನಲ್ಲಿ ನೀರು ಏಕೆ ಬರುತ್ತದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ” ಎಂದಷ್ಟೇ ಹೇಳಿದರು. ಸಂದರ್ಶನದ ವೇಳೆ ರಾಹುಲ್‌ ಗಾಂಧಿ, ಪ್ರತಿಪಕ್ಷಗಳು, ಅಭಿವೃದ್ಧಿ, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ ಸೇರಿ ಹಲವು ವಿಷಯಗಳ ಕುರಿತು ಮೋದಿ ಮಾತನಾಡಿದರು.

ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿರು. “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟರು.

ಇದನ್ನೂ ಓದಿ: Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Continue Reading

ದೇಶ

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

Share Market: ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಇದು ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಗೆ ಹಿಡಿದ ಕನ್ನಡಿ ಎಂದೇ ವಿಶ್ಲೇಷಿಸಲಾಗುತಿದೆ.

VISTARANEWS.COM


on

Share Market
Koo

ಮುಂಬೈ: “ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶ ಪ್ರಕಟವಾಗುವ ಜೂನ್‌ 4ರಂದು ಭಾರತದ ಷೇರು ಮಾರುಕಟ್ಟೆಯು (Share Market) ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಇದೇ ಮಾತು ಹೇಳಿದ್ದಾರೆ. ಇದರ ಮಧ್ಯೆಯೇ, ಗುರುವಾರ (ಮೇ 23) ಷೇರು ಮಾರುಕಟ್ಟೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 1,197 ಪಾಯಿಂಟ್ಸ್‌ ಏರಿಕೆಯೊಂದಿಗೆ ದಾಖಲೆಯ 75,460 ಪಾಯಿಂಟ್ಸ್‌ಗೆ ತಲುಪಿದರೆ, ನಿಫ್ಟಿಯು 370 ಪಾಯಿಂಟ್ಸ್‌ ಏರಿಕೆಯೊಂದಿಗೆ 22,989 ಪಾಯಿಂಟ್ಸ್‌ ತಲುಪಿದೆ. ಲೋಕಸಭೆ ಚುನಾವಣೆ ಫಲಿತಾಂಶ, ಸ್ಥಿರ ಸರ್ಕಾರದ ಮುನ್ಸೂಚನೆಯ ಸಂಕೇತವಾಗಿಯೇ ಷೇರು ಮಾರುಕಟ್ಟೆಯು ದಾಖಲೆ ಬರೆದಿದೆ ಎಂದೇ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

“ನಿಫ್ಟಿಯು ದಾಖಲೆಯ ಏರಿಕೆ ಕಾಣುವ ಮೂಲಕ ಚುನಾವಣೆ ನಂತರದಲ್ಲಿ ದೇಶದಲ್ಲಿ ರಾಜಕೀಯ ಸ್ಥಿರತೆ ಇರುತ್ತದೆ ಎಂಬ ಸಂದೇಶ ರವಾನಿಸಿದೆ. ಅತಿ ಹೆಚ್ಚಿನ ಹಣ ಹೂಡಿಕೆ ಮಾಡುವವರು ಸೇರಿ ಎಲ್ಲರಿಗೂ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಜಿಯೋಜೀತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ರಣತಂತ್ರಗಾರ ವಿ.ಕೆ.ವಿಜಯ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಸಾರ್ವತ್ರಿಕ ಚುನಾವಣೆ ಫಲಿತಾಂಶದ ದಿನ ಷೇರು ಪೇಟೆಯಲ್ಲಿ ಲವಲವಿಕೆ ಇದ್ದೇ ಇರುತ್ತದೆ. ಆದರೆ, ಜೂನ್‌ 4ರಂದು ಇತಿಹಾಸ ಸೃಷ್ಟಿಯಾಗುತ್ತದೆ ಎಂದು ಹೇಳುತ್ತಿರುವುದು ಹೂಡಿಕೆದಾರರ ಖುಷಿ ಹೆಚ್ಚಿಸಿದೆ.

Share Market

ಕೇಂದ್ರಕ್ಕೆ ಆರ್‌ಬಿಐ ಲಾಭಾಂಶದ ಕೊಡುಗೆ

ಕೇಂದ್ರ ಸರ್ಕಾರಕ್ಕೆ 2023-24ನೇ ಸಾಲಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ ದಾಖಲೆಯ 2.10 ಲಕ್ಷ ಕೋಟಿ ರೂ. ಡೆವಿಡೆಂಡ್‌ (ಲಾಭಾಂಶ) ನೀಡಲು ಒಪ್ಪಿಗೆ ನೀಡಿರುವುದು ಕೂಡ ಷೇರು ಮಾರುಕಟ್ಟೆಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. 2022-23ರಲ್ಲಿ ಕೇಂದ್ರ ಸರ್ಕಾರಕ್ಕೆ ಆರ್‌ಬಿಐ 87 ಸಾವಿರ ಕೋಟಿ ರೂ. ನೀಡಿತ್ತು. ಆದರೆ, ಅದು ಎರಡು ಪಟ್ಟು ಜಾಸ್ತಿಯಾಗಿರುವುದರಿಂದ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಹಣ ಸಿಗುತ್ತದೆ. ಆ ಹಣವು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ವಿನಿಯೋಗವಾಗುತ್ತದೆ. ಇದರಿಂದ ಷೇರು ಪೇಟೆಯಲ್ಲಿ ಲಾಭ ಗಳಿಸಬಹುದು ಎಂಬ ಕಾರಣದಿಂದ ಹೂಡಿಕೆ ಜಾಸ್ತಿಯಾಗಿದೆ. ಗುರುವಾರವೂ ಸಾರ್ವಜನಿಕ ವಲಯದ ಸಂಸ್ಥೆಗಳು ಲಾಭ ಗಳಿಸಿರುವುದು ಈ ಮಾತಿಗೆ ಪುಷ್ಟಿ ನೀಡುವಂತಿದೆ.

ಷೇರು ಮಾರುಕಟ್ಟೆ ಬಗ್ಗೆ ಮೋದಿ ಹೇಳಿದ್ದೇನು?

“ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಲ್ಲಿ ಮಹತ್ವದ ಸುಧಾರಣೆ ತಂದಿದೆ. ಆರ್ಥಿಕ ಶಿಸ್ತು, ವಿತ್ತೀಯ ಪ್ರಕ್ರಿಯೆಗಳಲ್ಲಿ ಸುಧಾರಣಾ ಕ್ರಮಗಳನ್ನು ಅನುಸರಿಸಿಕೊಂಡಿದೆ. ಇದರಿಂದಾಗಿ ಭಾರತದ ಷೇರು ಮಾರುಕಟ್ಟೆಯು ಕಳೆದ ಒಂದು ದಶಕದಲ್ಲಿ ಗಣನೀಯ ಏಳಿಗೆ ಕಂಡಿದೆ. 10 ವರ್ಷಗಳ ಹಿಂದೆ ಸೆನ್ಸೆಕ್ಸ್‌ 25 ಸಾವಿರ ಪಾಯಿಂಟ್ಸ್‌ ಹೊಂದಿತ್ತು. ಆದರೀಗ, ಸೆನ್ಸೆಕ್ಸ್‌ 75 ಸಾವಿರ ಪಾಯಿಂಟ್ಸ್‌ಗೆ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯ ಮೌಲ್ಯವು ಕೆಲ ದಿನಗಳ ಹಿಂಷ್ಟೇ 5 ಲಕ್ಷ ಕೋಟಿ ಡಾಲರ್‌ ಆಗಿದೆ. ಹಾಗಾಗಿ, ಜೂನ್‌ 4ರಂದು ಷೇರು ಮಾರುಕಟ್ಟೆಯು ದಾಖಲೆ ಬರೆಯಲಿದೆ” ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Continue Reading

ದೇಶ

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Prashant Kishor: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ. ಬಿಜೆಪಿಗೆ 300ಕ್ಕೂ ಅಧಿಕ ಸ್ಥಾನಗಳು ಲಭಿಸುವುದು ನಿಶ್ಚಿತ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಹೇಳಿದ್ದರು.

VISTARANEWS.COM


on

Prashant Kishor
Koo

ನವದೆಹಲಿ: ಚುನಾವಣಾ ರಣತಂತ್ರಗಾರ, ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆ ಮಾತನಾಡಿರುವ, ಸಂದರ್ಶನದಲ್ಲಿ ಉಲ್ಲೇಖಿಸಿರುವ ಅಂಶಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ. ನರೇಂದ್ರ ಮೋದಿ (Narendra Modi) ಅವರ ವರ್ಚಸ್ಸು ಕಡಿಮೆಯಾದರೂ ಬಿಜೆಪಿ ಬಹುಮತ ಸಾಬೀತುಪಡಿಸಲಿದೆ ಎಂಬುದಾಗಿ ವಿಶ್ಲೇಷಿಸಿದ್ದಾರೆ. ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ.

“ಹೆಚ್ಚಿನ ಪ್ರಮಾಣದ ನೀರು ಕುಡಿಯುವುದರಿಂದ ದೇಹ ಹಾಗೂ ಮನಸ್ಸು ನಿರ್ಜಲೀಕರಣಗೊಳ್ಳುತ್ತದೆ. ನಾನು ನೀಡಿರುವ ಸಮೀಕ್ಷಾ ವರದಿಯ ಕುರಿತು ಗಾಬರಿಗೊಂಡವರು ಜೂನ್‌ 4ರಂದು ಹೆಚ್ಚಿನ ಪ್ರಮಾಣದ ನೀರನ್ನು ಪಕ್ಕದಲ್ಲೇ ಇಟ್ಟುಕೊಳ್ಳುವುದು ತುಂಬ ಒಳಿತು” ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಅವರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಷ್ಟೇ ಅಲ್ಲ, 2021ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಪ್ರಶಾಂತ್‌ ಕಿಶೋರ್‌ ಲೆಕ್ಕಾಚಾರ ನಿಖರವಾಗಿತ್ತು ಎಂಬುದನ್ನು ಕೂಡ ಅವರು ನೆನಪಿಸಿದ್ದಾರೆ.

ಪ್ರಶಾಂತ್‌ ಕಿಶೋರ್‌ ಹೇಳಿದ್ದೇನು?

ಕೆಲ ದಿನಗಳ ಹಿಂದಷ್ಟೇ ಸಂದರ್ಶನವೊಂದರಲ್ಲಿ ಪ್ರಶಾಂತ್‌ ಕಿಶೋರ್‌ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದಿದ್ದರು. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದರು. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದರು. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Lok Sabha Election : ಬಿಜೆಪಿ 305 ಸೀಟ್ ಗೆಲ್ಲೋದು ಗ್ಯಾರಂಟಿ; ಅಮೆರಿಕದ ರಾಜಕೀಯ ಪಂಡಿತನ ಭವಿಷ್ಯ

Continue Reading

ದೇಶ

Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Narendra Modi: “ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂಬುದಾಗಿ ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಗೆ ನರೇಂದ್ರ ಮೋದಿ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪಾಕಿಸ್ತಾನ, ಜಮ್ಮು-ಕಾಶ್ಮೀರ, ಅಣುಬಾಂಬ್‌ ಸೇರಿ ಹಲವು ವಿಷಯಗಳು ಮುನ್ನೆಲೆಗೆ ಬರುತ್ತಿವೆ. ಅದರಲ್ಲೂ, “ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ. ಭಾರತವು ಪಾಕಿಸ್ತಾನಕ್ಕೆ ಗೌರವ ಕೊಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿದ ಹೇಳಿಕೆಗೆ ಖುದ್ದು ಕಾಂಗ್ರೆಸ್‌ ಅಂತರ ಕಾಯ್ದುಕೊಂಡಿದೆ. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ನಾಯಕರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತಿಕ್ರಿಯಿಸಿದ್ದು, “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದಾರೆ.

ಕೆಲ ದಿನಗಳ ಹಿಂದೆಯೂ ಮಣಿಶಂಕರ್‌ ಅಯ್ಯರ್‌ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂಬುದಾಗಿ ಚುನಾವಣೆ ರ‍್ಯಾಲಿಯಲ್ಲಿ ಹೇಳಿದ್ದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Continue Reading
Advertisement
DC m s Diwakar instructed for adequate supply of sowing seed, fertilizers in monsoon season
ಮಳೆ1 min ago

Vijayanagara News: ಬಿತ್ತನೆ ಬೀಜ, ರಸ ಗೊಬ್ಬರ ಸಮರ್ಪಕ ಪೂರೈಕೆಗೆ ಡಿಸಿ ದಿವಾಕರ್ ಸೂಚನೆ

Rave party case Three persons including a PSI of Hebbagodi police station have been suspended
ಕ್ರೈಂ4 mins ago

Rave party: ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಪಿಎಸ್‌ಐ ಸೇರಿ ಮೂವರ ಸಸ್ಪೆಂಡ್‌

Union Minister Pralhad Joshi latest statement in Hubli
ರಾಜಕೀಯ4 mins ago

Pralhad Joshi: ಕೇಜ್ರಿವಾಲ್‌ಗೆ ಸಿಎಂ ಆಗಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಪ್ರಲ್ಹಾದ್‌ ಜೋಶಿ

Miracle case At Bagalakote News
ವೈರಲ್ ನ್ಯೂಸ್12 mins ago

Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

A: Film by Upendra
ಪ್ರಮುಖ ಸುದ್ದಿ14 mins ago

A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

gold rate today rachita ram
ಚಿನ್ನದ ದರ17 mins ago

Gold Rate Today: ಬಂಗಾರದ ಬೆಲೆ ಮತ್ತೆ ತೀವ್ರ ಇಳಿಕೆ; ಇದು ಚಿನ್ನ ಕೊಳ್ಳುವವರ ವಾರ!

'Chow Chow Bath'
ಪ್ರಮುಖ ಸುದ್ದಿ27 mins ago

Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

Maarige Daari
ಪ್ರಮುಖ ಸುದ್ದಿ49 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ1 hour ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು1 hour ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌