BJP Candidates List: ಬಿಜೆಪಿ ಮೊದಲ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನಕಾರ! - Vistara News

Lok Sabha Election 2024

BJP Candidates List: ಬಿಜೆಪಿ ಮೊದಲ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನಕಾರ!

BJP Candidates List: ಲೋಕಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ 33 ಹಾಲಿ ಸಂಸದರಿಗೆ ಟಿಕೆಟ್‌ ಸಿಕ್ಕಿಲ್ಲ ಎನ್ನುವುದು ಅಚ್ಚರಿ.

VISTARANEWS.COM


on

bjp list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election)ಗೆ ಸಜ್ಜಾಗಿರುವ ಬಿಜೆಪಿ ಮೊದಲ ಹಂತದಲ್ಲಿ  195 ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಶನಿವಾರ (ಮಾರ್ಚ್‌ 2) ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ ಹಲವು ವಿಶೇಷತೆಗಳಿವೆ. ಅಚ್ಚರಿ ಎಂದರೆ 33 ಹಾಲಿ ಸಂಸದರಿಗೆ ಟಿಕೆಟ್‌ ಸಿಕ್ಕಿಲ್ಲ (BJP Candidates List).

ಅಸ್ಸಾಂನಲ್ಲಿ ಆರು ಸಂಸದರಿಗಷ್ಟೆ ಟಿಕೆಟ್‌

ಅಸ್ಸಾಂನ 11 ಲೋಕಸಭಾ ಸ್ಥಾನಗಳ ಹೆಸರು ಈ ಪಟ್ಟಿಯಲ್ಲಿದ್ದು, ಆ ಪೈಕಿ ಆರು ಅಭ್ಯರ್ಥಿಗಳು ಹಾಲಿ ಸಂಸದರಾಗಿದ್ದರೆ ಉಳಿದ ಐವರು ಹೊಸ ಮುಖಗಳು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜದೀಪ್ ರಾಯ್ ಅವರು ಗೆದ್ದ ಸಿಲ್ಚಾರ್ ಲೋಕಸಭಾ ಕ್ಷೇತ್ರದಿಂದ ಪರಿಮಲ್ ಸುಕ್ಲಬೈಧ್ಯ ಅವರನ್ನು ಪಕ್ಷವು ಕಣಕ್ಕಿಳಿಸಿದೆ. ಸಂಸದ ಹೋರೆನ್ ಸಿಂಗ್ ಬೇ ಅವರ ಸ್ವಾಯತ್ತ ಜಿಲ್ಲೆ (ಎಸ್‌ಟಿ)ಯಿಂದ ಅಮರ್ ಸಿಂಗ್ ಟಿಸ್ಸೊ ಕಣಕ್ಕಿಳಿಯಲಿದ್ದಾರೆ. ರಾಣಿ ಓಜಾ ಅವರ ಗೌಹಾಟಿ ಲೋಕಸಭಾ ಕ್ಷೇತ್ರದಿಂದ ಸ್ಪಬಿಜುಲಿ ಕಲಿತಾ ಮೇಧಿ ಅವರಿಗೆ ಟಿಕಟ್‌ ನೀಡಲಾಗಿದೆ. 2019ರಲ್ಲಿ ಪಲ್ಲಬ್ ಲೋಚನ್ ದಾಸ್ ಗೆದ್ದಿದ್ದ ತೇಜ್‌ಪುರ ಲೋಕಸಭಾ ಕ್ಷೇತ್ರದಿಂದ ಈ ಬಾರಿ ರಂಜಿತ್ ದತ್ತಾ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಇನ್ನು ದಿಬ್ರುಗಢ ಕ್ಷೇತ್ರದಿಂದ ಕೇಂದ್ರ ಸಚಿವ ಸರ್ಬಾನಂದ್ ಸೋನೊವಾಲ್ ಅವರನ್ನು ಕಣಕ್ಕಿಳಿಸಿರುವ ಬಿಜೆಪಿ ಹಾಲಿ ಸಂಸದ ರಾಮೇಶ್ವರ್ ತೇಲಿ ಅವರನ್ನು ಕೈಬಿಟ್ಟಿದೆ.

ಛತ್ತೀಸ್‌ಗಢದಲ್ಲಿ ನಾಲ್ವರು ಹೊಸಬರು

ಛತ್ತೀಸ್‌ಗಢದ 11 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಈ ಪೈಕಿ ನಾಲ್ವರು ಹೊಸಬರು. ಜಾಂಜ್‌ಗೀರ್ ಚಂಪಾ (ಎಸ್‌ಸಿ) ಕ್ಷೇತ್ರದಿಂದ ಹಾಲಿ ಸಂಸದ ಗುಹರಾಮ್ ಅಜ್ಗಲ್ಲಿ ಬದಲಿಗೆ ಕಮಲೇಶ್ ಜಂಗ್ಡೆ, ರಾಯ್‌ಪುರದಿಂದ ಬಿಜೆಪಿಯ ಹಿರಿಯ ನಾಯಕ ಬ್ರಿಜ್‌ಮೋಹನ್ ಅಗರವಾಲ್ ಕಣಕ್ಕೆ ಇಳಿಯಲಿದ್ದಾರೆ. ಇಲ್ಲಿ 2019ರಲ್ಲಿ ಸುನಿಲ್ ಕುಮಾರ್ ಸೋನಿ ಗೆದ್ದಿದ್ದರು. ಮಹಾಸಮುಂಡ್ ಕ್ಷೇತ್ರದಿಂದ ಹಾಲಿ ಸಂಸದ ಚುನ್ನಿ ಲಾಲ್ ಸಾಹು ಬದಲಿಗೆ ರೂಪ್ ಕುಮಾರಿ ಚೌಧರಿ ಸ್ಪರ್ಧಿಸಲಿದ್ದಾರೆ. ಕಂಕೇರ್ (ಎಸ್‌ಟಿ) ಸ್ಥಾನಕ್ಕೆ ಹಾಲಿ ಸಂಸದ ಮೋಹನ್ ಮಾಂಡವಿ ಬದಲಿಗೆ ಭೋಜರಾಜ್ ನಾಗ್ ಅವರನ್ನು ಹೆಸರಿಸಲಾಗಿದೆ.

ದೆಹಲಿಯಲ್ಲಿ ನಾಲ್ವರು ಸಂಸದರಿಗಿಲ್ಲ ಟಿಕೆಟ್‌

ದೆಹಲಿಯ ಐದು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ನಾಲ್ವರು ಹಾಲಿ ಸಂಸದರಿಗೆ ಟಿಕೆಟ್‌ ಸಿಕ್ಕಿಲ್ಲ. ಎರಡು ಅವಧಿಯ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಹರ್ಷವರ್ಧನ್ ಅವರನ್ನು ಕೈಬಿಟ್ಟು ಚಾಂದನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಪ್ರವೀಣ್ ಖಂಡೇಲ್ವಾಲ್ ಅವರನ್ನು ಪಕ್ಷ ನಿಲ್ಲಿಸಿದೆ. ಪಶ್ಚಿಮ ದೆಹಲಿ ಕ್ಷೇತ್ರದಲ್ಲಿ ಎರಡು ಅವಧಿಯ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಬದಲಿಗೆ ಕಮಲಜೀತ್ ಸೆಹ್ರಾವತ್ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ಬಿಜೆಪಿಯ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರನ್ನು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರ ದೆಹಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ದಕ್ಷಿಣ ದೆಹಲಿಯಿಂದ ರಮೇಶ್ ಬಿಧುರಿ ಅವರನ್ನು ಕೈಬಿಟ್ಟು ರಾಮವೀರ್ ಸಿಂಗ್ ಬಿಧುರಿ ಅವರ ಕೈ ಹಿಡಿಯಲಾಗಿದೆ.

ಗುಜರಾತ್‌ನ ಐವರು ಸಂಸದರ ಹೆಸರಿಲ್ಲ

ಗುಜರಾತ್‌ನ 15 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಈ ಪೈಕಿ ಐದು ಹಾಲಿ ಸಂಸದರನ್ನು ಕೈ ಬಿಟ್ಟಿದೆ. ಬನಸ್ಕಾಂತ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಭಾತಭಾಯ್ ಸಾವಭಾಯಿ ಪಟೇಲ್ ಬದಲಿಗೆ ರೇಖಾಬೆನ್ ಹಿತೇಶ್‌ಭಾಯಿ ಚೌಧರಿ, ಅಹಮದಾಬಾದ್ ಪಶ್ಚಿಮ (ಎಸ್‌ಸಿ)ದಿಂದ ಮೂರು ಅವಧಿಯ ಸಂಸದ ಕಿರಿತ್ ಸೋಲಂಕಿ ಅವರ ಬದಲು ದಿನೇಶ್ಭಾಯ್ ಕಿದರ್ಭಾಯಿ ಮಕ್ವಾನಾ ಕಣಕ್ಕಿಳಿಯಲಿದ್ದಾರೆ. ರಾಜ್‌ಕೋಟ್ ಕ್ಷೇತ್ರಕ್ಕೆ ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಅವರನ್ನು ಅಭ್ಯರ್ಥಿಯನ್ನಾಗಿ ಹೆಸರಿಸಿದ್ದು, ಹಾಲಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಹೆಸರನ್ನು ಕೈ ಬಿಡಲಾಗಿದೆ. ಸಂಸದ ರಮೇಶ್‌ಭಾಯ್ ಲಾವ್‌ಜಿಭಾಯಿ ಧದುಕ್ ಅವರ ಫೋರ್‌ಬಂದರ್ ಕ್ಷೇತ್ರದಲ್ಲಿ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಸ್ಪರ್ಧಿಸಲಿದ್ದಾರೆ. ಪಂಚಮಹಲ್ ಕ್ಷೇತ್ರದಿಂದ ಹಾಲಿ ಸಂಸದ ರತನ್‌ಸಿನ್ಹ ಮಗನ್‌ಸಿನ್ಹ್ ರಾಥೋಡ್ ಬದಲಿಗೆ ರಾಜಪಾಲ್‌ಸಿನ್ಹ್ ಮಹೇಂದ್ರಸಿಂಗ್ ಜಾಧವ್ ಕಣಕ್ಕಿಳಿಯುವುದು ಖಚಿತ.

ಜಾರ್ಖಂಡ್‌ನಲ್ಲಿ ಏನಾಗಿದೆ?

ಜಾರ್ಖಂಡ್‌ನಲ್ಲಿ ಮನೀಶ್ ಜೈಸ್ವಾಲ್ ಅವರನ್ನು ಹಜಾರಿಬಾಗ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ಪ್ರಸ್ತುತ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರ ಪುತ್ರ ಜಯಂತ್ ಸಿನ್ಹಾ ಇಲ್ಲಿ ಸಂಸದರಾಗಿದ್ದಾರೆ. ಲೋಹರ್ದಗಾ (ಎಸ್‌ಟಿ) ಕ್ಷೇತ್ರದಿಂದ ಮೂರು ಬಾರಿ ಸಂಸದ ಸುದರ್ಶನ್ ಭಗತ್ ಬದಲಿಗೆ ಸಮೀರ್ ಓರಾನ್ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿಗೆ ಆದ್ಯತೆ; ಹೀಗಿದೆ ಮೋದಿ-ಶಾ ಜಾತಿ ಲೆಕ್ಕಾಚಾರ

ಮಧ್ಯಪ್ರದೇಶದಲ್ಲಿ ಏಳು ಹೊಸ ಮುಖ

ಮಧ್ಯಪ್ರದೇಶದಲ್ಲಿ ಬಿಜೆಪಿ ಏಳು ಹಾಲಿ ಸಂಸದರನ್ನು ಬದಲಾಯಿಸಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಗ್ವಾಲಿಯರ್‌ನಲ್ಲಿ ಹಾಲಿ ಸಂಸದ ವಿವೇಕ್ ನಾರಾಯಣ್ ಶೆಜ್ವಾಲ್ಕರ್ ಬದಲಿಗೆ ಭರತ್ ಸಿಂಗ್ ಕುಶ್ವಾಹ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಗುಣಾದ ಟಿಕೆಟ್‌ ನೀಡಿ ಹಾಲಿ ಸಂಸದ ಕೃಷ್ಣಪಾಲ್ ಸಿಂಗ್ ಯಾದವ್ ಅವರನ್ನು ಕೈಬಿಡಲಾಗಿದೆ. ಸಾಗರ್ ಕ್ಷೇತ್ರದಿಂದ ರಾಜ್‌ಬಹದ್ದೂರ್ ಸಿಂಗ್ ಬದಲು ಲತಾ ವಾಂಖೆಡೆ, ಟಿಕಮ್‌ಗಢ (ಎಸ್‌ಸಿ) ಕ್ಷೇತ್ರದಿಂದ ವೀರೇಂದ್ರ ಖಾಟಿಕ್ ಸ್ಪರ್ಧಿಸಲಿದ್ದಾರೆ. ವಿದಿಶಾ ಸಂಸದ ರಮಾಕಾಂತ್ ಭಾರ್ಗವ ಅವರನ್ನು ಕೈಬಿಟ್ಟು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಹೆಸರಿಸಲಾಗಿದೆ. ಪ್ರಸ್ತುತ ಸಾಧ್ವಿ ಪ್ರಜ್ಞಾ ಸಿಂಗ್ ಹೊಂದಿರುವ ಭೋಪಾಲ್ ಕ್ಷೇತ್ರದಿಂದ ಅಲೋಕ್ ಶರ್ಮಾ ಅಖಾಡಕ್ಕೆ ಧುಮುಕಿದ್ದಾರೆ. ಹಾಲಿ ಸಂಸದ ಗುಮಾನ್ ಸಿಂಗ್ ದಾಮೋರ್ ಹೊಂದಿರುವ ರತ್ಲಾಮ್ (ಎಸ್‌ಟಿ) ಕ್ಷೇತ್ರದಿಂದ ಅನಿತಾ ನಗರ್ ಸಿಂಗ್ ಚೌಹಾಣ್ ಸ್ಪರ್ಧಿಸಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Exit Poll 2024 :ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಲ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ.

VISTARANEWS.COM


on

Exit poll 2024
Koo

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಇದನ್ನೂ ಓದಿ: Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಲ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ. ಏತನ್ಮಧ್ಯೆ ಕಾಂಗ್ರೆಸ್​ ತನಗೆ ಭಾಗ್ಯಗಳು ಕೈ ಹಿಡಿಯಬಹುದು ಎಂದು ಅಂದಾಜಿಸಿತ್ತು. ಹೀಗಾಗಿ 10ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬಲ್ಲೆವು ಎಂದು ಆಂತರಿಕವಾಗಿ ಹೇಳಿಕೊಂಡಿತ್ತು. ಆದರೆ, ಅವರ ಲೆಕ್ಕಾಚಾರವೂ ತಪ್ಪಾಗಿದೆ. ಇವೆಲ್ಲದರ ನಡುವೆ ಜೆಡಿಎಸ್​ ಬಿಜೆಪಿ ಜತೆಗಿನ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಈ ಪಕ್ಷ ಕನಿಷ್ಠ2 ಸೀಟ್​ ಗೆಲ್ಲುವು ಖಾತರಿ. ಇನ್ನೊಂದು ಸೀಟ್​ ಕೂಡ ಅವರ ಪರವಾಗಬಹುದು ಎಂದು ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆ ಎರಡು ಪ್ರಮುಖ ಮೈತ್ರಿಕೂಟಗಳಾದ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣಗಳ ನಡುವೆ ತೀವ್ರ ಹೋರಾಟವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧರಿಸಿದ್ದರೆ, ಬಿಜೆಪಿ ಮೈತ್ರಿಕೂಟವು ಅಸಮಾಧಾನದ ಗೆಲುವನ್ನು ಸಂಘಟಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ. ಈ ಚುನಾವಣೆಯ ಫಲಿತಾಂಶವು ರಾಷ್ಟ್ರದ ರಾಜಕೀಯ ಭೂದೃಶ್ಯದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

Continue Reading

Lok Sabha Election 2024

Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

Exit Poll 2024: ಕಳೆದ ಎರಡು ತಿಂಗಳಿಂದ ತೀವ್ರ ಚರ್ಚೆ, ಪ್ರಚಾರ, ಹೇಳಿಕೆ, ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು ಶನಿವಾರ ಮುಕ್ತಾಯಗೊಂಡಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರ? ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದಕ್ಕೆ ಮತಗಟ್ಟೆ ಸಮೀಕ್ಷೆ ದಿಕ್ಸೂಚಿಯಾಗಿದೆ. ಆ ಮತಗಟ್ಟೆ ಸಮೀಕ್ಷೆಯ ಮಾಹಿತಿ ಇಲ್ಲಿದೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ತೆರೆ ಬಿದ್ದಿದ್ದು, ಮತಗಟ್ಟೆ ಸಮೀಕ್ಷೆಗಳು ಹೊರಬೀಳತೊಡಗಿವೆ. ಲೋಕಸಭೆ ಚುನಾವಣೆ ಕುರಿತು ಪಿ ಮಾರ್ಕ್‌ ಸಮೀಕ್ಷಾ ವರದಿ ಪ್ರಕಟಿಸಿದ್ದು, ಚುನಾವಣೆಯಲ್ಲಿ ಎನ್‌ಡಿಎ 359 ಕ್ಷೇತ್ರ, ಇಂಡಿಯಾ ಒಕ್ಕೂಟ 154 ಹಾಗೂ ಇತರೆ ಅಭ್ಯರ್ಥಿಗಳು 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಇನ್ನು ಇಂಡಿಯಾ ಟುಡೇ ತಮಿಳುನಾಡಿನ ಸಮೀಕ್ಷೆ ವರದಿ ಪ್ರಕಟಿಸಿದೆ. ಅಷ್ಟೇ ಅಲ್ಲ, ಪೋಲ್‌ ಸ್ಟ್ರ್ಯಾಟ್‌ ಕರ್ನಾಟಕದ ಸಮೀಕ್ಷಾ ವರದಿ ತಿಳಿಸಿದೆ.

ಇದರೊಂದಿಗೆ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರೇ ಪ್ರಧಾನಿಯಾಗುವುದು ಖಚಿತವಾಗಿದೆ. ಲೋಕಸಭೆ ಚುನಾವಣೆಯುದ್ದಕ್ಕೂ ಇಂಡಿಯಾ ಒಕ್ಕೂಟ ಅಬ್ಬರದ ಪ್ರಚಾರ ನಡೆಸಿದರೂ, ಮೂರನೇ ಬಾರಿಗೂ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂಬುದು ಬಹುತೇಕ ಸಮೀಕ್ಷಾ ವರದಿಗಳ ಲೆಕ್ಕಾಚಾರವಾಗಿದೆ. ಅದರಲ್ಲೂ, ತಮಿಳುನಾಡಿನಲ್ಲಿ ಬಿಜೆಪಿಯು ಖಾತೆ ತೆರೆಯಲು ಮುಂದಾಗಿರುವುದು ಬಿಜೆಪಿಗೆ ಪಾಲಿಗೆ ದಕ್ಷಿಣ ಭಾರತದಲ್ಲಿ ವರದಾನವಾಗಲಿದೆ.

ಪ್ರಮುಖ ಸಮೀಕ್ಷಾ ವರದಿಗಳು ಹೀಗಿವೆ

ರಿಪಬ್ಲಿಕ್‌ ಟಿವಿ-ಮ್ಯಾಟ್ರಿಜ್ಎನ್‌ಡಿಎ 353-368ಇಂಡಿಯಾ ಒಕ್ಕೂಟ 118-133ಇತರೆ 43-48
ಎನ್‌ಡಿಟಿವಿ ಇಂಡಿಯಾ-ಜನ್‌ ಕಿ ಬಾತ್ಎನ್‌ಡಿಎ‌ 365ಇಂಡಿಯಾ ಒಕ್ಕೂಟ 142ಇತರೆ 36
ಜನ್‌ ಕಿ ಬಾತ್ಎನ್‌ಡಿಎ‌ 362-392ಇಂಡಿಯಾ ಒಕ್ಕೂಟ 141-161ಇತರೆ 10-2
ಇಂಡಿಯಾ ನ್ಯೂಸ್-ಡಿ ಡೈನಾಮಿಕ್ಸ್ಎನ್‌ಡಿಎ‌ 371ಇಂಡಿಯಾ ಒಕ್ಕೂಟ 125ಇತರೆ 47

ಪಿ ಮಾರ್ಕ್‌

ಎನ್‌ಡಿಎ: 359
ಇಂಡಿಯಾ: ಒಕ್ಕೂಟ 154
ಇತರೆ: 30

ವಿಸ್ತಾರ ನ್ಯೂಸ್‌-COPS

ಎನ್‌ಡಿಎ: 330-350
ಇಂಡಿಯಾ ಒಕ್ಕೂಟ: 130-150
ಇತರೆ: 20-30

ಇಂಡಿಯಾ ಟುಡೇ: ತಮಿಳುನಾಡು

ಡಿಎಂಕೆ: 20-22
ಬಿಜೆಪಿ: 1-3

ಪೋಲ್‌ ಸ್ಟ್ರ್ಯಾಟ್: ಕರ್ನಾಟಕ

ಬಿಜೆಪಿ 18
ಕಾಂಗ್ರೆಸ್‌: 8
ಜೆಡಿಎಸ್‌: 2

ಇಂಡಿಯಾ ನ್ಯೂಸ್‌

ಎನ್‌ಡಿಎ: 371
ಇಂಡಿಯಾ ಒಕ್ಕೂಟ: 125

ಮ್ಯಾಟ್ರಿಜ್

‌ಎನ್‌ಡಿಎ: 353-368
ಇಂಡಿಯಾ ಒಕ್ಕೂಟ: 120

ಮ್ಯಾಟ್ರಿಜ್-‌ ಉತ್ತರ ಪ್ರದೇಶ

ಎನ್‌ಡಿಎ: 69-74
ಇಂಡಿಯಾ ಒಕ್ಕೂಟ: 6-11

ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿತ್ತು. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ ಮಾತ್ರ ಜಯಿಸಲಿದೆ. ಇನ್ನು, ರಾಮಮಂದಿರ ಕಾರಣದಿಂದ ಬಿಜೆಪಿಗೆ ಪ್ರಮುಖವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 64-66 ಕ್ಷೇತ್ರಗಳು ಲಭಿಸಲಿವೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಮುಂಬೈ ಸಟ್ಟಾ ಬಜಾರ್‌ ಸಮೀಕ್ಷೆಯು ಬಿಜೆಪಿ 270-280 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಕಾಂಗ್ರೆಸ್‌ 70-80 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ತಿಳಿಸಿತ್ತು. ಈಗ ಬಹುತೇಕ ಸಮೀಕ್ಷೆಗಳು ಇದೇ ಅಂಶವನ್ನು ಉಲ್ಲೇಖಿಸಿವೆ.

ಇದನ್ನೂ ಓದಿ: Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

Continue Reading

ದೇಶ

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Exit Poll 2024: Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿಯ ಲೈವ್‌ಅನ್ನು ಇಲ್ಲಿ ವೀಕ್ಷಿಸಿ.

VISTARANEWS.COM


on

Exit Poll 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿಯ ಲೈವ್‌ ಅನ್ನು ಇಲ್ಲಿ ವೀಕ್ಷಿಸಿ.

ಮುಂಬೈ ಸಟ್ಟಾ ಬಜಾರ್‌ ವರದಿ ಹೀಗಿದೆ

ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ ಮಾತ್ರ ಜಯಿಸಲಿದೆ. ಇನ್ನು, ರಾಮಮಂದಿರ ಕಾರಣದಿಂದ ಬಿಜೆಪಿಗೆ ಪ್ರಮುಖವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 64-66 ಕ್ಷೇತ್ರಗಳು ಲಭಿಸಲಿವೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಮುಂಬೈ ಸಟ್ಟಾ ಬಜಾರ್‌ ಸಮೀಕ್ಷೆಯು ಬಿಜೆಪಿ 270-280 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಕಾಂಗ್ರೆಸ್‌ 70-80 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ತಿಳಿಸಿತ್ತು.

ಯೋಗೇಂದ್ರ ಯಾದವ್‌ ಹೇಳಿದ್ದಿಷ್ಟು

ಬಿಜೆಪಿಯು ಮತ್ತೊಂದು ಸಾರ್ವತ್ರಿಕ ಚುನಾವಣೆಯ ವಿಜಯವನ್ನು ಪಡೆಯುತ್ತದೆ ಎಂದು ಚುನಾವಣಾ ರಣತಂತ್ರಗಾರ ಯೋಗೇಂದ್ರ ಯಾದವ್‌ ಅವರು ಭವಿಷ್ಯ ನುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಯಾದವ್‌ ಅಚ್ಚರಿ ಮೂಡಿಸಿದ್ದಾರೆ. ಯಾದವ್ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲಬಹುದು. ಅಂದರೆ ಎನ್‌ಡಿಎ (NDA) ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಸುಳಿದಾಡಬಹುದು.

ಪ್ರಶಾಂತ್‌ ಕಿಶೋರ್‌ ಲೆಕ್ಕಾಚಾರ ಈ ರೀತಿ ಇದೆ

ಚುನಾವಣೆ ತಜ್ಞ, ರಾಜಕೀಯ ಪರಿಣತರಾದ ಪ್ರಶಾಂತ್‌ ಕಿಶೋರ್‌ ಅವರು ಕೂಡ ದೇಶದಲ್ಲಿ ಮೋದಿ ಹ್ಯಾಟ್ರಿಕ್‌ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ತಿಳಿಸಿದ್ದಾರೆ. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ‌

ಇದನ್ನೂ ಓದಿ: Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Continue Reading

ಪ್ರಮುಖ ಸುದ್ದಿ

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Narendra Modi :2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

VISTARANEWS.COM


on

Narendra Modi
Koo

ಚೆನ್ನೈ: ಹಲವಾರು ತಿಂಗಳ ಲೋಕ ಸಭಾ ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಕೈಗೊಂಡಿದ್ದ 45 ಗಂಟೆಗಳ ಧ್ಯಾನವನ್ನು ಪೂರ್ಣಗೊಳಿಸಿದ್ದಾರೆ. ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾಗಿರುವ ಧ್ಯಾನ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಧ್ಯಾತ್ಮಿಕ ಕೈಂಕರ್ಯ ಮಾಡಿದ್ದರು.

2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

ಇದು ಭಾರತದ ದಕ್ಷಿಣ ತುದಿಯಾಗಿದೆ. ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಪ್ರದೇಶ ಸಂಗಮವಾಗುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳ. ಕನ್ಯಾಕುಮಾರಿಗೆ ಹೋಗುವ ಮೂಲಕ ಮೋದಿ ರಾಷ್ಟ್ರೀಯ ಏಕತೆಯ ಸಂಕೇತವನ್ನು ಸಾರಿದ್ದರು ಎನ್ನಲಾಗಿದೆ.

ಜೂನ್ 1 ರಂದು ನಡೆಯಲಿರುವ 2024 ರ ಲೋಕಸಭಾ ಚುನಾವಣೆಯ ಅಂತಿಮ ಮತ್ತು ಏಳನೇ ಹಂತದ ಹಿನ್ನೆಲೆಯಲ್ಲಿ ಮೋದಿ ಗುರುವಾರ ಪಂಜಾಬ್​​ ಹೋಶಿಯಾರ್​ಪುರದಲ್ಲಿ ತಮ್ಮ ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದರು.

ಸುದೀರ್ಘ ಪ್ರಚಾರ ರ್ಯಾಲಿ

ಮೋದಿ 75 ದಿನಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳು ಸೇರಿದಂತೆ ಸುಮಾರು 206 ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅವರು ವಿವಿಧ ಸುದ್ದಿ ಮತ್ತು ಮಾಧ್ಯಮ ವೇದಿಕೆಗಳೊಂದಿಗೆ ಸುಮಾರು 80 ಸಂದರ್ಶನಗಳನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಆಧ್ಯಾತ್ಮಿಕ ಪ್ರವಾಸಗಳನ್ನು ಕೈಗೊಂಡಿದ್ದರು. 2019ರಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ್ದ ಅವರು, 2014ರಲ್ಲಿ ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮುಖಂಡ ತೇಜಸ್ವಿ ಯಾದವ್ ಅವರು ಶನಿವಾರ ಕನ್ಯಾಕುಮಾರಿಯಲ್ಲಿ ಮೋದಿಯವರ ನಡೆಸುತ್ತಿರುವ ಆಧ್ಯಾತ್ಮಿಕ ಚಟುವಟಿಕೆಯನ್ನು ಫೋಟೋ ಶೂಟ್” ಎಂದು ಲೇವಡಿ ಮಾಡಿದ್ದರು. ಮೋದಿ ಅವರು ಯಾವುದೇ ಧ್ಯಾನ ಮಾಡುತ್ತಿಲ್ಲ, ಫೋಟೋ ಶೂಟ್ ಮಾತ್ರ ನಡೆಯುತ್ತಿದೆ. ಫೋಟೋ ಶೂಟ್ ಮುಗಿದ ನಂತರ, ಅವರು ಹಿಂತಿರುಗುತ್ತಾರೆ” ಎಂದು ತೇಜಸ್ವಿ ಯಾದವ್ ಹೇಳಿದರು.

Continue Reading
Advertisement
Ballari DC Prashanth Kumar Mishra visit to Vote counting centre Review of final preparations
ಬಳ್ಳಾರಿ4 mins ago

Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Exit poll 2024
ಪ್ರಮುಖ ಸುದ್ದಿ4 mins ago

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

100 kg of banned plastic seized by municipal council in Shira
ಕರ್ನಾಟಕ5 mins ago

Shira News: ಶಿರಾದಲ್ಲಿ ನಗರಸಭೆಯಿಂದ ಗೋದಾಮಿನ ಮೇಲೆ ದಾಳಿ; 100 ಕೆಜಿ ನಿಷೇಧಿತ ಪ್ಲಾಸ್ಟಿಕ್‌ ವಶ

Selco India SELCO Suryamitra Annual Award to Richard Hansen of America
ಕರ್ನಾಟಕ7 mins ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್ ಹ್ಯಾನ್ಸೆನ್‌ಗೆ ಸೆಲ್ಕೋ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

union Minister Pralhad Joshi latest statement about Valmiki Corporation scam
ಕರ್ನಾಟಕ8 mins ago

Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Exit Poll 2024
Lok Sabha Election 202422 mins ago

Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

Exit Poll 2024
ದೇಶ51 mins ago

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Rahul Gandhi
ಕರ್ನಾಟಕ1 hour ago

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್1 hour ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌