Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು - Vistara News

Lok Sabha Election 2024

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Kangana Ranaut: ಬಾಲಿವುಡ್‌ ʼಕ್ವೀನ್‌ʼ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ಕಂಗನಾ ರಣಾವತ್​ ಈಗ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸುತ್ತಿದ್ದಾರೆ. ಮೇ 14ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅವರು ತಮ್ಮ ಬಳಿ 91 ಕೋಟಿ ರೂ.ಗಳ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಸದ್ಯ ಇದು ನೆಟ್ಟಿಗರ ಗಮನ ಸೆಳೆದಿದೆ. ಈ ಬಗ್ಗೆ ನಾನಾ ರೀತಿಯ ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Kangana Ranaut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ಒಂದಲ್ಲ ಒಂದು ವಿವಾದದ ಮೂಲಕವೇ ಸದಾ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್​ (Kangana Ranaut) ಈಗ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election 2024)ಯಲ್ಲಿ ಸ್ಪರ್ಧಿಸುತ್ತಿದ್ದು, ಹಿಮಾಚಲ ಪ್ರದೇಶದ ಮಂಡಿಯಿಂದ ಮೇ 14ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅವರು ತಮ್ಮ ಬಳಿ 91 ಕೋಟಿ ರೂ.ಗಳ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಜತೆಗೆ ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಸದ್ಯ ಇದು ನೆಟ್ಟಿಗರ ಗಮನ ಸೆಳೆದಿದೆ. ಈ ಬಗ್ಗೆ ನಾನಾ ರೀತಿಯ ಕಮೆಂಟ್‌ ಮಾಡುತ್ತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼಕಂಗನಾ ರಾಣಾವತ್‌ 50 ಎಲ್‌ಐಸಿ ಪಾಲಿಸಿ ಹಿಂದಿದ್ದಾರೆ. ಏಜೆಂಟ್‌ ಉತ್ತಮ ಕೆಲಸ ಮಾಡಿದ್ದಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಕಂಗನಾ ರಾಣಾವತ್‌ 50 ಎಲ್ಐಸಿ ಪಾಲಿಸಿಗಳನ್ನು ಹೊಂದಿದ್ದಾರೆ! ಇದು ಭಾರತದಲ್ಲಿ ಆರ್ಥಿಕ ಸಾಕ್ಷರತೆಯ ವ್ಯಾಪಕ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅನೇಕ ಎಲ್ಐಸಿ ಪಾಲಿಸಿಗಳನ್ನು ಖರೀದಿಸುವ ಮನಸ್ಥಿತಿಯನ್ನು ಯಾರೂ ವಿರೋಧಿಸಲು ಸಾಧ್ಯವಿಲ್ಲ ಎನ್ನುವುದು ಈ ಮೂಲಕ ಸಾಬೀತಾಗಿದೆ. ನಿಮ್ಮ ಸುತ್ತಮುತ್ತ ಇದೇ ರೀತಿಯ ಅನೇಕ ಪಾಲಿಸಿ ಖರೀದಿಗಳ ಪ್ರಕರಣಗಳನ್ನು ಗಮನಿಸಿದ್ದೀರಾ?ʼʼ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

ʼʼಕಂಗನಾ ಅವರ ಎಲ್‌ಐಸಿ ಏಜೆಂಟ್‌ ಅದೃಷ್ಟವಂತ. ಅವರು ಫುಲ್‌ ಖುಷಿಯಾಗಿರಬಹುದು. ಬಹುಶಃ ಏಜೆಂಟ್‌ ಅವರ ಸಂಬಂಧಿಕರಿರಬಹುದುʼʼ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ. ʼʼಕಂಗನಾ ರಾಣಾವತ್‌ 50 ಎಲ್‌ಐಸಿ ಪಾಲಿಸಿ ಮಾಡಿಸುವ ಮೂಲಕ ಆರ್ಥಿಕ ಸಾಕ್ಷರತೆಯ ಉತ್ತುಂಗದಲ್ಲಿದ್ದಾರೆʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಕಂಗನಾ ಅವರ ಆಸ್ತಿ ಮೌಲ್ಯ 90 ಕೋಟಿ ರೂ. ಅವರು ಯಾವುದೇ ಸ್ಟಾಕ್‌ ಅಥವಾ ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲ. ಆದರೆ 50 ಎಲ್‌ಐಸಿ ಪಾಲಿಸಿ ಹೊಂದಿದ್ದಾರೆʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿದೆ.

5 ಕೋಟಿ ರೂ. ಮೌಲ್ಯದ ಚಿನ್ನಾಭರಣ

ಬಾಲಿವುಡ್‌ನ ಟಾಪ್‌ ನಟಿಯಲ್ಲಿ ಒಬ್ಬರೆನಿಸಿಕೊಂಡಿರುವ ಕಂಗನಾ ಪ್ರತೀ ಚಿತ್ರಕ್ಕೆ ದುಬಾರಿ ಸಂಭಾವನೆ ಪಡೆಯುತ್ತಾರೆ. ಇತ್ತೀಚಿನ ಅವರ ಚಿತ್ರಗಳು ಹಿಟ್‌ ಆಗದಿದ್ದರೂ ಅವರ ಬೇಡಿಕೆ ಒಂದಿನಿತೂ ಕಡಿಮೆ ಆಗಲಿಲ್ಲ. ಜಾಹೀರಾತು ಮೂಲಕವೂ ಅವರು ಆದಾಯ ಗಳಿಸುತ್ತಿದ್ದಾರೆ. ಅವರ ಬಳಿ 5 ಕೋಟಿ ರೂ. ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ರೂ. ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ರೂ. ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ರೂ. ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ಕಂಗನಾ ತಿಳಿಸಿದ್ದಾರೆ.

ಇದನ್ನೂ ಓದಿ: Kangana Ranaut: ವಿಶೇಷ ಗೆಟಪ್ ನಲ್ಲಿ ಮತದಾರರ ಸೆಳೆಯುತ್ತಿರುವ ಕಂಗನಾ ರಣಾವತ್

17 ಕೋಟಿ ರೂ. ಸಾಲ

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ. ಅಲ್ಲದೆ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಜತೆಗೆ 17 ಕೋಟಿ ರೂ.ಗಳ ಸಾಲ ಇರುವುದಾಗಿಯೂ ಘೋಷಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

Priyanka Gandhi: ಅಮೇಥಿ ಮತ್ತು ರಾಯ್​​ಬರೇಲಿ ಲೋಕಸಭಾ ಸ್ಥಾನಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಯ್ಕೆಯಾಗಿದ್ದವು. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಊಹಿಸಲಾಗಿತ್ತು. ಕೊನೆಗೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯಲ್ಲಿ ಸ್ಪರ್ಧಿಸಿದ್ದರು.

VISTARANEWS.COM


on

Priyanka Gandhi:
Koo

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಸ್ಪರ್ಧಿಯಾಗಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi) ನಿಂತಿದ್ದರೆ 2 ರಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಿದ್ದರು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ರಾಯ್​ಬರೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

“ನಾನು ಇದನ್ನು ಅಹಂಕಾರದಿಂದ ಹೇಳುತ್ತಿಲ್ಲ” ಎಂದು ಹೇಳಿದ ರಾಹುಲ್ ಗಾಂಧಿ, ಭಾರತದ ಜನರು ಪ್ರಧಾನಿ ಮೋದಿಯವರ ಆಡಳಿತದಿಂದ ಸಂತುಷ್ಟರಾಗಿಲ್ಲ. ಅವರಿಗೆ ಮತದಾರರು ಸ್ಪಷ್ಟ ಸಂದೇಶ ಕಳುಹಿಸಿದ್ದಾರೆ. ಹೀಗಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ನುಡಿದಿದ್ದಾರೆ. ಜನರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ನಿಲ್ಲುತ್ತೇವೆ ಎಂಬ ಸಂದೇಶವನ್ನು ಕಳುಹಿಸಿದ್ದಾರೆ” ಎಂದು ಮುಂದುವರಿದ ರಾಹುಲ್ ಗಾಂಧಿ ಹೇಳಿದರು.

ಅಮೇಥಿ ಮತ್ತು ರಾಯ್​​ಬರೇಲಿ ಲೋಕಸಭಾ ಸ್ಥಾನಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಯ್ಕೆಯಾಗಿದ್ದವು. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಊಹಿಸಲಾಗಿತ್ತು. ಕೊನೆಗೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯಲ್ಲಿ ಸ್ಪರ್ಧಿಸಿದ್ದರು. ಅವರು ಅಮೇಥಿಯಿಂದ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಿದರು, ಅವರು ಬಿಜೆಪಿಯ ಸ್ಮೃತಿ ಇರಾನಿ ಅವರನ್ನು 1.6 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ಇದನ್ನೂ ಓದಿ: Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆದಾಗ್ಯೂ, ಅವರ ಗೆಲುವಿನ ಅಂತರವು 2019 ಮತ್ತು 2014 ಕ್ಕಿಂತ ಕಡಿಮೆಯಾಗಿದೆ. 1.5 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ಬಿಜೆಪಿ ಲೋಕಸಭೆಯಲ್ಲಿ 240 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಕೊರತೆಯನ್ನು ಎದುರಿಸಿತು. 2014 ಮತ್ತು 2019 ರ ಲೋಕಸಭಾ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ 99 ಸ್ಥಾನಗಳನ್ನು ಗಳಿಸಿದೆ

Continue Reading

ಪ್ರಮುಖ ಸುದ್ದಿ

Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Modi Ka Parivar : ಕಳೆದ ಮಾರ್ಚ್​ನಲ್ಲಿ ಲಾಲೂ ಪ್ರಸಾದ್ ಯಾದವ್​​, ಮೋದಿಯ ವಿರುದ್ಧ ಟೀಕೆ ಮಾಡುವಾಗ, ಕುಟುಂಬವೇ ಇಲ್ಲದವರು ಎಂದಿದ್ದರು. ತಿರುಗೇಟು ಕೊಟ್ಟಿದ್ದ ಮೋದಿ, ಭಾರತ ಎಲ್ಲರೂ ನನ್ನ ಕುಟುಂಬದ ಸದಸ್ಯರು ಎಂದಿದ್ದರು. ಈ ವೇಳೆ ಮೋದಿ ಪರವಾಗಿ ನಿಂತ ಬಿಜೆಪಿ ನಾಯಕರು ನಾವೆಲ್ಲರೂ ಅವರ ಕುಟುಂಬ ಎಂದು ಹೇಳಿದ್ದರು. ಆ ಅಭಿಯಾನದ ಭಾಗವೇ ‘ಮೋದಿ ಕಾ ಪರಿವಾರ್​’.

VISTARANEWS.COM


on

Modi Ka Parivar
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟ ಸರ್ಕಾರ ರಚಿಸಿದ ಬಳಿಕ ತಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದ ತಿಳಿಸಿದ ಪ್ರಧಾನ ಮಂತ್ರಿ ಮೋದಿ ಅವರು, ಚುನಾವಣೆ ವೇಳೆ ತಮಗೆ ಬೆಂಬಲ ವ್ಯಕ್ತಪಡಿಸಲು ತಮ್ಮ ತಮ್ಮ ಸೋಶಿಯಲ್​ ಮೀಡಿಯಾ ಹ್ಯಾಂಡಲ್​ಗಳಲ್ಲಿ ಹಾಕಿದ್ದ ‘ಮೋದಿ ಕಾ ಪರಿವಾರ್​’ (ಮೋದಿಯ ಕುಟುಂಬ) ಉಲ್ಲೇಖವನ್ನು ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ. ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರು, ಮೋದಿಗೆ ಕುಟುಂಬವಿಲ್ಲ ಎಂದು ಹೇಳಿರುವುದಕ್ಕೆ ಪ್ರತಿಯಾಗಿ ಮೋದಿ ಅಭಿಮಾನಿಗಳು, ಬಿಜೆಪಿ ನಾಯಕರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹ್ಯಾಂಡಲ್​ಗಳಲ್ಲಿ ‘ಮೋದಿ ಕಾ ಪರಿವಾರ್​’ (Modi Ka Parivar) ಎಂದು ಬರೆದುಕೊಂಡಿದ್ದರು.

ಕಳೆದ ಮಾರ್ಚ್​ನಲ್ಲಿ ಲಾಲೂ ಪ್ರಸಾದ್ ಯಾದವ್​​, ಮೋದಿಯ ವಿರುದ್ಧ ಟೀಕೆ ಮಾಡುವಾಗ, ಕುಟುಂಬವೇ ಇಲ್ಲದವರು ಎಂದಿದ್ದರು. ತಿರುಗೇಟು ಕೊಟ್ಟಿದ್ದ ಮೋದಿ, ಭಾರತ ಎಲ್ಲರೂ ನನ್ನ ಕುಟುಂಬದ ಸದಸ್ಯರು ಎಂದಿದ್ದರು. ಈ ವೇಳೆ ಮೋದಿ ಪರವಾಗಿ ನಿಂತ ಬಿಜೆಪಿ ನಾಯಕರು ನಾವೆಲ್ಲರೂ ಅವರ ಕುಟುಂಬ ಎಂದು ಹೇಳಿದ್ದರು. ಆ ಅಭಿಯಾನದ ಭಾಗವೇ ‘ಮೋದಿ ಕಾ ಪರಿವಾರ್​’.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಚುನಾವಣಾ ಪ್ರಚಾರದ ಮೂಲಕ ಭಾರತದಾದ್ಯಂತ ಜನರು ನನ್ನ ಮೇಲಿನ ಪ್ರೀತಿಯ ಸಂಕೇತವಾಗಿ ತಮ್ಮ ಸಾಮಾಜಿಕ ಮಾಧ್ಯಮಕ್ಕೆ ‘ಮೋದಿ ಕಾ ಪರಿವಾರ್’ ಸೇರಿಸಿದ್ದರು. ನಾನು ಅದರಿಂದ ಸಾಕಷ್ಟು ಶಕ್ತಿಯನ್ನು ಪಡೆದುಕೊಂಡೆ. ಭಾರತದ ಜನರು ಎನ್​ಡಿಎಗೆ ಸತತ ಮೂರನೇ ಬಾರಿಗೆ ಬಹುಮತ ನೀಡಿದ್ದಾರೆ, ಇದು ಒಂದು ರೀತಿಯ ದಾಖಲೆಯಾಗಿದ. ನಮ್ಮ ರಾಷ್ಟ್ರದ ಸುಧಾರಣೆಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ನಮಗೆ ಜನಾದೇಶವನ್ನು ನೀಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾaದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

“ನಾವೆಲ್ಲರೂ ಒಂದೇ ಕುಟುಂಬ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವುದರೊಂದಿಗೆ, ನಾನು ಮತ್ತೊಮ್ಮೆ ಭಾರತದ ಜನರಿಗೆ ಧನ್ಯವಾದ ಹೇಳುತ್ತೇನೆ. ಈಗ ನಿಮ್ಮ ಸಾಮಾಜಿಕ ಮಾಧ್ಯಮಗಳಿಂದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ವಿನಂತಿಸುತ್ತೇನೆ. ಹ್ಯಾಂಡಲ್​ಗಳ ಹೆಸರು ಬದಲಾಗಬಹುದು. ಆದರೆ ಭಾರತದ ಪ್ರಗತಿಗಾಗಿ ಶ್ರಮಿಸುತ್ತಿರುವ ಒಂದು ಪರಿವಾರವಾಗಿ ನಮ್ಮ ಬಂಧವು ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಪಿಎಂ ಮೋದಿ ತಮ್ಮ ಎಕ್ಸ್ ಹ್ಯಾಂಡಲ್​​ನಲ್ಲಿ ತಮ್ಮ ಪ್ರೊಫೈಲ್ ಮತ್ತು ಹೆಡರ್ ಫೋಟೋಗಳನ್ನು ಸಹ ಬದಲಾಯಿಸಿದ್ದಾರೆ. ಇತ್ತೀಚಿನ ಚಿತ್ರಗಳು ಅವರ ಅಧಿಕಾರದ ಮೊದಲ ದಿನ ಮತ್ತು ಅವರ ಸರ್ಕಾರದ ಮೂರನೇ ಅವಧಿಯ ಪ್ರಮಾಣವಚನ ಸಮಾರಂಭದ ಚಿತ್ರಗಳಾಗಿವೆ. ಅವರು ಸಂವಿಧಾನವನ್ನು ಹಣೆಗೆ ಒತ್ತಿಕೊಳ್ಳುವ ಚಿತ್ರ ಹೆಡರ್​ನಲ್ಲಿದೆ.

Continue Reading

ರಾಜಕೀಯ

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಹಾಗೂ ತಳಮಟ್ಟದಲ್ಲಿ ಜನ ಸಂಪರ್ಕಕ್ಕೆ ಹೆಸರುವಾಸಿಯಾದ ಏಕ್ನಾಥ್ ಖಡ್ಸೆ ಅವರ ಸೊಸೆಯಾಗಿರುವ ರಕ್ಷಾ ಖಡ್ಸೆ ಅವರು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯಕ್ಕೆ ಸೇರ್ಪಡೆಯಾಗಿದ್ದಾರೆ. ಈ ರಕ್ಷಾ ಖಡ್ಸೆ (Raksha Khadse) ಅವರು ರಾಜಕೀಯದಲ್ಲಿ ಬೆಳೆದು ಬಂದ ಹಾದಿ ಕುತೂಹಲಕರವಾಗಿದೆ. ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Raksha Khadse
Koo

ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ರಚನೆಯಾದ 3.0 ಸರಕಾರದ ಸಚಿವಾಲಯದಲ್ಲಿ (3.0 cabinet Ministry) ಈಗ ಎಲ್ಲರ ಗಮನ ಸೆಳೆದಿರುವುದು ಬಿಜೆಪಿ (BJP) ಯುವ ಸಂಸದೆ (MP) ರಕ್ಷಾ ಖಡ್ಸೆ (Raksha Khadse). ಮಹಾರಾಷ್ಟ್ರದ (maharastra) ರೇವರ್ (Raver) ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಬಿಜೆಪಿಯ ರಕ್ಷಾ ಖಡ್ಸೆ , 2024ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.

ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಹಾಗೂ ತಳಮಟ್ಟದಲ್ಲಿ ಜನ ಸಂಪರ್ಕಕ್ಕೆ ಹೆಸರುವಾಸಿಯಾದ ಏಕ್‌ನಾಥ್‌ ಖಡ್ಸೆ ಅವರ ಸೊಸೆಯಾಗಿರುವ ರಕ್ಷಾ ಅವರ ಕಠಿಣ ಪರಿಶ್ರಮ ಮತ್ತು ನಿರಂತರ ವಿಜಯಿಯಾಗಿರುವುದಕ್ಕೆ ಕೊಡುಗೆಯಾಗಿ ಅವರನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯದಲ್ಲಿ ಸೇರ್ಪಡೆಗೊಳಿಸಲಾಗಿದೆ.

ಎನ್‌ಡಿಎ ಜೊತೆ ವಿವಿಧ ಪಕ್ಷಗಳ ಮೈತ್ರಿ ಬಳಿಕ ಹೊಸ ರಾಜಕೀಯ ಬೆಳವಣಿಗೆಗಳ ನಿರೀಕ್ಷೆಯ ಮಧ್ಯೆ ಮಹಾರಾಷ್ಟ್ರದ ಹಲವಾರು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಅನುಭವಿಸಿದ್ದರೂ ರಕ್ಷಾ ಖಡ್ಸೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು. ಮಹಾರಾಷ್ಟ್ರದ ರೇವರ್‌ನಲ್ಲಿ ಎರಡು ಬಾರಿ ಬಿಜೆಪಿ ಸಂಸದರಾಗಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ದಾಖಲಿಸಿದರು. ರಕ್ಷಾ ಖಡ್ಸೆ ತಮ್ಮ ಹ್ಯಾಟ್ರಿಕ್ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯಕ್ಕೆ ಸೇರಿದ್ದಾರೆ.


ರಾಜಕೀಯ ಪ್ರವೇಶ

2013ರಲ್ಲಿ ಪತಿ ನಿಖಿಲ್ ಖಡ್ಸೆ ನಿಧನದ ಬಳಿಕ ರಕ್ಷಾ ಖಡ್ಸೆ ಅವರು ತಮ್ಮ ವೈಯಕ್ತಿಕ ವರ್ಚಸ್ಸಿನ ಮೂಲಕವೇ ಎಲ್ಲರ ಗಮನ ಸೆಳೆದಿದ್ದಾರೆ. ಇಬ್ಬರು ಸಣ್ಣ ಮಕ್ಕಳೊಂದಿಗೆ ರಾಜಕೀಯ ಜವಾಬ್ದಾರಿ ಹೊತ್ತ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಇದು ಅವರ ವೈಯಕ್ತಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳೊಂದಿಗೆ ಸಮತೋಲನಗೊಳಿಸುವ ಸಾಮರ್ಥ್ಯವನ್ನು ಎತ್ತಿ ತೋರಿಸಿತ್ತು.

ರಕ್ಷಾ ಖಡ್ಸೆ ಮಧ್ಯಪ್ರದೇಶದ ಖೇಟಿಯಾದಲ್ಲಿ ಜನಿಸಿದರು. ಅವರ ರಾಜಕೀಯ ಜೀವನವು ತಳಮಟ್ಟದಲ್ಲಿ ಪ್ರಾರಂಭವಾಯಿತು. ಕೊಥಡಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅವರು ಬಳಿಕ ಜಲ್ಗಾಂವ್ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು.

ಯಶಸ್ಸಿನ ಪಯಣ

ಸ್ಥಳೀಯ ರಾಜಕಾರಣದಲ್ಲಿ ಅವರ ಆರಂಭಿಕ ಯಶಸ್ಸು 2014ರ ಲೋಕಸಭಾ ಚುನಾವಣೆಯಲ್ಲಿ ಸಂಸತ್ ಸದಸ್ಯರಾಗಿ (ಸಂಸದ) ಚುನಾವಣೆಗೆ ನಿಲ್ಲಲು ಪ್ರೇರಣೆಯಾಯಿತು. ಎನ್‌ಸಿಪಿಯ ಮನೀಶ್ ಜೈನ್‌ ಅವರನ್ನು 3,18,608 ಮತಗಳ ಅಂತರದಿಂದ ಸೋಲಿಸಿ ಲೋಕಸಭೆ ಪ್ರವೇಶಿಸಿದರು. 16ನೇ ಲೋಕಸಭೆಯ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾದ ಅವರಿಗೆ ಆಗ 26 ವರ್ಷ.

2019ರ ಲೋಕಸಭಾ ಚುನಾವಣೆಯಲ್ಲಿ ಖಡ್ಸೆ ಎರಡನೇ ಬಾರಿಗೆ ರೇವರ್ ಲೋಕಸಭೆಯ ಸಂಸದರಾಗಿ ಮತ್ತೆ ಆಯ್ಕೆಯಾದರು. ಆಗ ಅವರು ಕಾಂಗ್ರೆಸ್‌ನ ಉಲ್ಹಾಸ್ ಪಾಟೀಲ್ ಅವರನ್ನು 3,35,882 ಮತಗಳಿಂದ ಸೋಲಿಸಿದರು.

2024ರ ಲೋಕಸಭಾ ಚುನಾವಣೆಯಲ್ಲಿ, ಅವರು ತಮ್ಮ ರೇವರ್ ಸ್ಥಾನವನ್ನು ಉಳಿಸಿಕೊಂಡರು. ಹತ್ತಿರದ ಎನ್‌ಸಿಪಿ ಶರಾದ್ ಪವಾರ್ ಬಣದ ಅಭ್ಯರ್ಥಿಯನ್ನು 2,72,183 ಮತಗಳ ಅಂತರದಿಂದ ಸೋಲಿಸಿದರು.

ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

ಆಸಕ್ತಿ, ಉದ್ದೇಶ

ರಕ್ಷಾ ಅವರ ಎಕ್ಸ್ ಪ್ರೊಫೈಲ್ ಪ್ರಕಾರ ಅವರಿಗೆ ಮಹಿಳಾ ಸಬಲೀಕರಣ, ಮಕ್ಕಳ ಶಿಕ್ಷಣ ಮತ್ತು ರೈತರ ಕಲ್ಯಾಣದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಖಡ್ಸೆ ಅವರ ರಾಜಕೀಯ ಆದ್ಯತೆಗಳು ಜಲ್ಗಾಂವ್ ಪ್ರದೇಶದಲ್ಲಿನ ನೀರಿನ ಕೊರತೆಯನ್ನು ಪರಿಹರಿಸುವುದು ಮತ್ತು ರಸ್ತೆ ಸಂಪರ್ಕವನ್ನು ಸುಧಾರಿಸುವುದು. ಮೂಲಸೌಕರ್ಯ ಮತ್ತು ಶಿಕ್ಷಣಕ್ಕೆ ಅವಶ್ಯಕವೆಂದು ಅವರು ನಂಬಿಕೆ. ರೇವರ್‌ನಲ್ಲಿ ನೀರಾವರಿ ಸ್ಥಾವರಕ್ಕೆ ಧನಸಹಾಯವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

ದೇಶ

Mukesh Khanna: ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಕೊಟ್ಟ ʼಮಹಾಭಾರತʼದ ಭೀಷ್ಮ

ಭವ್ಯವಾದ ರಾಮ ಮಂದಿರವನ್ನು ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ನಿರ್ಮಿಸಿದ ಬಳಿಕವೂ ಬಿಜೆಪಿಗೆ ಅಲ್ಲಿ ಸೋಲಾಗಿದೆ. ಈ ಕುರಿತು ರಾಮಾಯಣದ ಲಕ್ಷಣ ಪಾತ್ರಧಾರಿ ಈ ಹಿಂದೆ ಪ್ರತಿಕ್ರಿಯೆ ನೀಡಿ ಅಯೋಧ್ಯೆ ಜನರು ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಮಹಾಭಾರತ ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna) ಅವರು ಬಿಜೆಪಿ ಸೋಲಿಗೆ ಕಾರಣವನ್ನು ತಿಳಿಸಿದ್ದಾರೆ.

VISTARANEWS.COM


on

By

Mukesh Khanna
Koo

ಉತ್ತರಪ್ರದೇಶದ (uttaradesh) ಆಯೋಧ್ಯೆಯಲ್ಲಿ (ayodhya) ರಾಮ ಮಂದಿರವನ್ನು (ram mandir) ನಿರ್ಮಿಸಿದ ಮೇಲೂ ಬಿಜೆಪಿಗೆ (bjp) ಲೋಕಸಭಾ ಚುನಾವಣೆಯಲ್ಲಿ (loksabha election) ಸೋಲಾಗಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆ ಈ ಕುರಿತು ಪ್ರತಿಕ್ರಿಯಿಸಿದ್ದ ರಾಮಾಯಣದ (ramayana) ಲಕ್ಷಣ ಪಾತ್ರಧಾರಿ ಅಯೋಧ್ಯೆ ಜನರು ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಮಹಾಭಾರತ (mahabharatha) ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna) ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬಿ.ಆರ್. ಚೋಪ್ರಾ ಅವರ ನಿರ್ದೇಶನದ ಮಹಾಭಾರತದಲ್ಲಿ ಭೀಷ್ಮ ಪಾತ್ರಕ್ಕೆ ಹೆಸರುವಾಸಿಯಾದ ಮುಖೇಶ್ ಖನ್ನಾ 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸೋಲಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಜೂನ್ 4ರಂದು ಘೋಷಿಸಲಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಅವರು ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜದ ಪಕ್ಷದ ಸೌಜೇಶ್ ಪ್ರಸಾದ್ ವಿರುದ್ಧ ಸೋಲು ಅನುಭವಿಸಿದ್ದರು.

ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡ ಮುಖೇಶ್ ಖನ್ನಾ, ಅಯೋಧ್ಯೆಯಲ್ಲಿನ ಚುನಾವಣೆಯಲ್ಲಿ ಬಿಜೆಪಿಯ ಸೋಲು ಭವ್ಯವಾದ ದೇವಾಲಯದ ಜೊತೆಗೆ ಸರ್ಕಾರ ಸುತ್ತಮುತ್ತಲಿನ ಜನ ಜೀವನವನ್ನು ಸುರಕ್ಷಿತಗೊಳಿಸಲು ಪ್ರಯತ್ನಿಸಬೇಕು ಎನ್ನುವುದನ್ನು ಕಲಿಸುತ್ತದೆ. ಲಕ್ಷಾಂತರ ಜನರು ಅಲ್ಲಿ ವಾಸಿಸುತ್ತಿದ್ದಾರೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಇಲ್ಲಿ ಸಾಮಾನ್ಯ ಜನರನ್ನು ಬಿಜೆಪಿ ನಿರ್ಲಕ್ಷಿಸಿರುವುದು ಸೋಲಿಗೆ ಕಾರಣ ಎಂದು ತಿಳಿಸಿದ್ದಾರೆ.

ಅಯೋಧ್ಯೆ ಚುನಾವಣಾ ಸೋಲಿನಿಂದ ನಾವು ಕಲಿಯಬೇಕು. ಭವ್ಯ ಮಂದಿರದ ಜೊತೆಗೆ ಹತ್ತಿರದ ಪಟ್ಟಣವಾಸಿಗಳ ಜೀವನವನ್ನು ಅದ್ದೂರಿಯಾಗಿ ಮಾಡಲು ಪ್ರಯತ್ನಿಸಬೇಕು. ಕೋಟಿಗಟ್ಟಲೆ ಬಜೆಟ್ ನಲ್ಲಿ ರಾಮಮಂದಿರವಾಗಲಿ, ಚಾರ್ ಧಾಮವಾಗಲಿ, ಜೈಪುರದ ಬಳಿಯಿರುವ ಖಾತು ಶಾಮ್ ಮಂದಿರವಾಗಲಿ ಅಲ್ಲಿಯ ಜನರ ಸಮಸ್ಯೆಗಳ ಪರಿಹಾರಕ್ಕೆ ಒಂದಿಷ್ಟು ಕೋಟಿಗಳನ್ನು ಇಡಬೇಕು ಎಂದು ಹೇಳಿದ್ದಾರೆ.


ಈ ವರ್ಷದ ಜನವರಿಯಲ್ಲಿ ರಾಮ್ ಮಂದಿರ ಉದ್ಘಾಟನೆಯ ಪವಿತ್ರ ಸಮಾರಂಭವು ಅದ್ದೂರಿಯಾಗಿ ನೆರವೇರಿತ್ತು. ಈ ಬಳಿಕ ಅಯೋಧ್ಯೆ ಇರುವ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿಯ ಸೋಲು ಅನೇಕರಿಗೆ ದೊಡ್ಡ ಆಘಾತವಾಗಿದೆ.
ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಸಂಬಂಧಿಸಿದಂತೆ ಹಲವಾರು ಮಂದಿ ತಮ್ಮದೇ ಆದ ಅಭಿಪ್ರಾಯಗಳನ್ನು ಹೇಳಿಕೊಳ್ಳುತ್ತಿದ್ದಾರೆ. ರಾಮಾನಂದ್ ಸಾಗರ್ ಅವರ ರಾಮಾಯಣದ ಲಕ್ಷ್ಮಣನ ಪಾತ್ರಕ್ಕೆ ಹೆಸರುವಾಸಿಯಾದ ಸುನಿಲ್ ಲಹ್ರಿ ಅವರು ಅಯೋಧ್ಯೆಯ ಮತದಾನದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

ಇನ್‌ಸ್ಟಾಗ್ರಾಮ್‌ನಲ್ಲಿ ಸುನಿಲ್ ಮಾತನಾಡಿ, ಅಯೋಧ್ಯೆ ಜನರು ಸೀತಾ ದೇವಿಯನ್ನು ಗಡಿಪಾರು ಮಾಡಿದ ಅನಂತರವೂ ಸೀತಾ ದೇವಿಯನ್ನು ಅನುಮಾನಿಸಿದ್ದರು ಎಂಬುದನ್ನು ನಾವು ಮರೆಯುತ್ತಿದ್ದೇವೆ. ಸ್ವಾರ್ಥಿಗಳು ಅಯೋಧ್ಯೇಯ ನಾಗರಿಕರು. ಅವರು ಯಾವಾಗಲೂ ದ್ರೋಹ ಮಾಡಿದ್ದಾರೆ ಎಂಬುದಕ್ಕೆ ಇತಿಹಾಸವು ಪುರಾವೆಯಾಗಿದೆ ಎಂದು ಹೇಳಿದ್ದರು.

ಇನ್ನೊಂದು ಪೋಸ್ಟ್ ನಲ್ಲಿ ಅವರು, ಅಯೋಧ್ಯೆಯ ಪ್ರಿಯ ನಾಗರಿಕರೇ, ನಿಮ್ಮ ಹಿರಿಮೆಗೆ ನಾವು ನಮಸ್ಕರಿಸುತ್ತೇವೆ. ಸೀತಾದೇವಿಯನ್ನು ಸಹ ಬಿಡದ ನೀವು, ಶ್ರೀರಾಮನು ಆ ಸಣ್ಣ ಟೆಂಟ್ ನಿಂದ ಹೊರಬರುವಂತೆ ಮಾಡಿದ ವ್ಯಕ್ತಿಗೆ ನೀವು ದ್ರೋಹ ಬಗೆದುದರಲ್ಲಿ ಅಚ್ಚರಿಯಿಲ್ಲ. ಡೇರೆ ಇದ್ದ ಜಾಗದಲ್ಲಿ ಸುಂದರವಾದ ದೇವಾಲಯದಲ್ಲಿ ಸ್ಥಾಪಿಸಲಾಯಿತು. ಇಡೀ ರಾಷ್ಟ್ರವು ನಿಮ್ಮನ್ನು ಮತ್ತೆ ಗೌರವದಿಂದ ನೋಡುವುದಿಲ್ಲ ಎಂದು ಹೇಳಿದ್ದರು.

Continue Reading
Advertisement
T20 World Cup
ಪ್ರಮುಖ ಸುದ್ದಿ2 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ3 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ3 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Joe Biden
ಪ್ರಮುಖ ಸುದ್ದಿ4 hours ago

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Pavithra Gowda
ಕರ್ನಾಟಕ4 hours ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Priyanka Gandhi:
ಪ್ರಮುಖ ಸುದ್ದಿ5 hours ago

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

CM Siddaramaiah
ಕರ್ನಾಟಕ5 hours ago

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

Modi Ka Parivar
ಪ್ರಮುಖ ಸುದ್ದಿ5 hours ago

Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Rajeev Taranath
ಕರ್ನಾಟಕ6 hours ago

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Aishwarya Arjun
ಪ್ರಮುಖ ಸುದ್ದಿ6 hours ago

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ10 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ11 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ13 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ15 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌