Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ - Vistara News

Lok Sabha Election 2024

Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

Liquor ban: ಬೆಂಗಳೂರಿನಲ್ಲಿ ಜೂನ್‌ ಮೊದಲ ವಾರ ಎಣ್ಣೆ (ಮದ್ಯ) ಬೇಕು ಸಿಗುವುದಿಲ್ಲ. ಯಾಕೆಂದರೆ ಜೂ. 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಐದು ದಿನ ಮೊದಲೇ ಎಣ್ಣೆ ಪ್ರಿಯರು ಮದ್ಯ ಖರೀದಿಸಿ ಸ್ಟಾಕ್‌ ಮಾಡಲು (Dry day order) ಮುಂದಾಗಿದ್ದಾರೆ.

VISTARANEWS.COM


on

Liquor ban Dry day
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೊನ್ನೆ ಬೆಂಗಳೂರು ಜಿಲ್ಲಾಡಳಿತದ ಅದೊಂದು ಆದೇಶಕ್ಕೆ ಮದ್ಯ ಪ್ರಿಯರು ಮದ್ಯದಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್‌‌ (Liquor ban) ಆಗುವ ಕಹಿ ಸುದ್ದಿಯನ್ನು ಕೇಳಿದ್ದೆ ತಡ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳಲು ಮುಂದಾಗುತ್ತಿದ್ದಾರೆ.

ಅಂದಹಾಗೇ ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿ ಬೆಂಗಳೂರಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ (Liquor Bandh) ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು (Dry day) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3 ರವರೆಗೆ ಬಾರ್ ಬಂದ್ ಬಂದ್‌ ಆಗಲಿದೆ. ಅದೇ ರೀತಿ, ಜೂನ್ 4 ರಂದು ದೇಶದಾದ್ಯಂತ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಇದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಆ ದಿನವು ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Rajat sharma: ಕಾಂಗ್ರೆಸ್ ನಾಯಕರಾದ ರಾಗಿಣಿ ನಾಯಕ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ವಿರುದ್ಧ ಹಿರಿಯ ಪತ್ರಕರ್ತ ರಜತ್ ಶರ್ಮಾ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ದಿನ (Lok Sabha Election Result) ತಮ್ಮ ಕಾರ್ಯಕ್ರಮದ ವೇಳೆ “ನಿಂದನೀಯ ಭಾಷೆ” ಬಳಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ‌ ಮಾಡಿದ್ದಾರೆಂದು ದೂರಿದ್ದಾರೆ.

VISTARANEWS.COM


on

By

Lok Sabha Election Result
Koo

ಲೋಕಸಭೆ ಚುನಾವಣೆ ಫಲಿತಾಂಶದ (Lok Sabha Election Result) ದಿನ ತಮ್ಮ ಕಾರ್ಯಕ್ರಮದ ವೇಳೆ “ನಿಂದನೀಯ ಭಾಷೆ” (abusive language) ಬಳಸಿದ್ದಾರೆಂದು ಆರೋಪಿಸಿದ್ದ ಕಾಂಗ್ರೆಸ್ (congress) ನಾಯಕರಾದ ರಾಗಿಣಿ ನಾಯಕ್ (Ragini Nayak), ಜೈರಾಮ್ ರಮೇಶ್ (Jairam Ramesh) ಮತ್ತು ಪವನ್ ಖೇರಾ (Pawan Khera) ಅವರ ವಿರುದ್ಧ ಹಿರಿಯ ಪತ್ರಕರ್ತ (journalist) ರಜತ್ ಶರ್ಮಾ (Rajat Sharma) ದೆಹಲಿ ಹೈಕೋರ್ಟ್‌ನಲ್ಲಿ (delhi high court) ಮಾನನಷ್ಟ ಮೊಕದ್ದಮೆ (defamation suit) ದಾಖಲಿಸಿದ್ದಾರೆ.

ರಜತ್ ಶರ್ಮಾ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಟ್ವೀಟ್‌ಗಳು ಮತ್ತು ವಿಡಿಯೋಗಳನ್ನು ತೆಗೆದುಹಾಕಬೇಕು, ರಾಜಕೀಯ ನಾಯಕರು ಅವರ ವಿರುದ್ಧ ಆರೋಪ ಮಾಡುವುದನ್ನು ತಡೆಯುವಂತೆ, ಮಾನನಷ್ಟ ಪರಿಹಾರ ನೀಡುವಂತೆ ಶರ್ಮಾ ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ.

ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ರಜತ್ ಶರ್ಮಾ ಪರ ವಕೀಲರ ವಾದಗಳನ್ನು ಆಲಿಸಿದ ಅನಂತರ ಮಧ್ಯಂತರ ವಿಚಾರಣೆಗಾಗಿ ಆದೇಶವನ್ನು ಕಾಯ್ದಿರಿಸಿದರು. ಎರಡು ಪಕ್ಷದವರ ವಾದವನ್ನು ಆಲಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇಂಡಿಪೆಂಡೆಂಟ್ ನ್ಯೂಸ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ (ಇಂಡಿಯಾ ಟಿವಿ) ಅಧ್ಯಕ್ಷ ಮತ್ತು ಸಂಪಾದಕ-ಮುಖ್ಯಸ್ಥ ರಜತ್ ಶರ್ಮಾ ಕೂಡ ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದರು.

2024ರ ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನದಂದು ಕಾರ್ಯಕ್ರಮದ ಚರ್ಚೆಯ ಸಂದರ್ಭದಲ್ಲಿ ರಾಷ್ಟ್ರೀಯ ದೂರದರ್ಶನದಲ್ಲಿ ರಜತ್ ಶರ್ಮಾ ತಮ್ಮನ್ನು ನಿಂದಿಸಿದ್ದಾರೆ ಎಂದು ರಾಗಿಣಿ ನಾಯಕ್ ಆರೋಪಿಸಿದ ಅನಂತರ ಈ ವಿವಾದ ಹುಟ್ಟಿಕೊಂಡಿತು.

ಚುನಾವಣಾ ಫಲಿತಾಂಶ ಬಂದ ಜೂನ್ 4ರ ಸಂಜೆ ವಾಹಿನಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಕಾಂಗ್ರೆಸ್ ನಾಯಕರು ಜೂನ್ 10 ಮತ್ತು 11ರಂದು ಮಾನಹಾನಿಕರ ಟ್ವೀಟ್ ಮಾಡಲು ಆರಂಭಿಸಿದ್ದಾರೆ ಎಂದು ಶರ್ಮಾ ಪರ ವಕೀಲರು ಹೇಳಿದ್ದಾರೆ.

ಶರ್ಮಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್, ಶೋನ ಕ್ಲಿಪ್ ಅನ್ನು ಪ್ರಸಾರ ಮಾಡಲಾಗುತ್ತಿದೆ. ಅದರಲ್ಲಿ ನಿಂದನೆಯನ್ನು ಸೇರಿಸಲಾಗಿದೆ. ಆದರೆ ಮೂಲ ತುಣುಕಿನಲ್ಲಿ ಅಂತಹ ಯಾವುದೇ ಆಕ್ಷೇಪಾರ್ಹ ವಿಷಯವನ್ನು ಹೊಂದಿಲ್ಲ ಎಂದು ಪ್ರತಿಪಾದಿಸಿದರು.

ನ್ಯಾಯಾಲಯದ ಪರಿಶೀಲನೆಗಾಗಿ ಅವರು ವೀಡಿಯೊ ಕ್ಲಿಪ್ ಅನ್ನು ಸಹ ಪ್ಲೇ ಮಾಡಿದರು.

ಯಾವುದೇ ನಿಂದನೆ ಇಲ್ಲ. ಲೈವ್ ಶೋ ನಡೆದ ಆರು ದಿನಗಳ ಅನಂತರ ಅವರು ರಾಗಿಣಿ ನಾಯಕ್ ವಿರುದ್ಧ ಶರ್ಮಾ ನಿಂದನೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅವರು ಜೂನ್ 11ರಂದು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದರು.


ಕಾರ್ಯಕ್ರಮವು ನೇರ ಪ್ರಸಾರವಾಗಿದೆ. ಅವರು ಜೂನ್ 10 ರ ರಾತ್ರಿಯವರೆಗೆ ಆರು ದಿನಗಳವರೆಗೆ ಯಾವುದೇ ಅಸಮಾಧಾನವನ್ನು ಹೊಂದಿರಲಿಲ್ಲ. ಆ ಬಳಿಕ ಇದ್ದಕ್ಕಿದ್ದಂತೆ ಆರೋಪಿಸಿದ್ದೇಕೆ ಎಂದು ಸಿಂಗ್ ವಾದಿಸಿದರು.

ಇದನ್ನೂ ಓದಿ: Suresh Gopi: ಇಂದಿರಾ ಗಾಂಧಿ ಭಾರತದ ಮಾತೆ ಎಂದ ಬಿಜೆಪಿ ಸಂಸದ ಸುರೇಶ್‌ ಗೋಪಿ

ಕಳೆದ ನಾಲ್ಕು ದಶಕಗಳಲ್ಲಿ ಗಳಿಸಿದ ಪತ್ರಕರ್ತನ ಪ್ರತಿಷ್ಠೆಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹುಸಿ ಆರೋಪ ನಷ್ಟವನ್ನುಂಟು ಮಾಡುತ್ತಿದ್ದು, ತಕ್ಷಣವೇ ಟ್ವೀಟ್‌ಗಳನ್ನು ತೆಗೆದುಹಾಕಬೇಕೆಂದು ರಜತ್ ಶರ್ಮಾ ಪರ ವಕೀಲರು ಮನವಿ ಮಾಡಿದರು.

ಇದು ಲೈವ್ ಶೋ ಆಗಿತ್ತು ಮತ್ತು ಲಕ್ಷಾಂತರ ಜನರು ಇದನ್ನು ವೀಕ್ಷಿಸುತ್ತಾರೆ. ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಇದ್ದರೆ ನಿರಂತರ ನಿಂದನೆ ಎದುರಿಸಬೇಕಾಗುತ್ತದೆ. ಹೀಗಾಗಿ ತಕ್ಷಣವೇ ಅದನ್ನು ತೆಗೆದುಹಾಕಬೇಕು. ನಾನು ಯಾರನ್ನೂ ಬೈಯುವುದಕ್ಕೆ ಅಥವಾ ನಿಂದಿಸುವುದಕ್ಕೆ ಹೆಸರಾಗಿಲ್ಲ. ನಾನು ನನ್ನ ಸುಸಂಸ್ಕೃತ ನಡವಳಿಕೆಗೆ ಹೆಸರುವಾಸಿಯಾಗಿದ್ದೇನೆ ಎಂದು ರಜತ್ ಶರ್ಮಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

Continue Reading

ದೇಶ

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Lok Sabha Speaker: ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಉದ್ಧವ್‌ ಠಾಕ್ರೆ ಬಣದ ಶಿವಸೇನೆ ವಕ್ತಾರ ಸಂಜಯ್‌ ರಾವತ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ (Lok Sabha Speaker) ಮುಗಿದಿದ್ದು, ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಗ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಕಸರತ್ತು ನಡೆದಿದೆ. ಇದರ ಮಧ್ಯೆಯೇ, ಟಿಡಿಪಿ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ (INDIA Bloc) ಬೆಂಬಲವು ಟಿಡಿಪಿಗೆ ಇರಲಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಕ್ತಾರ ಸಂಜಯ್‌ ರಾವತ್‌ (Sanjay Raut) ಹೇಳಿದ್ದಾರೆ.

“ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗೊಂದು ವೇಳೆ, ಬಿಜೆಪಿಯವರೇ ಕಣಕ್ಕಿಳಿರೆ, ಎನ್‌ಡಿಎ ಮೈತ್ರಿಕೂಟವೇ ಛಿದ್ರವಾಗಲಿದೆ” ಎಂದು ಸಂಜಯ್‌ ರಾವತ್‌ ಎಚ್ಚರಿಸಿದರು.

Modi 3.0 Government

ಸಂಜಯ್‌ ರಾವತ್‌ ಹೇಳಿಕೆಯ ಬೆನ್ನಲ್ಲೇ ಜೆಡಿಯು ಪ್ರತಿಕ್ರಿಯಿಸಿದೆ. “ಲೋಕಸಭೆ ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಬಿಜೆಪಿ ತೀರ್ಮಾನವೇ ಅಂತಿಮ” ಎಂಬುದಾಗಿ ತಿಳಿಸಿದೆ. ಹಾಗಾಗಿ, ಎನ್‌ಡಿಎ ಮೈತ್ರಿಕೂಟದಿಂದ ಲೋಕಸಭೆ ಸ್ಪೀಕರ್‌ ಚುನಾವಣೆಗೆ ಯಾವ ಪಕ್ಷದವರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಈಡುಮಾಡಿದೆ. ಮೊದಲಿನಿಂದಲೂ ಟಿಡಿಪಿಯು ತಮ್ಮ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗಬೇಕು ಎಂಬ ಅಭಿಲಾಷೆ ಹೊಂದಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನವು ಪ್ರಮುಖವಾಗಿದೆ.

ಜೆಡಿಯು ಪಕ್ಷವು 12 ಸಂಸದರನ್ನು ಹೊಂದಿದ್ದರೆ, ಟಿಡಿಪಿ 16 ಸಂಸದರನ್ನು ಹೊಂದಿದೆ. ಎರಡೂ ಪಕ್ಷಗಳ ನಾಯಕರಾದ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಅವರು ನಾವು ಎನ್‌ಡಿಎ ಜತೆ ನಿಲ್ಲುತ್ತೇವೆ ಎಂದಿದ್ದಾರೆ. ನರೇಂದ್ರ ಮೋದಿ ಅವರು ಸಂಪುಟ ರಚನೆಯ ವೇಳೆಯೂ ಪ್ರಾಬಲ್ಯ ಸಾಧಿಸಿದ್ದರು. ಕೇಂದ್ರ ಗೃಹ, ರಕ್ಷಣೆ, ಹಣಕಾಸು ಹಾಗೂ ವಿದೇಶಾಂಗ ಖಾತೆಗಳನ್ನು ಬಿಜೆಪಿಯೇ ಉಳಿಸಿಕೊಂಡಿದೆ. ಹಾಗಾಗಿ, ಟಿಡಿಪಿ ಅಭ್ಯರ್ಥಿಯೇ ಸ್ಪೀಕರ್‌ ಚುನಾವಣೆ ಕಣಕ್ಕೆ ಇಳಿಬಹುದು ಎನ್ನಲಾಗಿದೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದ್ದು, ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Continue Reading

ದೇಶ

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

EVM Row: ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

EVM Row
Koo

ಮುಂಬೈ: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಕುರಿತು ಚರ್ಚೆ ಶುರುವಾಗಿದೆ. ಇವಿಎಂಗಳ ಬಳಕೆಯೇ ಬೇಡ ಎಂದು ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಇದರ ಬೆನ್ನಲ್ಲೇ, “ಭಾರತದಲ್ಲಿ ಇವಿಎಂಗಳನ್ನು ಪರಿಶೀಲನೆ ಮಾಡಲು ಯಾರಿಗೂ ಆಗುವುದಿಲ್ಲ” ಎಂಬುದಾಗಿ ರಾಹುಲ್‌ ಗಾಂಧಿ ಮಸ್ಕ್‌ ಅವರ ಮಾತನ್ನೇ ಅನುಮೋದಿಸಿದ್ದಾರೆ. ಇದರ ಬೆನ್ನಲ್ಲೇ, ಮೊಬೈಲ್‌ ಬಳಸಿ ಇವಿಎಂಅನ್ನು ಅನ್‌ಲಾಕ್‌ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶಿವಸೇನೆ ಸಂಸದ ರವೀಂದ್ರ ವೈಕರ್‌ (Ravindra Waikar) ಅವರ ಬಾವ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಇವಿಎಂ ತಿರುಚಲಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿಯನ್ನೂ ನೀಡಿದಂತಾಗಿದೆ.

ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ. ತಮ್ಮ ಮೊಬೈಲ್‌ಗೆ ಒಟಿಪಿ ಜನರೇಟ್‌ ಮಾಡಿಕೊಂಡು ಅನ್‌ಲಾಕ್‌ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‌ಲೋಕಸಭೆ ಚುನಾವಣೆಯಲ್ಲಿ ರವೀಂದ್ರ ವೈಕರ್‌ ಅವರು ಶಿವಸೇನೆಯ (ಉದ್ಧವ್‌ ಠಾಕ್ರೆ ಬಣ) ಅಭ್ಯರ್ಥಿ ಅಮೋಲ್‌ ಗಜಾನನ ಕೀರ್ತಿಕಾರ್ ಅವರ ವಿರುದ್ಧ ಕೇವಲ 48 ಮತಗಳ ಅಂತರದಿದ್ದ ಗೆದ್ದಿದ್ದಾರೆ. ರವೀಂದ್ರ ವೈಕರ್‌ ಅವರ ಸಂಬಂಧಿಯು ಇವಿಎಂ ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಮರು ಎಣಿಕೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Continue Reading

ದೇಶ

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Rahul Gandhi: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ. ಎಲಾನ್‌ ಮಸ್ಕ್‌ ಅವರ ಆರೋಪಗಳಿಗೆ ರಾಹುಲ್‌ ಗಾಂಧಿ ಅವರೂ ಪ್ರತಿಕ್ರಿಯಿಸಿದ್ದು, ಭಾರತದ ಇವಿಎಂಗಳ ಕುರಿತು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈಗ 99 ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ (INDIA Bloc) 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಹೇಳಿದ್ದಿಷ್ಟು…

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading
Advertisement
Dawood Ibrahim
ವಿದೇಶ26 seconds ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ1 min ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

MAHE Manipal 1 Day Treatment Capacity Development Training Program at KMC
ಬೆಂಗಳೂರು13 mins ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Job Recruitment
Latest14 mins ago

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Viral Video
Latest21 mins ago

Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

Kannada New Movie RAMARASA Hero Introduction By Kiccha Sudeepa
ಸ್ಯಾಂಡಲ್ ವುಡ್27 mins ago

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Eid Prayers
ದೇಶ29 mins ago

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Road Accident
ಬೆಳಗಾವಿ30 mins ago

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

HPCL Job Interview
ಉದ್ಯೋಗ35 mins ago

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

Team India
ಕ್ರೀಡೆ55 mins ago

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು4 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ22 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ23 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌