Lok Sabha Election 2024: ಡಿಕೆ ಬ್ರದರ್ಸ್‌ ಕೋಟೆಯಲ್ಲಿ ರೋಡ್‌ ಶೋ ಮೂಲಕ ಅಬ್ಬರಿಸಿದ ಅಮಿತ್‌ ಶಾ! - Vistara News

Lok Sabha Election 2024

Lok Sabha Election 2024: ಡಿಕೆ ಬ್ರದರ್ಸ್‌ ಕೋಟೆಯಲ್ಲಿ ರೋಡ್‌ ಶೋ ಮೂಲಕ ಅಬ್ಬರಿಸಿದ ಅಮಿತ್‌ ಶಾ!

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಕಾಂಗ್ರೆಸ್‌ ಹಾಗೂ ಡಿಕೆ ಬ್ರದರ್ಸ್‌ನ ಭದ್ರಕೋಟೆಯಾಗಿದೆ. ಈ ಬಾರಿ ಇವರಿಗೆ ಟಕ್ಕರ್‌ ಕೊಡಬೇಕು ಎಂಬ ನಿಟ್ಟಿನಲ್ಲಿಯೇ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಅದೂ ಅಲ್ಲದೆ, ಚುನಾವಣೆ ಘೋಷಣೆಯಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಿದ ಅಮಿತ್‌ ಶಾ ಅವರು ತಮ್ಮ ಮೊದಲ ರೋಡ್‌ ಶೋವನ್ನು ಚನ್ನಪಟ್ಟಣದಿಂದಲೇ ಆರಂಭಿಸುವ ಮೂಲಕ ತಾವು ಈ ಕ್ಷೇತ್ರವನ್ನು ಸೀರಿಯಸ್‌ ಆಗಿ ಪರಿಗಣಿಸಿದ್ದೇವೆ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.

VISTARANEWS.COM


on

Lok Sabha Election 2024 Amit Shah holds roadshow at DK Brothers Fort
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌, ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕದಲ್ಲಿ ತಮ್ಮ ಮೊದಲ ರೋಡ್‌ ಶೋ ಮೂಲಕ ರಣಕಹಳೆ ಊದಿದ್ದಾರೆ. ಖ್ಯಾತ ಹೃದ್ರೋಗ ತಜ್ಞ, ಹೃದಯವಂತ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ ಪರ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಚಿಕ್ಕಮಳೂರಿನಿಂದ ಡಿ.ಟಿ. ರಾಮು ಸರ್ಕಲ್‌ವರೆಗೆ ರೋಡ್‌ ಶೋ ನಡೆಸಿದರು. ಈ ಮೂಲಕ ಡಿಕೆ ಬ್ರದರ್ಸ್‌ ಕೋಟೆಯಲ್ಲಿ ಚುನಾವಣಾ ಚಾಣಕ್ಯ ಅಬ್ಬರಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು.

ಚನ್ನಪಟ್ಟಣದ ಚನ್ನಪಟ್ಟಣದ ಚಿಕ್ಕಮಳೂರಿನಿಂದ ರೋಡ್ ಶೋಗೆ ಚಾಲನೆ ನೀಡಿದ ಅಮಿತ್ ಶಾ ಅವರ ಮೇಲೆ ಹೂ ಮಳೆಯನ್ನೇ ಸುರಿಸಲಾಯಿತು. ದಾರಿಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಜೈಕಾರ ಕೂಗಿದರು. ಅಮಿತ್‌ ಶಾ ಸಹ ರಸ್ತೆಯ ಎರಡೂ ಬದಿಗೆ ಕೈಬೀಸುತ್ತಾ ಸಾಗಿದರು. ಈ ವೇಳೆ ಡಾ. ಸಿಎನ್.‌ ಮಂಜುನಾಥ್‌ ಸಹ ಜನರಿಗೆ ಕೈ ಮುಗಿದು ಧನ್ಯತೆ ಹೇಳಿದರು. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂಎಲ್ಸಿ ಸಿ.ಪಿ. ಯೋಗೇಶ್ವರ್, ಶಾಸಕ ಮುನಿರತ್ನ, ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ್, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಗಡಿ ಮಾಜಿ ಶಾಸಕ ಮಂಜುನಾಥ್ ಅವರು ಭಾಗಿಯಾಗಿದ್ದರು.

ಡಿಕೆ ಬ್ರದರ್ಸ್‌ ಕೋಟೆಯಲ್ಲಿ ಶಾ ಅಬ್ಬರ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಕಾಂಗ್ರೆಸ್‌ ಹಾಗೂ ಡಿಕೆ ಬ್ರದರ್ಸ್‌ನ ಭದ್ರಕೋಟೆಯಾಗಿದೆ. ಈ ಬಾರಿ ಇವರಿಗೆ ಟಕ್ಕರ್‌ ಕೊಡಬೇಕು ಎಂಬ ನಿಟ್ಟಿನಲ್ಲಿಯೇ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಅದೂ ಅಲ್ಲದೆ, ಚುನಾವಣೆ ಘೋಷಣೆಯಾದ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಿದ ಅಮಿತ್‌ ಶಾ ಅವರು ತಮ್ಮ ಮೊದಲ ರೋಡ್‌ ಶೋವನ್ನು ಚನ್ನಪಟ್ಟಣದಿಂದಲೇ ಆರಂಭಿಸುವ ಮೂಲಕ ತಾವು ಈ ಕ್ಷೇತ್ರವನ್ನು ಸೀರಿಯಸ್‌ ಆಗಿ ಪರಿಗಣಿಸಿದ್ದೇವೆ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.

ರೋಡ್‌ ಶೋ ವೇಳೆ ಸ್ಥಳದಲ್ಲಿ ಸೇರಿದ್ದ ಕಾರ್ಯಕರ್ತರು ಮೋದಿ.. ಮೋದಿ… ಘೋಷಣೆ ಕೂಗಿದ್ದಾರೆ. ಜತೆಗೆ ಜೈಶ್ರೀರಾಮ್‌ ಘೋಷಣೆಯನ್ನೂ ಕೂಗಿದ್ದಾರೆ.

Lok Sabha Election 2024 Amit Shah holds roadshow at DK Brothers Fort

ಇದನ್ನೂ ಓದಿ: Lok Sabha Election 2024: ಅಧಿಕಾರಕ್ಕೆ ಅಂಟಿಕೊಂಡಿಲ್ಲವೆಂದು ಸುಮಲತಾ ಪತ್ರ; ನಾಳೆಯ ನಿರ್ಧಾರ ಏನು? ದರ್ಶನ್‌ ಭಾಗಿ!

ಅಮಿತ್ ಶಾ ಬಂದಿರೋದು ನಮ್ಮ ವೇಗ ಹೆಚ್ಚಿಸಿದೆ!

ಅಮಿತ್ ಶಾ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ ಪ್ರತಿಕ್ರಿಯೆ ನೀಡಿ, ರಾಜ್ಯಕ್ಕೆ ಅಮಿತ್‌ ಶಾ ಅವರು ಭೇಟಿ ನೀಡಿರುವುದು ನಮ್ಮ ವೇಗವನ್ನು ಬಹಳಷ್ಟು ಹೆಚ್ಚಿಸಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಅವರು ರೋಡ್‌ ಶೋ ನಡೆಸಲಿದ್ದು, ಇದು ಮತದಾರರ ಮೇಲೆ ಸಾಕಷ್ಟು ಪ್ರಭಾವವನ್ನು ಬೀರಲಿದೆ. ಬಿಜೆಪಿ – ಜೆಡಿಎಸ್‌ ನಾಯಕರು, ಕಾರ್ಯಕರ್ತರು ಒಗ್ಗಟ್ಟಾಗಿ ಹೋಗುತ್ತಿರುವುದರಿಂದ ನಮ್ಮ ಗೆಲುವು ನಿಶ್ಚಿತ ಎಂದು ಅಭಿಪ್ರಾಯಪಟ್ಟರು.

ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಾವೇ ಕ್ಷೇತ್ರವನ್ನು ಗೆಲ್ಲುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಾ. ಸಿ.ಎನ್.‌ ಮಂಜುನಾಥ್‌, ಎಲ್ಲರೂ ಗೆಲ್ಲಬೇಕು ಎಂದೇ ಚುನಾವಣೆಯಲ್ಲಿ ಭಾಗಿಯಾಗುತ್ತಾರೆ. ಆದರೆ, ಈ ಬಾರಿ ಜನರು ಬದಲಾವಣೆಯನ್ನು ಬಯಸಿದ್ದಾರೆ. ಹೀಗಾಗಿ ಗೆಲುವು ನನ್ನದೇ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಅಮಿತ್‌ ಶಾ ʼಬೂತ್‌ʼ ಮಂತ್ರ; ಕರ್ನಾಟಕ ಗೆಲ್ಲೋಕೆ ಮಾಡಿದ್ರು ಚಾಣಕ್ಯ ತಂತ್ರ!

ಡೊಳ್ಳಿನ ಮೂಲಕ ಸ್ವಾಗತ

ಇದ್ಕೂ ಮೊದಲು ಅಮಿತ್ ‌ಶಾ ಅವರನ್ನು ಕಲಾತಂಡಗಳು ಸ್ವಾಗತ ಕೋರಿದರು. ಸ್ಥಳೀಯ ಕಲೆಗಳಾದ ಡೊಳ್ಳುನ ವಾದ್ಯಗೊಂದಿಗೆ ಅಮಿತ್‌ ಶಾ ಅವರನ್ನು ಬರಮಾಡಿಕೊಳ್ಳಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ

Lok Sabha Election 2024: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ಈ ಮಧ್ಯೆ ಪ್ರಚಾರದ ವೇಳೆ ನಾಯಕರು ಎಡವಟ್ಟು ಮಾಡಿಕೊಂಡು ವಿವಾದ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಕಾಂಗ್ರೆಸ್‌ ನಾಯಕ, ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಟಿ.ಜೀವನ್‌ ರೆಡ್ಡಿ. ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಮಹಿಳೆಯ ಕೆನ್ನೆಗೆ ಹೊಡೆದಿದ್ದು, ವಿವಾದ ಹುಟ್ಟು ಹಾಕಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಎರಡು ಹಂತದ ಮತದಾನ ಮುಗಿದಿದ್ದು, ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಹೀಗಾಗಿ ರಾಜಕಾರಣಿಗಳು ಬಿರುಸಿನಿಂದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಲವು ನಾಯಕರು ವಿವಾದವನ್ನೂ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅದಕ್ಕೆ ಉತ್ತಮ ಉದಾಹರಣೆ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಟಿ.ಜೀವನ್‌ ರೆಡ್ಡಿ (T. Jeevan Reddy). ಚುನಾವಣಾ ಪ್ರಚಾರದ ಮೇಲೆ ಮಹಿಳೆಯ ಕೆನ್ನೆಗೆ ಅವರು ಹೊಡೆದಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ (Viral Video). ಜತೆಗೆ ಅವರ ನಡೆಗೆ ವ್ಯಾಪಕ ಟೀಕೆಯೂ ವ್ಯಕ್ತವಾಗುತ್ತಿದೆ.

ಮಾಜಿ ಸಚಿವರೂ ಆದ ಜೀವನ್‌ ರೆಡ್ಡಿ ಪ್ರಚಾರದ ವೇಳೆ ಸಾರ್ವಜನಿಕವಾಗಿಯೇ ಮಹಿಳೆಯ ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ವಿಡಿಯೊದಲ್ಲಿ ಏನಿದೆ?

ಜೀವನ್‌ ರೆಡ್ಡಿ ಮತ್ತು ಕಾಂಗ್ರೆಸ್‌ ನಾಯಕರು ಪ್ರಚಾರ ನಡೆಸುತ್ತ ಅರ್ಮೂರ್‌ನ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಬಳಿ, ಮೇ 13ರಂದು ನಡೆಯಲಿರುವ ಚುನಾವಣೆಯಲ್ಲಿ ತಮಗೆ ಮತ ಹಾಕಬೇಕೆಂದು ಜೀವನ್‌ ರೆಡ್ಡಿ ಹೇಳಿದ್ದರು. ಆದರೆ ಆ ಮಹಿಳೆ ತಾನು ‘ಹೂವು’ ಚಿಹ್ನೆಗೆ ವೋಟು ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಿಟ್ಟಿಗೆದ್ದ ಜೀವನ್‌ ರೆಡ್ಡಿ ಎಲ್ಲರೆದುರೆ ಮಹಿಳೆಗೆ ಕೆನ್ನೆಗೆ ಹೊಡೆದಿದ್ದಾರೆ. ಕಾಂಗ್ರೆಸ್‌ ಮುಖಂಡರು ನೋಡುತ್ತಿರುವಂತೆಯೇ ಈ ಘಟನೆ ನಡೆದಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಹಿಳೆ ಹೇಳಿದ್ದೇನು?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದೆ. ಆದರೆ ಪಿಂಚಣಿ ಸಿಗುತ್ತಿಲ್ಲ ಎಂದು ಮಹಿಳೆ ಕಾರಣ ನೀಡಿ ಈ ಬಾರಿ ಬಿಜೆಪಿಗೆ ವೋಟು ಹಾಕಲಿದ್ದೇನೆ ಎಂದು ಹೇಳಿದ್ದರೆಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ.ವಿನಯ್ ಕುಮಾರ್ ರೆಡ್ಡಿ ಅವರು ಅರ್ಮೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಿಜಾಮಾಬಾದ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಮೂರ್ ಕೂಡ ಒಂದು. ಪ್ರಸ್ತು ಇಲ್ಲಿ ಬಿಜೆಪಿಯ ಡಿ.ಅರವಿಂದ್‌ ಸಂಸದರಾಗಿದ್ದು, ಅವರ ವಿರುದ್ಧ ಜೀವನ್‌ ರೆಡ್ಡಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

ನೆಟ್ಟಿಗರಿಂದ ತರಾಟೆ

ಜೀವನ್‌ ರೆಡ್ಡಿ ಅವರ ನಡೆಗೆ ನೆಟ್ಟಿಗರು ಕೆಂಡ ಕಾರಿದ್ದಾರೆ. ʼʼನಾಚಿಕೆ ಇಲ್ಲದ ವ್ಯಕ್ತಿ. ಈ ಬಾರಿ ಹೀನಾಯವಾಗಿ ಸೋಲುತ್ತಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಏನು ನಡೆಯುತ್ತಿದೆ?ʼʼ ಎಂದು ಇನ್ನೊಬ್ಬರು ಆಘಾತ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಕೆಲವರು ಜೀವನ್‌ ರೆಡ್ಡಿ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ತಮಾಷೆಗಾಗಿ ಮಾಡಿದ್ದಾರೆ. ನಿಜವಾಗಿಯೂ ಅವರು ಹೊಡೆದಿಲ್ಲ ಎಂದು ಹೇಳಿದ್ದಾರೆ. ಏನೇ ಇರಲಿ ಸಾರ್ವಜನಿಕವಾಗಿ ಹೀಗೆ ವರ್ತಿಸಿದ್ದು ತಪ್ಪು ಎನ್ನವುದು ಇನ್ನು ಹಲವರ ವಾದ. ಒಟ್ಟಿನಲ್ಲಿ ಈ ಘಟನೆ ಭಾರೀ ಸದ್ದು ಮಾಡುತ್ತಿದೆ.

Continue Reading

ಪ್ರಮುಖ ಸುದ್ದಿ

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Rahul Gandhi : ನೀವು ಬೇಕಾರೆ ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಮುಂದಿನ ಮಹಾತ್ಮ ಗಾಂಧಿಯಾಗಿ ಹೊರಹೊಮ್ಮಲಿದ್ದಾರೆ. ಗಾಂಧೀಜಿ ಸ್ವಲ್ಪ ಕುತಂತ್ರಿಯಾಗಿದ್ದರು. ಆದರೆ, ರಾಹುಲ್ ಸಂಪೂರ್ಣವಾಗಿ ಮುಕ್ತ ಮತ್ತು ಶುದ್ಧ ಹೃದಯದವರು” ಎಂದು ರಾಜ್​​ಗುರು ಮೇ 1 ರಂದು ರಾಜ್​ಕೋಟ್​ನಲ್ಲಿ ನಡೆದ ಕಾಂಗ್ರೆಸ್​​ ಸಭೆಯಲ್ಲಿ ಹೇಳಿದರು.

VISTARANEWS.COM


on

Rahul Gandhi
Koo

ನವದೆಹಲಿ: ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಮುಂದಿನ ‘ಮಹಾತ್ಮ’ ಆಗಲು ಸಜ್ಜಾಗಿದ್ದಾರೆ ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಇಂದ್ರನಿಲ್ ರಾಜ್​ಗುರು ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ರಾಹುಲ್ ಮಹಾತ್ಮ ಗಾಂಧಿಗಿಂತಲೂ ಗುಣದಲ್ಲಿ ಒಂದು ಹೆಜ್ಜೆ ಮುಂದು. ರಾಹುಲ್ “ಮುಕ್ತ” ಮತ್ತು “ಶುದ್ಧ ಹೃದಯದವರು”. ಆದರೆ ಗಾಂಧೀಜಿ ಸ್ವಲ್ಪ “ಕುತಂತ್ರಿ” ಯಾಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ನೀವು ಬೇಕಾದರೆ ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಮುಂದಿನ ಮಹಾತ್ಮ ನಾಗಿ ಹೊರಹೊಮ್ಮಲಿದ್ದಾರೆ. ಗಾಂಧೀಜಿ ಸ್ವಲ್ಪ ಕುತಂತ್ರಿಯಾಗಿದ್ದರು. ಆದರೆ, ರಾಹುಲ್ ಸಂಪೂರ್ಣವಾಗಿ ಮುಕ್ತ ಮತ್ತು ಶುದ್ಧ ಹೃದಯದವರಾಗಿದ್ದಾರೆ ಎಂದು ರಾಜ್​​ಗುರು ಮೇ 1 ರಂದು ರಾಜ್​ಕೋಟ್​ನಲ್ಲಿ ನಡೆದ ಕಾಂಗ್ರೆಸ್​​ ಸಭೆಯಲ್ಲಿ ಹೇಳಿದ್ದರೆ. ಮಾಜಿ ಶಾಸಕರಾಗಿರುವ ರಾಜ್​ಗುರ್​, ರಾಹುಲ್ ಗಾಂಧಿ ದೇಶದ ಮಹಾನ್​ “ನಾಯಕ” ಎಂಬುದಾಗಿ ಬಣ್ಣಿಸಿದ್ದಾರೆ.

ಕೆಲವು ಜನರು ಅವರನ್ನು ಪಪ್ಪು (ಪೆದ್ದ) ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ ದೇಶವು ಈಗ ಅವರನ್ನು ತನ್ನ ನಾಯಕನಾಗಿ ಸ್ವೀಕರಿಸಿದೆ ಎಂದು ರಾಜ್​ಗುರು ಹೇಳಿದ್ದಾರೆ.

ಬಿಜೆಪಿ ಪ್ರತಿಕ್ರಿಯೆ ಏನು?

ಕಾಂಗ್ರೆಸ್ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವ ಮೂಲಕ ಜನರು ಮಹಾತ್ಮ ಗಾಂಧಿ ವಿರುದ್ಧದ ಹೇಳಿಕೆ ಪ್ರತಿಕಾರ ತೀರಿಸಬೇಕು ಎಂದು ಕರೆ ಕೊಟ್ಟಿದೆ.

ಇದನ್ನೂ ಓದಿ: 2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

“ಗಾಂಧೀಜಿ ನಮ್ಮ ರಾಷ್ಟ್ರದ ಪಿತಾಮಹ ಮತ್ತು ನಮ್ಮನ್ನು ಸ್ವಾತಂತ್ರ್ಯದ ಕಡೆಗೆ ನಮ್ಮನ್ನು ಕರೆದೊಯ್ದವರು. ಇಂತಹ ಹೇಳಿಕೆಗಳಿಗಾಗಿ ಭಾರತ ಮತ್ತು ಗುಜರಾತ್ ಜನರು ಕಾಂಗ್ರೆಸ್ ಅನ್ನು ಕ್ಷಮಿಸುವುದಿಲ್ಲ. ಈ ಕೋಪವು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ” ಎಂದು ಗುಜರಾತ್ ಬಿಜೆಪಿ ಘಟಕದ ಉಪಾಧ್ಯಕ್ಷ ಭರತ್ ಬೋಘರಾ ಹೇಳಿದ್ದಾರೆ.

ರಾಜ್​ಗುರು ಸ್ಪಷ್ಟನೆ ಏನು?

ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್​ಗುರು, ಅವರು ಇತಿಹಾಸ ಪುಸ್ತಕದಲ್ಲಿ “ಕುತಂತ್ರ” ಎಂಬ ಪದವನ್ನು ಮಹಾತ್ಮರಿಗೆ ಬಳಸಲಾಗಿದೆ ಎಂದು ಹೇಳಿದೆ. “ಕುತಂತ್ರ” ಎಂದರೆ ಅವರು ನಿಜವಾಗಿಯೂ “ಬುದ್ಧಿವಂತರು” ಎಂದು ನಾನು ಹೇಳಿಕೆ ನೀಡಿದ್ದೆ ಎಂಬುದಾಗಿ ರಾಜ್​ಗುರು ಹೇಳಿದ್ದಾರೆ.

ನಾನು ಗಾಂಧೀಜಿಗೆ ಸಂಬಂಧಿಸಿದ ಅನೇಕ ಇತಿಹಾಸ ಪುಸ್ತಕಗಳನ್ನು ಓದಿದ್ದೇನೆ ಮತ್ತು ಅಂತಹ ಒಂದು ಪುಸ್ತಕದಲ್ಲಿ ಕುತಂತ್ರ ಎಂಬ ಉಲ್ಲೇಖವಿದೆ. ನಾನು ನನ್ನ ಸ್ವಂತ ಪದಗಳನ್ನು ಸೇರಿಸಿಲ್ಲ. ನಾನು ರಾಹುಲ್ ಗಾಂಧಿಯನ್ನು ‘ಮುಂದಿನ ಮಹಾತ್ಮ’ ಎಂದು ಕರೆದಿದ್ದೇನೆ. ಏಕೆಂದರೆ ಇಂದು, ಮಹಾತ್ಮ ಗಾಂಧಿ ಬ್ರಿಟಿಷರ ವಿರುದ್ಧ ಹೋರಾಡಿದಂತೆಯೇ ಅವರು ಮಾತ್ರ ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ” ಎಂದು ಮಾಜಿ ಹೇಳಿದರು.

Continue Reading

Lok Sabha Election 2024

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Narendra Modi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇರಳದ ವಯನಾಡಿನ ಜತೆಗೆ ರಾಯ್‌ ಬರೇಲಿಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕತ್ತಾ: ಕೊನೆಗೂ ಹಲವು ದಿನಗಳ ಕುತೂಹಲಕ್ಕೆ ತೆರೆ ಎಳೆದು ಶುಕ್ರವಾರ (ಮೇ 3) ಕಾಂಗ್ರೆಸ್‌ ರಾಯ್‌ ಬರೇಲಿ (Rae Bareli) ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ (Lok Sabha Election 2024). ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ರಾಹುಲ್‌ ಗಾಂಧಿ ಇದೀಗ ಉತ್ತರ ಪ್ರದೇಶದಲ್ಲಿಯೂ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಟೀಕಿಸಿದ್ದಾರೆ. ವಯನಾಡಿನಲ್ಲಿ ಸೋಲುವ ಭೀತಿಯಿಂದ ರಾಹುಲ್‌ ಗಾಂಧಿ ರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ʼʼರಾಹುಲ್​ ಗಾಂಧಿ ಅಮೇಥಿ ಬಿಟ್ಟು ರಾಯ್​ಬರೇಲಿಗೆ ಓಡಿದ್ದಾರೆ. ಭಯ ಪಡಬೇಡಿ, ಓಡಬೇಡಿʼʼ ಎಂದು ತಮಾಷೆ ಮಾಡಿದ್ದಾರೆ. ವಯನಾಡಿನಲ್ಲಿ ಮತದಾನ ಮುಗಿದ ತಕ್ಷಣ ರಾಹುಲ್‌ ಗಾಂಧಿ ಬೇರೆ ಕ್ಷೇತ್ರವನ್ನು ಹುಡುಕಲಿದ್ದಾರೆ ಎಂದು ತಾವು ಹಿಂದೆ ಹೇಳಿದ್ದನ್ನು ನೆನಪಿಸಿಕೊಂಡ ಮೋದಿ, ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

ನಿರಂತರವಾಗಿ ಆಯ್ಕೆಯಾಗುತ್ತಿದ್ದ ರಾಯ್‌ ಬರೇಲಿ ಕ್ಷೇತ್ರವನ್ನು ಬಿಟ್ಟು ರಾಜ್ಯಸಭೆಯತ್ತ ಮುಖ ಮಾಡಿದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ನಡೆಯನ್ನೂ ಮೋದಿ ಟೀಕಿಸಿದ್ದಾರೆ. ʼʼಕಾಂಗ್ರೆಸ್‌ನ ಹಿರಿಯ ನಾಯಕಿ ಚುನಾವಣೆಯಲ್ಲಿ ಸ್ಪರ್ಧಿಸಲು ಭಯಪಡುತ್ತಾರೆ ಮತ್ತು ಕಣದಿಂದ ಓಡಿ ಹೋಗುತ್ತಾರೆ ಎನ್ನುವ ವಿಚಾರವನ್ನು ನಾನು ಮೊದಲೇ ಪಾರ್ಲಿಮೆಂಟ್‌ನಲ್ಲಿ ಹೇಳಿದ್ದೆ. ಅದರಂತೆ ಅವರು (ಸೋನಿಯಾ ಗಾಂಧಿ) ರಾಯ್‌ ಬರೇಲಿಯಿಂದ ರಾಜ್ಯಸಭೆಗೆ ಪಲಾಯನ ಮಾಡಿದ್ದಾರೆʼʼ ಎಂದು ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ರಾಯ್‌ ಬರೇಲಿ ಮತ್ತು ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಕುತೂಹಲ ಕೆರಳಿಸಿದ್ದ ಕ್ಷೇತ್ರಗಳು

ರಾಯ್‌ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು. ಕೊನೆಗೂ ಇಂದು ಕಾಂಗ್ರೆಸ್‌ ಪಟ್ಟಿ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಹರಿದಾಡುತ್ತಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇತ್ತ ರಾಯ್‌ ಬರೇಲಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಬಿಜೆ ದಿನೇಶ್‌ ಪ್ರತಾಪ್‌ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಕಾಂಗ್ರೆಸ್‌ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Continue Reading

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading
Advertisement
Kannada New Movie Rangasthala movie
ಸ್ಯಾಂಡಲ್ ವುಡ್2 mins ago

Kannada New Movie: ‘ ರಂಗಸ್ಥಳ’ ಸಿನಿಮಾಗೆ ಮಲಯಾಳಂನ ಖ್ಯಾತ ನಟ ಎಂಟ್ರಿ

Mallikarjuna Kharge
ದೇಶ8 mins ago

Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

RCB vs GT
ಕ್ರೀಡೆ9 mins ago

RCB vs GT: ಆರ್​ಸಿಬಿ ಅಭಿಮಾನಿಗಳಿಗೆ ಇಂದು ಶೇ.99ರಷ್ಟು ನಿರಾಸೆ ಖಚಿತ; ಪಂದ್ಯ ನಡೆಯುವುದೇ ಅನುಮಾನ

rahul gandhi gary Kasparov
ವೈರಲ್ ನ್ಯೂಸ್22 mins ago

Rahul Gandhi: ರಾಹುಲ್‌ ಗಾಂಧಿಗೆ “ಮೊದಲು ರಾಯ್‌ಬರೇಲಿಯಿಂದ ಗೆಲ್ಲಿ…” ಎಂದ ಚೆಸ್‌ ದಂತಕಥೆ ಗ್ಯಾರಿ ಕಾಸ್ಪರೋವ್!

Lok Sabha Election 2024
Lok Sabha Election 202450 mins ago

Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ

Viral News
ವೈರಲ್ ನ್ಯೂಸ್57 mins ago

Viral News: ಹೆರಿಗೆಯಾದ ಮೂರು ಗಂಟೆಗಳಲ್ಲೇ ಅಪಾರ್ಟ್‌ಮೆಂಟ್‌ ಮೇಲಿಂದ ಮಗುವನ್ನೇ ಎಸೆದ್ಳಾ?

king dasharatha kaikeyi dhavala dharini column
ಅಂಕಣ1 hour ago

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Weight Loss Tips
ಆರೋಗ್ಯ2 hours ago

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

saddam hussain pocso case culprit hubli
ಕ್ರೈಂ2 hours ago

Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Karnataka Weather Forecast
ಮಳೆ2 hours ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ16 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌