Lok Sabha Election 2024: ರಾಹುಲ್‌ ಗಾಂಧಿ ‘ಶಕ್ತಿ’ ಹೇಳಿಕೆಗೆ ತಿರುಗಿ ಬಿದ್ದ ಬಿಜೆಪಿ ನಾಯಕರು ಹೇಳಿದ್ದೇನು? - Vistara News

Lok Sabha Election 2024

Lok Sabha Election 2024: ರಾಹುಲ್‌ ಗಾಂಧಿ ‘ಶಕ್ತಿ’ ಹೇಳಿಕೆಗೆ ತಿರುಗಿ ಬಿದ್ದ ಬಿಜೆಪಿ ನಾಯಕರು ಹೇಳಿದ್ದೇನು?

Lok Sabha Election 2024: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಮಧ್ಯೆ ರಾಹುಲ್‌ ಗಾಂಧಿ ಎನ್‌ಡಿಎ ಸರ್ಕಾರವನ್ನು ಟೀಕಿಸಲು ಬಳಿಸಿದ್ದ ಶಕ್ತಿ ಪದವನ್ನೇ ಬಿಜೆಪಿ ನಾಯಕರು ಪ್ರತ್ಯಸ್ತ್ರವಾಗಿ ಬಳಸುತ್ತಿದ್ದಾರೆ.

VISTARANEWS.COM


on

rahul gandhi modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ಮಧ್ಯೆ ಪ್ರಮುಖ ನಾಯಕರ ಮಧ್ಯೆ ವಾದ-ವಿವಾದ ಆರಂಭವಾಗಿದೆ. ಭಾನುವಾರ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ (Rahul Gandhi), ಎನ್‌ಡಿಎ ಸರ್ಕಾರವನ್ನು ಟೀಕಿಸಲು ʼಶಕ್ತಿʼ ಪದವನ್ನು ಪ್ರಯೋಗಿಸಿದ್ದರು. ಇದೀಗ ಬಿಜೆಪಿ (BJP) ಇದನ್ನೇ ಪ್ರತ್ಯಸ್ತ್ರವಾಗಿ ಕೈಗೆತ್ತಿಕೊಂಡಿದೆ. ‘ಶಕ್ತಿ’ ಹೇಳಿಕೆಯು ರಾಹುಲ್‌ ಗಾಂಧಿ ಅವರ ʼಸ್ತ್ರೀ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ’ ಎಂದು ಬಿಜೆಪಿ ತಿರುಗಿ ಬಿದ್ದಿದೆ. ಜತೆಗೆ ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆಯೂ ರಾಹುಲ್ ಗಾಂಧಿ ಪ್ರಶ್ನಿಸಿದ್ದು, ಇದು ಭಾರತದ ಮತದಾರರಿಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕ ನಳಿನ್ ಕೊಹ್ಲಿ (Nalin Kohli) ಹೇಳಿದ್ದಾರೆ.

ಬಿಜೆಪಿ ಹೇಳಿದ್ದೇನು?

“ಇವಿಎಂನ ಬಗ್ಗೆ ಪ್ರಶ್ನೆ ಎತ್ತುವ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಒಂದು ರೀತಿಯಲ್ಲಿ ಭಾರತದ ಮತದಾರರನ್ನು ಅವಮಾನಿಸುತ್ತಿದ್ದಾರೆ. ಭಾರತದ ಮತದಾರರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ಅವರು 2014, 2019ರಲ್ಲಿ ಪ್ರಧಾನಿ ಮೋದಿ ಅವರನ್ನು ಆಶೀರ್ವದಿಸಿದವರು ಮತ್ತು ಮೂರನೇ ಅವಧಿಗಗೂ ಅವರನ್ನು ಆಶೀರ್ವದಿಸಲು ಬಯಸುತ್ತಿದ್ದಾರೆ. ಯಾಕೆಂದರೆ ನರೇಂದ್ರ ಮೋದಿ ಇಡೀ ದೇಶವನ್ನು ತಮ್ಮ ಕುಟುಂಬ ಎಂಬಂತೆ ನೋಡುತ್ತಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ಮೋದಿ ಅವರ ಗುರಿ” ಎಂದು ಕೊಹ್ಲಿ ಹೇಳಿದ್ದಾರೆ.

“ತಮಗೆ ಮತ ಬರುತ್ತಿಲ್ಲ ಎಂಬ ಅಂಶವನ್ನು ಕಾಂಗ್ರೆಸ್‌ ನಾಯಕರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಅವರು ಇವಿಎಂಗಳ ವಿರುದ್ಧ ಮಾತನಾಡುವ ಮೂಲಕ ಮತದಾರರನ್ನು ಅವಮಾನಿಸುತ್ತಿದ್ದಾರೆ” ಎಂದು ಕೊಹ್ಲಿ ದೂರಿದ್ದಾರೆ.

ಬಿಜೆಪಿ ಮುಖಂಡ ಶೆಹಜಾದ್ ಪೂನಾವಾಲಾ ಮಾತನಾಡಿ, ರಾಹುಲ್ ಗಾಂಧಿ ಅವರ ಶಕ್ತಿಯ ಹೇಳಿಕೆಯನ್ನು ಖಂಡಿಸಿದ್ದಾರೆ. ʼʼಹಿಂದೂ ಧರ್ಮವನ್ನು ʼಇಂಡಿಯಾʼ ಮೈತ್ರಿಕೂಟದ ಸದಸ್ಯರು ಅವಮಾನಿಸಿದ್ದಾರೆ. ಅವರು ʼರಾಮಚರಿತ ಮಾನಸʼವು ಸೈನೈಡ್ ಎಂದು ಹೇಳಿದ್ದಾರೆ. ರಾಮನ ಅಸ್ತಿತ್ವವನ್ನು ನಿರಾಕರಿಸುವುದರಿಂದ ಹಿಡಿದು ʼಶಕ್ತಿʼಯ ಬಗ್ಗೆ ಹೇಳಿಕೆ ನೀಡುವವರೆಗೆ ಕಾಂಗ್ರೆಸ್‌ನ ಹಿಂದೂ ದ್ವೇಷದ ಮನಸ್ಥಿತಿ ಅನಾವರಣಗೊಂಡಿದೆ. ʼಶಕ್ತಿʼ ಹೇಳಿಕೆ ಹಿಂದೂ ನಂಬಿಕೆಗೆ ಮಾಡಿದ ಅವಮಾನ ಮಾತ್ರವಲ್ಲ, ನಾರಿ-ಶಕ್ತಿ ಮತ್ತು ಅದರ ಅಭಿವ್ಯಕ್ತಿಯನ್ನು ವಿರೋಧಿಸುವ ರಾಹುಲ್ ಗಾಂಧಿ ಅವರ ಸ್ತ್ರೀದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮಾತನಾಡಿ, ʼʼರಾಹುಲ್ ಗಾಂಧಿ ಭಾರತವನ್ನು ಇಟಲಿಯ ದೃಷ್ಟಿಕೋನದಿಂದ ನೋಡುತ್ತಾರೆʼʼ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಮ ಮಂದಿರದ ಅರ್ಚಕರಿಂದ ವಿರೋಧ

ಅಯೋಧ್ಯೆ ಶ್ರೀ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾತನಾಡಿ, ʼʼಹಿಂದೂ ದೇವರ ವಿರುದ್ಧ ಮಾತನಾಡುವವರನ್ನು ಜೈಲಿಗೆ ಕಳುಹಿಸಬೇಕುʼʼ ಎಂದಿದ್ದಾರೆ. ʼʼಇದೇ ಕಾರಣಕ್ಕೆ ದಿನ ಕಳೆದಂತೆ ಕಾಂಗ್ರೆಸ್‌ನ ಶಕ್ತಿ ಕುಂದುತ್ತಿದೆ. ನಾರಿ ಶಕ್ತಿ ಎನ್ನುವುದು ಹಿಂದೂ ಧರ್ಮದ ಹೆಮ್ಮೆಯ ಸಂಕೇತ. ಈ ರೀತಿಯ ಹೇಳಿಕೆ ಖಂಡನಾರ್ಹʼʼ ಎಂದು ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಬೆನ್ನಿಗೆ ನಿಂತ ವಿಪಕ್ಷ ನಾಯಕರು

ಈ ವೇಳೆ ಇಂಡಿಯಾ ಮೈತ್ರಿ ಕೂಟದ ನಾಯಕರು ರಾಹುಲ್‌ ಗಾಂಧಿಯ ಬೆಂಬಲಕ್ಕೆ ನಿಂತಿದ್ದಾರೆ. ಆರ್‌ಜೆಡಿ ನಾಯಕ ಮೃತ್ಯುಂಜಯ್ ತಿವಾರಿ, ಕಾಂಗ್ರೆಸ್‌ ನಾಯಕ ಸಂದೀಪ್‌ ದೀಕ್ಷಿತ್‌, ಎಎಪಿ ನಾಯಕ ಗೋಪಾಲ್‌ ರೈ, ಕಾಂಗ್ರೆಸ್‌ ವಕ್ತಾರ ಪವನ್‌ ಖೇರ ಮತ್ತಿತರರು ರಾಹುಲ್‌ ಗಾಂಧಿ ಅವರ ಹೇಳಿಕೆಯನ್ನು ಸಮರ್ಥಿಸಿದ್ದಾರೆ.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ‘ಶಕ್ತಿ’ ಹೇಳಿಕೆಗೆ ಟಕ್ಕರ್;‌ ಸವಾಲು ಸ್ವೀಕಾರ ಎಂದ ಮೋದಿ

ರಾಹುಲ್‌ ಗಾಂಧಿ ಹೇಳಿದ್ದೇನು?

ಮುಂಬೈಯ ಶಿವಾಜಿ ಪಾರ್ಕ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಶಕ್ತಿ ಎಂಬ ಪದದ ಪ್ರಸ್ತಾವ ಮಾಡಿದ್ದರು. ಎನ್‌ಡಿಎ ಸರ್ಕಾರವನ್ನು ಶಕ್ತಿಗೆ ಹೋಲಿಸಿದ್ದ ಅವರು, ಆ ಶಕ್ತಿಯ ವಿರುದ್ಧ ಹೋರಾಡುತ್ತೇವೆ ಎಂದಿದ್ದರು. “ಹಿಂದಿಯಲ್ಲಿ ಶಕ್ತಿ ಎಂಬ ಪದ ಇದೆ. ನಾವು ಆ ಶಕ್ತಿಯ ವಿರುದ್ಧ ಹೋರಾಡುತ್ತೇವೆ. ಅಷ್ಟಕ್ಕೂ, ಈ ಶಕ್ತಿ ಎಂದರೇನು? ಇದು ನಮಗೆ ಏನು ಮಾಡುತ್ತದೆ? ವಿದ್ಯುನ್ಮಾನ ಮತಯಂತ್ರಗಳ ಆತ್ಮ ಹಾಗೂ ಸಮಗ್ರತೆಯನ್ನು ರಾಜನಿಗೆ (ಮೋದಿ) ವರ್ಗಾಯಿಸಲಾಗಿದೆ. ಇ.ಡಿ, ಸಿಬಿಐಗಳು ಕೂಡ ರಾಜನ ವಶವಾಗಿವೆ. ಇವಿಎಂ, ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲ್ಲದೆ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Lok Sabha Election: ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

VISTARANEWS.COM


on

Lok Sabha Election
Koo

ಧಾರವಾಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್​ ಜೋಶಿ (pralhad joshi) ಪರ ಗುರುವಾರ ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ (Eknath Shinde) ಮುಖ್ಯಸ್ಥ ಏಕನಾಥ ಶಿಂಧೆ ಅವರು ಪ್ರಚಾರ ಭಾಷಣೆ ಮಾಡಿದರು. ನಗರದ ಮೃತ್ಯುಂಜಯ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಮೋದಿ (Narendra Modi) ನೀಡುವ ಗ್ಯಾರಂಟಿ ಪಡೆಯಲು ಪ್ರಲ್ಹಾದ್ ಜೋಶಿಯನ್ನು ಗೆಲ್ಲಿಸಿ ಎಂದು ಕರೆಕೊಟ್ಟರು.

ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಸಿಎಂ ಶಿಂಧೆ ಅವರು, ಧಾರವಾಡದ ಜನತೆಯನ್ನು ಭೇಟಿ ಮಾಡಿದ್ದು ಖುಷಿ ತಂದಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಅವರಿಗೂ ಧಾರವಾಡಕ್ಕೂ ಸಂಬಂಧ ಇದೆ. ಪುಣೆ ಹಾಗೂ ಧಾರವಾಡ ಸಾಂಸ್ಕೃತಿಕ, ಶೈಕ್ಷಣಿಕ ಕೇಂದ್ರ ಎಂಬುದಾಗಿ ನುಡಿದರು.

ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಅವರು ಗೆಲ್ಲುವ ಮೊದಲು ಏನೇನೋ ಕೊಡ್ತೀನಿ ಅಂಥ ಹೇಳಿದ್ದರು. ಆದರೆ ಈಗ ನಮ್ಮಲ್ಲಿ ದುಡ್ಡಿಲ್ಲ ಅಂತಾರೆ. ಆದ್ರೆ ದೇಶದಲ್ಲಿ ಚಾಲ್ತಿ ಇರೋದು ಮೋದಿ ಗ್ಯಾರಂಟಿ ಎಂದು ಅವರು ಹೇಳಿದರು.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ನಾವು 5ನೆಯ ಪಡೆಯಲು ಮೋದಿ ಕಾರಣ. ದೇಶದಲ್ಲಿ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಒಂದೇ ಒಂದು ರಜೆ ಸಹ ಪಡೆಯದೆ ಕೆಲಸ ಮಾಡಿದ್ದಾರೆ. ಸ್ವಲ್ಪ ಚಳಿ ಆದರೆ ವಿದೇಶಕ್ಕೆ ತೆರಳುವವರು ಬೇರೆ ಪಾರ್ಟಿಯ ಯುವರಾಜ (ರಾಹುಲ್ ಗಾಂಧಿ) ಎಂದು ಶಿಂಧೆ ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ದ್ವಜ ಹಾರಿಸಿದ ಕೀರ್ತಿ ಜೋಶಿ ಅವರಿಗೆ ಇದೆ. ಪಾಕಿಸ್ತಾನದವರು ಮೊದಲು ನಮ್ಮ ದೇಶದಲ್ಲಿ ಬಾಂಬ್ ಹಾಕುತ್ತಿದ್ದರು. ಈಗ ಭಾರತ ಮೋದಿ ನೇತೃತ್ವದಲ್ಲಿ ಪಾಕ್ ನ ಒಳಗೆ ಹೊಕ್ಕು ಸದೆಬಡಿಯುತ್ತಿದೆ ಎಂದು ಹೇಳಿದರು.

ದ್ವಾರಕಾ ನಗರದಲ್ಲಿ ಸಮುದ್ರದ ಒಳಗೆ ಹೋಗಿ ಮೋದಿ ದೇಶದ ಒಳಿತಿಗೆ ಪ್ರಾರ್ಥನೆ ಮಾಡಿದ್ದಾರೆ. ಮೋದಿ ದೇಶದ ಕೆಲಸಕ್ಕಾಗಿ ಅವರು ಇದ್ದಾರೆ. ಕೋಟ್ಯಾನುಕೋಟಿ ರಾಮನ ಭಕ್ತರ ಸಂಕಲ್ಪ ಪೂರ್ಣ ಆಗಿದೆ. ಈಗ ಎಲ್ಲರೂ ಖುಷಿಯಿಂದ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮಾಡಿದ ಚಂದ್ರಯಾನ ಫೇಲ್ ಆಗಿವೆ. ಪದೇ ಪದೇ ತಪ್ಪುಗಳನ್ನು ಮಾಡಿದ್ದಾರೆ. ಆದಾಗ್ಯೂ ಇಂಡಿಯಾ ಬಣ ಮೋದಿಯನ್ನು ಸೋಲಿಸುವುದಕ್ಕೆ ನಿಂತಿದೆ, ಅದು ಅದು ಎಂದಿಗೂ ಆಗುವುದಿಲ್ಲ ಎಂದು ನುಡಿದರು.

Continue Reading

ದೇಶ

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

Amit Shah: Lok Sabha Election 2024: ಚುನಾವಣೆ ಆಯೋಗದ ಅಂತಿಮ ಮಾಹಿತಿ ಪ್ರಕಾರ, ಹಂತ 1ರಲ್ಲಿ 66.1%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.7% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದೇ ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣದ ಪರಿಣಾಮದ ಕುರಿತು ಅಮಿತ್‌ ಶಾ ಮಾತನಾಡಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election) ಮೊದಲನೇ ಹಾಗೂ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡೂ ಹಂತಗಳಲ್ಲಿ ಕಳೆದ ಬಾರಿಗಿಂತ ಈ ಬಾರಿ ತಲಾ ಶೇ.3ರಷ್ಟು ಮತದಾನ ಪ್ರಮಾಣ ಕುಸಿತವಾಗಿದೆ. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ. ನರೇಂದ್ರ ಮೋದಿ (Narendra Modi) ಅವರ ಅಲೆ ಕಡಿಮೆಯಾಗಿದ್ದು, ಮತದಾನ ಪ್ರಮಾಣ ಕುಂಠಿತಗೊಂಡಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ, ಮತದಾನ ಪ್ರಮಾಣ ಕಡಿಮೆಯಾಗಿರುವ ಕಾರಣ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಿರಸ್ಕರಿಸಿದ್ದಾರೆ.

ನ್ಯೂಸ್‌ 18 ಸುದ್ದಿ ಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮತದಾನ ಪ್ರಮಾಣ ಕುಸಿತ, ಅದರಿಂದ ಬಿಜೆಪಿ ಮೇಲೆ ಉಂಟಾಗುವ ಪರಿಣಾಮ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಯಿತು ಎಂಬ ಮಾತ್ರಕ್ಕೆ ಫಲಿತಾಂಶದ ಮೇಲೆ ಅದು ಪರಿಣಾಮ ಬೀರುವುದಿಲ್ಲ. ಬಿಜೆಪಿಯು ಖಂಡಿತವಾಗಿಯೂ ಸರಿಯಾದ ಮಾರ್ಗದಲ್ಲಿದೆ. ನೀವು ಬೇಕಾದರೆ ಗಮನಿಸಿ, ಜೂನ್‌ 4ರಂದು ಫಲಿತಾಂಶ ಪ್ರಕಟವಾಗುವ ದಿನ ಮಧ್ಯಾಹ್ನ 12.30ರ ವೇಳೆಗೆ ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುತ್ತದೆ. ಅಷ್ಟಕ್ಕೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ” ಎಂದು ಹೇಳಿದರು.

ಮತದಾನ ಕುಸಿತಕ್ಕೆ 2 ಕಾರಣ ಕೊಟ್ಟ ಶಾ

ಎರಡು ಹಂತಗಳಲ್ಲಿ ಮತದಾನ ಕುಸಿತಗೊಂಡಿರುವುದಕ್ಕೆ ಅಮಿತ್‌ ಶಾ ಅವರು ಎರಡು ಪ್ರಮುಖ ಕಾರಣ ಕೊಟ್ಟಿದ್ದಾರೆ. “12 ವರ್ಷಗಳ ಬಳಿಕ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಬದಲಾವಣೆಗಳಾಗಿವೆ. ಇನ್ನು, ಬಿಜೆಪಿ ವಿರುದ್ಧ ಪ್ರಬಲ ಸ್ಪರ್ಧಿಗಳು ಇಲ್ಲದ ಕಾರಣ ಮತದಾನ ಕುಸಿತವಾಗಿದೆ. ಆದರೆ, ನಮ್ಮ ಪಕ್ಷ, ಪರಿಣತರು ಸೇರಿ ನಾವೊಂದು ವಿಶ್ಲೇಷಣೆ ಮಾಡಿದ್ದೇವೆ. ಎರಡು ಹಂತಗಳಲ್ಲಿ ಬಿಜೆಪಿಗೆ 100 ಸೀಟು ಸಿಗಲಿವೆ. 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 66.1%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.7%ರಷ್ಟು ಮತದಾನವಾಗಿದೆ. ಆದರೆ, 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇನ್ನೂ ಐದು ಹಂತಗಳ ಮತದಾನ ಬಾಕಿ ಇರುವ ಕಾರಣ ಮತದಾನ ಪ್ರಮಾಣದ ಮೇಲೆ ಎಲ್ಲರ ಗಮನ ಇದೆ.

ಇದನ್ನೂ ಓದಿ: Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

Continue Reading

ಪ್ರಮುಖ ಸುದ್ದಿ

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

K. Annamalai: ವಿಜಯಪುರ ನಗರದ ಮೀನಾಕ್ಷಿ ಚೌಕನಲ್ಲಿ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅಣ್ಣಾಮಲೈ ಅವರು ಮಾತನಾಡಿದ್ದರು. 7 ಬಾರಿ ಸತತಯಾಗಿ ಗೆಲ್ಲುವುದು ಸುಲಭವಲ್ಲ. 70 ವರ್ಷ ವಯಸ್ಸಿನ ರಮೇಶ ಜಿಗಜಿಣಗಿ ಅವರು ಗೆದ್ದೇ ಗೆಲ್ಲುತ್ತಾರೆ. ವಿಜಯಪುರ ಕ್ಷೇತ್ರದ ಜನರ ಪ್ರೀತಿ ಜಿಗಜಿಣಗಿಯವರ ಮೇಲಿದೆ ಎಂದು ಅಣ್ಣಾಮಲೈ ಹೇಳಿದರು. ಈ ವೇಳೆ ರಮೇಶ ಜಿಗಜಿಣಗಿ ಆನಂದಬಾಷ್ಪ ಸುರಿಸಿದರು.

VISTARANEWS.COM


on

K. Annamalai
Koo

ವಿಜಯಪುರ: ಲೋಕ ಸಭಾ ಕ್ಷೇತದ ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ಗುರುವಾರ ಮಾಜಿ ಐಎಎಸ್​ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K. Annamalai) ಅವರು ಮತಯಾಚನೆ ಮಾಡಿದರು. ಈ ವೇಳೆ ಅಣ್ಣಾಮಲೈ ರಮೇಶ್​ ಅವರ ಸಾಧನೆಗಳನ್ನು ಹೊಗಳಿದರು. ತಮ್ಮನ್ನು ಹೊಗಳುತ್ತಿದ್ದಂತೆ ಭಾವುಕರಾದ ಜಿಗಜಿಣಗಿ ಅವರು ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.

ವಿಜಯಪುರ ನಗರದ ಮೀನಾಕ್ಷಿ ಚೌಕನಲ್ಲಿ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅಣ್ಣಾಮಲೈ ಅವರು ಮಾತನಾಡಿದರು. 7 ಬಾರಿ ಸತತಯಾಗಿ ಗೆಲ್ಲುವುದು ಸುಲಭವಲ್ಲ. 70 ವರ್ಷ ವಯಸ್ಸಿನ ರಮೇಶ ಜಿಗಜಿಣಗಿ ಅವರು ಗೆದ್ದೇ ಗೆಲ್ಲುತ್ತಾರೆ. ವಿಜಯಪುರ ಕ್ಷೇತ್ರದ ಜನರ ಪ್ರೀತಿ ಜಿಗಜಿಣಗಿಯವರ ಮೇಲಿದೆ ಎಂದು ಅಣ್ಣಾಮಲೈ ಹೇಳಿದರು. ಈ ವೇಳೆ ರಮೇಶ ಜಿಗಜಿಣಗಿ ಆನಂದಬಾಷ್ಪ ಸುರಿಸಿದರು.

ನಾವು ದೊಡ್ಡ ಸಂಖ್ಯೆಯಲ್ಲಿ ‌ನಾವು ಸೇರಿದ್ದೇವೆ. ಯುವಕರ ಬದುಕು ದೇಶದಲ್ಲಿ ಹೇಗೆ ಇರಬೇಕೆಂದು ಹೇಳಲು ಸೇರಿದ್ದೇವೆ. 26 ನೇ ವಯಸ್ಸಿನಲ್ಲಿ ಜಿಗಜಿಣಗಿ ಸಚಿವರಾಗಿದ್ದರು. 2014 ಮೇ 30ರಂದು ‌ನಾವು ಹೊಸ ರಾಜಕೀಯ ಅಧ್ಯಾಯ ಬರೆದೆವು. ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂದು ಬಯಸಿದೆವು. ಪಿಎಂ‌ ಜಾಗದಲ್ಲಿ ಮೋದಿ ಅವರನ್ನು ಕೂರಿಸಿದೆವು. ಆ ವೇಳೆ 11 ಕೋಟಿ‌ಜನರಿಗೆ ಶೌಚಾಲಯ ಇರಲಿಲ್ಲ, 42 ಕೋಟಿ ಜನರಿಗೆ ಬ್ಯಾಂಕ್ ಅಕೌಂಟ್ ಇರಲಿಲ್ಲ. ಆದರೆ ಮೋದಿ ಬಂದ ಬಳಿಕ ಎಲ್ಲವೂ ಸಿಕ್ಕಿದೆ ಎಂದು ಅಣ್ಣಾಮಲೈ ಅವರು ಹೇಳಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಕಾಂಗ್ರೆಸ್ ನವರು ಪ್ರತಿ ಚುನಾವಣೆಯಲ್ಲೂ ಬಡತನ ನಿರ್ಮೂಲನೆ ಮಾಡುತ್ತೇವೆಂದು ಭಾಷಣ ಮಾಡಿಕೊಂಡು ಬಂದಿದ್ದಾರೆ. ಆದರೆ ಬಡತನ ನಿರ್ಮೂಲನೆ ಮಾಡಲಿಲ್ಲ. ಈಗಲೂ ಅದೇ ಮಾತನಾಡುತ್ತಿದ್ದಾರೆ. ವಾಜಪೇಯಿ‌ 13 ದಿನ, 13 ತಿಂಗಳು ಹಾಗೂ ಐದು ವರ್ಷ ಸರ್ಕಾರ ಮಾಡಿದ್ದರು. ಮೋದಿ ಅವರಿಗೆ 10 ವರ್ಷ ಅಧಿಕಾರ ಸಿಕ್ಕಿದೆ. ಕಾಂಗ್ರೆಸ್ ಈಗಲೂ ಅದೇ ಬಡತನದ ಕುರಿತು ಮಾತನಾಡುತ್ತಿದೆ ಎಂದು ಅಣ್ಣಾಮಲೈ ಅವರು ಲೇವಡಿ ಮಾಡಿದರು.

ಒಂದು ವೋಟ್ ನಿಂದ ಏನಾಗುತ್ತದೆ ಎಂದು ಉದಾಸೀನ ಮಾಡಬೇಡಿ. ರಾಜಕೀಯ ವ್ಯವಸ್ಥೆ ಬಗ್ಗೆ ನಿರ್ಧರಿಸಲು ಮೋದಿಗೆ ವೋಟ್ ಮಾಡಿ. ರಮೇಶ ಜಿಗಜಿಣಗಿ ಮತ್ತೇ ಸಂಸದರಾಗಬೇಕು ಎಂದು ಹೇಳಿದರು

197 ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಮೋದಿ ಇಂತ ವ್ಯವಸ್ಥೆ ಮಾಡಿದ್ದಾರೆ. ದೇಶ ಮೊದಲು ಎಂಬುದು ಮೋದಿ‌ಯವರ ಸಿದ್ಧಾಂತ. ತಮಿಳುನಾಡಿನಲ್ಲಿ ಒಂದು‌ ಪಕ್ಷವಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಬೆಂಬಲ ನೀಡಿದವರು ಅವರು. ತಮಗೆ ಬೇಕಾದ ಖಾತೆಗಳನ್ನು ಪಡೆದುಕೊಂಡರು. ತಮಿಳುನಾಡಿನಲ್ಲಿ ಏಳು ಕೇಂದ್ರ ಸಚಿವರಾಗಿದ್ದರು. 2 ಜಿ ಸ್ಪೆಕ್ಟ್ರಮ್ ಹಗರಣ ಮಾಡಿದರು ಎಂದು ಇಂಡಿಯಾ ಬ್ಲಾಕ್​ ಬಗ್ಗೆ ದೂರಿದರು.

ಜೂನ್ 4 ರ ಬಳಿಕ 70 ವರ್ಷದ ಮೇಲಿನವರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಕೊಡೊದಾಗಿ ಮೋದಿ ಹೇಳಿದ್ದಾರೆ. ಮೋದಿ ಮನೆಯಿಲ್ಲದವರಿಗರ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದಾರೆ. 295 ಭರವಸೆಗಳಲ್ಲಿ ಎಲ್ಲ ಭರವಸೆ ಈಡೇರಿಸಿದ್ದೇವೆ ಎಂದು ಅವರು ಹೇಳಿದರು.

ಈ ಚುನಾವಣೆಯಲ್ಲಿ ಶೇಕಡಾ 51 ಮತ ಬಿಜೆಪಿಗೆ ಬೀಳಬೇಕು. ಮೇಡ್ ಇನ್ ಇಂಡಿಯಾದಲ್ಲಿ ಚಂದ್ರನ ದಕ್ಷಿಣ ಕಕ್ಷೆಯಲ್ಲಿ ಇಳಿದಿದ್ದೇವೆ. 14 ದೇಶಗಳಿಗೆ‌ ನಾನಾ ಸರಕು ರಪ್ತು ಮಾಡುತ್ತಿದ್ದೇವೆ. ಕೊರೊನಾ‌ ಕಾಲದಲ್ಲಿ ಅಮೆರಿಕಾಗೂ ಮುನ್ನ ಲಸಿಕೆ ಕಂಡು‌ ಹಿಡಿದೇವು. 10 ವರ್ಷ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

Continue Reading

ದೇಶ

Rahul Gandhi: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ; ಯಾರಿಗೆ ಮಣೆ?

Rahul Gandhi: ಅಮೇಥಿ ಹಾಗೂ ರಾಯ್‌ಬರೇಲಿಯಲ್ಲಿ ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೂ ಕೆಲವೇ ಗಂಟೆಗಳು ಬಾಕಿ ಇವೆ. ಇಷ್ಟಾದರೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ ಎಂದು ತಿಳಿದುಬಂದಿದೆ. ಹಾಗಾಗಿ, ಯಾರಿಗೆ ಮಣೆ ಹಾಕಲಾಗುತ್ತದೆ ಎಂಬ ಕುತೂಹಲ ಜಾಸ್ತಿಯಾಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಉತ್ತರ ಪ್ರದೇಶದ ಅಮೇಥಿ (Amethi) ಹಾಗೂ ರಾಯ್‌ಬರೇಲಿಯಲ್ಲಿ (Raebareli) ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ (Rahul Gandhi) ಹಾಗೂ ಪ್ರಿಯಾಂಕಾ ವಾದ್ರಾ (Priyanka Vadra) ಸ್ಪರ್ಧೆ ಕುರಿತ ವರದಿಗಳು ಕೇಳಿಬರುತ್ತಲೇ ಇವೆ. ಗಾಂಧಿ ಕುಟುಂಬದ ಅತ್ಯಾಪ್ತ ಕ್ಷೇತ್ರಗಳಲ್ಲಿ ಇಬ್ಬರೂ ಸ್ಪರ್ಧಿಸುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಎರಡೂ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಅಮೇಥಿ ಹಾಗೂ ರಾಯ್‌ಬರೇಲಿಯಲ್ಲಿ ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಸಲು ಇನ್ನೂ ಕೆಲವೇ ಗಂಟೆಗಳು ಬಾಕಿ ಇವೆ. ಇಷ್ಟಾದರೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ ಎಂದು ತಿಳಿದುಬಂದಿದೆ.

ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದು, ಏಪ್ರಿಲ್‌ 26ರಂದು ಮತದಾನ ನಡೆದಿದೆ. ಇನ್ನು ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಥವಾ ಅವರ ಪತಿ ರಾಬರ್ಟ್‌ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಪ್ರಿಯಾಂಕಾ ವಾದ್ರಾ ಅವರು ರಾಯ್‌ಬರೇಲಿಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದುಬಂದಿದೆ.

Rahul Gandhi And Priyanka Vadra

ರಾಹುಲ್‌ ಗಾಂಧಿ ಅವರು ಅಮೇಥಿಯಿಂದ 2004ರಿಂದಲೂ ಸ್ಪರ್ಧಿಸಿ, ಗೆಲುವು ಸಾಧಿಸುತ್ತಿದ್ದರು. ಆದರೆ, 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅವರು ಸೋಲನುಭವಿಸಿದ ಕಾರಣ ವಯನಾಡು ಅವರ ಲೋಕಸಭೆ ಕ್ಷೇತ್ರವಾಗಿದೆ. ಈ ಬಾರಿಯೂ ರಾಹುಲ್‌ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ರಾಯ್‌ಬರೇಲಿಯಲ್ಲಿ ಸೋನಿಯಾ ಗಾಂಧಿ ಅವರು ಕೂಡ 2004ರಿಂದ ಸ್ಪರ್ಧಿಸುತ್ತಿದ್ದರು. ಇವರು ಈಗ ರಾಜ್ಯಸಭೆಗೆ ಆಯ್ಕೆಯಾದ ಕಾರಣ ರಾಯ್‌ಬರೇಲಿಯಲ್ಲಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ.

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶ್ರೀರಾಮನ ವಿರೋಧಿ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಮಮಂದಿರಕ್ಕೆ ಭೇಟಿ ನೀಡುವ ಮೂಲಕ ಕಾಂಗ್ರೆಸ್‌ ರಾಮಮಂದಿರ ವಿರೋಧಿ ಅಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶವೂ ಇತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ರಾಮಮಂದಿರಕ್ಕೆ ಭೇಟಿ ನೀಡುವ ಯೋಜನೆ ಇತ್ತು. ಈಗ ಇದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading
Advertisement
Lok Sabha Election
ದೇಶ45 seconds ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ3 mins ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ25 mins ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ30 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ1 hour ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ2 hours ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌