Lok Sabha Election 2024: ಡಿ.ಕೆ. ಸುರೇಶ್‌ ಮಣಿಸಲು ಬಿಜೆಪಿ ಹೈಕಮಾಂಡ್‌ ಪ್ಲ್ಯಾನ್;‌ ಟಾರ್ಗೆಟ್‌ ಡಿಕೆಶಿ! - Vistara News

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಮಣಿಸಲು ಬಿಜೆಪಿ ಹೈಕಮಾಂಡ್‌ ಪ್ಲ್ಯಾನ್;‌ ಟಾರ್ಗೆಟ್‌ ಡಿಕೆಶಿ!

Lok Sabha Election 2024: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಂತರದ ನಾಯಕ ಆಗಲು ಡಿ.ಕೆ. ಶಿವಕುಮಾರ್ ಕಸರತ್ತು ಮಾಡುತ್ತಿದ್ದಾರೆ. ಈ ವಿಚಾರವು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೂ ಟೆನ್ಷನ್ ತಂದಿಟ್ಟಿದೆ. ಬಿಜೆಪಿ ಕೇಂದ್ರ ನಾಯಕರ ಜತೆ ಸೇರಿ ಎಚ್‌ಡಿಕೆ ಸಹ ಈ ಪ್ಲ್ಯಾನ್‌ನಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ರಾಜಕೀಯ ಜೀವನಕ್ಕೇ ಪುಲ್‌ ಸ್ಟಾಪ್‌ ಹಾಕಲು ಬಿಜೆಪಿ ಹೈಕಮಾಂಡ್ ಮುಂದಾಯಿತಾ ಎಂಬ ಅನುಮಾನ ಕಾಡಿದೆ.

VISTARANEWS.COM


on

Lok Sabha Election 2024 BJP high command plans to defeat Suresh and Target DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ತಂತ್ರಗಾರಿಕೆಯೂ ಜೋರಾಗಿಯೇ ನಡೆಯುತ್ತಿದೆ. ಇನ್ನು ಬಿಜೆಪಿ ಹೈಕಮಾಂಡ್‌ (BJP high command) ಈ ಬಾರಿ ಟಿಕೆಟ್‌ ನೀಡಬೇಕಾದರೆ ಕೆಲವು ಕಡೆ ಭಾರಿ ಲೆಕ್ಕಾಚಾರಗಳನ್ನು ಹಾಕಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ (Bangalore Rural Lok Sabha constituency) ಡಾ. ಸಿ.ಎನ್.‌ ಮಂಜುನಾಥ್‌ (Dr CN Manjunath) ಅವರನ್ನು ಕಣಕ್ಕಿಳಿಸುವ ಮೂಲಕ ಈ ಕ್ಷೇತ್ರವನ್ನು ಬಹಳ ಮುಖ್ಯವಾಗಿ ಪರಿಗಣಿಸಿರುವ ಸಂದೇಶವನ್ನು ರವಾನೆ ಮಾಡಿತ್ತು. ಇದು ಡಿಕೆ ಬ್ರದರ್ಸ್‌ಗೆ (DK Brothers) ಒಂದು ಎಚ್ಚರಿಕೆ ಗಂಟೆಯೂ ಆಗಿತ್ತು. ಇದೇ ವೇಳೆ ಸಂಸದ ಡಿ.ಕೆ‌. ಸುರೇಶ್ (DK Suresh) ಅವರನ್ನು ಸೋಲಿಸಲು ಬಿಜೆಪಿ ಹೈಕಮಾಂಡ್ ಪಣತೊಟ್ಟಿದೆ ಎನ್ನಲಾಗಿದೆ.

ಈ ಹಿಂದೆ ಕೇಂದ್ರ ಬಜೆಟ್‌ ಮಂಡನೆಯಾದಾಗ ಡಿ.ಕೆ. ಸುರೇಶ್‌ ಅವರು ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯ ಆಗುತ್ತಿದೆ ಎಂದು ಟೀಕೆ ಮಾಡಿದ್ದರು. ಈ ವೇಳೆ ಡಿ.ಕೆ. ಸುರೇಶ್‌ ವಿರುದ್ಧ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದರು. ಒಂದು ಹಂತಕ್ಕೆ ಈ ವಿಷಯ ಸೈಲೆಂಟ್‌ ಆಯಿತು ಎಂದೇ ಭಾವಿಸಲಾಗಿತ್ತು. ಆದರೆ, ಈಗ ಚುನಾವಣೆಯಲ್ಲಿ ಇದನ್ನೇ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ದೇಶ ಒಡೆಯುವ ಡಿ.ಕೆ. ಸುರೇಶ್ ಹೇಳಿಕೆಯನ್ನೇ ಪದೇ ಪದೆ ಪ್ರಸ್ತಾಪ ಮಾಡಿ, ಜನರಿಗೆ ಮನದಟ್ಟು ಮಾಡಲು ಮುಂದಾಗಿದೆ ಎನ್ನಲಾಗಿದೆ.

ಬಿಜೆಪಿ ಹೈಕಮಾಂಡ್ ನಾಯಕರಿಗೆ ಸುರೇಶ್ ಜತೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಕೂಡ ಟಾರ್ಗೆಟ್ ಆಗಿದ್ದಾರೆ.‌ ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ‌ ಮೊದಲು ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ.

ಇನ್ನು ಡಿ.ಕೆ. ಸುರೇಶ್ ಎದುರು ಡಾ. ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವುದರ ಹಿಂದೆ ಮೆಗಾ ಮಾಸ್ಟರ್ ಪ್ಲ್ಯಾನ್ ಇದೆ. ಏಕೆಂದರೆ ಕೇಂದ್ರ ಹೈಕಮಾಂಡ್ ನಾಯಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಲೆನೋವಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಡಿಕೆಶಿ ಬ್ರೇಕ್ ಹಾಕಿದ್ದರು. ಒಕ್ಕಲಿಗ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಳ್ಳಲು ಡಿಕೆ ಬ್ರದರ್ಸ್‌ ಮುಂದಾಗಿರುವುದು ಬಿಜೆಪಿ ತಲೆನೋವಿಗೆ ಕಾರಣವಾಗಿದೆ.

ಡಿಕೆಶಿ ಪ್ಲ್ಯಾನ್‌ಗೆ ತಿರುಮಂತ್ರ ಹಾಕಲು ರೆಡಿ!

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಂತರದ ನಾಯಕ ಆಗಲು ಡಿ.ಕೆ. ಶಿವಕುಮಾರ್ ಕಸರತ್ತು ಮಾಡುತ್ತಿದ್ದಾರೆ. ಈ ವಿಚಾರವು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೂ (HD Kumaraswamy) ಟೆನ್ಷನ್ ತಂದಿಟ್ಟಿದೆ. ಬಿಜೆಪಿ ಕೇಂದ್ರ ನಾಯಕರ ಜತೆ ಸೇರಿ ಎಚ್‌ಡಿಕೆ ಸಹ ಈ ಪ್ಲ್ಯಾನ್‌ನಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ರಾಜಕೀಯ ಜೀವನಕ್ಕೇ ಪುಲ್‌ ಸ್ಟಾಪ್‌ ಹಾಕಲು ಬಿಜೆಪಿ ಹೈಕಮಾಂಡ್ ಮುಂದಾಯಿತಾ ಎಂಬ ಅನುಮಾನ ಕಾಡಿದೆ.

ಒಂದು ವೇಳೆ ಡಿಕೆ ಬ್ರದರ್ಸ್‌ ಲೆಕ್ಕಾಚಾರಗಳು ಉಲ್ಟಾ ಆಗಿ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಸುರೇಶ್ ಸೋತರೆ ಡಿ.ಕೆ. ಶಿವಕುಮಾರ್‌ ಅವರು ಸಿಎಂ ಆಗುವ ಕನಸು ಭಗ್ನವಾಗುತ್ತದೆ. ಡಿಕೆಶಿ ವರ್ಚಸ್ಸು ಕಳೆದುಕೊಂಡರೆ ರಾಜ್ಯದಲ್ಲಿ ಮುಂದೆ ಬಿಜೆಪಿಗೆ ಹೆಚ್ಚು ಲಾಭವಾಗಲಿದೆ. ಕಾಂಗ್ರೆಸ್‌ನ ಡಿಕೆಶಿ ಎಂಬ ಬ್ರಹ್ಮಾಸ್ತ್ರವನ್ನು ಈಗಲೇ ಪ್ರತ್ಯಸ್ತ್ರವನ್ನು ಬಿಟ್ಟು ನಾಶ ಮಾಡಲು ಚುನಾವಣಾ ಚಾಣಕ್ಯ ಅಮಿತ್ ಶಾ ರಣತಂತ್ರ ಹೂಡಿದ್ದಾರೆ.

ಡಾ. ಸಿ.ಎನ್.‌ ಮಂಜುನಾಥ್‌ ಆಯ್ಕೆ ಏಕೆ?

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದರೆ ಅದು ಡಿಕೆ ಬ್ರದರ್ಸ್‌ ಭದ್ರಕೋಟೆಯಾಗಿದೆ. ಇದನ್ನು ಭೇದಿಸಬೇಕೆಂದರೆ ಸೂಕ್ತ ಅಭ್ಯರ್ಥಿಯೇ ಆಗಿರಬೇಕು. ಡಾ. ಸಿ.ಎನ್. ಮಂಜುನಾಥ್ ಅವರು ಯಾವುದೇ ಆರೋಪಗಳಿಲ್ಲದ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಅಳಿಯ ಎಂಬ ಸಿಂಪತಿ ಸಹ ಅವರಿಗೆ ಸಿಗಲಿದೆ. ವಿದ್ಯಾವಂತ, ಬುದ್ಧಿವಂತ, ಜನರ ಕಷ್ಟಕ್ಕೆ ಸ್ಪಂದಿಸುವ ಹೃದಯವಂತ ಎಂಬ ಟ್ರಂಪ್ ಕಾರ್ಡ್ ಅನ್ನು ಬಳಕೆ ಮಾಡಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ. ಜಯದೇವದಂತಹ ಸರ್ಕಾರಿ ಆಸ್ಪತ್ರೆಯನ್ನು ಅಷ್ಟು ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸುವಂತೆ ಮಾಡಿದ ಚತುರ ಆಡಳಿತಗಾರರೂ ಇವರಾಗಿರುವ ಕಾರಣ, ಇವರ ಕೈಯಲ್ಲಿ ಕ್ಷೇತ್ರವನ್ನು ಕೊಟ್ಟರೆ ಹೊಸ ದಿಕ್ಕನ್ನು ತೋರುತ್ತಾರೆ ಎಂಬ ಆಶಾಭಾವನೆಯನ್ನು ಜನರ ಮನಸ್ಸಿನಲ್ಲಿ ಹುಟ್ಟುಹಾಕಲು ಬಿಜೆಪಿ ಪ್ಲ್ಯಾನ್‌ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

School Jobs Scam: ಟಿಎಂಸಿಯ ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡ ಕುನಾಲ್ ಘೋಷ್ ಇದೀಗ ಪಕ್ಷದ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಗೆ ಮೊದಲೇ ಶಾಲಾ ನೇಮಕಾತಿ ಹಗರಣದ ಬಗ್ಗೆ ತೃಣಮೂಲ ಕಾಂಗ್ರೆಸ್‌ಗೆ ತಿಳಿದಿತ್ತು ಎಂದು ದೂರಿದ್ದಾರೆ. ಇತ್ತೀಚೆಗೆ (ಏಪ್ರಿಲ್ 22) ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗಾಗಿ ನಡೆಸಿದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ -2016ರ (State Level Selection Test-2016) ನೇಮಕಾತಿ ಪ್ರಕ್ರಿಯೆ ಅನೂರ್ಜಿತ ಎಂದು ಕೋಲ್ಕತ್ತಾ ಹೈಕೋರ್ಟ್ ಘೋಷಿಸಿತ್ತು.

VISTARANEWS.COM


on

School Jobs Scam
Koo

ಕೋಲ್ಕತ್ತಾ: ಟಿಎಂಸಿ (TMC)ಯ ಪಶ್ಚಿಮ ಬಂಗಾಳದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡ ಕುನಾಲ್ ಘೋಷ್ (Kunal Ghosh) ಇದೀಗ ಪಕ್ಷದ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. 2021ರ ವಿಧಾನಸಭಾ ಚುನಾವಣೆಗೆ ಮೊದಲೇ ಶಾಲಾ ನೇಮಕಾತಿ ಹಗರಣ (School Jobs Scam)ದ ಬಗ್ಗೆ ತೃಣಮೂಲ ಕಾಂಗ್ರೆಸ್‌ಗೆ ತಿಳಿದಿತ್ತು ಎಂದು ದೂರಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಆಪ್ತರೆಂದು ಪರಿಗಣಿಸಲ್ಪಟ್ಟ ಕುನಾಲ್ ಘೋಷ್ ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಮಾತ್ರವಲ್ಲ ಲೋಕಸಭಾ ಚುನಾವಣೆಯ ಮಧ್ಯೆ ಈ ಹೇಳಿಕೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಇತ್ತೀಚೆಗೆ (ಏಪ್ರಿಲ್ 22) ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗಾಗಿ ನಡೆಸಿದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ -2016ರ (State Level Selection Test-2016) ನೇಮಕಾತಿ ಪ್ರಕ್ರಿಯೆ ಅನೂರ್ಜಿತ ಎಂದು ಕೋಲ್ಕತ್ತಾ ಹೈಕೋರ್ಟ್ ಘೋಷಿಸಿತ್ತು. ಇದು ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದು ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸಾಕಷ್ಟು ಮುಜುಗರ ತಂದಿತ್ತು.

ಬುಧವಾರ ಬಿಜೆಪಿ ಲೋಕಸಭಾ ಅಭ್ಯರ್ಥಿಯೊಂದಿಗೆ ವೇದಿಕೆ ಹಂಚಿಕೊಂಡ ಕುನಾಲ್ ಘೋಷ್ ಅವರನ್ನು ಟಿಎಂಸಿ ಹುದ್ದೆಯಿಂದ ವಜಾ ಮಾಡಿತ್ತು. ʼʼಶಾಲಾ ಶಿಕ್ಷಣ ಇಲಾಖೆಯಲ್ಲಿ ಅಪಾರ ಪ್ರಮಾಣದ ಭ್ರಷ್ಟಾಚಾರ ಮತ್ತು ಸುಲಿಗೆ ನಡೆಯುತ್ತಿದೆ ಎಂಬ ಅಂಶ ಪಕ್ಷಕ್ಕೆ ಚೆನ್ನಾಗಿ ತಿಳಿದಿತ್ತು. 2021ರ ವಿಧಾನಸಭಾ ಚುನಾವಣೆಗೆ ಮೊದಲೇ ಪಕ್ಷಕ್ಕೆ ಈ ಬಗ್ಗೆ ಅರಿವಿತ್ತು” ಎಂದು ಅವರು ಹೇಳಿದ್ದಾರೆ. “ದೊಡ್ಡ ಪ್ರಮಾಣದ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಹೊಂದಿದ್ದ ಕಾರಣಕ್ಕೆ 2021ರಲ್ಲಿ ಪಕ್ಷವು ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಪಾರ್ಥ ಚಟರ್ಜಿ ಅವರನ್ನು ಶಿಕ್ಷಣ ಸಚಿವಾಲಯದಿಂದ ಕೈಗಾರಿಕಾ ಇಲಾಖೆಗೆ ವರ್ಗಾಯಿಸಿತು” ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ರಾಜ್ಯ ಸರ್ಕಾರ 2016ರಲ್ಲಿ ಮಾಡಿದ್ದ 25,753 ಶಿಕ್ಷಕರ ನೇಮಕಾತಿಯನ್ನು ಹೈಕೋರ್ಟ್‌ ರದ್ದುಗೊಳಿಸಿದ್ದಲ್ಲದೆ ರದ್ದಾದವರು, 2016ರಿಂದ ತಾವು ಪಡೆದ ಸಂಬಳವನ್ನೂ ಬಡ್ಡಿ ಸಹಿತ ವಾಪಸ್‌ ನೀಡಬೇಕು ಎಂಬ ಆದೇಶ ಹೊರಡಿಸಿತ್ತು. ಅಂದು 24,640 ಖಾಲಿ ಹುದ್ದೆಗಳಿಗೆ 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016ಗೆ ಹಾಜರಾದ 25,753 ಮಂದಿಗೆ ನೇಮಕಾತಿ ಪತ್ರ ನೀಡಲಾಗಿತ್ತು. ಇದು 9, 10, 11 ಮತ್ತು 12ನೇ ತರಗತಿಗಳ ಶಿಕ್ಷಕರು ಮತ್ತು ಗುಂಪು-ಸಿ ಮತ್ತು ಡಿ ಸಿಬ್ಬಂದಿ ಹುದ್ದೆಗಳನ್ನು ಒಳಗೊಂಡಿತ್ತು.

ಎಸ್ಎಲ್ಎಸ್‌ಟಿ-2016ರಲ್ಲಿ ಹಾಜರಾಗಿ ಉದ್ಯೋಗ ಸಿಗದ ಕೆಲವು ಅಭ್ಯರ್ಥಿಗಳು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ಪೀಠವು ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿತ್ತು. ಅಕ್ರಮಗಳನ್ನು ಕಂಡುಕೊಂಡ ನಂತರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಹಲವಾರು ಉದ್ಯೋಗಗಳನ್ನು ವಜಾಗೊಳಿಸಲು ಹೈಕೋರ್ಟ್ ತೀರ್ಪು ನೀಡಿತ್ತು.

Continue Reading

ಪ್ರಮುಖ ಸುದ್ದಿ

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Rahul Gandhi: ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು.

VISTARANEWS.COM


on

Rahul Gandhi
Koo

ಶಿವಮೊಗ್ಗ: ಶಿವಮೊಗ್ಗ (Shivamogga) ನಗರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿ ನೀಡಿ ಲೋಕಸಭೆ ಚುನಾವಣೆ (Lok sabha Election 2024) ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ (Prajwal revanna case) ಹಗರಣದ ವಿಚಾರವನ್ನು ನಿನ್ನೆ ಸೋಶಿಯಲ್‌ ಮೀಡಿಯಾದಲ್ಲಿ ಎತ್ತಿರುವ ರಾಹುಲ್‌ ಗಾಂಧಿ, ಇಂದು ಸಾರ್ವಜನಿಕ ಭಾಷಣದಲ್ಲಿಯೂ ಪ್ರಸ್ತಾಪಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ (congress candidate) ಗೀತಾ ಶಿವರಾಜ್ ಕುಮಾರ್ (Geetha Shiv rajkumar) ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಭಾಗವಹಿಸಲಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕುಟುಂಬದ ಮಗಳನ್ನು ಕಣಕ್ಕಿಳಿಸಿದ್ದು, ಪ್ರಚಾರಕ್ಕೆ ಜನಪ್ರಿಯ ಸ್ಟಾರ್‌ ಶಿವರಾಜ್‌ಕುಮಾರ್‌ ಕೂಡ ಆಗಮಿಸಿ ಪತ್ನಿಯ ಪರ ಬಿರುಗಾಳಿಯಂತೆ ಪ್ರಚಾರ ನಡೆಸುತ್ತಿದ್ದಾರೆ. ಸ್ವತಃ ಸಚಿವ ಮಧು ಬಂಗಾರಪ್ಪ, ತಮ್ಮ ಸೋದರಿಯ ಗೆಲುವಿಗಾಗಿ ಟೊಂಕ ಕಟ್ಟಿ ನಿಂತುಬಿಟ್ಟಿದ್ದಾರೆ. ಇನ್ನೊಂದು ಕಡೆ ಬಿಜೆಪಿಯ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಈಶ್ವರಪ್ಪನವರ ಬಂಡಾಯದಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಮತ್ತೊಂದು ಕಡೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದಾಗಿ ಬಿಜೆಪಿ ಹಾಗೂ ಜೆಡಿಎಸ್‌ ಮುಜುಗರ ಅನುಭವಿಸುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೋದಲ್ಲಿ ಬಂದಲ್ಲಿ ಈ ವಿಚಾರ ಎತ್ತಿ ಅಣಕಿಸುತ್ತಿದ್ದಾರೆ. ರಾಹುಲ್ ರಾಜ್ಯಕ್ಕೆ ಬಂದಾಗ ಪ್ರಚಾರದ ಕಣದಲ್ಲಿ ಈ ವಿಚಾರವನ್ನು ಎತ್ತಿ ಟೀಕಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು. ಪ್ರಜ್ವಲ್ ಪ್ರಕರಣ ಪ್ರಸ್ತಾಪ ‌ಮಾಡುವ ಮೂಲಕ ಪಿಎಂ ಮೋದಿಗೆ ಕುಟುಕಿದ್ದರು.

ಅಲ್ಲದೆ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮೋದಿಯವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. “ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಪ್ರಧಾನಿ ಉತ್ತರಿಸಬೇಕು. ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣು ಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ಹೇಗೆ ತಪ್ಪಿಸಿಕೊಂಡ? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ, ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಪೀಡಕರಿಗೆ ಬೆಂಬಲ ನೀಡಲಾಗುತ್ತಿದೆ. ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬಿದಂತಾಗುತ್ತಿದೆ. ಮೋದಿಯವರ ʼರಾಜಕೀಯ ಕುಟುಂಬದ’ ಭಾಗವಾಗುವುದು ಅಪರಾಧಿಗಳಿಗೆ ʼಭದ್ರತೆಯ ಖಾತರಿ’ ಆಗಿದೆಯೇ?” ಎಂದು ರಾಗಾ ಪ್ರಶ್ನಿಸಿದ್ದರು.

ಇಂದು ನಗರದ ಪ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಸಚಿವ ಮಧು ಬಂಗಾರಪ್ಪ ಉಸ್ತುವಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಶಿವಮೊಗ್ಗ ನಗರದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಗೀತಾರನ್ನು ಗೆಲ್ಲಿಸಲು ಪಣ ತೊಟ್ಟಿರುವ ನಟ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಕ್ಷೇತ್ರದ ತುಂಬಾ ಓಡಾಡಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಇಂದು ರಾಹುಲ್‌ ಗಾಂಧಿ ಭಾಗವಹಿಸಲಿರುವ ಪ್ರಜಾ ಧ್ವನಿ ಯಾತ್ರೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಬೆಳಿಗ್ಗೆ 11:30ರಿಂದ ಶುರುವಾಗಲಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Continue Reading

Lok Sabha Election 2024

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Congress Candidate List: ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಮುಗಿದಿದೆ. ಕಾಂಗ್ರೆಸ್‌ ಇನ್ನೂ ದೇಶದ ಪ್ರತಿಷ್ಠಿತ ಕಣಗಳಾದ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿನ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಇಲ್ಲಿ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ನಾಳೆಯೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಹೀಗಾಗಿ ಇಂದು ಅಭ್ಯರ್ಥಿಗಳ ಘೋಷಣೆಯಾಗಲಿದೆ. ಈ ಮೂಲಕ ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಉತ್ತರ ಸಿಗಲಿದೆ.

VISTARANEWS.COM


on

Congress Candidate List
Koo

ಲಕ್ನೋ: ದೇಶದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಅದರ ಜತೆಗೆ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಕೂಡ ಏರಿಕೆಯಾಗುತ್ತಿದೆ. ಈಗಾಗಲೇ ಎರಡು ಹಂತದ ಮತದಾನ ಯಶಸ್ವಿಯಾಗಿ ಮುಗಿದಿದ್ದು, ಮೂರನೇ ಹಂತ ಮೇ 7ರಂದು ನಡೆಯಲಿದೆ. ಈ ಮಧ್ಯೆ ದೇಶದ ಪ್ರತಿಷ್ಠಿತ ಕಣವಾದ ಉತ್ತರ ಪ್ರದೇಶದ ಅಮೇಥಿ (Amethi) ಮತ್ತು ರಾಯ್‌ಬರೇಲಿ (Raebareli)ಯಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸದ ಕಾಂಗ್ರೆಸ್‌ ಇನ್ನೂ ಗುಟ್ಟು ಕಾಪಾಡಿಕೊಂಡು ಬಂದಿದೆ. ನಾಮಪತ್ರ ಸಲ್ಲಿಕೆಗೆ ನಾಳೆಯೇ (ಮೇ 3) ಕೊನೆಯ ದಿನವಾಗಿದ್ದು ಇಂದು ಕೈಪಡೆ ಅಭ್ಯರ್ಥಿಗಳನ್ನು ಘೋಷಿಸಲಿದೆ (Congress Candidate List). ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ(Rahul Gadhi) ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುತ್ತಾರಾ ಎನ್ನುವ ಕುತೂಹಲಕ್ಕೆ ಇಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೆರೆ ಎಳೆಯಲಿದ್ದಾರೆ.

2019ರಲ್ಲಿ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅನಿರೀಕ್ಷಿತ ಸೋಲನ್ನು ಅನುಭವಿಸಿದ ರಾಹುಲ್ ಗಾಂಧಿ ಮತ್ತೆ ಅಲ್ಲಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಈಗಾಗಲೇ ಅವರು ಕೇರಳದ ವಯನಾಡ್‌ನಲ್ಲಿ ಸ್ಪರ್ಧಿಸಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡು ಕಡೆ ಕಣಕ್ಕಿಳಿಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎನ್ನುತ್ತಿವೆ ಮೂಲಗಳು.

ಇನ್ನು ರಾಯ್‌ ಬರೇಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿದೆ. 2004ರಿಂದ ಇದು ಸೋನಿಯಾ ಗಾಂಧಿ ಅವರ ವಶದಲ್ಲಿದೆ. ಈ ಬಾರಿ ಸೋನಿಯಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹಿಂದೆಯೇ ಘೋಷಿಸಿದ್ದರು. ಈ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದರು. ಹೀಗಾಗಿ ಪ್ರಿಯಾಂಕಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬಂದಿದೆ. ಇದರ ಜತೆಗೆ ಬಿಜೆಪಿ ಆಗಾಗ ಉಲ್ಲೇಖಿಸುವ ʼವಂಶಪಾರಂಪರ್ಯ ರಾಜಕೀಯʼ ಆರೋಪವನ್ನು ಪರಿಗಣಿಸಿ ಅವರನ್ನು ಕಣಕ್ಕಿಳಿಸುವುದು ಅನುಮಾನ ಎನ್ನುವ ಮಾತೂ ಕೇಳಿ ಬಂದಿದೆ.

ʼʼಅಭ್ಯರ್ಥಿಗಳ ಆಯ್ಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ನಾವು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆʼʼ ಎಂದು ಹಿರಿಯ ಮುಖಂಡ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ. ಇದರ ನಡುವೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅವರೂ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವ ಗಾಳಿಸುದ್ದಿಯೂ ಹಬ್ಬಿದೆ.

ಇದನ್ನೂ ಓದಿ: Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

ರಾಯ್‌ ಬರೇಲಿ ಕ್ಷೇತ್ರದ ಇತಿಹಾಸ

ಇಂದಿರಾ ಗಾಂಧಿ ಅವರ ಪತಿ ಮತ್ತು ಕಾಂಗ್ರೆಸ್ ನಾಯಕ ಫಿರೋಜ್ ಗಾಂಧಿ 1952 ಮತ್ತು 1957ರಲ್ಲಿ ರಾಯ್‌ ಬರೇಲಿಯಿಂದ ಎರಡು ಬಾರಿ ಗೆದ್ದಿದ್ದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಮೊಮ್ಮಗ ಅರುಣ್ ನೆಹರೂ ಅವರು 1980 ಮತ್ತು 1984ರ ಉಪಚುನಾವಣೆಯಲ್ಲಿ ಇಲ್ಲಿ ಗೆಲುವು ಸಾಧಿಸಿದ್ದರು. ಜವಾಹರಲಾಲ್ ನೆಹರೂ ಅವರ ಅತ್ತಿಗೆ ಶೀಲಾ ಕೌಲ್ 1989 ಮತ್ತು 1991ರಲ್ಲಿ ಗೆಲುವು ಸಾಧಿಸಿದ್ದರು. ನೆಹರೂ-ಗಾಂಧಿ ಕುಟುಂಬದ ಸದಸ್ಯರು 1962 ಮತ್ತು 1999ರಲ್ಲಿ ಮಾತ್ರ ಇಲ್ಲಿಂದ ಸ್ಪರ್ಧಿಸಿರಲಿಲ್ಲ. ಇನ್ನು 2004ರಿಂದ 2024ರ ವರೆಗೆ ಈ ಕ್ಷೇತ್ರವನ್ನು ಸೋನಿಯಾ ಗಾಂಧಿ ಪ್ರತಿನಿಧಿಸಿದ್ದಾರೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

Continue Reading

ಪ್ರಮುಖ ಸುದ್ದಿ

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

PM Narendra Modi: ನಮ್ಮ ಮುಸ್ಲಿಂ ಸಹೋದರಿಯರು ವೋಟ್ ಬ್ಯಾಂಕ್ ರಾಜಕಾರಣದ ಅತಿ ದೊಡ್ಡ ಬಲಿಪಶುಗಳು. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕಾಂಗ್ರೆಸ್ ಮುಸ್ಲಿಂ ಸಹೋದರಿಯರಿಗೆ ಭದ್ರತೆಯನ್ನು ನೀಡಲಿಲ್ಲ. ತ್ರಿವಳಿ ತಲಾಖ್ ರದ್ದತಿಯು ಮಹಿಳೆಯರಿಗೆ ಮಾತ್ರವಲ್ಲದೆ ಕುಟುಂಬಗಳಿಗೆ ಭದ್ರತೆಯನ್ನು ಒದಗಿಸಿದೆ ಎಂದಿದ್ದಾರೆ ಮೋದಿ.

VISTARANEWS.COM


on

pm Narendra Modi
Koo

ಹೊಸದಿಲ್ಲಿ: ಕೇಂದ್ರದದಲ್ಲಿದ್ದ ಹಿಂದಿನ ಕಾಂಗ್ರೆಸ್‌ ಸರ್ಕಾರಗಳ ವಿರುದ್ಧ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ನವ ಭಾರತವು (India) ಇತರ ದೇಶಗಳಿಗೆ ಭಯೋತ್ಪಾದಕರ (terrorists) ಬಗ್ಗೆ ದಾಖಲೆಗಳನ್ನು (dossiers)‌ ಕಳುಹಿಸುವುದಿಲ್ಲ. ಬದಲಾಗಿ ಅವರಿಗೆ “ಡೋಸ್” ನೀಡಿ ಅವರ ತವರು ನೆಲದಲ್ಲೇ (Home turf) ಅವರನ್ನು ಕೊಲ್ಲುತ್ತದೆ ಎಂದು ಹೇಳಿದ್ದಾರೆ.

“ಹತ್ತು ವರ್ಷಗಳ ಹಿಂದೆ ದೇಶವು ಭಯೋತ್ಪಾದನೆಯಿಂದ ಬಳಲುತ್ತಿತ್ತು. ಆದರೆ ಕಾಂಗ್ರೆಸ್, ಭಯೋತ್ಪಾದನೆಯ ಮೂಲವನ್ನು ತಿಳಿದಿದ್ದರೂ, ಪಾಕಿಸ್ತಾನಕ್ಕೆ ದಸ್ತಾವೇಜನ್ನು ಕಳುಹಿಸುತ್ತಿತ್ತು” ಎಂದು ಗುಜರಾತ್‌ನ ಸಬರ್ಕಾಂತ ಜಿಲ್ಲೆಯ ಹಿಮತ್‌ನಗರ ನಗರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ಹೇಳಿದರು. “ಇಂದು, ಭಾರತವು ಭಯೋತ್ಪಾದನೆಯ ನೇತಾರರಿಗೆ ದಾಖಲೆಗಳನ್ನು ಕಳುಹಿಸುವುದಿಲ್ಲ. ಆದರೆ ಅವರಿಗೆ ಡೋಸ್ ನೀಡಿ ಅವರ ಮನೆಯ ಒಳಗೇ ಕೊಲ್ಲುತ್ತದೆ” ಎಂದಿದ್ದಾರೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಕಾಂಗ್ರೆಸ್ ಅನ್ನು ಗುರಿಯಾಗಿಟ್ಟುಕೊಂಡು, ಭಾರತದಲ್ಲಿ ಮುಸ್ಲಿಂ ಮಹಿಳೆಯರು ವೋಟ್ ಬ್ಯಾಂಕ್ ರಾಜಕಾರಣದ ದೊಡ್ಡ ಬಲಿಪಶುಗಳು ಎಂದು ಹೇಳಿದರು. “ನಮ್ಮ ಮುಸ್ಲಿಂ ಸಹೋದರಿಯರು ವೋಟ್ ಬ್ಯಾಂಕ್ ರಾಜಕಾರಣದ ಅತಿ ದೊಡ್ಡ ಬಲಿಪಶುಗಳು. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕಾಂಗ್ರೆಸ್ ಮುಸ್ಲಿಂ ಸಹೋದರಿಯರಿಗೆ ಭದ್ರತೆಯನ್ನು ನೀಡಲಿಲ್ಲ. ತ್ರಿವಳಿ ತಲಾಖ್ ರದ್ದತಿಯು ಮಹಿಳೆಯರಿಗೆ ಮಾತ್ರವಲ್ಲದೆ ಕುಟುಂಬಗಳಿಗೆ ಭದ್ರತೆಯನ್ನು ಒದಗಿಸಿದೆ. ಅವರು (ಕಾಂಗ್ರೆಸ್) ವೋಟ್ ಬ್ಯಾಂಕ್‌ಗಾಗಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಲಿಲ್ಲ…” ಎಂದು ಪ್ರಧಾನಿ ಪ್ರತಿಪಾದಿಸಿದರು.

“ನಾನು ಮತ ಬ್ಯಾಂಕ್ ಬಗ್ಗೆ ಚಿಂತಿಸುವುದಿಲ್ಲ. ನಾನು ಚುನಾವಣೆಯಲ್ಲಿ ಗೆಲ್ಲಲು ಕೆಲಸ ಮಾಡುವುದಿಲ್ಲ. ನಾವು ಮುಸ್ಲಿಂ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಬಯಸಿದ್ದು, ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರಗೊಳಿಸಿದ್ದೇವೆ…” ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಪುನರಾಯ್ಕೆಯಾದರೆ ದೇಶದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ವಿರುದ್ಧ ವ್ಯಂಗ್ಯವಾಡಿದರು. “ಕಾಂಗ್ರೆಸ್‌ನ ʻಶೆಹಜಾದಾʼ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ದೇಶದಲ್ಲಿ ಬೆಂಕಿ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ವಾಸ್ತವ ಏನೆಂದರೆ, ಕಾಂಗ್ರೆಸ್‌ನ ಕನಸುಗಳು ಸುಟ್ಟು ಬೂದಿಯಾಗಿವೆ…” ಎಂದು ಮೋದಿ ಹೇಳಿದರು.

“ಕಾಂಗ್ರೆಸ್ ನಾಯಕರು ಈಗ ಸಂವಿಧಾನವು ಅಪಾಯದಲ್ಲಿದೆ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳುತ್ತಿದ್ದಾರೆ. ವಾಸ್ತವದಲ್ಲಿ, ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತದಲ್ಲಿ ಇಡೀ ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ನಮ್ಮ ಸಂವಿಧಾನವನ್ನು ಕಾಶ್ಮೀರದಲ್ಲಿ ಜಾರಿಗೊಳಿಸಿರಲಿಲ್ಲ. ನಾನು ಸಂವಿಧಾನಕ್ಕೆ ಬದ್ಧನಾಗಿರುವ ಕಾರಣ ಅದನ್ನು ಮಾಡಿದೆ” ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading
Advertisement
Bhoomi Shetty African braids Look style
ಸಿನಿಮಾ11 mins ago

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

prajwal revanna case lookout notice
ಕ್ರೈಂ16 mins ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 202424 mins ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

elephant attack
ಬೆಂಗಳೂರು ಗ್ರಾಮಾಂತರ24 mins ago

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Delhi Lieutenant Governor
ದೇಶ34 mins ago

Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

Prajwal Revanna Case Application seeking exemption from appearing before SIT rejected
ಕ್ರೈಂ39 mins ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

IPL 2024
ಕ್ರೀಡೆ39 mins ago

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

Temperature Warning
ರಾಯಚೂರು41 mins ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್42 mins ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Yakshagana Artist No more
ದಕ್ಷಿಣ ಕನ್ನಡ1 hour ago

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌