Lok Sabha Election 2024: ಮೋದಿ ಗೆಲುವಿಗಾಗಿ ಈ 4 ವರ್ಗಗಳನ್ನು ಟಾರ್ಗೆಟ್‌ ಮಾಡಿದ ಬಿಜೆಪಿ - Vistara News

Lok Sabha Election 2024

Lok Sabha Election 2024: ಮೋದಿ ಗೆಲುವಿಗಾಗಿ ಈ 4 ವರ್ಗಗಳನ್ನು ಟಾರ್ಗೆಟ್‌ ಮಾಡಿದ ಬಿಜೆಪಿ

Lok Sabha Election 2024: ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

VISTARANEWS.COM


on

Lok Sabha Election 2024 BJP targets these 4 categories for Modi victory
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸಬೇಕು. ಬಹುಮುಖ್ಯವಾಗಿ ನಾಲ್ಕು ವರ್ಗಗಳನ್ನು ಗುರಿಯಾಗಿಸಿಕೊಂಡು ನಮ್ಮ ಸಾಧನೆಯನ್ನು ತಲುಪಿಸುವ ಕೆಲಸ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ನಗರದ ದಿ ಕ್ಯಾಪಿಟಲ್ ಹೋಟೆಲ್‍ನಲ್ಲಿ ಸೋಮವಾರ (ಮಾ. 25) ಏರ್ಪಡಿಸಿದ್ದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಬೇಕಿದೆ. ಅವರಿಗೆ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ

ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು ಎಂದು ವಿಶ್ಲೇಷಿಸಿದರು.

ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿರೋಧ ಪಕ್ಷಗಳು ಈಗಾಗಲೇ ತೀರ್ಮಾನ ಮಾಡಿವೆ. ಆದರೂ, ನಾವು ಚುನಾವಣೆಯನ್ನು ಸವಾಲಾಗಿ, ಗಂಭೀರವಾಗಿ ಸ್ವೀಕರಿಸಬೇಕು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

58 ಸಾವಿರ ಬೂತ್‍ಗಳನ್ನು ನೇರವಾಗಿ ತಲುಪಿ

ಎಲ್ಲ 58 ಸಾವಿರ ಬೂತ್‍ಗಳನ್ನು ನೇರವಾಗಿ ತಲುಪಬೇಕಿದೆ. ನರೇಂದ್ರ ಮೋದಿಯವರ ಜನಪ್ರಿಯತೆ, ಜನಪರ ಯೋಜನೆಗಳನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ಸ್ವೀಕರಿಸಿ ಕೆಲಸ ಮಾಡಿ ಎಂದು ಸೂಚಿಸಿದ ವಿಜಯೇಂದ್ರ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರವನ್ನು ಪಡೆದುಕೊಂಡಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ನರೇಟಿವ್ ಅನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿತ್ತು ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ: Lok Sabha Election 2024: ಮೋದಿ ಮೋದಿ ಎಂದವರ ಕಪಾಳಕ್ಕೆ ಹೊಡೆಯಿರಿ ಎಂದ ಸಿದ್ದರಾಮಯ್ಯ ಸಂಪುಟ ಸಚಿವ!

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯ ಸವಾಲನ್ನು ನಾವು ಸ್ವೀಕರಿಸಿ ಯಶಸ್ವಿಯಾಗಬೇಕು ಎಂದು ಬಿ.ವೈ. ವಿಜಯೇಂದ್ರ ಸಲಹೆ ನೀಡಿದರು.

ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಪ್ರೀತಮ್ ಗೌಡ, ರಾಜ್ಯ ಉಪಾಧ್ಯಕ್ಷೆ ಮತ್ತು ಮಾಜಿ ಶಾಸಕಿ ರೂಪಾಲಿ ನಾಯಕ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡೆಂಜಿ ಮತ್ತು ಅಪೇಕ್ಷಿತರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

Rahul Gandhi:ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

VISTARANEWS.COM


on

Rahul Gandhi
Koo

ಉತ್ತರಪ್ರದೇಶ: ಉತ್ತರಭಾರತದಲ್ಲಿ ಬಿಸಿಲ ಬೇಗೆ ದಿನೇ ದಿನೇ ಹಚ್ಚಾಗುತ್ತಿದೆ. ಜನ ಅಂತೂ ಸೆಖೆಗೆ ಬಳಲಿ ಬೆಂಡಾಗಿದ್ದಾರೆ. ಇದೀಗ ಬಿಸಿಲಿನ ಶಾಖ ಕಾಂಗ್ರೆಸ್‌ ನಾಯಕ(Congress Leader) ರಾಹುಲ್‌ ಗಾಂಧಿ(Rahul Gandhi) ಅವರಿಗೂ ತಟ್ಟಿದೆ. ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ನಾಯಕ ಎಂದರೆ ಅದು ರಾಹುಲ್‌ ಗಾಂಧಿ. ಅವರು ಎಲ್ಲೇ ಹೋದರೂ ಚಿತ್ರ ವಿಚಿತ್ರ ಕೆಲಸ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌(Viral Video) ಆಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ರುದ್ರಪುರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಹುಲ್‌ ಗಾಂಧಿ ವೇದಿಕೆಯಲ್ಲಿ ಮಾತನಾಡುತ್ತಾ ಅಲ್ಲೇ ಇದ್ದ ಬಾಟಲಿಯ ನೀರನ್ನು ತಲೆಗೆ ಸುರಿದುಕೊಂಡಿದ್ದಾರೆ. ಅಲ್ಲದೇ ಅಬ್ಬಾ ಎಂಥಾ ಸೆಖೆ ಎಂದು ಹೇಳಿದ್ದಾರೆ. ಇದು ವಿಡಿಯೋದಲ್ಲಿ ಸೆರೆ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಉತ್ತರಭಾರತದಲ್ಲಿ ಸಹಿಸಲಾಗದಂತಹ ಬಿಸಿಗಾಳಿ ಬೀಸುತ್ತಿದ್ದು, ಉಷ್ಣಾಂಶ 48 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ.

ಎರಡು ದಿನಗಳ ಹಿಂದೆಯಷ್ಟೇ ರಾಹುಲ್‌ ಗಾಂಧಿ ಭಾಗಿಯಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ವೇದಿಕೆ ಕುಸಿದ ಘಟನೆ ವರದಿಯಾಗಿತ್ತು. ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದರು. ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಅವರು ಪಾರಾಗಿದ್ದರು.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ:Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


Continue Reading

ಪ್ರಮುಖ ಸುದ್ದಿ

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Lok Sabha Election : ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಆರು ಹಂತಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆನ್​ಲೈನ್​ ಸ್ಟಾಕ್ ಟ್ರೇಡಿಂಗ್ ಮತ್ತು ಹೂಡಿಕೆ ಸಂಸ್ಥೆಯಾಗಿರುವ ಐಐಎಫ್ಎಲ್ ಸೆಕ್ಯುರಿಟೀಸ್ ತನ್ನ ಸಮೀಕ್ಷೆಯನ್ನು ಪ್ರಕಟಿಸಿದೆ. ಅದರ ಪ್ರಕಾರ ಈ ಬಾರಿ ಬಿಜೆಪಿ 320 ಸ್ಥಾನಗಳನ್ನು ಸಲೀಸಾಗಿ ಗೆಲ್ಲಲಿದೆ. ಇದು 2019ರ 303 ಸೀಟ್​ಗಳಿಂತ ಅಧಿಕ. ಆರನೇ ಹಂತದ ಮತದಾನ ಸೇರಿದಂತೆ ಬಿಜೆಪಿಗೆ ಹೆಚ್ಚು ಮತಗಳು ಬೀಳುವ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ 3 ಶೇಕಡಾ ಮತ ಚಲಾವಣೆ ಕುಸಿತ ಕಂಡಿದೆ. (ಹಿಂದಿಯೇತರ ರಾಜ್ಯಗಳಲ್ಲಿ 0.6 ಶೇಕಡಾ ಕುಸಿತ) ಇದು ಬಿಜೆಪಿಗೆ ನಷ್ಟ ಎಂದು ಅಂದಾಜಿಸಲಾಗುತ್ತದೆ. ಇದರ ಹೊರತಾಗಿಯೂ, ಉತ್ತರ ಪ್ರದೇಶ (ಎಸ್ಪಿ-ಬಿಎಸ್ಪಿ ಮೈತ್ರಿಯ ಅನುಪಸ್ಥಿತಿ), ಒಡಿಶಾ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಿಗುವ ಸ್ಥಾನಗಳ ಲಾಭಗಳ ಮೂಲಕ ಬಿಜೆಪಿ ಬಹುಮತ ಹೆಚ್ಚಿಸಿಕೊಳ್ಳಲಿದೆ ಎಂದು ಬ್ರೋಕರೇಜ್ ಸಂಸ್ಥೆ ಅಂದಾಜಿಸಿದೆ.

ಒಟ್ಟು ಆರು ಹಂತಗಳ ಮತದಾನ ಮುಕ್ತಾಯವಾಗಿದ್ದು ಶೇಕಡಾ 89ರಷ್ಟು ಮತಗಳು ಚಲಾವಣೆಯಾಗಿದೆ. ಈ 486 ಸ್ಥಾನಗಳ ಪೈಕಿ ಬಿಜೆಪಿ 278 ಸ್ಥಾನಗಳಲ್ಲಿ ಗೆಲುವು ಸಾಧಿಸಿಲಿದೆ. ಜೂನ್ 1 ರಂದು ನಡೆಯಲಿರುವ ಕೊನೆಯ ಹಂತದ ಚುನಾವಣೆಗೆ ಮುಂಚಿತವಾಗಿ ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣ ಕುಸಿತ ಕಂಡಿದೆ. ಆದಾಗ್ಯೂ ಬಿಜೆಪಿ 320ರ ಗಡಿ ಮುಟ್ಟುವುದು ಖಚಿತ ಎಂದು ಅದು ಅಂದಾಜಿಸಿದೆ. ಇದೇ ವೇಳೆ ಕೊನೇ ಹಂತದ ಮತದಾನ 2019 ರ ಮಟ್ಟಕ್ಕಿಂತ ಸ್ವಲ್ಪ ಕಡಿಮೆಯಾಗಬಹುದು ಸಮೀಕ್ಷೆ ಹೇಳಿದೆ.

ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ ಕಡಿಮೆಯಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

ಇದನ್ನೂ ಓದಿ: Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

1951-67ನ್ನು ಹೊರತುಪಡಿಸಿ ಭಾರತದಲ್ಲಿ ಸತತವಾಗಿ ನಡೆದ 3 ಲೋಕಸಭಾ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಗೊಂಡ ಉದಾಹರಣೆಗಳು ಇಲ್ಲ. ಅಂತೆಯೇ 2014 ಮತ್ತು 2019 ರ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳ ಕಂಡ ನಂತರ 2024 ರ ಚುನಾವಣೆಯಲ್ಲಿ ಯಥಾವತ್​ ಪ್ರಮಾಣ ಸ್ವಲ್ಪ ಕುಸಿತ ಕಂಡಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

ಐಐಎಫ್ಎಲ್ ಸೆಕ್ಯುರಿಟೀಸ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 2019 ರ ಒಟ್ಟು ಸ್ಥಾನಕ್ಕೆ ಇನ್ನೂ 10 ಸ್ಥಾನಗಳನ್ನು ಸೇರ್ಪಡೆಗೊಳಿಸಲಿದೆ. ಅಂದರೆ ಒಟ್ಟು 80ರಲ್ಲಿ 72 ಬಿಜೆಪಿ ಪಾಲಾಗಲಿದೆ. 2019ರಲ್ಲಿ ಅದು 62 ಆಗಿತ್ತು. ನರೇಂದ್ರ ಮೋದಿ ನೇತೃತ್ವದ ಪಕ್ಷವು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ 2019ಕ್ಕಿಂತ ತಲಾ 5 ಹೆಚ್ಚುವರಿ ಸ್ಥಾನಗಳನ್ನು ಗಳಿಸಲದೆ. ಬಂಗಾಳದಲ್ಲಿ 18ರಿಂದ 23ಕ್ಕೆ ಏರಿಕೆಯಾದರೆ, ಒಡಿಶಾದಲ್ಲಿ 8ರಿಂದ 13ಕ್ಕೆ ಜಿಗಿಯಲಿದೆ. ಅಲ್ಲದೆ, ತೆಲಂಗಾಣ ಮತ್ತು ಆಂಧ್ರಪ್ರದೇಶ ತಲಾ 3 ಸ್ಥಾನಗಳನ್ನು ಪಡೆಯಲಿದೆ.

ಬೇಸ್​ ಪಾಯಿಂಟ್​ಗಳ ಕುಸಿತ

6 ಹಂತಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮತದಾನದ ಪ್ರಮಾಣದಲ್ಲಿ ಸರಾಸರಿ 150 ಬೇಸಿಸ್ ಪಾಯಿಂಟ್​​ಗಳ ಕುಸಿತ ಕಂಡುಬಂದಿದೆ. ಮೊದಲ ಹಂತದಲ್ಲಿ ಮತದಾನದ 400 ಬೇಸಿಸ್ ಪಾಯಿಂಟ್​ಗಳ ಕುಸಿತ ಹೋಲಿಸಿದರೆ ಇದು ಕಡಿಮೆ. ಹಂತ 4 ಮತ್ತು 5ನೇ ಹಂತದಲ್ಲಿ 2019 ಕ್ಕೆ ಹೋಲಿಸಿದರೆ ಅಲ್ಪ ಏರಿಕೆ ಕಂಡಿದ್ದು. 6 ನೇ ಹಂತವು ಅಲ್ಪ ಕುಸಿತ ದಾಖಲಾಗಿದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

2019 ರ ಚುನಾವಣೆಗೆ ಹೋಲಿಸಿದರೆ 486 ಸ್ಥಾನಗಳಲ್ಲಿ ಒಟ್ಟು 156 ಸ್ಥಾನಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ತಿಳಿಸಿದೆ.

ಅನಿರೀಕ್ಷಿತ ಫಲಿತಾಂಶ ಅಸಾಧ್ಯ

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರಿ ಪ್ರಮಾಣದ ಮತ ಹಂಚಿಕೆ ವ್ಯತ್ಯಾಸ ಆಗಿದೆ. ಹೀಗಾಗಿ 2024 ರ ಚುನಾವಣೆಯ ಫಲಿತಾಂಶ 2004 ರ ಚುನಾವಣೆಗಳಂತೆ ಅಚ್ಚರಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ ಎಂದು ಐಐಎಫ್ಎಲ್ ದೃಢವಾಗಿ ಹೇಳಿದೆ.

ಕರ್ನಾಟಕದಲ್ಲಿ ನಷ್ಟ

“ಮೈತ್ರಿ / ಅಭ್ಯರ್ಥಿ ಆಯ್ಕೆ ಸಮಸ್ಯೆಗಳಿಂದಾಗಿ ರಾಜಸ್ಥಾನ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಗೆ ನಷ್ಟವಾಗಬಹುದು. ಆದರೆ, ಮಹಾರಾಷ್ಟ್ರದಲ್ಲಿ ಎನ್​ಡಿಎ 2 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಅಂದಾಜಿಸಿದೆ. 2019 ರಲ್ಲಿ 224 ಸ್ಥಾನಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ತನ್ನ ಬಹುಮತವನ್ನು ಉಳಿಸಿಕೊಳ್ಳುತ್ತದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

lok sabha Election : ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದರು.

VISTARANEWS.COM


on

Lok Sabha Election
Koo

ರಾಂಚಿ: ಲೋಕ ಸಭಾ ಚುನಾವಣೆ (Lok Sabha Election) ಕೊನೇ ಹಂತದ ಮತದಾದನ ಹಿನ್ನೆಲೆಯಲ್ಲಿ ಜಾರ್ಖಂಡ್​ನಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಆಡಳಿತಾರೂಢ ಜಾರ್ಖಂಡ್​ ಮುಕ್ತಿ ಮೋರ್ಚಾದ (ಜೆಎಮ್​ಎಮ್​) ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು. ಜಾರ್ಖಂಡ್​ನ ದುಮ್ಕಾದಲ್ಲಿ ಮಂಗಳವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದೂ ಧರ್ಮಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ‘ಲವ್ ಜಿಹಾದ್’ ಆರಂಭಗೊಂಡಿರುವುದೇ ಜಾರ್ಖಂಡ್​ನಿಂದ ಎಂದು ಹೇಳಿಕೆ ನೀಡಿದ್ದಾರೆ.

ಜೆಎಂಎಂ ನಿರಂತರವಾಗಿ ಕೋಮುವಾದಿ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ ಮೋದಿ, ಜಾರ್ಖಂಡ್​ ನ ಒಂದು ಜಿಲ್ಲೆಯಲ್ಲಿ ಭಾನುವಾರದ ಸಾಂಪ್ರದಾಯಿಕ ರಜಾದಿನವನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಹೇಳಿದರು. ವಾಸ್ತವದಲ್ಲಿ ಭಾನುವಾರ ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದೆ. 200-300 ವರ್ಷಗಳಿಂದ ರಜಾದಿನವಾಗಿ ಪರಿಗಣಿಸಲಾಗಿದೆ. ಈಗ ಅದನ್ನು ಶುಕ್ರವಾರಕ್ಕೆ ಬದಲಾಯಿಸಲಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಲೂಟಿ ಆರೋಪಗಳು

ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಜೆಎಂಎಂ ಮತ್ತು ಕಾಂಗ್ರೆಸ್ ಮಿತಿಮೀರಿದ ಲೂಟಿಯಲ್ಲಿ ತೊಡಗಿವೆ ಎಂದು ಆರೋಪಿಸಿದರು, ಜಾರ್ಖಂಡ್ ರಾಜ್ಯದಲ್ಲಿ ಹಣದ ಶಿಖರಗಳು ನಿರ್ಮಾಣಗೊಂಡಿವೆ. ಜೆಎಂಎಂ-ಕಾಂಗ್ರೆಸ್ ವ್ಯಾಪಕ ಲೂಟಿಯಲ್ಲಿ ತೊಡಗಿದೆ ಎಂದು ಹೇಳಿದರು. ಜೂನ್ 4 ರ ನಂತರ ತಮ್ಮ ನೇತೃತ್ವದ ನೂತನ ಕೇಂದ್ರ ಸರ್ಕಾರ ಭ್ರಷ್ಟಾಚಾರದ ವಿರುದ್ಧ ತನ್ನ ಕ್ರಮ ತೀವ್ರಗೊಳಿಸುತ್ತದೆ ಎಂದು ಅವರು ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

2014ಕ್ಕೂ ಮೊದಲು ಕಾಂಗ್ರೆಸ್ ದಿನದ 24 ಗಂಟೆಯೂ ಲೂಟಿಯಲ್ಲಿ ತೊಡಗಿದ್ದರಿಂದ ಹಗರಣಗಳು ಸಾಮಾನ್ಯವಾಗಿದ್ದವು, ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಅದನ್ನು ನಿಲ್ಲಿಸಿಸಲಾಯಿತು ಎಂದು ಹೇಳಿದರು

ನುಸುಳುಕೋರರ ಸಮಸ್ಯೆ

ಒಳನುಸುಳುವಿಕೆಯಿಂದಾಗಿ ಸಂತಾಲ್ ಪರಗಣಗಳಲ್ಲಿ ಬುಡಕಟ್ಟು ಜನಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೋದಿ ಆರೋಪಿಸಿದರು. ಜಾರ್ಖಂಡ್​ನಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟವು “ನುಸುಳುಕೋರರನ್ನು ಪೋಷಿಸುತ್ತಿದೆ” ಎಂದು ಅವರು ಆರೋಪಿಸಿದರು. ಬುಡಕಟ್ಟು ಜನರ ಭೂಮಿಯನ್ನು ನುಸುಳುಕೋರರು ವಶಪಡಿಸಿಕೊಳ್ಳುತ್ತಿದ್ದಾರೆ. ಅವರು ಮಹಿಳೆಯರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಜಾರ್ಖಂಡ್​ನಲ್ಲಿ ದೊಡ್ಡ ಬಿಕ್ಕಟ್ಟು ತಲೆದೋರಿದೆ. ಅದುವೇ ಒಳನುಸುಳುವಿಕೆ. ಸಂತಾಲ್ ಪರಗಣಗಳು ಒಳನುಸುಳುವಿಕೆಯ ಸವಾಲನ್ನು ಎದುರಿಸುತ್ತಿವೆ. ಅನೇಕ ಪ್ರದೇಶಗಳಲ್ಲಿ, ಬುಡಕಟ್ಟು ಜನರ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ ಮತ್ತು ಒಳನುಸುಳುವವರ ಸಂಖ್ಯೆ ಹೆಚ್ಚುತ್ತಿದೆ. ನುಸುಳುಕೋರರು ಬುಡಕಟ್ಟು ಜನರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳು ನುಸುಳುಕೋರರ ದಾಳಿಗೆ ಗುರಿಯಾಗಿದ್ದಾರೆ. ಅವರ ಭದ್ರತೆ ಮತ್ತು ಸುರಕ್ಷತೆ ಅಪಾಯದಲ್ಲಿದೆ. ಅವರ ಜೀವವೂ ಅಪಾಯದಲ್ಲಿದೆ” ಎಂದು ಅವರು ಹೇಳಿದರು.

2022 ರ ಘಟನೆಗಳನ್ನು ಉಲ್ಲೇಖಿಸಿದ ಮೋದಿ, “ಬುಡಕಟ್ಟು ಹೆಣ್ಣುಮಕ್ಕಳನ್ನು 50 ತುಂಡುಗಳಾಗಿ ಕತ್ತರಿಸಲಾಗುತ್ತಿದೆ. ಜೀವಂತವಾಗಿ ಸುಡಲಾಗುತ್ತಿದೆ ನಾಲಿಗೆಯನ್ನು ಹೊರತೆಗೆಯಲಾಗಿದೆ. ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿರುವ ಈ ಜನರು ಯಾರು? ಜೆಎಂಎಂ ಸರ್ಕಾರ ಅವರನ್ನು ಏಕೆ ಪೋಷಿಸುತ್ತಿದೆ ಎಂದು ಮೋದಿ ಪ್ರಶ್ನಿಸಿದರು. ಮುಂದಿನ ಐದು ವರ್ಷಗಳಲ್ಲಿ ದೇಶವು ಹಿಂದಿನ ದಶಕಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಅವರು ಭರವಸೆ ನೀಡಿದರು.

Continue Reading

Lok Sabha Election 2024

Lok Sabha Election : ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

Lok Sabha Election : ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಕಳೆದ ಮೂರ್ನಾಲ್ಕು ತಿಂಗಳಿಂದ ದೇಶಾದ್ಯಂತ ಸಂಚರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೊನೇ ಹಂತದ ಚುನಾವಣಾ ಪ್ರಚಾರ ಮುಗಿದ ಬಳಿಕ ಅಂದರೆ ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಶ್ವ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಆಗಮಿಸಲಿದ್ದಾರೆ. 73 ವರ್ಷದ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳವಾದ ಸ್ಮಾರಕದಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕನ್ಯಾಕುಮಾರಿಯಲ್ಲಿ, ಪಿಎಂ ಮೋದಿ ರಾಕ್ ಮೆಮೋರಿಯಲ್​ಗೆ ಭೇಟಿ ನೀಡಲಿದ್ದಾರೆ ಮತ್ತು ಮೇ 30 ರ ಸಂಜೆಯಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ.

ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದೆ. ಇದರು ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ. ಮೂರನೇ ಅವಧಿಗೆ ಪ್ರಧಾನಿಯಾಗುವ ಕನಸು ಹೊಂದಿರುವ ನರೇಂದ್ರ ಮೋದಿ ಗುರುವಾರ ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಿದ್ದಾರೆ. ಬಳಿಕ ಜೂನ್ 1 ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಇದನ್ನೂ ಓದಿ: T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

ಏಳು ಹಂತಗಳಲ್ಲಿ ನಿಗದಿಯಾದ ಲೋಕಸಭಾ ಚುನಾವಣೆ ಜೂನ್ 1 ರಂದು ಕೊನೆಗೊಳ್ಳಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. 2019 ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಕೇಸರಿ ಬಟ್ಟೆ ಧರಿಸಿ ಕೇದಾರನಾಥ ಬಳಿಯ ಪವಿತ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು. ಈ ಫೋಟೊ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿತ್ತು.

ಈ ತಿಂಗಳ ಆರಂಭದಲ್ಲಿ, ಪ್ರಧಾಣಿ ಮೋದಿ ಅವರು ನೀಡಿದ ವಿಶೇಷ ಸಂದರ್ಶನದಲ್ಲಿ, ಚುನಾವಣಾ ಲೆಕ್ಕಾಚಾರಗಳು ನಮ್ಮ ಪರವಾಗಿ ಹೆಚ್ಚು ವಾಲುತ್ತಿವೆ. ನಾನು ಅದರ ಬಗ್ಗೆ ಏನನ್ನೂ ಹೇಳಬೇಕಾಗಿಲ್ಲ. ನಾವು ಮೇಲುಗೈ ಸಾಧಿಸಿದ್ದೇವೆ. ಮತ್ತು ಅದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದರು. ಚುನಾವಣಾ ಸೋಲುಗಳು ಮತ್ತು ಹಲವರ ಪಕ್ಷಾಂತರಗಳಿಂದ ಕಂಗೆಟ್ಟಿರುವ ಕಾಂಗ್ರೆಸ್, ಬಿಜೆಪಿಯನ್ನು ಎದುರಿಸುವ ಶಕ್ತಿ ಕಳೆದುಕೊಂಡಿದೆ ಎಂದು ಹೇಳಿದ್ದರು.

ತಮ್ಮ ಹೊಸ ಸರ್ಕಾರದ ಮೊದಲ 100 ದಿನಗಳ ಕ್ರಿಯಾ ಯೋಜನೆಯನ್ನು ರೂಪಿಸಲು ತಮ್ಮ ಸಚಿವರಿಗೆ ನಿಯೋಜಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದರು.

Continue Reading
Advertisement
Love Jihad
ಪ್ರಮುಖ ಸುದ್ದಿ2 mins ago

Love Jihad: ಲವ್ ಜಿಹಾದ್ ಕೇಸ್ ಹೆಚ್ಚಳ; ಹಿಂದು ಯುವತಿಯರ ರಕ್ಷಣೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ14 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ16 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ22 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್29 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ34 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ36 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ1 hour ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್2 hours ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ2 hours ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌