LoK Sabha Election 2024: ಕರ್ನಾಟಕ ಬಿಜೆಪಿ ಟಿಕೆಟ್‌ ಇಂದೇ ಫೈನಲ್; ಈ 17 ಮಂದಿಗೆ ಪಕ್ಕಾ! - Vistara News

Lok Sabha Election 2024

LoK Sabha Election 2024: ಕರ್ನಾಟಕ ಬಿಜೆಪಿ ಟಿಕೆಟ್‌ ಇಂದೇ ಫೈನಲ್; ಈ 17 ಮಂದಿಗೆ ಪಕ್ಕಾ!

LoK Sabha Election 2024: ನವದೆಹಲಿಯಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಲಾಗುವುದು. ಜತೆಗೆ ಜೆಡಿಎಸ್‌ಗೆ ಯಾವೆಲ್ಲ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದು ಸಹ ತೀರ್ಮಾನ ಆಗಲಿದೆ. ಇನ್ನು ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election 2024 BJP to release second list next week 17 tickets are finalised
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆಗೆ (LoK Sabha Election 2024) ಭರದ ಸಿದ್ಧತೆ ನಡೆಯುತ್ತಿದೆ. ಇನ್ನೇನು ಚುನಾವಣೆ ಸಮೀಪ ಬರುತ್ತಿದೆ. ದಿನಾಂಕ ಘೋಷಣೆ ಇನ್ನೇನು ಆಗಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿವೆ. ಈಗಾಗಲೇ ಬಿಜೆಪಿ ಎಲ್ಲ ಪಕ್ಷಗಳಿಗಿಂತ ಮೊದಲು ವಿವಿಧ ರಾಜ್ಯಗಳ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಮುಂಚೂಣಿಯಲ್ಲಿದ್ದು, ಈಗ 2ನೇ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇದರಲ್ಲಿ ಕರ್ನಾಟಕದ (BJP Karnataka) ಅಭ್ಯರ್ಥಿಗಳ ಪಟ್ಟಿ ಸಹ ಇರಲಿದೆ ಎನ್ನಲಾಗಿದ್ದು, ಇಂದು (ಬುಧವಾರ – ಮಾ. 6) ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಲಾಗುವುದು. ಜತೆಗೆ ಜೆಡಿಎಸ್‌ಗೆ (JDS Karnataka) ಯಾವೆಲ್ಲ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದು ಸಹ ತೀರ್ಮಾನ ಆಗಲಿದೆ. ಇನ್ನು ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆಗಿದೆ ಎಂದು ತಿಳಿದುಬಂದಿದೆ.

ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರು ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ನಾಯಕರ ಜತೆಗೆ ಇಂದು ಸಭೆ ಇದೆ. ವರಿಷ್ಠರ ಜತೆ 28 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಜೆಡಿಎಸ್‌ಗೆ ಎಷ್ಟು ಸ್ಥಾನ ಬಿಟ್ಟು ಕೊಡಬೇಕು ಎಂಬುದನ್ನು ಹೈಕಮಾಂಡ್ (BJP High Command) ನಿರ್ಧಾರ ಮಾಡಲಿದೆ. ಇನ್ನು ವಿಧಾನಸಭೆಯಲ್ಲಿ ಸೋತ ನಾಯಕರು ಸಹ ಈ ಬಾರಿ ಟಿಕೆಟ್‌ಗೆ ಲಾಬಿ ನಡೆಸುತ್ತಿದ್ದು, ಅವರಿಗೆ ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಶೀಘ್ರದಲ್ಲಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಆಗಲಿದೆ.

ರಾಜ್ಯ ಬಿಜೆಪಿಯ 17 ಅಭ್ಯರ್ಥಿಗಳ ಪಟ್ಟಿ ಫೈನಲ್; ಯಾರಿಗೆ, ಏಕೆ ಟಿಕೆಟ್?

ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
ಯುವ ಸಂಸದರಾಗಿರುವ ತೇಜಸ್ವಿ ಸೂರ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಮುಂದಿದ್ದಾರೆ. ಅಲ್ಲದೆ, ಸಂಸತ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿಕೆ ಇವರಿಗೆ ಪ್ಲಸ್‌ ಆಗಿದೆ.

ಬೆಂಗಳೂರು ಕೇಂದ್ರ – ಪಿಸಿ ಮೋಹನ್
ಮೂರು ಬಾರಿ ಬೆಂಗಳೂರು ಕೇಂದ್ರದಿಂದ ಸಂಸದರಾಗಿದ್ದಾರೆ. ಎಲ್ಲರೂ ಒಪ್ಪುವ ರೀತಿ ಕೆಲಸ ಮಾಡಿದ್ದಾರೆ. ಯಾವುದೇ ವಿವಾದವನ್ನು ಮಾಡಿಕೊಂಡಿಲ್ಲ. ಕ್ಷೇತ್ರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ – ಬಿ.ವೈ. ರಾಘವೇಂದ್ರ
ಕ್ಷೇತ್ರದಲ್ಲಿ ನಡೆಯುತ್ತಿರುವ ನಿರಂತರ ಅಭಿವೃದ್ಧಿ ಕೆಲಸದ ಜತೆಗೆ ಬಿ.ವೈ. ರಾಘವೇಂದ್ರ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಅಭಿಪ್ರಾಯ ಇದೆ. ಅಲ್ಲದೆ, ಉತ್ತಮ ಸಂಘಟನಕಾರ ಎಂಬ ಖ್ಯಾತಿ ಇವರಿಗೆ ಪ್ಲಸ್‌ ಆಗಿದೆ.

ಉಡುಪಿ ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ
ಉಡುಪಿ ಚಿಕ್ಕಮಗಳೂರು ಸಂಸದೆಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಣೆ ಮಾಡಿದ ಖ್ಯಾತಿ. ಕೇಂದ್ರ ಸಚಿವೆಯಾಗಿಯೂ ಸಕ್ಸಸ್ ಆಗಿದ್ದಾರೆ. ಈ ಮಧ್ಯೆ ಕ್ಷೇತ್ರದಲ್ಲಿ ನಡೆದಿದ್ದ ಗೋ ಬ್ಯಾಕ್‌ ಅಭಿಯಾನದಿಂದ ಅಲ್ಪ ಗೊಂದಲ ಏರ್ಪಟ್ಟಿತ್ತು. ಆದರೆ, ಇದರಿಂದ ಹಿಂದೆ ಸ್ಥಳೀಯ ಕೆಲವು ಬಿಜೆಪಿ ನಾಯಕರೇ ಇರುವ ಗುಮಾನಿ ಹಿನ್ನೆಲೆಯಲ್ಲಿ ಶೋಭಾಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ.

ಹುಬ್ಬಳ್ಳಿ ಧಾರವಾಡ – ಪ್ರಹ್ಲಾದ ಜೋಶಿ
ಕೇಂದ್ರದಲ್ಲಿ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಣೆ. ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ ಮತ್ತು ಕೇಂದ್ರದ ನಡುವೆ ಕೊಂಡಿ ರೀತಿಯಲ್ಲಿ ಕೆಲಸ ಮಾಡುತ್ತಿರುವುದರ ಜತೆಗೆ ಬಿಜೆಪಿ ಸಂಘಟನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ಜಿ.ಎಂ ಸಿದ್ದೇಶ್ವರ – ದಾವಣಗೆರೆ ಸಂಸದ
ದಾವಣಗೆರೆಯಲ್ಲಿ ಆಗಿರುವ ಅಭಿವೃದ್ಧಿ ಕೆಲಸವೇ ಶ್ರೀರಕ್ಷೆಯಾಗಲಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಹೊರತುಪಡಿಸಿದರೆ ಬಹುತೇಕ ನಾಯಕರ ಬೆಂಬಲ ಇವರಿಗೆ ಇದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಇವರಾಗಿದ್ದಾರೆ.

ಪಿ.ಸಿ. ಗದ್ದಿಗೌಡರ್ – ಬಾಗಲಕೋಟೆ
ಬಾಗಲಕೋಟೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಆಕಾಂಕ್ಷಿಯಾಗಿದ್ದರು. ಆದರೆ, ಪಿ.ಸಿ. ಗದ್ದಿಗೌಡರ್ ಅವರಿಗೆ ಟಿಕೆಟ್ ಖಚಿತ ಎನ್ನಲಾಗಿದೆ. ಕೆಲ ಕಡೆ ಕಾರ್ಯಕರ್ತರ ಅಸಮಾಧಾನ ಇದ್ದರೂ ಕ್ಷೇತ್ರದ ಅಭಿವೃದ್ಧಿ ಮತ್ತು ಸಂಘಟನೆಯಲ್ಲಿ ಹಿಂದೆ ಬಿದ್ದಿಲ್ಲ.

ಮೈಸೂರು – ಪ್ರತಾಪ್‌ ಸಿಂಹ
ಉತ್ತಮ ಸಂಘಟನೆಯನ್ನು ಮಾಡಿಕೊಂಡು ಬಂದಿರುವ ಪ್ರತಾಪ್‌ ಸಿಂಹ ಕ್ಷೇತ್ರದ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಅಲ್ಲದೆ, ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ನಿರಂತರವಾಗಿ ಪ್ರಚಾರವನ್ನು ಮಾಡಿಕೊಂಡು ಬರುವುದರ ಜತೆಗೆ ಸಂಸತ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವುದು ಸಹ ಇವರಿಗೆ ಪ್ಲಸ್‌ ಆಗಿದೆ.

ಕಲಬರಗಿ – ಡಾ. ಉಮೇಶ್ ಜಾದವ್
ಕಾಂಗ್ರೆಸ್‌ನ ಭದ್ರಕೋಟೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಕೀರ್ತಿ ಡಾ. ಉಮೇಶ್‌ ಜಾದವ್‌ ಅವರದ್ದಾಗಿದೆ. ಅಪ್ಪ – ಮಗ ಇಬ್ಬರೂ ಈಗ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ. ಹೀಗಾಗಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನೆಯನ್ನು ಚುರುಕು ಮಾಡಿದ್ದಾರೆ. ಹೀಗಾಗಿ ಈ ಬಾರಿಯೂ ಇವರಿಗೇ ಟಿಕೆಟ್‌ ನೀಡುವ ಮನಸ್ಸನ್ನು ಹೈಕಮಾಂಡ್‌ ಮಾಡಿದೆ.

ಇದನ್ನೂ ಓದಿ: Text Book Revision: ಪಠ್ಯ ಪರಿಷ್ಕರಣೆಯಲ್ಲಿ ಸನಾತನ ಧರ್ಮಕ್ಕೆ ‘ಸೂಕ್ತ ವಿವರಣೆ’ ನೀಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಬೀದರ್ – ಭಗವಂತ ಖೂಬಾ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಭಗವಂತ ಖೂಬಾ ಜಿಲ್ಲೆಯಲ್ಲಿ ನಿರಂತರವಾಗಿ ಸಂಘಟನೆ ಮಾಡಿಕೊಂಡು ಬರುತ್ತಿದ್ದಾರೆ. ಶಾಸಕ ಪ್ರಭು ಚೌವ್ಹಾನ್‌ ಅವರನ್ನು ಹೊರತುಪಡಿಸಿದರೆ ಪಕ್ಷದ ಕಾರ್ಯಕರ್ತರು‌ ಮತ್ತು ಜನಪ್ರತಿನಿಧಿಗಳ ಬೆಂಬಲ ಇವರಿಗೆ ಇದೆ. ಕೇಂದ್ರದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇವರು ಸಹ ಮುಂಚೂಣಿಯಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

CM Siddaramaiah: ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಆರೋಪ ಮಾಡಿದ್ದಾರೆ.

VISTARANEWS.COM


on

CM Siddaramaiah says Our government is stable for 5 years BJP will disintegrate
Koo

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Maharashtra CM Eknath Shinde) ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿರುಗೇಟು ನೀಡಿದ್ದು, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂಬ ಸಲಹೆಯನ್ನೂ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ. ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ.

ವಿಜಯೇಂದ್ರ ತಲೆದಂಡಕ್ಕೆ ವ್ಯೂಹ ರಚನೆ

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಹತಾಶೆಯಿಂದ ಮಾತನಾಡಿರುವ ಶಿಂಧೆ

ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading

ದೇಶ

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Supriya Sule:ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ.

VISTARANEWS.COM


on

Supriya Sule
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಇದೀಗ ಇದರ ಬೆನ್ನಲ್ಲೇ ಭಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಮತಯಂತ್ರ(EVM)ಗಳನ್ನು ಕೂಡಿಟ್ಟಿದ್ದ ಸ್ಟ್ರಾಂಗ್‌ ರೂಂ(Strong room)ನ ಸಿಸಿಟಿವಿ ಕ್ಯಾಮೆರಾ ಸುಮಾರು 45ನಿಮಿಷಗಳ ಕಾಲ ಸ್ವಿಚ್‌ ಆಫ್‌ ಆಗಿತ್ತು ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸುಪ್ರಿಯಾ ಸುಳೆ(Supriya Sule) ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಸುಳೆ ಆರೋಪವೇನು?

ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ. ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

EC ಪ್ರತಿಕ್ರಿಯೆ ಏನು?

ಸುಪ್ರಿಯಾ ಸುಳೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಕವಿತಾ ದ್ವಿವೇದಿ, ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಗೋದಾಮಿನಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಡೇಟಾ ಸುರಕ್ಷಿತವಾಗಿದೆ, ಸ್ವಲ್ಪ ಸಮಯದವರೆಗೆ ಮಾನಿಟರ್‌ ಅನ್ನು ಮುಚ್ಚಲಾಗಿತ್ತು. ಅದರ ಹೊರತಾಗಿ ಎಲ್ಲಾ ದತ್ತಾಂಶಗಳು ಸುರಕ್ಷಿತವಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಬಾರಾಮತಿಯಲ್ಲಿ ಕ್ಷೇತ್ರದಲ್ಲಿ ಪವಾರ್‌ ವರ್ಸಸ್‌ ಪವಾರ್‌ ಸೆಣಸಾಟ ಇದ್ದು, ಇದೊಂದು ಪ್ರತಿಷ್ಠೆಯ ಕಣವಾಗಿದೆ. ಮೇ 7ರಂದು ಮತದಾನ ನಡೆದಿದ್ದು, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಪರಸ್ಪರ ಎದುರಾಳಿಗಳಾಗಿ ಕಣದಲ್ಲಿದ್ದಾರೆ.

Continue Reading

Lok Sabha Election 2024

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

CM Siddaramaiah: ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಹೈಕಮಾಂಡ್‌ ಒತ್ತಾಯ ಇರುವುದರಿಂದ ಪ್ರಚಾರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ ಎಂಬ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.

VISTARANEWS.COM


on

I dont want to go to other states for Lok Sabha Election 2024 campaign for Congress says CM Siddaramaiah
Koo

ಮೈಸೂರು: ಹೊರ ರಾಜ್ಯಗಳ ಲೋಕಸಭಾ ಚುನಾವಣೆಗೆ (Lok Sabha Election 2024) ನನ್ನನ್ನು ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದಾರೆ. ಸಾಮಾನ್ಯವಾಗಿ ನಾನು ಹೊರ ರಾಜ್ಯಗಳಿಗೆ ಹೋಗಲ್ಲ. ನನಗೆ ಅದು ಇಷ್ಟವೂ ಆಗುವುದಿಲ್ಲ. ಇಲ್ಲೇ ಬೇಕಾದಷ್ಟು ಕೆಲಸ ಇದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ನಮ್ಮ ಸರ್ಕಾರ ಸುಭದ್ರವಾಗಿದೆ. ಹೊರಗೂ, ಒಳಗೂ ಭಿನ್ನಮತ ಇಲ್ಲ. ಒಳಜಗಳ ಇದ್ದರೆ ಲೋಕಸಭೆ ಚುನಾವಣೆಯಲ್ಲಿ ಇಷ್ಟೊಂದು ಒಗ್ಗಟ್ಟಿನಿಂದ ಕೆಲಸ ಮಾಡಲು ಆಗುತ್ತಿತ್ತಾ? ಸರ್ಕಾರ ಸುಭದ್ರವಾಗಿದೆ. ಇನ್ನೂ ಏಕನಾಥ್ ಶಿಂಧೆ ಸರ್ಕಾರ ಇರುತ್ತದೆಯೋ? ಇಲ್ಲವೋ ನೋಡಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕುಮಾರಸ್ವಾಮಿಗೆ ಸಿಎಂ ತಿರುಗೇಟು

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸ್. ಅವರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

ಎಂಎಲ್‌ಸಿ ಚುನಾವಣೆಯಲ್ಲಿ ಉತ್ತಮ ವಾತಾವರಣ

ಎಂಎಲ್‌ಸಿ ಚುನಾವಣೆಯಲ್ಲಿ ನಮಗೆ ವಾತಾವರಣ ಉತ್ತಮವಾಗಿದೆ. ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿ ಘೋಷಿಸಿದ್ದೇವೆ. ಇದರಿಂದ ಮತ ಕೇಳಲು ಸಮಯ ಸಿಕ್ಕಿದೆ. ಮೈತ್ರಿಯಿಂದ ನಮಗೆ ಎಫೆಕ್ಟ್ ಆಗಲ್ಲ. ಪಾರ್ಲಿಮೆಂಟ್ ಚುನಾವಣೆಯಲ್ಲೂ ಮೈತ್ರಿ ಆಗಿತ್ತು. ಆದರೆ, ನಮಗೆ ಯಾವುದೇ ಪರಿಣಾಮ ಆಗಲಿಲ್ಲ. ಈ ಚುನಾವಣೆಯಲ್ಲಿ ಪದವೀಧರರು, ಶಿಕ್ಷಕರು, ಮತದಾರರು ರಾಜಕೀಯವಾಗಿ ಪ್ರಬುದ್ಧರಿದ್ದಾರೆ. ಯಾವುದು ಸರಿ, ಸರಿಯಲ್ಲ ಎಂಬುದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಸರ್ಕಾರ 10 ವರ್ಷದಲ್ಲಿ ಏನೂ ಮಾಡಿಲ್ಲ. ನಮ್ಮ ಸರ್ಕಾರದ ಸಾಧನೆಗಳನ್ನು ತುಲನೆ ಮಾಡುವ ಶಕ್ತಿ ಮತದಾರರಿಗೆ ಇದೆ ಎಂದು ಹೇಳಿದರು.


Continue Reading
Advertisement
kodagu News Woman gives birth to baby in ambulance
ಕೊಡಗು2 mins ago

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸಾಫ್ಟ್‌ ನರ್ಸ್‌

IPL 2024
ಪ್ರಮುಖ ಸುದ್ದಿ3 mins ago

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

Milk Products
ಆಹಾರ/ಅಡುಗೆ4 mins ago

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Prajwal Revanna Case
ಕರ್ನಾಟಕ10 mins ago

Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ

Image-Fantastic Dragon Jewellery!
ಫ್ಯಾಷನ್34 mins ago

Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಆವರಿಸಿದ ಚಿತ್ರ-ವಿಚಿತ್ರ ಡ್ರಾಗನ್‌ ಜ್ಯುವೆಲರಿಗಳು!

Silicon City Hospital doctors successful surgery on girl suffering from Arterio Venus malpermation
ಬೆಂಗಳೂರು39 mins ago

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

CM Siddaramaiah says Our government is stable for 5 years BJP will disintegrate
Lok Sabha Election 202445 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

Team India New Head Coach
ಕ್ರೀಡೆ48 mins ago

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Money Guide
ಮನಿ-ಗೈಡ್59 mins ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ1 hour ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 202445 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ5 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು6 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ13 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ23 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ23 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ24 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌