Lok Sabha Election 2024: ಸ್ಪರ್ಧೆಯಿಂದ ಹಿಂದೆ ಸರಿಯಿರಿ; ಡಿ.ಕೆ. ಸುರೇಶ್‌ಗೆ ಬಿಎಸ್‌ವೈ ಸಲಹೆ! - Vistara News

Lok Sabha Election 2024

Lok Sabha Election 2024: ಸ್ಪರ್ಧೆಯಿಂದ ಹಿಂದೆ ಸರಿಯಿರಿ; ಡಿ.ಕೆ. ಸುರೇಶ್‌ಗೆ ಬಿಎಸ್‌ವೈ ಸಲಹೆ!

Lok Sabha Election 2024: ಡಾಕ್ಟರ್ ಮಂಜುನಾಥ್ ಜಯದೇವದಲ್ಲಿ ಸೇವೆ ಮಾಡಿದ್ದಾರೆ. ಸಾಕಷ್ಟು ಜನರ ಜೀವ ಉಳಿಸಿದ್ದಾರೆ. ಮಂಜುನಾಥ್ ಸರ್ವಾನುಮತದಿಂದ ದೆಹಲಿಗೆ ಹೋಗಬೇಕಿತ್ತು. ಆದರೆ, ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಸ್ಪರ್ಧೆ ಮಾಡಿದ್ದಾರೆ. ನಾನು ಅವರಲ್ಲಿ ಮನವಿ ಮಾಡುತ್ತೇನೆ. ನಿಮಗೆ ಅನೇಕ ಅವಕಾಶಗಳಿವೆ. ಡಾಕ್ಟರ್ ಮಂಜುನಾಥ್ ಹಿರಿಯರಿದ್ದಾರೆ. ಅವರು ಈಗ ಸ್ಪರ್ಧೆ ಮಾಡಿದ್ದರಿಂದ ನೀವು ಸ್ಪರ್ಧೆಯಿಂದ ಹಿಂದೆ ಸರಿಯಿರಿ ಎಂದು ಬಿ.ಎಸ್.‌ ಯಡಿಯೂರಪ್ಪ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 BS Yediyurappa advice to DK Suresh for Withdraw from contest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರಗಳು, ಬಹಿರಂಗ ಸಭೆಗಳು ಆರಂಭವಾಗಿವೆ. ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯಗಳು ಮುಕ್ತಾಯಗೊಂಡಿವೆ. ಇನ್ನೇನಿದ್ದರೂ ಪ್ರಚಾರದ್ದೇ ಅಬ್ಬರ. ಈಗ ಡಿಕೆ ಬ್ರದರ್ಸ್‌ (DK Brothers) ಕೋಟೆಯಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರು, ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಹಾಲಿ ಸಂಸದ ಡಿ.ಕೆ. ಸುರೇಶ್‌ಗೆ (DK Suresh) ಸಲಹೆ ನೀಡಿದ್ದಾರೆ. ಅಲ್ಲದೆ, ಮಂಜುನಾಥ್‌ ಅವರು ಕೇಂದ್ರದಲ್ಲಿ ಮಂತ್ರಿ ಆಗಲಿದ್ದಾರೆ ಎಂದೂ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಬಿಜೆಪಿ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ, ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಡಿಕೆ ಸುರೇಶ್‌ಗೆ ಮನವಿ ಮಾಡುತ್ತೇನೆ. ಡಾಕ್ಟರ್ ಮಂಜುನಾಥ್ ಜಯದೇವದಲ್ಲಿ ಸೇವೆ ಮಾಡಿದ್ದಾರೆ. ಸಾಕಷ್ಟು ಜನರ ಜೀವ ಉಳಿಸಿದ್ದಾರೆ. ಮಂಜುನಾಥ್ ಸರ್ವಾನುಮತದಿಂದ ದೆಹಲಿಗೆ ಹೋಗಬೇಕಿತ್ತು. ಆದರೆ, ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಸ್ಪರ್ಧೆ ಮಾಡಿದ್ದಾರೆ. ನಾನು ಅವರಲ್ಲಿ ಮನವಿ ಮಾಡುತ್ತೇನೆ. ನಿಮಗೆ ಅನೇಕ ಅವಕಾಶಗಳಿವೆ. ಡಾಕ್ಟರ್ ಮಂಜುನಾಥ್ ಹಿರಿಯರಿದ್ದಾರೆ. ಅವರು ಈಗ ಸ್ಪರ್ಧೆ ಮಾಡಿದ್ದರಿಂದ ನೀವು ಸ್ಪರ್ಧೆಯಿಂದ ಹಿಂದೆ ಸರಿಯಿರಿ. ಡಾಕ್ಟರ್ ಮಂಜುನಾಥ್ ಪ್ರಚಾರಕ್ಕೆ ಬರಬಾರದಾಗಿತ್ತು. ನೀವು ಕಾರ್ಯಕರ್ತರೆಲ್ಲರೂ ಎಲ್ಲ ಮತದಾರರ ಮನೆ ಮನೆಗೆ ಹೋಗಿ ಪ್ರಚಾರ ಮಾಡಬೇಕು. ಏಕೆಂದರೆ ‌ಮಂಜುನಾಥ್ ಕೇಂದ್ರದಲ್ಲಿ ಮಂತ್ರಿ ಆಗುತ್ತಾರೆ ಎಂದು ಮನವಿ ಮಾಡುವುದಾಗಿ ಹೇಳಿದರು.

ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ಈ ಚುನಾವಣೆಯು ನರೇಂದ್ರ ಮೋದಿ ಅವರಿಗೆ ಹ್ಯಾಟ್ರಿಕ್‌ ಗೆಲುವನ್ನು ಪಡೆದುಕೊಳ್ಳಲಿದೆ. ಕಳೆದ ಹದಿನೈದು ದಿನಗಳಿಂದ ನಾನು ಓಡಾಡುತ್ತಿದ್ದೇನೆ. ಗೆಲ್ಲುವ ವಾತಾವರಣವಿದೆ. ಕ್ಷೇತ್ರದಲ್ಲಿ ಕೆಲ ತಂತ್ರಗಳು ನಡೆಯುತ್ತವೆ. ಮತ ಎನ್ನುವುದು ಮನೆಯ ಹೆಣ್ಣು ಮಗಳು ಇದ್ದಂತೆ, ಅದನ್ನು ಮಾರಾಟ ಮಾಡಬೇಡಿ ಎಂದು ಅಂಬೇಡ್ಕರ್ ಹೇಳಿದ್ದಾರೆ. ಚಿಕಿತ್ಸೆ ಮೊದಲು, ಪಾವತಿ ನಂತರ ಎಂದು ತಿಳಿದುಕೊಂಡು ನಾನು ಸೇವೆ ಮಾಡಿದ್ದೇನೆ. ಮತ ಮೊದಲು, ಸೇವೆ ನಿರಂತರ ಎಂದು ನಾನು ಮತ ಕೇಳುತ್ತಿದ್ದೇನೆ ಎಂದು ಹೇಳಿದರು. ‌

ಪಾರ್ಲಿಮೆಂಟ್‌ಗೆ ನನ್ನನ್ನು ಕಳಿಸಿ: ಡಾ. ಸಿ.ಎನ್.‌ ಮಂಜುನಾಥ್

ಜೆಡಿಎಸ್ – ಬಿಜೆಪಿ ಮನಸ್ಸುಗಳು ಒಂದಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಲಸಿಕೆಯನ್ನು ಕೊಡಲಿಲ್ಲ ಎಂದಿದ್ದರೆ ವೇದಿಕೆ ಮೇಲೆ ಇದ್ದವರು, ವೇದಿಕೆ ಮುಂಭಾಗದಲ್ಲಿ ಇರುವವರು ಎಷ್ಟು ಜನ ಇರುತ್ತಿದ್ದರೋ ಇಲ್ಲವೋ ಗೊತ್ತಿಲ್ಲ. ಮನುಷ್ಯರಾದರೆ ಪ್ರಯೋಜನ ಇಲ್ಲ, ಮನುಷ್ಯತ್ವ ಇರಬೇಕು. ನಾನು ನಿಮ್ಮ ಜತೆ ಇರುತ್ತೇನೆ. ನೀವು ನನ್ನ ಜತೆ ಇರಬೇಕು. ನನ್ನನ್ನು ಪಾರ್ಲಿಮೆಂಟ್‌ಗೆ ನೀವು ಕಳುಹಿಸಬೇಕು ಎಂದು ಡಾ. ಸಿ.ಎನ್.‌ ಮಂಜುನಾಥ್‌ ಮತಯಾಚನೆ ಮಾಡಿದರು.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಮಣಿಸಲು ಬಿಜೆಪಿ ಹೈಕಮಾಂಡ್‌ ಪ್ಲ್ಯಾನ್;‌ ಟಾರ್ಗೆಟ್‌ ಡಿಕೆಶಿ!

ಡಿಕೆ ಬ್ರದರ್ಸ್‌ ಸೋಲೊಪ್ಪಿಕೊಂಡಿದ್ದಾರೆ: ಡಾ. ಸಿ.ಎನ್.‌ ಮಂಜುನಾಥ್

75 ಲಕ್ಷ ಜನರಿಗೆ ಚಿಕಿತ್ಸೆ ಕೊಟ್ಟಿದ್ದೇನೆ. 8 ಲಕ್ಷ ಆಪರೇಷನ್ ಮಾಡಿದ್ದೇನೆ. ಒಬ್ಬರೇ ಒಬ್ಬರನ್ನು ಹಣದ ಕಾರಣದಿಂದ ವಾಪಸ್ ಕಳಿಸಿಲ್ಲ. ಮಂಜುನಾಥ್ ಹೆಸರಿನ ನಾಲ್ಕು ಜನ ಸ್ಪರ್ಧೆ ಮಾಡಿದ್ದಾರೆ. ಮೊದಲು ಮಂತ್ರ, ಆ ಮೇಲೆ ಯಂತ್ರಗಳು ಕೆಲಸ ಮಾಡುತ್ತಿದ್ದವು. ಈಗ ತಂತ್ರಗಳು ಕೆಲಸ ಮಾಡುತ್ತಿವೆ. ಹಾಗಾಗಿ ನನ್ನ ಹೆಸರಿನ ನಾಲ್ಕು ಜನರನ್ನು ಸ್ಪರ್ಧೆಗಿಳಿಸಿದ್ದಾರೆ. ಬಹುಶಃ ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದು ಕಾಣಿಸುತ್ತದೆ. ಬಿಜೆಪಿ ಗುರುತಿಗೆ ಮತ ಹಾಕಿ ಎಂದು ಡಾ. ಸಿ.ಎನ್.‌ ಮಂಜುನಾಥ್‌ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

Lok Sabha Election 2024: ಮತ್ತೊಮ್ಮೆ ಬಿಜೆಪಿ 303 ಸ್ಥಾನಗಳನ್ನು ಗೆಲ್ಲಬಹುದು ಎಂದು ಪ್ರಶಾಂತ್‌ ಕಿಶೋರ್‌ ಅವರು ಮತ್ತೆ ಭವಿಷ್ಯ ನುಡಿದಿದ್ದಾರೆ. ಇದು 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆದ್ದಿರುವ ಸ್ಥಾನಗಳ ಸಂಖ್ಯೆ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು.

VISTARANEWS.COM


on

prashant kishor
Koo

ಹೊಸದಿಲ್ಲಿ: ಎಕ್ಸಿಟ್ ಪೋಲ್ 2024ರ (Exit poll 2024) ಫಲಿತಾಂಶಗಳ ಬಿಡುಗಡೆಗೆ ಕೆಲವೇ ಗಂಟೆಗಳ ಮೊದಲು, ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಗೆಲುವು ಖಚಿತ ಎಂದು ಚುನಾವಣಾ ವ್ಯೂಹಚತುರ ಪ್ರಶಾಂತ್ ಕಿಶೋರ್ (Prashant Kishor) ಪುನರುಚ್ಚರಿಸಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಭಾರತೀಯ ಜನತಾ ಪಾರ್ಟಿ (BJP) ನೇತೃತ್ವದ ಎನ್‌ಡಿಎ (NDA) ಕಾರ್ಯಕ್ಷಮತೆಯ ಬಗ್ಗೆ ತಮ್ಮ ಭವಿಷ್ಯವನ್ನು ಮತ್ತೆ ಒತ್ತಿ ಹೇಳಿದ್ದಾರೆ.

ಮತ್ತೊಮ್ಮೆ ಬಿಜೆಪಿ 303 ಸ್ಥಾನಗಳನ್ನು ಗೆಲ್ಲಬಹುದು ಎಂದು ಅವರು ಭವಿಷ್ಯ ನುಡಿದಿದ್ದಾರೆ. ಇದು 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆದ್ದಿರುವ ಸ್ಥಾನಗಳ ಸಂಖ್ಯೆ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು. “ನನ್ನ ಅಂದಾಜಿನ ಪ್ರಕಾರ, ಬಿಜೆಪಿ ಹಿಂದಿನ ಅಥವಾ ಸ್ವಲ್ಪ ಹೆಚ್ಚಿನ ಸಂಖ್ಯೆಗಳೊಂದಿಗೆ ಅಧಿಕಾರಕ್ಕೆ ಹಿಂತಿರುಗಲಿದೆ. ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಗಮನಾರ್ಹ ಬದಲಾವಣೆ ಆಗದು. ಆದರೆ ಭಾರತದ ಪೂರ್ವ ಮತ್ತು ದಕ್ಷಿಣ ಪ್ರದೇಶಗಳಿಂದ ಪಕ್ಷವು ಸಾಕಷ್ಟು ಬೆಂಬಲ ಗಳಿಸಲಿದೆ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಜೂನ್ 1ರ ಶನಿವಾರ ಸಾರ್ವತ್ರಿಕ ಚುನಾವಣೆಯ 7ನೇ ಹಂತದ ಮತದಾನದ ಮುಕ್ತಾಯದ ನಂತರ, ಹಲವಾರು ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ ವಾಹಿನಿಗಳು, ಚುನಾವಣಾ ಸಮೀಕ್ಷೆ ಏಜೆನ್ಸಿಗಳೊಂದಿಗೆ ತಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಸಂಜೆ 6.30ರ ಸುಮಾರಿಗೆ ಬಿಡುಗಡೆ ಮಾಡಲು ಸಿದ್ಧವಾಗಿವೆ.

ಪ್ರಶಾಂತ್ ಕಿಶೋರ್ ಅವರು ಪೂರ್ವ ಮತ್ತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿಯ ಸ್ಥಾನಗಳ ಸಂಖ್ಯೆ ಮತ್ತು ಮತ ಹಂಚಿಕೆಯಲ್ಲಿ ಸಂಭಾವ್ಯ ಏರಿಕೆಯನ್ನು ಸೂಚಿಸಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡುಗಳಲ್ಲಿ ತನ್ನ ಅಸ್ತಿತ್ವವನ್ನು ಪಕ್ಷ ಹೆಚ್ಚಿಸಿಕೊಂಡಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಬಗ್ಗೆ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಪರ್ಯಾಯಕ್ಕಾಗಿ ಬಲವಾದ ಬೇಡಿಕೆ ಇಲ್ಲ ಎಂದು ರಾಜಕೀಯ ತಂತ್ರಜ್ಞ ಪಿಕೆ ಈ ಹಿಂದೆ ಹೇಳಿಕೊಂಡಿದ್ದರು. ಕೇಸರಿ ಪಕ್ಷದ ಸ್ಥಾನಗಳ ಸಂಖ್ಯೆ 2019ರ ಲೆಕ್ಕಾಚಾರಕ್ಕೆ (303) ಹತ್ತಿರವಾಗಬಹುದು ಅಥವಾ ಮೀರಬಹುದು ಎಂದು ಭವಿಷ್ಯ ನುಡಿದಿದ್ದರು.

“ನಾವು ಕೆಲವು ಮೂಲಭೂತ ಅಂಶಗಳನ್ನು ನೋಡಬೇಕು. ಅಧಿಕಾರದಲ್ಲಿರುವ ಸರ್ಕಾರ ಮತ್ತು ಅದರ ನಾಯಕನ ವಿರುದ್ಧ ಕೋಪವಿದ್ದರೆ, ಪರ್ಯಾಯವಿದೆಯೇ ಎಂಬುದನ್ನು ಲೆಕ್ಕಿಸದೆ, ಜನರು ಅವರ ವಿರುದ್ಧ ಮತ ಹಾಕುವ ಸಾಧ್ಯತೆಯಿದೆ. ಆದರೆ ಇಲ್ಲಿಯವರೆಗೆ ಅಂಥ ಅಲೆಯನ್ನು ನಾವು ಕಂಡಿಲ್ಲ. ಮೋದಿಜಿ ವಿರುದ್ಧ ವ್ಯಾಪಕವಾದ ನಿರಾಶೆ, ಈಡೇರದ ಆಕಾಂಕ್ಷೆಗಳು ಇರಬಹುದು, ಆದರೆ ವ್ಯಾಪಕವಾದ ಕೋಪವನ್ನು ನಾವು ಕೇಳಿಲ್ಲ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಶನಿವಾರದ ಮತದಾನದೊಂದಿಗೆ, ಏಪ್ರಿಲ್ 19ರಂದು ಪ್ರಾರಂಭವಾದ ಮ್ಯಾರಥಾನ್ ಸರಣಿ ಮತದಾನದ ಪ್ರಕ್ರಿಯೆ ಮುಗಿಯುತ್ತಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಅಸೆಂಬ್ಲಿಗಳು ಸಹ ಚುನಾವಣೆಗೆ ಹೋಗಿವೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಜೂನ್ 2ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ.

ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜವಾಬ್ದಾರಿಯಿಂದ ಮತ್ತು ಹೆಮ್ಮೆಯಿಂದ ಮತ ಚಲಾಯಿಸುವಂತೆ ಚುನಾವಣಾ ಆಯೋಗ ಕರೆ ನೀಡಿದೆ. ಸಾರ್ವತ್ರಿಕ ಚುನಾವಣೆಯ ಮೊದಲ ಆರು ಹಂತಗಳಲ್ಲಿ ಕ್ರಮವಾಗಿ ಶೇ.66.14, ಶೇ.66.71, ಶೇ.65.68, ಶೇ.69.16, ಶೇ.62.2, ಮತ್ತು ಶೇ.63.36ರಷ್ಟು ಮತದಾನವಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ, ದೂರದರ್ಶನ ಚಾನೆಲ್‌ಗಳು ಮತ್ತು ಸುದ್ದಿವಾಹಿನಿಗಳು ಸಂಜೆ 6.30ರ ನಂತರ ಎಕ್ಸಿಟ್ ಪೋಲ್ ಡೇಟಾವನ್ನು ಮತ್ತು ಅದರ ಫಲಿತಾಂಶಗಳನ್ನು ಪ್ರಕಟಿಸಲಿವೆ.

ಇದನ್ನೂ ಓದಿ: Lok Sabha Election: ಪ್ರಶಾಂತ್‌ ಕಿಶೋರ್‌ ಬಳಿಕ ಯೋಗೇಂದ್ರ ಯಾದವ್‌ ಕೂಡ ಮೋದಿ ಮತ್ತೊಮ್ಮೆ ಪ್ರಧಾನಿ ಖಚಿತ ಅಂತಿದ್ದಾರೆ!

Continue Reading

Lok Sabha Election 2024

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Narendra Modi: ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ದೇಶದ 57 ಕ್ಷೇತ್ರಗಳಲ್ಲಿ ಇಂದು (ಜೂನ್‌ 1) ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ʼʼಇಂದು 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಆಯೋಜಿಸಲಾಗಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ. ಯುವ ಮತ್ತು ಮಹಿಳಾ ಮತದಾರರು ದಾಖಲೆ ಸಂಖ್ಯೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಎನ್ನುವ ಭರವಸೆ ಇದೆ. ಎಲ್ಲರೂ ಒಟ್ಟಾಗಿ, ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಪಡಿಸೋಣʼʼ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ದೇಶ ಮತ್ತು ಉತ್ತರ ಪ್ರದೇಶದಲ್ಲಿ ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಹೈಸ್ಪೀಡ್ ರೈಲುಗಳು ಮತ್ತು ಇಂಟರ್‌ನೆಟ್‌ ಜಾಲವನ್ನು ನಿರ್ಮಿಸುವ ಪ್ರಾಮಾಣಿಕ ಸರ್ಕಾರವನ್ನು ಆಯ್ಕೆ ಮಾಡಲು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಎಲ್ಲ ಮತದಾರರು ವಿಶೇಷವಾಗಿ ಯುವಕರಿಗೆ ಮನವಿ ಮಾಡುತ್ತೇನೆ. ಪ್ರತಿಯೊಬ್ಬ ಬಡ ವ್ಯಕ್ತಿಗೆ ಮನೆ, ಅನಿಲ ಮತ್ತು ಉಚಿತ ಚಿಕಿತ್ಸೆಯನ್ನು ಒದಗಿಸುವ ವಿಶ್ವಾಸಾರ್ಹ ಸರ್ಕಾರವು ಭಾರತ ಮತ್ತು ಉತ್ತರ ಪ್ರದೇಶದ ಚಿತ್ರಣವನ್ನೇ ಬದಲಾಯಿಸಬಹುದು” ಎಂದು ಶಾ ಹೇಳಿದ್ದಾರೆ.

ʼಇಂಡಿಯಾʼ ಒಕ್ಕೂಟಕ್ಕೆ ಅನುಕೂಲ ಎಂದ ಖರ್ಗೆ

ಇತ್ತ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಚುನಾವಣೆ ಪ್ರತಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಇಂದು ಕೊನೆಯ ಹಂತದ ಮತದಾನ. ಸಂವಿಧಾನವನ್ನು ರಕ್ಷಿಸಲು ವೋಟು ಮಾಡಿ. ʼಇಂಡಿಯಾʼ ಮೈತ್ರಿಕೂಟ ಸರ್ವಾಧಿಕಾರಿ ಶಕ್ತಿಯ ವಿರುದ್ಧ ಹೋರಾಟ ನಡೆಸುತ್ತಿದೆ. ಆರು ಹಂತಗಳ ಮತದಾನದಲ್ಲಿಯೂ ನಾವು ಜಯ ಗಳಿಸಬೇಕೆಂದು ಮತದಾರರು ಬಯಸಿದ್ದಾರೆ. ಈ ಹಂತದಲ್ಲಿಯೂ ಕೈ ಹಿಡಿಯಲಿದ್ದಾರೆ. ಮೊದಲ ಬಾರಿ ಹಕ್ಕು ಚಲಾಯಿಸಲಿರುವ ಯುವ ಮತದಾರರ ಹೆಗಲ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ. ಅವರನ್ನು ನಾನು ಸ್ವಾಗತಿಸುತ್ತೇನೆ. ಬದಲಾವಣೆಗಾಗಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಿʼʼ ಎಂದು ಖರ್ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ.

Continue Reading

Lok Sabha Election 2024

OpenAI: ಬಿಜೆಪಿಯನ್ನು ಸೋಲಿಸಲು ಇಸ್ರೇಲ್‌ ಮೂಲದ ಸಂಸ್ಥೆಯಿಂದ ಅಪಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

OpenAI: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಓಪನ್ಎಐ ಹೇಳಿದೆ. ಈ ಬಗ್ಗೆ ಬಿಜೆಪಿ ತೀವ್ರ ಕಳವಳ ವ್ಯಕ್ತಪಡಿಸಿದೆ.

VISTARANEWS.COM


on

OpenAI
Koo

ನವದೆಹಲಿ: ಸುಮಾರು ಎರಡು ತಿಂಗಳ ಕಾಲ ನಡೆದ ಲೋಕಸಭಾ ಚುನಾವಣೆ (Lok Sabha Election)ಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಮೂಲದ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಚಾಟ್‌ಜಿಪಿಟಿ (ChatGPT)ಯ ಓಪನ್ಎಐ (OpenAI) ಹೇಳಿದೆ.

ಇಸ್ರೇಲ್‌ ಮೂಲದ ಸಂಸ್ಥೆಯಾದ STOIC ಅಭಿಯಾನ ನಡೆಸಿ ಬಿಜೆಪಿ ವಿರೋಧಿ ಚಟುವಟಿಕೆ ನಡೆಸಲು ಪ್ರಯತ್ನಿಸಿ, ವಿಫಲವಾಗಿದೆ ಎನ್ನಲಾಗಿದೆ. ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ಕಮೆಂಟ್‌, ಲೇಖನ, ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸುವಂತಹ ಕಾರ್ಯಗಳಿಗಾಗಿ ಓಪನ್ಎಐಯ ಶಕ್ತಿಯುತ ಭಾಷಾ ಮಾದರಿಗಳನ್ನು ಬಳಸಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಓಪನ್‌ಎಐ ಹೇಳಿದ್ದೇನು?

“ಮೇಯಲ್ಲಿ STOIC ನೆಟ್‌ವರ್ಕ್‌ ಭಾರತದ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸುವ ಕಮೆಂಟ್‌ಗಳನ್ನು ರಚಿಸಲು ಪ್ರಾರಂಭಿಸಿತು. ಚುನಾವಣೆಯ ಮೇಲೆ ಪರಿಣಾಮ ಬೀರಬಹುದಾದ ಇಂತಹ ಕೆಲವು ಚಟುವಟಿಕೆಗಳನ್ನು ನಾವು ತಡೆದಿದ್ದೇವೆʼʼ ಎಂದು ಓಪನ್‌ಎಐ ಹೇಳಿದೆ. ʼʼಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌, ವೆಬ್‌ಸೈಟ್‌ ಮತ್ತು ಯೂಟ್ಯೂಬ್‌ನಲ್ಲಿ ಪ್ರಭಾವ ಬೀರಲು ಯತ್ನಿಸುತ್ತಿದ್ದ ಇಸ್ರೇಲ್‌ನಿಂದ ಕಾರ್ಯನಿರ್ವಹಿಸುವ ಖಾತೆಗಳ ಸಮೂಹವನ್ನು ನಿಷೇಧಿಸಲಾಗಿದೆʼʼ ಎಂದೂ ವಿವರಿಸಿದೆ.

ʼʼಈ ಅಭಿಯಾನವನ್ನು ಕೆನಡಾ, ಅಮೆರಿಕ ಮತ್ತು ಇಸ್ರೇಲ್‌ನಲ್ಲಿರುವವರನ್ನು ಗುರಿಯಾಗಿಸಿ ಆರಂಭಿಸಲಾಗಿತ್ತು. ಇದಕ್ಕಾಗಿ ಸಂದೇಶಗಳಲ್ಲಿ ಇಂಗ್ಲಿಷ್‌ ಮತ್ತು ಹಿಬ್ರೂ ಭಾಷೆಗಳನ್ನು ಬಳಸಲಾಗುತ್ತಿತ್ತು. ಬಳಿಕ ಮೇಯಲ್ಲಿ ಭಾರತೀಯರನ್ನು ತಲುಪುವ ಉದ್ದೇಶದಿಂಧ ಇಂಗ್ಲಿಷ್‌ನಲ್ಲಿ ಕಮೆಂಟ್‌ ರಚಿಸಲಾಗಿತ್ತುʼʼ ಎಂದು ಓಪನ್‌ಎಐ ತಿಳಿಸಿದೆ.

ಅಪಾಯಕಾರಿ ಬೆದರಿಕೆ ಎಂದ ಬಿಜೆಪಿ

ಈ ಬೆಳವಣಿಗೆ ಬಗ್ಗೆ ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಇದು ಅಪಾಯಕಾರಿ ಬೆದಿಕೆ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ಸಚಿವ ರಾಜೀವ್ ಚಂದ್ರಶೇಖರ್, ʼʼಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾಯಾದ ಬೆದರಿಕೆ. ಭಾರತ ಮತ್ತು ಹೊರಗಿನ ಪಟ್ಟಭದ್ರ ಹಿತಾಸಕ್ತಿಗಳು ಬಿಜೆಪಿ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎನ್ನುವುದು ಇದರಿಂದ ಸ್ಪಷ್ವಾಗುತ್ತದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕಾಗಿದೆ ಮತ್ತು ಸತ್ಯವನ್ನು ಬಹಿರಂಗಪಡಿಸಬೇಕಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂಟರ್‌ನೆಟ್‌ ಮೂಲಕ ನಮ್ಮ ಮಾದರಿಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದ ಇಂತಹ ಸುಮಾರು ಐದು ರಹಸ್ಯ ಕಾರ್ಯಾಚರಣೆಗಳನ್ನು ಕಳೆದ ಮೂರು ತಿಂಗಳಲ್ಲಿ ಗುರುತಿಸಲಾಗಿದೆ ಎಂದು ಓಪನ್ಎಐ ಹೇಳಿದೆ. 2015ರಲ್ಲಿ ಸ್ಥಾಪಿಸಲಾದ ಕೃತಕ ಬುದ್ಧಿಮತ್ತೆ ಸಂಶೋಧನಾ ಸಂಸ್ಥೆಯೇ ಓಪನ್ಎಐ.

ಇದನ್ನೂ ಓದಿ: Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

2024ರ ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌, ಚರಣ್‌ಜೀತ್‌ ಸಿಂಗ್‌ ಚನ್ನಿ, ಅನುರಾಗ್ ಠಾಕೂರ್, ಅಭಿಷೇಕ್ ಬ್ಯಾನರ್ಜಿ, ಮೀಸಾ ಭಾರ್ತಿ ಮತ್ತಿತರರ ಪ್ರಮುಖ ನಾಯಕರ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.

Continue Reading

Lok Sabha Election 2024

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

Lok Sabha Election: ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ನ ಅಜಯ್‌ ರಾಯ್ ಸೇರಿ 6 ಮಂದಿ ಸ್ಪರ್ಧಿಸುತ್ತಿದ್ದಾರೆ. ಅವರ ವಿವರ ಇಲ್ಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election) 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 2014ರಿಂದ ಅವರು ಇಲ್ಲಿಂದ ಸ್ಪರ್ಧಿಸುತ್ತಿದ್ದು, ಸದ್ಯ ಈ ಕಣ ದೇಶದ ಗಮನ ಸೆಳೆದಿದೆ.

ಮೋದಿ ವಿರುದ್ಧ ಈ ಬಾರಿ ಆರು ಮಂದಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ ಅಜಯ್ ರಾಯ್ ಅವರನ್ನು ಮೂರನೇ ಬಾರಿಗೆ ಕಣಕ್ಕಿಳಿಸಿದೆ. ಇನ್ನು ಯುಗ ತುಳಸಿ ಪಾರ್ಟಿಯಿಂದ ಕೋಳಿಶೆಟ್ಟಿ ಶಿವಕುಮಾರ್, ಬಹುಜನ ಸಮಾಜ ಪಕ್ಷದಿಂದ ಅಥೆರ್‌ ಜಮಾಲ್‌ ಲಾರಿ, ಗಗನ್‌ ಪ್ರಕಾಶ್‌ ಯಾದವ್‌ (ಅಪ್ನಾ ದಳ, ಕಮರೇವಾಡಿ), ಸ್ವತಂತ್ರವಾಗಿ ದಿನೇಶ್‌ ಕುಮಾರ್‌ ಯಾದವ್‌ ಮತ್ತು ಸಂಜಯ್‌ ಕುಮಾರ್‌ ತಿವಾರಿ ಪ್ರಧಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅವರ ಕುರಿತಾದ ವಿವರ ಇಲ್ಲಿದೆ.

ಅಜಯ್‌ ರಾಯ್

53 ವರ್ಷದ ಕಾಂಗ್ರೆಸ್‌ ನಾಯಕ ಅಜಯ್‌ ರಾಯ್ ಸತತ ಮೂರನೇ ಬಾರಿ ಮೋದಿ ವಿರುದ್ಧ ತೊಡೆ ತಟ್ಟಿದ್ದಾರೆ. ಇವರು 2014 ಮತ್ತು 2019ರಲ್ಲಿ ಪ್ರಧಾನಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅಜಯ್‌ ರಾಯ್ ವಿರುದ್ಧ ಸುಮಾರು 18 ಪ್ರಕರಣಗಳು ದಾಖಲಾಗಿವೆ. ಇವರು ಆರಂಭದಲ್ಲಿ ಆರ್‌ಎಸ್‌ಎಸ್‌, ಎಬಿವಿಪಿ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. 1996, 2002 ಮತ್ತು 2007ರಲ್ಲಿ ಇವರು ಬಿಜೆಪಿಯಿಂದ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. 2009ರಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಜಯ್‌ ರಾಯ್ 6.66 ಲಕ್ಷ ರೂ.ಗಳ ಚರಾಸ್ತಿ ಮತ್ತು 1.25 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇವರನ್ನು ಕಳೆದ ಆಗಸ್ಟ್‌ನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಅಥೆರ್‌ ಜಮಾಲ್‌ ಲಾರಿ

ಬಿಎಸ್‌ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ 70 ವರ್ಷದ ಅಥೆರ್‌ ಜಮಾಲ್‌ ಲಾರಿ ವಿರುದ್ಧವೂ ಪ್ರಕರಣವಿದೆ. ಅವರ ಹೆಸರಿನಲ್ಲಿ 1 ಪ್ರಕರಣ ದಾಖಲಾಗಿದೆ.

ಕೋಳಿಶೆಟ್ಟಿ ಶಿವಕುಮಾರ್‌

46 ವರ್ಷದ ಕೋಳಿಶೆಟ್ಟಿ ಶಿವಕುಮಾರ್‌ ಹೈದರಾಬಾದ್‌ ಮೂಲದವರು. ಈ ಹಿಂದೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಪ್ರತಿಭಟನೆ ನಡೆಸಿದ್ದರು. ಇವರು ಈ ಮೊದಲು ತಿರುಮಲ ತಿರುಪತಿ ದೇವಸ್ಥಾನಂ ಮೋರ್ಡ್‌ ಸದಸ್ಯರಾಗಿದ್ದರು.

ಗಗನ್‌ ಪ್ರಕಾಶ್‌ ಯಾದವ್‌

ಅಪ್ನಾ ದಳದಿಂದ ಕಣಕ್ಕಿಳಿದಿರುವ 39 ವರ್ಷದ ಗಗನ್‌ ಪ್ರಕಾಶ್‌ ಯಾದವ್‌ ಅವರ ಹೆಸರಿನಲ್ಲಿ 5 ಪ್ರಕರಣ ದಾಖಲಾಗಿದೆ. ಈ ಹಿಂದೆ ಇವರು ಸಮಾಜವಾದಿ ಪಾರ್ಟಿಯಲ್ಲಿದ್ದರು.

ದಿನೇಶ್‌ ಕುಮಾರ್‌ ಯಾದವ್‌

ಸತಂತ್ರ ಅಭ್ಯರ್ಥಿ ದಿನೇಶ್‌ ಕುಮಾರ್‌ ಯಾದವ್‌ ಈ ಹಿಂದೆ ಬಿಜೆಪಿಯಲ್ಲಿದ್ದರು. ಇವರ ವಿರುದ್ಧ ಯಾವುದೇ ಕೇಸ್‌ಗಳಿಲ್ಲ.

ಸಂಜಯ್‌ ಕುಮಾರ್‌ ತಿವಾರಿ

ಇನ್ನೊಬ್ಬ ಸ್ವತಂತ್ರ ಅಭ್ಯರ್ಥಿ ಇವರು. ಇವರು ದೆಹಲಿ ಮೂಲದ ಸಾಮಾಜಿಕ ಕಾರ್ಯಕರ್ತರು. ಇವರು ಗಾಂಧಿ ತತ್ವದ ಪ್ರತಿಪಾದಕರು.

ದಾಖಲೆಯ ಗೆಲುವು ಕಂಡಿದ್ದ ಮೋದಿ

ಮೋದಿ ಈ ಹಿಂದೆ ಎರಡು ಬಾರಿಯೂ ವಾರಾಣಸಿ ಕ್ಷೇತ್ರದಲ್ಲಿ ದಾಖಲೆಯ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. 2014ರ ಚುನಾವಣೆಯಲ್ಲಿ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸ್ಪರ್ಧಿಸಿದ್ದರು. ಆಗ ಮೋದಿ 3.37 ಲಕ್ಷ ಮತಗಳ ಅಂತರಿಂದ ಗೆದ್ದಿದ್ದರು. ಇನ್ನು 2019ರಲ್ಲಿ ಮೋದಿ ಅವರು ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿ ಶಾಲಿನಿ ಯಾದವ್‌ ಅವರನ್ನು 4.80 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

Continue Reading
Advertisement
Gautam Gambhir
ಕ್ರೀಡೆ6 mins ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ8 mins ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Family Fighting in Belgavi
ಬೆಳಗಾವಿ12 mins ago

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Valmiki Corporation Scam
ಕರ್ನಾಟಕ13 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

prashant kishor
ಪ್ರಮುಖ ಸುದ್ದಿ15 mins ago

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

IndiGo Flight
ದೇಶ18 mins ago

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

bhavani revanna SIT team
ಪ್ರಮುಖ ಸುದ್ದಿ52 mins ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Valmiki Corporation Scam
ಪ್ರಮುಖ ಸುದ್ದಿ54 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ1 hour ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Actor Jaggesh talk about body shame
ಸ್ಯಾಂಡಲ್ ವುಡ್2 hours ago

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌