Lok Sabha Election 2024: ಮೇಕೆದಾಟು ಯೋಜನೆಗೆ ಆಗಬೇಕಿದ್ದರೆ ಸೌಮ್ಯಾ ರೆಡ್ಡಿ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ - Vistara News

Lok Sabha Election 2024

Lok Sabha Election 2024: ಮೇಕೆದಾಟು ಯೋಜನೆಗೆ ಆಗಬೇಕಿದ್ದರೆ ಸೌಮ್ಯಾ ರೆಡ್ಡಿ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

Lok Sabha Election 2024: ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯಾ ರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್‌ನಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಕೊಂಡು ಮತ ಕೇಳುತ್ತಾರೆ ಎಂದು ಪ್ರಶ್ನೆ ಮಾಡಿದರು. ಅಲ್ಲದೆ, ಬೆಂಗಳೂರಿನ ಕುಡಿಯುವ ನೀರು ಸಮಪರ್ಕವಾಗಿ ಸಿಗಬೇಕಿದ್ದರೆ ಮೇಕೆದಾಟು ಯೋಜನೆ ಜಾರಿಯಾಗಬೇಕು. ಕೇಂದ್ರದಲ್ಲಿ ಮೇಕೆದಾಟು ಯೋಜನೆಗೆ ಅ‌ನುಮತಿ ಸಿಗಬೇಕಾದರೆ ಸೌಮ್ಯಾ ರೆಡ್ಡಿ ಗೆಲ್ಲಬೇಕು ಎಂದು ಕರೆ ನೀಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸಿಗಬೇಕೆಂದರೆ ಮೇಕೆದಾಟು ಯೋಜನೆ (Lok Sabha Election 2024) ಜಾರಿ ಆಗಬೇಕು. ಕೇಂದ್ರದಲ್ಲಿ ಮೇಕೆದಾಟು ಯೋಜನೆಗೆ ಅ‌ನುಮತಿ ಸಿಗಬೇಕಾದರೆ ಬೆಂಗಳೂರು ಉತ್ತರ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ (Sowmya Reddy) ಗೆಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿ ಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯಾ ರೆಡ್ಡಿ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಇನ್ನಷ್ಟು ಆಗಬೇಕಿದೆ. ಈಗ ಆಗಿರುವುದು ಶೇ. 60ರಷ್ಟು ಮಾತ್ರ. ಕಾವೇರಿ 5ನೇ ಹಂತವನ್ನು ಜಾರಿ ಮಾಡುತ್ತಿದ್ದೇವೆ. ಅದು ಜಾರಿಯಾದರೆ ಸ್ವಲ್ಪ ಅನುಕೂಲವಾಗಲಿದೆ. ಮೇಕೆದಾಟು ಯೋಜನೆ ಜಾರಿಯಾದರೆ ನೀರಿನ ಸಮಸ್ಯೆ ಆಗುವುದಿಲ್ಲ. ಈ ಬಿಜೆಪಿಯವರು ಮೇಕೆದಾಟು ಯೋಜನೆ ಬಗ್ಗೆ ಮಾತನಾಡಲಿಲ್ಲ. ಈ ಬಾರಿ ಬಿಜೆಪಿಯನ್ನು ಸೋಲಿಸಲೇಬೇಕು. ಆದ್ದರಿಂದ ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯಾ ರೆಡ್ಡಿ ಅವರ ಗೆಲುವು ಅತ್ಯಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Lok Sabha Election 2024 Cm Siddaramaiah campaigns for Congress candidate Sowmya Reddy

ಸೌಮ್ಯಾ ರೆಡ್ಡಿಗೆ ನೀವು ನ್ಯಾಯ ಕೊಡಿ

ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯಾ ರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಬರ ಪರಿಹಾರ ಕೊಡಲಿಲ್ಲ. ಮೇಕೆದಾಟು ಯೋಜನೆಗೆ ಅನುಮತಿ ಕೊಟ್ಟಿಲ್ಲ. ಸೌಮ್ಯಾ ರೆಡ್ಡಿಗೆ ನೀವು ಆಶೀರ್ವಾದ ಮಾಡಿದರೆ ಲೋಕಸಭೆಯಲ್ಲಿ ರಾಜ್ಯದ ಪರ ಮಾತನಾಡುತ್ತಾರೆ. ಅದಕ್ಕಾಗಿ ನೀವು ಸೌಮ್ಯಾ ರೆಡ್ಡಿಗೆ ಮತ ಹಾಕಬೇಕು. ಜಯನಗರ ಅಭಿವೃದ್ಧಿ ಆಗಬೇಕು ಅಂದರೆ ಸೌಮ್ಯಾ ರೆಡ್ಡಿಯನ್ನು ನೀವು ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Lok Sabha Election 2024: ಕೈ ಅಭ್ಯರ್ಥಿ ಲೂಸ್‌ ಟಾಕ್‌ ಲಕ್ಷ್ಮಣ್‌; ಸಂಸ್ಕಾರ ಇಲ್ಲದವರನ್ನು ಒಕ್ಕಲಿಗ ಎಂದು ಸಮುದಾಯ ಒಪ್ಪಲ್ಲ: ಸಿ.ಟಿ. ರವಿ

ಕೇಂದ್ರ ಸರ್ಕಾರದವರು ನುಡಿದಂತೆ ನಡೆದಿದ್ದಾರಾ?

ಕೇಂದ್ರ ಸರ್ಕಾರದವರು ನುಡಿದಂತೆ ನಡೆದಿದ್ದಾರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದು ಹೇಳಿದರು. ಆ ಹಣವನ್ನು ಇದುವರೆಗೆ ಹಾಕಿದರಾ? ಅಚ್ಚೇ ದಿನ್ ಅಂದ್ರು ಆಯ್ತಾ..? ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದ್ದರು. ಉದ್ಯೋಗ ಸೃಷ್ಟಿ ಆಯ್ತಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿಕೊಂಡರು. ಅದು ಆಯ್ತಾ? ಪ್ರೆಟ್ರೋಲ್, ಡೀಸೆಲ್‌ ಬೆಲೆ ಕಡಿಮೆ ಆಯ್ತಾ? ಅವರು ಬರೀ ಸುಳ್ಳು ಹೇಳಿಕೊಂಡು ಬಂದಿದ್ದಾರೆ. ನಾವು ನುಡೆದಿದ್ದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. 8 ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಹೀಗಾಗಿ ನಮಗೇ ನೀವು ಆಶೀರ್ವಾದ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೇ 14ರಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮೊದಲು ಅಂದರೆ ಸೋಮವಾರ (ಮೇ 13) ಸಂಜೆ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದರು. ಆ ಮೂಲಕ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಮೋದಿ ಅವರು ಶಕ್ತಿ ಪ್ರದರ್ಶನ ಮಾಡಿದರು. ಇನ್ನು, ಮಂಗಳವಾರ ಮೋದಿ ಅವರು ವಾರಾಣಸಿಯಲ್ಲಿ ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

Narendra Modi
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಿಂದ ಸತತ ಮೂರನೇ ಬಾರಿ ಸ್ಪರ್ಧಿಸುತ್ತಿರುವ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಮೇ 14) ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ (ಮೇ 13) ಬೃಹತ್‌ ರೋಡ್‌ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿರುವ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.45ಕ್ಕೆ ಕಾಲಭೈರವ ದೇಗುಲಕ್ಕೆ ಭೇಟಿ

ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಲಿದ್ದಾರೆ.

ವಾರಾಣಸಿಯಲ್ಲಿ ಮೋದಿ ರೋಡ್‌ ಶೋ ಝಲಕ್

11.40ಕ್ಕೆ ನಾಮಪತ್ರ ಸಲ್ಲಿಕೆ

ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ರೋಡ್‌ ಶೋ ಬಳಿಕ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading

ದೇಶ

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

Tejasvi Surya: ರಾಹುಲ್‌ ಗಾಂಧಿ ಅವರೇ, ನಮ್ಮ ಅಭಿನವ್‌ ಪ್ರಕಾಶ್‌ ಅವರು ನಿಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿದ್ದಾರೆ. ಇವರು ಪಾಸಿ (ಎಸ್‌ಸಿ-ದಲಿತ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಉನ್ನತ ಶಿಕ್ಷಣ ಪಡೆದಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ರಾಯ್‌ಬರೇಲಿಯಲ್ಲಿ ಈ ಸಮುದಾಯದ ಶೇ.30ರಷ್ಟು ಜನರಿದ್ದಾರೆ. ನೀವು ಇವರ ಜತೆ ಚರ್ಚೆಗೆ ಬನ್ನಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

VISTARANEWS.COM


on

Tejasvi Surya
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜತೆ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ರಾಹುಲ್‌ ಗಾಂಧಿ (Rahul Gandhi) ಎಸೆದ ಸವಾಲಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಪಾಟಿಸವಾಲು ಎಸೆದಿದ್ದಾರೆ. “ರಾಹುಲ್‌ ಗಾಂಧಿಯವರೇ, ನೀವು ಬಿಜೆಪಿಯು ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಅಭಿನವ್‌ ಪ್ರಕಾಶ್‌ ಅವರೊಂದಿಗೆ ಚರ್ಚೆಗೆ ಬನ್ನಿ” ಎಂದು ಸವಾಲು ಎಸೆಯುವ ಜತೆಗೆ ರಾಹುಲ್‌ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

“ರಾಹುಲ್‌ ಗಾಂಧಿ ಅವರೇ, ನಮ್ಮ ಅಭಿನವ್‌ ಪ್ರಕಾಶ್‌ ಅವರು ನಿಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿದ್ದಾರೆ. ಇವರು ಪಾಸಿ (ಎಸ್‌ಸಿ-ದಲಿತ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಉನ್ನತ ಶಿಕ್ಷಣ ಪಡೆದಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ರಾಯ್‌ಬರೇಲಿಯಲ್ಲಿ ಈ ಸಮುದಾಯದ ಶೇ.30ರಷ್ಟು ಜನರಿದ್ದಾರೆ. ರಾಜಕೀಯ ಕುಡಿ (ರಾಹುಲ್‌ ಗಾಂಧಿ) ಹಾಗೂ ಸಾಮಾನ್ಯ ಯುವಕನ (ಅಭಿನವ್‌ ಪ್ರಕಾಶ್)‌ ಮಧ್ಯೆ ಒಂದೊಳ್ಳೆ ಚರ್ಚೆ ನಡೆಯಲಿ. ನೀವು ಚರ್ಚೆಯ ಆಹ್ವಾನವನ್ನು ಸ್ವೀಕರಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ” ಎಂದು ತೇಜಸ್ವಿ ಸೂರ್ಯ ಪೋಸ್ಟ್‌ ಮಾಡಿದ್ದಾರೆ.

ನಾನು ರೆಡಿ ಎಂದ ಅಭಿನವ್‌ ಪ್ರಕಾಶ್‌

ತೇಜಸ್ವಿ ಸೂರ್ಯ ಅವರು ಪ್ರಸ್ತಾಪಿಸುತ್ತಲೇ ಅಭಿನವ್‌ ಪ್ರಕಾಶ್‌ ಅವರು ಚರ್ಚೆಗೆ ನಾನು ಸಿದ್ಧ ಎಂದಿದ್ದಾರೆ. “ರಾಹುಲ್‌ ಗಾಂಧಿ ವಿರುದ್ಧ ಚರ್ಚಿಸಲು ನನ್ನ ಹೆಸರು ಪ್ರಸ್ತಾಪಿಸಿದ್ದಕ್ಕೆ ಮೊದಲಿಗೆ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು. ರಾಹುಲ್‌ ಗಾಂಧಿ ಹಾಗೂ ಅವರ ಕುಟುಂಬಸ್ಥರು ದೀರ್ಘಾವಧಿಗೆ ಪ್ರತಿನಿಧಿಸಿದ ಉತ್ತರ ಪ್ರದೇಶದ ನಾಗರಿಕ ನಾನು. ಅಮೇಥಿಯಿಂದ ದೂರ ಸರಿದಂತೆ ರಾಹುಲ್‌ ಗಾಂಧಿ ಅವರು ಈ ಚರ್ಚೆಯಿಂದಲೂ ಓಡಿ ಹೋಗುವುದಿಲ್ಲ ಎಂಬುದಾಗಿ ಭಾವಿಸಿದ್ದೇನೆ. ಇಲ್ಲದಿದ್ದರೆ ಅವರ ರಾಯ್‌ಬರೇಲಿಯಿಂದಲೂ ಓಡಿಹೋಗಬೇಕಾಗುತ್ತದೆ” ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬಹಿರಂಗವಾಗಿ ಚರ್ಚಿಸಲು ನೂರಕ್ಕೆ ನೂರರಷ್ಟು ಸಿದ್ಧನಿದ್ದೇನೆ” ಎಂಬುದಾಗಿ ಕೆಲ ದಿನಗಳ ಹಿಂದೆ ರಾಹುಲ್‌ ಗಾಂಧಿ ಹೇಳಿದ್ದರು. ಇದಕ್ಕೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ಯಾವ ಸಾಮರ್ಥ್ಯ ಇದೆ ಎಂದು ನೀವು ಮೋದಿ ಅವರನ್ನು ಚರ್ಚೆಗೆ ಕರೆಯುತ್ತಿದ್ದೀರಿ ಎಂದಿದ್ದರು. ಬಿಜೆಪಿಯ ಹಲವು ನಾಯಕರು ಟೀಕಿಸುತ್ತ, ನೀವೇನು ಪ್ರಧಾನಿ ಅಭ್ಯರ್ಥಿಯೇ ಎಂದು ಕುಟುಕಿದ್ದರು. “ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರ ಜತೆ ಒಮ್ಮೆಗೆ ಚರ್ಚೆಗೆ ಬನ್ನಿ” ಎಂದು ಸ್ಮೃತಿ ಇರಾನಿ ಸವಾಲು ಎಸೆದಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading

ದೇಶ

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Lok Sabha Election: ಶ್ರೀನಗರದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ಸೋಮವಾರ ಶ್ರೀನಗರದಲ್ಲಿ ಮತದಾನ ನಡೆದಿದ್ದು, ಶೇ.35.97ರಷ್ಟು ಮತದಾನ ದಾಖಲಾಗಿದೆ. ಇದು 1996ರ ಲೋಕಸಭೆ ಚುನಾವಣೆ ಬಳಿಕ ದಾಖಲಾದ ಗರಿಷ್ಠ ಮತದಾನ ಎಂದು ಆಯೋಗ ತಿಳಿಸಿದೆ. ಇದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದಾದ ಬಳಿಕ ಕಣಿವೆಯಲ್ಲಿ ಭಾರಿ ಬದಲಾವಣೆ ಆಗಿದೆ, ಕಲ್ಲು ತೂರಾಟ ನಿಂತಿದೆ, ಸಚಿನ್‌ ತೆಂಡೂಲ್ಕರ್‌ ಅಲ್ಲಿನ ಬೀದಿಗಳಲ್ಲಿ ಕ್ರಿಕೆಟ್‌ ಆಡುವಷ್ಟು, ಜಿ-20 ಸಭೆ ಆಯೋಜಿಸುವಷ್ಟು ಬದಲಾಗಿದೆ. ಅಷ್ಟೇ ಅಲ್ಲ, ಜಮ್ಮು-ಕಾಶ್ಮೀರದ (Jammu Kashmir) ಶ್ರೀನಗರದಲ್ಲಿ ಕಳೆದ 28 ವರ್ಷಗಳಲ್ಲಿಯೇ ಗರಿಷ್ಠ ಮತದಾನ (Lok Sabha Election) ದಾಖಲಾಗಿದೆ ಎಂದು ಚುನಾವಣೆ ಆಯೋಗ (Election Commission) ಮಾಹಿತಿ ನೀಡಿದೆ. ಇದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣ ಎನ್ನಲಾಗುತ್ತಿದೆ.

ಶ್ರೀನಗರದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ಸೋಮವಾರ ಶ್ರೀನಗರದಲ್ಲಿ ಮತದಾನ ನಡೆದಿದ್ದು, ಶೇ.35.97ರಷ್ಟು ಮತದಾನ ದಾಖಲಾಗಿದೆ. ಇದು 1996ರ ಲೋಕಸಭೆ ಚುನಾವಣೆ ಬಳಿಕ ದಾಖಲಾದ ಗರಿಷ್ಠ ಮತದಾನ ಎಂದು ಆಯೋಗ ತಿಳಿಸಿದೆ. ಶ್ರೀನಗರದಲ್ಲಿ 2019ರಲ್ಲಿ ಶೇ.14.43ರಷ್ಟು ಹಾಗೂ 2014ರಲ್ಲಿ ಶೇ.25.86ರಷ್ಟು ಮತದಾನ ದಾಖಲಾಗಿತ್ತು. ಶ್ರೀನಗರದಲ್ಲಿ 17.48 ಲಕ್ಷ ಮತದಾರರು ನೋಂದಣಿ ಮಾಡಿಕೊಂಡಿದ್ದರು.

ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಉತ್ತಮ ಮತದಾನವೂ ದಾಖಲಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಉಗ್ರರ ದಾಳಿ ಭೀತಿ, ಕಲ್ಲುತೂರಾಟ ಮಾಡುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಕಾರಣ ಹೆಚ್ಚಿನ ಜನ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ಸಂಜೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಶೇ.68.04, ಬಿಹಾರ ಶೇ.54.14, ಜಾರ್ಖಂಡ್ ಶೇ.63.14, ಮಧ್ಯಪ್ರದೇಶ ಶೇ.68.01, ಮಹಾರಾಷ್ಟ್ರ ಶೇ.52.49, ಒಡಿಶಾ ಶೇ.62.96, ತೆಲಂಗಾಣ ಶೇ.61.16, ಉತ್ತರ ಪ್ರದೇಶ ಶೇ.56.35, ಪಶ್ಚಿಮ ಬಂಗಾಳದಲ್ಲಿ ಶೇ.75.66ರಷ್ಟು ಮತದಾನ ದಾಖಲಾಗಿದೆ. ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Continue Reading

ದೇಶ

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭೆ ಕ್ಷೇತ್ರ ವಾರಾಣಸಿಯಲ್ಲಿ ಸೋಮವಾರ ಭರ್ಜರಿ ರೋಡ್‌ ಶೋ ಕೈಗೊಂಡರು. ಸಾಂಪ್ರದಾಯಿಕ ಸ್ವಾಗತ, ಜನಪದ ನೃತ್ಯ, ಜೈ ಶ್ರೀರಾಮ್‌ ಘೋಷಣೆಗಳು ರೋಡ್‌ ಶೋ ಉದ್ದಕ್ಕೂ ಜೈಶ್ರೀರಾಮ್‌ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ವಾರಾಣಸಿ: ದೇಶಾದ್ಯಂತ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿ (Varanasi) ಬೃಹತ್‌ ರೋಡ್‌ ಶೋ ಮೂಲಕ ಕ್ಷೇತ್ರದಲ್ಲಿ ಹೊಸ ಅಲೆ ಸೃಷ್ಟಿಸಿದ್ದಾರೆ. ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಮೋದಿ ಅವರು ಮಂಗಳವಾರ (ಏಪ್ರಿಲ್‌ 14) ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮೊದಲು ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಮೋದಿ ರೋಡ್‌ ಶೋ ಫೋಟೊಗಳು ಇಲ್ಲಿವೆ.

ವಾರಾಣಸಿಯ ಬನಾರಸ್‌ ವಿವಿ ಗೇಟ್‌ನಿಂದ ಕಾಶಿ ವಿಶ್ವನಾಥ ಧಾಮದ 4ನೇ ಗೇಟ್‌ವರೆಗೆ 6 ಕಿಲೋಮೀಟರ್‌ ರೋಡ್‌ ಶೋ ಕೈಗೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ರೋಡ್‌ ಶೋಗೆ ಸಿಎಂ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಿದರು.
ಮರಾಠಿ, ಗುಜರಾತಿ, ಬೆಂಗಾಲಿ, ಮಾರ್ವಾಡಿ, ತಮಿಳು ಸೇರಿ ಹಲವು ಸಮುದಾಯಗಳು, ಸಾಂಸ್ಕೃತಿಕ ಹಿನ್ನೆಲೆಯವರು ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರು.
ಮೋದಿ ರೋಡ್‌ ಶೋ ಉದ್ದಕ್ಕೂ ಜೈ ಶ್ರೀರಾಮ್‌ ಎಂಬುದು ಸೇರಿ ಹಲವು ಘೋಷಣೆಗಳು ಮೊಳಗಿದವು.
ರೋಡ್‌ ಶೋ ಬಳಿಕ ಕಾಶಿ ವಿಶ್ವನಾಥ ದೇಗುಲದಲ್ಲಿ ಮೋದಿ ವಿಶೇಷ ಪ್ರಾರ್ಥನೆ.
ಕೇಸರಿ ದಿರಸು ಧರಿಸಿದ ಕಲಾವಿದರು ರೋಡ್‌ ಶೋಗೆ ಹೊಸ ಮೆರುಗು ತಂದರು.

ಇದನ್ನೂ ಓದಿ: PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

Continue Reading
Advertisement
Viral News
ದೇಶ7 mins ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ19 mins ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ19 mins ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ54 mins ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ1 hour ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ1 hour ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

karnataka weather Forecast
ಮಳೆ2 hours ago

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Food Tips Kannada
ಆಹಾರ/ಅಡುಗೆ2 hours ago

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

Narendra Modi
ದೇಶ3 hours ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ13 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ14 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ14 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ15 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ15 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ21 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌