Lok Sabha Election 2024: ಬೆಂಗಳೂರಲ್ಲಿ ಮತಬೇಟೆಗಿಳಿದ ಸಿಎಂ ಸಿದ್ದರಾಮಯ್ಯ; ಮಹಿಳಾ ಕೇಂದ್ರಿತ ಪ್ರಚಾರ! - Vistara News

Lok Sabha Election 2024

Lok Sabha Election 2024: ಬೆಂಗಳೂರಲ್ಲಿ ಮತಬೇಟೆಗಿಳಿದ ಸಿಎಂ ಸಿದ್ದರಾಮಯ್ಯ; ಮಹಿಳಾ ಕೇಂದ್ರಿತ ಪ್ರಚಾರ!

Lok Sabha Election 2024: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿಯಾಗಿದ್ದಾರೆ. ಇವರು ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತಾರೆ. ಉಡುಪಿ – ಚಿಕ್ಕಮಗಳೂರಿನಲ್ಲಿ ಬಿಜೆಪಿಯವರಿಂದಲೇ ಗೋ ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಇಲ್ಲಿಗೆ ಬಂದಿದ್ದಾರೆ. ಇಲ್ಲಿಂದಲೂ ನೀವು ವಾಪಸ್ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

VISTARANEWS.COM


on

Lok Sabha Election 2024 Cm Siddaramaiah seeks votes in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಭರದ ಸಿದ್ಧತೆಗಳನ್ನು ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬೆಂಗಳೂರಿನಲ್ಲಿ ಮತ ಬೇಟೆಗೆ ಇಳಿದಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ (Bangalore North Lok Sabha constituency) ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ (Rajeev Gowda) ಪರ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಪರ ಮತಯಾಚನೆ ಬಳಿಕ ನಾಗಸಂದ್ರ ಬಳಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರನ್ನು ಕೇಂದ್ರೀಕರಿಸಿ ಪ್ರಚಾರ ಮಾಡಿದ್ದಾರೆ.

ರಾಜೀವ್‌ ಗೌಡ ಗೆಲುವು ನಿಶ್ಚಿತ

ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Lok Sabha Election 2024 Cm Siddaramaiah seeks votes in Bengaluru

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಸ್ ಕಳಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ಧ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೇಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆಗಳಿಂದ ಹೈರಾಣಾಗಿದ್ದ ನಮ್ಮ ನಾಡಿನ ಜನತೆಯ ಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದಲೇ ಐದು ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5-6 ಸಾವಿರ ಉಳಿತಾಯ ಆಗುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಭದ್ರ ಆಗಿರುವವರೆಗೂ ಈ ಅನುಕೂಲ ಪ್ರತಿ ತಿಂಗಳೂ ಜನರ ಮನೆ ಬಾಗಿಲಿಗೆ ಬರುತ್ತಲೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೇವೇಗೌಡರ ವಿರುದ್ಧ ವಾಗ್ದಾಳಿ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ. ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 14ರಂದು ಕರ್ನಾಟಕಕ್ಕೆ ಮೋದಿ; ಬೆಂಗಳೂರಲ್ಲಿ ರೋಡ್‌ ಶೋ

ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿ ಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದು ಕರೆ ನೀಡಿದರು.

ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮತ್ತು 400 ಕ್ಕೂ ಅಧಿಕ ಮಂದಿ ಬೂತ್ ಮಟ್ಟದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Rahul Gandhi: ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ರಾಮಮಂದಿರ ಉದ್ಘಾಟನೆ, ಮುಕೇಶ್‌ ಅಂಬಾನಿ ಸೇರಿ ಹಲವು ವಿಷಯಗಳ ಕುರಿತು ಟೀಕಿಸಿ ಮಾತನಾಡಿದ್ದಾರೆ. ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ ಮಾಜಿ ಸಚಿವ ಫವಾದ್‌ ಹುಸೇನ್‌ ಮೆಚ್ಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಪ್ರತಿಯೊಂದು ವಿಷಯವೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಗ್ಯುದ್ಧ, ವಾಗ್ದಾಳಿ, ಮಾತಿನ ಚಕಮಕಿ, ಆಕ್ರೋಶ, ಆರೋಪಗಳಿಗೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ (Pakistan) ಮಾಜಿ ಸಚಿವ ಫವಾದ್‌ ಹುಸೇನ್‌ (Ch Fawad Hussain) ಮೆಚ್ಚಿಕೊಂಡಿದ್ದು, ಇದಕ್ಕೆ ಬಿಜೆಪಿ ಟಾಂಗ್‌ ಕೊಟ್ಟಿದೆ. “ಪಾಕಿಸ್ತಾನ ಹಾಗೂ ಕಾಂಗ್ರೆಸ್‌ ಮಧ್ಯೆ ಎಷ್ಟೊಂದು ಸ್ನೇಹ ಸಂಬಂಧ ಇದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಬಿಜೆಪಿ (BJP) ತಿರುಗೇಟು ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ, ಅವರ ಸರ್ಕಾರದ ನೀತಿಗಳ ಬಗ್ಗೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಗಣ್ಯರು ಮಾತ್ರ ಪಾಲ್ಗೊಂಡಿದ್ದರ ಬಗ್ಗೆ ರಾಹುಲ್‌ ಗಾಂಧಿ ಅವರು ಆಕ್ರೋಶಭರಿತರಾಗಿ ಮಾತನಾಡಿದ ವಿಡಿಯೊ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನು ಶೇರ್‌ ಮಾಡಿದ ಪಾಕ್‌ ಮಾಜಿ ಸಚಿವ ಫವಾದ್‌ ಹುಸೇನ್‌, “ರಾಹುಲ್‌ ಗಾಂಧಿ ಬೆಂಕಿಯುಂಡೆಯ ಕಾವಿನಂತೆ ಮಾತನಾಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಕ್‌ ಮಾಜಿ ಸಚಿವನ ಪ್ರತಿಕ್ರಿಯೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಫವಾದ್‌ ಹುಸೇನ್‌ ರಾಹುಲ್‌ ಗಾಂಧಿ ಅವರನ್ನು ಹೊಗಳುತ್ತಿದ್ದಾರೆ ಎಂದರೆ, ಅವರ ಸಂಬಂಧ ಹೇಗಿದೆ ಎಂಬುದಕ್ಕೆ ಕೈಗನ್ನಡಿಯಾಗಿದೆ. ಕಾಂಗ್ರೆಸ್‌ನ ಕೈ ಪಾಕಿಸ್ತಾನದ ಹೆಗಲ ಮೇಲಿದೆ ಎಂಬುದಕ್ಕೆ ಇದಕ್ಕಿಂತ ಒಳ್ಳೆಯ ನಿದರ್ಶನ ಬೇಕಾಗಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನಂತೆಯೇ ಇದೆ” ಎಂದು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಇದಕ್ಕೂ ಮೊದಲು ನನಗೆ ಕಾಂಗ್ರೆಸ್‌ ಪಕ್ಷ ಫೇವರಿಟ್‌ ಎಂದು ಉಗ್ರ ಹಫೀಜ್‌ ಸಯೀದ್‌ ಹೇಳಿದ್ದ. ಮಣಿಶಂಕರ್‌ ಅಯ್ಯರ್‌ ಅವರು ನರೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪಾಕಿಸ್ತಾನಕ್ಕೆ ಹೋಗಿದ್ದರು. ಕಾಂಗ್ರೆಸ್‌ ನಾಯಕರಿಂದಲೇ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೇಳಿಬಂದಿದ್ದವು. ಬಿ.ಕೆ. ಹರಿಪ್ರಸಾದ್‌ ಅವರು ಬಹಿರಂಗವಾಗಿಯೇ ಪಾಕ್‌ ಪರ ಮಾತನಾಡಿದ್ದಾರೆ. ಪಾಕಿಸ್ತಾನದ ಉಗ್ರರನ್ನೂ ಕಾಂಗ್ರೆಸ್‌ ನಾಯಕರು ಬೆಂಬಲಿಸಿದ್ದರು. ಈಗ ಸಂಬಂಧ ಹೇಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದ್ದಾರೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ಕರ್ನಾಟಕ

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Lok Sabha Election 2024: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಗಂಗಾವತಿಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

VISTARANEWS.COM


on

MLA G Janardan Reddy latest statement in Gangavathi
Koo

ಗಂಗಾವತಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಬಾಂಬ್ ಅವರು ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಭಾಷಣದಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಗಂಗಾವತಿ ನಗರದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ನನ್ನೊಂದಿಗೆ (ರೆಡ್ಡಿ) ಹೊಂದಾಣಿಕೆ ಮಾಡಿಕೊಂಡು ತನ್ನ ಸೋಲಿಗೆ ಕಾರಣರಾದರು ಎಂದು ಇಕ್ಬಾಲ್ ಅನ್ಸಾರಿ ಪದೇ ಪದೆ ಪ್ರಸ್ತಾಪಿಸುತ್ತಾರೆ. ಆದರೆ, ಅಸಲಿಗೆ ವಾಸ್ತವವೇ ಬೇರೆ ಇದೆ. ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ವಿಶ್ವಾಸ ಸ್ವತಃ ಕಾಂಗ್ರೆಸ್ ಪಕ್ಷಕ್ಕೂ ಇರಲಿಲ್ಲ. ಹೀಗಾಗಿ ಸ್ವತಃ ಸಿದ್ದರಾಮಯ್ಯ ನನ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ರೆಡ್ಡಿಯ ಕೆಆರ್‌ಪಿಪಿ ಎಲ್ಲಾದರೂ ಒಂದು ಹತ್ತು ಕ್ಷೇತ್ರದಲ್ಲಿ ಗೆದ್ದುಬಿಟ್ಟರೆ ಸರ್ಕಾರ ರಚನೆಯ ಸಂದರ್ಭದಲ್ಲಿ ಅವಸರಕ್ಕೆ ಇರಲಿ ಎಂಬ ಕಾರಣಕ್ಕೆ ಸ್ವತಃ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಮತ್ತು ನನ್ನ ಮಧ್ಯೆ ಒಳ ಒಪ್ಪಂದವಾಗಿತ್ತು. ಇದನ್ನು ಅರಿಯದ ಇಕ್ಬಾಲ್ ಅನ್ಸಾರಿ, ಸ್ಥಳೀಯ ಕಾಂಗ್ರೆಸ್ ನಾಯಕರು ರೆಡ್ಡಿಯೊಂದಿಗೆ ಬುಕ್ ಆಗಿದ್ದಾರೆ ಎಂದು ಭಾವಿಸಿ ಚುನಾವಣೆ ಮುಗಿದ ಬಳಿಕ ತಮ್ಮ ಮನೆ ಬಾಗಿಲು ಹಾಕಿದರು. ಎರಡು ದಿನಗಳ ಬಳಿಕ ಓಪನ್ ಮಾಡಿದ್ದರು ಎಂದು ರೆಡ್ಡಿ ಹೇಳಿದರು.

ಸಿದ್ದರಾಮಯ್ಯ ಮತ್ತು ನನ್ನ ನಡುವೆ ನಡೆದ ಒಳ ಒಪ್ಪಂದದಿಂದಾಗಿಯೇ ಸಿದ್ದರಾಮಯ್ಯ ಅಪ್ಪಿತಪ್ಪಿಯೂ ಗಂಗಾವತಿಗೆ ಪ್ರಚಾರಕ್ಕೆ ಬರಲಿಲ್ಲ. ಅಷ್ಟೆ ಅಲ್ಲ, ನನ್ನ ಪತ್ನಿ ಪ್ರತಿನಿಧಿಸಿದ್ದ ಬಳ್ಳಾರಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗಿರಲಿಲ್ಲ. ಈ ಬಗ್ಗೆ ಬೇಕಿದ್ದರೆ ಒಮ್ಮೆ ಪರಿಶೀಲಿಸಬಹುದು ಎಂದು ರೆಡ್ಡಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

ಈ ಹಿಂದೆ ಬೆಂಗಳೂರಿನಿಂದ ಬಳ್ಳಾರಿವರೆಗೂ ನಡೆಸಿದ ಪಾದಯಾತ್ರೆ, ರಾಜಕೀಯ ಸೇರಿದಂತೆ ಎಲ್ಲವನ್ನೂ ಮರೆತು ಬಿಡುವಂತೆ ಸಿದ್ದರಾಮಯ್ಯ ಕೇಳಿದ್ದರು. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನನ್ನ ಬಗ್ಗೆ ಟೀಕೆ ಮಾಡಿಲ್ಲ. ಗಂಗಾವತಿಯಲ್ಲೂ ಮಾಡಿಲ್ಲ. ಆದರೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಕಣ್ಣೊರೆಸಬೇಕೆಂಬ ಕಾರಣಕ್ಕೆ ಲೋಕಸಭಾ ಚುನಾವಣೆ ಅಂಗವಾಗಿ ನಡೆದ ಸಮಾವೇಶದಲ್ಲಿ ಕಾಟಾಚಾರಕ್ಕಾಗಿ ಸಿದ್ದರಾಮಯ್ಯ ನನ್ನ ಮೇಲೆ ಟೀಕೆ ಮಾಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

Continue Reading

ದೇಶ

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Adhir Ranjan: ಪಶ್ಚಿಮ ಬಂಗಾಳದಲ್ಲಿ ಜನರು ಟಿಎಂಸಿಗೆ ಮತ ನೀಡುವುದಕ್ಕಿಂತ ಬಿಜೆಪಿಗೆ ಮತ ಹಾಕುವುದೇ ಲೇಸು ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಇದರ ಮಧ್ಯೆಯೇ ಕಾಂಗ್ರೆಸ್‌ ಸ್ಪಷ್ಟನೆ ನೀಡಿದೆ.

VISTARANEWS.COM


on

Adhir Ranjan
Koo

ಕೋಲ್ಕೊತಾ: ಬೇಸಿಗೆಯ ರಣಬಿಸಿಲಿಗಿಂತ ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ನೂರಾರು ಗಣ್ಯರು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಅಬ್ಬರದ ಪ್ರಚಾರದ ಜತೆಗೆ ಭಾರಿ ಭಾಷಣವನ್ನೂ ಮಾಡುತ್ತಿದ್ದಾರೆ. ಒಂದು ಪಕ್ಷದ ಅಭ್ಯರ್ಥಿಗಳು, ನಾಯಕರು ಪ್ರತಿಸ್ಪರ್ಧಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, “ಟಿಎಂಸಿಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ನೀಡುವುದೇ ವಾಸಿ” ಎಂಬುದಾಗಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (Adhir Ranjan) ಅವರು ಹೇಳಿರುವುದು ಅಚ್ಚರಿ ಮೂಡಿಸಿದೆ. ಹಾಗೆಯೇ, ಅವರು ಹೇಳಿದ ವಿಡಿಯೊ (Viral Video) ಭಾರಿ ವೈರಲ್‌ ಆಗಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಆಯೋಜಿಸಿದ್ದ ಚುನಾವಣೆ ರ‍್ಯಾಲಿಯಲ್ಲಿ ಅಧೀರ್‌ ರಂಜನ್‌ ಚೌಧರಿ ಮಾತನಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ 400ಕ್ಕಿಂತ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂಬ ಪ್ರಧಾನಿಯವರ ಕನಸು ನನಸಾಗುವುದಿಲ್ಲ. ಈಗಾಗಲೇ ಮೋದಿ ಅವರ ಕೈಯಿಂದ 100 ಕ್ಷೇತ್ರಗಳು ಹಾರಿ ಹೋಗಿವೆ. ಕಾಂಗ್ರೆಸ್‌ ಹಾಗೂ ಸಿಪಿಎಂ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ. ಹಾಗೊಂದು ವೇಳೆ ನೀವು ಗೆಲ್ಲಿಸುವುದೇ ಆದರೆ, ಟಿಎಂಸಿಗಿಂತ ಬಿಜೆಪಿಗೇ ಮತ ಹಾಕುವುದು ಒಳಿತು” ಎಂದು ಹೇಳಿದ್ದಾರೆ.

ಅಧೀರ್‌ ರಂಜನ್‌ ಚೌಧರಿ ಅವರು ನೀಡಿದ ಹೇಳಿಕೆಯ ವಿಡಿಯೊ ವೈರಲ್‌ ಆಗುತ್ತಲೇ ಬಿಜೆಪಿ ನಾಯಕರು ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಪ್ರತಿಪಕ್ಷಗಳಿಗೆ ಗುರಿಯೂ ಇಲ್ಲ, ಉದ್ದೇಶವೂ ಇಲ್ಲ. ಇನ್ನು, ಇಂಡಿಯಾ ಒಕ್ಕೂಟಕ್ಕೆ ಜನರನ್ನು ಇಬ್ಭಾಗ ಮಾಡುವುದು, ಭ್ರಷ್ಟಾಚಾರ ಎಸಗುವುದು ಹಾಗೂ ಜನರಲ್ಲಿ ಗೊಂದಲ ಮೂಡಿಸುವುದೇ ಕಾಯಕವಾಗಿದೆ. ಇವರ ಮಧ್ಯೆಯೇ, ಬಿಜೆಪಿಗೆ ಮತ ನೀಡಿ ಎಂಬುದಾಗಿ ಕಾಂಗ್ರೆಸ್‌ ನಾಯಕ ತಿಳಿಸಿದ್ದಾರೆ. ಟಿಎಂಸಿಗೆ ಮತ ನೀಡುವ ಬದಲು ಬಿಜೆಪಿಯೇ ಬೆಸ್ಟ್‌ ಎಂಬುದಾಗಿ ಅವರು ಹೇಳಿದ್ದಾರೆ” ಎಂದು ಬಿಜೆಪಿ ನಾಯಕ ಶೆಹಜಾದ್‌ ಜೈ ಹಿಂದ್‌ ಪೋಸ್ಟ್‌ ಮಾಡಿದ್ದಾರೆ.

ಸ್ಪಷ್ಟನೆ ಕೊಟ್ಟ ಕಾಂಗ್ರೆಸ್‌

ಅಧೀರ್‌ ರಂಜನ್‌ ಚೌಧರಿ ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಸ್ಪಷ್ಟನೆ ನೀಡಿದರು. “ಅಧೀರ್‌ ರಂಜನ್‌ ಚೌಧರಿ ಅವರು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಹಾಗೂ ನಾನು ಆ ವಿಡಿಯೊವನ್ನು ನೋಡಿಲ್ಲ. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ ಸ್ಥಾನಗಳ ಸಂಖ್ಯೆಯು ಈ ಬಾರಿ ಗಣನೀಯವಾಗಿ ಕುಸಿಯುವಂತೆ ಮಾಡುವುದು ಕಾಂಗ್ರೆಸ್‌ನ ಗುರಿಯಾಗಿದೆ” ಎಂದು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ಮೈತ್ರಿಯು ಫಲಿಸಿಲ್ಲ. ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ಹಾಸನ

Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Hassan Pen Drive Case: ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

VISTARANEWS.COM


on

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಬ್ಬ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ. ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಲೇಬೇಕಿತ್ತು. ಅಲ್ಲದೆ, ಪ್ರಜ್ವಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ. ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್‌ ಮೇಲಿದೆ. ಅಲ್ಲದೆ, ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?: ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಡಿಪ್ಲೊಮ್ಯಾಟಿಕ್‌ ಇಮ್ಯುನಿಟಿ: ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ: ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತದೆ.

Continue Reading
Advertisement
karnataka Weather Forecast
ಮಳೆ31 mins ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್39 mins ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ1 hour ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ2 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು5 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ6 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ7 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ7 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌