Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು! - Vistara News

Lok Sabha Election 2024

Lok Sabha Election 2024 : ಜೆಡಿಎಸ್‌ಗೆ ವೋಟ್‌ ಹಾಕಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟು!

Lok Sabha Election 2024 : ಮತದಾನದ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್‌ ಕಾರ್ಯಕರ್ತರ ಮಚ್ಚೇಟಿಗೆ ಜೆಡಿಎಸ್‌ ಕಾರ್ಯಕರ್ತರ ಬೆರಳುಗಳು ಕಟ್‌ ಆಗಿವೆ.

VISTARANEWS.COM


on

Lok sabha election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ನಿನ್ನೆ ಶುಕ್ರವಾರ ಸಂಜೆ ಮತದಾನದ ವೇಳೆ ಮಾರಾಮಾರಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮತದಾನ ಮುಕ್ತಾಯ ನಂತರ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಜೆಡಿಎಸ್‌ಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಕಣಿಶೆಟ್ಟಿಹಳ್ಳಿ ಗ್ರಾಮದಲ್ಲಿ ಕಾರ್ಯಕರ್ತರ ಜಗಳದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ ಎಂಬುವವರ ಬೆರಳುಗಳು ಕಟ್ ಆಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ನರೇಂದ್ರ ಮಂಜುನಾಥ, ಗಣೇಶ, ಮಹೇಶ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಸದ್ಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಆಸ್ಪತ್ರೆಗೆ ಜೆಕೆ ಕೃಷ್ಣಾರೆಡ್ಡಿ ಭೇಟಿ

ಜೆಡಿಎಸ್ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಶನಿವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದರು. ಗಂಭೀರ ಗಾಯಗೊಂಡಿದ್ದ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು.

ಇದನ್ನೂ ಓದಿ: Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

ಚಿಕ್ಕಮಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಮುಕ್ತಾಯಗೊಂಡಿದೆ. ಆದರೆ, ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ. ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯಾ ಎಂಬುವವರ ಮೇಲೆ ಹಲ್ಲೆಯಾದ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಏಕೆ ಗಲಾಟೆ?

ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಘಟನೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Racist Comment : ಭಾರತದಲ್ಲಿ ನೀಗ್ರೊಗಳಿದ್ದಾರೆ…; ಇದೀಗ ಬಂಗಾಳ ಕಾಂಗ್ರೆಸ್​​ ಅಧ್ಯಕ್ಷರ ಸರದಿ

Racist Comment: ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಹೇಳಿಕೆ ನೀಡಿದ ಬಳಿಕ ಸಾಗರೋತ್ತರ ಕಾಂಗ್ರೆಸ್​್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

VISTARANEWS.COM


on

Racial Comments
Koo

ನವದೆಹಲಿ: ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಗುರುವಾರ ಸ್ಯಾಮ್ ಪಿತ್ರೋಡಾ (Sam Pitroda) ಅವರ “ಜನಾಂಗೀಯ” ಹೇಳಿಕೆಯನ್ನು (Racist Comment) ಸಮರ್ಥಿಸಿಕೊಂಡಿದ್ದು, ಭಾರತದಲ್ಲೂ ಕಪ್ಪು ಚರ್ಮದವರನ್ನು (ನಿಗ್ರೊಗಳು) ಹೋಲುವ ಜನರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಇನ್ನಷ್ಟು ತುಪ್ಪ ಸುರಿದಿದೆ. ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಎಂಬ ಸ್ಯಾಮ್​ ಪಿತ್ರೊಡಾ ಹೇಳಿಕೆಯು ಬಿಜೆಪಿಯಿಂದ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಚರ್ಮದ ಬಣ್ಣವನ್ನು ಆಧರಿಸಿ ಭಾರತೀಯರಿಗೆ ಅಗೌರವ ತೋರಿದೆ ಎಂಬ ಆರೋಪ ಮಾಡಿತ್ತು. ಅದರ ಬೆನ್ನಲ್ಲೇ ಚೌಧರಿ ತನ್ನ ಹೇಳಿಕೆ ನೀಡಿದ್ದಾರೆ.

“ನಮ್ಮಲ್ಲಿ ಪ್ರೋಟೋ ಆಸ್ಟ್ರಲಾಯ್ಡ್ಗಳು, ಮಂಗೋಲಾಯ್ಡ್ಗಳು ಮತ್ತು ನೆಗ್ರಿಟೊ ವರ್ಗದ ಜನರಿದ್ದಾರೆ. ನಮ್ಮ ದೇಶದ ಜನರ ಪ್ರಾದೇಶಿಕ ಲಕ್ಷಣಗಳು ವಿಭಿನ್ನವಾಗಿವೆ. ಪಿತ್ರೋಡಾ ಅವರು ನೀಡಿರುವುದು ವೈಯಕ್ತಿಕ ಅಭಿಪ್ರಾಯ. ಅದರ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ” ಎಂದು ಚೌಧರಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತದಲ್ಲಿ ಹಲವಾರು ಜನಾಂಗಗಳು ಇರುವುದನ್ನು ನಮಗೆ ಶಾಲೆಗಳಲ್ಲಿ ಕಲಿಸಲಾಗಿದೆ. ಎಲ್ಲರೂ ಒಂದೇ ರೀತಿ ಕಾಣುವುದಿಲ್ಲ. ಕೆಲವರು ಕಪ್ಪು ಹಾಗೂ ಇನ್ನುಳಿದವರು ಬಿಳಿ ಬಣ್ಣದವರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಪಿತ್ರೋಡಾ ಹೇಳಿಕೆ ನೀಡಿದ ಬಳಿಕ ಸಾಗರೋತ್ತರ ಕಾಂಗ್ರೆಸ್​್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಚೌಧರಿ ಹೇಳಿಕೆಗೆ ಕಾಂಗ್ರೆಸ್ ಇನ್ನೂ ಪ್ರತಿಕ್ರಿಯಿಸಿಲ್ಲ.

ದಿ ಸ್ಟೇಟ್ಸ್​ಮನ್​​ಗೆ ಪಿತ್ರೋಡಾ ನೀಡಿದ್ದ ಸಂದರ್ಶನದ ಆಯ್ದ ಭಾಗವನ್ನು ಬುಧವಾರ ಪ್ರಸಾರ ಮಾಡಲಾಗಿತ್ತು. ಅದರಲ್ಲಿ ಅವರು ಭಾರತವನ್ನು ವೈವಿಧ್ಯಮಯ ದೇಶ. ಪೂರ್ವದ ಜನರು ಚೀನೀಯರಂತೆ ಕಾಣುತ್ತಾರೆ. ಉತ್ತರದ ಜನರು ಬಿಳಿಯರಂತೆ ಕಾಣುತ್ತಾರೆ ಮತ್ತು ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು. ಪಿತ್ರೊಡಾ ಅವರ ವಿವಾದಾತ್ಮಕ ಹೇಳಿಕೆಯ ನಂತರ ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಮದ ಬಣ್ಣದ ಆಧಾರದ ಮೇಲೆ ಅಗೌರವವನ್ನು ಸಹಿಸುವುದಿಲ್ಲ ಎಂದು ಟೀಕಿಸಿದ್ದರು.

ಈ ಹೇಳಿಕೆಯ ಕೆಲವೇ ಗಂಟೆಗಳ ನಂತರ ಪಿತ್ರೋಡಾ ಅವರು ಕಾಂಗ್ರೆಸ್ ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಿತ್ರೋಡಾ ಅವರ ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

Continue Reading

Lok Sabha Election 2024

BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

BJP Karnataka: ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

BJP Karnataka Egg video against Congress BJP social media head arrested
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಮೊಟ್ಟೆ ವಿಡಿಯೊಗೆ ಸಂಬಂಧಪಟ್ಟಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಗುರುವಾರ (ಮೇ 9) ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಬುಧವಾರವಷ್ಟೇ (ಮೇ 8) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್‌ ಆರೋಪ ಏನಿತ್ತು?

ಸಮುದಾಯಗಳಿಗೆ ಸಂಬಂಧಿಸಿದಂತೆ ಈ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

BJP Karnataka State police issues notices to JP Nadda and Amit Malviya and BY Vijayendra

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

ನೀತಿ ಸಂಹಿತೆಯ ಉಲ್ಲಂಘನೆ

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದರು. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Continue Reading

Lok Sabha Election 2024

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

Navneet Rana: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ (Navneet Rana) ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ʼಹಿಂದೂ-ಮುಸ್ಲಿಂ ಅನುಪಾತವನ್ನುʼ ಸಮತೋಲನಗೊಳಿಸಲು ’15 ನಿಮಿಷʼ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದು ಅಕ್ಬರುದ್ದೀನ್ ಓವೈಸಿ ಅಂದು ಹೇಳಿಕೆ ನೀಡಿದ್ದರು. ಇದಕ್ಕೆ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ ಈ ಹೇಳಿಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ʼʼನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆʼʼ ಎಂದಿದ್ದಾರೆ.

ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ. ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಎಐಎಂಐಎಂ ಆಕ್ಷೇಪ

ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಖಂಡ ವಾರಿಸ್ ಪಠಾಣ್, ʼʼನವನಿತ್ ರಾಣಾ ಅವರಿಗೆ ಈ ಬಾರಿ ಅಮರಾವತಿಯಲ್ಲಿ ಹೀನಾಯ ಸೋಲು ಖಚಿತವಾಗಿದೆ. ಹೀಗಾಗಿಯೇ ಅವರು ಈ ಆಘಾತವನ್ನು ತಾಳಲಾರದೆ ಹೀಗೆಲ್ಲ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಮಾತುಗಳಿಗೆ ಚುನಾವಣಾ ಆಯೋಗ ಯಾಕೆ ಕ್ರಮ ಕೈಗೊಂಡಿಲ್ಲ?ʼʼ ಎಂದು ಪ್ರಶ್ನಿಸಿದ್ದಾರೆ. ʼʼಬಿಜೆಪಿಯವರು ಕೋಮು ಸಾಮರಸ್ಯವನ್ನು ಕದಡಲು ಯತ್ನಿಸುತ್ತಿದ್ದಾರೆʼʼ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: Madhavi Lata: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಧವಿ ಲತಾಗೆ ವೈ+ಭದ್ರತೆ ಒದಗಿಸಿದ ಕೇಂದ್ರ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

Continue Reading

ದೇಶ

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Mahender Pratap Singh:ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌ 2019ರಲ್ಲಿ ನಡೆದ ಪುಲ್ವಾಮಾ ದಾಳಿ ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

VISTARANEWS.COM


on

Mahender Pratap Singh
Koo

ಹರಿಯಾಣ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆಯುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅದರಲ್ಲೂ ಕಾಂಗ್ರೆಸ್‌ ದಿನಕ್ಕೊಬ್ಬ ನಾಯಕರಂತೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕ ಪುಲ್ವಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

ಮಹೇಂದರ್‌ ಪ್ರತಾಪ್‌ ಸಿಂಗ್‌ ಹೇಳಿದ್ದೇನು?

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಹೇಂದರ್‌ ಪ್ರತಾಪ್‌ ಸಿಂಗ್‌, ಪುಲ್ವಾಮಾ ದಾಳಿಯ ರಹಸ್ಯ ಈ ಬಯಲಾಗಿದೆ. ಬಹುದೊಡ್ಡ ದಾಳಿಯ ಸೂಚನೆ ಇರುವುದರಿಂದ ನಮ್ಮ ಯೋಧರು ರಸ್ತೆ ಮೂಲಕ ಬರುವುದು ಅಷ್ಟೊಂದು ಸುರಕ್ಷಿತ ಅಲ್ಲ. ಅವರನ್ನು ಏರ್‌ಲಿಫ್ಟ್‌ ಮಾಡುವ ಎಂದುಪ್ರಧಾನಿಗೆ ಮೊದಲೇ ಮನವಿ ಮಾಡಿದ್ದೆ ಎಂದು ಅವರದ್ದೇ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಈ ಹಿಂದೆಯೇ ಹೇಳಿದ್ದರು. ಹೀಗಾಗಿ ಅದು ಒಂದು ಬಿಜೆಪಿಯ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಅದು ಎರಡನೇ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ ಚುನಾವಣಾ ಸ್ಟಂಟ್‌. ಇದೀಗ ಅವರು ಮೂರನೇ ಬಾರಿ ಗೆಲುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಮುಖಂಡ ವಿಷ್ಣುವರ್ಧನ್‌ ರೆಡ್ಡಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ. ಇಡೀ ದೇಶವೇ ಪಾಕಿಸ್ತಾನದ ಕುತಂತ್ರದ ಬಗ್ಗೆ ಕೆಂಡ ಕಾರುತ್ತಿದೆ. ಆದರೆ ಲಜ್ಜೆಗೆಟ್ಟ ಕಾಂಗ್ರೆಸ್‌ ಮಾತ್ರ ಪಾಕಿಸ್ತಾನಕ್ಕೆ ಕ್ಲೀನ್‌ ಚಿನ್‌ ನೀಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

ಕೆಲ ದಿನಗಳ ಹಿಂದೆ ಪೂಂಚ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯನ್ನು ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಚನ್ನಿ ಬಿಜೆಪಿಯ ಚುನಾವಣಾ ಸ್ಟಂಟ್‌ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ಇದಾದ ಬಳಿಕ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದರು. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬುದಾಗಿ ಹೇಳಿದ್ದರು

Continue Reading
Advertisement
Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ14 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ19 mins ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ29 mins ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ49 mins ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ53 mins ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Mother passed SSLC exam with her son in Hassan
ಕರ್ನಾಟಕ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

Failed in SSLC Exam Student suicide in mandya
ಮಂಡ್ಯ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌; ನೇಣಿಗೆ ಶರಣಾದ ವಿದ್ಯಾರ್ಥಿ

Ranveer Singh
Latest1 hour ago

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 hour ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Racial Comments
ಪ್ರಮುಖ ಸುದ್ದಿ2 hours ago

Racist Comment : ಭಾರತದಲ್ಲಿ ನೀಗ್ರೊಗಳಿದ್ದಾರೆ…; ಇದೀಗ ಬಂಗಾಳ ಕಾಂಗ್ರೆಸ್​​ ಅಧ್ಯಕ್ಷರ ಸರದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ14 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 hour ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ9 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ9 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ9 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು10 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ10 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು11 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌