Lok Sabha Election 2024: ಬೆಂಗಳೂರು ಗ್ರಾಮಾಂತರದಿಂದ ಡಾ. ಸಿ.ಎನ್.‌ ಮಂಜುನಾಥ್‌ ಸ್ಪರ್ಧೆ ಖಚಿತ? ಮನವೊಲಿಸಿದ ಎಚ್‌ಡಿಕೆ! - Vistara News

Lok Sabha Election 2024

Lok Sabha Election 2024: ಬೆಂಗಳೂರು ಗ್ರಾಮಾಂತರದಿಂದ ಡಾ. ಸಿ.ಎನ್.‌ ಮಂಜುನಾಥ್‌ ಸ್ಪರ್ಧೆ ಖಚಿತ? ಮನವೊಲಿಸಿದ ಎಚ್‌ಡಿಕೆ!

Lok Sabha Election 2024: ಡಾ‌‌. ಮಂಜುನಾಥ್ ಮನವೊಲಿಕೆ ಮಾಡುವಲ್ಲಿ ಎಚ್.ಡಿ. ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮಂಜುನಾಥ್ ಒಲವು ತೋರಿರುವ ಬಗ್ಗೆ ಬಿಜೆಪಿ ನಾಯಕರಿಗೆ ಎಚ್‌ಡಿಕೆ ತಿಳಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Dr CN Manjunath to contest from Bengaluru Rural
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ ಮಾಡಿಕೊಂಡು ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ಮಾಡುತ್ತಿದೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನವನ್ನು ಬಿಜೆಪಿ ಮಾಡಿದೆ ಎನ್ನಲಾಗಿದ್ದು, ಈ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿಯ ಹುಡುಕಾಟದಲ್ಲಿತ್ತು. ಇದಕ್ಕೆ ಈಗ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್.‌ ಮಂಜುನಾಥ್‌ (Dr CN Manjunath) ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಅವರ ಸ್ಪರ್ಧೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಈ ಎಲ್ಲ ಬೆಳವಣಿಗೆ ನಡುವೆ ಮಂಜುನಾಥ್‌ ಅವರ ಮನವೊಲಿಸುವಲ್ಲಿ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಯಶಸ್ವಿಯಾಗಿದ್ದು, ಕಣಕ್ಕಿಳಿಯಲು ಮಂಜುನಾಥ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಾ‌‌. ಮಂಜುನಾಥ್ ಮನವೊಲಿಕೆ ಮಾಡುವಲ್ಲಿ ಎಚ್.ಡಿ. ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮಂಜುನಾಥ್ ಒಲವು ತೋರಿರುವ ಬಗ್ಗೆ ಬಿಜೆಪಿ ನಾಯಕರಿಗೆ ಎಚ್‌ಡಿಕೆ ತಿಳಿಸಿದ್ದಾರೆ ಎನ್ನಲಾಗಿದೆ.

ಮಂಜುನಾಥ್‌ ಸ್ಪರ್ಧೆ ಖಚಿತ

ಬೆಂಗಳೂರು ಗ್ರಾಮಾಂತರದಿಂದ ಮಂಜುನಾಥ್ ಸ್ಪರ್ಧೆ ಖಚಿತ ಎಂದು ತಿಳಿದುಬರುತ್ತಿದ್ದಂತೆ ಈ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಸಂಬಂಧ ಮಂಗಳವಾರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ನವ ದೆಹಲಿಗೆ ಭೇಟಿ ನೀಡಲಿದ್ದು, ಬಿಜೆಪಿ ನಾಯಕರ ಜತೆ ಅಂತಿಮ ಹಂತದ ಮಾತುಕತೆಯನ್ನು ನಡೆಸಲಿದ್ದಾರೆ. ಮಂಜುನಾಥ್ ಸ್ಪರ್ಧೆ ಬಗ್ಗೆ ಈಗಾಗಲೇ ಎಚ್‌ಡಿಕೆ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದಾರೆ.

ರಾಜಕೀಯ ಪ್ರವೇಶ ಇಲ್ಲ ಎಂದಿದ್ದ ದೇವೇಗೌಡರು

ಡಾ. ಸಿ.ಎನ್‌. ಮಂಜುನಾಥ್‌ ಅವರು ರಾಜಕೀಯ ಪ್ರವೇಶ ಮಾಡುವುದಿಲ್ಲ, ಅವರು ಲೋಕಸಭಾ ಚುನಾವಣೆಯಲ್ಲಿ (Parliament Election 2024) ಸ್ಪರ್ಧೆ ಮಾಡುವುದಿಲ್ಲ ಎಂದುಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Devegowda) ಅವರು ಈಚೆಗೆ ಕಡ್ಡಿ ಮುರಿದಂತೆ ಹೇಳಿದ್ದರು. ಈ ಮೂಲಕ ಬಿಜೆಪಿ -ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿಗೆ ತೆರೆ ಎಳೆದಿದ್ದರು.

ಜಯದೇವ ಸಂಸ್ಥೆಯಿಂದ ನಿವೃತ್ತರಾದ ಬಳಿಕ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಅವರ ಸೇವೆಯನ್ನು ರಾಷ್ಟ್ರ ಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ ಬಿಜೆಪಿ ಕೂಡಾ ಅವರ ಸ್ಪರ್ಧೆಗೆ ಒತ್ತು ನೀಡಲಿದೆ. ಸ್ವತಃ ಅಮಿತ್‌ ಶಾ ಮತ್ತು ಮೋದಿ ಅವರೇ ಈ ವಿಚಾರದಲ್ಲಿ ಉತ್ಸುಕರಾಗಿದ್ದಾರೆ. ಅವರು ಮುಂದೆ ದೇಶದ ಆರೋಗ್ಯ ಸಚಿವರಾಗಲೂಬಹುದು ಎಂಬವರೆಗೆ ಮಾತುಗಳು ಹರಿದಾಡಿದ್ದವು. ಆದರೆ, ದೇವೇಗೌಡರು ಇದನ್ನು ನಿರಾಕರಣೆ ಮಾಡಿದ್ದರು.

ಮಂಜುನಾಥ್‌ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಬಹುದು, ಇದು ಸುಮಲತಾ ಅವರನ್ನು ಸಮಾಧಾನ ಮಾಡಲು ಒಂದು ಸಕಾರಣವೂ ಆದೀತು. ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದರೆ ಕಾಂಗ್ರೆಸ್‌ನ ಹಾಲಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಪ್ರಬಲ ಪ್ರತಿಸ್ಪರ್ಧಿ ಆದಾರು ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಇದೆಲ್ಲದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮಂಜುನಾತ್‌, ಎಲ್ಲ ಕಡೆಯಿಂದ ಚರ್ಚೆ ನಡೆಯುತ್ತಿದೆ. ಆದರೆ, ನಾನು ಈ ಬಗ್ಗೆ ತೀರ್ಮಾನ ಮಾಡಿಲ್ಲ ಎಂದಿದ್ದರು. ಕೊನೆಗೆ ಮಾಜಿ ಪ್ರಧಾನಿ ದೇವೇಗೌಡರು ಸಹ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಆದರೆ, ಎಚ್‌.ಡಿ. ಕುಮಾರಸ್ವಾಮಿ ಅವರು ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ನ 21 ಅಭ್ಯರ್ಥಿಗಳ ಪಟ್ಟಿ ಇಂದೇ ಫೈನಲ್;‌ 8 ಸಚಿವರು ಕಣಕ್ಕೆ?

ದೇವೇಗೌಡರು ಬೇಡ ಎಂದಿದ್ದು ಏಕೆ?

  1. ಮಂಜುನಾಥ್‌ ಅವರು ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿದವರು. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಅಂಥವರು ಬರೋದು ಸರಿಯಲ್ಲ.
  2. ಅವರಿಗೆ ಒಂದು ಒಳ್ಳೆಯ ಸ್ಥಾನವಿದೆ. ಮುಗಿಲೆತ್ತರದ ಹೆಸರಿದೆ. ಇಂತಹ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಅಂತ ನಾವು ಒತ್ತಾಯಿಸುವುದಿಲ್ಲ.
  3. ಡಾ. ಸಿ.ಎನ್‌ ಮಂಜುನಾಥ್‌ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ನಾವು ಮಾಡಲ್ಲ. ಹಾಗಾಗಿ ಸ್ಪರ್ಧೆ ಮಾಡಲ್ಲ

ಈ ಎಲ್ಲ ಕಾರಣವನ್ನು ನೀಡಿ ಎಚ್.ಡಿ. ದೇವೇಗೌಡ ಅವರು ಮಂಜುನಾಥ್‌ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading

ದೇಶ

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Supriya Sule:ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ.

VISTARANEWS.COM


on

Supriya Sule
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಇದೀಗ ಇದರ ಬೆನ್ನಲ್ಲೇ ಭಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಮತಯಂತ್ರ(EVM)ಗಳನ್ನು ಕೂಡಿಟ್ಟಿದ್ದ ಸ್ಟ್ರಾಂಗ್‌ ರೂಂ(Strong room)ನ ಸಿಸಿಟಿವಿ ಕ್ಯಾಮೆರಾ ಸುಮಾರು 45ನಿಮಿಷಗಳ ಕಾಲ ಸ್ವಿಚ್‌ ಆಫ್‌ ಆಗಿತ್ತು ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸುಪ್ರಿಯಾ ಸುಳೆ(Supriya Sule) ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಸುಳೆ ಆರೋಪವೇನು?

ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ. ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

EC ಪ್ರತಿಕ್ರಿಯೆ ಏನು?

ಸುಪ್ರಿಯಾ ಸುಳೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಕವಿತಾ ದ್ವಿವೇದಿ, ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಗೋದಾಮಿನಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಡೇಟಾ ಸುರಕ್ಷಿತವಾಗಿದೆ, ಸ್ವಲ್ಪ ಸಮಯದವರೆಗೆ ಮಾನಿಟರ್‌ ಅನ್ನು ಮುಚ್ಚಲಾಗಿತ್ತು. ಅದರ ಹೊರತಾಗಿ ಎಲ್ಲಾ ದತ್ತಾಂಶಗಳು ಸುರಕ್ಷಿತವಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಬಾರಾಮತಿಯಲ್ಲಿ ಕ್ಷೇತ್ರದಲ್ಲಿ ಪವಾರ್‌ ವರ್ಸಸ್‌ ಪವಾರ್‌ ಸೆಣಸಾಟ ಇದ್ದು, ಇದೊಂದು ಪ್ರತಿಷ್ಠೆಯ ಕಣವಾಗಿದೆ. ಮೇ 7ರಂದು ಮತದಾನ ನಡೆದಿದ್ದು, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಪರಸ್ಪರ ಎದುರಾಳಿಗಳಾಗಿ ಕಣದಲ್ಲಿದ್ದಾರೆ.

Continue Reading

Lok Sabha Election 2024

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

CM Siddaramaiah: ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಹೈಕಮಾಂಡ್‌ ಒತ್ತಾಯ ಇರುವುದರಿಂದ ಪ್ರಚಾರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ ಎಂಬ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.

VISTARANEWS.COM


on

I dont want to go to other states for Lok Sabha Election 2024 campaign for Congress says CM Siddaramaiah
Koo

ಮೈಸೂರು: ಹೊರ ರಾಜ್ಯಗಳ ಲೋಕಸಭಾ ಚುನಾವಣೆಗೆ (Lok Sabha Election 2024) ನನ್ನನ್ನು ಸ್ಟಾರ್ ಪ್ರಚಾರಕನನ್ನಾಗಿ ಮಾಡಿದ್ದಾರೆ. ಸಾಮಾನ್ಯವಾಗಿ ನಾನು ಹೊರ ರಾಜ್ಯಗಳಿಗೆ ಹೋಗಲ್ಲ. ನನಗೆ ಅದು ಇಷ್ಟವೂ ಆಗುವುದಿಲ್ಲ. ಇಲ್ಲೇ ಬೇಕಾದಷ್ಟು ಕೆಲಸ ಇದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನನಗೆ ಮಾಡಲು ಬೇಕಾದಷ್ಟು ಕೆಲಸ ಇದೆ. ಆದರೆ, ನನ್ನನ್ನು ಸ್ಟಾರ್‌ ಪ್ರಚಾರಕನನ್ನಾಗಿ ಮಾಡಿಯಾಗಿದೆ. ಜತೆಗೆ ಹೈಕಮಾಂಡ್‌ನವರು ಪ್ರಚಾರಕ್ಕೆ ಬರುವಂತೆ ಕರೆದಿದ್ದಾರೆ. ಪ್ರಚಾರಕ್ಕೆ ಹೋಗಲು ವೈಯಕ್ತಿಕವಾಗಿ ನನಗೆ ಇಷ್ಟ ಇಲ್ಲ ಎಂದು ಹೊರ ರಾಜ್ಯಗಳಿಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹೋಗುವ ವಿಚಾರವಾಗಿ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ನಮ್ಮ ಸರ್ಕಾರ ಸುಭದ್ರವಾಗಿದೆ. ಹೊರಗೂ, ಒಳಗೂ ಭಿನ್ನಮತ ಇಲ್ಲ. ಒಳಜಗಳ ಇದ್ದರೆ ಲೋಕಸಭೆ ಚುನಾವಣೆಯಲ್ಲಿ ಇಷ್ಟೊಂದು ಒಗ್ಗಟ್ಟಿನಿಂದ ಕೆಲಸ ಮಾಡಲು ಆಗುತ್ತಿತ್ತಾ? ಸರ್ಕಾರ ಸುಭದ್ರವಾಗಿದೆ. ಇನ್ನೂ ಏಕನಾಥ್ ಶಿಂಧೆ ಸರ್ಕಾರ ಇರುತ್ತದೆಯೋ? ಇಲ್ಲವೋ ನೋಡಿಕೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕುಮಾರಸ್ವಾಮಿಗೆ ಸಿಎಂ ತಿರುಗೇಟು

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸ್. ಅವರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಹೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

ಎಂಎಲ್‌ಸಿ ಚುನಾವಣೆಯಲ್ಲಿ ಉತ್ತಮ ವಾತಾವರಣ

ಎಂಎಲ್‌ಸಿ ಚುನಾವಣೆಯಲ್ಲಿ ನಮಗೆ ವಾತಾವರಣ ಉತ್ತಮವಾಗಿದೆ. ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿ ಘೋಷಿಸಿದ್ದೇವೆ. ಇದರಿಂದ ಮತ ಕೇಳಲು ಸಮಯ ಸಿಕ್ಕಿದೆ. ಮೈತ್ರಿಯಿಂದ ನಮಗೆ ಎಫೆಕ್ಟ್ ಆಗಲ್ಲ. ಪಾರ್ಲಿಮೆಂಟ್ ಚುನಾವಣೆಯಲ್ಲೂ ಮೈತ್ರಿ ಆಗಿತ್ತು. ಆದರೆ, ನಮಗೆ ಯಾವುದೇ ಪರಿಣಾಮ ಆಗಲಿಲ್ಲ. ಈ ಚುನಾವಣೆಯಲ್ಲಿ ಪದವೀಧರರು, ಶಿಕ್ಷಕರು, ಮತದಾರರು ರಾಜಕೀಯವಾಗಿ ಪ್ರಬುದ್ಧರಿದ್ದಾರೆ. ಯಾವುದು ಸರಿ, ಸರಿಯಲ್ಲ ಎಂಬುದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಸರ್ಕಾರ 10 ವರ್ಷದಲ್ಲಿ ಏನೂ ಮಾಡಿಲ್ಲ. ನಮ್ಮ ಸರ್ಕಾರದ ಸಾಧನೆಗಳನ್ನು ತುಲನೆ ಮಾಡುವ ಶಕ್ತಿ ಮತದಾರರಿಗೆ ಇದೆ ಎಂದು ಹೇಳಿದರು.


Continue Reading

ಪ್ರಮುಖ ಸುದ್ದಿ

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

VISTARANEWS.COM


on

pm narendra modi nomination
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ (Narendra modi nomination) ಸಲ್ಲಿಸಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಸಂದರ್ಭದಲ್ಲಿ ಅವರೊಂದಿಗೆ ಇದ್ದರು. ನಿನ್ನೆ ಪ್ರಧಾನಿ ಮೋದಿ ವಾರಾಣಸಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದವರು.

“… ನಮಗೆ ಬೆಳಿಗ್ಗೆ ಮಾಹಿತಿ ಸಿಕ್ಕಿತು. ಪಕ್ಷದ ಕಾರ್ಯಕರ್ತನಾಗಿ ನನಗೆ ವಹಿಸಿದ ಕೆಲಸಗಳನ್ನು ಮಾಡುತ್ತಿದ್ದೇನೆ. ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ…, ”ಎಂದು ಸೋಂಕರ್ ಮಾಧ್ಯಮಗಳಿಗೆ ತಿಳಿಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಪ್ರತಿಪಾದಕರು ಕೃಷಿ ವಿಜ್ಞಾನಿ, ಬಿಎಚ್‌ಯು ಮಹಿಳಾ ಮಹಾವಿದ್ಯಾಲಯದ ಮಾಜಿ ಪ್ರಾಂಶುಪಾಲರು, ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ವಾರಣಾಸಿ ಘಾಟ್‌ಗಳ ಮುಖ್ಯ ದಹನಕಾರ ಹೀಗೆ ವಿವಿಧ ಹಿನ್ನೆಲೆಗಳಿಂದ ಬಂದವರಾಗಿದ್ದರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading
Advertisement
DK Shivakumar hits back at HD Kumaraswamy
ರಾಜಕೀಯ2 mins ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು9 mins ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

America
ವಿದೇಶ9 mins ago

America: ಶ್ವೇತಭವನದಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ..ವಿಡಿಯೋ ನೋಡಿ

KL Rahul
ಕ್ರೀಡೆ27 mins ago

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

Actor Dhanush
ಸಿನಿಮಾ29 mins ago

Actor Dhanush: ಧನುಷ್-ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದ ಖ್ಯಾತ ಗಾಯಕಿ

pm narendra modi nomination 2
ಪ್ರಮುಖ ಸುದ್ದಿ34 mins ago

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

HD Revanna released from jail Revanna Go straight to HD Deve Gowda house
ರಾಜಕೀಯ35 mins ago

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Patanjali case
ದೇಶ51 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ1 hour ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ2 hours ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ11 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ23 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌