Lok Sabha Election 2024: ಕೋಲಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೌತಮ್‌ ಆಯ್ಕೆ; ಮುನಿಯಪ್ಪ, ರಮೇಶ್‌ ಕುಮಾರ್‌ ಬಣಕ್ಕೆ ಮುಖಭಂಗ - Vistara News

Lok Sabha Election 2024

Lok Sabha Election 2024: ಕೋಲಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೌತಮ್‌ ಆಯ್ಕೆ; ಮುನಿಯಪ್ಪ, ರಮೇಶ್‌ ಕುಮಾರ್‌ ಬಣಕ್ಕೆ ಮುಖಭಂಗ

Lok Sabha Election 2024: ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಕೆ.ಎಚ್. ಮುನಿಯಪ್ಪ ‌ಅವರು ಇನ್ನಿಲ್ಲದ ಲಾಬಿ ಮಾಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಮಾತನಾಡಿದ್ದರು. ಒತ್ತಡಕ್ಕೆ ಮಣಿದು ಟಿಕೆಟ್ ತಪ್ಪಿಸಿದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಹೇಳಿದ್ದರು. ಇತ್ತ ರಮೇಶ್‌ ಕುಮಾರ್‌ ಬಣ ಇದಕ್ಕೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು. ಕೊನೆಗೆ ಟಿಕೆಟ್‌ ಮೂರನೆಯವರ ಪಾಲಾಗಿದೆ.

VISTARANEWS.COM


on

Lok Sabha Election 2024 Gautam elected as Congress candidate from Kolar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಕೋಲಾರದಲ್ಲಿ (Kolar) ಲೋಕಸಭೆ ಚುನಾವಣೆ (Lok Sabha Election 2024) ಸ್ಪರ್ಧೆಗೆ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಕೂತಿರುವ ಹಿನ್ನೆಲೆಯಲ್ಲಿ, ಉಭಯ ಬಣಗಳ ತಿಕ್ಕಾಟದಿಂದ ಬೇಸತ್ತಿರುವ ಹೈಕಮಾಂಡ್‌ ಅಚ್ಚರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಟಿಕೆಟ್ ಆಯ್ಕೆ ಕಗ್ಗಂಟು ಇಂದು ಬಗೆಹರಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಠಿಣ ನಿರ್ಧಾರ ಮಾಡಿದ್ದು, ಕೆ.ವಿ ಗೌತಮ್ ಎಂಬುವವರನ್ನು ಆಯ್ಕೆ ಮಾಡಿದೆ. ಕೆ.ವಿ ಗೌತಮ್ ಸದ್ಯ ಬೆಂಗಳೂರು ಕೇಂದ್ರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದಾರೆ. ಈ ಆಯ್ಕೆ ಮೂಲಕ ರಮೇಶ್‌ ಕುಮಾರ್‌ ಹಾಗೂ ಕೆ.ಎಚ್.‌ ಮುನಿಯಪ್ಪ ಬಣಕ್ಕೆ ತೀವ್ರ ಮುಖಭಂಗವಾಗಿದೆ.

ಕೋಲಾರದಲ್ಲಿ ಪ್ರಾತಿನಿಧ್ಯಕ್ಕಾಗಿ ರಮೇಶ್ ಕುಮಾರ್ (Ramesh Kumar) ಬಣ ಹಾಗೂ ಸಚಿವ ಕೆ.ಎಚ್ ಮುನಿಯಪ್ಪ‌ (KH Muniyappa) ಟೀಮ್‌ ನಡುವೆ ಜಿದ್ದಾಜಿದ್ದಿ ಇತ್ತು. ಟಿಕೆಟ್‌ ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಕೊಡಬೇಕು ಎಂದು ಕೆ.ಎಚ್.‌ ಮುನಿಯಪ್ಪ ಪಟ್ಟು ಹಿಡಿದಿದ್ದರು. ಮುನಿಯಪ್ಪ‌ ಕುಟುಂಬಕ್ಕೆ ಟಿಕೆಟ್ ಬೇಡ ಎಂದು ರಮೇಶ್ ಕುಮಾರ್, ಎಂಸಿ ಸುಧಾಕರ್ ಟೀಮ್‌ ಪಟ್ಟು ಬಿಗಿಮಾಡಿತ್ತು. ಸಿ.ಎಂ ಮುನಿಯಪ್ಪ ಅವರನ್ನು ಅಭ್ಯರ್ಥಿ ಮಾಡಿ ಎಂದು ರಮೇಶ್ ಕುಮಾರ್ ಬಣ ಹೇಳುತ್ತಿತ್ತು ಉಭಯ ಬಣಗಳ ಬಡಿದಾಟಕ್ಕೆ ಬ್ರೇಕ್ ಹಾಕಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಕೆ.ಎಚ್.‌ ಮುನಿಯಪ್ಪ ಅವರಿಂದ ಲಾಬಿ

ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಕೆ.ಎಚ್. ಮುನಿಯಪ್ಪ ‌ಅವರು ಇನ್ನಿಲ್ಲದ ಲಾಬಿ ಮಾಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಮಾತನಾಡಿದ್ದರು. ಒತ್ತಡಕ್ಕೆ ಮಣಿದು ಟಿಕೆಟ್ ತಪ್ಪಿಸಿದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಹೇಳಿದ್ದರು. ಅಲ್ಲದೆ, ಈ ಎಲ್ಲ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದರೂ ಅವರು ಮನಸ್ಸು ಮಾಡುತ್ತಿಲ್ಲ ಎಂದು ಶುಕ್ರವಾರವಷ್ಟೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ಇದನ್ನೂ ಓದಿ: Lok Sabha Election 2024: ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಮತ್ತೊಂದು ನೀತಿ ಸಂಹಿತಿ ಉಲ್ಲಂಘನೆ ದೂರು

ಪ್ರಚಾರ ಪ್ರಜಾಧ್ವನಿ ಯಾತ್ರೆ ಮುಂದೂಡಿಕೆ

ಕೋಲಾರ ಸಮಸ್ಯೆ ಬಗೆಹರಿಯದೇ ಇದ್ದಿದ್ದರಿಂದ ಕೋಲಾರದ ಕುರುಡುಮಲೆಯಿಂದಲೇ ಕಾಂಗ್ರೆಸ್ ಆರಂಭಿಸಬೇಕಿದ್ದ ಪ್ರಜಾಧ್ವನಿ ಯಾತ್ರೆ ಪ್ರಚಾರ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿತ್ತು. ಶತಾಯಗತಾಯ ತಮ್ಮ ಅಳಿಯನಿಗೇ ಟಿಕೆಟ್‌ ಸಿಗುವ ವಿಶ್ವಾಸದಲ್ಲಿ ಕೆ.ಎಚ್.‌ ಮುನಿಯಪ್ಪ ಅವರು ಇದ್ದರು. ಬೇರೆ ಅಭ್ಯರ್ಥಿಯನ್ನು ಇಲ್ಲಿ ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದೂ ಹೇಳಿದ್ದರು. ಆದರೆ, ಬದಲಾದ ಸನ್ನಿವೇಶದಲ್ಲಿ ಈಗ ಕಾಂಗ್ರೆಸ್‌ ಹೈಕಮಾಂಡ್‌ ಕೆ.ವಿ. ಗೌತಮ್‌ ಅವರನ್ನು ಆಯ್ಕೆ ಮಾಡಿದೆ.

ಚಿಕ್ಕಪೆದ್ದಣ್ಣಗೂ ಟಿಕೆಟ್‌ ಇಲ್ಲ, ಸಿ.ಎಂ. ಮುನಿಯಪ್ಪಗೂ ಮಿಸ್‌!

ಇಬ್ಬರ ಜಗಳ ಮೂರನೆಯವನಿಗೆ ಲಾಭ ಎನ್ನುವಂತೆ ಕೋಲಾರ ಕಾಂಗ್ರೆಸ್‌ ಕಿತ್ತಾಟದಿಂದ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣ ಅವರಿಗೂ ಟಿಕೆಟ್‌ ಇಲ್ಲದಂತಾಗಿದೆ. ಇತ್ತ ರಮೇಶ್‌ ಕುಮಾರ್‌ ಬಣದ ಸಿ.ಎಂ. ಮುನಿಯಪ್ಪ ಅವರಿಗೂ ಟಿಕೆಟ್‌ ಇಲ್ಲದಂತಾಗಿದೆ.

ಯಾರು ಈ ಕೆ.ವಿ ಗೌತಮ್?

  • ದಲಿತ ಎಡ ಸಮುದಾಯಕ್ಕೆ ಸೇರಿದ ನಾಯಕ
  • ಗೌತಮ್ ತಂದೆ ಬೆಂಗಳೂರು ಮೇಯರ್ ಆಗಿದ್ದವರು
  • ಕೋಲಾರಕ್ಕೆ ನೇರವಾಗಿ ನಂಟು ಇಲ್ಲದಿದ್ದರೂ ಸಹೋದರಿಯರನ್ನು ಈ ಭಾಗದ ವರನಿಗೆ ಮದುವೆ ಮಾಡಿ ಕೊಡಲಾಗಿದೆ.
  • ಹೀಗಾಗಿ ಕೋಲಾರದ ಜತೆ ಬಾಂಧವ್ಯ ಇದೆ
  • ಬೆಂಗಳೂರು ಕೇಂದ್ರ ಕಾಂಗ್ರೆಸ್ ‌ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Kantilal Bhuria: ಮಹಾಲಕ್ಷ್ಮೀ ಯೋಜನೆ ಅಡಿಯಲ್ಲಿ ಒಬ್ಬ ಮಹಿಳೆಯು ವರ್ಷಕ್ಕೆ 1 ಲಕ್ಷ ರೂ. ಪಡೆಯಲಿದ್ದಾರೆ. ನೇರವಾಗಿ ಅವರ ಖಾತೆಗೆ ಹಣ ಜಮೆಯಾಗಲಿದೆ. ಇನ್ನು, ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಅವರಿಗೆ ಎರಡು ಲಕ್ಷ ರೂ. ಸಿಗಲಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಕಾಂತಿಲಾಲ್‌ ಭುರಿಯಾ ಹೇಳಿದ್ದಾರೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Kantilal Bhuria
Koo

ಭೋಪಾಲ್‌: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ಹಣಕಾಸು ನೆರವು ಸೇರಿ ಪಂಚ ನ್ಯಾಯಗಳ ತತ್ವದಲ್ಲಿ ಕಾಂಗ್ರೆಸ್‌ ಪ್ರಾಣಾಳಿಕೆ ಬಿಡುಗಡೆ ಮಾಡಿದೆ. ಒಂದೊಂದು ನ್ಯಾಯ ತತ್ವವೂ ಐದೈದು ಭರವಸೆ ಹೊಂದಿದೆ. ಅಲ್ಲಿಗೆ ಕಾಂಗ್ರೆಸ್‌ 25 ಭರವಸೆಗಳನ್ನು ನೀಡಿದಂತಾಗಿದೆ. ಇನ್ನು, ಇದೇ ಪ್ರಣಾಳಿಕೆಯ ಭರವಸೆಯನ್ನು ಇಟ್ಟುಕೊಂಡು ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಕಾಂತಿಲಾಲ್‌ ಭುರಿಯಾ (Kantilal Bhuria) ನೀಡಿರುವ ಹೇಳಿಕೆಯು ಟೀಕೆಗೆ ಕಾರಣವಾಗಿದೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಆ ಕುಟುಂಬಕ್ಕೆ 2 ಲಕ್ಷ ರೂ. ನೀಡಲಾಗುವುದು” ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಕಾಂತಿಲಾಲ್‌ ಭುರಿಯಾ, “ದೇಶದ ಮಹಿಳೆಯರಿಗಾಗಿ ಕಾಂಗ್ರೆಸ್‌ ಭರ್ಜರಿ ಘೋಷಣೆ ಮಾಡಿದೆ. ಮಹಾಲಕ್ಷ್ಮೀ ಯೋಜನೆ ಅಡಿಯಲ್ಲಿ ಒಬ್ಬ ಮಹಿಳೆಯು ವರ್ಷಕ್ಕೆ 1 ಲಕ್ಷ ರೂ. ಪಡೆಯಲಿದ್ದಾರೆ. ನೇರವಾಗಿ ಅವರ ಖಾತೆಗೆ ಹಣ ಜಮೆಯಾಗಲಿದೆ. ಇನ್ನು, ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಅವರಿಗೆ ಎರಡು ಲಕ್ಷ ರೂ. ಸಿಗಲಿದೆ” ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

ಕಾಂತಿಲಾಲ್‌ ಭುರಿಯಾ ಹೇಳಿಕೆಗೆ ಬಿಜೆಪಿ ವಕ್ತಾರ ನರೇಂದ್ರ ಸಲುಜಾ ತಿರುಗೇಟು ನೀಡಿದ್ದಾರೆ. “ಇಂತಹ ಹೇಳಿಕೆ ನೀಡಿರುವ ಕಾಂತಿಲಾಲ್‌ ಭುರಿಯಾ ವಿರುದ್ಧ ಚುನಾವಣೆ ಆಯೋಗವು ಕ್ರಮ ತೆಗೆದುಕೊಳ್ಳಬೇಕು. ದೇಶದ ನಾಯಕ, ಎರಡೆರಡು ಮದುವೆ, ಬೆತ್ತಲೆ ಸೇರಿ ಹಲವು ವಿಷಯಗಳ ಕುರಿತು ಇವರು ನೀಡಿದ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ” ಎಂದು ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಾಂತಿಲಾಲ್‌ ಭುರಿಯಾ ಅವರು ಮಧ್ಯಪ್ರದೇಶದ ರತ್ಲಾಮ್‌ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ಇವರು ಮಧ್ಯಪ್ರದೇಶ ಅರಣ್ಯ ಸಚಿವ ನಾಗರ್‌ ಸಿಂಗ್‌ ಚೌಹಾಣ್‌ ಅವರ ಪತ್ನಿ, ಬಿಜೆಪಿಯ ಅನಿತಾ ಚೌಹಾಣ್‌ ಅವರನ್ನು ಎದುರಿಸುತ್ತಿದ್ದಾರೆ. ಇವರು ಭಾಷಣ ಮಾಡುವ ವೇಳೆ ವೇದಿಕೆ ಮೇಲೆ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್‌, ರಾಜ್ಯ ಘಟಕದ ಅಧ್ಯಕ್ಷ ಜೀತು ಪಟ್ವಾರಿ ಸೇರಿ ಹಲವರು ಇದ್ದರು.

ಪಂಚ ನ್ಯಾಯ ತತ್ವದಲ್ಲಿ ಯುವಕರಿಗಾಗಿ ಯುವ ನ್ಯಾಯ, ಮಹಿಳೆಯರಿಗೆ ನಾರಿ ನ್ಯಾಯ, ರೈತರಿಗಾಗಿ ಕಿಸಾನ್‌ ನ್ಯಾಯ, ಕಾರ್ಮಿಕರಿಗಾಗಿ ಶ್ರಮಿಕ್‌ ನ್ಯಾಯ ಹಾಗೂ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯ ನೀಡುವ ಹಿಸ್ಸೇದಾರಿ ನ್ಯಾಯ ಎಂಬ ಐದು ಘೋಷಣೆಗಳನ್ನು ಕಾಂಗ್ರೆಸ್‌ ಮಾಡಿದೆ.

ಇದನ್ನೂ ಓದಿ: Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Continue Reading

ದೇಶ

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Rahul Gandhi: ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧಿಸುತ್ತಿರುವ ಕನೌಜ್‌ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ರಾಹುಲ್‌ ಗಾಂಧಿ, ಒಬ್ಬ ವ್ಯಕ್ತಿ ಭಯಗೊಂಡಾಗ ಮಾತ್ರ ತನ್ನ ರಕ್ಷಣೆಗೆ ಇನ್ನೊಬ್ಬರ ಹೆಸರು ಹೇಳುತ್ತಾನೆ. ಅದೇ ರೀತಿ ಇಂಡಿಯಾ ಒಕ್ಕೂಟದಿಂದಾಗಿ ತಮ್ಮ ಸೋಲು ಖಚಿತ ಎಂದು ಅನಿಸಿದಾಗ ಪ್ರಧಾನಿ ಮೋದಿ ತನ್ನ ಇಬ್ಬರು ಸ್ನೇಹಿತರ ಹೆಸರನ್ನು ಎತ್ತಿದ್ದಾರೆ. ಕಾಪಾಡಿ.. ಕಾಪಾಡಿ. ಇಂಡಿಯಾ ಒಕ್ಕೂಟ ನನ್ನನ್ನು ಸೋಲಿಸುತ್ತಾರೆ ಅಂತಾ ಅದಾನಿ ಅಂಬಾನಿಯತ್ತ ಓಡುತ್ತಾರೆ.

VISTARANEWS.COM


on

Rahul gandhi
Koo

ಉತ್ತರಪ್ರದೇಶ: ಲೋಕಸಭಾ ಚುನಾವಣೆ(Lok Sabha Election 2024)ಗಾಗಿ ಕಾಂಗ್ರೆಸ್‌ಗೆ ಅಂಬಾನಿ ಹಾಗೂ ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಗೆ ಇದೀಗ ರಾಹುಲ್‌ ಗಾಂಧಿ(Rahul Gandhi) ತಿರುಗೇಟು ಕೊಟ್ಟಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಬಾನಿ ಅದಾನಿಯ ಹೆದರಿ ಎಲ್ಲೂ ಪ್ರಸ್ತಾಪಿಸಿಯೇ ಇರಲಿಲ್ಲ. ಇದೀಗ ತಾವು ಸೋಲುತ್ತೇವೆ ಎಂಬುದು ಖಚಿತವಾಗಿರುವುದರಿಂದ ಈ ಉದ್ಯಮಿಗಳ ಹೆಸರು ಎತ್ತಿದ್ದಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧಿಸುತ್ತಿರುವ ಕನೌಜ್‌ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಭಯಗೊಂಡಾಗ ಮಾತ್ರ ತನ್ನ ರಕ್ಷಣೆಗೆ ಇನ್ನೊಬ್ಬರ ಹೆಸರು ಹೇಳುತ್ತಾನೆ. ಅದೇ ರೀತಿ ಇಂಡಿಯಾ ಒಕ್ಕೂಟದಿಂದಾಗಿ ತಮ್ಮ ಸೋಲು ಖಚಿತ ಎಂದು ಅನಿಸಿದಾಗ ಪ್ರಧಾನಿ ಮೋದಿ ತನ್ನ ಇಬ್ಬರು ಸ್ನೇಹಿತರ ಹೆಸರನ್ನು ಎತ್ತಿದ್ದಾರೆ. ಕಾಪಾಡಿ.. ಕಾಪಾಡಿ. ಇಂಡಿಯಾ ಒಕ್ಕೂಟ ನನ್ನನ್ನು ಸೋಲಿಸುತ್ತಾರೆ ಅಂತಾ ಅದಾನಿ ಅಂಬಾನಿಯತ್ತ ಓಡುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೇ ಗೊತ್ತಿದೆ ಅದಾನಿ-ಅಂಬಾನಿಯವರು ಟೆಂಪೋಗಟ್ಟಲೇ ಹಣ ಕಳಿಸುತ್ತಾ ಅಂತಾ. ಅವರಿಗೆ ವೈಯಕ್ತಿಕವಾಗಿ ಇದರ ಅನುಭವ ಇದೆ. ಪ್ರಧಾನಿ ಮೋದಿ ಕೇವಲ 22ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಬಿಜೆಪಿ, ನರೇಂದ್ರ ಮೋದಿ ಮತ್ತು ಅಮಿತ್‌ ಶಾ ನಿಮ್ಮನ್ನು ಈ ವಿಚಾರದಿಂದ ಬೇರೆಡೆ ಸೆಳೆಯಲು ಯತ್ನಿಸುತ್ತಾರೆ. ನೀವು ಅದರ ಕಡೆ ವಿಚಲಿತರಾಗಬೇಡಿ ಎಂದು ರಾಹುಲ್‌ ಗಾಂಧಿ ಜನರಲ್ಲಿ ಮನವಿ ಮಾಡಿದರು.

ಮೋದಿ ಹೇಳಿದ್ದೇನು?

ತೆಲಂಗಾಣದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಹುಲ್‌ ಗಾಂಧಿ ಅವರಿಗೆ ತಿರುಗೇಟು ನೀಡಿದರು. “ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದೇ ಕಾರಣಕ್ಕಾಗಿ ರಾಹುಲ್‌ ಗಾಂಧಿ ಅವರು ಅಂಬಾನಿ, ಅದಾನಿ ಬಗ್ಗೆ ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ:Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಕಳೆದ ಐದು ವರ್ಷಗಳಿಂದ ರಾಹುಲ್‌ ಗಾಂಧಿ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರು. ರಾಫೆಲ್‌ ವಿಚಾರವಾಗಿ ಮಾಡಿದ ಆರೋಪವು ನೆಲಕಚ್ಚಿತು. ಅದಾದ ಬಳಿಕ ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಪರೋಕ್ಷ ಆರೋಪ ಶುರುವಿಟ್ಟುಕೊಂಡರು. ಅದಾದ ಬಳಿಕ ಅಂಬಾನಿ-ಅದಾನಿ ಎಂದು ನೇರವಾಗಿ ಆರೋಪ ಮಾಡಿದರು. ಆದರೆ, ಚುನಾವಣೆ ಘೋಷಣೆಯಾಗುತ್ತಲೇ ರಾಹುಲ್‌ ಗಾಂಧಿ ಅವರು ಅಂಬಾನಿ ಹಾಗೂ ಅದಾನಿ ಹೆಸರೇ ಎತ್ತುತ್ತಿಲ್ಲ. ರಾಹುಲ್‌ ಗಾಂಧಿ ಏಕೆ ಈಗ ರಾತ್ರೋರಾತ್ರಿ ಬದಲಾದರು? ಏಕೆ ಅವರು ಅಂಬಾನಿ-ಅದಾನಿ ಹೆಸರು ಹೇಳುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

Continue Reading

ದೇಶ

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Madhavi Latha
Koo

ಹೈದರಾಬಾದ್:‌ ತೆಲಂಗಾಣದ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಚುನಾವಣೆ (Lok Sabha Election) ರಣಕಣವು ಈ ಬಾರಿ ಭಾರಿ ಕುತೂಹಲದಿಂದ ಕೂಡಿದೆ. ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ (Asaduddin Owaisi) ವಿರುದ್ಧ ಬಿಜೆಪಿಯಿಂದ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ (Madhavi Latha) ಕಣಕ್ಕಿಳಿದಿದ್ದಾರೆ. ಪ್ರಖರ ಹಿಂದುತ್ವವಾದಿಯೂ ಆಗಿರುವ ಮಾಧವಿ ಲತಾ ಅವರು ಈಗ ಮುಸ್ಲಿಮರ ಮತಗಳನ್ನೂ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೈದರಾಬಾದ್‌ನಲ್ಲಿರುವ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಮುಸ್ಲಿಂ ಗಲ್ಲಿಗಲ್ಲಿಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಹೌದು, ಹೈದರಾಬಾದ್ ಲೋಕಸಭೆ ಕ್ಷೇತ್ರದಲ್ಲಿ ಶೇ.52ರಷ್ಟು ಮುಸ್ಲಿಮರ ಮತಗಳಿದ್ದರೆ, ಶೇ.48ರಷ್ಟು ಹಿಂದು ಮತದಾರರಿದ್ದಾರೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಅಸಾದುದ್ದೀನ್‌ ಓವೈಸಿಗೆ ಮತ ನೀಡಲಿದ್ದಾರೆ. ಮುಸ್ಲಿಮರ ಮತಗಳಿಲ್ಲದೆ ಗೆಲುವು ಸಾಧಿಸುವುದು ಕಷ್ಟಸಾಧ್ಯ ಎಂಬುದನ್ನು ಅರಿತ ಮಾಧವಿ ಲತಾ ಅವರು ಹೈದರಾಬಾದ್‌ನ ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ನಡೆಸುವ ಮೂಲಕ ಅವರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದಾರೆ. ಮೇ 13ರಂದು ಹೈದರಾಬಾದ್‌ನಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಅವರು ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ.

221 ಕೋಟಿ ರೂ. ಆಸ್ತಿಯ ಒಡತಿ

ಕೊಂಪೆಲ್ಲಾ ಮಾಧವಿ ಲತಾ ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್ ಇಬ್ಬರೂ ವ್ಯಾಪಾರಿಗಳು. ಅವರ ಮೂವರು ಅವಲಂಬಿತ ಮಕ್ಕಳು, 165.46 ಕೋಟಿ ರೂಪಾಯಿಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು ಮಾಧವಿ ಲತಾ ದಂಪತಿ 55.91 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. ತೆಲಂಗಾಣದ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿರುವ 49 ವರ್ಷದ ಮಾಧವಿ ಲತಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡರು. ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಾಧವಿ ಲತಾ ಅವರು ಬಹುಮುಖ ಪ್ರತಿಭೆ ಎನಿಸಿದ್ದಾರೆ. ವಿರಿಂಚಿ ಆಸ್ಪತ್ರೆಯ ಅಧ್ಯಕ್ಷೆಯಾಗಿರುವ ಇವರು ಉದ್ಯಮದ ಜತೆಗೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಬೋಧನೆ, ಆರೋಗ್ಯ ಸೇವೆ ಹಾಗೂ ಆಹಾರ ವಿತರಣೆಯ ಮೂಲಕ ಇವರು ಜನಮಾನಸದಲ್ಲಿ ಜಾಗ ಪಡೆದಿದ್ದಾರೆ. ಭರತನಾಟ್ಯ ಪ್ರವೀಣೆಯೂ ಆಗಿರುವ ಇವರು ಹಿಂದು ಧರ್ಮದ ಕುರಿತು ಮಾಡುವ ಭಾಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ಇವರಿಗೆ ಹೆಚ್ಚು ಅಭಿಮಾನಿಗಳನ್ನು ನೀಡಿದೆ.

ತ್ರಿವಳಿ ತಲಾಕ್‌ ವಿರುದ್ಧ ಹೋರಾಟ

ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿದ್ದ ತ್ರಿವಳಿ ತಲಾಕ್‌ ವಿರುದ್ಧ ಮಾಧವಿ ಲತಾ ಅವರು ಹೋರಾಟ ನಡೆಸಿದ್ದರು. ಅದರಲ್ಲೂ, ಕೇಂದ್ರ ಸರ್ಕಾರವು ತ್ರಿವಳಿ ತಲಾಕ್‌ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಅಸಾದುದ್ದೀನ್‌ ಓವೈಸಿ ಅವರು ಇದನ್ನು ಅಸಾಂವಿಧಾನಿಕ ಎಂದು ಕರೆದಿದ್ದರು. ಆಗ, ತ್ರಿವಳಿ ತಲಾಕ್‌ ಕುರಿತು ಜನರಿಗೆ ತಿಳಿವಳಿಕೆ, ಜಾಗೃತಿ ಮೂಡಿಸುವ ಕುರಿತು ಮಾಧವಿ ಲತಾ ಅವರು ಅಭಿಯಾನ ಆರಂಭಿಸಿದ್ದರು. ಆಗಲೇ ಅಸಾದುದ್ದೀನ್‌ ಓವೈಸಿ ಅವರಿಗೆ ಮಾಧವಿ ಲತಾ ಸೆಡ್ಡು ಹೊಡೆದಿದ್ದರು.

ಇದನ್ನೂ ಓದಿ: Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Continue Reading

ರಾಜಕೀಯ

Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

Lok Sabha Election 2024: 2024ರ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿರುಸಿನ ಪ್ರಚಾರ ಮಾಡಿದ್ದರು. ಒಟ್ಟು 14 ಗ್ಯಾರಂಟಿ ಸಮಾವೇಶಗಳು, 76 ಪ್ರಜಾಧ್ವನಿ ಜನ‌ಸಮಾವೇಶಗಳನ್ನು ನಡೆಸಿದ್ದ ಅವರು, ರಾಜ್ಯಾದ್ಯಂತ 22 ರಿಂದ 26 ಸಾವಿರ ಕಿಲೋ ಮೀಟರ್ ಸಂಚರಿಸಿದ್ದರು. ಸಿಎಂ ರೋಡ್ ಶೋ/ಸಭೆಗಳಲ್ಲಿ ಸರಾಸರಿ 15 ಸಾವಿರ ಮಂದಿ ಭಾಗಿಯಾಗಿದ್ದರು.

VISTARANEWS.COM


on

Lok Sabha Election 2024 26000 km travelled for Lok Sabha campaigning CM to campaign for 14 to 18 hours a day
Koo

ಬೆಂಗಳೂರು: ಈ ಭಾರಿ ಲೋಕಸಭಾ ಚುನಾವಣೆಯನ್ನು (Lok Sabha Election 2024) ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಹಗಲು – ರಾತ್ರಿ ನಿರಂತರ ಪ್ರಚಾರ ಹಾಗೂ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಒಟ್ಟು 14 ಗ್ಯಾರಂಟಿ ಸಮಾವೇಶಗಳು, 76 ಪ್ರಜಾಧ್ವನಿ ಸಮಾವೇಶಗಳನ್ನು ನಡೆಸಿದ್ದಾರೆ. ಇದಕ್ಕಾಗಿ ರಾಜ್ಯಾದ್ಯಂತ ಸುಮಾರು 26 ಸಾವಿರ ಕಿಲೋ ಮೀಟರ್‌ವರೆಗೆ ಸಂಚಾರವನ್ನು ಮಾಡಿದ್ದಾರೆ. ಸಿಎಂ ರೋಡ್‌ ಶೋ (CM Road Show) ಹಾಗೂ ಸಭೆಗಳಲ್ಲಿ ಸರಾಸರಿ 15 ಸಾವಿರ ಮಂದಿ ಭಾಗಿಯಾಗಿದ್ದರು. ಅಲ್ಲದೆ, ದಿನಕ್ಕೆ ಸರಾಸರಿ 14-18 ಗಂಟೆಗಳ ಕಾಲ ಪ್ರಚಾರಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸರಾಸರಿ ದಿನಕ್ಕೆ 14-18 ಗಂಟೆ ಪ್ರಯಾಣ ಮಾಡಿದ್ದಾರೆ. ಇದರಲ್ಲಿ ರಸ್ತೆ ಮಾರ್ಗ ಮತ್ತು ವಾಯು ಮಾರ್ಗಗಳು ಸೇರಿವೆ. ಚುನಾವಣೆ ಘೋಷಣೆ ಆಗುವುದಕ್ಕೂ ಮೊದಲು 14 ಗ್ಯಾರಂಟಿ ಸಮಾವೇಶಗಳನ್ನು ನಡೆಸಿದ್ದ ಸಿಎಂ, ಕೆಲವು ಕಡೆ ಆಯಾ ಭಾಗದ ಸಮುದಾಯ ಮುಖಂಡರ ಜತೆ ಸಂವಾದವನ್ನೂ ನಡೆಸಿದ್ದರು.

ಚುನಾವಣೆ ಘೋಷಣೆಯಾದ ಬಳಿಕ ಮೊದಲ ಮತ್ತು ಎರಡನೇ ಹಂತದ 28 ಲೋಕಸಭಾ ಕ್ಷೇತ್ರಗಳ 76 ಸ್ಥಳಗಳಲ್ಲಿ “ಪ್ರಜಾಧ್ವನಿ-2” ಜನ ಸಮಾವೇಶಗಳ ನಡೆಸಿದ ಅವರು, ಕೇಂದ್ರ ಸರ್ಕಾರದಿಂದ ಅನುದಾನ ತಾರತಮ್ಯ ಹಾಗೂ ಜಿಎಸ್‌ಟಿ ಅನುದಾನ ಹಂಚಿಕೆ ವಿರುದ್ಧವಾಗಿ ಭಾಷಣ ಮಾಡುತ್ತಾ ಬಂದರು. ಜತೆಗೆ ಬಿಜೆಪಿ ಮೇಲೆಯೂ ಅಟ್ಯಾಕ್‌ ಹಾಗೂ ಕೌಂಟರ್‌ ಅಟ್ಯಾಕ್‌ಗಳನ್ನು ಮಾಡುತ್ತಾ ಬಂದರು.

ಮತ ಪ್ರಭುವ ಸೆಳೆಯಲು ಸಿಎಂ ಕಸರತ್ತಿನ ಮಾತುಗಳು ಮತ್ತು ಪ್ರಭಾವ

1) ಇಲ್ಲಿ ನಾನೇ ಅಭ್ಯರ್ಥಿ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದರೆ ನಾನು ಗೆದ್ದಂತೆ!

2) ಅಂಬಾನಿ, ಅದಾನಿ ಬಗ್ಗೆ ನೇರವಾದ ಟೀಕೆ ಜತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಳೆದ ಹತ್ತು ವರ್ಷಗಳ ಆಡಳಿತದ ಬಗ್ಗೆ ಟೀಕೆ.

3) ಸೋಷಿಯಲ್‌ ಮೀಡಿಯಾ ಸಹಿತ ಸಮಾವೇಶಗಳಲ್ಲಿ “ಖಾಲಿ ಚೊಂಬು” ಪ್ರಸ್ತಾಪ.

4) ಅನ್ನ ಭಾಗ್ಯ ಸೇರಿದಂತೆ ಹಲವು ಭಾಗ್ಯಗಳ ಬಗ್ಗೆ ಅಂಕಿ – ಅಂಶಗಳ ಸಹಿತ ವಿವರಣೆ

5) ಪ್ರಧಾನಿ ನರೇಂದ್ರ ಮೋದಿಯವರ “ಅಚ್ಛೇ ದಿನ್ ಆಯೇಂಗೆ” ಎನ್ನುವ ಪದಗಳನ್ನು ಬಳಕೆ ಮಾಡಿ ಲೇವಡಿ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ

6) ಐದೂ ಗ್ಯಾರಂಟಿಗಳ ಬಗ್ಗೆ ಪ್ರಸ್ತಾಪ. ಜತೆಗೆ ದೇಶದಲ್ಲಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿಗಳ ಬಗ್ಗೆ ಜನರಿಗೆ ಮನದಟ್ಟಾಗುವ ರೀತಿ ಭಾಷಣವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

7) ಗ್ಯಾರಂಟಿ ಸಮಾವೇಶಗಳು ಮತ್ತು 76 ಪ್ರಜಾಧ್ವನಿ ಜನ ಸಮಾವೇಶಗಳು ಸೇರಿ 90 ಸಭೆಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಉದ್ದಗಲಕ್ಕೂ ಪ್ರಯಾಣಿಸಿದ್ದು ಅಂದಾಜು 26 ಸಾವಿರ ಕಿಲೋ ಮೀಟರ್ ಆಗಿದೆ. ಈ 90 ಸಭೆಗಳು/ರೋಡ್ ಶೋಗಳಲ್ಲಿ 7 ಸಾವಿರದಿಂದ 60 ಸಾವಿರದವರೆಗೂ ಜನ ಸೇರಿದ್ದರು.

8) ರೋಡ್ ಶೋ/ ಸಭೆಗಳಲ್ಲಿ ಭಾಗವಹಿಸಿದ ಜನರ ಪ್ರಮಾಣ ಸರಾಸರಿ 15 ಸಾವಿರ ಎಂದು ಲೆಕ್ಕ ಹಿಡಿದರೂ ಒಟ್ಟಾರೆ 14 ಲಕ್ಷದಷ್ಟು ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರಾ ನೇರಾ ತಮ್ಮ ಮಾತುಗಳಲ್ಲಿ ಬೆಸೆದಿದ್ದಾರೆ.

Continue Reading
Advertisement
Madara Channaiah Gurupeeta
ಕರ್ನಾಟಕ1 min ago

Madara Channaiah Gurupeeta: ಮಾದಾರ ಚನ್ನಯ್ಯ ಗುರುಪೀಠಕ್ಕೆ ನೂತನ ವಟು ಸ್ವೀಕಾರ

Viral News
ವೈರಲ್ ನ್ಯೂಸ್8 mins ago

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Laila Khan
ಸಿನಿಮಾ18 mins ago

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Kantilal Bhuria
ದೇಶ18 mins ago

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Union Minister Pralhad Joshi latest Statement in hubli
ಕರ್ನಾಟಕ30 mins ago

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Rahul gandhi
ದೇಶ48 mins ago

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Madhavi Latha
ದೇಶ52 mins ago

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

Covishield Vaccine
ಪ್ರಮುಖ ಸುದ್ದಿ1 hour ago

Covishield: ಭಾರತದಲ್ಲೂ ಎಲ್ಲಾ ಕೋವಿಡ್ ಲಸಿಕೆಗಳ ಸೈಡ್‌ ಎಫೆಕ್ಟ್‌ ಪರಿಶೀಲಿಸಿ: ವೈದ್ಯರ ಒತ್ತಾಯ

Kannada New Movie
ಸಿನಿಮಾ1 hour ago

Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

Aravind Kejriwal
ಪ್ರಮುಖ ಸುದ್ದಿ2 hours ago

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ2 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ5 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ11 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ20 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ20 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌