Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ! - Vistara News

Lok Sabha Election 2024

Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

Lok Sabha Election 2024: ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರ ಪ್ರೀತಿಗೆ ಮಣಿಯಬೇಕಾ ಅಥವಾ ರಾಜಕೀಯ ಜನ್ಮ ಕೊಟ್ಟ ರಾಮನಗರ ಜಿಲ್ಲೆಯನ್ನು ಕೈಬಿಡಬೇಕಾ? ಎಂಬ ಜಿಜ್ಞಾಸೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ. ಈ ಸಂಬಂಧ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಕೈಗೊಳ್ಳಿದ್ದಾರೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ (BJP JDS Alliance) ಇನ್ನೂ ನಿಗದಿಯಾದ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಈ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರದ (Mandya Lok Sabha constituency) ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಉಳಿದಿದೆ. ಇಲ್ಲಿ ಈ ಮೊದಲು ಸಿ.ಎಸ್.‌ ಪುಟ್ಟರಾಜು (CS Puttaraju) ಕಣಕ್ಕಿಳಿಯುತ್ತಾರೆ ಎಂದೇ ಇತ್ತು. ಆದರೆ, ಬದಲಾದ ಸನ್ನಿವೇಶದಲ್ಲಿ ಅಲ್ಲಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕಣಕ್ಕಿಳಿದರೆ ಮಾತ್ರ ಗೆಲುವು ಸುಲಭ ಎನ್ನುವ ವಾತಾವರಣ ಇದೆ. ಅಲ್ಲದೆ, ಕಾರ್ಯಕರ್ತರು ಸಹ ಎಚ್‌ಡಿಕೆ ಇಲ್ಲವೇ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಯಲಿ ಎಂದು ಒತ್ತಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರಿಗೆ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ಮಂಡ್ಯವಾ? ಇಲ್ಲವೇ ರಾಮನಗರವಾ? ಎಂಬ ಧರ್ಮಸಂಕಟ ಅವರಿಗೆ ಶುರುವಾಗಿದೆ. ಈ ಮೂಲಕ ಅವರು ಮತ್ತೆ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.

ಸಕ್ಕರೆ ನಾಡಾದ ಮಂಡ್ಯದ ಜೆಡಿಎಸ್‌ ಕಾರ್ಯಕರ್ತರ ಪ್ರೀತಿಗೆ ಮಣಿಯಬೇಕಾ ಅಥವಾ ರಾಜಕೀಯ ಜನ್ಮ ಕೊಟ್ಟ ರಾಮನಗರ ಜಿಲ್ಲೆಯನ್ನು ಕೈಬಿಡಬೇಕಾ? ಎಂಬ ಜಿಜ್ಞಾಸೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ. ಈ ಹಿನ್ನೆಲೆಯಲ್ಲಿ ತೀವ್ರ ಗೊಂದಲಕ್ಕೆ ಎಚ್‌ಡಿಕೆ ಸಿಲುಕಿದ್ದಾರೆ. ಈ ಮೊದಲು ಸಿ.ಎಸ್.‌ ಪುಟ್ಟರಾಜು ಅವರನ್ನೇ ಕಣಕ್ಕಿಳಿಸುವ ನಿರ್ಧಾರವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪುಟ್ಟರಾಜು ಅವರಿಗೆ ಸೂಚನೆಯನ್ನೂ ಕೊಟ್ಟಿದ್ದರು. ಅವರೂ ಸಹ ಪ್ರಚಾರ ಕಾರ್ಯವನ್ನು ಆರಂಭಿಸಿದ್ದರು. ಆದರೆ, ಅಲ್ಲಿನ ಚಿತ್ರಣವೇ ಬದಲಾಯಿತು.

ಕಾಂಗ್ರೆಸ್‌ನಿಂದ ಗುತ್ತಿಗೆದಾರ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಕಣಕ್ಕಿಳಿದರು. ಇತ್ತ ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಯಿಂದ ಟಿಕೆಟ್‌ ಬಯಸಿದ್ದಾರಾದರೂ ಅವರಿಗೆ ಅವಕಾಶ ಸಿಗಲಿಲ್ಲ. ಹಾಗಾಗಿ ಅವರ ಮುಂದಿನ ನಡೆ ಏನು ಎಂಬುದು ಗೊತ್ತಾಗಿಲ್ಲ. ಅವರನ್ನು ಎರಡು ದಿನಗಳ ಹಿಂದೆ ಬಿಜೆಪಿ ವರಿಷ್ಠರು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರಾದರೂ ಮುಂದಿನ ನಿರ್ಧಾರ ಏನು ಎಂಬುದನ್ನು ಸುಮಲತಾ ಸ್ಪಷ್ಟಪಡಿಸಿಲ್ಲ. ಈ ಮಧ್ಯೆ ಸಿ.ಎಸ್.‌ ಪುಟ್ಟರಾಜು ಸಹ ಎಚ್‌.ಡಿ. ಕುಮಾರಸ್ವಾಮಿ ಅವರೇ ಇಲ್ಲಿನ ಅಭ್ಯರ್ಥಿ ಎಂದು ಹೇಳಿದ್ದಾರೆ. ಆದರೆ, ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮತದಾರರು ಕ್ಷೇತ್ರವನ್ನು ಬಿಡಬೇಡಿ ಎಂದು ಪಟ್ಟುಹಿಡಿದಿದ್ದಾರೆ.

ಮಂಡ್ಯದಿಂದ ಸ್ಪರ್ಧೆ ಮಾಡುವ ಚಿಂತನೆ ಏಕೆ?

ಇನ್ನು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಏನು ಕಾರಣ ಎಂಬುದನ್ನು ನೋಡುವುದಾದರೆ, ಜೆಡಿಎಸ್‌ಗೆ ಈಗ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ಜತೆ ಮೈತ್ರಿಯನ್ನು ಮಾಡಿಕೊಳ್ಳಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಕೊಚ್ಚಿ ಹೋಗಿರುವ ಪಕ್ಷವನ್ನು ಮತ್ತೆ ಗಟ್ಟಿಗೊಳಿಸಬೇಕಿದೆ. ಈ ಕಾರಣಕ್ಕೆ ಈಗ ಜೆಡಿಎಸ್‌ ಪಾಲಾಗಿರುವ ಮೂರೂ ಕ್ಷೇತ್ರವನ್ನು ಗೆಲ್ಲಬೇಕು. ಇದೇ ಕಾರಣಕ್ಕೆ ತಾವು ಮಂಡ್ಯದಿಂದ ಸ್ಪರ್ಧೆ ಮಾಡಿದರೆ ಜನರು ಮತ ಹಾಕಿ ಜೆಡಿಎಸ್‌ ಅನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವನ್ನು ಎಚ್‌ಡಿಕೆ ಹೊಂದಿದ್ದಾರೆ. ಇದರ ಜತೆಗೆ ಎನ್‌ಡಿಎ ಸರ್ಕಾರ ರಚನೆ ಬಳಿಕ ಕೇಂದ್ರದಲ್ಲಿ ಮಂತ್ರಿ ಸ್ಥಾನವೂ ಸಿಗಲಿದೆ ಎಂದು ಹೇಳಲಾಗುತ್ತಿದೆ. ಇದರಿಂದ ರಾಜಕೀಯವಾಗಿ ಮತ್ತಷ್ಟು ಶಕ್ತಿಯನ್ನು ಪಡೆಯಬಹುದಾಗಿದೆ.

ಸ್ಪರ್ಧೆ ಬಗ್ಗೆ ಜಿಜ್ಞಾಸೆ ಏಕೆ?

ಈಗಾಗಲೇ ಮಂಡ್ಯ ಸ್ಪರ್ಧೆ ಬಗ್ಗೆ ಕೂಗೆದ್ದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಮತದಾರರು ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಕ್ಷೇತ್ರ ಬಿಡದಂತೆ ಮನವಿ ಮಾಡಿದ್ದಾರೆ. ನಮ್ಮನ್ನು ಬಿಟ್ಟು ಹೋಗಬೇಡಿ. ನಮ್ಮನ್ನು ಅನಾಥರಾನ್ನಾಗಿ ಮಾಡಬೇಡಿ ಎಂದು ಒತ್ತಾಯ ಮಾಡಿದ್ದಾರೆ. ಹೀಗಾಗಿ ರಾಜಕೀಯವಾಗಿ ಜನ್ಮ ಕೊಟ್ಟ ರಾಮನಗರ ಜಿಲ್ಲೆ ಬಿಟ್ಟುಕೊಡಬೇಕಾ ಎಂಬ ಜಿಜ್ಞಾಸೆಯಲ್ಲಿ ಎಚ್‌ಡಿಕೆ ಇದ್ದಾರೆ.

ಇದನ್ನೂ ಓದಿ: Lok Sabha Election 2024: ರೆಸಾರ್ಟ್‌ನಲ್ಲೇ ಆಪರೇಷನ್‌ ಹಸ್ತ ಶುರು ಮಾಡಿದ ಸಿಎಂ; ಬಿಎಸ್‌ವೈ ಆಪ್ತರೇ ಟಾರ್ಗೆಟ್‌!

ಸ್ಪರ್ಧೆ ಬಗ್ಗೆ ಇಂದೇ ನಿರ್ಧಾರ

ರಾಮನಗರ ಜನತೆಯ ಆಶೀರ್ವಾದದಿಂದ ಗೆದ್ದು ಮುಖ್ಯಮಂತ್ರಿ ಪಟ್ಟವನ್ನು ಅಲಂಕರಿಸಿದ್ದ ಕುಮಾರಸ್ವಾಮಿ ಅವರಿಗೆ ಈಗ ಮಂಡ್ಯದ ಪ್ರತಿಷ್ಠೆಗೆ ಮಣಿಯಬೇಕಾ? ಎಂಬ ಪ್ರಶ್ನೆ ಎದುರಾಗಿದೆ. ರಾಜಕೀಯವಾಗಿ ದೇವೇಗೌಡರಿಗೂ ಜನ್ಮಕೊಟ್ಟದ್ದು ಇದೇ ರಾಮನಗರ ಜನತೆಯಾಗಿದ್ದಾರೆ. ಹೀಗಾಗಿ ಗೊಂದಲದಲ್ಲಿ ಎಚ್‌ಡಿಕೆ ಇದ್ದಾರೆ. ಈ ಬಗ್ಗೆ ಇಂದು (ಮಂಗಳವಾರ) ತಮ್ಮ ಜೆ.ಪಿ. ನಗರ ನಿವಾಸದಲ್ಲಿ ಜೆಡಿಎಸ್‌ ಕೋರ್‌ ಕಮಿಟಿ ಸಭೆ ಕರೆದಿರುವ ಎಚ್‌ಡಿಕೆ ಅಲ್ಲಿ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Yogi Adityanath: ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, “ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರಿಗೆ ಅವರ ಆಯ್ಕೆಯ ಆಹಾರವನ್ನು ತಿನ್ನುವ ಸ್ವಾತಂತ್ರ್ಯವನ್ನು ನೀಡಲು ಬಯಸುತ್ತದೆ. ಅಂದರೆ ಅವರು ಗೋಹತ್ಯೆಗೆ ಅವಕಾಶ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

VISTARANEWS.COM


on

Yogi Adithyanatha
Koo

ಲಖನೌ: “ಕಾಂಗ್ರೆಸ್ (Congress) ಪಕ್ಷವು ಅಲ್ಪಸಂಖ್ಯಾತರಿಗೆ (minorities) ಗೋಮಾಂಸ (beef) ತಿನ್ನುವ ಹಕ್ಕನ್ನು ನೀಡಲು ಬಯಸುತ್ತಿದೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (UP CM Yogi Adityanath) ಶುಕ್ರವಾರ ಟೀಕಿಸಿದ್ದಾರೆ. “ಈ ನಾಚಿಕೆಯಿಲ್ಲದ ಜನರು ಗೋಮಾತೆಗಳನ್ನು ಕಟುಕರ ಕೈಗೆ ಒಪ್ಪಿಸಲು ಬಯಸುತ್ತಿದ್ದಾರೆ” ಎಂದು ಅವರು ಆಕ್ರೋಶಿಸಿದ್ದಾರೆ.

ಮೊರಾದಾಬಾದ್‌ನಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, “ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರಿಗೆ ಅವರ ಆಯ್ಕೆಯ ಆಹಾರವನ್ನು ತಿನ್ನುವ ಸ್ವಾತಂತ್ರ್ಯವನ್ನು ನೀಡಲು ಬಯಸುತ್ತದೆ. ಅಂದರೆ ಅವರು ಗೋಹತ್ಯೆಗೆ ಅವಕಾಶ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.

ಸಂಭಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರಮೇಶ್ವರ್ ಲಾಲ್ ಸೈನಿ ಪರ ರ್ಯಾಲಿಯಲ್ಲಿ ಯೋಗಿ ಆದಿತ್ಯನಾಥ್ ಮಾತನಾಡಿದರು. “ಸ್ತ್ರೀಧನ (ಮಹಿಳೆಯರ ಚಿನ್ನಾಭರಣಗಳು) ಅನ್ನು ಕಾಂಗ್ರೆಸ್‌ ಕಸಿದುಕೊಂಡು ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೋರರಿಗೆ ಹಂಚಲಿದೆ” ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ “ಪಿತ್ರಾರ್ಜಿತ ತೆರಿಗೆ” ಆರೋಪವನ್ನು ಉಲ್ಲೇಖಿಸಿದ ಅವರು, “ಕಾಂಗ್ರೆಸ್ ಜನರ ಆಸ್ತಿಯ ಎಕ್ಸ್-ರೇ ಮಾಡುವ ಭರವಸೆ ನೀಡಿದೆ” ಎಂದು ಆರೋಪಿಸಿದರು.

“ಇದರರ್ಥ, ಯಾರದಾದರೂ ಮನೆಯಲ್ಲಿ ನಾಲ್ಕು ಕೋಣೆಗಳಿದ್ದರೆ, ಅದರಲ್ಲಿ ಎರಡನ್ನು ಅವರು ಕಸಿದುಕೊಳ್ಳುತ್ತಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಮಹಿಳೆಯರ ಆಭರಣಗಳನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಎಂದು ಹೇಳುತ್ತದೆ. ಇದನ್ನು ದೇಶ ಎಂದಿಗೂ ಒಪ್ಪಿಕೊಳ್ಳುವುದಿಲ್ಲ” ಎಂದು ಅವರು ಹೇಳಿದರು. “ಕರ್ನಾಟಕದಲ್ಲಿ SC/ST/OBC ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಪ್ರಯತ್ನಿಸಿದೆ. ಆ ಪಕ್ಷವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾದಿಂದ ಮುಸ್ಲಿಮರಿಗೆ 6 ಪ್ರತಿಶತ ಮೀಸಲಾತಿ ನೀಡುತ್ತದೆ” ಎಂದು ಪ್ರತಿಪಾದಿಸಿದರು.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಅವರು ರಾಮನ ಅಸ್ತಿತ್ವವನ್ನು ಪ್ರಶ್ನಿಸುವವರು. ಅವರ ಸರ್ಕಾರ ಇದ್ದಾಗ ಭಗವಾನ್ ರಾಮನ ಅಸ್ತಿತ್ವವನ್ನು ಪ್ರಶ್ನಿಸುತ್ತಿದ್ದರು. ಇದು ಅವರ ದ್ವಂದ್ವ ನೀತಿಗೆ ಉದಾಹರಣೆಯಾಗಿದೆ” ಎಂದಿದ್ದಾರೆ.

ಈ ವಾರದ ಆರಂಭದಲ್ಲಿ ಯೋಗಿ ಆದಿತ್ಯನಾಥ್ ಅವರು, ದೇಶದ ಮೇಲೆ ಶರಿಯಾ ಕಾನೂನನ್ನು ಹೇರಲು ಕಾಂಗ್ರೆಸ್ ಬಯಸಿದೆ ಎಂದು ಹೇಳಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ ಶರಿಯಾ ಕಾನೂನನ್ನು ಜಾರಿಗೆ ತರಲು ಉದ್ದೇಶಿಸಿರುವುದು ಗೊತ್ತಾಗುತ್ತದೆ” ಎಂದು ಯೋಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Continue Reading

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

Lok Sabha Election 2024

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Lok Sabha Election 2024: ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ನಿನ್ನೆ (ಏಪ್ರಿಲ್‌ 26) ಲೋಕಸಭೆ ಚುನಾವಣೆ (Lok Sabha Election 2024) ಎರಡನೇ ಹಂತದ ಮತದಾನ (voting) ನಡೆಯಿತು. ಇದರಲ್ಲಿ ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಮತ್ತು ಯಾವ ರಾಜ್ಯಗಳಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ. ತ್ರಿಪುರಾದಲ್ಲಿ ಅತಿ ಹೆಚ್ಚು ಅಂದಾಜು 77.94% ಮತದಾನವಾಗಿದೆ.

ನಂತರ ಮಣಿಪುರ (76.46%), ಛತ್ತೀಸ್‌ಗಢ (72.51%), ಪಶ್ಚಿಮ ಬಂಗಾಳ (71.84%), ಅಸ್ಸಾಂ (70.68%), ಕರ್ನಾಟಕದಲ್ಲಿ 69.23%, J&K (67.22%), ಮತ್ತು ಕೇರಳ (64.99%) ಮತದಾನ ದಾಖಲಿಸಿವೆ. ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಅಂದಾಜು ಮತದಾನವಾಗಿದೆ (53.02%). ರಾಜಸ್ಥಾನದಲ್ಲಿ 59.69%, ಮಧ್ಯಪ್ರದೇಶದಲ್ಲಿ 55.19%, ಮಹಾರಾಷ್ಟ್ರ 53.71% ಮತ್ತು ಬಿಹಾರ 53.60% ಮತದಾನವಾಗಿದೆ.

ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಿನ್ನೆ ನಡೆದಿತ್ತು. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರಿಕರು ತಮ್ಮ ಹಕ್ಕನ್ನು ಚಲಾಯಿಸಿದ್ದರು. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Continue Reading

Lok Sabha Election 2024

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Lok Sabha Election: ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

VISTARANEWS.COM


on

lok sabha election
Koo

ಬೆಂಗಳೂರು : ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ. ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಬಹುತೇಕ ಶಾಂತಿಯುತ ಮತದಾನ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಸಿಇಸಿ ಶ್ರೀ ರಾಜೀವ್ ಕುಮಾರ್ ನೇತೃತ್ವದ ಆಯೋಗವು ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಮತ್ತು ಶ್ರೀ ಸುಖ್ಬೀರ್ ಸಿಂಗ್ ಸಂಧು ಅವರೊಂದಿಗೆ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಯಿತು. ಮತದಾರರು ಭಯ ಅಥವಾ ಬೆದರಿಕೆಯಿಲ್ಲದೆ ಮತ ಚಲಾಯಿಸಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಾಯಿತು. 1 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.

ಬಿಹಾರದ ಬಂಕಾ, ಮಾಧೇಪುರ, ಖಗರಿಯಾ ಮತ್ತು ಮುಂಗೇರ್ ಕ್ಷೇತ್ರಗಳ ಅನೇಕ ಮತಗಟ್ಟೆಗಳಲ್ಲಿ ಮತದಾನದ ಸಮಯವನ್ನು ಸಂಜೆ 6 ಗಂಟೆಯ ಬಳಿಕವೂ ವಿಸ್ತರಿಸಲಾಗಿತ್ತು. ಎರಡನೇ ಹಂತದಲ್ಲಿ, ಛತ್ತೀಸ್​​ಗಢದ ಬಸ್ತಾರ್ ಮತ್ತು ಕಂಕೇರ್ ಪಿಸಿಗಳ 46 ಗ್ರಾಮಗಳ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಸ್ವಂತ ಗ್ರಾಮದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಗ್ರಾಮಸ್ಥರ ಅನುಕೂಲಕ್ಕಾಗಿ ಈ ಪಿಸಿಗಳಲ್ಲಿ ಮೊದಲ ಬಾರಿಗೆ 102 ಹೊಸ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಯಿತು

ಕ್ರಿಕೆಟ್ ತಾರೆಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಅವರು ಬೆಂಗಳೂರಿನ ವಿವಿಧ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. ಶಾಯಿ ಹಾಕಿದ ಬೆರಳುಗಳಿಂದ ಪೋಸ್ ನೀಡಿದ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮಹತ್ವದ ಸಂದೇಶವನ್ನು ಯುವಕರಿಗೆ ತಲುಪಿಸಿದರು.

Continue Reading
Advertisement
ದೇಶ3 mins ago

Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

road Accident in kolar evm
ಕೋಲಾರ12 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Vampire Facial
ಆರೋಗ್ಯ25 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ28 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು43 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ50 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ1 hour ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ1 hour ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ1 hour ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್1 hour ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ12 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ24 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌