Lok Sabha Election 2024: ಇನ್ನೆರಡು ದಿನದಲ್ಲಿ ನನಗೆ ಮತ್ತೆ ಆಪರೇಷನ್‌; ನಮ್ಮನ್ನು ಉಳಿಸಿಕೊಳ್ಳಿ ಎಂದ ಎಚ್‌ಡಿಕೆ - Vistara News

Lok Sabha Election 2024

Lok Sabha Election 2024: ಇನ್ನೆರಡು ದಿನದಲ್ಲಿ ನನಗೆ ಮತ್ತೆ ಆಪರೇಷನ್‌; ನಮ್ಮನ್ನು ಉಳಿಸಿಕೊಳ್ಳಿ ಎಂದ ಎಚ್‌ಡಿಕೆ

Lok Sabha Election 2024: ದೇವೇಗೌಡರ ಹೆಸರು ಉಳಿಸಲು ಈ ಮೈತ್ರಿಯ ತೀರ್ಮಾನ ಮಾಡಿದ್ದೇನೆ. ಅವರ ಹೆಸರು ಹಾಳು ಮಾಡಲು ಅಲ್ಲ. ನಾನು ಬಿಜೆಪಿ ನಾಯಕರ ಮನೆಗೆ ಹೋದವನಲ್ಲ. ಕಳೆದ ಚುನಾವಣೆಯಲ್ಲಿ ಏನು ಕುತಂತ್ರ ಆಯ್ತು? ಎರಡು ಪಕ್ಷಗಳು ಸೇರಿ ಜೆಡಿಎಸ್ ಮುಗಿಸಲು ತೀರ್ಮಾನ ಮಾಡಿದ್ದವು. ನಾವು ತಪ್ಪು ಮಾಡಿದ್ದರೆ ಕಾರ್ಯಕರ್ತರ ಕ್ಷಮೆ ಕೇಳುತ್ತೇನೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Lok Sabha Election 2024 I will have another heart operation says HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ನನಗೆ ಚಿಕ್ಕ ವಯಸ್ಸಿನಿಂದಲೇ ಆರೋಗ್ಯ ಸಮಸ್ಯೆ ಇದೆ. ಈಗಾಗಲೇ ಎರಡು ಬಾರಿ ಹೃದಯ ಚಿಕಿತ್ಸೆ ಆಗಿದೆ. ಈಗ ಮತ್ತೆ ಆಪರೇಷನ್‌ಗೆ ಹೋಗಬೇಕಾದ ಪರಿಸ್ಥಿತಿಗೆ ಬಂದಿದ್ದೇನೆ. ನನಗೆ ನನ್ನ ಆರೋಗ್ಯಕ್ಕಿಂತ ಜನರ ಹಿತ ಮುಖ್ಯ. ಇನ್ನೆರಡು ದಿನದಲ್ಲಿ ನಾನು ಮತ್ತೆ ಆಸ್ಪತ್ರೆಗೆ ಸೇರಬೇಕು. ಈ ಜಿಲ್ಲೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಯಿಂದ‌ ಯಾವುದೇ ವ್ಯತ್ಯಾಸ ಆಗಬಾರದು. ಕೈ ಜೋಡಿಸಿ ಮನವಿ ಮಾಡುತ್ತೇನೆ. ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ (Prajwal Revanna) ಅಭ್ಯರ್ಥಿಯಾಗಿದ್ದು, ನಾನು ಎಂದು ಭಾವಿಸಿ ಎಲ್ಲರೂ ಮತ ಹಾಕಿ ಎಂದು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ. ಅಲ್ಲದೆ, ಈ ಲೋಕಸಭಾ ಚುಣಾವಣೆಯಲ್ಲಿ (Lok Sabha Election 2024) ಜೆಡಿಎಸ್‌ ಪಕ್ಷವನ್ನು (JDS Karnataka) ಉಳಿಸಿ ಎಂದು ಕೋರಿದ್ದಾರೆ.

ಹಾಸನದಲ್ಲಿ ಜೆಡಿಎಸ್‌ನ ಶಾಸಕರು, ಮಾಜಿ ಶಾಸಕರು, ಚುನಾಯಿತ ಪ್ರತಿನಿಧಿಗಳು, ಮಾಜಿ ಸದಸ್ಯರು ಹಾಗೂ ಪ್ರಮುಖರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ‌ಎಚ್.ಡಿ. ದೇವೇಗೌಡರನ್ನು ಇಲ್ಲಿ ಚುನಾವಣೆಯಲ್ಲಿ ಸೋಲಿಸಿದ್ದೀರಿ. ಆದರೂ ಅವರು ಹಾಸನವನ್ನು ಮರೆಯಲಿಲ್ಲ ಅವರು ಜೀವನದಲ್ಲಿ ಎಂದೂ ತಮ್ಮ ಜಿಲ್ಲೆಯನ್ನು ಮರೆಯಲಿಲ್ಲ. ಅವರ ಮಗನಾಗಿ ಎಚ್.ಡಿ. ರೇವಣ್ಣ ಅವರು ದೇವೇಗೌಡರು ಮಾಡಿರದ ಹಲವಾರು ಕೆಲಸವನ್ನು ಮಾಡಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮ ಹಾಕಿದ್ದಾರೆ. ದೇವಸ್ಥಾನ, ರಸ್ತೆಗಳು ಎಲ್ಲವೂ ರೇವಣ್ಣನ ಕೆಲಸವನ್ನು ಹೇಳುತ್ತಿವೆ. ಇಷ್ಟೆಲ್ಲ ಮಾಡಿ ಉಪಯೋಗ ಏನು? ನಮ್ಮಲ್ಲಿರುವ ಸಣ್ಣ ಪುಟ್ಟ ತಪ್ಪುಗಳು ಆಕ್ರೋಶ ಆಗಿ ತಿರುಗಿದರೆ ಹೇಗೆ? ನಾವು ಸ್ವಾರ್ಥಕ್ಕೆ ಬದುಕಿಲ್ಲ. ಅಧಿಕಾರ ಸಿಕ್ಕಾಗ ನಾಡು ಕಟ್ಟಲು ಕೆಲಸ ಮಾಡಿದ್ದೇವೆ. ಹೀಗಾಗಿ ಈ ಬಾರಿ ನಮ್ಮ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬೆಂಬಲಿಸಿ ಎಂದು ಕೋರಿದ್ದಾರೆ.

ನಮ್ಮನ್ನು ಉಳಿಸಿಕೊಳ್ಳಿ

2018ರಲ್ಲಿ ನಾನೇ ಸಿಎಂ ಆದೆ. ಕಾಂಗ್ರೆಸ್ ಜತೆ ಹೊಂದಾಣಿಕೆ ಆಯಿತು. ನಾವು ಬೇಡ ಎಂದರೂ ಹೊಂದಾಣಿಕೆ ಮಾಡಿಕೊಂಡರು. ಈಗ ಸಿಎಂ ಮಂಡ್ಯ ಜಿಲ್ಲೆಯ ಚುನಾವಣೆ ಬಗ್ಗೆ ಸತ್ಯ ಹೇಳಿದ್ದಾರೆ. ಅಲ್ಲಿನ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರು ಕಾರಣ ಎಂದು ಸತ್ಯ ಹೇಳಿದ್ದಾರೆ. ನಾನು ನನ್ನ ಮಗ ನಿಖಿಲ್‌ಗೆ ಅಲ್ಲಿ ಟಿಕೆಟ್‌ ಬೇಡ ಎಂದು ಹೇಳಿದ್ದೆ. ನಾವು ಅಲ್ಲಿ ಮೂರು ಸಚಿವರು, ಶಾಸಕರು ಇದ್ದರೂ ಗೆಲ್ಲಲು ಆಗಲಿಲ್ಲ. ನಾವು ತಪ್ಪು ಮಾಡಿದೆವು ಎಂದು ಸೋಲಿಸಿದರೇ? ಖಂಡಿತಾ ಅಲ್ಲ. ಅಂದು ನಮ್ಮ ಸೋಲಿಗೆ ಇದೇ ಕಾಂಗ್ರೆಸ್, ಇದೇ ಬಿಜೆಪಿ ಕಾರಣವಾಯಿತು. ಇದೇ ಸ್ಥಿತಿ ನನ್ನ ಸಹೋದರನ ಮಗನಿಗೆ ಆಗಬಾರದು. ನಮ್ಮನ್ನು ಉಳಿಸಿಕೊಳ್ಳಿ ಎಂದು ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಹಾಸನಕ್ಕೆ ನಾನೇ ಅಭ್ಯರ್ಥಿ ಎಂದು ಭಾವಿಸಿ

ಈಗ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅಲೆ, ರಾಮ ಮಂದಿರದ ಅಲೆ ಇದೆ. ಇಷ್ಟಿದ್ದರೂ ನಮ್ಮ ಕರ್ನಾಟಕ ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ಶಕ್ತಿ ಕೊಡುತ್ತಿದೆ. ವಿಜಯಪುರ, ಕಲಬುರಗಿ ಕ್ಷೇತ್ರಗಳಲ್ಲಿ ಲಕ್ಷ ಲಕ್ಷ ಮತದಾರರು ಇದ್ದಾರೆ. ನಾನು ಹಾಸನದ ಬಿಜೆಪಿ ಮುಖಂಡರಿಗೆ ಮನವಿ ಮಾಡುತ್ತೇನೆ. ದೇವೇಗೌಡರ ಹೆಸರು ಉಳಿಸಲು ಈ ಮೈತ್ರಿಯ ತೀರ್ಮಾನ ಮಾಡಿದ್ದೇನೆ. ಅವರ ಹೆಸರು ಹಾಳು ಮಾಡಲು ಅಲ್ಲ. ನಾನು ಬಿಜೆಪಿ ನಾಯಕರ ಮನೆಗೆ ಹೋದವನಲ್ಲ. ಕಳೆದ ಚುನಾವಣೆಯಲ್ಲಿ ಏನು ಕುತಂತ್ರ ಆಯ್ತು? ಎರಡು ಪಕ್ಷಗಳು ಸೇರಿ ಜೆಡಿಎಸ್ ಮುಗಿಸಲು ತೀರ್ಮಾನ ಮಾಡಿದ್ದವು. ನಾವು ತಪ್ಪು ಮಾಡಿದ್ದರೆ ಕಾರ್ಯಕರ್ತರ ಕ್ಷಮೆ ಕೇಳುತ್ತೇನೆ. ನೀವು ನಮ್ಮನ್ನು ಸೋಲಿಸಿಲ್ಲ, ನಾವೇ ಮೈ ಮರೆತಿದ್ದೇವೆ. ಪಕ್ಷ ಕಟ್ಟಬೇಕು ಎಂದು ನಿರಂತರ 90 ದಿನ ಶ್ರಮ ಹಾಕಿದೆ. ಎಲ್ಲ ಕಡೆ ಜನ ಸಾಗರವೇ ಸೇರಿತು. ಆದರೆ ಯಾರ ಕೆಟ್ಡ ದೃಷ್ಟಿ ಬಿತ್ತೋ ಗೊತ್ತಿಲ್ಲ. 19 ಸ್ಥಾನಕ್ಕೆ ಇಳಿದಿದ್ದೇವೆ. ಈಗ ಈ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್‌ ಅಲ್ಲ ಕುಮಾರಸ್ವಾಮಿ ಎಂದು ಭಾವಿಸಿ ತೀರ್ಮಾನ ಮಾಡಿ ಎಂದು ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಎಲ್ಲ ಕಡೆ ಸ್ಪರ್ಧಿಸುವ ಶಕ್ತಿ ನಮಗಿಲ್ಲ

ಮಂಡ್ಯ, ಕೋಲಾರ, ಹಾಸನ ಜಿಲ್ಲೆಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್‌ ನಾಯಕರು ತೀರ್ಮಾನ ಮಾಡಿದ್ದಾರೆ. ಇನ್ನೂ ಹೆಚ್ಚಿನ ಕ್ಷೇತ್ರಗಳನ್ನು ಅವರು ಕೊಡವವರಿದ್ದರು. ಆದರೆ, ಅಲ್ಲೆಲ್ಲ ಚುನಾವಣೆ ಮಾಡೋ ಶಕ್ತಿ ನಮಗಿಲ್ಲ. ನಾನು ಅಷ್ಟು ಬೇಗ ಸಾಯಲ್ಲ. ನಿಮ್ಮ ಜತೆ ಇರುತ್ತೇನೆ. ಭಗವಂತ ನನಗೆ ಆಯಸ್ಸು ಕೊಡುತ್ತಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು

ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ಆದರೆ, ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ, ಅವನು ಸ್ವಲ್ಪ ಮುಂಗೋಪಿ, ಬೈಯ್ತಾನೆ. ಅದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ. ಅವನನ್ನು ಕ್ಷಮಿಸಿಬಿಡಿ. ನಮ್ಮಲ್ಲಿ ತಪ್ಪುಗಳಾಗಿರಬಹುದು. ಆದರೆ ತಿದ್ದಿಕೊಳ್ಳಲು ಅವಕಾಶ ಕೊಡಿ. ಜನರು ಕ್ಷಮಿಸುತ್ತಾರೆ ಅದರಲ್ಲಿ ನಂಬಿಕೆ‌ ಇದೆ. ಈ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ. ದಯವಿಟ್ಟು ಪಕ್ಷ ಉಳಿಸಿಕೊಡಿ ಎಂದು ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ನನ್ನ ಹತ್ತಿರ ಟನ್‌ಗಟ್ಟಲೆ ದುಡ್ಡು ಇಲ್ಲ

ನನ್ನ ಹತ್ತಿರ ಟನ್‌ಗಟ್ಟಲೆ ದುಡ್ಡು ಇಲ್ಲ. ನಾನು ಆಸ್ತಿ ಸಂಪಾದನೆ ಮಾಡಿಲ್ಲ. ನಿಮ್ಮಂತಹ ಲಕ್ಷಾಂತರ ಜನರನ್ನು ಸಂಪಾದಿಸಿದ್ದೇನೆ. ಇವನು ರೇವಣ್ಣನ ಮಗ ಅಲ್ಲ, ನನ್ನ ಮಗ. ಬಹಳಷ್ಟು ಬದಲಾವಣೆ ತರುತ್ತೇನೆ. ಅವನೂ ಬದಲಾಗುತ್ತಾನೆ. ಎಲ್ಲ ರೀತಿಯ ಬದಲಾವಣೆ ತರಲು ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಈ ಬಾರಿ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ. ಮಂಡ್ಯದಲ್ಲಿ ಅರ್ಜಿ ಹಾಕಿ ಹೋಗು ಅಂತಾರೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ನಿಲ್ಲಿ ಅಂತಾರೆ. ಯಾರ ಯಾರ ಕುಟುಂಬದ ಎಷ್ಟೆಷ್ಟು ಮಂದಿ ರಾಜಕೀಯದಲ್ಲಿದ್ದಾರೆ ಅಂತ ಲೆಕ್ಕ ಹಾಕೋಣವೇ? ದೇವೇಗೌಡರ ಕುಟುಂಬದ ಬಗ್ಗೆ ಮಾತ್ರ ಚರ್ಚೆ ಆಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಬೇಸರ ಹೊರಹಾಕಿದರು.

ಡಾ. ಮಂಜುನಾಥ್‌ಗೆ ಮಾಧ್ಯಮದವರಿಂದ ಪ್ರಚಾರ

ಡಾ. ಮಂಜುನಾಥ್ ಅವರನ್ನು ಅಭ್ಯರ್ಥಿ ಮಾಡಲು ನಾವು ತೀರ್ಮಾನ ಮಾಡಿರಲಿಲ್ಲ. ಹದಿನೇಳು ವರ್ಷ ಅವರ ಸೇವೆ ನೋಡಿ ಅವರೇ ಅಭ್ಯರ್ಥಿ ಆಗಬೇಕು ಅಂತ ಮಾಧ್ಯಮದವರೇ ಶುರು ಮಾಡಿದರು. ಮಾಧ್ಯಮಗಳಲ್ಲೇ ಡಾ.ಮಂಜುನಾಥ್ ರಾಜಕೀಯಕ್ಕೆ ಬರಬೇಕು ಎಂದು ಪ್ರಚಾರ ಮಾಡಲಾಯಿತು. ಅದಕ್ಕಾಗಿ ನಿಮಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಮಗೂ ನೀವು ಆ ರೀತಿಯ ಪ್ರಚಾರ ಕೊಡಲಿಲ್ಲ. ಡಾ.ಮಂಜುನಾಥ್ ಈ ಜಿಲ್ಲೆಯ ಮಣ್ಣಿನ ಮಗ. ಬಿಜೆಪಿ ಹೈಕಮಾಂಡ್ ನಾಯಕರು ನಿಮ್ಮ ಭಾವ ಅವರನ್ನು ಒಪ್ಪಿಸಬೇಕು ಎಂದು ಮನವಿ ಮಾಡಿದರು. ಹೀಗಾಗಿ ಅವರನ್ನು ಒಪ್ಪಿಸಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಮಂಡ್ಯ ಜೆಡಿಎಸ್‌ಗೆ ಎಂದ ಎಚ್‌ಡಿಕೆ; ಸುಮಲತಾ ಮುಂದಿನ ನಡೆ ಏನು?

ಇಲ್ಲಿ ಕೂಗಿದರೆ ಕನಕಪುರಕ್ಕೆ ಕೇಳಬೇಕು

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ. ಮಂಜುನಾಥ್ ಸ್ಪರ್ಧಿಸುತ್ತಿರುವುದರಿಂದ ಕನಕಪುರದಿಂದ ಬಂದು ಇಲ್ಲಿ ಜೆಡಿಎಸ್ ಅನ್ನು ಸೋಲಿಸುತ್ತೇವೆ ಎಂದು ಹೇಳುತ್ತಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಇಲ್ಲಿ ಬಂದು ಹಾಸನದಲ್ಲಿ ಕೂಗಿದರೆ ಹೊಳೆನರಸೀಪುರಕ್ಕೆ ಕೇಳಬೇಕು ಎಂದು ಹೇಳುತ್ತಾರೆ. ರಾಜಕೀಯದಲ್ಲಿ ಸೋಲು, ಗೆಲುವು ಸಹಜ. ನಾವು ಗೆದ್ದಾಗ ದುರಂಹಕಾರ ಮಾಡಿಲ್ಲ, ಸೋತಾಗ ಕುಗ್ಗಿಲ್ಲ. ಇಲ್ಲಿ ಕೂಗಿದರೆ ಕನಕಪುರಕ್ಕೆ ಕೇಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading

ಪ್ರಮುಖ ಸುದ್ದಿ

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಪಕ್ಷವು ಹಿಂದು ವಿರೋಧಿ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Vadra
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಧರ್ಮ, ಜಾತಿ, ರಾಮಮಂದಿರ, ಮೀಸಲಾತಿ ಸೇರಿ ಹತ್ತಾರು ವಿಷಯಗಳು ಮುನ್ನೆಲೆಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್‌ ಹಿಂದು ವಿರೋಧಿ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ತಿರುಗೇಟು ನೀಡಿದ್ದಾರೆ. “ಮಹಾತ್ಮ ಗಾಂಧೀಜಿ (Mahatma Gandhi) ಅವರು ಕೊನೆಯುಸಿರೆಳೆಯುವ ಮೊದಲೂ ಹೇ ರಾಮ್‌ ಎಂದಿದ್ದರು. ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಹಾಗೆಯೇ, ಹಿಂದು ಧರ್ಮದ ಆಶಯಗಳಂತೆ ಸ್ವಾತಂತ್ರ್ಯ ಹೋರಾಟ ಮಾಡಲಾಗಿದೆ” ಎಂದಿದ್ದಾರೆ.

ಇಂಡಿಯಾ ಟುಡೇಗೆ ಸಂದರ್ಶನ ನೀಡಿದ ವೇಳೆ ಅವರು ಈ ರೀತಿಯ ಪ್ರಸ್ತಾಪ ಮಾಡಿದ್ದಾರೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ಹಿಂದು ವಿರೋಧಿ ಎಂಬಂತೆ ಬ್ರ್ಯಾಂಡ್‌ ಮಾಡಲಾಗುತ್ತಿದೆ. ಅಷ್ಟಕ್ಕೂ ನಮ್ಮ ಪಕ್ಷದ ದೊಡ್ಡ ನಾಯಕ ಯಾರು? ಮಹಾತ್ಮ ಗಾಂಧೀಜಿ ಅವರು ನಮ್ಮ ಪಕ್ಷದ ಧುರೀಣರು. ಸತ್ಯ ಹಾಗೂ ಅಹಿಂಸೆಯ ಆಧಾರದ ಮೇಲೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಿತು. ಸತ್ಯಮೇವ ಜಯತೆ ಎಂಬ ತತ್ವದಂತೆ ಹೋರಾಟ ಮಾಡಲಾಯಿತು. ಹಿಂದು ಧರ್ಮದ ಬೋಧನೆ, ಆಶಯಗಳಂತೆ ಹೋರಾಟ ಮಾಡಲಾಯಿತು” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು. ಇಷ್ಟೆಲ್ಲ ಇರುವಾಗ ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಖಂಡಿತವಾಗಿಯೂ ನಾವು ಹಿಂದು ವಿರೋಧಿಗಳು ಅಲ್ಲ. ರಾಹುಲ್‌ ಗಾಂಧಿ ಅವರು ಬೇರೆಯವರಿಗಿಂತ ಹಿಂದುತ್ವವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಂದರ್ಶನದ ವೇಳೆ ಪ್ರಿಯಾಂಕಾ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತೆರಳದಿರುವ ಕುರಿತು ಬಿಜೆಪಿ ಆರೋಪಗಳ ಬಗೆಗಿನ ಪ್ರಶ್ನೆಗೂ ಪ್ರಿಯಾಂಕಾ ವಾದ್ರಾ ಉತ್ತರಿಸಿದರು. “ಬಿಜೆಪಿಯು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಿತು. ಇದಾದ ಬಳಿಕ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳಲಾಯಿತು. ಹಾಗಾಗಿ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೋಗದಿರುವುದು ತಪ್ಪು ನಿರ್ಧಾರ ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ದೇಶದಲ್ಲಿ ಧರ್ಮ ಸೇರಿ ಹಲವು ಸೂಕ್ಷ್ಮ ವಿಚಾರಗಳನ್ನು ಬಿಜೆಪಿ, ನರೇಂದ್ರ ಮೋದಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಧರ್ಮರಹಿತವಾಗಿ ಎಲ್ಲರಿಗೂ ಯೋಜನೆಗಳನ್ನು ಕಲ್ಪಿಸುವುದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ” ಎಂದರು.

ಇದನ್ನೂ ಓದಿ: Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading

ದೇಶ

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

VISTARANEWS.COM


on

Constitution
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ನಾಯಕರ ಹೇಳಿಕೆಗಳು ಮೊನಚಾಗಿವೆ. ಆರೋಪ, ಪ್ರತ್ಯಾರೋಪ, ವಾಗ್ದಾಳಿ, ವಾಗ್ಬಾಣಗಳ ಜತೆಗೆ ವೈಯಕ್ತಿಕ ನಿಂದನೆ, ಆರೋಪಗಳು ಕೂಡ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್‌ ಗಾಂಧಿ ಅವರು ಸಭೆ-ಸಮಾವೇಶಗಳಲ್ಲಿ ಜನರಿಗೆ ಚೀನಾ ಸಂವಿಧಾನ ಪ್ರದರ್ಶಿಸುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.

“ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ. ರಾಹುಲ್‌ ಗಾಂಧಿ ಅವರು ಚೀನಾ ಸಂವಿಧಾನವನ್ನು ಜನರಿಗೆ ಪ್ರದರ್ಶಿಸುತ್ತಿದ್ದಾರೆಯೇ? ಈ ಕುರಿತು ಪರಿಶೀಲನೆ ಆಗಬೇಕು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಪೋಸ್ಟ್‌ ಮಾಡಿದ್ದಾರೆ.

“ನಮ್ಮ ಸಂವಿಧಾನವು ನೀಲಿ ಕವರ್‌ ಹೊಂದಿದ್ದು, ಮೂಲಭೂತ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂಬುದಾಗಿ ಮೂಲಭೂತ ಕರ್ತವ್ಯವು ತಿಳಿಸುತ್ತದೆ. ಆದರೆ, ರಾಹುಲ್‌ ಗಾಂಧಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ಚೀನಾ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಿರಬಹುದು” ಎಂದು ಕೂಡ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಕಾಂಗ್ರೆಸ್‌ ಶಾಸಕ ಅಬ್ದುಲ್‌ ರಶೀದ್‌ ಮೊಂಡಲ್‌ ತಿರುಗೇಟು ನೀಡಿದ್ದಾರೆ. “ಭಾರತ ಸಂವಿಧಾನದ ಕವರ್‌ಗಳ ಬಣ್ಣವು ಬೇರೆ ಬೇರೆ ಇದೆ. ಕವರ್‌ ಬಣ್ಣ ಬೇರೆಯಾದರೂ ಸಂವಿಧಾನದ ಆಶಯಗಳು ಒಂದೇ ಆಗಿವೆ. ಅಷ್ಟಕ್ಕೂ ನಾವು ಬಣ್ಣವನ್ನು ಓದುವುದಿಲ್ಲ. ಸಂವಿಧಾನದ ಆಶಯ, ಉದ್ದೇಶಗಳನ್ನು ಪಾಲಿಸುತ್ತೇವೆ” ಎಂದಿದ್ದಾರೆ. “ಭಾರತ ಸಂವಿಧಾನದ ಪಾಕೆಟ್‌ ಎಡಿಷನ್‌ನ ಪ್ರತಿಯು ನೀಲಿ ಬಣ್ಣದ ಕವರ್‌ ಹೊಂದಿದೆ” ಎಂದು ಕೂಡ ಕೆಲ ಜಾಲತಾಣಿಗರು ಹಿಮಂತ ಬಿಸ್ವಾ ಶರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Continue Reading
Advertisement
ಸೈಬರ್‌ ಸೇಫ್ಟಿ cyber safety rules
ಅಂಕಣ9 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ36 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 202439 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ46 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ52 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ1 hour ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ1 hour ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್2 hours ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್2 hours ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌