Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ 'ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ'? - Vistara News

Lok Sabha Election 2024

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

Lok Sabha Election 2024: ಸದಾಶಿವನಗರದ ಡಿ.ಕೆ. ಸುರೇಶ್ ನಿವಾಸದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

VISTARANEWS.COM


on

Lok Sabha Election 2024 Is Operation JDS Worker Behind DK Brothers Breakfast Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿರುವುದರಿಂದ ಒಂದೊಂದು ಪಕ್ಷಗಳಿಂದ ಒಂದೊಂದು ರೀತಿಯ ಕಾರ್ಯತಂತ್ರ. ಕರ್ನಾಟಕದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಯಾಗಿರುವ ನಿಟ್ಟಿನಲ್ಲಿ ಜಂಟಿ ಹೋರಾಟಕ್ಕೆ ಪ್ಲಾನ್‌ ಮಾಡಿಕೊಳ್ಳಲಾಗಿದೆ. ಈ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ (Bangalore Rural Lok Sabha constituency) ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್‌. ಮಂಜುನಾಥ್‌ (CN Manjunath) ಅವರನ್ನು ಬಿಜೆಪಿ (BJP Karnataka) ಕಣಕ್ಕಿಳಿಸಿದ್ದರಿಂದ ಡಿಕೆ ಬ್ರದರ್ಸ್‌ (DK Brothers) ಫುಲ್‌ ಅಲರ್ಟ್‌ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮದೇ ಕಾರ್ಯತಂತ್ರವನ್ನು ಹೆಣೆಯುತ್ತಿದ್ದಾರೆ. ಕ್ಷೇತ್ರದ ಗೆಲುವಿನ ತಂತ್ರಗಾರಿಕೆಯಲ್ಲಿ ನಿರತರಾಗಿದ್ದಾರೆ. ಈ ಸಂಬಂಧ ಸದಾಶಿವನಗರದ ಡಿ.ಕೆ. ಸುರೇಶ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಅನ್ನು ಸಹ ನಡೆಸಲಾಗಿದೆ. ಈ ಸಭೆಯ ಹಿಂದೆ “ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ” ತಂತ್ರ ಅಡಗಿದೆಯೇ ಎಂಬ ಸಂಶಯ ಹುಟ್ಟಿದೆ.

ಡಾ. ಮಂಜುನಾಥ್ ಸ್ಪರ್ಧೆ ಬೆನ್ನಲ್ಲೇ ಡಿಕೆ ಬ್ರದರ್ಸ್ ತಂತ್ರಗಾರಿಕೆಗೆ ಮೊರೆಹೋಗಿದ್ದಾರೆ. ಕ್ಷೇತ್ರ ಗೆಲ್ಲಲು ಯಾವೆಲ್ಲ ಕೆಲಸಗಳು ಆಗಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಸದಾಶಿವನಗರದ ಡಿ.ಕೆ. ಸುರೇಶ್ ನಿವಾಸದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

Lok Sabha Election 2024 Is Operation JDS Worker Behind DK Brothers Breakfast Meeting

ಮುಖಂಡರ ಜತೆಗೆ ಸಭೆ ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್, ಶಾಸಕರಾದ ಮಾಗಡಿ ಬಾಲಕೃಷ್ಣ, ಆನೇಕಲ್ ಶಿವಣ್ಣ, ಕುಣಿಗಲ್ ರಂಗನಾಥ್, ಇಕ್ಬಾಲ್ ಹುಸೇನ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ ಹಾಗೂ ಮುಖಂಡರಾದ ರಘುನಂದನ್ ರಾಮಣ್ಣ, ಮನೋಹರ್, ಹನುಮಂತರಾಯಪ್ಪ, ಕುಸುಮಾ, ಎಚ್. ಗಂಗಾಧರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ?

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ತಮ್ಮ ಎದುರಾಳಿಯಾಗಿ ಬಿಜೆಪಯಿಂದ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಕೆಂಡವಾಗಿರುವ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌, ಜೆಡಿಎಸ್‌ ಪಕ್ಷ ಮುಳುಗುತ್ತಿದ್ದು, ಅದಕ್ಕೆ ಮಂಜುನಾಥ್‌ ಬಿಜೆಪಿ ಸೇರಿದ್ದಾರೆ. ಹೀಗಾಗಿ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಮುಂದಿನ ಆಲೋಚನೆಯನ್ನು ಮಾಡಲಿ ಎಂದು ಹೇಳಿಕೆಯನ್ನು ಕೊಟ್ಟಿದ್ದರು. ಇದೇ ಮಾತನ್ನು ಶುಕ್ರವಾರ ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ ಮಾಡಿದ್ದಾರೆ. ಇಂಥ ಹೇಳಿಕೆಗಳ ಮೂಲಕ ಜೆಡಿಎಸ್‌ ಕಾರ್ಯಕರ್ತರನ್ನು ಗೊಂದಲಕ್ಕೀಡು ಮಾಡಿ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಕಾರ್ಯತಂತ್ರವನ್ನು ಮಾಡಲಾಗುತ್ತಿದೆಯೇ ಎಂಬ ಸಂಶಯ ಮೂಡಿದೆ.

ಜೆಡಿಎಸ್‌ ಕಾರ್ಯಕರ್ತರು ಸಂಪರ್ಕಿಸುತ್ತಿದ್ದಾರೆ: ಡಿಕೆಶಿ

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿದ್ದೇನೆ. ಹೀಗಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ತಯಾರಿ ಮಾಡಿಕೊಳ್ಳಬೇಕಲ್ಲ. ಎರಡು ಪಕ್ಷದಿಂದ ನಮ್ಮ ಪಾರ್ಟಿ ಸೇರಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ಇಂದಿನ ಸಭೆಯಲ್ಲಿ ಅದರ ಬಗ್ಗೆಯೇ ಚರ್ಚೆ ಮಾಡುತ್ತಿದ್ದೆವು. ಇಷ್ಟು ವರ್ಷ 5-6 ಕ್ಷೇತ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ನೇರ ಸ್ಪರ್ಧೆ ಇತ್ತು. ಈಗ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೆಗೌಡ ಮತ್ತು ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕುಟುಂಬದವರೇ ಬಿಜೆಪಿ ಸೇರಿದ್ದರಿಂದ ಜೆಡಿಎಸ್ ಕಾರ್ಯಕರ್ತರು ಆತಂಕದಿಂದ ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಹಳೆಯದನ್ನೆಲ್ಲ ಮರೆತು ಪಕ್ಷ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ನಾಯಕರಿಗೆ ಸೂಚನೆಯನ್ನು ಕೊಟ್ಟಿದ್ದೇನೆ. ಮೊದಲು ಅವರ ಪಕ್ಷದ ಬಗ್ಗೆ ಮಾತನಾಡಲಿ. ಜೆಡಿಎಸ್‌ ಇನ್ನೂ ಇದೆಯಾ ಅಂತ ಎಚ್‌ಡಿಕೆ, ಗೌಡರು ಹೇಳಲಿ. ಪ್ರಬಲ ಅಭ್ಯರ್ಥಿ ಎಂಬೆಲ್ಲ ಹೇಳಿಕೆ ಆಮೇಲೆ ಎಂದು ವ್ಯಂಗ್ಯವಾಗಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಚಿಗುರೊಡೆಯಿತಾ ರೆಡ್ಡಿ – ರಾಮುಲು ಫ್ರೆಂಡ್‌ಶಿಪ್‌; ವರ್ಕೌಟ್‌ ಆಯ್ತಾ ಚಾಣಕ್ಯನ ಸೂತ್ರ?

ಕಾರ್ಯತಂತ್ರದ ಕುರಿತು ಸಭೆ ಮಾಡಿದ್ದೇವೆ: ಡಿ.ಕೆ. ಸುರೇಶ್

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್‌, ಇಂದು ಚುನಾವಣೆ ಸಂಬಂಧ ಸಭೆ ಕರೆದಿದ್ದೆವು. ಕಾರ್ಯತಂತ್ರದ ಕುರಿತು ಚರ್ಚೆ ಮಾಡಿದ್ದೇವೆ. ಯಾವುದನ್ನು ಮಾನದಂಡ ಮಾಡಿಕೊಂಡು ಚುನಾವಣೆ ಎದುರಿಸಬೇಕು? ಹೀಗೆ ಅನೇಕ ವಿಚಾರದ ಕುರಿತು ಚರ್ಚೆ ಆಗಿದೆ. ಶಾಸಕರು, ಸೋತ ಅಭ್ಯರ್ಥಿಗಳ ಜತೆ ಸಭೆ ಮಾಡಿದ್ದೇವೆ ಎಂದು ಹೇಳಿದರು.

ಡಾ. ಸಿ.ಎನ್.‌ ಮಂಜುನಾಥ್ ಅವರು ಪ್ರಬಲ ಅಭ್ಯರ್ಥಿಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಸುರೇಶ್‌, ಸಿಂಬಲ್ ಅಥವಾ ವ್ಯಕ್ತಿ ಬಗ್ಗೆ ಮಾತನಾಡಲು ಹೋಗಲ್ಲ. ನಾನು ಕ್ಷೇತ್ರದಲ್ಲಿ ದುಡಿದಿದ್ದೇನೆ. ಅದರ ಕೂಲಿಯನ್ನು ಜನರ ಬಳಿ ಕೇಳುತ್ತಿದ್ದೇನೆ. ಮಂಜುನಾಥ್ ಸ್ಪರ್ಧೆ ಅವರ ತೀರ್ಮಾನ. ಮಂಜುನಾಥ್ ಪ್ರಬಲ ಅಭ್ಯರ್ಥಿ ಆಗಿದ್ದರೆ ಜೆಡಿಎಸ್ ಸಿಂಬಲ್‌ನಿಂದ ನಿಲ್ಲಿಸಬೇಕಿತ್ತು. ಅದರ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಅವರ ಕಾರ್ಯಕರ್ತರಿಗೆ ನಾನು ಕರೆ ಕೊಡುತ್ತೇನೆ. ಜ್ಯಾತ್ಯತೀತ ಮಹಿಳೆ ಇಂದು ತೆನೆ ಇಳಿಸಿದ್ದಾಳೆ. ನಾನು ಸ್ನೇಹಿತ, ಸಹೋದರನಾಗಿ ಎಲ್ಲರ ಬಳಿ ಸಹಕಾರವನ್ನು ಕೋರುತ್ತೇನೆ. ಸೇವೆ ಮಾಡಲು ನಾನು ಸಿದ್ಧನಿದ್ದೇನೆ. ಯಾವುದೇ ರಾಗ, ದ್ವೇಷ ಇಲ್ಲದೆ ಕೆಲಸ ಮಾಡುತ್ತೇನೆ. ನಾನು ಅಭಿವೃದ್ಧಿ ಮಾಡಲು ಬಂದಿದ್ದೇನೆ. ಮುಕ್ತ ಮನಸ್ಸಿನಿಂದ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ನೀಡಿದರು.

ಗುಲಾಮತನಕ್ಕೆ ಕೊಟ್ಟಿದ್ದೇವೆ ಅಂದುಕೊಂಡಿದ್ದಾರೆ

ಮಾಗಡಿ ಬಾಲಕೃಷ್ಣ ಮಾತನಾಡಿ, ಕುಮಾರಸ್ವಾಮಿ ಹಾಗೂ ಹಾಸನದವರಿಗೆ ನಾವು ಗುತ್ತಿಗೆ ಕೊಟ್ಟಿದ್ದೇವೆ. ಅವರು ನಮ್ಮ ರಾಮನಗರ ಜಿಲ್ಲೆಯನ್ನು ಗುಲಾಮತನಕ್ಕೆ ಕೊಟ್ಟಿದ್ದೇವೆ ಅಂದುಕೊಂಡಿದ್ದಾರೆ. ಹಾಸನ ಜಿಲ್ಲೆ ನಾಯಕರಿಗೆ ನಾವು ಗುಲಾಮರು ಎಂಬ ಭಾವನೆ ಇದೆ. ನಾವೂ ಸನ್ಯಾಸಿಗಳಾ? ನಾವೂ ರಾಜಕಾರಣ ಮಾಡುವುದಕ್ಕೆ ಬಂದಿರುವುದು. ಕುಮಾರಸ್ವಾಮಿನೇ ಸ್ಪರ್ಧೆ ಮಾಡಬಹುದಿತ್ತಲ್ಲ. ಯಾಕೆ ಅವರ ಸಂಬಂಧಿಯನ್ನು ಬೇರೆ ಪಕ್ಷದಿಂದ ಸ್ಪರ್ಧೆಗೆ ಇಳಿಸಿದರು? ಪಿಚ್ಚರ್ ತೆಗೆಯೋ ಮುನಿರತ್ನಗೆ ರಾಮ, ರಾವಣ ಯಾರೂ ಅಂತ ಗೊತ್ತು. ಮುನಿರತ್ನಗಿಂತ ಬೇರೆ ದೊಡ್ಡ ರಾವಣ ಯಾರಾದ್ರೂ ಇದ್ದಾರಾ? ರಾಮ‌ನ ಕೆಲಸ ಮಾಡಿದ್ದು ಯಾರು? ರಾವಣನ ಕೆಲಸ ಮಾಡಿದ್ದು ಯಾರು ಎಂಬುದು ಗೊತ್ತಿದೆ. ಜನರ ಜತೆಗೆ ಡಿ.ಕೆ. ಸುರೇಶ್‌ಗೆ ಇರುವ ಒಡನಾಟ ಅವರನ್ನು ಗೆಲುವಿನ ದಡ ಮುಟ್ಡಿಸುತ್ತದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

Lok Sabha Election 2024

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Lok Sabha Election 2024: ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ನಿನ್ನೆ (ಏಪ್ರಿಲ್‌ 26) ಲೋಕಸಭೆ ಚುನಾವಣೆ (Lok Sabha Election 2024) ಎರಡನೇ ಹಂತದ ಮತದಾನ (voting) ನಡೆಯಿತು. ಇದರಲ್ಲಿ ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಮತ್ತು ಯಾವ ರಾಜ್ಯಗಳಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ. ತ್ರಿಪುರಾದಲ್ಲಿ ಅತಿ ಹೆಚ್ಚು ಅಂದಾಜು 77.94% ಮತದಾನವಾಗಿದೆ.

ನಂತರ ಮಣಿಪುರ (76.46%), ಛತ್ತೀಸ್‌ಗಢ (72.51%), ಪಶ್ಚಿಮ ಬಂಗಾಳ (71.84%), ಅಸ್ಸಾಂ (70.68%), ಕರ್ನಾಟಕದಲ್ಲಿ 69.23%, J&K (67.22%), ಮತ್ತು ಕೇರಳ (64.99%) ಮತದಾನ ದಾಖಲಿಸಿವೆ. ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಅಂದಾಜು ಮತದಾನವಾಗಿದೆ (53.02%). ರಾಜಸ್ಥಾನದಲ್ಲಿ 59.69%, ಮಧ್ಯಪ್ರದೇಶದಲ್ಲಿ 55.19%, ಮಹಾರಾಷ್ಟ್ರ 53.71% ಮತ್ತು ಬಿಹಾರ 53.60% ಮತದಾನವಾಗಿದೆ.

ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಿನ್ನೆ ನಡೆದಿತ್ತು. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರಿಕರು ತಮ್ಮ ಹಕ್ಕನ್ನು ಚಲಾಯಿಸಿದ್ದರು. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Continue Reading

Lok Sabha Election 2024

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Lok Sabha Election: ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

VISTARANEWS.COM


on

lok sabha election
Koo

ಬೆಂಗಳೂರು : ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ. ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಬಹುತೇಕ ಶಾಂತಿಯುತ ಮತದಾನ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಸಿಇಸಿ ಶ್ರೀ ರಾಜೀವ್ ಕುಮಾರ್ ನೇತೃತ್ವದ ಆಯೋಗವು ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಮತ್ತು ಶ್ರೀ ಸುಖ್ಬೀರ್ ಸಿಂಗ್ ಸಂಧು ಅವರೊಂದಿಗೆ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಯಿತು. ಮತದಾರರು ಭಯ ಅಥವಾ ಬೆದರಿಕೆಯಿಲ್ಲದೆ ಮತ ಚಲಾಯಿಸಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಾಯಿತು. 1 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.

ಬಿಹಾರದ ಬಂಕಾ, ಮಾಧೇಪುರ, ಖಗರಿಯಾ ಮತ್ತು ಮುಂಗೇರ್ ಕ್ಷೇತ್ರಗಳ ಅನೇಕ ಮತಗಟ್ಟೆಗಳಲ್ಲಿ ಮತದಾನದ ಸಮಯವನ್ನು ಸಂಜೆ 6 ಗಂಟೆಯ ಬಳಿಕವೂ ವಿಸ್ತರಿಸಲಾಗಿತ್ತು. ಎರಡನೇ ಹಂತದಲ್ಲಿ, ಛತ್ತೀಸ್​​ಗಢದ ಬಸ್ತಾರ್ ಮತ್ತು ಕಂಕೇರ್ ಪಿಸಿಗಳ 46 ಗ್ರಾಮಗಳ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಸ್ವಂತ ಗ್ರಾಮದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಗ್ರಾಮಸ್ಥರ ಅನುಕೂಲಕ್ಕಾಗಿ ಈ ಪಿಸಿಗಳಲ್ಲಿ ಮೊದಲ ಬಾರಿಗೆ 102 ಹೊಸ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಯಿತು

ಕ್ರಿಕೆಟ್ ತಾರೆಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಅವರು ಬೆಂಗಳೂರಿನ ವಿವಿಧ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. ಶಾಯಿ ಹಾಕಿದ ಬೆರಳುಗಳಿಂದ ಪೋಸ್ ನೀಡಿದ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮಹತ್ವದ ಸಂದೇಶವನ್ನು ಯುವಕರಿಗೆ ತಲುಪಿಸಿದರು.

Continue Reading

ಕರ್ನಾಟಕ

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ರಾಜ್ಯದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತಗಳಲ್ಲೂ ಒಟ್ಟು ಶೇ. 68.96 ಮತದಾನ ನಡೆದಿತ್ತು. ಈ ಬಾರಿ ಮೊದಲ ಹಂತದಲ್ಲಿ ಶೇ.69.23 ವೋಟಿಂಗ್‌ ನಡೆದಿದೆ, ಇನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬಹುತೇಕ ಶಾಂತಿಯುತವಾಗಿ ಶುಕ್ರವಾರ ಮತದಾನವಾಗಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

14 ಕ್ಷೇತ್ರಗಳ ಶೇಕಡಾವಾರು ಮತದಾನ ಪಟ್ಟಿ

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರಲೋಕಸಭಾ ಚುನಾವಣೆ-2024ಲೋಕಸಭಾ ಚುನಾವಣೆ-2019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

ಇದನ್ನೂ ಓದಿ | Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ಇಂಡಿಗನತ್ತ ಮತಗಟ್ಟೆಯಲ್ಲಿ ಮರು ಮತದಾನ ಸಾಧ್ಯತೆ

ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಕೇವಲ 10 ಮತದಾರರು ಮಾತ್ರ ಹಕ್ಕು ಚಲಾವಣೆ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೂಲಸೌಕರ್ಯ ಇಲ್ಲ ಎಂದು ಮತದಾರರು ಅಸಮಾಧಾನ ಹೊರಹಾಕಿ ಮತದಾನ ಬಹಿಷ್ಕರಿಸಿದ್ದರು. ಹೀಗಾಗಿ 2 ದಿನಗಳೊಳಗೆ ಅಧಿಕಾರಿಗಳು ಮಾತುಕತೆ ನಡೆಸಿ ಮರು ಮತದಾನ ಮಾಡಿಸುವ ಸಾಧ್ಯತೆ ಇದೆ.

ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿತ್ತು. ಮತದಾನ ಅವಧಿ ಮುಕ್ತಾಯಗೊಂಡ ಬಳಿಕ 6 ಗಂಟೆ ವೇಳೆಗೆ ಸಾಲಿನಲ್ಲಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿವೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

Continue Reading
Advertisement
Road Accident in Bengaluru
ಬೆಂಗಳೂರು7 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ14 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ26 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ30 mins ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ31 mins ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್32 mins ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ33 mins ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

food poisoning raichur news
ಕ್ರೈಂ35 mins ago

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Anupama Parameswaran Paradha next
ಟಾಲಿವುಡ್59 mins ago

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

PU Board exam girl writing exam
ಪ್ರಮುಖ ಸುದ್ದಿ1 hour ago

Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ23 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202424 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌