Lok Sabha Election 2024: ಜನಾರ್ದನ ರೆಡ್ಡಿ ಪಕ್ಷ ಬಿಜೆಪಿಯಲ್ಲಿ ವಿಲೀನ? ಇಂದು ಅಥವಾ ನಾಳೆ ಘೋಷಣೆ! - Vistara News

Lok Sabha Election 2024

Lok Sabha Election 2024: ಜನಾರ್ದನ ರೆಡ್ಡಿ ಪಕ್ಷ ಬಿಜೆಪಿಯಲ್ಲಿ ವಿಲೀನ? ಇಂದು ಅಥವಾ ನಾಳೆ ಘೋಷಣೆ!

Lok Sabha Election 2024: ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. ಅವರು ಈ ಸಂಬಂಧ ತಮ್ಮ ಬೆಂಗಳೂರಿನ ನಿವಾಸದಲ್ಲಿ ಕೆಆರ್‌ಪಿಪಿ ಕಾರ್ಯಕರ್ತರ ಸಭೆ ಕರೆದಿದ್ದು, ಅಲ್ಲಿ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Janardhana Reddy party merge with BJP soon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ರಾಜಕೀಯ ಪಕ್ಷಗಳ ತಯಾರಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಹಲವು ಕಾರಣಗಳಿಂದ ಬಿಜೆಪಿಯಿಂದ ದೂರವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya Pragati Party) ಕಟ್ಟಿದ್ದ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಸೋಮವಾರ (ಮಾ. 25) ಬಿಜೆಪಿ (BJP Karnataka) ಸೇರಲಿದ್ದಾರೆ ಎಂದು ಮೂಲಗಳು ಹೇಳಿವೆ. ಈ ಸಂಬಂಧ ಅವರು ಭಾನುವಾರ (ಮಾ. 24) ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದು, ಅಲ್ಲಿ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಅಮಿತ್‌ ಶಾ (Amit Shah) ಭೇಟಿ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ಬೆಂಗಳೂರಿನ ತಮ್ಮ ಪಾರಿಜಾತ ನಿವಾಸದಲ್ಲಿ ಭಾನುವಾರ ಸಂಜೆ 4 ಗಂಟೆಗೆ ಕೆಆರ್‌ಪಿಪಿ ಪಕ್ಷದ ಪದಾಧಿಕಾರಿಗಳ ಸಭೆ ಕರೆದಿರುವ ಜನಾರ್ದನ ರೆಡ್ಡಿ, ಸಭೆಯಲ್ಲಿ ಬಿಜೆಪಿ ಸೇರ್ಪಡೆ ಅಥವಾ ಲೋಕಸಭೆ ಚುನಾವಣೆಗೆ (Lok Sabha Election 2024) ಬೆಂಬಲ ಘೋಷಿಸುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಒಂದು ಹಂತದಲ್ಲಿ ಅವರು ನಿರ್ಧಾರ ಮಾಡಿದ್ದಾರೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: HD Kumaraswamy: ಹಾರ್ಟ್‌ ಆಪರೇಷನ್‌ ಬಳಿಕ ಎಚ್‌ಡಿಕೆ ಮೊದಲ ಮಾತು; ಮಂಡ್ಯ, ಸಿಎಂ ಬಗ್ಗೆ ಹೇಳಿದ್ದೇನು?

ಒಂದು ವೇಳೆ ಅವರು ಬಿಜೆಪಿ ಸೇರುವುದಾದರೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜತೆ ವಿಲೀನಗೊಳಿಸಲಿದ್ದಾರೆ. ಬಹುತೇಕ ನಾಳೆ (ಸೋಮವಾರ) ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.

ಸೇರ್ಪಡೆ ದಿನಾಂಕ ಫಿಕ್ಸ್‌ ಆಗಿಲ್ಲವೇ?

ಜನಾರ್ದನ ರೆಡ್ಡಿ ಸೋಮವಾರ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅವರು ಪಕ್ಷ ಸೇರ್ಪಡೆಗೆ ಪ್ಲ್ಯಾನ್‌ ಮಾಡುತ್ತಿದ್ದಾರೆ ಎನ್ನಲಾಗಿದೆ. ಆ ಮೂಲಕ ಗ್ರಾಂಡ್‌ ಆಗಿ ರಿಎಂಟ್ರಿ ಪಡೆಯುವ ಲೆಕ್ಕಾಚಾರದಲ್ಲಿದ್ದಾರೆ.

ರೆಡ್ಡಿ ಬಂದರೆ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿಗೆ ಪ್ಲಸ್‌

ಒಂದು ವೇಳೆ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾದರೆ, ಇಲ್ಲವೇ ಬಾಹ್ಯ ಬೆಂಬಲವನ್ನು ನೀಡಿದರೂ ಅದು ಬಿಜೆಪಿಗೆ ಪ್ಲಸ್‌ ಆಗಲಿದೆ. ಕಾರಣ, ಅವರಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಳ್ಳೆಯ ಹಿಡಿತವಿದೆ. ಅಲ್ಲದೆ, ಕಳೆದ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕೆಆರ್‌ಪಿಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದರಿಂದ ಬಿಜೆಪಿ ಅಭ್ಯರ್ಥಿಗಳು ಸೋತಿದ್ದರು. ಒಂದು ವೇಳೆ ಅವರು ಬಿಜೆಪಿಗೆ ಜತೆಯಾದರೆ ಇದರಿಂದ ಸುತ್ತಮುತ್ತಲ ಕೆಲವು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.

ಅಮಿತ್‌ ಶಾ ಭೇಟಿ ಮಾಡಿದ್ದ ರೆಡ್ಡಿ

ಇದೇ ಮಾರ್ಚ್‌ 14ರಂದು ಗೃಹ ಸಚಿವ ಅಮಿತ್‌ ಶಾ ಅವರನ್ನು ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ಮಾಡಿದ್ದರು. ಇದು ಕುತೂಹಲಕ್ಕೆ ಕಾರಣವಾಗಿದೆ. ಈ ಚುನಾವಣೆಯಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರಾ? ಎಂಬ ಪ್ರಶ್ನೆ ಮೂಡಿತ್ತು. ಈಗ ಇದಕ್ಕೆ ಉತ್ತರ ಸಿಗುವ ಕಾಲ ಸನ್ನಿಹಿತವಾಗಿದೆ.

Janardhana Reddy meets Amit Shah

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯನವರೇ ಇದೋ ನೋಡಿ ನಿಮ್ಮ ವೈಫಲ್ಯಗಳ ಪಟ್ಟಿ ಎಂದ ಬಿ.ವೈ. ವಿಜಯೇಂದ್ರ

ಭೇಟಿ ಬಗ್ಗೆ ಟ್ವೀಟ್‌ ಮಾಡಿದ್ದ ರೆಡ್ಡಿ

“ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ” ಎಂದು ಜನಾರ್ದನ ರೆಡ್ಡಿ ಅಂದು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದರು. ಅಲ್ಲಿ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ಎಂದು ನಮೂದಿಸಿದ್ದರಿಂದ ಅವರು ಬಿಜೆಪಿ ಸೇರುತ್ತಾರೆಂಬ ಚರ್ಚೆಗಳು ರಾಜಕೀಯ ಪಡೆಸಾಲೆಗಳಲ್ಲಿ ಕೇಳಿಬಂದಿದ್ದವು.

ರೆಡ್ಡಿಯನ್ನು ಬಿಜೆಪಿ ದೂರ ಇಟ್ಟಿದ್ದು ಏಕೆ?

ಜನಾರ್ದನ ರೆಡ್ಡಿ ಅವರು ಬಿಜೆಪಿಯ ಹಳೇ ಕಲಿ. ಆದರೆ, ಬದಲಾದ ಸನ್ನಿವೇಶದಲ್ಲಿ ಅವರು ಸಚಿವರಾಗಿದ್ದಾಗಲೇ ಜೈಲು ಸೇರಬೇಕಾದ ಪರಿಸ್ಥಿತಿ ಬಂದೊದಗಿತು. ಅಲ್ಲದೆ, ಅಕ್ರಮ ಗಣಿಗಾರಿಕೆ ‌(Illegal mining) ಪ್ರಕರಣದಲ್ಲಿ ವರ್ಷ ಕಾಲ ಜೈಲುವಾಸವನ್ನು ಅನುಭವಿಸಿದ್ದರು. ಅಲ್ಲದೆ, 2013ರ ವಿಧಾನಸಭಾ ಚುನಾವಣೆ ವೇಳೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡುವ ಮೂಲಕ ಜನಾಭಿಪ್ರಾಯವನ್ನು ಸಂಗ್ರಹ ಮಾಡಲಾಗಿತ್ತು. ಆಗ ಸಿದ್ದರಾಮಯ್ಯ ಅವರು “ರಿಪಬ್ಲಿಕ್‌ ಆಫ್‌ ಬಳ್ಳಾರಿ” ಎಂದು ಕರೆದಿದ್ದಲ್ಲದೆ, ರೆಡ್ಡಿ ಸಹೋದರರ ವಿರುದ್ಧ ತೊಡೆ ತಟ್ಟಿದ್ದರು. ಬಳಿಕ ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಹೀಗಾಗಿ ಬಿಜೆಪಿ ಅವರನ್ನು ತುಸು ದೂರವೇ ಇಟ್ಟಿತ್ತು.

ಕಳೆದ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕೆಂಬ ಆಸೆ ಇತ್ತಾದರೂ ಬಿಜೆಪಿ ಅವರನ್ನು ಸೇರಿಸಿಕೊಳ್ಳಲಿಲ್ಲ. ಹೀಗಾಗಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಕಟ್ಟಿದರು. ಈ ಪಕ್ಷದಿಂದ ತಾವೊಬ್ಬರೇ ಗೆದ್ದರೂ ಹಲವು ಕಡೆ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಇದು ಬಿಜೆಪಿಗೆ ದೊಡ್ಡ ಮಟ್ಟದ ಹೊಡೆತವನ್ನೇ ಕೊಟ್ಟಿತ್ತು. ಅಲ್ಲದೆ, ಈಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿಯೂ ರೆಡಿ ಬಿಜೆಪಿಯನ್ನು ಬೆಂಬಲಿಸಲು ತಯಾರಾಗಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಒಲವು ತೋರದ ಕಾರಣ ಅವರು ಕಾಂಗ್ರೆಸ್‌ ಬೆಂಬಲಕ್ಕೆ ನಿಂತಿದ್ದರು. ಆದರೆ, ಅದಾದ ಬಳಿಕ ಅಮಿತ್‌ ಶಾ ಅವರು ರೆಡ್ಡಿಯನ್ನು ಕರೆಸಿಕೊಂಡು ಮಾತನಾಡಿದ್ದರು.

ಇದನ್ನೂ ಓದಿ: Lok Sabha Election 2024: ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಈಗ ಕಾಂಗ್ರೆಸ್‌ ದೂರುವ ಹಾಗೂ ಇಲ್ಲ!

ಒಂದು ವೇಳೆ ಜನಾರ್ದನ ರೆಡ್ಡಿ ಅವರು ಬಿಜೆಪಿಯನ್ನು ಬೆಂಬಲಿಸಿದರೆ, ಇಲ್ಲವೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿದರೂ ಸಹ ಕಾಂಗ್ರೆಸ್‌ ದೂರುವ ಅವಕಾಶವನ್ನು ಕೈಚೆಲ್ಲಿ ಕುಳಿತಿದೆ ಎಂಬ ವಿಶ್ಲೇಷಣೆಗಳು ನಡೆಯುತ್ತಿವೆ. ರೆಡ್ಡಿ ಜೈಲಿನಿಂದ ಬಂದವರು, ಅಕ್ರಮ ಗಣಿಗಾರಿಕೆ ಆರೋಪ ಹೊತ್ತವರು. ಇಂಥವರನ್ನು ಬಿಜೆಪಿ ಪೋಷಿಸುತ್ತಿದೆ ಎಂದು ಈ ಹಿಂದೆ ಕಾಂಗ್ರೆಸ್‌ ಆರೋಪ ಮಾಡಿತ್ತು. ಆದರೆ, ಈಚೆಗೆ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಬೆಂಬಲವನ್ನು ಕಾಂಗ್ರೆಸ್‌ ಪಡೆದುಕೊಂಡಿತ್ತು. ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ರೆಡ್ಡಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಬಳಿಕ ತಮ್ಮ ಬೆಂಬಲವನ್ನು ಕಾಂಗ್ರೆಸ್‌ಗೆ ನೀಡಿದ್ದರು. ಈಗ ಒಂದು ವೇಳೆ ರೆಡ್ಡಿ ಬಿಜೆಪಿಯನ್ನು ಬೆಂಬಲಿಸಿದರೂ, ಪಕ್ಷ ಸೇರ್ಪಡೆಗೊಂಡರೂ ಕಾಂಗ್ರೆಸ್‌ಗೆ ಆರೋಪ ಮಾಡಲು ವಿಷಯ ಇಲ್ಲದಂತಾಗುತ್ತದೆ ಎಂಬ ತಂತ್ರಗಾರಿಕೆ ಇದರ ಹಿಂದೆ ಅಡಗಿದೆ ಎಂದೇ ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

BJP Karnataka: ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

VISTARANEWS.COM


on

BJP Karnataka Egg video against Congress BJP social media head arrested
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡುವ ಸಂಬಂಧ ಬಿಜೆಪಿಯ (BJP Karnataka) ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಮೊಟ್ಟೆ ವಿಡಿಯೊಗೆ ಸಂಬಂಧಪಟ್ಟಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಗುರುವಾರ (ಮೇ 9) ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಬುಧವಾರವಷ್ಟೇ (ಮೇ 8) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯಾ (Amit Malaveya) ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರಿಗೆ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ಬಿಜೆಪಿಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೊಟ್ಟೆ ವಿಡಿಯೊ ವಿಚಾರವಾಗಿ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್‌ ಮಾಳವೀಯಾ ಅವರಿಗೆ ನೋಟಿಸ್‌ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದ್ದಾರೆ.

ಕಾಂಗ್ರೆಸ್‌ ಆರೋಪ ಏನಿತ್ತು?

ಸಮುದಾಯಗಳಿಗೆ ಸಂಬಂಧಿಸಿದಂತೆ ಈ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮುದಾಯಗಳಿಗೆ ಹೋಲಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

BJP Karnataka State police issues notices to JP Nadda and Amit Malviya and BY Vijayendra

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

ನೀತಿ ಸಂಹಿತೆಯ ಉಲ್ಲಂಘನೆ

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದರು. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Continue Reading

Lok Sabha Election 2024

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

Navneet Rana: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ (Navneet Rana) ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ʼಹಿಂದೂ-ಮುಸ್ಲಿಂ ಅನುಪಾತವನ್ನುʼ ಸಮತೋಲನಗೊಳಿಸಲು ’15 ನಿಮಿಷʼ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದು ಅಕ್ಬರುದ್ದೀನ್ ಓವೈಸಿ ಅಂದು ಹೇಳಿಕೆ ನೀಡಿದ್ದರು. ಇದಕ್ಕೆ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ ಈ ಹೇಳಿಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ʼʼನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆʼʼ ಎಂದಿದ್ದಾರೆ.

ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ. ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಎಐಎಂಐಎಂ ಆಕ್ಷೇಪ

ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಖಂಡ ವಾರಿಸ್ ಪಠಾಣ್, ʼʼನವನಿತ್ ರಾಣಾ ಅವರಿಗೆ ಈ ಬಾರಿ ಅಮರಾವತಿಯಲ್ಲಿ ಹೀನಾಯ ಸೋಲು ಖಚಿತವಾಗಿದೆ. ಹೀಗಾಗಿಯೇ ಅವರು ಈ ಆಘಾತವನ್ನು ತಾಳಲಾರದೆ ಹೀಗೆಲ್ಲ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಮಾತುಗಳಿಗೆ ಚುನಾವಣಾ ಆಯೋಗ ಯಾಕೆ ಕ್ರಮ ಕೈಗೊಂಡಿಲ್ಲ?ʼʼ ಎಂದು ಪ್ರಶ್ನಿಸಿದ್ದಾರೆ. ʼʼಬಿಜೆಪಿಯವರು ಕೋಮು ಸಾಮರಸ್ಯವನ್ನು ಕದಡಲು ಯತ್ನಿಸುತ್ತಿದ್ದಾರೆʼʼ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: Madhavi Lata: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಧವಿ ಲತಾಗೆ ವೈ+ಭದ್ರತೆ ಒದಗಿಸಿದ ಕೇಂದ್ರ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

Continue Reading

ದೇಶ

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Mahender Pratap Singh:ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌ 2019ರಲ್ಲಿ ನಡೆದ ಪುಲ್ವಾಮಾ ದಾಳಿ ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

VISTARANEWS.COM


on

Mahender Pratap Singh
Koo

ಹರಿಯಾಣ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆಯುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅದರಲ್ಲೂ ಕಾಂಗ್ರೆಸ್‌ ದಿನಕ್ಕೊಬ್ಬ ನಾಯಕರಂತೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕ ಪುಲ್ವಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

ಮಹೇಂದರ್‌ ಪ್ರತಾಪ್‌ ಸಿಂಗ್‌ ಹೇಳಿದ್ದೇನು?

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಹೇಂದರ್‌ ಪ್ರತಾಪ್‌ ಸಿಂಗ್‌, ಪುಲ್ವಾಮಾ ದಾಳಿಯ ರಹಸ್ಯ ಈ ಬಯಲಾಗಿದೆ. ಬಹುದೊಡ್ಡ ದಾಳಿಯ ಸೂಚನೆ ಇರುವುದರಿಂದ ನಮ್ಮ ಯೋಧರು ರಸ್ತೆ ಮೂಲಕ ಬರುವುದು ಅಷ್ಟೊಂದು ಸುರಕ್ಷಿತ ಅಲ್ಲ. ಅವರನ್ನು ಏರ್‌ಲಿಫ್ಟ್‌ ಮಾಡುವ ಎಂದುಪ್ರಧಾನಿಗೆ ಮೊದಲೇ ಮನವಿ ಮಾಡಿದ್ದೆ ಎಂದು ಅವರದ್ದೇ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಈ ಹಿಂದೆಯೇ ಹೇಳಿದ್ದರು. ಹೀಗಾಗಿ ಅದು ಒಂದು ಬಿಜೆಪಿಯ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಅದು ಎರಡನೇ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ ಚುನಾವಣಾ ಸ್ಟಂಟ್‌. ಇದೀಗ ಅವರು ಮೂರನೇ ಬಾರಿ ಗೆಲುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಮುಖಂಡ ವಿಷ್ಣುವರ್ಧನ್‌ ರೆಡ್ಡಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ. ಇಡೀ ದೇಶವೇ ಪಾಕಿಸ್ತಾನದ ಕುತಂತ್ರದ ಬಗ್ಗೆ ಕೆಂಡ ಕಾರುತ್ತಿದೆ. ಆದರೆ ಲಜ್ಜೆಗೆಟ್ಟ ಕಾಂಗ್ರೆಸ್‌ ಮಾತ್ರ ಪಾಕಿಸ್ತಾನಕ್ಕೆ ಕ್ಲೀನ್‌ ಚಿನ್‌ ನೀಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

ಕೆಲ ದಿನಗಳ ಹಿಂದೆ ಪೂಂಚ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯನ್ನು ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಚನ್ನಿ ಬಿಜೆಪಿಯ ಚುನಾವಣಾ ಸ್ಟಂಟ್‌ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ಇದಾದ ಬಳಿಕ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದರು. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬುದಾಗಿ ಹೇಳಿದ್ದರು

Continue Reading

Lok Sabha Election 2024

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Reservation Row: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದ ನೆಹರೂ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

VISTARANEWS.COM


on

Reservation Row
Koo

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ (Reservation Row). ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಈ ವರದಿಯು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಯ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಒದಗಿಸುತ್ತದೆʼʼ ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ನೆಹರೂ, ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದರು ಎನ್ನುವುದನ್ನು ಆರ್ಕೈವಲ್ ಪತ್ರಿಕೆಯು ವರದಿ ಮಾಡಿತ್ತು. ಇದನ್ನು ಮಾಳವೀಯ ಉಲ್ಲೇಖಿಸಿದ್ದಾರೆ.

ಇದನ್ನು ಪೋಸ್ಟ್‌ ಮಾಡಿ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸಬಲೀಕರಣವನ್ನು ಕಾಂಗ್ರೆಸ್ ಐತಿಹಾಸಿಕವಾಗಿ ವಿರೋಧಿಸಿದೆ ಎಂದು ಮಾಳವೀಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಪಾದಿಸಿದ್ದಾರೆ. “ಕಾಂಗ್ರೆಸ್ ಯಾವಾಗಲೂ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಸಬಲೀಕರಣದ ವಿರುದ್ಧವಾಗಿದೆ. ಆದರೆ ಮೀಸಲಾತಿಯ ಸಾಂವಿಧಾನಿಕ ನಿಬಂಧನೆಗಳನ್ನು ಯಾರೂ ಹಾಳು ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೋಡಿಕೊಳ್ಳುತ್ತದೆʼʼ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಬಹುದೊಡ್ಡ ಹಿನ್ನಡೆ ಎದುರಾದಂತಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಪ್ರಸ್ತುತ ಜಾರಿಯಲ್ಲಿರುವ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದರು. “ಇಂದು ಮೀಸಲಾತಿಗೆ ಶೇ. 50ರಷ್ಟು ಮಿತಿ ಇದೆ. ನಾವು ಈ ಮಿತಿಯನ್ನು ತೆಗೆದು ಹಾಕುತ್ತೇವೆ. ಬಡವರಿಗೆ ಮೀಸಲಾತಿ ಮಿತಿಯನ್ನು ಹೆಚ್ಚಿಸುತ್ತೇವೆ ” ಎಂದು ರಾಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್‌ ಗಾಂಧಿ ಘೋಷಿಸಿದ್ದರು.

ಪ್ರಣಾಳಿಕೆಯಲ್ಲಿಯೂ ಘೋಷಣೆ

2024ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ಎಸ್‌ಟಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯ ಶೇ. 50ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇತ್ತ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಇರುವವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊನೆಗೊಳ್ಳುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ʼನಾರಿ ಶಕ್ತಿ ವಂದನ್ ಅಧಿನಿಯಮ್ʼ ಅನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕಲ್ಯಾಣ ಯೋಜನೆಗಳು ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದೂ ಬಿಜೆಪಿ ಹೇಳಿದೆ.

ಇದನ್ನೂ ಓದಿ: ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

Continue Reading
Advertisement
Dog bite
Latest57 seconds ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ25 mins ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ28 mins ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ36 mins ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ41 mins ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್42 mins ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ42 mins ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Opposition party leader R Ashok latest statement in bengaluru
ಬೆಂಗಳೂರು44 mins ago

R Ashok: ಶಾಂತಿಯ ತೋಟವನ್ನು ಹಾಳುಗೆಡವುತ್ತಿರುವುದು ಬಿಜೆಪಿಯಲ್ಲ, ಕಾಂಗ್ರೆಸ್‌: ಆರ್. ಅಶೋಕ್‌ ಆಕ್ರೋಶ

BJP Karnataka Egg video against Congress BJP social media head arrested
Lok Sabha Election 202448 mins ago

BJP Karnataka: ಕಾಂಗ್ರೆಸ್‌ ವಿರುದ್ಧ ಮೊಟ್ಟೆ ವಿಡಿಯೊ; ಬಿಜೆಪಿ ಸೋಷಿಯಲ್‌ ಮೀಡಿಯಾ ಮುಖ್ಯಸ್ಥನ ಬಂಧನ

fireworks blast
ಪ್ರಮುಖ ಸುದ್ದಿ51 mins ago

Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ5 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ5 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು6 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ6 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌