Lok Sabha Election 2024: ಚಿಗುರೊಡೆಯಿತಾ ರೆಡ್ಡಿ - ರಾಮುಲು ಫ್ರೆಂಡ್‌ಶಿಪ್‌; ವರ್ಕೌಟ್‌ ಆಯ್ತಾ ಚಾಣಕ್ಯನ ಸೂತ್ರ? - Vistara News

Lok Sabha Election 2024

Lok Sabha Election 2024: ಚಿಗುರೊಡೆಯಿತಾ ರೆಡ್ಡಿ – ರಾಮುಲು ಫ್ರೆಂಡ್‌ಶಿಪ್‌; ವರ್ಕೌಟ್‌ ಆಯ್ತಾ ಚಾಣಕ್ಯನ ಸೂತ್ರ?

Lok Sabha Election 2024: ಜನಾರ್ದನ ರೆಡ್ಡಿ ಅವರನ್ನು ದಿಢೀರನೆ ನವ ದೆಹಲಿಗೆ ಕರೆಸಿಕೊಂಡಿದ್ದ ಅಮಿತ್‌ ಶಾ ಮಾತುಕತೆ ನಡೆಸಿದ್ದರು. ಗುರುವಾರ ಶಾ ಅವರನ್ನು ಭೇಟಿಯಾಗುತ್ತಿದ್ದಂತೆ ಈ ಬಗ್ಗೆ ಟ್ವೀಟ್‌ ಮಾಡಿದ್ದ ರೆಡ್ಡಿ, ಇನ್ನು ಮೂರ್ನಾಲ್ಕು ದಿನಗಳಲ್ಲಿ ಭೇಟಿಯ ಚರ್ಚೆ ಬಗ್ಗೆ ಹೇಳುವುದಾಗಿ ತಿಳಿಸಿದ್ದರು. ಅಲ್ಲದೆ, ಎಲ್ಲವೂ ಧನಾತ್ಮಕವಾಗಿಯೇ ಚರ್ಚೆಯಾಗಿದೆ ಎಂಬ ಸುಳಿವನ್ನು ಕೊಟ್ಟಿದ್ದರು. ಹೀಗಾಗಿ ಇಬ್ಬರ ಸ್ನೇಹ ಮತ್ತೆ ಚಿಗುರೊಡೆಯುವ ಸಾಧ್ಯತೆ ಇದೆ.

VISTARANEWS.COM


on

Lok Sabha Election 2024 Janardhana Reddy Sriramulu friendship resumes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ರಾಜಕೀಯ ಚಟುವಟಿಕೆ ಬಿರಿಸುಗೊಂಡಿವೆ. ಎಲ್ಲ ರಾಜಕೀಯ ಪಕ್ಷಗಳಲ್ಲಿ ಈಗ ಅಭ್ಯರ್ಥಿಗಳ ಘೋಷಣೆ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯುತ್ತಿವೆ. ಈ ಮಧ್ಯೆ ಕೆಲವು ಲೋಕಸಭಾ ಕ್ಷೇತ್ರಗಳು ಅದರದ್ದೇ ಆದ ಕಾರಣಗಳಿಂದ ಮಹತ್ವವನ್ನು ಪಡೆದುಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಶ್ರೀರಾಮುಲುಗೆ ಈ ಬಾರಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ (Bellary Lok Sabha constituency) ಬಿಜೆಪಿ ಟಿಕೆಟ್‌ ಸಿಕ್ಕಿದೆ. ಆದರೆ, ಅವರಿಗೆ ಮಗ್ಗಲು ಮುಳ್ಳಾಗಿ ಕಾಡುತ್ತಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯ (Gali Janardhan Reddy) ಆತಂಕ ಇತ್ತು. ಈಗ ಅದೂ ಸಹ ದೂರವಾಗುವ ಮುನ್ಸೂಚನೆ ಸಿಕ್ಕಿದೆ. ರೆಡ್ಡಿ ಮತ್ತು ರಾಮುಲು ಮಧ್ಯೆ ಫ್ರೆಂಡ್‌ಶಿಪ್‌ನ ಸೆಕೆಂಡ್‌ ಇನ್ನಿಂಗ್ಸ್‌ ಶುರುವಾಗುತ್ತಿದೆಯೇ? ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಚುನಾವಣಾ ಚಾಣಕ್ಯ, ಗೃಹ ಸಚಿವ ಅಮಿತ್ ಶಾ (Amit Shah) ಅವರೇ ಸೂತ್ರಧಾರರಾಗಿದ್ದಾರೆ.

ಜನಾರ್ದನ ರೆಡ್ಡಿ ಅವರನ್ನು ದಿಢೀರನೆ ನವ ದೆಹಲಿಗೆ ಕರೆಸಿಕೊಂಡಿದ್ದ ಅಮಿತ್‌ ಶಾ ಮಾತುಕತೆ ನಡೆಸಿದ್ದರು. ಗುರುವಾರ ಶಾ ಅವರನ್ನು ಭೇಟಿಯಾಗುತ್ತಿದ್ದಂತೆ ಈ ಬಗ್ಗೆ ಟ್ವೀಟ್‌ ಮಾಡಿದ್ದ ರೆಡ್ಡಿ, ಇನ್ನು ಮೂರ್ನಾಲ್ಕು ದಿನಗಳಲ್ಲಿ ಭೇಟಿಯ ಚರ್ಚೆ ಬಗ್ಗೆ ಹೇಳುವುದಾಗಿ ತಿಳಿಸಿದ್ದರು. ಅಲ್ಲದೆ, ಎಲ್ಲವೂ ಧನಾತ್ಮಕವಾಗಿಯೇ ಚರ್ಚೆಯಾಗಿದೆ ಎಂಬ ಸುಳಿವನ್ನು ಕೊಟ್ಟಿದ್ದರು.

ರಾಮುಲು ಪರ ಕೆಲಸ ಮಾಡಲು ಸೂಚನೆ?

ಜನಾರ್ದನ ರೆಡ್ಡಿ ಭೇಟಿ ವೇಳೆ ಚರ್ಚೆ ನಡೆಸಿದ ಗೃಹ ಸಚಿವ ಅಮಿತ್‌ ಶಾ, ಈ ಬಾರಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ಪರ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಗೂ ಮೊದಲು ರೆಡ್ಡಿ – ರಾಮುಲು ಸ್ನೇಹ ಸಂಬಂಧ ಕಟ್ ಆಗಿತ್ತು. ಹೀಗಾಗಿ ಆ ಚುನಾವಣೆಯಲ್ಲಿ ರಾಮುಲು ಅವರನ್ನು ಸೋಲಿಸಲು ರೆಡ್ಡಿ ಪಣ ತೊಟಿದ್ದಲ್ಲದೆ, ಸಕ್ಸಸ್‌ ಆಗಿದ್ದರು. ಅಲ್ಲದೆ, ಈ ಲೋಕಸಭೆಗೂ ಕೆಲವು ಕಡೆ ತಮ್ಮ ಅಭ್ಯರ್ಥಿಗಳನ್ನು ಹಾಕುವುದಾಗಿ ಹೇಳಿದ್ದರು. ಆದರೆ, ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಇದು ಬಿಜೆಪಿ ಹಾಗೂ ರಾಮುಲು ಆತಂಕಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: Lok Sabha Election 2024: ಲೋಕಸಭೆಯಲ್ಲಿ ಬಿಜೆಪಿಗೆ ರೆಡ್ಡಿ ಸಪೋರ್ಟ್‌? ಅಮಿತ್‌ ಶಾ ಭೇಟಿ ಹಿಂದಿನ ರಹಸ್ಯವೇನು?

ಅಮಿತ್‌ ಶಾ ಚಾಣಕ್ಯ ನೀತಿ

ವಿಧಾನಸಭಾ ಅಧಿವೇಶನದಲ್ಲೂ ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಗುಡುಗಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತವನ್ನು ಚಲಾವಣೆ ಮಾಡಿದ್ದರು. ಮೊನ್ನೆಯಷ್ಟೇ ಜನಾರ್ದನ ರೆಡ್ಡಿ ಸಹ ನಮ್ಮ ಜತೆ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಆದರೆ, ಎರಡೇ ದಿನದಲ್ಲಿ ಒಟ್ಟಾರೆ ಚಿತ್ರಣವೇ ಬದಲಾವಣೆಯಾಗಿದೆ. ಇಲ್ಲಿ ಅಮಿತ್‌ ಶಾ ಚಾಣಕ್ಯ ನೀತಿ ಬಹಳವಾಗಿಯೇ ವರ್ಕೌಟ್‌ ಆದಂತೆ ಕಾಣುತ್ತಿದೆ. ಹೀಗಾಗಿ ಸ್ನೇಹಿತನ ಪರ ಕೆಲಸ ಮಾಡುತ್ತಾರಾ ಎಂಬ ಪ್ರಶ್ನೆಗೆ ಉತ್ತರವೊಂದೇ ಬಾಕಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Postal Ballot: ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು.

VISTARANEWS.COM


on

Postal Ballot
Koo

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಅಂಚೆ ಮತದಾನಕ್ಕೆ (Postal Ballot) ಅವಕಾಶ ಮಾಡಿಕೊಡಬೇಕು ಎಂದು ಛತ್ತೀಸ್‌ಗಢದ 78 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಇದರಿಂದಾಗಿ, ಅನಾರೋಗ್ಯವಿದ್ದರೂ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂಬ ಹಂಬಲ ಹೊಂದಿದ್ದ ಸರಳ ಶ್ರೀವಾಸ್ತವ ಎಂಬ ಅಜ್ಜಿಗೆ ನಿರಾಸೆಯಾದಂತಾಗಿದೆ.

ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು. ಆದರೆ, ನ್ಯಾಯಮೂರ್ತಿಗಳಾದ ಬೆಲಾ ಎಂ. ತ್ರಿವೇದಿ ಹಾಗೂ ಜಸ್ಟಿಸ್‌ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

“ಬಿಲಾಸ್‌ಪುರದಲ್ಲಿ ಮೇ 7ರಂದೇ ಮತದಾನ ಮುಕ್ತಾಯಗೊಂಡಿದೆ. ಮತದಾನ ಮುಗಿದು ಹಲವು ದಿನಗಳ ನಂತರ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದರೆ ಆಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊದಲೇ ಅರ್ಜಿ ಸಲ್ಲಿಸಬೇಕು. ಅಂಚೆ ಮತದಾನಕ್ಕೆ ಹಲವು ಪ್ರಕ್ರಿಯೆಗಳಿವೆ. ಅವುಗಳೆಲ್ಲವೂ ಸಮಯಕ್ಕೆ ಅನುಸಾರವಾಗಿ ಆಗಬೇಕು. ಅಷ್ಟಕ್ಕೂ, ಭಾರತದಲ್ಲಿ ಪ್ರತಿಯೊಬ್ಬರಿಗೂ ಮನೆಯಲ್ಲಿ ಕುಳಿತೇ ಮತದಾನ ಮಾಡುವ ಉಮೇದಿ ಇದೆ” ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಸರಳ ಶ್ರೀವಾಸ್ತವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಹಾಸಿಗೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಚೆ ಮತದಾನದ ಮೂಲಕವಾದರೂ ಹಕ್ಕು ಚಲಾಯಿಸಬೇಕು ಎಂದು ಬಯಸಿದ್ದರು. ಇದೇ ಕಾರಣಕ್ಕಾಗಿ ಅವರು ಏಪ್ರಿಲ್‌ 29ರಂದೇ ಛತ್ತೀಸ್‌ಗಢ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 6ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಸುಪ್ರೀಂ ಕೋರ್ಟ್‌ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಒಟ್ಟಿನಲ್ಲಿ, ಯುವಕರೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡದ, ಜಾಗೃತಿ ಮೂಡಿಸಿದರೂ ಕೇಳದಂತಹ ಸಂದರ್ಭದಲ್ಲಿ, ಮನೆಯಿಂದಲಾದರೂ ಹಕ್ಕು ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋದ ಅಜ್ಜಿಯ ಆಶಯವಂತೂ ಒಳ್ಳೆಯದೇ ಆಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ದೇಶ

Lok Sabha Election: 5ನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದ ಕೆಲವೆಡೆ ಮಾತ್ರ ಗಲಾಟೆ ನಡೆದಿವೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ಶಾಂತಿಯುತವಾಗಿ ನಡೆದಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.57.5ರಷ್ಟು ಮತದಾನ ದಾಖಲಾಗಿದೆ. ಕಳೆದ ನಾಲ್ಕು ಹಂತದ ಮತದಾನದ ವೇಳೆ ಹೆಚ್ಚಿನ ಮತದಾನ ದಾಖಲಾಗಿತ್ತು. ಆದರೆ, ಐದನೇ ಹಂತದಲ್ಲಿ ಮತದಾನ ಪ್ರಮಾಣ ಭಾರಿ ಇಳಿಕೆಯಾಗಿದೆ. ಈ ಕುರಿತು ಚುನಾವಣೆ ಆಯೋಗ ಅಂಕಿ-ಅಂಶ ಬಿಡುಗಡೆ ಮಾಡಿದಾಗಲೇ ನಿಖರ ಮಾಹಿತಿ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚು

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಐದನೇ ಹಂತದ ಮತದಾನದೊಂದಿಗೆ ದೇಶಾದ್ಯಂತ ಇದುವರೆಗೆ ಒಟ್ಟು 428 ಕ್ಷೇತ್ರಗಳಲ್ಲಿ ಚುನಾವಣೆ ನಡೆದಂತಾಗಿದೆ. ಉಳಿದ ಕ್ಷೇತ್ರಗಳಲ್ಲಿ ಐದು ಹಾಗೂ ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯೂ ನಡೆದಿದ್ದು, ಜೂನ್‌ 4ರಂದೇ ಫಲಿತಾಂಶ ತಿಳಿಯಲಿದೆ.

ಇದನ್ನೂ ಓದಿ: Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Continue Reading

Lok Sabha Election 2024

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

CM Siddaramaiah: ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

how many seats will the Congress have in the Lok Sabha elections CM Siddaramaiah statement
Koo

ಬೆಂಗಳೂರು: ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಮೀಟ್ ದ ಪ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ಬಂದರು. ಅಲ್ಲದೆ, ಈ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಕಿಡಿಕಾರಿದರು. ಇದೇ ವೇಳೆ, ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆಯೂ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಆಗುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ

ಬಿಜೆಪಿಯ ನಿರಂತರ ಅಪ ಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಸಮೇತ ವಿವರಿಸಿದರು.

how many seats will the Congress have in the Lok Sabha elections CM Siddaramaiah statement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 56274 ಕೋಟಿ ರೂಪಾಯಿ ಖರ್ಚು ಮಾಡಿದೆವು. ಅಂದರೆ ಬಜೆಟ್‌ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೀರಾವರಿಗೆ 16360 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 18198 ಕೋಟಿ ರೂಪಾಯಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

how many seats will the Congress have in the Lok Sabha elections CM Siddaramaiah statement

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲಿಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು.

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ. ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ. ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ. ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆಗೆ ಶುರು ಮಾಡಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Continue Reading

ದೇಶ

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

Lok Sabha Election 2024: ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

VISTARANEWS.COM


on

Lok Sabha Election 2024
Koo

ಉತ್ತರಪ್ರದೇಶ: ಲೋಕಸಭೆ ಚುನಾವಣೆ(Lok Sabha Election 2024) ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರಾಜಕೀಯ ನಾಯಕರು ಒಂದರ ಮೇಲೊಂದರಂತೆ ರ್ಯಾಲಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಿನ್ನೆ ಉತ್ತರಪ್ರದೇಶ(Uttara Pradesh)ದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಮತ್ತು ಅಖಿಲೇಶ್‌ ಯಾದವ್‌(Akhilesh Yadav) ಭಾಗಿಯಾಗಿದ್ದ ಚುನಾವಣಾ ರ್ಯಲಿಯಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಫುಲ್‌ಫುರದಲ್ಲಿ ಸ್ವತಃ ನಾಯಕರೇ ಆಘಾತಕ್ಕೀಡಾಗುವಂತಹ ರೀತಿಯಲ್ಲಿ ಜನ ಭಾಗಿಯಾಗಿದ್ದರು. ನೆರೆದಿರುವ ಜನರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

ಭಾಷಣ ಮಾಡದೇ ವೇದಿಕೆಯಿಂದ ನಿರ್ಗಮಿಸಿದ ರಾಹುಲ್‌, ಅಖಿಲೇಶ್‌

ಭಾರೀ ಜನಸ್ತೋಮ ಕಂಡು ದಂಗಾಗಿದ್ದ ರಾಹುಲ್‌ ಮತ್ತು ಅಖಿಲೇಶ್‌ ವೇದಿಕೆಯಿಂದ ನಿರ್ಗಮಿಸುವುದೇ ಸೂಕ್ತ ಎಂದು ಭಾವಿಸಿದರು. ಉದ್ರಿಕ್ತ ಜನ ಬ್ಯಾರಿಕೇಟ್‌ಗಳನ್ನು ಮುರಿದು ಒಳಗೆ ಪ್ರವೇಶಿಸಿದ್ದರು. ಅಲ್ಲದೇ ಕಹಲವು ವೇದಿಕೆಗೆ ಹತ್ತಲೂ ಯತ್ನಿಸಿದ್ದರು. ಕೆಲವರು ವೇದಿಕೆ ಏರುವಲ್ಲಿ ಯಶಸ್ವಿ ಆಗಿದ್ದರು. ಕಾರ್ಯಕರ್ತರ ಈ ರೀತಿಯಾದ ಅನುಚಿತ ವರ್ತನೆಯಿಂದ ಕುಪಿತಗೊಂಡ ಇಬ್ಬರೂ ನಾಯಕರು ಏನೂ ಮಾತನಾಡಲಿಲ್ಲ. ತಾವು ಮಾಡಬೇಕಾಗಿದ್ದ ಭಾಷಣವನ್ನೂ ಮಾಡದೇ ಇಬ್ಬರೂ ನಾಯಕರು ವೇದಿಕೆಯಿಂದ ನಿರ್ಗಮಿಸಿ ಬಳಿಕ ಇಬ್ಬರೂ ನಾಯಕರು ಇಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತೆರಳಿದರು.

ಗಲಾಟೆ ಎಷ್ಟು ದೊಡ್ಡದಾಗಿದೆ ಎಂದರೆ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಯಾವುದೇ ಭಾಷಣ ಮಾಡದೆ ಸ್ಥಳದಿಂದ ನಿರ್ಗಮಿಸಿದರು. ಫುಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಮತ್ತು ಅಖಿಲೇಶ್ ಜಂಟಿ ಸಾರ್ವಜನಿಕ ಸಭೆ ನಡೆಯಬೇಕಿತ್ತು. ರಾಹುಲ್ ಗಾಂಧಿ ಅವರು ಪ್ರಯಾಗ್‌ರಾಜ್‌ನ ಪಕ್ಷದ ಅಭ್ಯರ್ಥಿ ಉಜ್ವಲ್ ರಾಮನ್‌ಸಿಂಗ್‌ಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.

ಇದನ್ನೂ ಓದಿ:Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

ಕಾಂಗ್ರೆಸ್-ಸಮಾಜವಾದಿ ಪಕ್ಷದ ಸಹಭಾಗಿತ್ವವನ್ನು ಬೆಂಬಲಿಸಲು ನಮ್ಮ ಸಾವಿರಾರು ಕಾರ್ಯಕರ್ತರು ಇಲ್ಲಿದ್ದಾರೆ. ಮತಗಟ್ಟೆಗಳಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ನಿಂತು ಇಲ್ಲಿನ ಅಭ್ಯರ್ಥಿಯನ್ನು 5 ಲಕ್ಷ ಮತಗಳಿಂದ ಗೆಲ್ಲಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ, ಇಲ್ಲಿ ನಮ್ಮ ಅಭ್ಯರ್ಥಿ ಉಜ್ವಲ್ ರಮಣ್‌ಸಿಂಗ್ ಇದ್ದಾರೆ, ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಿ ಎಂದಷ್ಟೇ ಹೇಳಿ ವೇದಿಕೆಯಿಂದ ನಿರ್ಗಮಿಸಿದರು.

Continue Reading
Advertisement
MS Dhoni Bike Riding
ಕ್ರೀಡೆ9 mins ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ29 mins ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ34 mins ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ1 hour ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ1 hour ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ1 hour ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Nutrition Alert
ಆರೋಗ್ಯ1 hour ago

Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

Postal Ballot
ದೇಶ2 hours ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ2 hours ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ2 hours ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌