Lok Sabha Election 2024: ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಎಚ್‌ಡಿಕೆ ಹೇಳಿಲ್ಲ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ - Vistara News

Lok Sabha Election 2024

Lok Sabha Election 2024: ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಎಚ್‌ಡಿಕೆ ಹೇಳಿಲ್ಲ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ

Lok Sabha Election 2024: ತುರುವೇಕೆರೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ, ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ? ಎಂದು ಕಾಂಗ್ರೆಸ್‌ಗೆ ಜೆಡಿಎಸ್‌ ತಿರುಗೇಟು ನೀಡಿದೆ.

VISTARANEWS.COM


on

HD Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ತುಮಕೂರಿನ ತುರವೇಕೆರೆಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಪ್ರಚಾರ ಭಾಷಣ ಮಾಡುವ ವೇಳೆ ಆಡಿದ ಮಾತುಗಳು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. “ಗ್ಯಾರಂಟಿಯಿಂದ (Congress Guarantee Scheme) ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ” ಎಂಬ ಎಚ್‌ಡಿಕೆ ಹೇಳಿಕೆ ರಾಜ್ಯದಲ್ಲಿ ಸಂಚಲವನ್ನು ಸೃಷ್ಟಿಸಿದೆ. ಆದರೆ, ಇದರ ಬಗ್ಗೆ ಈಗ ಜೆಡಿಎಸ್‌ (JDS Karnataka) ಆಕ್ರೋಶವನ್ನು ಹೊರಹಾಕಿದ್ದು, ಇದೊಂದು ಸುಳ್ಳು ಸುದ್ದಿ. ಇಂತಹ ಹೇಳಿಕೆಯನ್ನು ಕುಮಾರಸ್ವಾಮಿ ನೀಡುತ್ತಾರೆಯೇ ಎಂದು ಪ್ರಶ್ನೆ ಮಾಡಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್‌, ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆನ್ನಲಾದ ಹೇಳಿಕೆ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. ಕುಮಾರಸ್ವಾಮಿ ಅವರು ಮಹಿಳೆಯರಿಗೆ ಸಾಕಷ್ಟು ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಹೇಳಿದೆ.

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

• “ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ಕಾಂಗ್ರೆಸ್‌ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದಿದೆ.

• ತುರುವೇಕೆರೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ, ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?

• 2018-19ರಲ್ಲಿ ಕಾಂಗ್ರೆಸ್‌ ಕರ್ನಾಟಕದ ವಿರೋಧ ಲೆಕ್ಕಿಸದೆ ರೈತರ 25,000 ಕೋಟಿ ರೂಪಾಯಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ. ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?

• ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್‌ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ಅಷ್ಟೇ ಏಕೆ? ಒಂದು ಕೈಯಲ್ಲಿ 2000 ರೂಪಾಯಿ ಕೊಟ್ಟು ಇನ್ನೊಂದು ಕೈಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ! ಇಲ್ಲ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?

• ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿಬೀದಿಗಳ ಬಾರ್‌ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ. ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ?

• ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ.. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರಿ ಪ್ರೋತ್ಸಾಹ ಕೊಡುವುದು ‘ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?

ಇದನ್ನೂ ಓದಿ: Lok Sabha Election 2024: ಲೋಕಸಭಾ ಚುನಾವಣೆಗಾಗಿ ರಾಜ್ಯಕ್ಕೆ ಬಿ.ಎಲ್. ಸಂತೋಷ್ ಎಂಟ್ರಿ; ಇಂದು ಮಂಗಳೂರಲ್ಲಿ ಸಭೆ?

ಕುಮಾರಸ್ವಾಮಿ ಅವರು ಹೇಳಿದ್ದು.. ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ.

ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರ್ಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ?” ಎಂದು ಜೆಡಿಎಸ್‌ ಪ್ರಶ್ನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Narendra Modi:ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ:ಲೋಕಸಭಾ ಚುನಾವಣೆ(Lok Sabha Election 2024) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮ ಜನ್ಮಭೂಮಿ(Ram Janmbhoomi)ಯಲ್ಲಿ ಶ್ರೀರಾಮ ಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ವಿಶೇಷ ಪೂಜೆ ಬಳಿಕ ಸುಮಾರು ಎರಡು ಕಿಲೋಮೀಟರ್‌ ರೋಡ್‌ ಶೋ(Roadshow) ನಡೆಸಲಿದ್ದಾರೆ. ಶನಿವಾರವೇ ಉತ್ತರಪ್ರದೇಶಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷ(SP)ದ ಭದ್ರಕೋಟೆ ಇಟವಾದಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆ ಹಾಗೂ ಧೌರಹರದಲ್ಲಿ ಸಂಜೆ ರ್ಯಾಲಿ ಕೈಗೊಳ್ಳಲಿದ್ದಾರೆ.

ಇದಾದ ಬಳಿಕ ನೇರವಾಗಿ ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ, ಸಂಜೆ 7ಗಂಟೆಗೆ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಸುಮಾರು 2 ಕಿಲೋ ಮೀಟರ್‌ ರೋಡ್‌ಶೋ ನಡೆಸಲಿದ್ದಾರೆ. ಇನ್ನು ಈ ರೋಡ್‌ ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಸಾಗಲಿದೆ. ಈ ಬೃಹತ್‌ ರೋಡ್‌ಶೋದಲ್ಲಿ ಸಿಂಧಿ, ಪಂಜಾಬಿಗಳು ಮತ್ತು ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗಿಯಾಗಲಿದ್ದಾರೆ. ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು ರಾಮಮಂದಿರದ 11ನೇ ಗೇಟ್‌ನ ಎದುರು ಹೂವುಗಳು ಮತ್ತು ಧ್ವಜಗಳಿಂ ಸಿಂಗರಿಸಲಾಗಿದೆ. ಪೊಲೀಸರ ಜೊತೆಗೆ ಭಯೋತ್ಪಾದಕಾ ನಿಗ್ರಹ ದಳ(ATS) ಕಮಾಂಡೋಗಳು ಭದ್ರತಾ ವ್ಯವಸ್ಥೆಯನ್ನು ಪರಿಶೋಲಿಸುತ್ತಿದ್ದಾರೆ. ಅಲ್ಲದೇ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸಕಲ ಸಿದ್ದತೆ ನಡೆಸಲಾಗಿದೆ. ರಾಮಲಲ್ಲಾ ದರ್ಶನ ಮಾರ್ಗದ ಗೇಟ್‌ ನಂಬರ್‌ 11ರಲ್ಲಿ ಹೂಗಳಿಂದ ಸಿಂಗರಿಸಲಾಗಿದೆ. ರಸ್ತೆಯುದ್ಧಕ್ಕೂ ಪ್ರಧಾನಿ ಮೋದಿಯ ಕಟೌಟ್‌ ನಿರ್ಮಿಸಲಾಗಿದೆ. ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಅಯೊಧ್ಯೆಗೆ ಭೇಟಿ ಕೊಡುತ್ತಿದ್ದಾರೆ. ಅವರ ರೋಡ್‌ಶೋದಲ್ಲಿ ಅನೇಕ ಸಾಧು ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

ಮೇ 14ರಂದು ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಭಾನುವಾರ ಈ ವಿಷಯ ತಿಳಿಸಿದ ವಾರಣಾಸಿ ಬಿಜೆಪಿ ನಗರಾಧ್ಯಕ್ಷ ವಿದ್ಯಾಸಾಗರ್ ರೈ, ಮೇ 13 ರಂದು ಮೋದಿ ಅವರು ಕ್ಷೇತ್ರದಲ್ಲಿ ರೋಡ್‌ಶೋ ನಡೆಸಲಿದ್ದು, ಅದಕ್ಕೆ ಸಿದ್ಧತೆಗಳು ನಡೆಯುತ್ತಿರುವುದಾಗಿ ತಿಳಿಸಿದರು. “ರೋಡ್‌ಶೋಗೆ ಮಾರ್ಗವನ್ನು ಅಂತಿಮಗೊಳಿಸಲಾಗಿದೆ, ಮೇ 14 ರಂದು ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು. ವಾರಣಾಸಿಯಲ್ಲಿ ಕಾಂಗ್ರೆಸ್ ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಮತ್ತು ಬಿಎಸ್ ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಕೊನೆಯ ಸುತ್ತಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಚುನಾವಣೆ ನಡೆಯಲಿದೆ

Continue Reading

Lok Sabha Election 2024

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Lok Sabha Election 2024: ಬಿಜೆಪಿ ಸೋಷಿಯಲ್‌ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಡಿಯೊ ಹಂಚಿಕೊಂಡಿದೆ ಎಂದು ಕಾಂಗ್ರೆಸ್‌ ದೂರು ನೀಡಿದೆ. ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಲ್ಲಿ ಭೀತಿ ಹುಟ್ಟಿಸುವಂತ ವಿಡಿಯೊ ಪೋಸ್ಟ್‌ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಮುಖ್ಯಸ್ಥ ಅಮಿತ್‌ ಮಾಳವಿಯಾ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದೂರು ಕಾಂಗ್ರೆಸ್‌ ದಾಖಲಿಸಿದೆ. ದೂರಿನಲ್ಲಿ, ಕರ್ನಾಟಕ ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ಪಾತ್ರಗಳನ್ನು ಚಿತ್ರಿಸುವ ವಿಡಿಯೊ ಇರುವುದನ್ನು ಉಲ್ಲೇಖಿಸಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಈಗಾಗಲೇ ಎರಡು ಹಂತದ ಮತದಾನ ಮುಗಿದಿದ್ದು, ಮೂರನೇ ಹಂತಕ್ಕೆ ಸಿದ್ಧತೆ ನಡೆಯುತ್ತಿದೆ. ಕರ್ನಾಟದ 14 ಕ್ಷೇತ್ರಗಳಲ್ಲಿ ಮೇ 7ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಮಧ್ಯೆ ಬಿಜೆಪಿ (BJP) ಸೋಷಿಯಲ್‌ ಮೀಡಿಯಾದಲ್ಲಿ ಆಕ್ಷೇಪಾರ್ಹ ವಿಡಿಯೊ ಹಂಚಿಕೊಂಡಿದೆ ಎಂದು ಕಾಂಗ್ರೆಸ್‌ (Congress) ದೂರು ನೀಡಿದೆ. ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಲ್ಲಿ ಭೀತಿ ಹುಟ್ಟಿಸುವಂತ ವಿಡಿಯೊ ಪೋಸ್ಟ್‌ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಮುಖ್ಯಸ್ಥ ಅಮಿತ್‌ ಮಾಳವಿಯಾ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದೂರು ಕಾಂಗ್ರೆಸ್‌ ದಾಖಲಿಸಿದೆ.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸಲ್ಲಿಸಿದ ದೂರಿನಲ್ಲಿ, ಕರ್ನಾಟಕ ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ಪಾತ್ರಗಳನ್ನು ಚಿತ್ರಿಸುವ ವಿಡಿಯೊ ಇರುವುದನ್ನು ಉಲ್ಲೇಖಿಸಲಾಗಿದೆ.

ವಿಡಿಯೊದಲ್ಲಿ ಏನಿದೆ?

ಈ ವಿಡಿಯೊದ ಆರಂಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯ ಬುಟ್ಟಿಯಲ್ಲಿರುವ ಮೊಟ್ಟೆಗಳು ಎಂಬಂತೆ ಚಿತ್ರಿಸಲಾಗಿದೆ. ಬಳಿಕ ಈ ಮೀಸಲಾತಿ ಬುಟ್ಟಿಯಲ್ಲಿ ರಾಹುಲ್ ಗಾಂಧಿಯನ್ನು ಹೋಲುವ ಅನಿಮೇಟೆಡ್ ಪಾತ್ರ ಮುಸ್ಲಿಂ ಸಮುದಾಯದ ಮತ್ತೊಂದು ಮೊಟ್ಟೆಯನ್ನು ಇಡುವಂತೆ ತೋರಿಸಲಾಗಿದೆ. ಬಳಿಕ ಮೊಟ್ಟೆ ಬಿರಿದು ಪಕ್ಷಿಗಳು ಜೀವ ತಳೆಯುತ್ತವೆ. ಆಗ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರನ್ನು ಹೋಲುವ ಪಾತ್ರಗಳು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತವೆ. ಬಳಿಕ ಬಲಿಷ್ಠವಾಗುವ ಮುಸ್ಲಿಮರನ್ನು ಹೋಲುವ ಹಕ್ಕಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳನ್ನು ಬುಟ್ಟಿಯಿಂದ ಹೊರದಬ್ಬುವುದು ವಿಡಿಯೊದಲ್ಲಿ ಕಂಡು ಬಂದಿದೆ.

“ಈ ವಿಡಿಯೊದಲ್ಲಿ ಮುಸ್ಲಿಂ ಸಮುದಾಯದವರಿಗೆ ಹೆಚ್ಚಿನ ಹಣವನ್ನು ನೀಡುವಂತೆ ಮತ್ತು ಮುಸ್ಲಿಂ ಸಮುದಾಯವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಹೊರ ಹಾಕುವಂತೆ ಬಿಂಬಿಸಲಾಗಿದೆ” ಎಂದು ರಮೇಶ್ ಬಾಬು ಆರೋಪಿಸಿದ್ದಾರೆ. ʼʼಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾತ್ರವಲ್ಲ 1989ರ ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವೂ ಹೌದುʼʼ ಎಂದು ಹೇಳಿದ್ದಾರೆ. ಇಂತಹ ವಿಡಿಯೊಗಳು ಸಮುದಾಯಗಳ ನಡುವೆ ದ್ವೇಷ ಹುಟ್ಟು ಹಾಕುವ ಸಾಧ್ಯತೆ ಇದೆ. 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದ ಸಂದರ್ಭದಲ್ಲಿ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊವನ್ನು ಅನುಮೋದಿಸಿದ್ದಕ್ಕಾಗಿ ಅವರು ರಾಜ್ಯ ಮಟ್ಟದ ಮಾಧ್ಯಮ ಮೇಲ್ವಿಚಾರಣಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಅದರ ಪ್ರಸಾರದ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ್ದಾರೆ. ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

Continue Reading

Lok Sabha Election 2024

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Assault Case : ಕಾಂಗ್ರೆಸ್‌ಗೆ ಮತ ಹಾಕಲ್ಲ, ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ, ಕಾಂಗ್ರೆಸ್‌ನ ಕೆಲ ಕಾರ್ಯಕರ್ತರು ಹಲ್ಲೆ ಮಾಡಿ, ಬಿಜೆಪಿ ಮುಖಂಡನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

By

assault case
Koo

ಕೊಪ್ಪಳ: ಕಾಂಗ್ರೆಸ್ ಮುಖಂಡರಿಂದ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ದ್ಯಾಮಣ್ಣ ಬಾಲನಗೌಡರ್ ಹಲ್ಲೆಗೊಳಗಾದ ಬಿಜೆಪಿ ಮುಖಂಡರಾಗಿದ್ದಾರೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ಘಟನೆ ನಡೆದಿದೆ.

ಕಾಂಗ್ರೆಸ್‌ ಕಾರ್ಯಕರ್ತರಾದ ಗವಿಸಿದ್ದ, ಬಾಳಪ್ಪ, ನೀಲಪ್ಪ, ಗಂಗಣ್ಣ ಎಂಬುವವರು ದ್ಯಾಮಣ್ಣನಿಗೆ ಹಲ್ಲೆ ನಡೆಸಿದ್ದಾರೆ. ನಿನ್ನೆ ಶನಿವಾರ ರಾತ್ರಿ ದ್ಯಾಮಣ್ಣ ಮನೆಗೆ ಕಾಂಗ್ರೆಸ್ ಮುಖಂಡರು ಬಂದಿದ್ದಾರೆ. ಈ ವೇಳೆ ದ್ಯಾಮಣ್ಣ ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ, ಬಿಜೆಪಿ ಪಕ್ಷಕ್ಕೆ ಮತ ಹಾಕುತ್ತೇವೆ ಎಂದಿದ್ದಾರೆ.

ಇದರಿಂದ ಸಿಟ್ಟಾದ ಕೈ ಕಾರ್ಯಕರ್ತರು, ಕಾಂಗ್ರೆಸ್‌ಗೆ ಯಾಕೆ ಮತ ಹಾಕುವುದಿಲ್ಲ ಎಂದು ದ್ಯಾಮಣ್ಣನ ಮೇಲೆ ಎರಗಿದ್ದಾರೆ. ಬಳಿಕ ದ್ಯಾಮಣ್ಣನನ್ನು ರಸ್ತೆಗೆಳೆದು ತಂದು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ದ್ಯಾಮಣ್ಣನ ಕೈ-ಕಾಲು ಮುರಿದಿದ್ದಾರೆ. ಗಾಯಾಳನ್ನು ದ್ಯಾಮಣ್ಣನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲಾಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: 108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

ಹಿಮಾಚಲ ಪ್ರದೇಶ: ಲೋಕಸಭೆ ಚುನಾವಣೆ(Kangana Ranaut) ದೇಶದಲ್ಲಿ ದಿನೇ ದಿನೇ ರಂಗೇರಿದೆ. ಅಬ್ಬರದ ಪ್ರಚಾರ, ಪರ ವಿರೋಧ ವಾಗ್ದಾಳಿ ನಡೆಸಿದ್ದಾರೆ. ಎದುರಾಳಿ ನಾಯಕರನ್ನು ಟೀಕಿಸುವ ಭರದಲ್ಲಿ ಕೆಲವೊಮ್ಮೆ ತಮ್ಮದೇ ಪಕ್ಷಕ್ಕೆ ಮುಜುಗರ ತಂದಿರುವ ಘಟನೆಗಳೂ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಹೇಳಿಕೆ ಮೂಲಕ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಅಭ್ಯರ್ಥಿ ಕಂಗನಾ ರಾಣಾವತ್‌ ಆಭಾಸಕ್ಕೀಡಾಗಿದ್ದಾರೆ. ಪ್ರಚಾರ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಬಿಹಾರದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌(Tejaswi Yadav) ಅವರನ್ನು ಟೀಕಿಸುವ ಭರದಲ್ಲಿ ತಮ್ಮದೇ ಪಕ್ಷ ಬಿಜೆಪಿ ಮುಖಂಡ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿತೇಜಸ್ವಿ ಸೂರ್ಯ(Tejaswi Surya) ಹೆಸರು ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ. ಇದೀಗ ಈ ವಿಡಿಯೋ ವೈರಲ್‌(Viral Video) ಆಗಿದ್ದು, ಖುದ್ದು, ತೇಜಸ್ವಿ ಯಾದವ್‌ ಅವರೇ ಈ ವಿಡಿಯೋಗೆ ರಿಯಾಕ್ಟ್‌ ಮಾಡಿದ್ದಾರೆ.

ಕಂಗನಾ ಹೇಳಿದ್ದೇನು?

ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ:Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಏ.9ರಂದು ನವರಾತ್ರಿಯ ದಿನ ತೇಜಸ್ವಿ ಯಾದವ್‌ ಮೀನು ತಿನ್ನುವ ಫೋಟೋವನ್ನು ಶೇರ್‌ ಮಾಡಿಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದರು. ಇದೇ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಕಂಗನಾ, ರಾಹುಲ್‌, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದರು. ಸಂಪೂರ್ಣವಾಗಿ ಹಾಳಾದ ರಾಜಕುಮಾರರನ್ನು ಹೊಂದಿರುವ ಪಕ್ಷಗಳಿವೆ. ಅಲ್ಲಿ ಚಂದ್ರನ ಮೇಲೆ ಆಲೂಗೆಡ್ಡೆ ಬೆಳೆಯುವ ರಾಹುಲ್‌ ಗಾಂಧಿ, ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಮತ್ತು ಅಸಂಬದ್ದ ಹೇಳಿಕೆ ನೀಡುವ ಅಖಿಲೇಶ್‌ ಯಾದವ್‌ ಇದ್ದಾರೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ಭಾಷೆಯನ್ನು ಅರ್ಥ ಮಾಡಿಕೊಳ್ಳದಿರುವ ಇಂತಹ ನಾಯಕರು ಹೇಗೆ ತಾನೇ ದೇಶವನ್ನು ನಡೆಸಬಲ್ಲರು ಎಂದು ಅವರು ವ್ಯಂಗ್ಯವಾಡಿರುವ ವಿಡಿಯೋ ವೈರಲ್‌ ಆಗಿದೆ.

ಟಾಂಗ್‌ ಕೊಟ್ಟ ತೇಜಸ್ವಿ ಯಾದವ್‌

ಕಂಗನಾ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿದ್ದು, ರಾರು ಈ ಮಹಿಳೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಅವರು ಈ ವಿಡಿಯೋವನ್ನು ತನ್ನ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿ ಯಾರು ಈ ಮಹಿಳೆ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಜೂ.1ರಂದು ಹಿಮಾಚಲಪ್ರದೇಶದಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಕಂಗನಾ ವಿರುದ್ಧ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Vijay Sankeshwar: ಹುಬ್ಬಳ್ಳಿಯ ವರೂರಿನ ವಿಆರ್‌ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದ, ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್‌ಮನ್‌ ವಿಜಯ ಸಂಕೇಶ್ವರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Vijay Sankeshwar
Koo

ಹುಬ್ಬಳ್ಳಿ: 2014ರಲ್ಲಿ ಪ್ರಧಾನಿಯಾದ ನರೇಂದ್ರ ಮೋದಿ (Narendra Modi) ಅವರ ಕೈಗೆ ಮೌನಿ ಬಾಬಾ (ಡಾ. ಮನಮೋಹನ ಸಿಂಗ್) ಖಾಲಿ ಚೊಂಬನ್ನೇ ಕೊಟ್ಟಿದ್ದರು ಎಂದು ಮಾಜಿ ಸಂಸದ, ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್‌ಮನ್‌ ವಿಜಯ ಸಂಕೇಶ್ವರ (Vijay Sankeshwar) ಟೀಕಿಸಿದರು.

ಹುಬ್ಬಳ್ಳಿಯ ವರೂರಿನ ವಿಆರ್‌ಎಲ್ ಸಂಸ್ಥೆ ಆವರಣದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, 2014ರಲ್ಲಿ ಇನ್ನೊಂದೇ ತಿಂಗಳು ಕಳೆದಿದ್ದರೂ ಯುಪಿಎ ಕೈಯಲ್ಲಿ ದೇಶ ಅಧೋಗತಿಗೆ ಹೋಗುತ್ತಿತ್ತು ಎಂದು ಹೇಳಿದರು.

ಯುಪಿಎ ಆಡಳಿತದ ಕೊನೇ ಗಳಿಗೆಯಲ್ಲಿ ದೇಶದ ತೈಲ ಸಂಗ್ರಹ ಮುಗಿದೇ ಹೋಗಿತ್ತು. ಸರ್ಕಾರದ ಮೇಲೆ ಸಾಲದ ಹೊರೆ ಬಿದ್ದಿತ್ತು. ಈ ರೀತಿ ನರೇಂದ್ರ ಮೋದಿ ಅವರ ಕೈಗೆ ಅಂದು ಕಾಂಗ್ರೆಸ್ ಖಾಲಿ ಚೊಂಬನ್ನೇ ಕೊಟ್ಟಿದ್ದು ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ ತೈಲ ರಾಷ್ಟ್ರಗಳಿಗೆ ದಯವಿಟ್ಟು ಪೆಟ್ರೋಲಿಯಂ ಉತ್ಪನ್ನ ನಿಲ್ಲಿಸಬೇಡಿ ಎಂದು ಮನವಿ ಮಾಡಿದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಂಥ ದಯನೀಯ ಸ್ಥಿತಿ ದೇಶಕ್ಕಿಲ್ಲ ಎಂದು ಹೇಳಿದರು.

ಅನೇಕ ಸುಧಾರಣೆಗಳ ಮೂಲಕ ದೇಶದಲ್ಲಿ ಶಾಂತಿ ನೆಲೆಸುವಂತೆ ಮೋದಿ ಮಾಡಿದ್ದಾರೆ. ಆದರೆ ಯುಪಿಎ ಕಾಲದ ಇಟಲಿ ಮೇಡಂ, ಮೌನಿ ಬಾಬಾ ಆಡಳಿತದಲ್ಲಿ ಭಾರತದಲ್ಲಿ ಯಾವುದೇ ಸಾಧನೆ ಆಗಲಿಲ್ಲ ಎಂದರು. ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ಮೋದಿ ನಮ್ಮ ಪ್ರಧಾನಿ ಮಾತ್ರವಲ್ಲ, ಜಗತ್ತಿನ ನಾಯಕರಾಗಿ ಎತ್ತರಕ್ಕೆ ಬೆಳೆದಿದ್ದಾರೆ ಎಂದು ಸಂಕೇಶ್ವರ ಬಣ್ಣಿಸಿದರು. ಈ ಲೋಕ ಕದನವನ್ನು ವಿಶ್ವದ ರಾಷ್ಟ್ರಗಳು ಬಹಳ ಕುತೂಹಲದಿಂದ ನೋಡುತ್ತಿವೆ. ಹಾಗಾಗಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಕರ್ತವ್ಯ ಪಾಲಿಸಬೇಕು ಎಂದು ಕರೆ ನೀಡಿದರು.

ಸಂವಿಧಾನ ಬದಲಾವಣೆ ಇಲ್ಲ

ತಮ್ಮ ಜೀವಿತಾವಧಿಯಲ್ಲಿ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಸ್ವತಃ ಮೋದಿ ಅವರೇ ಹೇಳಿದ್ದಾರೆ. ಆದರೂ ಚುನಾವಣೆ ಬಂದಾಗ ರಾಹುಲ್​ ಗಾಂಧಿಯಂತವರು ಅಪಪ್ರಚಾರ ಮಾಡಿ ಜನರ ದಿಕ್ಕು ತಪ್ಪಿಸುತ್ತಾರೆ ಎಂದು ವಿಜಯ ಸಂಕೇಶ್ವರ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಕಾಂಗ್ರೆಸ್ ಸಂವಿಧಾನದ ವಿರುದ್ಧವಾಗಿ ಬರೋಬ್ಬರಿ 82 ಸರ್ಕಾರಗಳನ್ನು ಕೆಡವಿದೆ. ಆದರೆ ಅಟಲ್​ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ ಅವರು ಒಂದೇ ಒಂದು ಸರ್ಕಾರವನ್ನು ಉರುಳಿಸುವ ಕೆಲಸ ಮಾಡಿಲ್ಲ ಎಂದರು. ದೇಶದ ಹಲವು ರಾಜ್ಯಗಳಲ್ಲಿ ಈಗಲೂ ಅರಾಜಕತೆ ಇದೆ. ಹಾಗಿದ್ದರೂ ಮೋದಿ ಅವರು ಚುನಾಯಿತ ಸರ್ಕಾರ ಕೆಡವದೇ ಸಂವಿಧಾನಕ್ಕೆ ಗೌರವ ತೋರುವ ಔದಾರ್ಯ ತೋರಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.

49 ವರ್ಷಗಳ ಕಾಲ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್​ ಆಡಳಿತವೇ ಇತ್ತು. 3 ಬಾರಿ ಜನ ನನಗೆ ಆಶೀರ್ವಾದ ಮಾಡಿದರು. 4ನೇ ಬಾರಿ ಪ್ರಲ್ಹಾದ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಈ ಬಾರಿಯೂ ಗೆಲುವು ಅವರದ್ದೇ ಆಗಬೇಕು ಎಂದು ಕೋರಿದರು.

ಸರಳ ವ್ಯಕ್ತಿ ಜೋಶಿ

ಪ್ರಲ್ಹಾದ ಜೋಶಿ ಕೇಂದ್ರದಲ್ಲಿ ದೊಡ್ಡ ಮಂತ್ರಿಯಾಗಿದ್ದರೂ ಯಾವುದೇ ಹಮ್ಮು-ಬಿಮ್ಮು ಇಲ್ಲದ ಸರಳ ವ್ಯಕ್ತಿ ಆಗಿದ್ದಾರೆ. ಎಲ್ಲ ಕಾರ್ಯಕರ್ತರು ಮತ್ತು ಜನರೊಂದಿಗೆ ಬೆರೆಯುವ ವ್ಯಕ್ತಿತ್ವದವರು ಎಂದು ಹೊಗಳಿದರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಬಿಜೆಪಿಯ ಈ ನಿಷ್ಠಾವಂತ ನಾಯಕ ಪ್ರಲ್ಹಾದ ಜೋಶಿ ಅವರನ್ನು ಈ ಬಾರಿ 3.5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಡಾ. ಸಂಕೇಶ್ವರ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಎಪಿಎಂಸಿ ಮಾಜಿ ಸದಸ್ಯ ಚನ್ನು ಹೊಸಮನಿ, ಜಿಪಂ ಮಾಜಿ ಅಧ್ಯಕ್ಷ ಟಿ.ಜಿ. ಬಾಳಣ್ಣವರ, ಶಾಸಕ ಎಂ.ಆರ್​.ಪಾಟೀಲ, ವಿಆರ್​ಎಲ್​ ಸಂಸ್ಥೆ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

Continue Reading
Advertisement
MI vs SRH
ಕ್ರೀಡೆ33 mins ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ35 mins ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್37 mins ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ37 mins ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ44 mins ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Ithichanda Ramesh Uthappaʼs Four books to be released in Mysore on May 9
ಮೈಸೂರು50 mins ago

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Karnataka Weather Forecast
ಮಳೆ54 mins ago

Karnataka Weather :ಮಳೆಯ ಕಣ್ಣಾ ಮುಚ್ಚಾಲೆ ಆಟ; ವರುಣ ದೇವನ ತಲೆ ಮೇಲೆ ಹೊತ್ತು ತಿರುಗಿದ ಗ್ರಾ.ಪಂ ಪಿಡಿಒ

Prajwal Revanna Case HD Revanna may be shifted to Parappana Agrahara SIT custody is doubtful
ಕ್ರೈಂ59 mins ago

Prajwal Revanna Case: ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

Narendra Modi
ದೇಶ60 mins ago

Narendra Modi: ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿ ರೋಡ್‌ಶೋ; ರಾಮಲಲ್ಲಾನಿಗೆ ವಿಶೇಷ ಪೂಜೆ

Police Officer
ದೇಶ1 hour ago

Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌