Lok Sabha Election 2024: ರಾಜ್ಯಕ್ಕೆ ಬಿಜೆಪಿ ನಾಯಕರ ದಂಡಯಾತ್ರೆ; ಇನ್ನೊಂದು ವಾರ ಮೋದಿ, ಶಾ, ಯೋಗಿ ರ‍್ಯಾಲಿ, ಪ್ರಚಾರ! - Vistara News

Lok Sabha Election 2024

Lok Sabha Election 2024: ರಾಜ್ಯಕ್ಕೆ ಬಿಜೆಪಿ ನಾಯಕರ ದಂಡಯಾತ್ರೆ; ಇನ್ನೊಂದು ವಾರ ಮೋದಿ, ಶಾ, ಯೋಗಿ ರ‍್ಯಾಲಿ, ಪ್ರಚಾರ!

Lok Sabha Election 2024: ಪ್ರಿಲ್ 23 ಮತ್ತು 24ರಂದು ಎರಡು ದಿನಗಳ ಕಾಲ ರಾಜ್ಯಕ್ಕೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಈ ಬಾರಿ ಮೊದಲಿಗೆ ಅವರು ಸಭೆ ನಡೆಸಲಿದ್ದಾರೆ. ಅಲ್ಲದೆ, ಸರಣಿ ರೋಡ್‌ ಶೋಗಳನ್ನು ನಡೆಸಲಿದ್ದಾರೆ. 23ರಂದು ಬೆಳಗ್ಗೆ ಯಶವಂತಪುರದಲ್ಲಿ ರೋಡ್ ಶೋ ನಡೆಯಲಿದೆ. 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜನೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋವನ್ನು ಏರ್ಪಡಿಸಲಾಗಿದೆ. ರಾತ್ರಿ 8 ಗಂಟೆಗೆ ಮಹದೇವಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

VISTARANEWS.COM


on

Lok Sabha Election 2024 Modi Shah Yogi and Nadda to hold rallies in Karnataka next week
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕೇಂದ್ರದ ನಾಯಕರು ಕರ್ನಾಟಕಕ್ಕೆ ಆಗಮಿಸಿ ಮತಬೇಟೆಯನ್ನು ಶುರು ಮಾಡಿದ್ದಾರೆ. ಈಗಾಗಲೇ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್‌ ಶಾ (Amit Shah) ಬಂದು ಹೋಗಿದ್ದಾರೆ. ಇದೇ ಏಪ್ರಿಲ್‌ 20ಕ್ಕೆ ಮೋದಿ ಮತ್ತೊಮ್ಮೆ ಬರುವವರಿದ್ದಾರೆ. ಇನ್ನು ಗೃಹ ಸಚಿವ ಅಮಿತ್‌ ಶಾ ಅವರು ಏಪ್ರಿಲ್‌ 23 ಮತ್ತು 24ರಂದು ಎರಡು ದಿನ ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇವರಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.

ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ‌, ಬಿಜೆಪಿ ಚುನಾವಣಾ ಸಂಚಾಲಕ ಸುನಿಲ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಏಪ್ರಿಲ್ 23 ಮತ್ತು 24ರಂದು ಎರಡು ದಿನಗಳ ಕಾಲ ರಾಜ್ಯಕ್ಕೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಈ ಬಾರಿ ಮೊದಲಿಗೆ ಅವರು ಸಭೆ ನಡೆಸಲಿದ್ದಾರೆ. ಅಲ್ಲದೆ, ಸರಣಿ ರೋಡ್‌ ಶೋಗಳನ್ನು ನಡೆಸಲಿದ್ದಾರೆ ಎಂದು ಹೇಳಿದರು.

23ರಂದು ಬೆಳಗ್ಗೆ ಯಶವಂತಪುರದಲ್ಲಿ ರೋಡ್ ಶೋ ನಡೆಯಲಿದೆ. 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜನೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋವನ್ನು ಏರ್ಪಡಿಸಲಾಗಿದೆ. ರಾತ್ರಿ 8 ಗಂಟೆಗೆ ಮಹದೇವಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

Lok Sabha Election 2024 Modi Shah Yogi and Nadda to hold rallies in Karnataka next week

ಏ. 24ಕ್ಕೆ ಚಿಕ್ಕಮಗಳೂರು, ತುಮಕೂರು, ಹುಬ್ಬಳ್ಳಿಯಲ್ಲಿ ರೋಡ್‌ ಶೋ!

ಏಪ್ರಿಲ್‌ 24ರಂದು ಅಮಿತ್ ಶಾ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ, ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸುನಿಲ್‌ ಕುಮಾರ್‌ ತಿಳಿಸಿದರು.

ರಾಜ್ಯದಲ್ಲಿ ಯೋಗಿ ರೋಡ್‌ ಶೋ

ಏಪ್ರಿಲ್ 24 ರಂದು ರಾಜ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ವಿವಿಧ ಕಡೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ರೋಡ್ ಶೋ, ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಉಡುಪಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಏ. 21ಕ್ಕೆ ನಡ್ಡಾ, 24ಕ್ಕೆ ರಾಜನಾಥ್‌ ಸಿಂಗ್

ಏಪ್ರಿಲ್ 21 ರಂದು ರಾಜ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು 24 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 21 ಮತ್ತು ಏಪ್ರಿಲ್ 28 ರಂದು ಬಿಜೆಪಿ ವಿಶೇಷ ಚುನಾವಣಾ ಅಭಿಯಾನ ನಡೆಸುತ್ತಿದೆ. ” ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು” ಅಭಿಯಾನ ನಡೆಯುತ್ತದೆ. ಈಗಾಗಲೇ ಮನೆ ಮನೆಗೆ ಪ್ರಚಾರ ಕಾರ್ಯ ಆರಂಭವಾಗಿದೆ. ಮನೆಯಂಗಳದಲ್ಲಿ ಸಭೆಗಳು ಬಿರುಸಿನಿಂದ ನಡೆಯುತ್ತಿವೆ. ವಿಶೇಷ ಅಭಿಯಾನವನ್ನು ತೆಗೆದುಕೊಳ್ಳಲಾಗಿದೆ. ಮೋದಿ ಪರ ಪ್ರಚಾರವನ್ನು ತಮ್ಮ‌ ಮನೆಯ ಸುತ್ತಮುತ್ತ, ಕೆಲಸ‌ ಮಾಡುವ ಸ್ಥಳ, ವಾಕಿಂಗ್ ಜಾಗದಲ್ಲಿ ಒಂದು ಬದಿಯನ್ನು ಮೀಸಲಿಡಿ ಎಂದು ಕರೆ ಕೊಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಸೇರಿದ ಕರಡಿ ಸಂಗಣ್ಣ; ಪಕ್ಷ ಸೇರ್ಪಡೆಗೆ ಲಕ್ಷ್ಮಣ ಸವದಿ ಕಾರಣ!

ಈ ಅಭಿಯಾನಕ್ಕಾಗಿ 15 ಲಕ್ಷ ಜನ ಕೆಲವು ಗಂಟೆಗಳ ಕಾಲ ತೊಡಗಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದ 14 ಕ್ಷೇತ್ರದಲ್ಲಿ 28 ಸಾವಿರ ಬೂತ್ ಬರಲಿದೆ. ಒಂದೊಂದು ಬೂತ್‌ಗಳಲ್ಲಿಯೂ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಮೊದಲ ಹಂತದ ಚುನಾವಣೆ ಸ್ಥಳದಲ್ಲಿ ಏಪ್ರಿಲ್ 21ರಂದು ಹಾಗೂ ಎರಡನೇ ಹಂತದ ಚುನಾವಣಾ ಸ್ಥಳದಲ್ಲಿ‌ ಏ. 28ರಂದು ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ಸುನಿಲ್‌ ಕುಮಾರ್‌ ಹೇಳಿದರು. ಇದೇ ವೇಳೆ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

ಅಂಜಲಿ ನಿಂಬಾಳ್ಕರ್‌ ಹೇಳಿಕೆ ಬಗ್ಗೆ ಸಿಎಂ ನಿಲುವೇನು?

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಅವರು ಕರ್ನಾಟಕದ ಕೆಲ ಭಾಗ ಮಹಾರಾಷ್ಟ್ರಕ್ಕೆ ಸೇರಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಇದರಲ್ಲಿ ನಿಮ್ಮ ನಿಲುವು ಏನು? ನೀವು ಹೇಳಬೇಕಿರೋದನ್ನು ಉತ್ತರ ಕನ್ನಡ ಅಭ್ಯರ್ಥಿ ಬಾಯಲ್ಲಿ ಹೇಳಿಸಿದ್ದೀರಾ? ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮಾಡಲಾಗುತ್ತಿದೆ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದ ಹಲವೆಡೆ ಹೆಚ್ಚು ಭದ್ರತೆ ನೀಡಬೇಕು ಎಂದು ಸುನಿಲ್‌ ಕುಮಾರ್ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Narendra Modi: ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ದೇಶದ 57 ಕ್ಷೇತ್ರಗಳಲ್ಲಿ ಇಂದು (ಜೂನ್‌ 1) ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ʼʼಇಂದು 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಆಯೋಜಿಸಲಾಗಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ. ಯುವ ಮತ್ತು ಮಹಿಳಾ ಮತದಾರರು ದಾಖಲೆ ಸಂಖ್ಯೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಎನ್ನುವ ಭರವಸೆ ಇದೆ. ಎಲ್ಲರೂ ಒಟ್ಟಾಗಿ, ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಪಡಿಸೋಣʼʼ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ದೇಶ ಮತ್ತು ಉತ್ತರ ಪ್ರದೇಶದಲ್ಲಿ ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಹೈಸ್ಪೀಡ್ ರೈಲುಗಳು ಮತ್ತು ಇಂಟರ್‌ನೆಟ್‌ ಜಾಲವನ್ನು ನಿರ್ಮಿಸುವ ಪ್ರಾಮಾಣಿಕ ಸರ್ಕಾರವನ್ನು ಆಯ್ಕೆ ಮಾಡಲು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಎಲ್ಲ ಮತದಾರರು ವಿಶೇಷವಾಗಿ ಯುವಕರಿಗೆ ಮನವಿ ಮಾಡುತ್ತೇನೆ. ಪ್ರತಿಯೊಬ್ಬ ಬಡ ವ್ಯಕ್ತಿಗೆ ಮನೆ, ಅನಿಲ ಮತ್ತು ಉಚಿತ ಚಿಕಿತ್ಸೆಯನ್ನು ಒದಗಿಸುವ ವಿಶ್ವಾಸಾರ್ಹ ಸರ್ಕಾರವು ಭಾರತ ಮತ್ತು ಉತ್ತರ ಪ್ರದೇಶದ ಚಿತ್ರಣವನ್ನೇ ಬದಲಾಯಿಸಬಹುದು” ಎಂದು ಶಾ ಹೇಳಿದ್ದಾರೆ.

ʼಇಂಡಿಯಾʼ ಒಕ್ಕೂಟಕ್ಕೆ ಅನುಕೂಲ ಎಂದ ಖರ್ಗೆ

ಇತ್ತ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಚುನಾವಣೆ ಪ್ರತಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಇಂದು ಕೊನೆಯ ಹಂತದ ಮತದಾನ. ಸಂವಿಧಾನವನ್ನು ರಕ್ಷಿಸಲು ವೋಟು ಮಾಡಿ. ʼಇಂಡಿಯಾʼ ಮೈತ್ರಿಕೂಟ ಸರ್ವಾಧಿಕಾರಿ ಶಕ್ತಿಯ ವಿರುದ್ಧ ಹೋರಾಟ ನಡೆಸುತ್ತಿದೆ. ಆರು ಹಂತಗಳ ಮತದಾನದಲ್ಲಿಯೂ ನಾವು ಜಯ ಗಳಿಸಬೇಕೆಂದು ಮತದಾರರು ಬಯಸಿದ್ದಾರೆ. ಈ ಹಂತದಲ್ಲಿಯೂ ಕೈ ಹಿಡಿಯಲಿದ್ದಾರೆ. ಮೊದಲ ಬಾರಿ ಹಕ್ಕು ಚಲಾಯಿಸಲಿರುವ ಯುವ ಮತದಾರರ ಹೆಗಲ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ. ಅವರನ್ನು ನಾನು ಸ್ವಾಗತಿಸುತ್ತೇನೆ. ಬದಲಾವಣೆಗಾಗಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಿʼʼ ಎಂದು ಖರ್ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ.

Continue Reading

Lok Sabha Election 2024

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

OpenAI: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಓಪನ್ಎಐ ಹೇಳಿದೆ. ಈ ಬಗ್ಗೆ ಬಿಜೆಪಿ ತೀವ್ರ ಕಳವಳ ವ್ಯಕ್ತಪಡಿಸಿದೆ.

VISTARANEWS.COM


on

OpenAI
Koo

ನವದೆಹಲಿ: ಸುಮಾರು ಎರಡು ತಿಂಗಳ ಕಾಲ ನಡೆದ ಲೋಕಸಭಾ ಚುನಾವಣೆ (Lok Sabha Election)ಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಚಾಟ್‌ಜಿಪಿಟಿ (ChatGPT)ಯ ಓಪನ್ಎಐ (OpenAI) ಹೇಳಿದೆ.

ಇಸ್ರೇಲ್‌ ಮೂಲದ ಸಂಸ್ಥೆಯಾದ STOIC ಅಭಿಯಾನ ನಡೆಸಿ ಬಿಜೆಪಿ ವಿರೋಧಿ ಚಟುವಟಿಕೆ ನಡೆಸಲು ಪ್ರಯತ್ನಿಸಿ, ವಿಫಲವಾಗಿದೆ ಎನ್ನಲಾಗಿದೆ. ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ಕಮೆಂಟ್‌, ಲೇಖನ, ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸುವಂತಹ ಕಾರ್ಯಗಳಿಗಾಗಿ ಓಪನ್ಎಐಯ ಶಕ್ತಿಯುತ ಭಾಷಾ ಮಾದರಿಗಳನ್ನು ಬಳಸಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಓಪನ್‌ಎಐ ಹೇಳಿದ್ದೇನು?

“ಮೇಯಲ್ಲಿ STOIC ನೆಟ್‌ವರ್ಕ್‌ ಭಾರತದ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸುವ ಕಮೆಂಟ್‌ಗಳನ್ನು ರಚಿಸಲು ಪ್ರಾರಂಭಿಸಿತು. ಚುನಾವಣೆಯ ಮೇಲೆ ಪರಿಣಾಮ ಬೀರಬಹುದಾದ ಇಂತಹ ಕೆಲವು ಚಟುವಟಿಕೆಗಳನ್ನು ನಾವು ತಡೆದಿದ್ದೇವೆʼʼ ಎಂದು ಓಪನ್‌ಎಐ ಹೇಳಿದೆ. ʼʼಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌, ವೆಬ್‌ಸೈಟ್‌ ಮತ್ತು ಯೂಟ್ಯೂಬ್‌ನಲ್ಲಿ ಪ್ರಭಾವ ಬೀರಲು ಯತ್ನಿಸುತ್ತಿದ್ದ ಇಸ್ರೇಲ್‌ನಿಂದ ಕಾರ್ಯನಿರ್ವಹಿಸುವ ಖಾತೆಗಳ ಸಮೂಹವನ್ನು ನಿಷೇಧಿಸಲಾಗಿದೆʼʼ ಎಂದೂ ವಿವರಿಸಿದೆ.

ʼʼಈ ಅಭಿಯಾನವನ್ನು ಕೆನಡಾ, ಅಮೆರಿಕ ಮತ್ತು ಇಸ್ರೇಲ್‌ನಲ್ಲಿರುವವರನ್ನು ಗುರಿಯಾಗಿಸಿ ಆರಂಭಿಸಲಾಗಿತ್ತು. ಇದಕ್ಕಾಗಿ ಸಂದೇಶಗಳಲ್ಲಿ ಇಂಗ್ಲಿಷ್‌ ಮತ್ತು ಹಿಬ್ರೂ ಭಾಷೆಗಳನ್ನು ಬಳಸಲಾಗುತ್ತಿತ್ತು. ಬಳಿಕ ಮೇಯಲ್ಲಿ ಭಾರತೀಯರನ್ನು ತಲುಪುವ ಉದ್ದೇಶದಿಂಧ ಇಂಗ್ಲಿಷ್‌ನಲ್ಲಿ ಕಮೆಂಟ್‌ ರಚಿಸಲಾಗಿತ್ತುʼʼ ಎಂದು ಓಪನ್‌ಎಐ ತಿಳಿಸಿದೆ.

ಅಪಾಯಕಾರಿ ಬೆದರಿಕೆ ಎಂದ ಬಿಜೆಪಿ

ಈ ಬೆಳವಣಿಗೆ ಬಗ್ಗೆ ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಇದು ಅಪಾಯಕಾರಿ ಬೆದಿಕೆ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ಸಚಿವ ರಾಜೀವ್ ಚಂದ್ರಶೇಖರ್, ʼʼಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾಯಾದ ಬೆದರಿಕೆ. ಭಾರತ ಮತ್ತು ಹೊರಗಿನ ಪಟ್ಟಭದ್ರ ಹಿತಾಸಕ್ತಿಗಳು ಬಿಜೆಪಿ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎನ್ನುವುದು ಇದರಿಂದ ಸ್ಪಷ್ವಾಗುತ್ತದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕಾಗಿದೆ ಮತ್ತು ಸತ್ಯವನ್ನು ಬಹಿರಂಗಪಡಿಸಬೇಕಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂಟರ್‌ನೆಟ್‌ ಮೂಲಕ ನಮ್ಮ ಮಾದರಿಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದ ಇಂತಹ ಸುಮಾರು ಐದು ರಹಸ್ಯ ಕಾರ್ಯಾಚರಣೆಗಳನ್ನು ಕಳೆದ ಮೂರು ತಿಂಗಳಲ್ಲಿ ಗುರುತಿಸಲಾಗಿದೆ ಎಂದು ಓಪನ್ಎಐ ಹೇಳಿದೆ. 2015ರಲ್ಲಿ ಸ್ಥಾಪಿಸಲಾದ ಕೃತಕ ಬುದ್ಧಿಮತ್ತೆ ಸಂಶೋಧನಾ ಸಂಸ್ಥೆಯೇ ಓಪನ್ಎಐ.

ಇದನ್ನೂ ಓದಿ: Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

2024ರ ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌, ಚರಣ್‌ಜೀತ್‌ ಸಿಂಗ್‌ ಚನ್ನಿ, ಅನುರಾಗ್ ಠಾಕೂರ್, ಅಭಿಷೇಕ್ ಬ್ಯಾನರ್ಜಿ, ಮೀಸಾ ಭಾರ್ತಿ ಮತ್ತಿತರರ ಪ್ರಮುಖ ನಾಯಕರ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.

Continue Reading

Lok Sabha Election 2024

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

Lok Sabha Election: ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ನ ಅಜಯ್‌ ರೈ ಸೇರಿ 6 ಮಂದಿ ಸ್ಪರ್ಧಿಸುತ್ತಿದ್ದಾರೆ. ಅವರ ವಿವರ ಇಲ್ಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election) 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 2014ರಿಂದ ಅವರು ಇಲ್ಲಿಂದ ಸ್ಪರ್ಧಿಸುತ್ತಿದ್ದು, ಸದ್ಯ ಈ ಕಣ ದೇಶದ ಗಮನ ಸೆಳೆದಿದೆ.

ಮೋದಿ ವಿರುದ್ಧ ಈ ಬಾರಿ ಆರು ಮಂದಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ ಅಜಯ್ ರೈ ಅವರನ್ನು ಮೂರನೇ ಬಾರಿಗೆ ಕಣಕ್ಕಿಳಿಸಿದೆ. ಇನ್ನು ಯುಗ ತುಳಸಿ ಪಾರ್ಟಿಯಿಂದ ಕೋಳಿಶೆಟ್ಟಿ ಶಿವಕುಮಾರ್, ಬಹುಜನ ಸಮಾಜ ಪಕ್ಷದಿಂದ ಅಥೆರ್‌ ಜಮಾಲ್‌ ಲಾರಿ, ಗಗನ್‌ ಪ್ರಕಾಶ್‌ ಯಾದವ್‌ (ಅಪ್ನಾ ದಳ, ಕಮರೇವಾಡಿ), ಸ್ವತಂತ್ರವಾಗಿ ದಿನೇಶ್‌ ಕುಮಾರ್‌ ಯಾದವ್‌ ಮತ್ತು ಸಂಜಯ್‌ ಕುಮಾರ್‌ ತಿವಾರಿ ಪ್ರಧಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅವರ ಕುರಿತಾದ ವಿವರ ಇಲ್ಲಿದೆ.

ಅಜಯ್‌ ರೈ

53 ವರ್ಷದ ಕಾಂಗ್ರೆಸ್‌ ನಾಯಕ ಅಜಯ್‌ ರೈ ಸತತ ಮೂರನೇ ಬಾರಿ ಮೋದಿ ವಿರುದ್ಧ ತೊಡೆ ತಟ್ಟಿದ್ದಾರೆ. ಇವರು 2014 ಮತ್ತು 2019ರಲ್ಲಿ ಪ್ರಧಾನಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅಜಯ್‌ ರೈ ವಿರುದ್ಧ ಸುಮಾರು 18 ಪ್ರಕರಣಗಳು ದಾಖಲಾಗಿವೆ. ಇವರು ಆರಂಭದಲ್ಲಿ ಆರ್‌ಎಸ್‌ಎಸ್‌, ಎಬಿವಿಪಿ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. 1996, 2002 ಮತ್ತು 2007ರಲ್ಲಿ ಇವರು ಬಿಜೆಪಿಯಿಂದ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. 2009ರಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಜಯ್‌ ರೈ 6.66 ಲಕ್ಷ ರೂ.ಗಳ ಚರಾಸ್ತಿ ಮತ್ತು 1.25 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇವರನ್ನು ಕಳೆದ ಆಗಸ್ಟ್‌ನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಅಥೆರ್‌ ಜಮಾಲ್‌ ಲಾರಿ

ಬಿಎಸ್‌ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ 70 ವರ್ಷದ ಅಥೆರ್‌ ಜಮಾಲ್‌ ಲಾರಿ ವಿರುದ್ಧವೂ ಪ್ರಕರಣವಿದೆ. ಅವರ ಹೆಸರಿನಲ್ಲಿ 1 ಪ್ರಕರಣ ದಾಖಲಾಗಿದೆ.

ಕೋಳಿಶೆಟ್ಟಿ ಶಿವಕುಮಾರ್‌

46 ವರ್ಷದ ಕೋಳಿಶೆಟ್ಟಿ ಶಿವಕುಮಾರ್‌ ಹೈದರಾಬಾದ್‌ ಮೂಲದವರು. ಈ ಹಿಂದೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಪ್ರತಿಭಟನೆ ನಡೆಸಿದ್ದರು. ಇವರು ಈ ಮೊದಲು ತಿರುಮಲ ತಿರುಪತಿ ದೇವಸ್ಥಾನಂ ಮೋರ್ಡ್‌ ಸದಸ್ಯರಾಗಿದ್ದರು.

ಗಗನ್‌ ಪ್ರಕಾಶ್‌ ಯಾದವ್‌

ಅಪ್ನಾ ದಳದಿಂದ ಕಣಕ್ಕಿಳಿದಿರುವ 39 ವರ್ಷದ ಗಗನ್‌ ಪ್ರಕಾಶ್‌ ಯಾದವ್‌ ಅವರ ಹೆಸರಿನಲ್ಲಿ 5 ಪ್ರಕರಣ ದಾಖಲಾಗಿದೆ. ಈ ಹಿಂದೆ ಇವರು ಸಮಾಜವಾದಿ ಪಾರ್ಟಿಯಲ್ಲಿದ್ದರು.

ದಿನೇಶ್‌ ಕುಮಾರ್‌ ಯಾದವ್‌

ಸತಂತ್ರ ಅಭ್ಯರ್ಥಿ ದಿನೇಶ್‌ ಕುಮಾರ್‌ ಯಾದವ್‌ ಈ ಹಿಂದೆ ಬಿಜೆಪಿಯಲ್ಲಿದ್ದರು. ಇವರ ವಿರುದ್ಧ ಯಾವುದೇ ಕೇಸ್‌ಗಳಿಲ್ಲ.

ಸಂಜಯ್‌ ಕುಮಾರ್‌ ತಿವಾರಿ

ಇನ್ನೊಬ್ಬ ಸ್ವತಂತ್ರ ಅಭ್ಯರ್ಥಿ ಇವರು. ಇವರು ದೆಹಲಿ ಮೂಲದ ಸಾಮಾಜಿಕ ಕಾರ್ಯಕರ್ತರು. ಇವರು ಗಾಂಧಿ ತತ್ವದ ಪ್ರತಿಪಾದಕರು.

ದಾಖಲೆಯ ಗೆಲುವು ಕಂಡಿದ್ದ ಮೋದಿ

ಮೋದಿ ಈ ಹಿಂದೆ ಎರಡು ಬಾರಿಯೂ ವಾರಾಣಸಿ ಕ್ಷೇತ್ರದಲ್ಲಿ ದಾಖಲೆಯ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. 2014ರ ಚುನಾವಣೆಯಲ್ಲಿ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸ್ಪರ್ಧಿಸಿದ್ದರು. ಆಗ ಮೋದಿ 3.37 ಲಕ್ಷ ಮತಗಳ ಅಂತರಿಂದ ಗೆದ್ದಿದ್ದರು. ಇನ್ನು 2019ರಲ್ಲಿ ಮೋದಿ ಅವರು ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿ ಶಾಲಿನಿ ಯಾದವ್‌ ಅವರನ್ನು 4.80 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

Continue Reading

Lok Sabha Election 2024

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Exit Poll: ಇಂದು (ಜೂ. 1) ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬೀಳಲಿದೆ. ಮತದಾರರು ಯಾವ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದನ್ನು ಕೇಳಿ ಅದರ ಆಧಾರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಲಭಿಸಲಿದೆ ಎಂದು ಅಂದಾಜಿಸಲಾಗುತ್ತದೆ. ಇದನ್ನು ಎಕ್ಸಿಟ್‌ ಪೋಲ್‌ ಎನ್ನಲಾಗುತ್ತದೆ.

VISTARANEWS.COM


on

Exit Poll
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಕೊನೆಯ ಹಂತಕ್ಕೆ ಬಂದು ತಲುಪಿದೆ. ಇನ್ನೇನು ಬಾಕಿ ಉಳಿದಿರುವ ಒಂದು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡರೆ ದೇಶದ ಜನರ ಚಿತ್ತ ಫಲಿತಾಂಶ(Election Result)ದತ್ತ ಹೊರಳುತ್ತದೆ ಫಲಿತಾಂಶಕ್ಕೂ ಮುನ್ನ ಇತ್ತೀಚಿನ ಹಲವು ವರ್ಷಗಳಿಂದ ಜನ ಚುನಾವಣೋತ್ತರ ಸಮೀಕ್ಷೆ(Exit Poll)ಗಳ ಬಗ್ಗೆ ಅತಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ಇಂದು (ಜೂ. 1) ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬೀಳಲಿದೆ.

ಎಕ್ಸಿಟ್‌ ಪೋಲ್‌ ಎಂದರೇನು?

ಮತದಾರರು ಯಾವ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದನ್ನು ಕೇಳಿ ಅದರ ಆಧಾರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಲಭಿಸಲಿದೆ ಎಂದು ಅಂದಾಜಿಸಲಾಗುತ್ತದೆ. ಈ ಬಗ್ಗೆ ಎಕ್ಸಿಟ್ ಪೋಲ್ ನಡೆಸುವವರು ಮತದಾರರನ್ನು ಪ್ರಶ್ನಿಸುತ್ತಾರೆ. ಇದನ್ನು ಎಕ್ಸಿಟ್‌ ಪೋಲ್‌ ಎನ್ನಲಾಗುತ್ತದೆ. ಚುನಾವಣೆಯ ಮೊದಲು ನಡೆಸಲಾದ ಅಭಿಪ್ರಾಯ ಸಂಗ್ರಹಕ್ಕಿಂತ ಇದು ಭಿನ್ನ. ಮತದಾರರ ಮೇಲೆ ಪ್ರಭಾವ ಬೀರಿದ ವಿಷಯಗಳು, ವ್ಯಕ್ತಿತ್ವಗಳು ಮತ್ತು ನಿಷ್ಠೆಗಳಂತಹ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣೋತ್ತರ ಸಮೀಕ್ಷೆ ನಡೆಸಲಾಗುತ್ತಿದೆ.

ಜನಪ್ರಿಯ ಎಕ್ಸಿಟ್ ಪೋಲ್‌ಗಳ ವಿವರಗಳು

ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸಲು ವಿವಿಧ ಏಜೆನ್ಸಿಗಳು ವಿವಿಧ ವಿಧಾನಗಳು ಮತ್ತು ಮಾದರಿಗಳನ್ನು ಬಳಸಿಕೊಳ್ಳುತ್ತವೆ. ವೈಯಕ್ತಿಕವಾಗಿ ಅಥವಾ ಆನ್‌ಲೈನ್‌ ಸರ್ವೆ ಮೂಲಕ ಮತದಾರರ ಅಭಿಪ್ರಾಯ ಪಡೆಯಲಾಗುತ್ತದೆ. ಇಂಡಿಯಾ ಟುಡೆ-ಆಕ್ಸಿಸ್, ಸಿಎನ್‌ಎನ್ ನ್ಯೂಸ್ 18-ಐಪಿಎಸ್‌ಒಎಸ್, ಟೈಮ್ಸ್ ನೌ-ವಿಎಂಆರ್, ರಿಪಬ್ಲಿಕ್-ಜನ್ ಕಿ ಬಾತ್, ರಿಪಬ್ಲಿಕ್-ಸಿವೋಟರ್, ನ್ಯೂಸ್‌ಎಕ್ಸ್-ಎನ್‌ಇಟಿಎ ಮತ್ತು ಟುಡೇಸ್ ಚಾಣಕ್ಯ ಮುಂತಾದವು ಎಕ್ಸಿಟ್ ಪೋಲ್‌ಗಳನ್ನು ನಡೆಸುವ ಕೆಲವು ಪ್ರಸಿದ್ಧ ಸಂಸ್ಥೆಗಳು.

ಎಕ್ಸಿಟ್ ಪೋಲ್‌ಗಳ ನಿಯಮಗಳು

ಭಾರತದಲ್ಲಿ ಎಕ್ಸಿಟ್ ಪೋಲ್‌ಗಳನ್ನು ನಿಷೇಧಿಸದಿದ್ದರೂ, ಭಾರತೀಯ ಚುನಾವಣಾ ಆಯೋಗವು (ಇಸಿಐ) ಅವುಗಳ ನಡವಳಿಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಿದೆ. ಎಕ್ಸಿಟ್ ಪೋಲ್‌ಗಳನ್ನು ಯಾವಾಗ ನಡೆಸಬಹುದು ಮತ್ತು ಪ್ರಕಟಿಸಬಹುದು ಎಂಬುದಕ್ಕೆ ಇಸಿಐ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಎಕ್ಸಿಟ್ ಪೋಲ್‌ಗಳಿಗೆ ನಿರ್ದಿಷ್ಟ ಸಮಯದೊಳಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಮತದಾನ ಮುಗಿದ ನಂತರವೇ ಇದನ್ನು ಪ್ರಕಟಿಸಬೇಕು.

ಮತದಾನದ ಅವಧಿ ಮುಗಿಯುವ ಮೊದಲು ಭಾರತದ ಯಾವುದೇ ಭಾಗದಲ್ಲಿ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟಿಸಬಾರದು ಅಥವಾ ಪ್ರಸಾರ ಮಾಡಬಾರದು ಎಂದು ECI ಷರತ್ತು ವಿಧಿಸಿದೆ. ಇನ್ನೂ ಮತ ಚಲಾಯಿಸದ ಮತದಾರರ ಮೇಲೆ ಪ್ರಭಾವ ಬೀರುವುದನ್ನು ತಡೆಯಲು ಈ ಈ ನಿಯಮ ಜಾರಿಗೊಳಿಸಲಾಗಿದೆ. ಇದಲ್ಲದೆ ಅಂತಿಮ ಸುತ್ತಿನ ಮತದಾನ ಮುಗಿದ ನಂತರವೇ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ಪ್ರಕಟಿಸಬಹುದು. ಹೆಚ್ಚುವರಿಯಾಗಿ, ನ್ಯಾಯಯುತ ಮತ್ತು ನಿಷ್ಪಕ್ಷಪಾತ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸುವ ಎಲ್ಲ ಮಾಧ್ಯಮಗಳು ಚುನಾ ಆಯೋಗದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ಎಕ್ಸಿಟ್‌ ಪೋಲ್‌ ಆರಂಭವಾಗಿದ್ದು ಯಾವಾಗ?

ಎಕ್ಟಿಟ್‌ ಪೋಲ್‌ಗೆ ಸುಮಾರು 7 ದಶಕಗಳ ಇತಿಹಾಸವಿದೆ. ಎಕ್ಸಿಟ್‌ ಪೋಲ್‌ ಅನ್ನು 1957ರಲ್ಲೇ ಆರಂಭಿಸಲಾಗಿತ್ತು. ಅಂದಿನಿಂದ ಎಕ್ಸಿಟ್‌ ಪೋಲ್‌ನ ವಿಧಾನದಲ್ಲಿ ಅನೇಕ ಬದಲಾವಣೆ ಸಂಭವಿಸಿದೆ. ಅದರಲ್ಲಿಯೂ ಮಾದರಿ ಸಂಗ್ರಹದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಆರಂಭದ ದಿನಗಳಲ್ಲಿ ದೇಶಾದ್ಯಂತ ಸುಮಾರು 20-30 ಸಾವಿರ ಮಂದಿಯಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿತ್ತು. ಇದೀಗ ಎಕ್ಸಿಟ್‌ ಪೋಲ್‌ ನಡೆಸುವ ಸಂಸ್ಥೆಗಳು ಸುಮಾರು 10 ಲಕ್ಷ ಮಂದಿಯನ್ನು ಸಂಪರ್ಕಿಸುತ್ತವೆ. ಲಕ್ಷಾಂತರ ಮಂದಿಯಿಂದ ಅಭಿಪ್ರಾಯ ಸಂಗ್ರಹಣೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ.

ಯಾವಾಗ ಎಕ್ಸಿಟ್‌ ಫೋಲ್‌ ಫಲಿತಾಂಶ ಹೊರ ಬೀಳುತ್ತದೆ?

ಕೊನೆಯ ಹಂತದ ಮತದಾನ ನಡೆಯಲಿರುವ ಜೂ. 1ರಂದು ಎಕ್ಸಿಟ್‌ ಪೋಲ್‌ ನಡೆಯಲಿದೆ. ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಲಿದ್ದು, 6:30ರ ನಂತರ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ: Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Continue Reading
Advertisement
Nandamuri Balakrishna touch actress anjali back
ಟಾಲಿವುಡ್24 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ26 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 202430 mins ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು33 mins ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20241 hour ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ1 hour ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ1 hour ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

cm Siddaramaiah And DK Shivakumar
ಪ್ರಮುಖ ಸುದ್ದಿ1 hour ago

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Cannes Film Festival Ukrainian model Sawa Pontyjska assault by security guard
ಸಿನಿಮಾ1 hour ago

Cannes Film Festival:  ಮಾಡೆಲ್‌ನನ್ನು ಒರಟಾಗಿ ಹೊರ ದಬ್ಬಿದ ಕಾನ್‌ ಚಲನಚಿತ್ರೋತ್ಸವ ಸಂಘಟಕರು; ವಿಡಿಯೊ ವೈರಲ್‌!

shatru bhairavi yaga
ಪ್ರಮುಖ ಸುದ್ದಿ2 hours ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌