Lok Sabha Election 2024: ರಾಮ ನವಮಿ ಆಚರಣೆ; ಪಶ್ವಿಮ ಬಂಗಾಳದಲ್ಲಿ ಬಿಜೆಪಿ - ಟಿಎಂಸಿ ಮಧ್ಯೆ ವಾಗ್ವಾದ - Vistara News

Lok Sabha Election 2024

Lok Sabha Election 2024: ರಾಮ ನವಮಿ ಆಚರಣೆ; ಪಶ್ವಿಮ ಬಂಗಾಳದಲ್ಲಿ ಬಿಜೆಪಿ – ಟಿಎಂಸಿ ಮಧ್ಯೆ ವಾಗ್ವಾದ

Lok Sabha Election 2024: ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್‌ 19ರಂದು ಮೊದಲ ಹಂತದ ಮತದಾಬ ನಡೆಯಲಿದೆ. ಈ ಮಧ್ಯೆ ನಾಳೆ ನಡೆಯಲಿರುವ ರಾಮ ನವಮಿ ಬಗ್ಗೆ ಚರ್ಚೆ ಆರಂಭವಾಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಮ ನವಮಿ ಆಚರಣೆಗೆ ಟಿಎಂಸಿ ಬ್ರೇಕ್‌ ಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇತ್ತ ಟಿಎಂಸಿ ನಾಳೆ ಶೋಭಾ ಯಾತ್ರೆ ನಡೆಸುವುದಾಗಿ ಘೋಷಿಸಿದೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಮೊದಲ ಹಂತದ ಮತದಾನ ಶುಕ್ರವಾರ (ಏಪ್ರಿಲ್‌ 19) ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ಮಧ್ಯೆ ನಾಳೆ (ಏಪ್ರಿಲ್‌ 17) ರಾಮ ನವಮಿಯಂದು ಹೌರಾದಲ್ಲಿ ‘ಶೋಭಾ ಯಾತ್ರೆ’ ನಡೆಸುವುದಾಗಿ ತೃಣಮೂಲ ಕಾಂಗ್ರೆಸ್ (Trinamool Congress) ಮಂಗಳವಾರ ಘೋಷಿಸಿದೆ.

ಇತ್ತ ಪಶ್ಚಿಮ ಬಂಗಾಳದ ಬಾಲೂರ್ಘಾಟ್‌ನಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಬಿಜೆಪಿಯ ರಾಮ ನವಮಿಯ ಅಚರಣೆಗೆ ಅಡ್ಡಿಪಡಿಸಲು ಮತ್ತು ಸಿಎಎಯನ್ನು ವಿರೋಧಿಸಲು ಟಿಎಂಸಿ ಪ್ರಯತ್ನಿಸುತ್ತಿದೆ” ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಂಗಾಳದಲ್ಲಿ ರಾಮ ನವಮಿ ಆಚರಣೆಯನ್ನು ತಡೆಯಲು ಟಿಎಂಸಿ ಎಂದಿನಂತೆ ಪ್ರಯತ್ನಿಸಿದೆ ಎಂದು ಮೋದಿ ಹೇಳಿದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಟಿಎಂಸಿ ರಾಮ ನವಮಿಯಂದು ಶೋಭಾ ಯಾತ್ರೆ ನಡೆಸುವುದಾಗಿ ತಿಳಿಸಿದೆ. “ಹೌರಾ ಅಭ್ಯರ್ಥಿ ಪ್ರಸೂನ್ ಬ್ಯಾನರ್ಜಿ ಅವರೊಂದಿಗೆ ಪಕ್ಷದ ಸ್ಟಾರ್ ಪ್ರಚಾರಕರಾದ ಸಾಯೋನಿ ಘೋಷ್, ಅರೂಪ್ ರಾಯ್ ಮತ್ತು ಬಂಗಾಳ ಕ್ರೀಡಾ ಸಚಿವ ಮನೋಜ್ ತಿವಾರಿ ಮತ್ತಿತರರ ಸಮ್ಮುಖದಲ್ಲಿ ರಾಮ ನವಮಿಯ ಶೋಭಾ ಯಾತ್ರೆಯಲ್ಲಿ ಆಯೋಜಿಸಲಾಗಿದೆʼʼ ಎಂದು ಪಕ್ಷ ತಿಳಿಸಿದೆ.

ಹೌರಾ ನಗರದಲ್ಲಿ ರಾಮ ನವಮಿಯಂದು ಮೆರವಣಿಗೆ ನಡೆಸಲು ವಿಶ್ವ ಹಿಂದೂ ಪರಿಷತ್ (VHP)ಗೆ ಕೋಲ್ಕತ್ತಾ ಹೈಕೋರ್ಟ್ ಸೋಮವಾರ ಷರತ್ತುಬದ್ಧ ಅನುಮತಿ ನೀಡಿದೆ. ಹೌರಾದಲ್ಲಿ ವಿಶ್ವ ಹಿಂದೂ ಪರಿಷತ್‌ ನಡೆಸಲಿದ್ದ ರಾಮ ನವಮಿ ರ‍್ಯಾಲಿಯನ್ನು ನಿಷೇಧಿಸಲು ನಿರ್ದೇಶನ ನೀಡುವಂತೆ ಕೋರಿ ಟಿಎಂಸಿ ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು ಎಂದು ಮೋದಿ ಟೀಕಿಸಿದ್ದಾರೆ.

“ಅಯೋಧ್ಯೆಯ ಭವ್ಯ ದೇವಾಲಯದಲ್ಲಿ ರಾಮ್ ಲಲ್ಲಾ ಸಿಂಹಾಸನಾರೋಹಣ ಮಾಡಿದ ಬಳಿಕ ಮೊದಲ ರಾಮ ನವಮಿ ಇದಾಗಿದೆ. ಟಿಎಂಸಿ ಎಂದಿನಂತೆ ಇಲ್ಲಿ ರಾಮನವಮಿ ಆಚರಣೆಯನ್ನು ತಡೆಯಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ ಮತ್ತು ಹಲವು ಪಿತೂರಿಗಳನ್ನು ನಡೆಸಿದೆ. ಆದರೆ ಸತ್ಯ ಮಾತ್ರ ಗೆಲ್ಲುತ್ತದೆ. ಆದ್ದರಿಂದ ನ್ಯಾಯಾಲಯವು ಅನುಮತಿ ನೀಡಿದೆ ಮತ್ತು ನಾಳೆ ರಾಮ ನವಮಿ ಮೆರವಣಿಗೆಗೆ ಬೇಕಾದ ಸಿದ್ಧತೆ ನಡೆಸಲಾಗುವುದು. ಈ ಸಂದರ್ಭದಲ್ಲಿ ನಾನು ಬಂಗಾಳದ ನನ್ನ ಎಲ್ಲ ಸಹೋದರ ಸಹೋದರಿಯರನ್ನು ಅಭಿನಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಮೆರವಣಿಗೆ ವೇಳೆ ಯಾವುದೇ ಪ್ರಚೋದನಕಾರಿ ಘೋಷಣೆಗಳನ್ನು ಕೂಗಬಾರದು ಎಂದು ನ್ಯಾಯಮೂರ್ತಿ ಜಯ್ ಸೇನ್ ಗುಪ್ತಾ ಅವರು ನಿರ್ದೇಶನ ನೀಡಿದ್ದಾರೆ. ಗರಿಷ್ಠ 200 ಮಂದಿಯನ್ನು ಮೀರದಂತೆ ಮೆರವಣಿಗೆ ನಡೆಸಬೇಕು ಮತ್ತು ಐದು ಸ್ವಯಂಸೇವಕರು ಮೇಲ್ವಿಚಾರಣೆ ನಡೆಸಬೇಕು ಎಂದೂ ಸೂಚಿಸಿದ್ದಾರೆ.

ಇದನ್ನೂ ಓದಿ: BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

ಇತ್ತೀಚಿನ ವರ್ಷಗಳಲ್ಲಿ ಕೋಮು ಗಲಭೆಗಳಿಂದಾಗಿ ರಾಜ್ಯದಲ್ಲಿ ರಾಮನವಮಿ ರ‍್ಯಾಲಿಗಳು ಪ್ರಮುಖ ರಾಜಕೀಯ ವಿಷಯಗಳಾಗಿ ಮಾರ್ಪಟ್ಟಿವೆ. ಆಡಳಿತಾರೂಢ ಟಿಎಂಸಿ ಮತ್ತು ಪ್ರತಿಪಕ್ಷ ಬಿಜೆಪಿ ಪರಸ್ಪರ ಹಿಂಸಾಚಾರವನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿವೆ. ಹೀಗಾಗಿ ಸದ್ಯ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Mallikarjun Kharge: ಕೇವಲ 15 ದಿನಗಳಲ್ಲೂ ಯಾವುದೇ ಸರ್ಕಾರ ಪತನವಾಗಬಹುದು ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕೆಲ ದಿನಗಳ ಹಿಂದೆ ಹೇಳಿದ್ದರು. ಆ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಪತನಗೊಳ್ಳಲಿದೆ ಎಂದಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಎನ್‌ಡಿಎ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

VISTARANEWS.COM


on

Mallikarjun Kharge
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದು ಸರ್ಕಾರ ರಚಿಸಿದೆ. ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರು ಖಾತೆ ಹಂಚಿಕೆಯನ್ನೂ ಮಾಡಿದ್ದಾರೆ. ಇದರ ಬೆನ್ನಲ್ಲೇ, “ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ. ಈ ಕುರಿತು ಕಾದು ನೋಡೋಣ” ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭವಿಷ್ಯ ನುಡಿದಿದ್ದಾರೆ.

“ದೇಶದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಅಲ್ಪಮತದ ಸರ್ಕಾರವು ದೇಶದಲ್ಲಿದೆ. ಆಕಸ್ಮಿಕವಾಗಿ ಬಿಜೆಪಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಪತನವಾಗಬಹುದು” ಎಂಬುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ ಹಾಗೂ ಏಕನಾಥ್‌ ಶಿಂಧೆ ಬಣದ ಶಿವಸೇನೆಯ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದೆ.

Narendra Modi Live

ಕೆ.ಸಿ.ತ್ಯಾಗಿ ತಿರುಗೇಟು

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಜೆಡಿಯು ನಾಯಕ ಕೆ.ಸಿ. ತ್ಯಾಗಿ ತಿರುಗೇಟು ನೀಡಿದ್ದಾರೆ. “ಮಲ್ಲಿಕಾರ್ಜುನ ಖರ್ಗೆ ಅವರು ಹುರುಳಿಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಖರ್ಗೆ ಅವರ ಹೇಳಿಕೆಯನ್ನು ಖಂಡಿಸುತ್ತೇನೆ” ಎಂಬುದಾಗಿ ಕೆ.ಸಿ.ತ್ಯಾಗಿ ಹೇಳಿದ್ದಾರೆ. “ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟವನ್ನು ತೊರೆಯುವುದಿಲ್ಲ” ಎಂಬುದಾಗಿ ನಿತೀಶ್‌ ಕುಮಾರ್‌ ಅವರು ಇದಕ್ಕೂ ಮೊದಲು ಹೇಳಿದ್ದರು. ಚಂದ್ರಬಾಬು ನಾಯ್ಡು ಅವರ ಟಿಡಿಪಿಯು ಕೂಡ ಬಿಜೆಪಿ ಜತೆ ಅಚಲವಾಗಿ ನಿಂತಿದೆ.

ಮೊದಲು ಭವಿಷ್ಯ ನುಡಿದಿದ್ದು ಮಮತಾ

ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ ಎಂದು ಒಂದು ವಾರದ ಹಿಂದಷ್ಟೇ ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ. ಯಾವ ಸರ್ಕಾರವೂ 15 ದಿನದಲ್ಲಿ ಬೇಕಾದರು ಪತನವಾಗಬಹುದು” ಎಂದಿದ್ದರು.

ಇದನ್ನೂ ಓದಿ: Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Continue Reading

Lok Sabha Election 2024

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

ಆರ್‌ಎಸ್‌ಎಸ್ ಮತ್ತು ಬಿಜೆಪಿ (RSS V/S BJP) ನಡುವೆ ಯಾವುದೇ ಬಿರುಕು ಇಲ್ಲ. ಮೋಹನ್ ಭಾಗವತ್ ಅವರು ನಿಜವಾದ ಸೇವಕ ಎಂದಿಗೂ ಅಹಂಕಾರ ಪಡುವುದಿಲ್ಲ ಎಂದು ಹೇಳಿರುವುದು ಒಂದು ಸಂದೇಶವಾಗಿದೆ ಎಂದು ಆರ್‌ಎಸ್‌ಎಸ್‌ ಹೇಳಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯ ಅನಂತರ ಭಾಗವತ್ ಅವರು ನೀಡಿದ ಭಾಷಣಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ಆರ್‌ಎಸ್‌ಎಸ್‌ ಹೇಳಿದೆ.

VISTARANEWS.COM


on

By

RSS V/S BJP
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (loksabha election) ಕೇಸರಿ ಪಕ್ಷವು (BJP) ಸ್ಪಷ್ಟ ಬಹುಮತದ ಕೊರತೆಯನ್ನು ಅನುಭವಿಸಿದ ಅನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಸೇರಿದಂತೆ ಹಲವು ಆರ್ ಎಸ್ ಎಸ್ ನಾಯಕರು ನೀಡಿರುವ ಹೇಳಿಕೆಗಳು ಪ್ರಧಾನಿ (PM) ನರೇಂದ್ರ ಮೋದಿ (narendra modi) ಅಥವಾ ಬಿಜೆಪಿಯನ್ನು ಗುರಿಯಾಗಿಸಿಕೊಂಡಿವೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ನಡುವೆ, ಈ ಚರ್ಚೆಗಳಿಗೆ ಆರ್‌ಎಸ್‌ಎಸ್‌ ಸ್ಪಷ್ಟನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಆರ್ ಆರ್ ಎಸ್ ಎಸ್ ನಡುವೆ ಉಂಟಾಗಬಹುದಾದ ಬಿರುಕುಗಳ ಸಂಭಾವ್ಯತೆಯನ್ನು ಹೋಗಲಾಡಿಸುವ ಪ್ರಯತ್ನವನ್ನು ಆರ್‌ಎಸ್‌ಎಸ್ ಮಾಡಿದೆ. ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆಗಸ್ಟ್ 31ರಿಂದ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್ ಎಸ್ ಎಸ್ ತನ್ನ ಅಂಗಸಂಸ್ಥೆಗಳಾದ ಸಂಘಟನೆಯೊಂದಿಗೆ ನಡೆಸುವ ಮೂರು ದಿನಗಳ ವಾರ್ಷಿಕ ಸಮನ್ವಯ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಬಿಜೆಪಿ ಅಧ್ಯಕ್ಷರು ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಭೆಗೆ ಹಾಜರಾಗುವ ನಿರೀಕ್ಷೆಯಿದೆ ಎಂದು ಆರ್ ಎಸ್ ಎಸ್ ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಬಿರುಕು ಇಲ್ಲ. ಮೋಹನ್ ಭಾಗವತ್ ಅವರು ನಿಜವಾದ ಸೇವಕ ಎಂದಿಗೂ ಅಹಂಕಾರ ಪಡುವುದಿಲ್ಲ ಎಂದು ಹೇಳಿರುವುದು ಒಂದು ಸಂದೇಶವಾಗಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಯ ಅನಂತರ ಭಾಗವತ್ ಅವರು ನೀಡಿದ ಭಾಷಣಕ್ಕೆ ಹೆಚ್ಚಿನ ವ್ಯತ್ಯಾಸವಿಲ್ಲ. ಯಾವುದೇ ಸಂದರ್ಭವಾಗಿರಲಿ ಅದು ರಾಷ್ಟ್ರೀಯ ಚುನಾವಣೆಯಂತಹ ಪ್ರಮುಖ ಘಟನೆಯನ್ನು ಉಲ್ಲೇಖಿಸುತ್ತದೆ. ಗೊಂದಲವನ್ನು ಸೃಷ್ಟಿಸಲು ಅದನ್ನು ತಪ್ಪಾಗಿ ಅರ್ಥೈಸಲಾಗಿದೆ. ಭಾಗವತ್ ಅವರು ನೀಡಿರುವ ʼದುರಹಂಕಾರʼ ಕುರಿತ ಹೇಳಿಕೆಯು ಪ್ರಧಾನಿ ನರೇಂದ್ರ ಮೋದಿ ಅಥವಾ ಯಾವುದೇ ಬಿಜೆಪಿ ನಾಯಕರನ್ನು ಉದ್ದೇಶಿಸಿಲ್ಲ ಎಂದು ಆರ್ ಎಸ್ ಎಸ್ ಮೂಲಗಳು ತಿಳಿಸಿವೆ.

ತಮ್ಮ ಭಾಷಣದಲ್ಲಿ ಭಾಗವತ್ ಅವರು ಒಂದು ವರ್ಷದ ಅನಂತರವೂ ಮಣಿಪುರದಲ್ಲಿ ಶಾಂತಿ ಸ್ಥಾಪನೆ ಆಗದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಫಲಿತಾಂಶಗಳು ಪ್ರಕಟವಾದ ಅನಂತರ ಚುನಾವಣಾ ಪ್ರಕ್ರಿಯೆಗಳ ಮೇಲೆ ಅನಗತ್ಯವಾಗಿ ಚಿಂತಿಸುವ ಬದಲು ಮುಂದುವರಿಯುವತ್ತ ಗಮನ ಹರಿಸುವಂತೆ ಒತ್ತಾಯಿಸಿದ್ದರು.

ಬಿಜೆಪಿ ಮತ್ತು ಪ್ರಧಾನಿ ಮೋದಿಯನ್ನು ಟೀಕಿಸಲು ವಿರೋಧ ಪಕ್ಷದ ನಾಯಕರು ಅವರ ಈ ಹೇಳಿಕೆಗಳನ್ನು ಬಳಸಿಕೊಂಡರು. ಇದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಪ್ರತಿಕ್ರಿಯಿಸಿ ಪ್ರಧಾನ ಮಂತ್ರಿಯವರಿಗೆ ಆತ್ಮಸಾಕ್ಷಿ ಇದ್ದಿದ್ದರೆ ಮಣಿಪುರದ ಜನರ ಬೇಡಿಕೆಗಳನ್ನು ಆಲಿಸಲು ಹೋಗುತ್ತಿದ್ದರು ಎಂದು ಹೇಳಿದ್ದಾರೆ. ಈ ಟೀಕೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್, ಗೊಂದಲವನ್ನು ಬಿತ್ತುವ ರಾಜಕೀಯ ಪ್ರೇರಿತ ಪ್ರಯತ್ನ ಇದು ಎಂದು ಹೇಳಿ ತಳ್ಳಿಹಾಕಿವೆ.

ಬಿಜೆಪಿಯ ಚುನಾವಣಾ ಕಾರ್ಯವೈಖರಿಯನ್ನು ಟೀಕಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, “ಸೊಕ್ಕಿನವರನ್ನು ಭಗವಾನ್‌ ಶ್ರೀರಾಮ 241 ಸ್ಥಾನಗಳಲ್ಲಿ ನಿಲ್ಲಿಸಿದ್ದಾನೆ” ಎಂದು ಹೇಳಿದ್ದು ಮತ್ತಷ್ಟು ವಿವಾದ ಹೆಚ್ಚಿಸಿತ್ತು. ಬಳಿಕ ಅವರು ಬಿಜೆಪಿಯ ಚುನಾವಣಾ ಯಶಸ್ಸು ಮತ್ತು ಪ್ರಧಾನಿ ಮೋದಿಯವರ ಮರುಚುನಾವಣೆಯಿಂದ ದೇಶವು ಸಂತೃಪ್ತವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡರು.

ಭಾಗವತ್ ಅವರ ಭಾಷಣದ ಮೇಲಿನ ಚರ್ಚೆಗೆ ಸಂಬಂಧಿಸಿ ಸ್ಪಷ್ಟೀಕರಣಕ್ಕಾಗಿ ಅಧಿಕೃತ ಸಂಘದ ಪದಾಧಿಕಾರಿಗಳನ್ನು ಉಲ್ಲೇಖಿಸಲು ಕುಮಾರ್ ಸಲಹೆ ನೀಡಿದ್ದಾರೆ. ಕುಮಾರ್ ಅವರ ಅಭಿಪ್ರಾಯಗಳು ವೈಯಕ್ತಿಕ ಮತ್ತು ಸಾಂಸ್ಥಿಕ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಆರ್‌ಎಸ್‌ಎಸ್ ಪುನರುಚ್ಚರಿಸಿದೆ.

ಬಿಜೆಪಿಯ ಚುನಾವಣಾ ಕಾರ್ಯತಂತ್ರದಲ್ಲಿ ಆರ್‌ಎಸ್‌ಎಸ್ ತೊಡಗಿಸಿಕೊಂಡಿರುವ ಕುರಿತು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್ ಅಧಿಕಾರಿಯೊಬ್ಬರು, ನೇರ ಪ್ರಚಾರಕ್ಕಿಂತ ಜಾಗೃತಿ ಮೂಡಿಸುವಲ್ಲಿ ತಮ್ಮ ಪಾತ್ರವನ್ನು ಒತ್ತಿ ಹೇಳಿದರು. ದೇಶದಾದ್ಯಂತ ನಾವು ದೆಹಲಿಯಲ್ಲಿಯೇ ಒಂದು ಲಕ್ಷಕ್ಕೂ ಹೆಚ್ಚು ಸಣ್ಣ ಗುಂಪು ಸಭೆಗಳನ್ನು ಒಳಗೊಂಡಂತೆ ಹಲವಾರು ಸಭೆಗಳನ್ನು ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಕೇಂದ್ರ ಸಚಿವ ಸಂಪುಟಕ್ಕೆ ಜೆ.ಪಿ. ನಡ್ಡಾ ಸೇರ್ಪಡೆಗೊಂಡ ಅನಂತರ ಹೊಸ ಬಿಜೆಪಿ ಅಧ್ಯಕ್ಷರನ್ನು ನೇಮಿಸಬೇಕಿದೆ. ಆರ್‌ಎಸ್‌ಎಸ್ ಸಮಾಲೋಚನಾ ಪ್ರಕ್ರಿಯೆಯಲ್ಲಿ ತಮ್ಮ ನಿರಂತರ ಪಾಲ್ಗೊಳ್ಳುವಿಕೆಯನ್ನು ಬಿಜೆಪಿ ದೃಢಪಡಿಸಿವೆ.

Continue Reading

Lok Sabha Election 2024

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಜೈಪುರದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಅವರು, ಬಿಜೆಪಿಯ ದುರಹಂಕಾರದಿಂದ ಅದಕ್ಕೆ 240 ಸ್ಥಾನಗಳು ಸಿಕ್ಕಿತು ಎಂದು (Indresh Kumar) ಹೇಳಿದ್ದು ಚರ್ಚೆಗೆ ಕಾರಣವಾಗಿತ್ತು. ಇದು ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವಿನ ಭಿನ್ನಮತದ ಬಗ್ಗೆ ವದಂತಿಗಳನ್ನು ಹುಟ್ಟು ಹಾಕಿತ್ತು. ಇದೀಗ ಇಂದ್ರೇಶ್ ಅವರು ಹೊಸ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

Indresh Kumar
Koo

ರಾಮನನ್ನು (ram) ವಿರೋಧಿಸಿದವರು ಅಧಿಕಾರದಿಂದ ಹೊರಗೆ ಉಳಿದಿದ್ದಾರೆ. ರಾಮ ಭಕ್ತಿ ಪ್ರತಿಜ್ಞೆ ಮಾಡಿದವರು ಅಧಿಕಾರದಲ್ಲಿದ್ದಾರೆ. ನರೇಂದ್ರ ಮೋದಿ (narendra modi) ನೇತೃತ್ವದಲ್ಲಿ ಮೂರನೇ ಬಾರಿಗೆ ಸರ್ಕಾರ ರಚನೆಯಾಗಿದೆ ಎಂದು ಆರ್ ಎಸ್ ಎಸ್ ನಾಯಕ (RSS Leader) ಇಂದ್ರೇಶ್ ಕುಮಾರ್ (Indresh Kumar) ಹೇಳಿದ್ದಾರೆ. ಬಿಜೆಪಿಯ ದುರಂಹಕಾರ (BJP’s Arrogance) ಕುರಿತು ಇವರು ಈ ಹಿಂದೆ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಒಳಗಾಗಿತ್ತು. ಇವರ ಹೇಳಿಕೆ ಮೋದಿ ವಿರುದ್ಧ ಮತ್ತು ಬಿಜೆಪಿ ವಿರುದ್ಧ ಎಂಬ ವ್ಯಾಖ್ಯಾನ ಕೇಳಿ ಬಂದಿತ್ತು. ಇದೀಗ ಇಂದ್ರೇಶ್‌ ಕುಮಾರ್‌ ಯುಟರ್ನ್‌ ಹೊಡೆದಿದ್ದಾರೆ. ಮೋದಿ ಮತ್ತು ಬಿಜೆಪಿ ಪರ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 240 ಸ್ಥಾನಗಳಿಗೆ ಸೀಮಿತವಾಗಿದೆ. ಬಿಜೆಪಿ ನಾಯಕರ “ಅಹಂಕಾರ”ದಿಂದ ಪಕ್ಷವು ಬಹುಮತದ ಅಂಕವನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದು ಸಂಚಲನ ಸೃಷ್ಟಿಸಿತ್ತು.

ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕುರಿತು ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮಾರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿ ಮಾಡಿದ ಸೊಕ್ಕಿನ ಪಕ್ಷವನ್ನು 241ಕ್ಕೆ ನಿಲ್ಲಿಸಲಾಯಿತು. ಆದರೆ ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಟೀಕಿಸಿದ್ದರು.


ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದ್ದರು ಹಾಗೂ ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯವನ್ನು ಎತ್ತಿ ಹಿಡಿದು ವಿವಾದವನ್ನು ಹುಟ್ಟು ಹಾಕಿತ್ತು. ಇಂತಹ ಹೇಳಿಕೆಗಳು ಗೊಂದಲವನ್ನು ಬಿತ್ತುವ ಉದ್ದೇಶದಿಂದ ಮಾಡಲಾಗಿದೆ. ಇದು ಕೇವಲ ಊಹಾಪೋಹ ಎಂದು ಆರ್ ಎಸ್ ಎಸ್ ಸ್ಪಷ್ಟಪಡಿಸಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

Lok Sabha Election: ಪ್ರಜಾಪ್ರಭುತ್ವದಲ್ಲಿಯೂ ರಾಮರಾಜ್ಯದ ವಿಧಾನವನ್ನು ಅನುಸರಿಸಬೇಕು. ಅಹಂಕಾರ ತೋರಬಾರದು. ರಾಮನ ಭಕ್ತಿಯನ್ನು ಮಾಡಿಯೂ ಕೆಲವರು ಕ್ರಮೇಣ ಅಹಂಕಾರಿಗಳಾಗಿ ಮಾರ್ಪಟ್ಟವರು. ಅವರು ಅತಿದೊಡ್ಡ ಪಕ್ಷವಾಗಿದ್ದರು. ಆದಾಗ್ಯೂ, ಅವರಿಗೆ ನೀಡಬೇಕಾದ ಬಹುಮತವನ್ನು ಅಹಂಕಾರದ ಕಾರಣಕ್ಕೆ ದೇವರು ತಡೆದಿದ್ದಾನೆ ಆದರೆ, ರಾಮನನ್ನು ವಿರೋಧಿಸಿದವರಿಗೆ ಎರಡನೇ ಸ್ಥಾನ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

Lok Sabha Election
Koo

ಜೈಪುರ: ಅಹಂಕಾರದ ಹೆಚ್ಚು ತೋರಿದ ಆಡಳಿತ ಪಕ್ಷ ಬಹುಮತದ ಕೊರತೆ ಅನುಭವಿಸಿದೆ. ರಾಮ ಅವರನ್ನು 241 ಸ್ಥಾನಕ್ಕೆ ನಿಲ್ಲಿಸಿದ. ರಾಮನ ವಿರೋಧಿಯಾಗಿದ್ದವರು 2 ನೇ ಸ್ಥಾನಕ್ಕೆ ಉಳಿದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಸಿದ್ಧಾಂತಿ ಇಂದ್ರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿಯನ್ನು ಮಾಡಿಕೊಂಡಿದ್ದರೂ ಅಹಂಕಾರಿಯಾದ ಪಕ್ಷವನ್ನು 241 ಕ್ಕೆ ನಿಲ್ಲಿಸಲಾಯಿತು. ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಅವರು ಬಿಜೆಪಿಗೆ ಪರೋಕ್ಷವಾಗಿ ಟೀಕಿಸಿದರು.

ಪ್ರಜಾಪ್ರಭುತ್ವದಲ್ಲಿಯೂ ರಾಮರಾಜ್ಯದ ವಿಧಾನವನ್ನು ಅನುಸರಿಸಬೇಕು. ಅಹಂಕಾರ ತೋರಬಾರದು. ರಾಮನ ಭಕ್ತಿಯನ್ನು ಮಾಡಿಯೂ ಕೆಲವರು ಕ್ರಮೇಣ ಅಹಂಕಾರಿಗಳಾಗಿ ಮಾರ್ಪಟ್ಟರು. ಅವರು ಅತಿದೊಡ್ಡ ಪಕ್ಷವಾಗಿದ್ದರು. ಆದಾಗ್ಯೂ, ಅವರಿಗೆ ನೀಡಬೇಕಾದ ಬಹುಮತವನ್ನು ಅಹಂಕಾರದ ಕಾರಣಕ್ಕೆ ದೇವರು ತಡೆದಿದ್ದಾನೆ ಆದರೆ, ರಾಮನನ್ನು ವಿರೋಧಿಸಿದವರಿಗೆ ಎರಡನೇ ಸ್ಥಾನ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ರಾಮನನ್ನು ವಿರೋಧಿಸಿದವರಲ್ಲಿ ಯಾರಿಗೂ ಅಧಿಕಾರ ನೀಡಲಿಲ್ಲ. ಅವರೆಲ್ಲರನ್ನೂ ಒಟ್ಟುಗೂಡಿಸಿ ಎರಡನೇ ಕ್ರಮಾಂಕದಲ್ಲಿ ಇಟ್ಟಿದ್ದಾರೆ ಎಂದಿದ್ದಾರೆ. ಇದು ಕೆಲವು ದಿನಗಳ ಹಿಂದೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಪೂರಕವಾಗಿದೆ. ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಭಾಗವತ್ ಹೇಳಿದ್ದರು.

ಇದನ್ನೂ ಓದಿ: BS Yediyurappa : ಲೈಂಗಿಕ ಕಿರುಕುಳ ಕೇಸ್; ಹೈಕೋರ್ಟ್​ನಲ್ಲಿ ಇಂದು ಯಡಿಯೂರಪ್ಪಗೆ ಜಾಮೀನು ಸಿಗದಿದ್ದರೆ ಬಂಧನ

ರಾಮನನ್ನು ಪ್ರಾರ್ಥಿಸುವವರು ವಿನಮ್ರರಾಗಿರಬೇಕು… ಭಗವಾನ್ ರಾಮನು ತಾರತಮ್ಯ ಮಾಡುವುದಿಲ್ಲ ಮತ್ತು ಶಿಕ್ಷಿಸುವುದಿಲ್ಲ. ರಾಮ ಎಲ್ಲರಿಗೂ ನ್ಯಾಯ ಒದಗಿಸುತ್ತಾನೆ. ಅವನು ಎಲ್ಲರಿಗೂ ಕೊಡುತ್ತಾನೆ ಮತ್ತು ಕೊಡುತ್ತಲೇ ಇರುತ್ತಾನೆ. ಭಗವಾನ್ ರಾಮ ಯಾವಾಗಲೂ ನ್ಯಾಯಯುತನಾಗಿದ್ದ ಮತ್ತು ಹಾಗೆಯೇ ಇರುತ್ತಾನೆ” ಎಂದು ಇಂದ್ರೇಶ್ ಅವರು ಹೇಳಿದ್ದಾರೆ.

ಪ್ರತಿಪಕ್ಷ ಇಂಡಿಯಾ ಬಣವನ್ನು ಗುರಿಯಾಗಿಸಿಕೊಂಡು ಅವರನ್ನು “ರಾಮ ವಿರೋಧಿ” ಎಂದು ಕರೆದರು. ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದರು.

Continue Reading
Advertisement
Apple With sticker
Latest10 mins ago

Apple With sticker: ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

Viral News
Latest11 mins ago

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral Video
Latest23 mins ago

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Health Tips
Latest26 mins ago

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Temple Bell
ಧಾರ್ಮಿಕ31 mins ago

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

Morning Nutrition
ಆರೋಗ್ಯ34 mins ago

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

Karnataka Weather Forecast
ಮಳೆ1 hour ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ2 hours ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Dina Bhavishya
ಭವಿಷ್ಯ3 hours ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ18 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌