Lok Sabha Election 2024: ರೋಡ್‌ ಶೋ, ಬೃಹತ್‌ ಸಮಾವೇಶ! ಇಂದು ಉಮೇದುವಾರಿಕೆ ಸಲ್ಲಿಸಿದ ಘಟಾನುಘಟಿ ನಾಯಕರು - Vistara News

Lok Sabha Election 2024

Lok Sabha Election 2024: ರೋಡ್‌ ಶೋ, ಬೃಹತ್‌ ಸಮಾವೇಶ! ಇಂದು ಉಮೇದುವಾರಿಕೆ ಸಲ್ಲಿಸಿದ ಘಟಾನುಘಟಿ ನಾಯಕರು

Lok Sabha Election 2024: ಕರ್ನಾಟಕದಲ್ಲಿ ನಡೆಯುತ್ತಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೇ ದಿನವಾಗಿದ್ದರಿಂದ ಹಲವು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿಯೇ ಇತ್ತು. ಗುರುವಾರ ಎನ್‌ಡಿಎದಿಂದ ಘಟಾನುಘಟಿ ನಾಯಕರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಂಡ್ಯ, ಹಾಸನ, ಬೆಂಗಳೂರು ದಕ್ಷಿಣ, ದಕ್ಷಿಣ ಕನ್ನಡ, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಿಂದ ಉಮೇದುವಾರಿಕೆ ಸಲ್ಲಿಸಲಾಗಿದೆ. ಈ ವೇಳೆ ಭರ್ಜರಿ ರೋಡ್‌ ಶೋ ನಡೆಸಲಾಗಿದೆ. ಅಲ್ಲದೆ, ಬೃಹತ್‌ ಸಮಾವೇಶದ ಮೂಲಕ ಎದುರಾಳಿ ಪಕ್ಷಗಳಿಗೆ ಸಂದೇಶವನ್ನು ನೀಡಲಾಗಿದೆ.

VISTARANEWS.COM


on

Lok Sabha Elections 2024 NDA Top leaders file nominations today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಾವು ಏರತೊಡಗಿದೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಗುರುವಾರ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಸೇರಿದಂತೆ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌.ಡಿ. ಕುಮಾರಸ್ವಾಮಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ, ಚಿತ್ರದುರ್ಗದಿಂದ ಗೋವಿಂದ ಕಾರಜೋಳ, ಹಾಸನದಿಂದ ಪ್ರಜ್ವಲ್‌ ರೇವಣ್ಣ ಹಾಗೂ ದಕ್ಷಿಣ ಕನ್ನಡದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಎನ್‌ಡಿಎ ಅಭ್ಯರ್ಥಿಗಳು ರೋಡ್‌ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಅಲ್ಲದೆ, ಬೃಹತ್‌ ಸಭೆಗಳನ್ನು ಆಯೋಜಿಸಿ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಆಡಳಿತ ಬರಲು ಎಲ್ಲರೂ ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿದರು.

Lok Sabha Elections 2024 NDA Top leaders file nominations today

Lok Sabha Election 2024: ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನೆರೆಯ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೈಸೂರು – ಕೊಡಗು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಬೃಹತ್‌ ಸಮಾವೇಶವನ್ನು ನಡೆಸಿ ಶಕ್ತಿ ಪ್ರದರ್ಶನ ಮಾಡಲಾಯಿತು.

ಇದನ್ನೂ ಓದಿ: Lok Sabha Election 2024: ತೇಜಸ್ವಿ ಸೂರ್ಯಗೆ ʼರೋಡ್‌ ಶೋʼ ಕಂಟಕ? ನಾಮಪತ್ರ ರದ್ದು ಕೋರಿ ಆಯೋಗಕ್ಕೆ ಮೊರೆ

ರೋಡ್ ಶೋ ಮೂಲಕ ತೆರಳಿ ತೇಜಸ್ವಿ ಸೂರ್ಯ ನಾಮಪತ್ರ

ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್ ಹೋಟೆಲ್‍ನಿಂದ ರೋಡ್ ಶೋ ಮೂಲಕ ಹೊರಟು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Lok Sabha Elections 2024 NDA Top leaders file nominations today

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪ್ರತಾಪ ಸಿಂಹ, ರಾಜ್ಯಸಭಾ ಸದಸ್ಯ ಜಗ್ಗೇಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಶರವಣ, ಜೆಡಿಎಸ್ ಬೆಂಗಳೂರು ಮಹಾನಗರ ಅಧ್ಯಕ್ಷ ರಮೇಶ್ ಗೌಡ, ಜೆಡಿಎಸ್ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ತುಳಸಿರಾಮ್ ಅವರು ಹಾಜರಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಪಕ್ಷದ ಮಾಜಿ ಮಹಾಪೌರರು, ಉಪ ಮಹಾಪೌರರು, ಬಿ.ಬಿ.ಎಂ.ಪಿ. ನಿಕಟಪೂರ್ವ ಸದಸ್ಯರು, ಪಕ್ಷದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಕೋಷ್ಠಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Election 2024: ಕಣ್ಣೀರು ಹಾಕಿದ ನಿಖಿಲ್‌ ಕುಮಾರಸ್ವಾಮಿ; ಚನ್ನಪಟ್ಟಣದಿಂದ ಸ್ಪರ್ಧಿಸುವ ಸುಳಿವು?

ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಗಿರಿನಗರದ ಶ್ರೀ ಗಣೇಶ ದೇವಸ್ಥಾನದಲ್ಲಿ ಕುಟುಂಬದೊಂದಿಗೆ ಪೂಜೆ ಸಲ್ಲಿಸಿದರು. ಗಿರಿನಗರದ ಭಾಗದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಿ ಶುಭ ಹಾರೈಸಿದರು.

ಚಿತ್ರದುರ್ಗದಲ್ಲಿ ಉಮೇದುವಾರಿಕೆ ಸಲ್ಲಿಸಿದ ಗೋವಿಂದ ಕಾರಜೋಳ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗಾಂಧಿ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ಗುರುವಾರ ನಾಮಪತ್ರ ಸಲ್ಲಿಸಿದರು.

Lok Sabha Elections 2024 NDA Top leaders file nominations today

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಎಂ ಚಂದ್ರಪ್ಪ, ಗಾಲಿ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಜಿ.ಎಚ್ ತಿಪ್ಪಾರೆಡ್ಡಿ, ಎಸ್. ತಿಪ್ಪೇಸ್ವಾಮಿ, ಎಸ್.ಕೆ. ಬಸವರಾಜನ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಚಿದಾನಂದ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಹನುಮಂತೆ ಗೌಡ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಮಾಜಿ ಸಂಸದರಾದ ಜನಾರ್ದನಸ್ವಾಮಿ, ಜೆಡಿಎಸ್ ಮುಖಂಡರಾದ ಕಾಂತರಾಜ್, ಯಶೋಧರ್, ರವೀಶ್, ರವೀಂದ್ರ, ತಿಪ್ಪೇಸ್ವಾಮಿ, ಮುಂತಾದ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಹಾಗು ರಾಜ್ಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತಿತರ ಮುಖಂಡರು ಹಾಜರಿದ್ದರು.

Lok Sabha Elections 2024 NDA Top leaders file nominations today

ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಹಾಸನ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಎನ್‍ಡಿಎ ಮಿತ್ರಕೂಟಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ಭಾವನೆ ಜನರಲ್ಲಿದೆ. 2047ರಲ್ಲಿ ಭಾರತವು ವಿಕಸಿತ ಭಾರತವಾಗುವ ಕನಸನ್ನು ನನಸು ಮಾಡಲು ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿದರು.

ಇದನ್ನೂ ಓದಿ: Lok Sabha Election 2024: ಶುರುವಾಯ್ತಾ ಕಣ್ಣೀರು ಪಾಲಿಟಿಕ್ಸ್‌? ಪ್ರಚಾರದಲ್ಲಿ ಅತ್ತೇಬಿಟ್ಟರು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್!

Lok Sabha Elections 2024 NDA Top leaders file nominations today

ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಗುರುವಾರ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಸೇರಿದ್ದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕರಾದ ಸುನಿಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯಕ್ ಯು, ಉಮಾನಾಥ್ ಕೋಟ್ಯಾನ್, ಕು. ಭಾಗೀರಥಿ ಮರುಳ್ಯ, ಪ್ರತಾಪ್ ಸಿಂಹ ನಾಯಕ್, ಭರತ್ ಶೆಟ್ಟಿ ವೈ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಪ್ರಮೋದ್ ಮದ್ವರಾಜ್ ಹಾಗೂ ಜೆಡಿಎಸ್ ಪಕ್ಷದ ಪ್ರಮುಖರು, ಸಾವಿರಾರು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Lok Sabha Elections 2024 NDA Top leaders file nominations today

ನಾಮಪತ್ರ ಸಲ್ಲಿಸಿದ ಡಾ. ಸಿ.ಎನ್.ಮಂಜುನಾಥ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಸಿ.ಎನ್.ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ ನಂತರ ಸಮಾವೇಶ ಸ್ಥಳದವರೆಗೂ ಭವ್ಯ ಮೆರವಣಿಗೆಯಲ್ಲಿ ತೆರಳಿದರು. ಶಾಸಕರಾದ ಮುನಿರತ್ನ, ಅಶ್ವಥ್ ನಾರಾಯಣ, ಎಂ.ಕೃಷ್ಣಪ್ಪ, ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ನಟಿಯರಾದಂತಹ ಶೃತಿ ಹಾಗೂ ಅಪಾರ ಸಂಖ್ಯೆಯ ಮುಖಂಡರು ಸಮಾವೇಶದಲ್ಲಿ ಭಾಗವಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

Narendra Modi: ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪರೋಕ್ಷ ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿ ಡಬಲ್ ಆರ್ (ಆರ್​ಆರ್​ಆರ್​​) ತೆರಿಗೆ ಮೂಲಕ ಸಂಗ್ರಹಿಸಿದ ಹಣವನ್ನು ದೆಹಲಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿದರು. ಜಾಗತಿಕ ಮೆಚ್ಚುಗೆ ಪಡೆದ ಬ್ಲಾಕ್ಬಸ್ಟರ್ ತೆಲುಗು ಚಿತ್ರ ‘ಆರ್​ಆರ್​​ಆರ್​ ಅನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

VISTARANEWS.COM


on

Narendra modi
Koo

ನವದೆಹಲಿ: ನಾನು ಬದುಕಿರುವವರೆಗೂ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿಯ ಪಾಲನ್ನು ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಕೊಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಮಂಗಳವಾರ ಹೇಳಿದ್ದಾರೆ. ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್​ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ತಮ್ಮ ಮೂರನೇ ಅವಧಿಯಲ್ಲಿ ಸಂವಿಧಾನದ 75 ನೇ ವರ್ಷವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತನೆ ಎಂದು ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪರೋಕ್ಷ ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿ ಡಬಲ್ ಆರ್ (ಆರ್​ಆರ್​ಆರ್​​) ತೆರಿಗೆ ಮೂಲಕ ಸಂಗ್ರಹಿಸಿದ ಹಣವನ್ನು ದೆಹಲಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿದರು. ಜಾಗತಿಕ ಮೆಚ್ಚುಗೆ ಪಡೆದ ಬ್ಲಾಕ್ಬಸ್ಟರ್ ತೆಲುಗು ಚಿತ್ರ ‘ಆರ್​ಆರ್​​ಆರ್​ ಅನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ನಕಲಿ ವೀಡಿಯೊ ಪ್ರಕರಣದ ಬಗ್ಗೆ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡ ಅವರು, ಜನರನ್ನು ದಾರಿತಪ್ಪಿಸಲು ಮತ್ತು ಸಮಾಜದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಕಾಂಗ್ರೆಸ್​ ಈ ರೀತಿ ಮಾಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತಿನ ಶೇಕಡಾ 55 ರಷ್ಟು ಆನುವಂಶಿಕ ತೆರಿಗೆಯನ್ನು ವಿಧಿಸುತ್ತದೆ ಎಂದು ಆರೋಪಿಸಿದ ಮೋದಿ, ಇಡೀ ಜಗತ್ತು ಆರ್ಥಿಕವಾಗಿ ಪ್ರಗತಿ ಹೊಂದುತ್ತಿರುವಾಗ ಹಿಂದಿನ ಯುಪಿಎ ಸರ್ಕಾರದ ಅಡಿಯಲ್ಲಿ ಭಾರತವು ನೀತಿ ನಿಷ್ಕ್ರಿಯತೆಯಿಂದ ಬಳಲುತ್ತಿತ್ತು ಎಂದು ಹೇಳಿದರು.

ಇದನ್ನೂ ಓದಿ: Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅವರು ಆನುವಂಶಿಕ ತೆರಿಗೆಯನ್ನು ತರುತ್ತಾರೆ. ಪಿತ್ರಾರ್ಜಿತ ಆಸ್ತಿಯ ಮೇಲೆ (ಪೋಷಕರಿಂದ ಪಡೆದ) ಅರ್ಧಕ್ಕಿಂತ ಹೆಚ್ಚು ತೆರಿಗೆ ಸಂಗ್ರಹಿಸಲು ಕಾಂಗ್ರೆಸ್ ಯೋಜಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಸುಳ್ಳು ಭರವಸೆ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೆಲ್ಲಾ ಅದು ಐದು ರಾಜಕೀಯ ಅಜೆಂಡಾಗಳನ್ನು ಹೊಂದಿತ್ತು. ಮೊದಲನೆಯದು, ಸುಳ್ಳು ಭರವಸೆಗಳು; ಎರಡನೆಯದು, ವೋಟ್ ಬ್ಯಾಂಕ್ ರಾಜಕಾರಣ, ಮೂರನೆಯದು, ಮಾಫಿಯಾ ಮತ್ತು ಅಪರಾಧಿಗಳನ್ನು ಬೆಂಬಲಿಸುವುದು, ನಾಲ್ಕನೆಯದು ವಂಶಪಾರಂಪರ್ಯ ರಾಜಕಾರಣ ಮತ್ತು ಐದನೆಯದು ಭ್ರಷ್ಟಾಚಾರ.ಮೊದಲು ತೆಲಂಗಾಣವನ್ನು ಲೂಟಿ ಮಾಡಿದ್ದು ಬಿಆರ್​ಎಸ್​್. ಈಗ ಕಾಂಗ್ರೆಸ್ ಎಂದು ಮೋದಿ ಆರೋಪಿಸಿದರು.

Continue Reading

Lok Sabha Election 2024

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Lok Sabha Election: ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದೆ. ಈ ಎರಡು ಹಂತಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ನಡೆದಿದೆ ಎನ್ನುವ ಅಂತಿಮ ಅಂಕಿ-ಅಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಶೇ. 66.14ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರೆ, ಎರಡನೇ ಹಂತದಲ್ಲಿ ಶೇ. 66.71ರಷ್ಟು ಮತದಾನವಾಗಿದೆ. 2019ಕ್ಕೆ ಹೋಲಿಸಿದರೆ ಮತದಾನದ ಪ್ರಮಾಣ ಕುಸಿದಿದೆ. ಕಳೆದ ಬಾರಿ ಮೊದಲ ಮತ್ತು ಎರಡನೇ ಹಂತಗಳಲ್ಲಿ ಕ್ರಮವಾಗಿ ಶೇ. 69.43 ಮತ್ತು ಶೇ. 69.17ರಷ್ಟು ಮತದಾನವಾಗಿತ್ತು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಎರಡು ಹಂತಗಳ ಮತದಾನ ಯಶಸ್ವಿಯಾಗಿ ಮುಗಿದಿದೆ. ಇನ್ನು 5 ಹಂತಗಳ ಮತದಾನ ಬಾಕಿ ಇದೆ. ಈ ಮಧ್ಯೆ ಚುನಾವಣಾ ಆಯೋಗ (Election Commission) ಎರಡೂ ಹಂತಗಳಲ್ಲಿ ನಡೆದ ಒಟ್ಟು ಮತದಾನದ ನಿಖಿರ ಅಂಕಿ ಅಂಶವನ್ನು ಮಂಗಳವಾರ ಬಿಡುಗಡೆ ಮಾಡಿದೆ. ಈ 18ನೇ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ. 66.14ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದರೆ, ಎರಡನೇ ಹಂತದಲ್ಲಿ ಶೇ. 66.71ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮೊದಲ ಹಂತದಲ್ಲಿ ಏಪ್ರಿಲ್ 19ರಂದು 102 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ ಏಪ್ರಿಲ್ 26ರಂದು ಕರ್ನಾಟಕದ 14 ಕ್ಷೇತ್ರ ಸೇರಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ಮುಗಿದಿದೆ. 2019ರ ಚುನಾವಣೆಗೆ ಹೋಲಿಸಿದರೆ ಈ ಚುನಾವಣೆಯ ಎರಡು ಹಂತಗಳಲ್ಲಿ ಮತದಾನದ ಪ್ರಮಾಣವು ಕುಸಿತ ಕಂಡಿದೆ. 2019ರಲ್ಲಿ ಮೊದಲ ಮತ್ತು ಎರಡನೇ ಹಂತಗಳಲ್ಲಿ ಕ್ರಮವಾಗಿ ಶೇ. 69.43 ಮತ್ತು ಶೇ. 69.17ರಷ್ಟು ಮತದಾನವಾಗಿತ್ತು.

ಅತ್ಯಧಿಕ ಎಲ್ಲಿ?

ಮೊದಲ ಹಂತದಲ್ಲಿ ಲಕ್ಷದ್ವೀಪದಲ್ಲಿ ಅತೀ ಹೆಚ್ಚು ಮತದಾನ ನಡೆದಿತ್ತು. ಇಲ್ಲಿ ಶೇ. 84.1 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ಅದೇ ರೀತಿ ಅತೀ ಕಡಿಮೆ ಬಿಹಾರದಲ್ಲಿ ದಾಖಲಾಗಿತ್ತು. ಇಲ್ಲಿ ಕೇವಲ ಶೇ. 49.26ರಷ್ಟು ಮತದಾನವಾಗಿತ್ತು. ಏಪ್ರಿಲ್‌ 19ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಆಯೋಜಿಸಲಾಗಿತ್ತು.

ಇನ್ನು ಎರಡನೇ ಹಂತದಲ್ಲಿ ಮಣಿಪುರದಲ್ಲಿ ಅಧಿಕ ಪ್ರಮಾಣದಲ್ಲಿ ಅಂದರೆ ಶೇ. 84.85 ಮತ ಚಲಾವಣೆಯಾದರೆ ಅತೀ ಕಡಿಮೆ ಉತ್ತರ ಪ್ರದೇಶದಲ್ಲಿ ದಾಖಲಾಗಿದೆ. ಇಲ್ಲಿ ಶೇ. 55.19 ಮಂದಿ ಮಾತ್ರ ವೋಟು ಹಾಕಿದ್ದಾರೆ. ಎರಡನೇ ಹಂತದಲ್ಲಿ ಒಟ್ಟು 88 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಈ ವೇಳೆ 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

ಕರ್ನಾಟಕದಲ್ಲಿ ದಾಖಲೆಯ ಮತದಾನ

ಕರ್ನಾಟಕದ 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ. 69.23 ಮತದಾನ ದಾಖಲಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಮೂರನೇ ಹಂತದಲ್ಲಿ ಅಂದರೆ ಮೇ 7ರಂದು ಕರ್ನಾಟಕದ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Continue Reading

Lok Sabha Election 2024

Election Commission: ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ; ಹೊಸ ವೇಳಾಪಟ್ಟಿ ಇಂತಿದೆ

Election Commission: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರದ ಮತದಾನವನ್ನು ಮೇ 7ರಿಂದ ಮೇ 25ಕ್ಕೆ ಮುಂದೂಡಿದೆ. “ವಿವಿಧ ಲಾಜಿಸ್ಟಿಕ್ಸ್, ಸಂವಹನ ಮತ್ತು ಸಂಪರ್ಕದ ನೈಸರ್ಗಿಕ ಅಡೆತಡೆಯಿಂದಾಗಿ ಚುನಾವಣಾ ದಿನಾಂಕಗಳನ್ನು ಬದಲಾಯಿಸಿದ್ದೇವೆʼʼ ಎಂದು ಆಯೋಗ ತಿಳಿಸಿದೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ಆಯೋಗ (Election Commission) ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರದ ಮತದಾನವನ್ನು ಮೇ 7ರಿಂದ ಮೇ 25ಕ್ಕೆ ಮುಂದೂಡಿದೆ.

ಚುನಾವಣಾ ಆಯೋಗವು ತನ್ನ ಅಧಿಸೂಚನೆಯಲ್ಲಿ, “ವಿವಿಧ ಲಾಜಿಸ್ಟಿಕ್ಸ್, ಸಂವಹನ ಮತ್ತು ಸಂಪರ್ಕದ ನೈಸರ್ಗಿಕ ಅಡೆತಡೆಯಿಂದಾಗಿ ಚುನಾವಣಾ ದಿನಾಂಕಗಳನ್ನು ಬದಲಾಯಿಸಲು ವಿವಿಧ ರಾಜಕೀಯ ಪಕ್ಷಗಳು ಮನವಿ ಸಲ್ಲಿಸಿದ್ದವು. ಈ ಎಲ್ಲ ಸಮಸ್ಯೆಗಳು ಪ್ರಚಾರಕ್ಕೆ ಅಡ್ಡಿಯಾಗುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ ಎನ್ನುವುದನ್ನು ಮನಗಂಡಿದ್ದೇವೆ. ಇದು ಮತದಾನ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ದಿನಾಂಕ ಮುಂದೂಡಲಾಗಿದೆ” ಎಂದು ಹೇಳಿದೆ.

ಮೂರರ ಬದಲು ಆರನೇ ಹಂತದಲ್ಲಿ ಮತದಾನ

ʼʼಈ ಹಿಂದೆ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಅಂದರೆ ಮೇ 7ರಂದು ಮತದಾನ ನಡೆಸಲು ತೀರ್ಮಾನಿಸಲಾಗಿತ್ತು. ಅದರ ಬದಲು ಇದೀಗ ಆರನೇ ಹಂತದಲ್ಲಿ ಅಂದರೆ ಮೇ 25ಕ್ಕೆ ಮುಂದೂಡಲಾಗಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕೆಲವು ಭಾಗಗಳು ಮತ್ತು ಜಮ್ಮು ಪ್ರದೇಶದ ಪೂಂಚ್ ಮತ್ತು ರಾಜೌರಿ ಪ್ರದೇಶಗಳನ್ನು ಒಳಗೊಂಡಿರುವ ಈ ಪ್ರದೇಶಗಳ ರಸ್ತೆ ಪರಿಸ್ಥಿತಿ, ಹವಾಮಾನ ಮತ್ತು ಇಲ್ಲಿನ ಪ್ರವೇಶದ ಬಗ್ಗೆ ವಿವರವಾದ ವರದಿಯನ್ನು ತಕ್ಷಣ ಸಲ್ಲಿಸುವಂತೆ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ಆಡಳಿತವನ್ನು ಕೇಳಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ (National Conference) ಮತ್ತು ಮೆಹಬೂಬಾ ಮುಫ್ತಿ (PDP) ಕಳೆದ ವಾರ ಚುನಾವಣೆಯನ್ನು ಮುಂದೂಡದಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು. “ಮುಂದೂಡುವ ಬೇಡಿಕೆ ಎಲ್ಲ ಪಕ್ಷಗಳಿಂದ ಬಂದಿಲ್ಲ. ವಿಶೇಷ ಎಂದರೆ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಕೆಲವರು ಸ್ಪರ್ಧಿಸುತ್ತಿಲ್ಲ” ಎಂದು ಅಬ್ದುಲ್ಲಾ ತಿಳಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿ ಮಿಯಾನ್ ಅಲ್ತಾಫ್ ವಿರುದ್ಧ ಅನಂತ್‌ನಾಗ್-ರಾಜೌರಿಯಿಂದ ಸ್ಪರ್ಧಿಸುತ್ತಿರುವ ಮೆಹಬೂಬಾ ಮುಫ್ತಿ, “ಎಲ್ಲರೂ ನನ್ನ ವಿರುದ್ಧ ಗುಂಪುಗೂಡಿದ್ದಾರೆ. ಯಾಕೆಂದರೆ ಅವರು ನನ್ನನ್ನು ಸಂಸತ್ತಿನಲ್ಲಿ ನೋಡಲು ಬಯಸುವುದಿಲ್ಲ. ಜನರು, ಧಾರ್ಮಿಕ ಮತ್ತು ಪಕ್ಷಾತೀತವಾಗಿ ನನ್ನ ಬೆಂಬಲಕ್ಕೆ ಬರುತ್ತಿದ್ದಾರೆ. ಆದ್ದರಿಂದ ಅವರು ಚುನಾವಣೆಗಳನ್ನು ಮುಂದೂಡಲು ಮತ್ತು ತಿರುಚಲು ಚುನಾವಣಾ ಆಯೋಗವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

ಮೇ 7ರಂದು ಮೂರನೇ ಹಂತದಲ್ಲಿ ಒಟ್ಟು 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಈ ಪೈಕಿ ಶೇ. 18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Continue Reading

Lok Sabha Election 2024

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Parliament Flashback: 1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 545ರಲ್ಲಿ 161 ಸ್ಥಾನ ಗೆದ್ದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 15 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್‌ ಕೇವಲ 140 ಸೀಟುಗಳಿಗೆ ಸೀಮಿತವಾಯಿತು. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರಿಂದ ರಾಷ್ಟ್ರಪತಿಯವರು ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರು.

VISTARANEWS.COM


on

Parliament Flashback
Koo

ಬೆಂಗಳೂರು: 1991ರ ಚುನಾವಣೆಯಲ್ಲಿ (Parliament Flashback) ಬಹುಮತ ಕೊರತೆ ಎದುರಿಸುತ್ತಿದ್ದ ಕಾಂಗ್ರೆಸ್‌, ಪಿ.ವಿ.ನರಸಿಂಹ ರಾವ್‌ ನೇತೃತ್ವದಲ್ಲಿ ಹಾಗೂ ಹೀಗೂ ಐದು ವರ್ಷ ಆಡಳಿತ ನಡೆಸಿತು. ಆದರೆ ರಾಜೀವ್‌ ಗಾಂಧಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪಗಳು ನರಸಿಂಹ ರಾವ್‌ ಸರ್ಕಾರದ ಅವಧಿಯಲ್ಲಿ ಇನ್ನೂ ಜೋರಾಗಿ ಕೇಳಿ ಬಂದವು. ನರಸಿಂಹ ರಾವ್‌ ಸಂಪುಟದ ಏಳು ಸಚಿವರು ನಾನಾ ಹಗರಣಗಳಲ್ಲಿ ಸಿಲುಕಿ ರಾಜೀನಾಮೆ ನೀಡಬೇಕಾಯಿತು. ಸ್ವತಃ ಪ್ರಧಾನಿ ನರಸಿಂಹ ರಾವ್‌ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂತು.
ಇದರ ಜತೆಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಭುಗಿಲೆದ್ದಿತು. ಕಾಂಗ್ರೆಸ್‌ ನ ತುಷ್ಟೀಕರಣ ರಾಜಕಾರಣದ ವಿರುದ್ಧ ಬಹುಸಂಖ್ಯಾತ ಹಿಂದೂಗಳು ದನಿ ಎತ್ತಲಾರಂಭಿಸಿದರು. ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷದೊಳಗೆ ಬಂಡಾಯ ತೀವ್ರವಾಯಿತು. ಎನ್‌.ಡಿ.ತಿವಾರಿ, ಅರ್ಜುನ್‌ ಸಿಂಗ್‌ರಂಥ ಹಿರಿಯ ನಾಯಕರು ಕಾಂಗ್ರೆಸ್‌ನಿಂದ ಸಿಡಿದು ಆಲ್‌ ಇಂಡಿಯಾ ಇಂದಿರಾ ಕಾಂಗ್ರೆಸ್‌(ತಿವಾರಿ ಬಣ) ಸ್ಥಾಪಿಸಿದರು. ತಮಿಳುನಾಡಿನ ಜಿ.ಕೆ.ಮೂಪನಾರ್‌ ತಮಿಳ್‌ ಮಾನಿಲ ಕಾಂಗ್ರೆಸ್‌ ಕಟ್ಟಿದರು.

ದೊಡ್ಡ ಪಕ್ಷವಾದ ಬಿಜೆಪಿ

1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 545ರಲ್ಲಿ 161 ಸ್ಥಾನ ಗೆದ್ದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 15 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್‌ ಕೇವಲ 140 ಸೀಟುಗಳಿಗೆ ಸೀಮಿತವಾಯಿತು. ಕಾಂಗ್ರೆಸ್‌ ಬಂಡಾಯ ಪಕ್ಷವಾದ ತಮಿಳ್‌ ಮಾನಿಲ ಕಾಂಗ್ರೆಸ್‌ 20 ಮತ್ತು ಎನ್‌ ಡಿ ತಿವಾರಿ ಬಣ 4 ಸೀಟುಗಳನ್ನು ಗೆದ್ದುಕೊಂಡಿತು. ಜನತಾ ದಳ 46 ಸ್ಥಾನಗಳಲ್ಲಿ ಜಯ ಗಳಿಸಿತು. ಸಿಪಿಎಂ 32 ಸ್ಥಾನಗಳಲ್ಲಿ ಗೆದ್ದಿತು.
ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರಿಂದ ರಾಷ್ಟ್ರಪತಿಯವರು ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರು. ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ- ಸುಷ್ಮಾ ಸ್ವರಾಜ್‌ ಮಧ್ಯೆ ಐತಿಹಾಸಿಕ ಕದನ!

1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ ನಡುವಿನ ಮುಖಾಮುಖಿ.

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ. ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು.

ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಇದನ್ನೂ ಓದಿ: Parliament Flashback: ಇಂದಿರಾ ಗಾಂಧಿಯ ತುರ್ತು ಪರಿಸ್ಥಿತಿಯ ಎಫೆಕ್ಟ್‌; 1977ರಲ್ಲಿ ಧೂಳಿಪಟವಾಗಿದ್ದ ಕಾಂಗ್ರೆಸ್‌!

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮಿ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

Continue Reading
Advertisement
Kaladarpana-Art Reflects
ಬೆಂಗಳೂರು4 hours ago

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Covishield Vaccine
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Narendra modi
ಪ್ರಮುಖ ಸುದ್ದಿ5 hours ago

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

DK Shivakumar
ಪ್ರಮುಖ ಸುದ್ದಿ5 hours ago

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

IPL 2024
Latest5 hours ago

IPL 2024 : ‘ಆಲ್​ರೌಂಡರ್​’ ಪಾಂಡ್ಯ ನೇತೃತ್ವದ ಮುಂಬೈ ತಂಡವನ್ನು ಸೋಲಿಸಿದ ರಾಹುಲ್ ನಾಯಕತ್ವದ ಲಕ್ನೊ

Union Minister Pralhad Joshi election campaign in Shiggavi
ಧಾರವಾಡ5 hours ago

Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Lok Sabha Election 2024 Bike rally for voting awareness in Hosapete
ವಿಜಯನಗರ5 hours ago

Lok Sabha Election 2024: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

BJP National President JP Nadda Election Campaign for Haveri Gadag Lok Sabha Constituency BJP Candidate Basavaraj Bommai
ಕರ್ನಾಟಕ5 hours ago

Lok Sabha Election 2024: ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ

2nd PUC Paper Leak
ಕರ್ನಾಟಕ6 hours ago

2nd PUC Paper Leak: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ವಜಾಗೊಂಡಿದ್ದ ಎಸ್‌ಡಿಎ ಮರು ನೇಮಕ!

Lok Sabha Election
Lok Sabha Election 20246 hours ago

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ24 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌