Lok Sabha Election 2024: ಏಪ್ರಿಲ್‌ 17ಕ್ಕೆ ರಾಯಚೂರಲ್ಲಿ ಪವನ್‌ ಕಲ್ಯಾಣ್‌ ರೋಡ್‌ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ - Vistara News

Lok Sabha Election 2024

Lok Sabha Election 2024: ಏಪ್ರಿಲ್‌ 17ಕ್ಕೆ ರಾಯಚೂರಲ್ಲಿ ಪವನ್‌ ಕಲ್ಯಾಣ್‌ ರೋಡ್‌ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ

Lok Sabha Election 2024: ಪವನ್‌ ಕಲ್ಯಾಣ್‌ ನಟ ಮಾತ್ರವಲ್ಲದೆ, ರಾಜಕಾರಣಿಯೂ ಹೌದು. ಅವರು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಪರ ಸಾಕಷ್ಟು ಒಲವು ಹೊಂದಿದ್ದಾರೆ. ಹೀಗಾಗಿ ಅವರು ಎನ್‌ಡಿಎ ಜತೆ ಕೈಜೋಡಿಸಿದ್ದಾರೆ. ಪವನ್‌ ಕಲ್ಯಾಣ್‌ ಅವರನ್ನು ರಾಯಚೂರು ಮಾತ್ರವಲ್ಲದೆ, ತೆಲುಗು ಪ್ರಾಬಲ್ಯ ಇರುವ ಬಳ್ಳಾರಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜತೆಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿಯೂ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

VISTARANEWS.COM


on

Lok Sabha Election 2024 Pawan Kalyan roadshow in Raichur on April 17
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ರಾಜ್ಯ ರಾಜಕೀಯದಲ್ಲಿ ಸ್ಟಾರ್‌ ಪ್ರಚಾರಕರ ಹವಾ ಜೋರಾಗಲಿದೆ. ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಸ್ಟಾರ್‌ ನಟರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ರಾಯಚೂರು ಲೋಕಸಭಾ ಕ್ಷೇತ್ರದ (Raichur Lok Sabha constituency) ಬಿಜೆಪಿ ಅಭ್ಯರ್ಥಿ ಪರ ತೆಲುಗು ನಟ ಪವನ್ ಕಲ್ಯಾಣ್ (Pawan Kalyan) ಪ್ರಚಾರ ಮಾಡಲಿದ್ದು, ರೋಡ್‌ ಶೋ ಮೂಲಕ ಅಬ್ಬರಿಸಲಿದ್ದಾರೆ. ಇದರ ಜತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿಯೂ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ‌ನಾಯಕ ಪರ ಸ್ಟಾರ್ ನಟ ಪವನ್‌ ಕಲ್ಯಾಣ್‌ ಪ್ರಚಾರ ಮಾಡಲಿದ್ದಾರೆ. ಪವನ್‌ ಕಲ್ಯಾಣ್‌ ಮಾಸ್‌ ಹೀರೋ ಆಗಿದ್ದು, ಸಹೋದರ ಚಿರಂಜೀವಿ ಅವರಂತೆ ಭಾರಿ ಜನಪ್ರಿಯತೆಯುಳ್ಳ ವ್ಯಕ್ತಿಯಾಗಿದ್ದಾರೆ. ಅವರ ನಟನೆಯ ಬಹುತೇಕ ಸಿನಿಮಾಗಳು ಕರ್ನಾಟಕದಲ್ಲಿಯೂ ಭರ್ಜರಿ ಪ್ರದರ್ಶನ ಕಾಣುತ್ತದೆ. ಅವರಿಗೆ ಕನ್ನಡಿಗ ಅಭಿಮಾನಿಗಳೂ ಇದ್ದಾರೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಕ್ಯಾಂಪೇನ್‌ ಮಾಡಲು ಅವರನ್ನು ಕರೆಸಿಕೊಳ್ಳಲಾಗುತ್ತಿದೆ.

Lok Sabha Election 2024 Pawan Kalyan roadshow in Raichur on April 17

ಏಪ್ರಿಲ್ 17ರಂದು ರಾಯಚೂರಿಗೆ ಭೇಟಿ ನೀಡಲಿರುವ ಪವನ್ ಕಲ್ಯಾಣ್, ಬೆಳಗ್ಗೆ 11ರಿಂದ 12 ಗಂಟೆವರೆಗೆ ಪ್ರಚಾರ ನಡೆಸಲಿದ್ದಾರೆ. ನಗರದ ಗಂಜ್ ವೃತ್ತದಿಂದ ಆರ್‌ಟಿಒ ಕಚೇರಿವರೆಗೆ ಪವನ್ ಕಲ್ಯಾಣ್ ರೋಡ್ ಶೋವನ್ನು ಹಮ್ಮಿಕೊಳ್ಳಲಾಗಿದೆ.

ಪವನ್‌ ಕಲ್ಯಾಣ್‌ ರೋಡ್‌ ಶೋ ರೂಟ್‌ಮ್ಯಾಪ್‌

ಈಗಾಗಲೇ ಪವನ್‌ ಕಲ್ಯಾಣ್‌ ರೋಡ್‌ ಶೋ ರೂಟ್‌ಮ್ಯಾಪ್‌ ಅನ್ನು ಸಹ ಬಿಜೆಪಿ ಸಿದ್ಧಪಡಿಸಿದೆ. ಗಂಜ್ ಸರ್ಕಲ್, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ರೈಲ್ವೆ ನಿಲ್ದಾಣ ಮಾರ್ಗವಾಗಿ ಆರ್‌ಟಿಒ ಸರ್ಕಲ್‌ವರೆಗೂ ನಟ ಪವನ್ ಕಲ್ಯಾಣ್ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ರಾಯಚೂರು ನಗರದಲ್ಲಿ ಒಟ್ಟು 5 ಕಿ.ಮೀ.ವರೆಗೆ ಪವನ್ ಕಲ್ಯಾಣ್ ರೋಡ್ ‌ಶೋ ನಡೆಸಲಿದ್ದಾರೆ. ಈ ಮೂಲಕ ಜನರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ

ಪವನ್‌ ಕಲ್ಯಾಣ್‌ ನಟ ಮಾತ್ರವಲ್ಲದೆ, ರಾಜಕಾರಣಿಯೂ ಹೌದು. ಅವರು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಪರ ಸಾಕಷ್ಟು ಒಲವು ಹೊಂದಿದ್ದಾರೆ. ಹೀಗಾಗಿ ಅವರು ಎನ್‌ಡಿಎ ಜತೆ ಕೈಜೋಡಿಸಿದ್ದಾರೆ. ಪವನ್‌ ಕಲ್ಯಾಣ್‌ ಅವರನ್ನು ರಾಯಚೂರು ಮಾತ್ರವಲ್ಲದೆ, ತೆಲುಗು ಪ್ರಾಬಲ್ಯ ಇರುವ ಬಳ್ಳಾರಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜತೆಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿಯೂ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Lok Sabha Election 2024 Pawan Kalyan roadshow in Raichur on April 17

ಏ. 14ರಂದು ಮೋದಿ ಬೆಂಗಳೂರು ಕಾರ್ಯಕ್ರಮ ರದ್ದು; ಮೈಸೂರಲ್ಲಿ ಸಮಾವೇಶ, ಮಂಗಳೂರಲ್ಲಿ ರೋಡ್‌ ಶೋ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಏಪ್ರಿಲ್ 14ರಂದು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಮೊದಲು ಅವರು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ರೋಡ್ ಶೋ (Modi Road Show) ನಡೆಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಬೆಂಗಳೂರಿನ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಲಾಗಿದ್ದು, ಅಂದು ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಪ್ಲ್ಯಾನ್‌ ಮಾಡಲಾಗಿದೆ. ಜತೆಗೆ ಮಂಗಳೂರಿನಲ್ಲಿ ರೋಡ್‌ ಶೋ ನಡೆಸಲು ಪ್ರಧಾನಿ ಕಾರ್ಯಾಲಯದಿಂದ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಚುನಾವಣೆ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಅಂದರೆ ಏ. 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಮೈಸೂರು ಮಹಾರಾಜ ಮೈದಾನದಲ್ಲಿ ಬೃಹತ್‌ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಕೊಡಗು – ಮೈಸೂರು, ಚಾಮರಾಜನಗರ, ಮಂಡ್ಯ ಲೋಕಸಭಾ ಕ್ಷೇತ್ರಗಳ ಜನರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇದೆ.

ಮಂಗಳೂರು ರೋಡ್‌ ಶೋಗೆ ರೂಟ್‌ ಮ್ಯಾಪ್‌ ಸಿದ್ಧ

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ರೂಟ್ ಮ್ಯಾಪ್ ಸಿದ್ಧಪಡಿಸಲಾಗಿದೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆವರೆಗೆ ಮೆಗಾ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ಅಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭವಾಗಲಿದೆ. ನಾರಾಯಣ ಗುರು ಸರ್ಕಲ್ ಬಳಿ ಮೋದಿ ಆಗಮಿಸಿ, ಅಲ್ಲಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ರೋಡ್ ಶೋವನ್ನು ಆರಂಭಿಸಲಿದ್ದಾರೆ.

ಲೇಡಿಹಿಲ್ ನಾರಾಯಣ ಗುರು ಸರ್ಕಲ್‌ನಿಂದ ಲಾಲ್‌ಬಾಗ್‌ನ ಮಂಗಳೂರು ಪಾಲಿಕೆ ಕಚೇರಿ ಎದುರು ತಲುಪಲಿರುವ ರೋಡ್ ಶೋ, ಅಲ್ಲಿಂದ ಬಳ್ಳಾಲ್‌ಬಾಗ್ ದಾಟಿ ಎಂ.ಜಿ. ರಸ್ತೆ ಮೂಲಕ ಸಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ನವಭಾರತ್ ಸರ್ಕಲ್ ತಲುಪಲಿದೆ. ಬಳಿಕ ಕೆ.ಎಸ್. ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯವಾಗಲಿದೆ. ಸುಮಾರು 2.5 ಕಿ.ಮೀ. ರೋಡ್‌ ಶೋ ಸಾಗಲಿದೆ.

ಈ ಮೊದಲು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಸಮಾವೇಶ ರದ್ದುಪಡಿಸಿ ರೋಡ್ ಶೋ ನಡೆಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಮೈಸೂರಲ್ಲಿ ಸಮಾವೇಶ

ಹಳೇ ಮೈಸೂರು, ಕರಾವಳಿ ಮೇಲೆ ಬಿಜೆಪಿ ಕಣ್ಣಿಟ್ಟಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೋಡಿ ಮಾಡಿಸಲು ಮುಂದಾಗಿದೆ. ಹೀಗಾಗಿ ಮೈಸೂರಿ‌ನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು- ಕೊಡಗು ಸೇರಿದಂತೆ ಕ್ಲಸ್ಟರ್ ಹಂತದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಮೈಸೂರಲ್ಲಿ ಶಕ್ತಿ ಪ್ರದರ್ಶನಕ್ಕೆ ತಯಾರಿ ನಡೆಸಲಾಗಿದೆ.

ಏಪ್ರಿಲ್ 19ರಂದು ಬೆಂಗಳೂರಿಗೆ ಮೋದಿ?

ಇನ್ನು ಏಪ್ರಿಲ್‌ 14ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಬೆಂಗಳೂರು ಕಾರ್ಯಕ್ರಮವನ್ನು ಪ್ರಧಾನಿ ಕಾರ್ಯಾಲಯದಿಂದ ರದ್ದು ಮಾಡಲಾಗಿದೆ. ಆದರೆ, ಇದೇ ಏಪ್ರಿಲ್‌ 19ರಂದು ಬೆಂಗಳೂರಿಗೆ ಮೋದಿ ಆಗಮಿಸಲಿದ್ದಾರೆ ಎನ್ನಲಾಗಿದೆ. ಅಂದು ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Lok Sabha Election 2024: ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಎಡಿಆರ್‌ ವರದಿ ತಿಳಿಸಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶಾದ್ಯಂತ ಬೇಸಿಗೆಯ ಬಿಸಿಲಿನಷ್ಟೇ ಲೋಕಸಭೆ ಚುನಾವಣೆ (Lok Sabha Election 2024) ಕಾವು ಕೂಡ ಜೋರಾಗಿದೆ. ರಾಜಕೀಯ ನಾಯಕರ ಅಬ್ಬರದ ಸಮಾವೇಶಗಳು, ಪ್ರಚಾರದ ಭರಾಟೆ, ತೀಕ್ಷ್ಣ ಹೇಳಿಕೆಗಳು, ಪ್ರತಿಸ್ಪರ್ಧಿಗಳ ವಿರುದ್ಧ ಮಾಡುವ ಆರೋಪಗಳು ಸುದ್ದಿಯಾಗುತ್ತಿವೆ. ಇನ್ನು ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ಅಭ್ಯರ್ಥಿಗಳು, ನಾಯಕರು ಇನ್ನಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ (Criminal Case) ದಾಖಲಾಗಿವೆ ಎಂದು ತಿಳಿದುಬಂದಿದೆ.

ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Lok Sabha Election-2024

ಬಿಜೆಪಿಯಿಂದ ಸ್ಪರ್ಧಿಸಿದ 82 ಅಭ್ಯರ್ಥಿಗಳಲ್ಲಿ 22 ಮಂದಿ ವಿರುದ್ಧ ಕ್ರಿಮಿನಲ್‌ ಕೇಸ್‌ ಇವೆ. ಇನ್ನು ಕಾಂಗ್ರೆಸ್‌ನ 68 ಅಭ್ಯರ್ಥಿಗಳ ಪೈಕಿ 26, ಆರ್‌ಜೆಡಿಯ ಮೂರಕ್ಕೆ ಮೂವರ ವಿರುದ್ಧವೂ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಶಿವಸೇನೆ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ) ಶೇ.80, ಎನ್‌ಸಿಪಿ (ಶರದ್‌ ಪವಾರ್)‌ ಶೇ.67, ಸಮಾಜವಾದಿ ಪಾರ್ಟಿ ಶೇ.50, ಜೆಡಿಯು ಶೇ.33 ಹಾಗೂ ತೃಣಮೂಲ ಕಾಂಗ್ರೆಸ್‌ನ ಶೇ.17ರಷ್ಟು ಅಭ್ಯರ್ಥಿಗಳು ಕ್ರಿಮಿನಲ್‌ ಕೇಸ್‌ ಹೊಂದಿದ್ದಾರೆ ಎಂಬುದು ವರದಿ ಮೂಲಕ ಬಹಿರಂಗವಾಗಿದೆ.

ಇವರ ಆಸ್ತಿ-ಪಾಸ್ತಿ ಎಷ್ಟು?

ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಇವರಲ್ಲಿ 292 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಇವರಲ್ಲಿ ಬಿಜೆಪಿಯ 77, ಕಾಂಗ್ರೆಸ್‌ನ 60 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಗೋವಾದ ಪಲ್ಲವಿ ಶ್ರೀನಿವಾಸ್‌ ಡೆಂಪೊ ಅವರ ಆಸ್ತಿಯ ಮೌಲ್ಯವು 1,361 ಕೋಟಿ ರೂ. ಆಗಿದ್ದು, ಇವರೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಇನ್ನು ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಸ್ತಿಯ ಮೌಲ್ಯವು 424 ಕೋಟಿ ರೂ. ಆಗಿದ್ದು, ಎರಡನೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಶಾಹು ಶಹಾಜಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದು, ಇವರ ಆಸ್ತಿ ಮೌಲ್ಯ 342 ಕೋಟಿ ರೂ. ಆಗಿದೆ. ಇವರು ಮೂರನೇ ಶ್ರೀಮಂತ ಅಭ್ಯರ್ಥಿ ಆಗಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Continue Reading

ದೇಶ

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Narendra Modi: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳ ಪಟ್ಟಿಯಲ್ಲಿ ಬರುವುದಿಲ್ಲ. ಇದು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ಹಾಗಾಗಿ, ಯಾವುದೇ ರಾಜ್ಯ ಸರ್ಕಾರಗಳು ಸಿಎಎ ಜಾರಿಯನ್ನು ತಡೆಯುವ ಹಾಗೂ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗುತ್ತಿದೆ. ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಇನ್ನಷ್ಟು ಕಾವು ಪಡೆದುಕೊಳ್ಳುತ್ತಿವೆ. “ನಾವು ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯನ್ನು ತಡೆಯುತ್ತೇವೆ” ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಇದರ ಬೆನ್ನಲ್ಲೇ, ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸವಾಲು ಹಾಕಿದ್ದಾರೆ. “ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ. ತಾಕತ್ತಿದ್ದವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯಲಿ” ಎಂದು ನ್ಯೂಸ್‌ 18ಗೆ ನೀಡಿದ ಸಂದರ್ಶನದ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರಲಾಗುವುದು” ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿರುವ ಕುರಿತು ಸಂದರ್ಶನದ ವೇಳೆ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ನಾನು ಕಾಂಗ್ರೆಸ್‌ ಸೇರಿ ಯಾವುದೇ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತೇನೆ. ತಾಕತ್ತಿದ್ದವರು 370ನೇ ವಿಧಿಯನ್ನು ಜಾರಿಗೆ ತರಲಿ. ಹಾಗೆಯೇ, ಸಿಎಎ ಜಾರಿಯನ್ನು ಯಾರಿಗೂ ತಡೆಯಲು ಆಗುವುದಿಲ್ಲ” ಎಂದು ಹೇಳಿದರು.

“ಯಾರು ಸಂವಿಧಾನವನ್ನು ಸರಿಯಾಗಿ ಓದಿರುತ್ತಾರೋ, ಯಾರು ಒಕ್ಕೂಟ ವ್ಯವಸ್ಥೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುತ್ತಾರೋ, ಅವರು ಇಂತಹ ಹೇಳಿಕೆ ನೀಡುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ರಾಜ್ಯಗಳ ಪಟ್ಟಿಯಲ್ಲಿ ಇವು ಬರುವುದಿಲ್ಲ. ನರೇಂದ್ರ ಮೋದಿ ಕೂಡ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಇಂತಹ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ” ಎಂದು ತಿಳಿಸಿದರು.

“ಯಾವುದೇ ರಾಜ್ಯಗಳಿಗೆ 370ನೇ ವಿಧಿ ಮರು ಜಾರಿಗೊಳಿಸಲು ಆಗುವುದಿಲ್ಲ. ಕಾಂಗ್ರೆಸ್‌ ಸೇರಿ, ಯಾವುದೇ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ತಾಕತ್ತಿದ್ದರೆ, 370ನೇ ವಿಧಿಯನ್ನು ಮತ್ತೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಲಿ ನೋಡೋಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೆಸರು ಹೇಳಿಕೊಂಡು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ, ಸ್ವಾತಂತ್ರ್ಯದ ಬಳಿಕ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವು ಜಮ್ಮು-ಕಾಶ್ಮೀರದಲ್ಲಿ ಅನ್ವಯವಾಗಿರಲಿಲ್ಲ. 370ನೇ ವಿಧಿ ರದ್ದುಗೊಳಿಸಿ, ನಾವು ಅಂಬೇಡ್ಕರ್‌ ಸಂವಿಧಾನವು ಜಮ್ಮು-ಕಾಶ್ಮೀರದಲ್ಲೂ ಜಾರಿಯಾಗುವಂತೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Continue Reading

Lok Sabha Election 2024

Lok Sabha Election: ಒಂದೇ ಒಂದು ಕುಟುಂಬಕ್ಕಾಗಿ ಪ್ರತ್ಯೇಕ ಮತಗಟ್ಟೆ! ಹೀಗೂ ಉಂಟು!

Lok Sabha Election 2024: ಒಂದೇ ಕುಟುಂಬದ ಐದು ಮಂದಿಗಾಗಿ ಲೇಹ್ ಜಿಲ್ಲೆಯ ವಾಶಿ ಎಂಬ ಹಳ್ಳಿಯಲ್ಲಿಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ.

VISTARANEWS.COM


on

By

Lok Sabha Election-2024
Koo

ಶ್ರೀನಗರ: ಲೋಕಸಭಾ ಚುನಾವಣೆ 2024 (Lok Sabha Election-2024) ಹಲವು ವಿಶೇಷಗಳಿಗೆ ಸಾಕ್ಷಿಯಾಗಿದೆ. ಇದರಲ್ಲಿ ಕೇವಲ ಐದು ಮಂದಿ ಮತದಾರರಿಗಾಗಿ (voters) ಮತದಾನ ಕೇಂದ್ರವನ್ನು (voting booth) ತೆರೆದಿರುವುದು ಕೂಡ ಒಂದು. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ನ (Ladakh) ಲೇಹ್ (Leh) ಜಿಲ್ಲೆಯ ವಾಶಿ (Washi ) ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗೆ ಚುನಾವಣಾ ಅಧಿಕಾರಿಗಳು ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಲಡಾಖ್ ನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಯತೀಂದ್ರ ಎಂ. ಮರಾಲ್ಕರ್, ಲೇಹ್‌ನಿಂದ ಸುಮಾರು 170 ಕಿ.ಮೀ. ದೂರದಲ್ಲಿರುವ ನುಬ್ರಾದ ವಾಶಿ ಎಂಬ ದೂರದ ಹಳ್ಳಿಯಲ್ಲಿ ಟೆಂಟ್ ಅಡಿಯಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಪ್ರಯತ್ನಗಳ ಭಾಗವಾಗಿ ಶೇ. 100ರಷ್ಟು ಮತದಾನವಾಗಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನೂ ಪಾಲ್ಗೊಳ್ಳಬೇಕು. ಇದಕ್ಕಾಗಿ ದೂರದೂರದ ಸ್ಥಳಗಳಲ್ಲೂ, ಅತ್ಯಲ್ಪ ಮತದಾರರು ಇರುವಲ್ಲೂ ಎಲ್ಲರಿಗೂ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಎಲೆಕ್ಷನ್‌ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್‌ ಶಾಕ್! ಕನ್ಹಯ್ಯ ಕುಮಾರ್‌ಗೆ ಸ್ವಪಕ್ಷದಲ್ಲೇ ವಿರೋಧ

ಮೇ 20ರಂದು ಮತದಾನ

ಲಡಾಖ್ ಲೋಕಸಭಾ ಸ್ಥಾನಕ್ಕೆ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ. ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ಅನಂತರ ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯವನ್ನು ಎರಡು ಯುಟಿಗಳಾಗಿ ವಿಭಜಿಸಿದಬಳಿಕ ಶೀತ ಮರುಭೂಮಿ ಪ್ರದೇಶದಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


ಐವರು ಮತದಾರರು

ಒಂದೇ ಕುಟುಂಬದ ಐವರು ಗ್ರಾಮದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದು, ಟೆಂಟ್‌ ಹಾಕಿದ ಮತಗಟ್ಟೆ ಅವರ ಮನೆ ಬಾಗಿಲಿಗೆ ಬಂದಿದೆ ಎಂದು ಮಾರಲ್ಕರ್ ಹೇಳಿದರು.

ಕುಟುಂಬವು ಆರು ಸದಸ್ಯರನ್ನು ಒಳಗೊಂಡಿದೆ ಮತ್ತು ಅವರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಕುಟುಂಬದ ಮುಖ್ಯಸ್ಥ ರೈತನಾಗಿದ್ದಾನೆ.

ಲಡಾಖ್ ನಲ್ಲಿ 1,82,571 ಮತದಾರರು

ಲಡಾಖ್ ಯುಟಿಯು ಎರಡು ಜಿಲ್ಲೆಗಳನ್ನು ಒಳಗೊಂಡಿದೆ. ಮುಸ್ಲಿಂ ಪ್ರಾಬಲ್ಯದ ಕಾರ್ಗಿಲ್ ಮತ್ತು ಬೌದ್ಧ ಪ್ರಾಬಲ್ಯದ ಲೇಹ್. 91,703 ಪುರುಷರು ಮತ್ತು 90868 ಮಹಿಳೆಯರು ಸೇರಿದಂತೆ ಒಟ್ಟು 1,82,571 ಮತದಾರರು ಇಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

577 ಮತಗಟ್ಟೆಗಳು

ಚುನಾವಣಾ ಆಯೋಗವು ಯುಟಿಯಾದ್ಯಂತ 577 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇದರಲ್ಲಿ 33 ನಗರ ಮತ್ತು 544 ಗ್ರಾಮೀಣ ಪ್ರದೇಶಗಳಲ್ಲಿ ಸೇರಿವೆ. ಲಡಾಖ್‌ನಲ್ಲಿ ಕೆಲವು ಮತಗಟ್ಟೆಗಳ ದುರ್ಗಮತೆಯನ್ನು ಗಮನದಲ್ಲಿಟ್ಟುಕೊಂಡು ದೂರದ ಹಳ್ಳಿಗಳಿಗೆ ಚುನಾವಣಾ ಸಾಮಗ್ರಿಗಳು ಮತ್ತು ಸಿಬ್ಬಂದಿಯನ್ನು ವಿಮಾನದಲ್ಲಿ ರವಾನಿಸಲಾಗುತ್ತದೆ.

Continue Reading

Lok Sabha Election 2024

PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

VISTARANEWS.COM


on

PM Narendra Modi met four special people in Sirsi visit
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕವು 2ನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೂ ಬಂದಿದ್ದಾರೆ. ಮೋದಿ ಶಿರಸಿಗೆ ಬಂದು ಪ್ರಚಾರ ಮಾಡಿ ಹೋದರು ಎಂಬುದಷ್ಟೇ ಹೊರ ಪ್ರಪಂಚಕ್ಕೆ ಗೊತ್ತು. ಆದರೆ, ಅವರು ಇದೇ ವೇಳೆ ನಾಲ್ವರು ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ತಿಳಿದು ಹೆಮ್ಮೆ ಪಟ್ಟಿದ್ದಾರೆ.

ಇವರಲ್ಲಿ ಒಬ್ಬರು ವೃತ್ತಿಯಲ್ಲಿ ಮರ ಕಡಿಯುವವರಾದರೂ ಅಯೋಧ್ಯೆಯ ಕರಸೇವಕರಾಗಿದ್ದಾರೆ. ಇನ್ನೊಬ್ಬರು ನಿವೃತ್ತ ಪೌರ ಕಾರ್ಮಿಕ ಮಹಿಳೆಯಾಗಿದ್ದಾರೆ. ಮತ್ತೊಬ್ಬರು ಕಾಡು ಹಣ್ಣುಗಳನ್ನು ಮಾರಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮಗದೊಬ್ಬರು ಕ್ಷೌರಿಕರಾಗಿದ್ದು, ಬಿಜೆಪಿಯ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಪಕ್ಕಾ ಅಭಿಮಾನಿಯಾಗಿದ್ದಾರೆ.

PM Narendra Modi met four special people in Sirsi visit

ಹಾಗಾದರೆ ಯಾರಿವರು?

ಲಕ್ಷ್ಮಣ್ ನಾಯ್ಕ ದೊಂಬೆ, ಸಿದ್ದಾಪುರ: ಲಕ್ಷ್ಮಣ್‌ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರಾಗಿದ್ದಾರೆ. ಇವರು ಅಯೋಧ್ಯೆಯ ಕರಸೇವಕರೂ ಆಗಿದ್ದವರು. ಲಕ್ಷ್ಮಣ ಅವರು ಅಯೋಧ್ಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅಲ್ಲದೆ, ಬ್ರಹ್ಮಚಾರಿಯಾಗಿಯೇ ಉಳಿದಿದ್ದಾರೆ. ಲಕ್ಷ್ಮಣ ಅವರು ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಂದಿರವನ್ನು ನಿರ್ಮಿಸುವವರೆಗೂ ಕ್ಷೌರ ಮಾಡಿಸುವುದಿಲ್ಲ ಎನ್ನುವ ವ್ರತವನ್ನು ಕೈಗೊಂಡಿದ್ದರು.

PM Narendra Modi met four special people in Sirsi visit

ರಾಧಾ ಹರಿಜನ: ಇವರು ಶಿರಸಿಯ ನಿವೃತ್ತ ಪೌರ ಕಾರ್ಮಿಕರಾಗಿದ್ದಾರೆ. ಸ್ವಚ್ಛತಾ ಕಾರ್ಯಕರ್ತೆಯಾಗಿ ದಣಿವರಿಯದೆ ಕೆಲಸ ಮಾಡಿದವರು ಇವರಾಗಿದ್ದಾರೆ. ತನ್ನ ಪ್ರಾಮಾಣಿಕ ಕೆಲಸಕ್ಕೆ ಹೆಸರುವಾಸಿಯಾಗಿರುವ ಇವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

PM Narendra Modi met four special people in Sirsi visit

ಮೋಹಿನಿ ಗೌಡ: ಇವರು ಹಾಲಕ್ಕಿ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರು ಜೀವನಕ್ಕಾಗಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಕಾಡು ಹಣ್ಣುಗಳನ್ನು ಮಾರಾಟ ಮಾಡುತ್ತಾರೆ. ಸ್ವಚ್ಛ ಭಾರತ್ ಸ್ವಯಂಸೇವಕಿಯಾಗಿ ತೊಡಗಿಸಿಕೊಂಡಿದ್ದಾರೆ. ಅವರು ಬಿಡುವಿದ್ದಾಗಲೆಲ್ಲಾ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸುತ್ತಾರೆ.

PM Narendra Modi met four special people in Sirsi visit

ನಾಗೇಶ್‌ ಮಹಾಲೆ: ಇವರು ಒಬ್ಬ ಕ್ಷೌರಿಕರಾಗಿದ್ದಾರೆ. ನಾಗೇಶ್‌ ಅಂಕೋಲಾದಲ್ಲಿ 4 ಆಸನ ಸಾಮರ್ಥ್ಯವುಳ್ಳ ಸಲೂನ್‌ವೊಂದನ್ನು ಹೊಂದಿದ್ದಾರೆ. ಇವರು ಬಿಜೆಪಿಯ ಕಟ್ಟಾ ಬೆಂಬಲಿಗ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ಅಭಿಮಾನಿ. ಅವರ ಕೈಯಲ್ಲಿ ಮೋದಿ ಜಿ ಟ್ಯಾಟೂ ಇದೆ. ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ಅವರು ಇಡೀ ದಿನ ಉಚಿತವಾಗಿ ಕ್ಷೌರ ಮಾಡುತ್ತಾರೆ.

ಇದನ್ನೂ ಓದಿ: PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಮೋದಿ ಭೇಟಿಯಾಗಿದ್ದು ಎಲ್ಲಿ?

ವಿಶೇಷ ವಿಮಾನದ ಮೂಲಕ ಶಿರಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಈ ನಾಲ್ವರು ವಿಶೇಷ ಸಾಧಕರನ್ನು ಪ್ರಧಾನಿ ನರೇಂದ್ರ ಅವರಿಗೆ ಪರಿಚಯ ಮಾಡಿಕೊಡಲಾಯಿತು. ಇದೇ ವೇಳೆ ಮೋದಿ ಸಹ ಅವರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Continue Reading
Advertisement
IPL 2024 Points Table
ಕ್ರೀಡೆ31 seconds ago

IPL 2024 Points Table: ಡೆಲ್ಲಿ ಕ್ಯಾಪಿಟಲ್ಸ್​ ಸೋಲಿನ ಬಳಿಕ ಹೀಗಿದೆ ಅಂಕಪಟ್ಟಿ

Rohit Sharma Birthday
ಕ್ರೀಡೆ25 mins ago

Rohit Sharma Birthday: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ಗೆ 37ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

road accident anekal
ಬೆಂಗಳೂರು ಗ್ರಾಮಾಂತರ31 mins ago

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Baba Ramdev
ದೇಶ37 mins ago

Patanjali Case: ಪತಂಜಲಿಗೆ ಮತ್ತೆ ಸಂಕಷ್ಟ; ಬ್ಯಾನ್‌ ಆಗುತ್ತಾ ಈ ಉತ್ಪನ್ನಗಳು?

CET exam 2024
ಪ್ರಮುಖ ಸುದ್ದಿ56 mins ago

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

Covishield Vaccine
ಪ್ರಮುಖ ಸುದ್ದಿ1 hour ago

Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ದೇಶ1 hour ago

Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

Ayushman Bharat Diwas
ಆರೋಗ್ಯ2 hours ago

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Onion Benefits
ಆರೋಗ್ಯ2 hours ago

Onion Benefits: ಬೇಸಿಗೆಯಲ್ಲಿ ಆಗಾಗ ಹಸಿ ಈರುಳ್ಳಿ ತಿನ್ನಲೇಬೇಕು ಯಾಕೆ ಗೊತ್ತೆ?

rajamarga column srikant bolla
ಅಂಕಣ2 hours ago

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ4 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202420 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202421 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌