Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ - Vistara News

Lok Sabha Election 2024

Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

Lok Sabha Election 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಎಲ್ಲ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದು, ಕಾಂಗ್ರೆಸ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿ ಒಕ್ಕೂಟದ ತುಷ್ಟೀಕರಣ ನೀತಿ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರೆ ನೀಡಿದ್ದಾರೆ. “ಈ ಚುನಾವಣೆ ನಮ್ಮ ವರ್ತಮಾನ ಮತ್ತು ಉಜ್ವಲ ಭವಿಷ್ಯವನ್ನು ನಿರ್ಮಿಸಲು ಎದುರಾಗಿರುವ ಸುವರ್ಣಾವಕಾಶ. ಐದಾರು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕುಟುಂಬ ಮತ್ತು ಕುಟುಂಬದ ಹಿರಿಯರು ಅನುಭವಿಸಿದ ಕಷ್ಟಗಳಿಂದ ಪರಿಹಾರ ಪಡೆಯಲು ಈ ಚುನಾವಣೆ ಒಂದು ಪ್ರಮುಖ ಅಸ್ತ್ರ ಎನಿಸಿಕೊಂಡಿದೆʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

VISTARANEWS.COM


on

Fact check
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಬಿಜೆಪಿಯ ಎಲ್ಲ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದು, ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಯಿಂದ ಮುಸ್ಲಿಮರಿಗೆ ಮೀಸಲಾತಿ ನೀಡುವ ಕಾರ್ಯಸೂಚಿ, ಪಿತ್ರಾರ್ಜಿತ ಆಸ್ತಿ ತೆರಿಗೆಯ ಪ್ರಸ್ತಾವ ಸೇರಿದಂತೆ ಕಾಂಗ್ರೆಸ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಒಕ್ಕೂಟಗಳ ಹಿಂಜರಿತ ರಾಜಕೀಯ ನೀತಿಯ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮತ್ತು ಗುಜರಾತ್‌ನ ಪೋರ್‌ ಬಂದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನ್ಸುಖ್ ಮಾಂಡವಿಯಾ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ಬರೆದಿರುವ ಪತ್ರವನ್ನು ಹಂಚಿಕೊಂಡು ಪ್ರಧಾನಿ ಅವರ ಪ್ರೇರಕ ಮಾತುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಈ ಸ್ಫೂರ್ತಿದಾಯಕ ಮಾತುಗಳಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. 10 ವರ್ಷಗಳಲ್ಲಿ ನೀವು ಮಾಡಿದ ಕೆಲಸಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದಿವೆ. ನಾವೆಲ್ಲರೂ ನಿಮ್ಮ ಸಲಹೆಯಂತೆ ಕಾರ್ಯ ನಿರ್ವಹಿಸುತ್ತೇವೆʼʼ ಎಂದು ಬರೆದುಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?

ʼʼಇದು ಸಾಮಾನ್ಯ ಚುನಾವಣೆಯಲ್ಲ ಮತ್ತು ಬಿಜೆಪಿಗೆ ನೀಡುವ ಪ್ರತಿಯೊಂದು ಮತವು ಬಲವಾದ ಸರ್ಕಾರವನ್ನು ರಚಿಸುವ ಮತ್ತು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳನ್ನು ವೇಗಗೊಳಿಸುತ್ತದೆʼʼ ಎಂದು ಪತ್ರದಲ್ಲಿ ಮೋದಿ ಹೇಳಿದ್ದಾರೆ. “ಈ ಚುನಾವಣೆ ನಮ್ಮ ವರ್ತಮಾನ ಮತ್ತು ಉಜ್ವಲ ಭವಿಷ್ಯವನ್ನು ನಿರ್ಮಿಸಲು ಎದುರಾಗಿರುವ ಸುವರ್ಣಾವಕಾಶ. ಐದಾರು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕುಟುಂಬ ಮತ್ತು ಕುಟುಂಬದ ಹಿರಿಯರು ಅನುಭವಿಸಿದ ಕಷ್ಟಗಳಿಂದ ಪರಿಹಾರ ಪಡೆಯಲು ಈ ಚುನಾವಣೆ ಒಂದು ಪ್ರಮುಖ ಅಸ್ತ್ರ ಎನಿಸಿಕೊಂಡಿದೆ. ಕಳೆದ ದಶಕದಲ್ಲಿ ಸಮಾಜದ ಪ್ರತಿಯೊಂದು ವರ್ಗದವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಮೂಲಕ ದೇಶವಾಸಿಗಳ ಅನೇಕ ತೊಂದರೆಗಳನ್ನು ತೊಡೆದುಹಾಕಲಾಗಿದೆʼʼ ಎಂದು ಬರೆದಿದ್ದಾರೆ.

“ಇದಲ್ಲದೆ ಕಾಂಗ್ರೆಸ್ ಮತ್ತು ಅದರ ʼಇಂಡಿಯಾʼ ಮೈತ್ರಿಕೂಟದ ವಿಭಜಕ ಮತ್ತು ತಾರತಮ್ಯದ ಉದ್ದೇಶಗಳ ವಿರುದ್ಧ ಮತದಾರರಿಗೆ ಮಾಹಿತಿ ನೀಡುವಂತೆ ನಾನು ಕೇಳಿಕೊಳ್ಳುತ್ತೇನೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಾಂವಿಧಾನಿಕವಾಗಿದ್ದರೂ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ಮೂಲಕ ʼಇಂಡಿಯಾʼ ಒಕ್ಕೂಟ ತಮ್ಮ ಮತ ಬ್ಯಾಂಕ್‌ ಆದ ಮುಸ್ಲಿಮರಿಗೆ ಮೀಸಲಾತಿ ನೀಡಲು ಮುಂದಾಗಿದೆ. ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಸಿದುಕೊಂಡು ಇವರಿಗೆ ನೀಡಲು ಮುಂದಾಗಿದೆ. ಜತೆಗೆ ಕಾಂಗ್ರೆಸ್‌ ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಪ್ರಸ್ತಾವಿಸಿದೆ. ಇದನ್ನು ತಡೆಯಲು ದೇಶವು ಒಂದಾಗಬೇಕಾಗಿದೆʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪತ್ರವು ಆರೋಗ್ಯ ಸಲಹೆಯನ್ನೂ ಒಳಗೊಂಡಿದೆ. ʼʼಬೇಸಿಗೆಯ ಶಾಖವು ಎಲ್ಲರಿಗೂ ಸಮಸ್ಯೆಗಳನ್ನು ತಂದೊಡ್ಡಿದೆ. ಆದ್ದರಿಂದ ಮತದಾರರು ಬೆಳಗ್ಗೆಯೇ ಮತಗಟ್ಟೆಗೆ ತೆರಳಿ ಬಿಸಿಲಿನ ತಾಪ ಆರಂಭವಾಗುವ ಮುನ್ನ ಮತ ಚಲಾಯಿಸಬೇಕುʼʼ ಎಂದು ಮೋದಿ ಸಲಹೆ ನೀಡಿದ್ದಾರೆ. ಎಲ್ಲ ಪತ್ರಗಳು ವೈಯಕ್ತಿಕ ಉಲ್ಲೇಖವನ್ನೂ ಹೊಂದಿರುವುದು ವಿಶೇಷ. ಉದಾಹರಣೆಗೆ, ಮಾಂಡವಿಯಾ ಅವರನ್ನು ಉದ್ದೇಶಿಸಿ “ಸಣ್ಣ ಉದ್ಯಮಿಗಳಿಗಾಗಿ ಪಿಎಂ ಭಾರತೀಯ ಜನೌಷಧಿ ಕೇಂದ್ರವನ್ನು (PMBJAK) ಸ್ಥಾಪಿಸಲು ಮತ್ತು ಮೇಲ್ದರ್ಜೆಗೇರಿಸಲು ನೀವು ಮಾಡಿದ ಕೆಲಸ ಗಮನಾರ್ಹʼʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಅತ್ಯಂತ ಚಿಕ್ಕ ವಯಸ್ಸಿನಲ್ಲಿ, ನೀವು ಭಾರತೀಯ ಜನತಾ ಯುವ ಮೋರ್ಚಾದ ನಾಯಕರಾದಿರಿ ಮತ್ತು ವಿವಿಧ ಸ್ಥಾನಗಳಲ್ಲಿ ಸಂಘಟನೆಗಾಗಿ ಕೆಲಸ ಮಾಡಿದ್ದೀರಿ. ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದ ನೀವು ನಿಮ್ಮ ಮತದಾರರೊಂದಿಗೆ ಸಂಪರ್ಕ ಹೊಂದಿದ್ದೀರಿ. ನೀವು ಕೆಲವು ವರ್ಷಗಳ ಹಿಂದೆ ನಿಮ್ಮ ಡಾಕ್ಟರೇಟ್ ಪೂರ್ಣಗೊಳಿಸಿದ್ದೀರಿ, ಇದು ಅನೇಕ ಜನರಿಗೆ ಸ್ಫೂರ್ತಿಯ ಮೂಲವಾಗಿದೆ” ಎಂದು ಪತ್ರದಲ್ಲಿ ಕೇಂದ್ರ ಸಚಿವರನ್ನು ಶ್ಲಾಘಿಸಲಾಗಿದೆ.

ಇದನ್ನೂ ಓದಿ: PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Jayant Sinha:ಈ ಬಾರಿ ಜಯಂತ್‌ ಸಿನ್ಹಾ ಬದಲಿಗೆ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಅಭ್ಯರ್ಥಿಯ ಘೋಷಣೆಯಾದ ಬಳಿಕ ಜಯಂತ್ ಸಿನ್ಹಾ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇದಕ್ಕೂ ಮುನ್ನ ಮಾರ್ಚ್ ನಲ್ಲಿ ಟ್ವೀಟ್ ಮಾಡಿದ್ದ ಜಯಂತ್ ಸಿನ್ಹಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ಇರುವ ಇಂಗಿತ ವ್ಯಕ್ತಪಡಿಸಿದ್ದರು.

VISTARANEWS.COM


on

Jayant Sinha
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯಲ್ಲಿ ಈ ಬಾರಿ ಟಿಕೆಟ್‌ ಸಿಗದೇ ಬೇಸರಗೊಂಡು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಕೇಂದ್ರ ಸಚಿವ, ಸಂಸದ ಜಯಂತ್ ಸಿನ್ಹಾ(Jayant Sinha)ಗೆ ಬಿಜೆಪಿ ಶೋಕಾಸ್‌ ನೊಟೀಸ್(Show cause Notice) ಜಾರಿ ಮಾಡಿದೆ. ಜಯಂತ್‌ ಸಿನ್ಹಾ ನಿನ್ನೆ ನಡೆದಿದ್ದ 5 ನೇ ಹಂತದ ಚುನಾವಣೆ(Fifth phase Election) ವೇಳೆ ಜಯಂತ್ ಸಿನ್ಹಾ ಮತದಾನ ಮಾಡಿರಲಿಲ್ಲ. ಅದೂ ಅಲ್ಲದೇ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲೂ ಭಾಗಿಯಾಗಿರಲಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಪಕ್ಷದ ವರಿಷ್ಠರು ಕಾರಣ ವಿವರಿಸುವಂತೆ ಒತ್ತಾಯಿಸಿ ನೊಟೀಸ್ ಜಾರಿಗೊಳಿಸಿದೆ.

ಜಾರ್ಖಂಡ್ ನ ಹಜಾರಿಬಾಗ್ ಕ್ಷೇತ್ರದಿಂದ ಕಳೆದ ಬಾರಿ ಗೆಲುವು ಸಾಧಿಸುವಲ್ಲಿ ಯಶಸ್ವಿ ಆಗಿದ್ದ ಸಿನ್ಹಾ ಅವರಿಗೆ ಈ ಬಾರಿ ಪಕ್ಷ ಟಿಕೆಟ್‌ ನೀಡಿರಲಿಲ್ಲ. ಈ ಬಾರಿ ಜಯಂತ್‌ ಸಿನ್ಹಾ ಬದಲಿಗೆ ಮನೀಶ್ ಜೈಸ್ವಾಲ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಅಭ್ಯರ್ಥಿಯ ಘೋಷಣೆಯಾದ ಬಳಿಕ ಜಯಂತ್ ಸಿನ್ಹಾ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇದಕ್ಕೂ ಮುನ್ನ ಮಾರ್ಚ್ ನಲ್ಲಿ ಟ್ವೀಟ್ ಮಾಡಿದ್ದ ಜಯಂತ್ ಸಿನ್ಹಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ಇರುವ ಇಂಗಿತ ವ್ಯಕ್ತಪಡಿಸಿದ್ದರು. ಇದೇ ಮಾದರಿಯಲ್ಲಿ ದೆಹಲಿಯ ಸಂಸದ ಗೌತಮ್ ಗಂಭೀರ್ ಸಹ ತಮ್ಮನ್ನು ಪಕ್ಷದ ಎಲ್ಲಾ ಹುದ್ದೆ ಮತ್ತು ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದರು. ಅಲ್ಲದೇ ಚುನಾವಣಾ ಪ್ರಚಾರ ಕಾರ್ಯದಲ್ಲೂ ಅವರು ಭಾಗಿಯಾಗಿರಲಿಲ್ಲ.

ಇದೀಗ ಅವರಿಗೆ ನೊಟೀಸ್‌ ಜಾರಿಗೊಳಿಸಿರುವ ಬಿಜೆಪಿ, ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕಾರ್ಯ ಮತ್ತು ಚುನಾವಣಾ ಪ್ರಚಾರದಲ್ಲಿ ಯಾವುದೇ ಆಸಕ್ತಿ ವಹಿಸುತ್ತಿಲ್ಲ. ನಿಮಗೆ ಮತ ಚಲಾಯಿಸುವ ಅಗತ್ಯವಿದೆ ಎಂದೆನಿಸಲೂ ಇಲ್ಲ. ನಿಮ್ಮ ನಡವಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಈ ಬಗ್ಗೆ ತಕ್ಷಣ ಕಾರಣ ಸಮೇತ ವಿವರಿಸುವಂತೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ನೋಟಿಸ್‌ನಲ್ಲಿ ತಿಳಿಸಿದ್ದಾರೆ. ಅದೂ ಅಲ್ಲದೇ ಕೇವಲ ಎರಡು ದಿನಗಳಲ್ಲಿ ತಮ್ಮ ನಿಲುವನ್ನು ವಿವರಿಸುವಂತೆ ಪಕ್ಷ ಸಿನ್ಹಾ ಅವರನ್ನು ಕೇಳಿದೆ. ಇನ್ನು ಪಕ್ಷದ ವರಷ್ಠರು ಕಳಿಸಿರುವ ಈ ನೊಟೀಸ್‌ಗೆ ಸಿನ್ಹಾ ಇನ್ನೂ ಪ್ರತಿಕ್ರಿಯಿಸಿಲ್ಲ. ಸಿನ್ಹಾ ಅವರು 2019 ರಲ್ಲಿ ಕಾಂಗ್ರೆಸ್‌ನ ಗೋಪಾಲ್ ಸಾಹು ಅವರನ್ನು ಸೋಲಿಸಿ 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.

ಇದನ್ನೂ ಓದಿ: Lok Sabha Election: 5ನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Continue Reading

Lok Sabha Election 2024

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Prashant Kishor: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Kangana Ranaut: ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kangana Ranaut
Koo

ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.

ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್‌ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್‌ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Continue Reading

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading
Advertisement
murder Case in Vijayapura
ವಿಜಯಪುರ1 min ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ1 min ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Katrina Kaif And Vicky Kaushal Together In London
ಸಿನಿಮಾ9 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ20 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ27 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್36 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು45 mins ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್51 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್1 hour ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

RCB
ಕ್ರೀಡೆ1 hour ago

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌