Lok Sabha Election 2024: ಕಾಂಗ್ರೆಸ್‌ ಕೊಟ್ಟ ಚೆಂಬುಗಳ ಪಟ್ಟಿ ಕೊಟ್ಟ ಅಶೋಕ್‌; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ - Vistara News

Lok Sabha Election 2024

Lok Sabha Election 2024: ಕಾಂಗ್ರೆಸ್‌ ಕೊಟ್ಟ ಚೆಂಬುಗಳ ಪಟ್ಟಿ ಕೊಟ್ಟ ಅಶೋಕ್‌; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

Lok Sabha Election 2024: ಮತಬ್ಯಾಂಕ್‌ ರಕ್ಷಣೆ ಮಾಡುತ್ತಿರುವ ತುಘಲಕ್‌ ಸರ್ಕಾರ ಇದಾಗಿದೆ. ತಮ್ಮ ಕಾರ್ಯಕರ್ತರನ್ನೇ ಬಿಟ್ಟುಕೊಡುತ್ತಿದೆ. ಕಾನೂನು ಸುವ್ಯವಸ್ಥೆ ಕುಸಿದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ. ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ನೀವು ನಮ್ಮ ಮತ ಬ್ಯಾಂಕ್‌ ಆಗಿದ್ದು, ನಿಮ್ಮ ಪೂರ್ತಿ ರಕ್ಷಣೆ ಮಾಡುತ್ತೇವೆ ಎಂದು ಸರ್ಕಾರವೇ ಹೇಳಿದೆ. ಜೈ ಶ್ರೀರಾಮ್‌ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್‌ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಜತೆಗೆ ಪಾಸ್‌ ಕೂಡ ಕೊಡುತ್ತಾರೆ ಎಂದು ಕಿಡಿಕಾರಿದ್ದಾರೆ.

VISTARANEWS.COM


on

Lok Sabha Election 2024 R Ashok attacks on Congress Chembu Advertisement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್‌: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಗುದ್ದಾಟ ಜೋರಾಗಿ ನಡೆಯುತ್ತಿದೆ. ಈ ವೇಳೆ ಚೆಂಬು ಪಾಲಿಟಿಕ್ಸ್‌ (Chembu Politics) ಎಂಟ್ರಿ ಕೊಟ್ಟಿದೆ. ಈ ಬಗ್ಗೆ ಕಾಂಗ್ರೆಸ್‌ ನೀಡಿದ ಜಾಹೀರಾತಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ತಿರುಗೇಟು ನೀಡಿದ್ದು, ಕಾಂಗ್ರೆಸ್‌ ಕೊಟ್ಟಿರುವ ಚೆಂಬುಗಳೇನು ಎಂದು ಪಟ್ಟಿ ಮಾಡಿ ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು (CM Siddaramaiah) ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ. ಸಿ.ಎನ್‌. ಮಂಜುನಾಥ್‌ ಪರ ಚುನಾವಣಾ ಪ್ರಚಾರದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌. ಅಶೋಕ್‌, ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್‌ ಉಂಟುಮಾಡಿದೆ. ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ನೀವು ನಮ್ಮ ಮತ ಬ್ಯಾಂಕ್‌ ಆಗಿದ್ದು, ನಿಮ್ಮ ಪೂರ್ತಿ ರಕ್ಷಣೆ ಮಾಡುತ್ತೇವೆ ಎಂದು ಸರ್ಕಾರವೇ ಹೇಳಿದೆ. ಜೈ ಶ್ರೀರಾಮ್‌ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್‌ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಜತೆಗೆ ಪಾಸ್‌ ಕೂಡ ಕೊಡುತ್ತಾರೆ ಎಂದರು.

ಡಿ.ಕೆ. ಸುರೇಶ್‌ ಅವರ ರ‍್ಯಾಲಿಯಲ್ಲಿ ಕೆಲವರು ಪಾಕಿಸ್ತಾನ ಜೈ ಎಂದಿದ್ದಾರೆ. ಆದರೆ ಡಿ.ಕೆ.ಸುರೇಶ್‌ ಏನೂ ಮಾತಾಡದೆ ಸುಮ್ಮನೆ ನಿಂತಿದ್ದರು. ಈಗಾಗಲೇ ಅವರು ದೇಶ ಒಡೆಯುವ ಮಾತನಾಡಿದ್ದಾರೆ. ಭಾರತ ಮಾತೆಯನ್ನು ಪ್ರೀತಿಸುವ ಬೆಂಗಳೂರು ಗ್ರಾಮಾಂತರದ ಜನರು ಇವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದರು.

ನೇಹಾ ಕೇಸ್‌ ಮುಚ್ಚಿ ಹಾಕಲು ಯತ್ನ

ಹುಬ್ಬಳ್ಳಿಯಲ್ಲಿ ನಡೆದ ಘಟನೆ ನೋಡಿದರೆ ಕಾಲೇಜು ಆವರಣದಲ್ಲೇ ಭದ್ರತೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಕೊಲೆಯಾದ ನೇಹಾ ತಂದೆ ಕಾಂಗ್ರೆಸ್‌ನ ಕಾರ್ಪೊರೇಟರ್‌ ಲವ್‌ ಜಿಹಾದ್‌ ಇದೆ ಎಂದಿದ್ದಾರೆ. ಕಾಂಗ್ರೆಸ್‌ ನಾಯಕರು ಹೀಗೆ ಮಾತನಾಡಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕುಟುಂಬದವರು ಹೇಳಿದ್ದಾರೆ. ಇಷ್ಟಾದರೂ ಕಾಂಗ್ರೆಸ್‌ ನಾಯಕರು ಇದು ಲವ್‌ ಕೇಸ್‌ ಎಂದು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಆರ್‌. ಅಶೋಕ್‌ ದೂರಿದರು.

ಡಿ.ಕೆ. ಶಿವಕುಮಾರ್‌ ಒಕ್ಕಲಿಗ ಹೇಗಾಗುತ್ತಾರೆ?

ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆ ಭಯೋತ್ಪಾದನಾ ಚಟುವಟಿಕೆಯಾಗಿದ್ದು, ಇದನ್ನು ಮಾಡುವವರೆಲ್ಲ ಡಿ.ಕೆ.ಶಿವಕುಮಾರ್‌ ಅವರ ಸಹೋದರರೇ ಆಗಿದ್ದಾರೆ. ಕುಕ್ಕರ್‌ ಬಾಂಬ್‌ ಸ್ಫೋಟ ಮಾಡಿದವನನ್ನು ಬ್ರದರ್‌ ಎಂದ ಡಿ.ಕೆ. ಶಿವಕುಮಾರ್‌ ಒಕ್ಕಲಿಗ ಹೇಗಾಗುತ್ತಾರೆ? ಒಕ್ಕಲಿಗ ಮುಖಂಡ ಎಂದು ಹೇಳಿಕೊಂಡು ಮತ ಯಾಚಿಸುವುದು ಹೇಗೆ ಸಾಧ್ಯ ಎಂದು ಆರ್‌. ಅಶೋಕ್‌ ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಹೇಳಿಕೆ ನೀಡಿದ ನಂತರ ಕ್ಷಮೆ ಕೇಳುತ್ತಾರೆ. ಕಾಂಗ್ರೆಸ್‌ ಕಾರ್ಪೊರೇಟರ್‌ ತಮ್ಮ ಜತೆ ಈಗ ಯಾರೂ ಇಲ್ಲ ಎಂದಿದ್ದಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕಾರ್ಯಕರ್ತರನ್ನೇ ಬಿಟ್ಟುಬಿಡುತ್ತಾರೆ ಎಂದು ಆರ್‌. ಅಶೋಕ್‌ ಹೇಳಿದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಚೆಂಬು ಗ್ಯಾರಂಟಿ. ರಾಹುಲ್‌ ಗಾಂಧಿಗೆ ನಾವು ಚೆಂಬು ಕಳುಹಿಸಿಕೊಡಲಿದ್ದು, ಅವರು ವಿದೇಶಕ್ಕೆ ಹೋಗಿ ಏನಾದರೂ ಮಾಡಲಿ. ಸೋತ ಬಳಿಕ ಅವರು ಖಂಡಿತ ವಿದೇಶಕ್ಕೆ ಹೋಗುತ್ತಾರೆ ಎಂದು ಆರ್‌. ಅಶೋಕ್‌ ಲೇವಡಿ ಮಾಡಿದರು.

ಕಾಂಗ್ರೆಸ್‌ ಕೊಟ್ಟ ಚೆಂಬುಗಳು

ಕಾಂಗ್ರೆಸ್‌ ಸರ್ಕಾರ ರೈತರಿಗೆ ಬೋರ್‌ವೆಲ್‌ ಅನುದಾನ ಕಿತ್ತುಕೊಂಡು ಮೊದಲ ಚೆಂಬು ನೀಡಿದೆ. ಕಿಸಾನ್‌ ಸಮ್ಮಾನ್‌ ಕಿತ್ತುಕೊಂಡಿದ್ದು ಎರಡನೇ ಚೆಂಬು, ಹಾಲಿನ ಪ್ರೋತ್ಸಾಹಧನ ನುಂಗಿದ್ದು ಮೂರನೇ ಚೆಂಬು, ಬರಗಾಲದ್ದು ನಾಲ್ಕನೇ ಚೆಂಬು, ಕಾವೇರಿ ನೀರನ್ನು ಸ್ನೇಹಕ್ಕೆ ತಮಿಳುನಾಡಿಗೆ ಬಿಟ್ಟಿದ್ದು ಐದನೇ ಚೆಂಬು, ವಿದ್ಯುತ್‌ ಶುಲ್ಕ ಹೆಚ್ಚಿಸಿದ್ದು ಆರನೇ ಚೆಂಬು. ಹಾಲು, ಮೊಸರು ದರ ಹೆಚ್ಚಳ, ಆಲ್ಕೋಹಾಲ್‌ ಬೆಲೆ ಹೆಚ್ಚಳ ಸೇರಿದಂತೆ ಹಲವಾರು ಚೆಂಬುಗಳನ್ನು ನೀಡಿದೆ ಎಂದರು.

ಕಾಂಗ್ರೆಸ್‌ ಬಂತು ನಕ್ಸಲ್‌ ತಂತು

ಕಾಂಗ್ರೆಸ್‌ ಬಂತು, ಭಯೋತ್ಪಾದನೆ ಬಂತು, ನಕ್ಸಲ್‌ ಬಂತು, ಬಾಂಬ್‌ ಬಂತು ಎಂಬ ಸ್ಥಿತಿ ಉಂಟಾಗಿದೆ. ಹಿಂದೂಗಳನ್ನು ರಕ್ಷಿಸುವ ಶಕ್ತಿ ಇರುವುದು ಶಕ್ತಿಮಾನ್‌ ನರೇಂದ್ರ ಮೋದಿ ಅವರಿಗೆ ಮಾತ್ರ. ಮೋದಿ ಸರ್ಕಾರ ಬಂದ ಬಳಿಕ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ. ಬಿಜೆಪಿ ಸರ್ಕಾರ ಇದ್ದಾಗ ಬಾಂಬ್‌ ಸ್ಫೋಟವಾದರೂ ಆಗ ಅವರನ್ನು ಬೆಂಬಲಿಸದೆ ಹೆಡೆಮುರಿ ಕಟ್ಟಿದ್ದೇವೆ ಎಂದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

ಬೆಂಗಳೂರು ಗ್ರಾಮಾಂತರ ಹೃದಯವಂತ ಮಂಜುನಾಥ್‌ ಬೇಕೋ, ಕಲ್ಲು ಹೃದಯದ ಕಟುಕ ಡಿ.ಕೆ.ಸುರೇಶ್‌ ಬೇಕೋ ಎಂದು ಜನರು ತೀರ್ಮಾನಿಸುತ್ತಾರೆ. ಮಂಜುನಾಥ್‌ ಮೂರು ಲಕ್ಷ ಅಂತರದಲ್ಲಿ ಗೆಲ್ಲುತ್ತಾರೆ. ಈ ಕ್ಷೇತ್ರವನ್ನೂ ಗೆದ್ದರೆ ಒಂದು ಸೀಟು ಕೂಡ ಕಾಂಗ್ರೆಸ್‌ಗೆ ಸಿಗುವುದಿಲ್ಲ ಎಂದರು.

ಪೆಟ್ರೋಲ್‌ ದರ ಏರಿಕೆ ಭಾರತದಲ್ಲಿ ನಿಯಂತ್ರಣದಲ್ಲಿದೆ. ಬೆಲೆ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡಿದೆ. ಪೆಟ್ರೋಲ್‌ ದರ ಇಡೀ ಜಗತ್ತಿನಲ್ಲಾಗಿದೆ. ಆಗ ರಷ್ಯಾದಿಂದ ತೈಲ ತರಿಸಿಕೊಳ್ಳಲಾಯಿತು ಎಂದು ಆರ್.‌ ಅಶೋಕ್‌ ಹೇಳಿದರು.

ರಾಜ್ಯ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಶಾಸಕರು ಈಗ ಗಂಟು ಮೂಟೆ ಕಟ್ಟಿ ತಯಾರಾಗಿದ್ದಾರೆ. ಬಿಜೆಪಿಯವರು ಸರ್ಕಾರ ಬೀಳಿಸುವುದಿಲ್ಲ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ. ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಈಗಾಗಲೇ ದೇಶದಲ್ಲಿ 4 ಹಂತಗಳ ಮತದಾನ ಪೂರ್ಣಗೊಂಡಿದೆ. ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ.

ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

“ಜವಾಹರಲಾಲ್ ನೆಹರೂ ಕೂಡ ಸಂಸತ್ತಿನಲ್ಲಿ ʼಬಿರ್ಲಾ-ಟಾಟಾ ಕಿ ಸರ್ಕಾರ್‌ʼನಂತಹ ನಿಂದನೆಗಳನ್ನು ಎದುರಿಸುತ್ತಿದ್ದರು. ಈ ಕುಟುಂಬದ (ನೆಹರೂ) ಸಮಸ್ಯೆಯೆಂದರೆ ಈಗಲೂ ನಾನು ಅದೇ ನಿಂದನೆಗಳನ್ನು ಎದುರಿಸಬೇಕೆಂದು ಬಯಸುತ್ತದೆʼʼ ಎಂದು ಆರೋಪಿಸಿದ್ದಾರೆ. ʼʼದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ಗೌರವಿಸಬೇಕು ಎಂದು ಹೇಳಲು ನನಗೆ ನಾಚಿಕೆಯಾಗುವುದಿಲ್ಲ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅತಿಥಿಗಳ ಪಟ್ಟಿ ತಯಾರಿಸುವಾಗ ನಾನು ಕ್ರೀಡಾಪಟುಗಳು ಮತ್ತು ಸಾಧಕರ ಹೆಸರನ್ನು ಸೇರಿಸುತ್ತೇನೆ. ದೇಶವು ತನ್ನ ಸಾಧಕರನ್ನು ಪೂಜಿಸದಿದ್ದರೆ ಮತ್ತು ಗೌರವಿಸದಿದ್ದರೆ, ವಿಜ್ಞಾನಿ ಮತ್ತು ಪಿಎಚ್‌ಡಿ ಮಾಡುವ ಜನರನ್ನು ನಾವು ಹೇಗೆ ಹೊಂದಲು ಸಾಧ್ಯ? ಎಲ್ಲ ವರ್ಗದ ಸಾಧಕರನ್ನು ಗೌರವಿಸಬೇಕು ಎಂಬುದು ನನ್ನ ಅಭಿಮತ” ಎಂದು ಅವರು ಹೇಳಿದ್ದಾರೆ.

“ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ. ನಾನು ತಪ್ಪು ರೀತಿಯಲ್ಲಿ ಯಾರಿಗಾದರೂ ಪ್ರಯೋಜನ ಉಂಟು ಮಾಡಿದ್ದರೆ ನನ್ನನ್ನು ಗಲ್ಲಿಗೇರಿಸಬೇಕು. ಆದರೆ ನನ್ನ ದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ನಾನು ಗೌರವಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ. ಆ ಮೂಲಕ ಅದಾನಿ-ಅಂಬಾನಿಯಂತಹ ಶ್ರೀಮಂತ ಉದ್ಯಮಿಗಳಿಗೆ ನೆರವು ನೀಡಿದ್ದಾರೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಸೂಕ್ಷ್ಮವಾಗಿ ತಿರುಗೇಟು ನೀಡಿದ್ದಾರೆ.

ಸಂಪತ್ತಿನ ಸೃಷ್ಟಿಕರ್ತರು ಮತ್ತು ಕಾರ್ಮಿಕರ ಬಗ್ಗೆಯೂ ಸಮಾನವಾಗಿ ಚಿಂತಿಸುತ್ತೇನೆ ಎಂದು ಮೋದಿ ಈ ಸಂದರ್ಭದಲ್ಲಿ ಘೋಷಿಸಿದ್ದಾರೆ. “ನನ್ನ ಪ್ರಕಾರ ದೇಶದ ಅಭಿವೃದ್ಧಿಗೆ ಬಂಡವಾಳಶಾಹಿಗಳ ಹಣ, ಆಡಳಿತ ಮಂಡಳಿಯವರ ಯೋಚನೆ ಮತ್ತು ಕಾರ್ಮಿಕರ ಕಠಿಣ ಪರಿಶ್ರಮ ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

ಮುಸ್ಲಿಂ ವಿರೋಧಿ ಆರೋಪಕ್ಕೂ ತಿರುಗೇಟು

ಕೆಲವು ದಿನಗಳ ಹಿಂದಯಷ್ಟೇ ಮೋದಿ ಅವರು ಮುಸ್ಲಿಂ ವಿರೋಧಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಟಾಂಗ್‌ ಕೊಟ್ಟಿದ್ದರು. ʼʼಹಿಂದು ಮುಸ್ಲಿಂ ಅಂತ ತಾರತಮ್ಯ ಮಾಡಿದ ದಿನ ನಾನು ರಾಜಕೀಯ ಬದುಕಿಗೆ ಅನರ್ಹನಾಗುತ್ತೇನೆ. ನಾನು ನನ್ನ ಜೀವನದಲ್ಲಿ ಎಂದಿಗೂ ಹಿಂದು-ಮುಸ್ಲಿಂ ಎಂದು ಭೇದ ಮಾಡೋದಿಲ್ಲ ಎಂಬುದು ನನ್ನ ಬದುಕಿನ ಧ್ಯೇಯʼʼ ಎಂದು ಸ್ಪಷ್ಟವಾಗಿ ಹೇಳಿದ್ದರು. ʼʼಹಿಂದು ಮುಸ್ಲಿಂ ಅಂತ ಹೇಳಿಕೊಂಡು ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಜೀವಕ್ಕೆ ಅರ್ಹನಾದ ವ್ಯಕ್ತಿಯಾಗುವುದಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆʼʼ ಎಂದರು. 

Continue Reading

ದೇಶ

Lok Sabha Election 2024: ಬಿಜೆಪಿ 400+ ಸೀಟು ಗೆಲ್ಲುತ್ತಾ? ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Lok Sabha Election 2024:ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಪಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಬಗ್ಗೆ ವರದಿಯೊಂದನ್ನು ನೀಡಿದೆ. ಈ ಬಾರಿ 400ಕ್ಕೂ ಅಧಿಕ ಸೀಟ್‌ ಪಡೆಯುವ ನಿರೀಕ್ಷೆಯಲ್ಲಿರುವ ಬಿಜೆಪಿಗೆ ಈ ವರದಿ ಶಾಕ್‌ ನೀಡಿದೆ. ಈ ವರದಿ ಬಿಜೆಪಿಯ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ನಾಲ್ಕನೇ ಹಂತದ ಮತದಾನ ನಡೆಯುವ ಮುನ್ನ ಪಲೋಡಿ ಸಟ್ಟಾ ಬಜಾರ್‌ ಫಲಿತಾಂಶದ ಸಮೀಕ್ಷೆ ವರದಿಯೊಂದನ್ನು ನೀಡಿತ್ತು. ಅದರಲ್ಲಿ ಈ ಬಾರಿ ಬಿಜೆಪಿ 307-310 ಸ್ಥಾನಗಳನ್ನು ಗಳಿಸಲಿದೆ ಎಂಬುದು ತಿಳಿದುಬಂದಿತ್ತು. ಆದರೆ ಈಗ ಹೊಸದಾಗಿ ಒಂದು ವರದಿ ನೀಡಿದ್ದು, ಈ ಬಾರಿ ಬಿಜೆಪಿ ಕೇವಲ 296-300 ಸ್ಥಾನಗಳನ್ನು ಹಾಗೂ ಎನ್‌ಡಿಎ 329 to 332 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ಇನ್ನು ಕಾಂಗ್ರೆಸ್‌ 58 ರಿಂದ 62 ಸ್ಥಾನಗಳನ್ನು ಗೆಲ್ಲಲಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಇನ್ನುಳಿದ 164 ಕ್ಷೇತ್ರಗಳಲ್ಲಿ ಮೇ 20, ಮೇ 25 ಮತ್ತು ಜೂ. 1 ರಂದು ಮತದಾನ ನಡೆಯಲಿದೆ.

ರಾಜ್ಯಗಳಲ್ಲಿ ಗೆಲುವಿನ ಲೆಕ್ಕಾಚಾರ ಹೇಗಿದೆ?

ಪಲೋಡಿ ಸಟ್ಟಾ ಬಜಾರ್‌ ನೀಡಿರುವ ವರದಿ ಪ್ರಕಾರ, ಗುಜರಾತ್‌ನ ಎಲ್ಲಾ 26 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವ ಸಾಧಿಸಿದರೆ, ಮಧ್ಯಪ್ರದೇಶದ 29 ಕ್ಷೇತ್ರಗಳಲ್ಲಿ 27-28 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವುದು ಖಚಿತವಾಗಿದೆ. ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ ಈ ಬಾರಿ 18-20 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆಲ್ಲಬಹುದಾಗಿದೆ. ಒಡಿಶಾದ 21 ಸ್ಥಾನಗಳಲ್ಲಿ, ಬಿಜೆಪಿ 11-12 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ .

ಪಂಜಾಬ್‌ನಲ್ಲಿ ಪಕ್ಷವು ಯಾವುದೇ ಪ್ರಮುಖ ಬದಲಾವಣೆಯನ್ನು ಕಾಣುವ ಸಾಧ್ಯತೆಯಿಲ್ಲ, ರಾಜ್ಯದಲ್ಲಿ 2-3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 2 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಬಾರಿ 1೦ಸ್ಥಾನಗಳನ್ನು ಗೆದ್ದುಕೊಂಡಿದ್ದ ನೆರೆಯ ಹರಿಯಾಣದಲ್ಲಿ, ಪಕ್ಷಕ್ಕೆ 5-6 ಸ್ಥಾನಗಳು ಮಾತ್ರ ದೊರೆಯಲಿದೆ. ತೆಲಂಗಾಣದಲ್ಲಿ ಬಿಜೆಪಿಗೆ 5-6 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷವು ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ, ಕ್ಲೀನ್ ಸ್ವೀಪ್ ಆಗುವ ಸಾಧ್ಯತೆ ಇದೆ. ಪಕ್ಷ ಉತ್ತರಾಖಂಡದಲ್ಲಿ 5 ಸ್ಥಾನ ಬಿಜೆಪಿ ಬಿಜೆಪಿ ಪಾಲಾಗಾಲಿದೆ.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಛತ್ತೀಸ್‌ಗಢದ 11 ಸ್ಥಾನಗಳಲ್ಲಿ ಪಕ್ಷವು 10-11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 2019ರ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದಿತ್ತು. ಪಕ್ಷವು ದೆಹಲಿಯಲ್ಲಿ 6-7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ – ಅದು 2019 ರಲ್ಲಿಯೂ ಎಲ್ಲಾ 7 ಸ್ಥಾನಗಳನ್ನು ಗೆದ್ದಿತ್ತು. ಸಟ್ಟಾ ಬಜಾರ್ ಪ್ರಕಾರ ತಮಿಳುನಾಡಿನಲ್ಲಿ ಪಕ್ಷವು 3-4 ಸ್ಥಾನಗಳೊಂದಿಗೆ ಕೆಲವು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಫಲೋಡಿ ಸತ್ತಾ ಬಜಾರ್ ಪ್ರಕಾರ, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸುವ ಸಾಧ್ಯತೆಯಿದೆ, ಅದರ ಅಂದಾಜಿನ ಪ್ರಕಾರ 42 ಸ್ಥಾನಗಳಲ್ಲಿ 21-22 ಸ್ಥಾನಗಳನ್ನು ಗೆಲ್ಲಬಹುದೆಂದು ಸೂಚಿಸುತ್ತದೆ.

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

Lok Sabha Election 2024

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

Yogendra Yadav: ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ ಅವರು ಪ್ರಸಕ್ತ ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಹೇಗೆ ಕಡಿಮೆ ಸೀಟುಗಳು ಲಭಿಸುತ್ತವೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ್ದಾರೆ. ಹಾಗಾದರೆ, ಯೋಗೇಂದ್ರ ಯಾದವ್‌ ಭವಿಷ್ಯ ಏನು? ಇದಕ್ಕೂ ಮೊದಲು ಅವರು ನುಡಿದ ಭವಿಷ್ಯ ಏನಾಗಿತ್ತು? ಇಲ್ಲಿದೆ ಮಾಹಿತಿ.

VISTARANEWS.COM


on

Yogendra Yadav
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು, ಎಲ್ಲ ಮೈತ್ರಿಕೂಟಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿವೆ. ಚುನಾವಣೆ ಪೂರ್ವ ಸಮೀಕ್ಷೆಗಳು, ಮತಗಟ್ಟೆಗಳಲ್ಲಿ ವ್ಯಕ್ತವಾದ ಅಭಿಪ್ರಾಯ, ಜನರ ಬೆಂಬಲ ಯಾರಿಗಿದೆ ಎಂಬುದರ ವಿಶ್ಲೇಷಣೆ ಮಾಡುತ್ತಿವೆ. ಆಂತರಿಕ ಸಮೀಕ್ಷೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ, ಚುನಾವಣಾ ತಜ್ಞ, ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್‌ (Yogendra Yadav) ಅವರು ಚುನಾವಣೆ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ, ಈ ಬಾರಿ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಲ್ಲ ಎಂದು ಹೇಳಿದ್ದು, ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭವಿಷ್ಯ ಏನಾಗಲಿದೆ ಎಂಬುದರ ಕುರಿತು ವಿಶ್ಲೇಷಣೆ ಮಾಡಿದ ವಿಡಿಯೊವನ್ನು ಯೋಗೇಂದ್ರ ಯಾದವ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 233 ಕ್ಷೇತ್ರಗಳನ್ನು ಮಾತ್ರ ಗೆಲ್ಲಲಿದೆ. ಇದು 70 ಸೀಟುಗಳನ್ನು ಕಳೆದುಕೊಳ್ಳಲಿದೆ. ಇನ್ನು ಬಿಜೆಪಿ ಮೈತ್ರಿ ಪಕ್ಷಗಳು 35 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿವೆ. ಅಲ್ಲಿಗೆ ಎನ್‌ಡಿಎ ಮ್ಯಾಜಿಕ್‌ ನಂಬರ್‌ ಸಮೀಪ ಬರುತ್ತದೆಯೇ ಹೊರತು, ಸ್ಪಷ್ಟ ಬಹುಮತ ಸಿಗುವುದಿಲ್ಲ. ಮಾಧ್ಯಮಗಳು ಹಾಗೂ ರಾಜಕೀಯ ವಿಶ್ಲೇಷಕರು ಅಜೆಂಡಾ ಇಟ್ಟುಕೊಂಡು ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ವರದಿ ನೀಡುತ್ತಿವೆ” ಎಂದು ಟಾಂಗ್‌ ಕೊಟ್ಟರು.

ಯಾವ ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆ?

ಯೋಗೇಂದ್ರ ಯಾದವ್‌ ಅವರ ವಿಶ್ಲೇಷಣೆ ಪ್ರಕಾರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಲಿದೆ. ಕರ್ನಾಟಕದಲ್ಲಿ ಬಿಜೆಪಿ 10 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇನ್ನುಳಿದಂತೆ, ಮಹಾರಾಷ್ಟ್ರದಲ್ಲಿ 20, ರಾಜಸ್ಥಾನ ಹಾಗೂ ಗುಜರಾತ್‌ನಲ್ಲಿ ತಲಾ 10 ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ. ಇನ್ನು, ಹರಿಯಾಣ, ಪಂಜಾಬ್‌, ಹಿಮಾಚಲ ಪ್ರದೇಶ ಹಾಗೂ ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತಲಾ 10 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಒಟ್ಟು 100 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂಬುದಾಗಿ ಅಂದಾಜಿಸಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೈಗೊಂಡ ಬಹುತೇಕ ಸಮೀಕ್ಷೆಗಳಲ್ಲಿ ಎನ್‌ಡಿಎ ಮೈತ್ರಿಕೂಟವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಯೋಗೇಂದ್ರ ಯಾದವ್‌ ಅವರು ಫಲಿತಾಂಶದ ಕುರಿತು ವಿಶ್ಲೇಷಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

2019ರಲ್ಲಿ ನುಡಿದ ಭವಿಷ್ಯ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆ ಫಲಿತಾಂಶದ ಕುರಿತು 2018ರಲ್ಲಿಯೇ ಯೋಗೇಂದ್ರ ಯಾದವ್‌ ಅವರು ವಿಶ್ಲೇಷಣೆ ಮಾಡಿದ್ದರು. ಬಿಜೆಪಿ ನೇತೃತ್ವದ ಎನ್‌ಡಿಎ ಚುನಾವಣೆಯಲ್ಲಿ 100 ಸೀಟುಗಳನ್ನು ಕಳೆದುಕೊಳ್ಳಲಿದೆ. ಬಿಜೆಪಿಯೊಂದೇ 65 ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ. ಆ ಮೂಲಕ ಎನ್‌ಡಿಎ ಬಹುಮತ ಸಾಬೀತುಪಡಿಸುವುದಿಲ್ಲ ಎಂದೇ ಹೇಳಿದ್ದರು. ಇನ್ನು, 2019ರಲ್ಲಿ ಲೇಖನ ಬರೆದಿದ್ದ ಯೋಗೇಂದ್ರ ಯಾದವ್‌, 2004ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ. ಆಗಲೂ ವಾಜಪೇಯಿ ಅವರ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನಲಾಗುತ್ತಿತ್ತು. ಆದರೆ, ಫಲಿತಾಂಶ ಉಲ್ಟಾ ಆಯಿತು. 2019ರ ಚುನಾವಣೆಯಲ್ಲೂ ಇದೇ ರೀತಿ ಆಗಲಿದೆ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದರು. ಆದರೆ, ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಉಲ್ಟಾ ಆಗಿತ್ತು. ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಗೆದ್ದು ಬೀಗಿತ್ತು. ರೈತ ಚಳವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗುತ್ತದೆ ಎಂದು ಇವರು ಭವಿಷ್ಯ ನುಡಿದಿದ್ದರು. ಆದರೆ ಅಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಸತತ ಎರಡನೇ ಬಾರಿ ಭಾರಿ ಬಹುಮತದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Continue Reading
Advertisement
Narendra Modi
Lok Sabha Election 202414 seconds ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Pakistan
ವಿದೇಶ5 mins ago

Pakistan: ಟಾಪ್‌ ಕಂಪನಿಗಳಲ್ಲಿ ಭಾರತೀಯರೇ CEO; ಆದರೆ ನಮ್ಮ ಮಕ್ಕಳು? ಪಾಕ್‌ ಸಂಸದನ ವಿಡಿಯೊ ವೈರಲ್‌

Rashmika Madanna Appreciation Post PM Modi Reacts
ಟಾಲಿವುಡ್6 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

RCB vs CSK
ಕ್ರೀಡೆ11 mins ago

RCB vs CSK: ಚೆನ್ನೈ-ಆರ್​ಸಿಬಿ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಎಚ್ಚರಿ ಏನು?

illegal hunting chikkamagaluru
ಕ್ರೈಂ23 mins ago

Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

Cannes 2024 Aishwarya Rai turns lady in black in Falguni
ಸಿನಿಮಾ29 mins ago

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

These foods are really what our body needs in summer
ಆರೋಗ್ಯ52 mins ago

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Lok Sabha Election 2024
ದೇಶ1 hour ago

Lok Sabha Election 2024: ಬಿಜೆಪಿ 400+ ಸೀಟು ಗೆಲ್ಲುತ್ತಾ? ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Medical Negligence
ದೇಶ1 hour ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ1 hour ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ19 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು22 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌