Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು? - Vistara News

Lok Sabha Election 2024

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

Lok Sabha Election 2024: ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಈ ಬಾರಿ ಡಾಲಿ ಧನಂಜಯ್‌ ಅವರು ಹಳ್ಳಿ ಸ್ಟೈಲ್‌ನಲ್ಲಿ ಬಂದು ವೋಟ್‌ ಮಾಡಿದರು. ನಟ ಸುದೀಪ್‌ ಅವರು ಮಗಳ ಜತೆ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ. ದೇಶದ ಮೇಲೆ ಪ್ರೀತಿ ಇರುವವರು ವೋಟ್‌ ಹಾಕುತ್ತಿದ್ದಾರೆ, ಮಿಕ್ಕವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ ಎಂದರು ಸುದೀಪ್‌.

VISTARANEWS.COM


on

Lok Sabha Election 2024 sandalwood celebrities reaction
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:  ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು. ಅಶ್ವಿನಿ ಪುನೀತ್, ಡಾಲಿ ಧನಂಜಯ್, ಸಪ್ತಮಿ ಗೌಡ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಅನೇಕ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. 

ನಟ ಸುದೀಪ್‌ ಅವರು ಮಗಳ ಜತೆ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ನಟ ಮಾಧ್ಯಮದ ಜತೆ ಮಾತನಾಡಿ ʻʻತಲೆ ಇರುವವರು, ಬುದ್ಧಿ ಇರುವವರು, ದೇಶದ ಮೇಲೆ ಪ್ರೀತಿ ಇರುವವರು ವೋಟ್‌ ಹಾಕುತ್ತಿದ್ದಾರೆ, ಮಿಕ್ಕವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ. ಯಾರು ವೋಟ್‌ ಹಾಕಲು ಬರುತ್ತ ಇಲ್ಲವೋ ಅವರ ಬಗ್ಗೆ ತುಂಬ ತೆಲೆ ಕೆಡಿಸಿಕೊಳ್ಳುವುದನ್ನು ಬಿಡೋಣʼʼಎಂದರು.

ಇದನ್ನೂ ಓದಿ: Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

ನಟ ಉಪೇಂದ್ರ ಮಾತನಾಡಿ ʻʻವೋಟ್‌ ಮಾಡಲು ತುಂಬ ಜನ ಬರುತ್ತ ಇದ್ದಾರೆ. ಎಲ್ಲರಿಗೂ ಮಹತ್ವ ಗೊತ್ತಿದೆ. ಖಂಡತ ಎಲ್ಲರೂ ಬರ್ತಾರೆ. ಯುವಕರು ಬಂದು ವೋಟ್‌ ಮಾಡಿ. ಪ್ರಜೆಗಳು ವಿಚಾರ ಮಾಡಿ ಮತ ಹಾಕಿʼʼಎಂದರು.

ಈ ಬಾರಿ ಡಾಲಿ ಧನಂಜಯ್‌ ಅವರು ಹಳ್ಳಿ ಸ್ಟೈಲ್‌ನಲ್ಲಿ ಬಂದು ವೋಟ್‌ ಮಾಡಿದರು. ಈ ವೇಳೆ ವಿಸ್ತಾರ ಜತೆಗೆ ಮಾತನಾಡಿ ʻʻಮತದಾನ ಪರ್ಸಂಟೇಜ್‌ ಜಾಸ್ತಿ ಆಗಬೇಕು. ನಾವು ಮತ ಚಲಾಯಿಸಬೇಕು. ಯುವಕರಿಗೆ ಹೇಳೋದು ಏನಂದರೆ ಯೋಚನೆ ಮಾಡಿ ಮತ ಹಾಕಿ. ನೋಡೋದು, ಕೇಳೋದು ಯಾವತ್ತೂ ಸತ್ಯ ಇರುವುದಿಲ್ಲ. ನಮ್ಮ ಭವಿಷ್ಯಕ್ಕೆ ಏನು ಬೇಕು ಎಂದು ಅರಿತು ವೋಟ್‌ ಮಾಡಬೇಕು. ನಮ್ಮ ಮತ ಖಂಡಿತ ಒಳ್ಳೆಯ ನಾಯಕರಿಗೆ ಆಗರುತ್ತೆʼʼಎಂದರು.

ಮತದಾನದ ಬಳಿಕ ನಟಿ ತಾರಾ ಮಾತನಾಡಿ ʻಇವತ್ತು ರಾಷ್ಟ್ರ ಕಟ್ಟುವ ಸಮಯ. ಇಲ್ಲಿ ನಮ್ಮ ನೆಚ್ಚಿನ ನಾಯಕನ್ನು ಆರಿಸುವ ಸಮಯ. ವೋಟ್‌ ಮಾಡುವ ಸಂಭ್ರಮ ನೋಡಿ ಖುಷಿ ಆಗುತ್ತದೆ. ತುಂಬ ಯುವಕರು ವೋಟ್‌ ಮಾಡುತ್ತಿದ್ದಾರೆ. ದೇಶದ ಪ್ರಜೆಯಾಗಿ ವೋಟ್‌ ಮಾಡುವುದು ತುಂಬ ಮುಖ್ಯ. ಎಲ್ಲ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮಗಿಂತ ಹೆಚ್ಚಾಗಿ ನೀವು ಮನೆ ಮನೆಗೆ ತಲುಪಿ ಮತದಾನದ ಅರಿವು ಮೂಡಿಸಿದ್ದೀರಿʼʼ ಎಂದರು.

ನಟ ಯಶ್ ಮಾತನಾಡಿ ʻʻಮತ ಹಾಕೋದು ನಮ್ಮೆಲ್ಲರ ಕರ್ತವ್ಯ. ಅದು ನಮ್ಮ ಹಕ್ಕು. ದೇಶಕ್ಕಾಗಿ ಮತ ಚಲಾವಣೆ ಮಾಡಬೇಕು. ನಿಮ್ಮ ನಿರ್ಧಾರಗಳಿಂದ ಕಲಿಯುವುದಕ್ಕೆ ಅವಕಾಶ ಸಿಗಲಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯ ಮುಖ್ಯ. ಸಮಯ ಕಳೆದಂತೆ ಮತದಾನ ಹೆಚ್ಚಾಗಬಹುದು. ಅಭಿವೃದ್ಧಿ ಅನ್ನೋದು ಮುಖ್ಯ. ದೇಶಕ್ಕೆ ಈಗ ಒಳ್ಳೆಯ ಅವಕಾಶ ಇದೆ. ಒಳ್ಳೆಯ ಸಮಯʼʼಎಂದು ಹೇಳಿದರು.

ನಟ ಸೃಜನ್ ಲೋಕೇಶ್ ಮಾತನಾಡಿ ʻʻಮತ ಹಾಕಿರುವುದು ಖುಷಿ ಕೊಟ್ಟಿದೆ. ಒತ್ತಾಯದಿಂದ ಯಾರು ಮತದಾನ ಮಾಡಬಾರದು. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ. ಅದು ನಮ್ಮ ಮೂಲ ಹಕ್ಕುʼʼಎಂದರು.

ಮತದಾನ ಮಾಡಿದ ಬಳಿಕ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮಾತನಾಡಿ ʻʻಮತದಾನ ನಮ್ಮಲ್ಲೆರ ಹಕ್ಕು. ಯೋಚನೆ ಮಾಡಿ ಮತದಾನ ಮಾಡಿ. ದೇಶದ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಮತದಾನ ಮಾಡಿ ಅಂತ ಹೇಳುತ್ತೇನೆ. ಬಂದು ಮತ ಹಾಕಿ ಎಲ್ಲಿಗಾದರೂ ಹೋಗಿ. ಯಾಕೆಂದರೆ ಮತಕ್ಕೆ ತುಂಬಾ ಬೆಲೆ ಇದೆʼʼಎಂದರು.

ನಟಿ ಅಮೂಲ್ಯ ಪತಿ ಜಗದೀಶ್ ಮಾತನಾಡಿ ʻʻವೋಟ್ ಮಾಡಿದ್ದೇವೆ,ಇದು ಎಲ್ಲರ ಹಕ್ಕು. ಈ ಬಾರೀ ತುಂಬಾ ಜನ ವೋಟ್ ಮಾಡ್ತಿದ್ದಾರೆ. ಹೆಚ್ಚು ಜನರು ವೋಟಿಂಗ್‌ಗೆ ಬಂದಿರೋದು ಖುಷಿಯಾಯ್ತು. ಎಲ್ಲರೂ ತಪ್ಪದೇ ಮತದಾನ ಮಾಡಬೇಕುʼʼಎಂದರು.

ಈಗಾಗಲೇ ಡಿಂಪಲ್‌ ಕ್ಷೀನ್‌ ರಚಿತಾ ರಾಮ್‌, ನಿರಂಜನ್‌ ದೇಶಪಾಂಡೆ, ದರ್ಶನ್‌, ವಿಜಯ್‌ ರಾಘವೇಂದ್ರ ಸೇರಿದಂತೆ ಸ್ಟಾರ್ಸ್‌ಗಳು ಮತಚಲಾಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

ಯಾವಾಗ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಇದೇ ವೇಳೆ ಮೋದಿ ಅವರು ತಮ್ಮ ಬಗ್ಗೆ ಮಾಡಲಾದ ಟ್ರೋಲ್‌ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಸೋಷಿಯಲ್‌ ಮೀಡಿಯಾ ಜಮಾನದಲ್ಲಿ ಗಣ್ಯರ ಕುರಿತು ಟ್ರೋಲ್‌ (Troll) ಮಾಡುವುದು, ಮೀಮ್‌ಗಳ (Meme) ಮೂಲಕ ಅವರ ಕಾಲೆಳೆಯುವುದು ಸಾಮಾನ್ಯ. ವಿಡಿಯೊ ಅಥವಾ ರೀಲ್ಸ್‌ ನೋಡಿ, ನಕ್ಕು, ಮುಂದೆ ಹೋಗುವಂತಹ ಟ್ರೋಲ್‌ಗಳು ವೈರಲ್‌ (Viral Video) ಆಗುತ್ತವೆ. ಆದರೆ, ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ ಮೂಲಕ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಟ್ರೋಲ್‌ ಮಾಡಿದ್ದಕ್ಕೆ ಇಬ್ಬರು ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಪಶ್ಚಿಮ ಬಂಗಾಳ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ತಮ್ಮ ಬಗ್ಗೆ ಮಾಡಿದ ಟ್ರೋಲ್‌ ವಿಡಿಯೊವನ್ನು ಮೆಚ್ಚಿಕೊಂಡಿದ್ದಾರೆ.

ಸಾವಿರಾರು ಜನರ ಮಧ್ಯೆ ವ್ಯಕ್ತಿಯೊಬ್ಬ ಅತ್ಯುತ್ಸಾಹದಿಂದ ಬಂದು ಡಾನ್ಸ್‌ ಮಾಡುತ್ತಾನೆ. ಆ ವ್ಯಕ್ತಿಯ ಬದಲಿಗೆ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಮೋದಿ ಅವರು ಡಾನ್ಸ್‌ ಮಾಡುವಂತೆ ಎಡಿಟ್‌ ಮಾಡಲಾಗಿದೆ. ಈ ಟ್ರೋಲ್‌ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ ವ್ಯಕ್ತಿಯೊಬ್ಬ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾನೆ. “ಸರ್ವಾಧಿಕಾರಿ ನರೇಂದ್ರ ಮೋದಿ ಅವರು ಈ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದಕ್ಕೆ ನನ್ನನ್ನು ಬಂಧಿಸಲಿಕ್ಕಿಲ್ಲ” ಎಂದು ಕ್ರಿಪ್ಟಿಕ್‌ ಆಗಿ ಪೋಸ್ಟ್‌ ಮಾಡಿದ್ದಾನೆ. ಆದರೆ, ಆ ವಿಡಿಯೊವನ್ನೇ ಶೇರ್‌ ಮಾಡಿದ ಮೋದಿ, ಅದನ್ನು ಮೆಚ್ಚಿಕೊಂಡಿದ್ದಾರೆ.

ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

“ನಿಮ್ಮಂತೆ, ನಾನು ಕೂಡ ನಾನೇ ನೃತ್ಯ ಮಾಡಿದಂತೆ ಬಿಂಬಿಸಿರುವ ವಿಡಿಯೊವನ್ನು ನೋಡಿ ಎಂಜಾಯ್‌ ಮಾಡಿದ್ದೇನೆ. ಇಂತಹ ಕ್ರಿಯೇಟಿವಿಯಿಂದ ಕೂಡಿರುವ ಟ್ರೋಲ್‌ಗಳು ಚುನಾವಣೆ ಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿವೆ” ಎಂದು ಹೇಳುವ ಮೂಲಕ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮಾಡಿದ ಟ್ರೋಲ್‌ಅನ್ನು ಕೂಡ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಸಕಾರಾತ್ಮಕ ಮನೋಭಾವ, ಮೀಮರ್‌ಗಳನ್ನು ಕೂಡ ಹೊಗಳುವ ರೀತಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೋಲ್‌ ಸಹಿಸದ ದೀದಿ

ನರೇಂದ್ರ ಮೋದಿ ಅವರು ಡಾನ್ಸ್‌ ಮಾಡುವ ರೀತಿ ಬಿಂಬಿಸಿದ ರೀತಿಯೇ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಮೊದಲು ಹಂಚಿಕೊಳ್ಳಲಾಗಿತ್ತು. ತಮಾಷೆಗಾಗಿ ಮಾಡಿದ ವಿಡಿಯೊ ಕಂಡ ಪಶ್ಚಿಮ ಬಂಗಾಳ ಪೊಲೀಸರು, ಪೋಸ್ಟ್‌ ಮಾಡಿದ ಇಬ್ಬರಿಗೆ ಕಠಿಣ ಕ್ರಮದ ಎಚ್ಚರಿಕೆ ಜತೆಗೆ ನೋಟಿಸ್‌ ನೀಡಿದ್ದಾರೆ.

ಯಾವಾಗ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಆ ಮೂಲಕ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ಪ್ರಮುಖ ಸುದ್ದಿ

Lok Sabha Election 2024: ನಾಳೆ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ; 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳ ಸ್ಪರ್ಧೆ

Lok Sabha Election 2024: ಮತದಾನ ಕೇಂದ್ರಗಳಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದ್ದು, ಮೇ 17ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ಮತದಾನ ನಡೆಯುವ 14 ಕ್ಷೇತ್ರಗಳು ಯಾವುವು?

ಮೇ 7 ರಂದು ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿರುವ‌ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 2.59 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

227 ಅಭ್ಯರ್ಥಿಗಳು ಸ್ಪರ್ಧೆ

ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ
ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206
ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಮತಗಟ್ಟೆಗಳಲ್ಲಿ ಮತದಾರರಿಗೆ ಮೂಲಸೌಕರ್ಯ

ತಾಪಮಾನ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಆಯೋಗ ಮತದಾನದ ದಿನದಂದು ಮತಗಟ್ಟೆಯಲ್ಲಿ ಮತದಾರರಿಗಾಗಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಒಆರ್‌ಎಸ್ ಜ್ಯೂಸ್, ಕುಳಿತುಕೊಳ್ಳಲು ಕಾಯ್ದಿರಿಸಿದ ಕೊಠಡಿಗಳು, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಆಂಬ್ಯುಲೆನ್ಸ್ ವಾಹನಗಳು ಮುಂತಾದ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿದೆ. ಇನ್ನು ದೃಷ್ಟಿಹೀನ ಮತದಾರರ ಸಹಾಯಕ್ಕಾಗಿ ಬ್ರೈಲ್ ಸೌಲಭ್ಯವುಳ್ಳ ಇವಿಎಂ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ | ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಮತದಾರರ ಗುರುತಿನ ಚೀಟಿ ಕಡ್ಡಾಯ

ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ ಸ್ಲಿಪ್‌ ಜತೆಗೆ ಮತದಾರರ ಗುರುತಿನ ಚೀಟಿ,
ಆಧಾರ್‌ಕಾರ್ಡ್, ನರೇಗಾ ಜಾಬ್‌ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್‌ಬುಕ್, ಕಾರ್ಮಿಕ ಸಚಿವರು ನೀಡುವ
ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೆಸೆನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿಯ ದಾಖಲೆ,
ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ
ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು.

Continue Reading

ಕರ್ನಾಟಕ

Lok Sabha Election: ನಾಳೆ ವೋಟಿಂಗ್; ನಿಮ್ಮ ‘ಮತ’ ಕಳವಾದರೆ ಏನು ಮಾಡಬೇಕು? ಇಲ್ಲಿದೆ ಉತ್ತರ

Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಅಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಹಾಗಾಗಿ, ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಕಾಡುತ್ತಿರುತ್ತವೆ. ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ, ಈ ಸಂದರ್ಭದಲ್ಲಿ ನಾವು ಏನು ಮಾಡಬೇಕು ಎಂಬುದು ಕೂಡ ಒಂದು.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

Voter Slip

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Continue Reading

ಕರ್ನಾಟಕ

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Voter list: ಕರ್ನಾಟಕ ಸೇರಿ ದೇಶದ ಹಲವೆಡೆ ಮಂಗಳವಾರ ಮತದಾನ ನಡೆಯಲಿದ್ದು, ಮತದಾರರಾರೂ ತಮ್ಮ ಹಕ್ಕು ಚಲಾವಣೆಗೆ ಉತ್ಸಾಹಿತರಾಗಿದ್ದಾರೆ. ಯಾವುದಕ್ಕೂ ಮತಗಟ್ಟೆಗೆ ಹೊರಡುವ ಮುನ್ನ ಮತದಾನ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಒಮ್ಮೆ ಚೆಕ್ ಮಾಡುವುದು ಉತ್ತಮ. ಮನೆಯಲ್ಲೇ ಕುಳಿತು ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ.

VISTARANEWS.COM


on

Lok Sabha Election-2024
Koo

ಬೆಂಗಳೂರು: ಲೋಕಸಭಾ ಚುನಾವಣೆಯ (lok sabha election) ಮೂರನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ (voter list) ನಮ್ಮ ಹೆಸರು ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ಇದಕ್ಕಾಗಿ ಮತಗಟ್ಟೆಗೆ (election booth) ಹೋಗಬೇಕಾದ ಅವಶ್ಯಕತೆ ಈಗಿಲ್ಲ. ಸ್ಮಾರ್ಟ್ ಫೋನ್ (smart phone) ಕೈಯಲ್ಲಿ ಇದ್ದರೆ ಸಾಕು ಮನೆಯಲ್ಲೇ ಕುಳಿತು ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ನಲ್ಲಿರುವ ಆನ್ ಲೈನ್ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿ ಮತಗಟ್ಟೆಯ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈಗ ಅವಕಾಶವಿದೆ.

ಹೇಗೆ ನೋಡುವುದು?

ಸ್ಮಾರ್ಟ್ ಫೋನ್ ನಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಥವಾ ಮತದಾರರ ಸೇವಾ ಪೋರ್ಟಲ್ ಅನ್ನು ತೆರೆಯಿರಿ. ಬಳಿಕ ಅಲ್ಲಿ ಕೇಳಿರುವ ಅಗತ್ಯ ಮಾಹಿತಿಗಳನ್ನು ನಮೂದಿಸಿ. ಮುಖ್ಯವಾಗಿ ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿದ ಬಳಿಕ ಮತದಾರರ ಪಟ್ಟಿಯಲ್ಲಿ ದಾಖಲಾಗಿರುವಂತೆ ನಿಮ್ಮ ಪೂರ್ಣ ಹೆಸರು ಮತ್ತು ತಂದೆಯ ಹೆಸರನ್ನು ನಮೂದಿಸಬೇಕು. ಬಳಿಕ ಹುಟ್ಟಿದ ದಿನಾಂಕವನ್ನು ಹಾಕಿ ಎಪಿಕ್ (ಎಪಿಐಸಿ) ಸಂಖ್ಯೆಯನ್ನು ಹಾಕಿದ ಬಳಿಕ ಸರ್ಚ್ ಬಟನ್ ಒತ್ತಿದರೆ ಫಲಿತಾಂಶ ಪುಟ ತೆರೆದುಕೊಳ್ಳುತ್ತದೆ.

Lok Sabha Election-2024

ಏನು ಮಾಹಿತಿ ?

ನಿಮ್ಮ ಹೆಸರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದರೆ ಎಪಿಕ್ ಸಂಖ್ಯೆ, ವಿಳಾಸ ಮತ್ತು ಮತಗಟ್ಟೆಯ ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯವಾಗುತ್ತದೆ. ಮತಗಟ್ಟೆಯ ಸ್ಥಳವನ್ನು ಮ್ಯಾಪ್ ಮೂಲಕ ಕ್ಲಿಕ್ ಮಾಡಿ ನೋಡಲು ಅವಕಾಶವೂ ಇಲ್ಲಿ ಇದೆ.

ಎಸ್ ಎಂಎಸ್ ಮೂಲಕ ಪರಿಶೀಲಿಸಿ

ವೆಬ್ ಪೋರ್ಟಲ್ ಮಾತ್ರವಲ್ಲ ಈ ಎಲ್ಲ ಮಾಹಿತಿಯನ್ನು ಎಸ್ ಎಂಎಸ್ ಮೂಲಕವೂ ಪರಿಶೀಲನೆ ನಡೆಸಬಹುದು.
ಇದಕ್ಕಾಗಿ ಮೊಬೈಲ್ ಫೋನ್ ನಿಂದ 59191 ಕ್ಕೆ ಎಪಿಕ್ ಸಂಖ್ಯೆಯನ್ನು ಹೊಂದಿರುವ ಎಸ್ ಎಂಎಸ್ ಕಳುಹಿಸಿ ಅಥವಾ ಮತದಾರರ ಸಹಾಯವಾಣಿ 1800-111-950ಕ್ಕೆ ಕರೆ ಮಾಡಿ ಕೂಡ ಮಾಹಿತಿ ತಿಳಿದುಕೊಳ್ಳಬಹುದು.

ಯಾವಾಗ ಕೊನೆ ದಿನ?

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆಗೆ ಮತದಾನದ ಹಿಂದಿನ ದಿನ ಕೊನೆಯ ದಿನವಾಗಿದೆ. ಒಂದು ವೇಳೆ ಹೆಸರು ಇಲ್ಲದೇ ಇದ್ದರೆ ಹೊಸ ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚುನಾವಣಾ ಆಯೋಗದ ವೆಬ್ ಸೈಟ್ ಅಥವಾ ಮತದಾರರ ಸೇವಾ ಪೋರ್ಟಲ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

Continue Reading
Advertisement
Rohit Sharma
ಪ್ರಮುಖ ಸುದ್ದಿ4 mins ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ14 mins ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ14 mins ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ23 mins ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ39 mins ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ43 mins ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ51 mins ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ1 hour ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Champions Trophy
ಪ್ರಮುಖ ಸುದ್ದಿ2 hours ago

Champions Trophy : ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲು ಬಿಡುವುದಿಲ್ಲ ? ಬಿಸಿಸಿಐ ಸ್ಫೋಟಕ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ5 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ6 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌