Lok Sabha Election 2024: ನಾವು 140 ಸೀಟ್‌ ಇದ್ದೇವೆ; ಬಿಜೆಪಿ-ಜೆಡಿಎಸ್‌ಗೆ ಏನೂ ಮಾಡೋಕೆ ಆಗಲ್ಲ: ಡಿಕೆಶಿ - Vistara News

Lok Sabha Election 2024

Lok Sabha Election 2024: ನಾವು 140 ಸೀಟ್‌ ಇದ್ದೇವೆ; ಬಿಜೆಪಿ-ಜೆಡಿಎಸ್‌ಗೆ ಏನೂ ಮಾಡೋಕೆ ಆಗಲ್ಲ: ಡಿಕೆಶಿ

Lok Sabha Election 2024: ಇದಕ್ಕೂ ಮೊದಲು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಮಾರ್ಚ್ 13 ಮತ್ತು 14ರಂದು ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅಷ್ಟರಲ್ಲಿ ನಾವು ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಬೇಕಿದೆ. ನಮಗೆ ಸಮಯ ಇಲ್ಲ. ಕೇಂದ್ರ ಸರ್ಕಾರವೂ ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಲಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Lok Sabha Election 2024 We have 140 seats BJP JDS cant do anything says DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾವು 136+2 ಇದ್ದೇವೆ. ಅಲ್ಲದೆ, ಜನಾರ್ದನ ರೆಡ್ಡಿ, ಉಳಿದವರು ಸೇರಿ 140 ಆಗುತ್ತೇವೆ. ನೀವು (ಬಿಜೆಪಿ – ಜೆಡಿಎಸ್‌) ಏನೂ ಮಾಡೋಕೆ ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್‌ (DK Shivakumar) ಕಿಡಿಕಾರಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಡಿ.ಕೆ. ಸುರೇಶ್ (DK Suresh) ಗೆಲ್ಲುತ್ತಾರೆ. ಈಗಾಗಲೇ ನಾವು ಅವರನ್ನು ಈ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೇವೆ. ನೂರಕ್ಕೆ ನೂರು ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ನೂತನವಾಗಿ ಆಯ್ಕೆಯಾದ ಎಂಎಲ್‌ಸಿ ಪುಟ್ಟಣ್ಣ ಅವರಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದ‌ ಮೈದಾನದಲ್ಲಿ‌ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟಾರೆ ಡಿ.ಕೆ. ಸುರೇಶ್ ಗೆಲ್ಲುತ್ತಾರೆ ಎಂಬ ಭರವಸೆ ನನಗೆ ಇದೆ. ಬಿಜೆಪಿ – ಜೆಡಿಎಸ್ ಚುನಾವಣೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದು ಹೇಳಿದ್ದರು. ಈಗ ಪಕ್ಷ ಉಳಿಸಲು ಬಿಜೆಪಿ‌ ಜತೆ ಹೊಂದಾಣಿಕೆಯನ್ನು ಮಾಡಿಕೊಂಡಿದ್ದೇವೆ ಎಂದು ಹೇಳುತ್ತಿದ್ದಾರೆ. ಇದಕ್ಕಾಇಗಿ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರ ಬೀಳಿಸಿದ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಅವರ ಉಳಿವಿಗೆ, ಕುಟುಂಬದ ಉಳಿವಿಗೆ ಏನು ಬೇಕಾದರೂ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. ಜನರು ಕಣ್ಣು ಮುಚ್ಚಿ ಬೆಂಬಲಿಸುತ್ತಾರೆ ಎಂದು ಅಂದುಕೊಂಡಿದ್ದಾರೆ‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ – ಜೆಡಿಎಸ್ ಒಂದಾಗಿದ್ದಾರೆ ಚುನಾವಣೆಯಲ್ಲಿ ಪುಟ್ಟಣ್ಣ ಅವರಿಗೆ ಏನಾಗುತ್ತದೆ ಎಂಬ ಭಯ ಇತ್ತು. ನಾನು 2002ರಲ್ಲಿ ಜನತಾದಳ ಎಸ್ ಪಕ್ಷದ ಅಧ್ಯಕ್ಷನಾಗಿದ್ದೆ. ಆಗ ಶಿಕ್ಷಕರ ಕ್ಷೇತ್ರಕ್ಕೆ ನಿಲ್ಲುತ್ತೇನೆ ಎಂದು ಹೇಳಿದರು. ಪುಟ್ಟಣ್ಣಗೆ ಜೆಡಿಎಸ್‌ನಿಂದ ಟಿಕೆಟ್ ಕೊಟ್ಟಿದ್ದೆ. ಅವರು ನಿಮ್ಮ ಕ್ಷೇತ್ರವನ್ನು ಸಮರ್ಥವಾಗಿ ನಿಭಾಯಿಸಿದ್ದರಿಂದ ಮತದಾರರಾದ ನೀವು ಮತ್ತೆ ಆಶೀರ್ವಾದ ಮಾಡಿದ್ದೀರಿ. ಈ ಶಿಕ್ಷಕರ ಕ್ಷೇತ್ರದ ಚುನಾವಣೆ ಲೋಕಸಭೆಗೆ ದಿಕ್ಸೂಚಿ ಅಂತ ಕುಮಾರಸ್ವಾಮಿ ಹೇಳಿದ್ದರು. ಪುಟ್ಟಣ್ಣ ಗೆಲುವು ಲೋಕಸಭೆಗೆ ದಿಕ್ಸೂಚಿಯಾಗಿದೆ. ಲೋಕಸಭೆಯಲ್ಲಿ ಡಿ.ಕೆ. ಸುರೇಶ್ ಗೆದ್ದೇ ಗೆಲ್ಲುತ್ತಾರೆ. ಬಿಜೆಪಿಯಲ್ಲಿ ನರೇಂದ್ರ ಮೋದಿ ಅವರ ಮುಖ ನೋಡಿ ಮತ ಹಾಕಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಇವರಂಥ ಮೂರ್ಖರು ಯಾರಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಮಾರ್ಚ್‌ 14ಕ್ಕೆ ಚುನಾವಣೆ ದಿನಾಂಕ ಘೋಷಣೆ?

ಇದಕ್ಕೂ ಮೊದಲು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಮಾರ್ಚ್ 13 ಮತ್ತು 14ರಂದು ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅಷ್ಟರಲ್ಲಿ ನಾವು ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಬೇಕಿದೆ. ನಮಗೆ ಸಮಯ ಇಲ್ಲ. ಕೇಂದ್ರ ಸರ್ಕಾರವೂ ತರಾತುರಿಯಲ್ಲಿ ಉದ್ಘಾಟನೆ ಮಾಡುತ್ತಲಿದೆ ಎಂದು ಹೇಳಿದರು.

ನಾಚಿಕೆ ಆಗಬೇಕು ಇವರಿಗೆ

ಬೆಂಗಳೂರು ನಗರದ ಎಲ್ಲ ಎಂಪಿಗಳನ್ನು ಗೆಲ್ಲಿಸಬೇಕಿದೆ. ಪದವೀಧರರ ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಅದಕ್ಕೆ ನೀವೆಲ್ಲ ಸಹಕಾರ ಕೊಡಬೇಕು. ನೀವು ಮನಸ್ಸು ಮಾಡಿದರೆ ಏನು ಬೇಕಾದರೂ ಆಗಬಹುದು. ಜೆಡಿಎಸ್‌ನವರು ಬಿಜೆಪಿಯೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಅನ್ ಕಂಡೀಷನ್ ಆಗಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಮಾಡಬೇಕು ಎಂದು ಮಾಡಲಾಯಿತು. ಆದರೆ, ಮುಂದೆ ಏನಾಯಿತು? ಆಗ ಸಿಎಂ ಸ್ಥಾನದಿಂದ ಯೋಗೇಶ್‌, ಮುನಿರತ್ನ ಎಲ್ಲರೂ ಸೇರಿ ಅವರನ್ನು ಕುರ್ಚಿಯಿಂದ ಇಳಿಸಿದರು. ಈಗ ಅವರ ಜತೆಗೆ ಹೋಗಿದ್ದಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಇದನ್ನೂ ಓದಿ: HD Kumaraswamy: ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ! ರಾಜ್ಯದ ಪಾಲಿನ ಝೀರೋ; ಎಚ್‌ಡಿಕೆ ವ್ಯಂಗ್ಯ

ನೀವು ಏನೂ ಮಾಡಲು ಆಗಲ್ಲ

ರಾಜ್ಯಸಭೆ ಚುನಾವಣೆಯಲ್ಲಿ ಶಿವಶಂಕರಪ್ಪ ಅವರಿಗೆ ಹಣ ಬೇಕಾ ಎಂದು ಮಾಜಿ ಸಿಎಂಗಳಾದ ಬಿ.ಎಸ್.‌ ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಫೋನ್ ಮಾಡಿದ್ದರಂತೆ. ನೀವು ತಿರುಕನ ಕನಸು ಕಾಣುತ್ತಿದ್ದೀರಾ? ನಾವು 136+2 ಇದ್ದೇವೆ. ಅಲ್ಲದೆ, ಜನಾರ್ದನ ರೆಡ್ಡಿ, ಉಳಿದವರು ಸೇರಿ 140 ಆಗುತ್ತೇವೆ. ನೀವು ಏನೂ ಮಾಡೋಕೆ ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Lok Sabha Election 2024: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

VISTARANEWS.COM


on

Lok Sabha Election 2024
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ. ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Continue Reading

ದೇಶ

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

Lok Sabha Election
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ (Fifth Phase Voting) ನಡೆಯಲಿದ್ದು, ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗೆಯೇ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Continue Reading

ದೇಶ

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Narendra Modi: ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘದ ವಿರುದ್ಧ ಮಮತಾ ಬ್ಯಾನರ್ಜಿ ಹಲವು ಆರೋಪ ಮಾಡಿದ್ದರು. ಇದಕ್ಕೆ ನರೇಂದ್ರ ಮೋದಿ ತಿರುಗೇಟು ನೀಡಿದ್ದು, “ಮುಸ್ಲಿಮರ ಮತಗಳ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಅವರು ಹೀಗೆ ಮಾಡುತ್ತಿದ್ದಾರೆ” ಎಂದು ಕುಟುಕಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕೊತಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಜಾತಿ, ಧರ್ಮ, ಮೀಸಲಾತಿ ಸೇರಿ ಹಲವು ವಿಷಯಗಳು ಚರ್ಚೆಯ ಮುನ್ನೆಲೆಗೆ ಬರುತ್ತಿವೆ. ರಾಜಕೀಯ ನಾಯಕರ ಹೇಳಿಕೆಗಳು ತೀಕ್ಷ್ಣತೆ ಪಡೆದುಕೊಂಡಿವೆ. ಇನ್ನು, ಹಿಂದು ಸಂಘ-ಸಂಸ್ಥೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಹರಿಹಾಯ್ದಿದ್ದಾರೆ. “ಮುಸ್ಲಿಮರ ಮತಗಳಿಗಾಗಿ ಮಮತಾ ಬ್ಯಾನರ್ಜಿ ಅವರು ಹಿಂದು ಸಂಘ-ಸಂಸ್ಥೆಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ” ಎಂದು ಕುಟುಕಿದ್ದಾರೆ.

“ಚುನಾವಣೆ ಸಂದರ್ಭದಲ್ಲಿ ಟಿಎಂಸಿಯು ಜನರಿಗೆ ಬೆದರಿಕೆ ಒಡ್ಡಿತ್ತು. ಈಗ ಅದು ತನ್ನ ಮಿತಿಯನ್ನು ಮೀರಿದೆ. ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘವು ಜಗತ್ತಿನಾದ್ಯಂತ ಜನರಿಗೆ ಸೇವೆ ಮಾಡುತ್ತಿವೆ. ನೈತಿಕ ಬೆಂಬಲ, ಮಾರ್ಗದರ್ಶನ ನೀಡುತ್ತಿವೆ. ಆದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯು ಇಂತಹ ಹಿಂದು ಸಂಘ-ಸಂಸ್ಥೆಗಳ ವಿರುದ್ಧ ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ, ಬೆದರಿಕೆ ಒಡ್ಡುತ್ತಿದ್ದಾರೆ. ಮುಸ್ಲಿಮರ ಮತಗಳ ಓಲೈಕೆಗಾಗಿ ಮಮತಾ ಬ್ಯಾನರ್ಜಿ ಅವರು ಹೀಗೆ ಮಾಡುತ್ತಿದ್ದಾರೆ” ಎಂದು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಮಮತಾ ಬ್ಯಾನರ್ಜಿ ಅವರು ಓಲೈಕೆ ರಾಜಕಾರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮೂಲಭೂತವಾದಿಗಳನ್ನು ಓಲೈಸುವ ದೃಷ್ಟಿಯಿಂದ ಅವರು ಸಾಧು-ಸಂತರ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ, ಜನರು ಅಭಿವೃದ್ಧಿಯನ್ನು ನೋಡುತ್ತಾರೆಯೇ ಹೊರತು ಓಲೈಕೆ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲ. ಪಶ್ಚಿಮ ಬಂಗಾಳದ ಜನರು ಬಿಜೆಪಿಯ ಆಡಳಿತವನ್ನು ಬಯಸುತ್ತಿದ್ದಾರೆ. ಇದು ಮಮತಾ ಬ್ಯಾನರ್ಜಿ ಅವರ ನಿದ್ದೆಗೆಡಿಸಲು ಕಾರಣವಾಗಿದೆ” ಎಂದು ಟೀಕಿಸಿದರು.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಶನಿವಾರ (ಮೇ 18) ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಅವರು ಇಸ್ಕಾನ್‌, ರಾಮಕೃಷ್ಣ ಮಿಷನ್‌ ಹಾಗೂ ಭಾರತ್‌ ಸೇವಾಶ್ರಮ ಸಂಘದ ವಿರುದ್ಧ ಆರೋಪ ಮಾಡಿದ್ದರು. “ಮೂರೂ ಸಂಸ್ಥೆಗಳು ದೆಹಲಿಯಿಂದ ಬರುವ ಸೂಚನೆಗಳ ಮೇರೆಗೆ ಕಾರ್ಯನಿರ್ವಹಿಸುತ್ತಿವೆ. ರಾಮಕೃಷ್ಣ ಮಿಷನ್‌ ಅನುಯಾಯಿಗಳ ಒಂದು ವಾಟ್ಸ್‌ಆ್ಯಪ್‌ ಗ್ರೂಪ್‌ ಇದೆ. ಇಂತಹ ಚಟುವಟಿಕೆಗಳಲ್ಲಿ ಸನ್ಯಾಸಿಗಳು ಏಕೆ ಭಾಗಿಯಾಗಬೇಕು? ರಾಮಕೃಷ್ಣ ಮಿಷನ್‌ ಬಗ್ಗೆ ಜನರಿಗೆ ಗೌರವವಿದೆ. ರಾಮಕೃಷ್ಣ ಮಿಷನ್‌ನ ಸನ್ಯಾಸಿಗಳು ಮತದಾನ ಮಾಡುವುದಿಲ್ಲ ಎಂಬುದು ನನಗೆ ಗೊತ್ತಿದೆ. ಆದರೆ, ನೀವೇಕೆ ಬಿಜೆಪಿಗೆ ಮತ ನೀಡಿ ಎಂಬುದಾಗಿ ಬೇರೆಯವರಿಗೆ ಕರೆ ನೀಡುತ್ತೀರಿ? ಎಲ್ಲರೂ ಅಲ್ಲ, ಕೆಲವು ಸನ್ಯಾಸಿಗಳು ಹೀಗೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

“ಭಾರತ ಸೇವಾಶ್ರಮ ಸಂಘದ ಮೇಲೆ ನನಗೆ ಅಪಾರ ಗೌರವ ಇತ್ತು. ಆದರೆ, ತೃಣಮೂಲ ಕಾಂಗ್ರೆಸ್‌ ಏಜೆಂಟ್‌ನನ್ನು ಮತಗಟ್ಟೆ ಒಳಗೆ ಬಿಡುವುದಿಲ್ಲ ಎಂಬುದಗಿ ಒಬ್ಬ ಕಾರ್ತಿಕ ಮಹಾರಾಜ ಹೇಳಿದ್ದಾರೆ ಎಂಬುದಾಗಿ ನಾನು ಕೇಳುತ್ತಲೇ ಇದ್ದೇನೆ. ರಾಜಕೀಯದಲ್ಲ ಹೀಗೆ ಭಾಗಿಯಾದವರನ್ನು ನಾನು ಸನ್ಯಾಸಿ ಎಂಬುದಾಗಿ ಕರೆಯುವುದಿಲ್ಲ. ಹೀಗೆ ರಾಜಕೀಯ ಮಾಡುತ್ತಿರುವವರನ್ನು ನಾನು ಗುರುತಿಸಿದ್ದೇನೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಮಮತಾ ಬ್ಯಾನರ್ಜಿ ಹೇಳಿಕೆಗೆ ಬಿಜೆಪಿಯ ಕೆಲ ನಾಯಕರೂ ಟೀಕಿಸಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿಕೆ ವಿರುದ್ಧ ನರೇಂದ್ರ ಮೋದಿ ಟೀಕಿಸುತ್ತಲೇ ಬಿಜೆಪಿ ನಾಯಕ ಅಮಿತ್‌ ಮಾಳವಿಯ ಅವರು ಪೋಸ್ಟ್‌ ಮಾಡಿದ್ದಾರೆ. “ಭಾರತ ಸೇವಾಶ್ರಮ ಸಂಘವು ಮಮತಾ ಬ್ಯಾನರ್ಜಿ ಅವರು ಸಂತರ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸಿ ಹೈಕೋರ್ಟ್‌ ಮೊರೆ ಹೋಗಲಿದ್ದಾರೆ. ಕಾರ್ತಿಕ್‌ ಮಹಾರಾಜ ಅವರು ಎಂದಿಗೂ ಬೂತ್‌ ಏಜೆಂಟ್‌ಗಳ ವಿರುದ್ಧ ಮಾತನಾಡಿಲ್ಲ” ಎಂದು ಮಮತಾ ಆರೋಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Continue Reading

ಕರ್ನಾಟಕ

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Prajwal Revanna Case: ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಭರವಸೆ ನೀಡಿದ ಆಡಿಯೊ ಈಗ ಸಂಚಲನ ಮೂಡಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಎಸಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಲಭ್ಯವಾಗಿದ್ದು, ಇದು ಈಗ ಸಂಚಲನ ಮೂಡಿಸಿದೆ. ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಬಯಲಾಗಿದ್ದು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟಕ್ಕೂ, ದೇವೇಗೌಡ ಅವರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ” ಎಂಬುದಾಗಿ ಶಿವರಾಮೇಗೌಡ ಹೇಳಿದ್ದಾರೆ.

“ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್‌ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ” ಎಂಬುದಾಗಿ ಶಿವರಾಮೇಗೌಡ ಭರವಸೆ ನೀಡಿರುವುದು ಆಡಿಯೊದಲ್ಲಿದೆ.

ವಿಡಿಯೊ ಕೊಡಿ ಎಂಬುದಕ್ಕೆ ಉತ್ತರಿಸಿದ ದೇವರಾಜೇಗೌಡ, “ಅಣ್ಣ ಇದು ಹೆಣ್ಣುಮಕ್ಕಳ ಮಾನ ಮರ್ಯಾದೆ ಪ್ರಶ್ನೆ ಅಲ್ಲವೇ? ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ. ಅದಕ್ಕೆ ಶಿವರಾಮೇಗೌಡ, “ನಿನಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತಾರೆ. ಅಷ್ಟಕ್ಕೂ, ನೀನೇನೂ ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿಲ್ಲ. ಹಂಚಿದರೂ ಅದರಲ್ಲಿ ತಪ್ಪೇನಿಲ್ಲ. ನೀನೊಬ್ಬ ವಕೀಲನಾಗಿ ಹೀಗೆ ಹೆದರಿದರೆ ಹೇಗೆ? ಏನೂ ಆಗುವುದಿಲ್ಲ. ಯಾವ ವಿಡಿಯೊ ಇದೆ ನಮಗೆ ಕೊಡು” ಎಂದಿದ್ದಾರೆ.

ಗೌಡರು ಸೂಸೈಡ್‌ ಮಾಡಿಕೊಂಡಿಲ್ವಲ್ಲ

“ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಬಿಟ್ಟಿದ್ದಾರೆ ಎಂಬುದಾಗಿ ಹೇಳು. ಆ ದೇವೇಗೌಡರ ಮಕ್ಕಳು ಏನೂ ಕಡಿಮೆ ಇಲ್ಲ. ದೇವೇಗೌಡರು ಇಷ್ಟಾದರೂ ಆತ್ಮಹತ್ಯೆ ಮಾಡಕೊಂಡಿಲ್ಲವಲ್ಲ. ಪ್ರಜ್ವಲ್‌ ರೇವಣ್ಣ ಬೆಳೆಯುತ್ತಿದ್ದಾನೆ. ಕುಮಾರಸ್ವಾಮಿ ಅವರಿಗೆ ತಮ್ಮ ಮಗ ಮುಂದೆ ಬರಬೇಕು ಎಂಬ ಆಸೆ ಇದೆ. ಹಾಗಾಗಿ, ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಹಂಚಿದ್ದಾರೆ ಎಂಬುದಾಗಿ ಹೇಳಿ” ಎಂದು ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಹೇಳಿರುವುದು ಆಡಿಯೊದಲ್ಲಿ ದಾಖಲಾಗಿದೆ. ಇದು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Continue Reading
Advertisement
lr Shivarame gowda prajwal revanna case
ಕ್ರೈಂ3 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ5 mins ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ32 mins ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ33 mins ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ60 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ2 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Karnataka Weather Forecast
ಮಳೆ2 hours ago

Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

Dina Bhavishya
ಭವಿಷ್ಯ3 hours ago

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Pralhad Joshi
ಕರ್ನಾಟಕ8 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ8 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ16 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ17 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ18 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌