Lok Sabha Election 2024: ಈ ‘ಐಡೆಂಟಿಟಿ’ ಮೇಲೆ ಮೋದಿಯವರ ಬಿಜೆಪಿ ಪ್ರಾಬಲ್ಯವನ್ನು ಗಂಭೀರವಾಗಿ ಚಾಲೆಂಜ್ ಮಾಡಲಿದೆಯೇ ಕಾಂಗ್ರೆಸ್? - Vistara News

Lok Sabha Election 2024

Lok Sabha Election 2024: ಈ ‘ಐಡೆಂಟಿಟಿ’ ಮೇಲೆ ಮೋದಿಯವರ ಬಿಜೆಪಿ ಪ್ರಾಬಲ್ಯವನ್ನು ಗಂಭೀರವಾಗಿ ಚಾಲೆಂಜ್ ಮಾಡಲಿದೆಯೇ ಕಾಂಗ್ರೆಸ್?

ಈ ಹತ್ತು ವರ್ಷಗಳಲ್ಲಿ (Lok Sabha Election 2024) ನರೇಂದ್ರ ಮೋದಿ ತುಂಬ ನಾಜೂಕಿನಿಂದ ಕಟ್ಟಿ ನಿಲ್ಲಿಸಿರುವ ಇನ್ನೊಂದು ‘ಐಡೆಂಟಿಟಿ’ಯ ಕೋಟೆಗೆ ತಾನು ಲಗ್ಗೆ ಹಾಕುವ ನಿಟ್ಟಿನಲ್ಲಿ ಮಾತ್ರ ಕಾಂಗ್ರೆಸ್ ಒಂದಿಷ್ಟು ಪರಿಣಾಮಕಾರಿ ಸಿದ್ಧತೆ ಮಾಡಿದೆ ಎಂದು ಹೇಳಬಹುದು. ಈ ಐಡೆಂಟಿಟಿಯ ಮತಬ್ಯಾಂಕಿನ ಮೇಲೆ ಮೋದಿಯ ಬಿಜೆಪಿಗಿರುವ ಪಾರಮ್ಯವನ್ನು ಮುರಿಯಬೇಕಿರುವುದು ಮುಂದಿನ ದಿನಗಳಲ್ಲಾದರೂ ಕಾಂಗ್ರೆಸ್ಸಿಗೆ ತುಂಬ ಅನಿವಾರ್ಯವೇ ಹೌದು.  ಯಾವುದು ಆ ಐಡಿಂಟಿಟಿ? ಪತ್ರಕರ್ತ ಚೈತನ್ಯ ಹೆಗಡೆ ಇಲ್ಲಿ ವಿಶ್ಲೇಷಿಸಿದ್ದಾರೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಚೈತನ್ಯ ಹೆಗಡೆ, ಬೆಂಗಳೂರು
ಜಾತಿ ಐಡೆಂಟಿಟಿ, ಹಿಂದುತ್ವದ ಐಡೆಂಟಿಟಿ, ಮುಸ್ಲಿಂ ಐಡೆಂಟಿಟಿ…
ಭಾರತದಲ್ಲಿ ಯಾವುದೇ ಚುನಾವಣೆಗಳ ಸಂದರ್ಭದಲ್ಲಿ (Lok Sabha Election 2024) ಚಿಂತನಕ್ಕೊಳಪಡುವ, ಚರ್ಚೆಯಾಗುವ ಐಡೆಂಟಿಟಿಗಳ ಪೈಕಿ ಇವು ಇದ್ದದ್ದೇ. ಇದರ ಸುತ್ತಲೇ ಪಕ್ಷಗಳು ಸಹ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಮೆಸೇಜಿಂಗ್‌ವರೆಗೆ ಅನೇಕ ಕಾರ್ಯತಂತ್ರಗಳನ್ನು ಹೆಣೆಯುತ್ತವೆ. ಈಗ ಲೋಕಸಭೆ ಸಂದರ್ಭದಲ್ಲೂ ಇವೆಲ್ಲ ಚರ್ಚೆಯಾಗುವ ಸಂಗತಿಗಳೇ.

ಜಾತಿಯ ಕಾರ್ಡ್ ಇವತ್ತಿಗೂ ಪ್ರಬಲವೇ. ಆದರೆ ಇದು ತುಂಬ ಕಲಸಿಹೋಗಿದೆ. ಕೇಂದ್ರದಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರುವವರೆಗೂ ಮುಸ್ಲಿಂ ಐಡೆಂಟಿಟಿಯನ್ನು ದೊಡ್ಡಮಟ್ಟದಲ್ಲಿ ಖುಷಿಪಡಿಸಿಕೊಂಡು ಸೆಳೆದುಕೊಳ್ಳುತ್ತ, ಮೇಲ್ವರ್ಗದವರು ನಿಮ್ಮ ಮೇಲೆ ಅಪಚಾರ ಮಾಡಿದ್ದಾರೆಂಬ ಕಥಾನಕದಲ್ಲಿ ಹಿಂದುಗಳಲ್ಲಿನ ದಲಿತ ಮತ್ತು ಒಬಿಸಿ ಜಾತಿಗಳನ್ನು ಜೋಡಿಸಿಕೊಂಡು ಗೆಲ್ಲುವ ಸಮೀಕರಣವೊಂದಿತ್ತು. ಕಾಂಗ್ರೆಸ್ ಹಾಗೂ ಜಾತಿ ಆಧರಿತ, ಕುಟುಂಬಾಧರಿತ ಪಕ್ಷಗಳು ತಮ್ಮ ಸಾಮರ್ಥ್ಯಾನುಸಾರ ಈ ಸಮೀಕರಣದಲ್ಲಿ ಯಶ ಕಂಡು, ನಂತರ ‘ಕೋಮುವಾದಿ’ ಬಿಜೆಪಿಯನ್ನು ದೂರವಿಡಲು ಒಂದುಗೂಡುತ್ತಿದ್ದದ್ದು ಇದರ ಒಟ್ಟಾರೆ ತಿರುಳು. 

ಎರಡು ಬಗೆಯಲ್ಲಿ ಇವತ್ತಿನ ಬಿಜೆಪಿ ಆ ಕಥಾನಕವನ್ನು ದಶಕಗಳ ಹಿಂದೆ ಧ್ವಂಸ ಮಾಡಿತು. ಹಿಂದುತ್ವದ ದೊಡ್ಡ ಐಡೆಂಟಿಟಿಯಲ್ಲಿ ಕೆಲವಷ್ಟಾದರೂ ಜಾತಿಯ ಐಡೆಂಟಿಟಿಗಳು ಕೊನೆಪಕ್ಷ ಚುನಾವಣೆ ಅವಧಿಯಲ್ಲಿ ಕರಗಿಹೋಗುವಂತೆ ವ್ಯಾಖ್ಯಾನ ಕಟ್ಟಿದ್ದೊಂದೆಡೆ. ಅಧಿಕಾರಕ್ಕೆ ಬಂದ ನಂತರ ಆವಾಸ್, ಶೌಚಾಲಯ, ಉಜ್ವಲಾ, ಮುದ್ರಾ ಇತ್ಯಾದಿಗಳಲ್ಲಿ ಎಲ್ಲ ಜಾತಿಗಳಲ್ಲಿ ಫಲಾನುಭವಿಗಳ ವರ್ಗವನ್ನು ಸೃಷ್ಟಿಸಿ ಹಾಗೆ ರೂಪುಗೊಂಡ ಫಲಾನುಭವಿಗಳ ಐಡೆಂಟಿಟಿಯಲ್ಲಿ ಜಾತಿಯನ್ನು ತುಸು ಮರೆಯುವಂತೆ ಮಾಡಿ ಆ ಮಾದರಿ ಗಟ್ಟಿಗೊಳಿಸಲಾಯಿತು. ಹಲವು ಒಬಿಸಿ ಮತ್ತು ದಲಿತರನ್ನು ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಪ್ರಮುಖ ಸ್ಥಾನಗಳಿಗೆ ನೇಮಿಸುವವರೆಗೆ ಕಾಳಜಿ ವಹಿಸಿದ ಬಿಜೆಪಿಯನ್ನೀಗ ಮೊದಲಿನ ರೀತಿಯಲ್ಲಿ ಬ್ರಾಹ್ಮಣ-ಬನಿಯಾಗಳ ಪಾರ್ಟಿ ಎಂದರೆ ಆ ಟೀಕೆ ಕೇಳುವವರ ಪೈಕಿ ಯಾರ ಎದೆಗೂ ನಾಟುವುದಿಲ್ಲ. ಹಾಗೆಂದೇ, ಈಗೊಂದು ನಾಲ್ಕು ತಿಂಗಳ ಹಿಂದೆ ಈ ಬಾರಿ ಲೋಕಸಭೆ ಚುನಾವಣೆಯನ್ನು ಜಾತಿ ಗಣತಿ ಎಂಬ ಅಸ್ತ್ರದಿಂದಲೇ ಪ್ರಮುಖವಾಗಿ ಎದುರಿಸುವ ರೀತಿಯಲ್ಲಿ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿ ಮಾತಾಡುತ್ತಿದ್ದವು. ಆದರೆ, ಈ ಜಾತಿ ಲೆಕ್ಕಾಚಾರ ಹಾಕುವುದರಲ್ಲಿ ಇವತ್ತಿನ ಬಿಜೆಪಿ ತನ್ನಂತೆಯೇ ಪಳಗಿದೆ ಎಂಬುದು ಅರಿವಿಗೆ ತಂದುಕೊಂಡವರಂತೆ ಆ ಧ್ವನಿಯ ಅಬ್ಬರವನ್ನು ಕಾಂಗ್ರೆಸ್ ತಗ್ಗಿಸಿತು. ಜಾತಿ ಗಣತಿಯ ವರದಿಯೇ ಬಿಜೆಪಿಯನ್ನು ಎದುರಿಸಲಿಕ್ಕಿರುವ ಟ್ರಂಪ್ ಕಾರ್ಡ್ ಎಂಬಂತೆ ಮಾತನಾಡಿದ್ದ ನಿತೀಶ ಕುಮಾರ, ಅದೇನೂ ತಾನಂದುಕೊಂಡ ಪರಿಣಾಮ ಬೀರಿಲ್ಲ ಎಂದುಕೊಂಡೋ ಏನೋ, ಎನ್‌ಡಿಎಗೆ ಬಂದಿದ್ದಾಯ್ತು.

ಜಾತಿ ಕಾರ್ಡ್ ನಡೆಯುವುದಿಲ್ಲವೆ?

2024ರ ಲೋಕಸಭೆ ಚುನಾವಣೆಯಲ್ಲಿ ಜಾತಿ ಕಾರ್ಡ್ ನಡೆಯುವುದಿಲ್ಲ ಎಂದೇನೂ ಅಲ್ಲ. ಆದರೆ ಅದೊಂದೇ ಇಡಿಇಡಿಯಾಗಿ ಯಾರ ಪರವೋ ವಿರುದ್ಧವೋ ಅಲೆ ಸೃಷ್ಟಿಸುವ ಮಟ್ಟದಲ್ಲಿಲ್ಲ. ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಎಲ್ಲ ಜಾತಿಗಳಲ್ಲಿ ಕಾಣಬಹುದಾದ ಫಲಾನುಭವಿಗಳು ಇವೆಲ್ಲದರ ಮೂಲಕ ಬಿಜೆಪಿಯೂ ಜಾತಿ ಐಡೆಂಟಿಟಿ ಪ್ರಜ್ವಲಿಸದಂತೆ ಹಿಂದುತ್ವದ ಧ್ರುವೀಕರಣ ಮಾಡಬಲ್ಲದು. ಇನ್ನು ಕೆಲವು ಸ್ಥಾನಗಳಲ್ಲಿ ಜಾತಿಯೇ ನಿರ್ಣಾಯಕ ಎಂಬಂತಿರುವಲ್ಲಿ ಅದು ಆ ಸ್ಥಳೀಯ ವ್ಯಾಪ್ತಿಗೆ ಸೀಮಿತವಾದ ಜಾತಿ ರಾಜಕಾರಣವನ್ನು ತಾನೂ ಆಡಬಲ್ಲದು. ಏಕೆಂದರೆ ಬಿಜೆಪಿಯ ಕೇಡರಿನಲ್ಲಿ ಈಗ ಎಲ್ಲ ವರ್ಗದವರಿದ್ದಾರೆ. 

ಈ ನಡುವೆ ತಥಾಕಥಿತ ಸೆಕ್ಯುಲರ್ ಪಾಳೆಯದ ರಾಜಕೀಯ ಮಂತ್ರವನ್ನೇ ರಿವರ್ಸ್ ಎಂಜಿನಿಯರಿಂಗ್ ಮಾಡಿದ ಆಟದ ಝಲಕನ್ನೂ ನರೇಂದ್ರ ಮೋದಿ ಒಂದಿಷ್ಟು ದಿನ ತೋರಿದರು. ಹೇಗೆ ಕಾಂಗ್ರೆಸ್-ಎಸ್ಪಿ-ಆರ್‌ಜೆಡಿ ಇತ್ಯಾದಿ ಪಕ್ಷಗಳು ಹಿಂದುಗಳ ಒಂದಿಷ್ಟು ಜಾತಿಗಳನ್ನಷ್ಟೇ ಪ್ರತ್ಯೇಕಿಸಿ ಮುಸ್ಲಿಮರ ಜತೆ ಜೋಡಿಸಿಕೊಂಡು ಚುನಾವಣಾ ರಾಜಕಾರಣದ ಆಟವಾಡಿದವೋ, ಹಾಗೆಯೇ ಒಂದಿಷ್ಟು ದಿನ ನರೇಂದ್ರ ಮೋದಿ ಹೋದಲ್ಲಿ-ಬಂದಲ್ಲಿ ಪಸ್ಮಂದಾ ಮುಸ್ಲಿಂಮರ ಬಗ್ಗೆ ಕಕ್ಕುಲಾತಿಯಿಂದ ಮಾತನಾಡಲು ತೊಡಗಿದ್ದರು. ಮುಸ್ಲಿಮರಲ್ಲಿ ಕೆಳಜಾತಿಗಳಿಂದ ಮತಾಂತರವಾಗಿ ಬಂದವರು ಎಂಬಂತಿರುವ ಈ ಸಮೂಹವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದಿರುವುದನ್ನು ಉಪಯೋಗಿಸಿಕೊಂಡು ಅದನ್ನು ಮುಸ್ಲಿಂ ಮತಬ್ಯಾಂಕಿನಿಂದ ಈಚೆ ಸೆಳೆದು ತರುವ ಯತ್ನದಂತೆ ಇತ್ತದು. ಆದರೆ, ಕಟ್ಟರ್ ಹಿಂದು ಅನುಯಾಯಿಗಳಿಗೆ ಇದು ತುಷ್ಟೀಕರಣದಂತೆ ಕಂಡಿದ್ದರಿಂದಲೋ ಅಥವಾ ಬಿಜೆಪಿಗೆ ಅದರಿಂದ ಮತಗಳೇನೂ ಬರದು ಎಂಬುದು ಪಕ್ಕಾ ಆಗಿದ್ದರಿಂದಲೋ, ಒಟ್ಟಿನಲ್ಲಿ ಪಸ್ಮಂದಾ ಮುಸ್ಲಿಮರ ಉಲ್ಲೇಖದ ತೀವ್ರತೆ ಕಮ್ಮಿ ಆಯಿತು. 
ಹೀಗಾಗಿ, ಒಬಿಸಿ- ಎಸ್ಸಿಎಸ್ಟಿ – ಮುಸ್ಲಿಮರು ಈ ಎಲ್ಲ ವಿಭಾಗಗಳಲ್ಲಿ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿ ಪಕ್ಷಗಳ ಆಟ ಮತ್ತು ಸಮೀಕರಣಗಳು ಮುಂದುವರಿದಿವೆಯಾದರೂ ಅಲ್ಲೆಲ್ಲ ತುಂಬ ಪ್ರತಿಫಲ ಸಿಗುವ ನಿರೀಕ್ಷೆ ಏನಿಲ್ಲ. 

ಆದರೆ…

ಈ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ತುಂಬ ನಾಜೂಕಿನಿಂದ ಕಟ್ಟಿ ನಿಲ್ಲಿಸಿರುವ ಇನ್ನೊಂದು ‘ಐಡೆಂಟಿಟಿ’ಯ ಕೋಟೆಗೆ ತಾನು ಲಗ್ಗೆ ಹಾಕುವ ನಿಟ್ಟಿನಲ್ಲಿ ಮಾತ್ರ ಕಾಂಗ್ರೆಸ್ ಒಂದಿಷ್ಟು ಪರಿಣಾಮಕಾರಿ ಸಿದ್ಧತೆ ಮಾಡಿದೆ ಎಂದು ಹೇಳಬಹುದು. ಈ ಐಡೆಂಟಿಟಿಯ ಮತಬ್ಯಾಂಕಿನ ಮೇಲೆ ಮೋದಿಯ ಬಿಜೆಪಿಗಿರುವ ಪಾರಮ್ಯವನ್ನು ಮುರಿಯಬೇಕಿರುವುದು ಮುಂದಿನ ದಿನಗಳಲ್ಲಾದರೂ ಕಾಂಗ್ರೆಸ್ಸಿಗೆ ತುಂಬ ಅನಿವಾರ್ಯವೇ ಹೌದು. 

ಯಾವುದದು ಮತಬ್ಯಾಂಕಿನ ಸಮೀಕರಣದ ಹೊಸ ಐಡೆಂಟಿಟಿ? ಆ ಐಡೆಂಟಿಟಿ ಎಂದರೆ- ಮಹಿಳೆ!:
ಗಮನಿಸಿ. ನಾವಿಲ್ಲಿ ರಾಜಕಾರಣ ಮತ್ತು ಮತಬ್ಯಾಂಕಿಗೆ ಸಂಬಂಧಿಸಿ ಐಡೆಂಟಿಟಿ ಎಂದು ಮಾತನಾಡುವುದರ ಅರ್ಥ ಏನೆಂದರೆ- ಅದು ಒಂದು ಸಮೂಹವಾಗಿ ಯಾರದ್ದೋ ಒಬ್ಬರ ಬೆನ್ನಿಗೆ ಪ್ರಬಲವಾಗಿ ನಿಲ್ಲುತ್ತದೆ ಎಂಬರ್ಥದಲ್ಲಿ. ಮಹಿಳೆಯ ವಿಚಾರದಲ್ಲಿ ಮತಬ್ಯಾಂಕ್ ಐಡೆಂಟಿಟಿ ಎಂಬ ಪರಿಕಲ್ಪನೆ ಏಕೆಂದರೆ, ಆಕೆ ತನ್ನ ಜಾತಿ, ಪ್ರದೇಶ ಇತ್ಯಾದಿ ಐಡೆಂಟಿಟಿಗಳನ್ನೆಲ್ಲ ಗೌಣವಾಗಿಸಿ ಮತದಾನದ ಸಂದರ್ಭದಲ್ಲಿ ತಾನೊಬ್ಬ ಮಹಿಳೆಯಾಗಿ ಇಂಥವರ ಬೆನ್ನಿಗೆ ನಿಲ್ಲುತ್ತೇನೆ, ಮತ ಚಲಾಯಿಸುತ್ತೇನೆ ಎಂದು ನಿರ್ಧರಿಸಿದಾಗ ಅದೊಂದು ಮತಬ್ಯಾಂಕ್ ಐಡೆಂಟಿಟಿ ಎಂದಾಗುತ್ತದೆ. 

2019ರ ಲೋಕಸಭೆ ಫಲಿತಾಂಶವನ್ನು ವಿಶ್ಲೇಷಿಸಿ ಬಂದಿರುವ ಕೆಲವು ಅಧ್ಯಯನ ವರದಿಗಳು ಆ ಚುನಾವಣೆಯಲ್ಲಿ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸಿದ್ದರು ಎಂಬುದನ್ನು ಸಾರಿವೆ. ಉತ್ತರ ಪ್ರದೇಶ ಸೇರಿದಂತೆ ಹಿಂದಿ ಭಾಷಿಕ ಹಾಗೂ ಈಶಾನ್ಯ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಸಹ ಮಹಿಳೆಯರು ಪುರುಷರನ್ನು ಮೀರಿಸುವ ಪ್ರಮಾಣದಲ್ಲಿ ಮತದಾನದಲ್ಲಿ ಪಾಲ್ಗೊಂಡಲ್ಲೆಲ್ಲ ಬಿಜೆಪಿ ಗೆದ್ದಿರುವುದನ್ನು ಎಕ್ಸಿಸ್-ಮೈ ಇಂಡಿಯಾ ಹಾಗೂ ಲೋಕನೀತಿ-ಸಿ ಎಸ್ ಡಿ ಎಸ್ ಇತ್ಯಾದಿ ಸರ್ವೆಗಳು ವಿಶ್ಲೇಷಿಸಿವೆ. 

ಯಾರು ಯಾವ ಪಕ್ಷಕ್ಕೆ ಮತ ಹಾಕಿದರು ಎಂಬ ಅಂಕಿಸಂಖ್ಯೆಗಳೇನೂ ಯಾರಿಗೂ ಸಿಕ್ಕುವುದಿಲ್ಲವಾದರೂ ಈ ಮೇಲೆ ಉದಾಹರಿಸಿದ ಸರ್ವೆಗಳು ಕೆಲವು ತರ್ಕಗಳನ್ನಿಟ್ಟುಕೊಂಡು ಚುನಾವಣೋತ್ತರವಾಗಿ ಈ ಲೆಕ್ಕಾಚಾರ ಮಾಡಿರುತ್ತವೆ. 1962ರಿಂದ ಚುನಾವಣಾ ಆಯೋಗವು ಒಂದು ಪ್ರದೇಶದಲ್ಲಾದ ಮತದಾನದಲ್ಲಿ ಮಹಿಳೆಯರ ಪಾಲೆಷ್ಟು, ಪುರುಷರ ಪಾಲೆಷ್ಟು ಎಂಬ ಸಂಖ್ಯೆಯನ್ನಂತೂ ಕೊಡುತ್ತದೆ. ಇದನ್ನಿಟ್ಟುಕೊಂಡು, ಒಂದು ನಿರ್ದಿಷ್ಟ ಮತಕ್ಷೇತ್ರದಲ್ಲಿ ಬಿಜೆಪಿ ಇಂತಿಷ್ಟು ಮತದಿಂದ ಗೆದ್ದಿರಬೇಕಾದರೆ ಅದರಲ್ಲಿ ಮಹಿಳೆಯರ ಮತಗಳೆಷ್ಟಿರುತ್ತವೆ ಎಂದು ಲೆಕ್ಕ ಹಾಕಬಹುದು. ಹೀಗಾಗಿ, ಮೋದಿ ಪ್ರಣೀತ ಬಿಜೆಪಿಗೆ ಮತ ಹಾಕುವಾಗ ಮಹಿಳೆಯರ ದೊಡ್ಡವರ್ಗವೊಂದು ತಾನ್ಯಾವ ಜಾತಿ-ಅಭ್ಯರ್ಥಿಯದ್ಯಾವ ಜಾತಿ ಎಂಬುದನ್ನು ಮೀರಿ ಮಹಿಳೆಯಾಗಿ ಯೋಚಿಸುತ್ತಿದೆ ಎಂದಾಯಿತು.

ಇದೇಕೆ ಹೀಗೆ ಎಂಬುದಕ್ಕೆ ನಮಗೆ ತರ್ಕಗಳೂ ಸಿಗುತ್ತ ಹೋಗುತ್ತವೆ. ಪ್ರಧಾನಿ ಮೋದಿಯವರ ಬಾಯಿಂದ ಬರುವ ಕೆಲವು ಪದಪುಂಜಗಳನ್ನು ಕೇಳಿದರೆ ಹೊಳಹು ಸಿಗುತ್ತದೆ. ಇಜ್ಜತ್ ಘರ್ ಎಂಬ ಪದವನ್ನು ಶೌಚಾಲಯಗಳಿಗೆ ಟಂಕಿಸಿದರು ಮೋದಿ. ಅಂದರೆ, ಗ್ರಾಮೀಣ ಭಾಗದ 10 ಕೋಟಿ ಮನೆಗಳಿಗೆ ಕೇವಲ ಶೌಚಾಲಯ ಕಟ್ಟಿಸಿಕೊಟ್ಟಿಲ್ಲ, ಬದಲಿಗೆ ಆ ಮೂಲಕವಾಗಿ ಬೆಳಕು ಹರಿಯುವ ಮೊದಲೇ ಬಯಲಲ್ಲಿ ಶೌಚಕ್ಕೆ ಕೂರಬೇಕಿದ್ದ ಮಹಿಳೆಯ ಸಮ್ಮಾನ ರಕ್ಷಿಸುವ ಇಟ್ಟಿಗೆಯ ಗೂಡದು ಎಂಬ ಭಾವಸಂದೇಶ ಅಲ್ಲಿದೆ. ಅದು ಮನೆ ಕೊಡುವ ಆವಾಸ್ ಯೋಜನೆ ಇದ್ದಿರಬಹುದು, ಗ್ಯಾಸ್-ಜನಧನ ಖಾತೆಗಳಿದ್ದಿರಬಹುದು ಅಲ್ಲೆಲ್ಲ ಬಿಪಿಎಲ್ ಮಹಿಳೆಯನ್ನೇ ಮುಖ್ಯಸ್ಥೆಯನ್ನಾಗಿಸಲಾಗುತ್ತಿದೆ. 

ಇದನ್ನೂ ಓದಿ: Indian Navy Power: ಸೊಮಾಲಿಯಾದ ಕಡಲ್ಗಳ್ಳರನ್ನು ಬಗ್ಗುಬಡಿದು ಜಗತ್ತಿಗೆ ಸಂದೇಶ ನೀಡಿದೆ ಭಾರತದ ಕ್ಷಾತ್ರ!

ಲಖ್ ಪತಿ ದೀದಿ…ಮೋದಿಯವರ ಬಾಯಿಂದ ಆಗೀಗ ಕೇಳುವ ಮತ್ತೊಂದು ಪದಪುಂಜ. ಕೇಂದ್ರ ಸರ್ಕಾರದ ಪ್ರೋತ್ಸಾಹವನ್ನು ಹೊಂದಿರುವ ಮಹಿಳಾ ಸ್ವಸಹಾಯ ಸಂಘಗಳಿಂದ ಯಾರೆಲ್ಲ ಮಹಿಳೆಯರು ವಾರ್ಷಿಕವಾಗಿ 1 ಲಕ್ಷ ರುಪಾಯಿಗಳಿಗಿಂತ ಹೆಚ್ಚಿನ ಆದಾಯ ಪಡೆಯುತ್ತಿದ್ದಾರೋ ಅವರೆಲ್ಲ ಲಖ್ ಪತಿ ದೀದಿಯರು. ಇವರ ಮಾಸಿಕ ಆದಾಯ 10,000 ರುಪಾಯಿಗಳ ಸರಾಸರಿಯನ್ನು ಕನಿಷ್ಠ ನಾಲ್ಕು ಕೃಷಿ ಋತುವಿನವರೆಗೆ ಅಥವಾ 4 ವ್ಯವಹಾರದ ಸೀಸನ್‌ವರೆಗೆ ಕಾಪಾಡಿಕೊಂಡಿರಬೇಕು. ಅದಾಗಲೇ ಅಂಥ 1 ಕೋಟಿ ಲಖ್ ಪತಿ ದೀದಿಯರು ದೇಶದಲ್ಲಿ ಸೃಷ್ಟಿಯಾಗಿದ್ದಾರೆ. ಸ್ವಯಂ ಉದ್ಯೋಗ ಹಾಗೂ ವಹಿವಾಟು ನಿರ್ವಹಣೆಗಳಲ್ಲಿ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯನ್ನು ಗಟ್ಟಿಗೊಳಿಸಿ 3 ಕೋಟಿ ಲಖ್ ಪತಿ ದೀದಿಯರನ್ನು ಸೃಷ್ಟಿಯಾಗಿಸಬೇಕೆಂಬುದು ಈ ಯೋಜನೆಯ ಗುರಿ. ಎಸ್ ಬಿ ಐ ವರದಿಯೊಂದರ ಪ್ರಕಾರ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರ ಆದಾಯವು 2019 ಮತ್ತು 2024ರ ನಡುವೆ ಶೇಕಡ 207ರ ಏರಿಕೆ ಕಂಡಿದೆ.

ಮೋದಿ ಮುಖ ನೋಡಿ ಮತ ಹಾಕುವ ಸಂದರ್ಭ ಬಂದಾಗ ತಾನು ಜಾಟಳೋ, ಕುಮ್ರಿಯೊ, ಒಕ್ಕಲಿಗಳೋ, ದಲಿತೆಯೋ ಎಂದು ತಲೆಕೆಡಿಸಿಕೊಳ್ಳದೇ ತನ್ನನ್ನು ಕೇವಲ ಫಲಾನುಭವಿಯಾಗಿ ನೋಡಿಕೊಳ್ಳುವಂತೆ ಮೇಲೆ ವಿವರಿಸಿದ ಹೆಜ್ಜೆಗಳು ನೋಡಿಕೊಳ್ಳುತ್ತವೆ. 

ಹೀಗೆಲ್ಲ ಮೋದಿ ಕಟ್ಟಿಕೊಂಡಿರುವ ಕೋಟೆಯನ್ನು ಗುರುತಿಸಿ ಅದಕ್ಕೆ ಲಗ್ಗೆ ಹಾಕುವ ಯತ್ನವನ್ನು ಕಾಂಗ್ರೆಸ್ ವಿಧಾನಸಭೆ ಚುನಾವಣೆ ಹಂತದಲ್ಲಿ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶಗಳಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿ ಮಾಡಿದೆ. ಇಲ್ಲೆಲ್ಲ ಅದು ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಹಲವು ಭಾಗ್ಯಗಳನ್ನು ಪ್ರಕಟಿಸಿತು. ಕರ್ನಾಟಕದಲ್ಲಿ ಬಿಜೆಪಿ ವೈಫಲ್ಯದ ವಿರುದ್ಧ ಜನ ಮತ ಕೊಟ್ಟರು ಹೊರತು ಗ್ಯಾರಂಟಿಗಲ್ಲ ಎಂದೆಲ್ಲ ವಾದಿಸುವ ಅವಕಾಶಗಳಿದೆಯಾದರೂ, ಗೃಹಲಕ್ಷ್ಮೀ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಗಳನ್ನು ಬಹುತೇಕರು ಖುಷಿಯಿಂದಲೇ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಯಾರಿಗೂ ತೋರುವ ಸತ್ಯ. ಅಲ್ಲದೇ, ಮಹಿಳೆಯರ ಕೈಗೆ ಹಣ ಇಡುವ ಯಾವುದೇ ಯೋಜನೆ ದುಂದು ಅಥವಾ ಪುಕ್ಕಟೆ ಅಲ್ಲ, ಅದನ್ನಾಕೆ ಕುಟುಂಬದ ಆರ್ಥಿಕ ಉನ್ನತಿಗೆ ಸೂಕ್ತವಾಗಿಯೇ ಬಳಸಿಕೊಳ್ಳುತ್ತಾಳೆ ಎಂಬ ವಾದವೀಗ ಗಟ್ಟಿಯಾಗಿದೆ. 
ಇದರ ಮುಂದುವರಿದ ಭಾಗ ಎಂಬಂತೆ, ಕಾಂಗ್ರೆಸ್ ತನ್ನ ಲೋಕಸಭೆ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ನೀಡಿರುವ ಭರವಸೆಗಳನ್ನು ಗಮನಿಸಬೇಕು. 

ಇದನ್ನೂ ಓದಿ: Pak Afghan Conflict: ಸಡಿಲವಾಯ್ತು ಆಫ್ಘಾನ್‌ನೊಂದಿಗಿನ ಪಾಕ್‌ ಸಖ್ಯ, ತಾಲಿಬಾನಿಗಳಿಗೂ ಈಗ ಭಾರತವೇ ಮುಖ್ಯ!

ಯಾವುದೇ ಷರತ್ತಿಲ್ಲದೇ ಬಡ ಕುಟುಂಬದ ಪ್ರತಿ ಮಹಿಳೆಗೆ ವಾರ್ಷಿಕ ಒಂದು ಲಕ್ಷ ರುಪಾಯಿಗಳನ್ನು ನೇರ ವರ್ಗಾವಣೆ ಮಾಡುವುದಾಗಿ ಕಾಂಗ್ರೆಸ್ ಹೇಳಿದೆ. ಬಡವರೆಂದರೆ ಯಾರೆಲ್ಲ? ದುಡಿಯುವುದೇ ಬೇಡವೇ? ಇದಕ್ಕೆ ಹಣವನ್ನು ಯಾರಿಗೆ ತೆರಿಗೆ ಹಾಕಿ ಹೊಂದಿಸುತ್ತಾರೆ ಎಂದೆಲ್ಲ ಚರ್ಚಿಸಬಹುದು. ಆದರೆ ಕೊನೆಗೂ ಮುಖ್ಯವಾಗುವುದು ಈ ಪ್ರಲೋಭನೆಯನ್ನು ಕಾಂಗ್ರೆಸ್ ಆರ್ಥಿಕವಾಗಿ ಬಡವಾಗಿರುವ ಮಹಿಳೆಗೆ ಪರಿಣಾಮಕಾರಿಯಾಗಿ ನಾಟಿಸಿ ಮತ ಸೆಳೆಯುತ್ತದಾ ಇಲ್ಲವಾ ಎಂಬುದರಲ್ಲಷ್ಟೆ. 2025ರ ನಂತರ ಕೇಂದ್ರ ಸರ್ಕಾರದ ನೌಕರಿಗಳಲ್ಲಿ ಮಹಿಳೆಗೆ ಶೇ. 50ರ ಮೀಸಲು ಎಂಬ ಇನ್ನೊಂದು ಭರವಸೆಯ ಅಸ್ತ್ರವನ್ನೂ ಕಾಂಗ್ರೆಸ್ ಪ್ರಯೋಗಿಸಿದೆ. 

ಅಂತೂ ಮಹಿಳಾ ಮತದಾರರ ವರ್ಗ ಎಂಬುದೀಗ ಎಲ್ಲ ಪಕ್ಷಗಳಿಗೆ ರಣಕಣ. ಹೀಗೆಲ್ಲ ಮಹಿಳೆಯರನ್ನು ಖುಷಿಗೊಳಿಸುತ್ತಿರುವ ಮಾದರಿಗಳ ಪೈಕಿ ಮೋದಿಯದ್ದು ಸರಿಯಾ ಅಥವಾ ಕಾಂಗ್ರೆಸ್ಸಿನದ್ದಾ, ಯಾವುದು ಬಿಟ್ಟಿ, ಇನ್ಯಾವುದು ಬಲವರ್ಧನೆ ಎಂಬುದನ್ನೆಲ್ಲ ಆಸಕ್ತರು ಅವರವರ ಭಾವಕ್ಕೆ ತಕ್ಕಂತೆ ಚರ್ಚಿಸಬಹುದು. ಆದರೆ ಭಾರತೀಯ ರಾಜಕಾರಣದಲ್ಲಿ ಮಹಿಳಾ ಮತಬ್ಯಾಂಕ್ ಅನ್ನು ಕ್ರೋಢಿಕರಿಸಿ ತಮ್ಮತ್ತ ಸೆಳೆದುಕೊಳ್ಳುವ ಟ್ರೆಂಡ್ ಮತ್ತು ಈ ಕುರಿತಾದ ಹಣಾಹಣಿ ಇನ್ನೂ ಹಲವು ವರ್ಷಗಳವರೆಗೆ ಜಾರಿಯಲ್ಲಿರುತ್ತದೆ ಎಂಬುದನ್ನಂತೂ ಅರ್ಥಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಹ ಗಂಡ ಸೂಚಿಸಿದ ಅಭ್ಯರ್ಥಿಗೆ ಹೆಂಡತಿಯ ಮತ ಎಂಬಂತಹ ಸನ್ನಿವೇಶ ಹೆಚ್ಚೂಕಡಿಮೆ ಇಲ್ಲವಾಗಿದೆ. ಹಲವು ಬಗೆಯ ಇಷ್ಟಾನಿಷ್ಟ, ಆ ಹೊತ್ತಿನ ಪ್ರಲೋಭನೆ, ಜಾತಿ ಸೇರಿದಂತೆ ಹಲವು ಐಡೆಂಟಿಟಿಗಳಲ್ಲಿ ಅಗಾಧವಾಗಿ ವಿಭಜಿತವಾಗಿರುವ ಪುರುಷ, ಕೇವಲ ಪುರುಷ ಎಂಬ ಐಡೆಂಟಿಟಿಯಲ್ಲಿ ಮತಬ್ಯಾಂಕ್ ಆಗಲಾರ. ಇವರಿಗೆ ಹೋಲಿಸಿದರೆ ಫಲಾನುಭವಿ ಮಹಿಳೆ ಒಂದು ಕ್ರೋಢೀಕೃತ ಮತಬ್ಯಾಂಕ್ ಆಗುವ ಅವಕಾಶ ಹೆಚ್ಚು. ಅದಲ್ಲದೇ, ಮೋದಿ ಸರ್ಕಾರವೇ ಸಂಸತ್ತಿನಲ್ಲಿ ಪಾಸು ಮಾಡಿರುವ ಮಹಿಳಾ ಮೀಸಲು ವಿಧೇಯಕವು, ಜನಗಣತಿ ಮುಗಿಯುತ್ತಲೇ ಜಾರಿಗೆ ಬರುವ ಹಂತದಲ್ಲಿದೆ. ಆಗ ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಮಹಿಳೆಯರಿಗೆ ಕಡ್ಡಾಯ 33 ಶೇಕಡ ಸ್ಥಾನಗಳು ಇರಬೇಕಾಗುತ್ತವೆ. ಹಾಗೆಂದೇ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿರುವ ಚುನಾವಣಾ ರಾಜಕಾರಣದ ಧ್ರುವೀಕರಣದ ಆಟಗಳು ಈಗಷ್ಟೇ ಪ್ರಾರಂಭವಾಗಿವೆ. ಈ ವಿಚಾರದಲ್ಲಿ ಮೋದಿಯ ಮುನ್ನಡೆಗೆ ಪ್ರತಿಪಕ್ಷ ಮೈತ್ರಿಗಳು 2024ರ ಲೋಕಸಭೆ ಚುನಾವಣೆಯಲ್ಲಿ ಗಂಭೀರ ಸವಾಲೊಡ್ಡಿಯಾವಾ ಎಂಬುದು ಈಗಿರುವ ಕುತೂಹಲ. 

ಅಂದಹಾಗೆ, ರಾಜಕಾರಣದ ಚರ್ಚೆ ಅಂದರೆ ಅದು ತಮಗೆ ಮಾತ್ರ ಸಂಬಂಧಿಸಿದ್ದು, ಮಹಿಳೆಯರಿಗೆ ನೋಡುವುದಕ್ಕೆ-ಚರ್ಚಿಸುವುದಕ್ಕೆ ಟಿವಿ ಧಾರಾವಾಹಿಗಳಿವೆ ಅಂತ ಅಂದುಕೊಂಡಿರುವ ಗಂಡಸಿರಿಗೆಲ್ಲ ಗೊತ್ತಿರಬೇಕು…ಮತಬ್ಯಾಂಕ್ ರಾಜಕಾರಣದ ಸ್ಕ್ರಿಪ್ಟ್ ಅದಾಗಲೇ ಬದಲಾಗಿಬಿಟ್ಟಿದೆ!

ಇದನ್ನೂ ಓದಿ: Narendra Modi: ಟ್ವಿಟರ್-ವಾಟ್ಸಾಪ್ ಹಳೇದಾಯ್ತು; ಈ ಬಾರಿ ಮೋದಿ ಚುನಾವಣೆ ಪ್ರಚಾರಕ್ಕೆ ʼಭಾಷಿಣಿʼಯ ಬಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Kanhaiya Kumar: ದೆಹಲಿಯ ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Kanhaiya Kumar
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ (Kanhaiya Kumar) ಅವರು ಪ್ರಚಾರ ಮಾಡುವ ವೇಳೆ ಅವರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪೂರ್ವ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ಕನ್ಹಯ್ಯ ಕುಮಾರ್‌ ಅವರು ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಇದೇ ವೇಳೆ, ಏಳೆಂಟು ಜನ ಅವರಿಗೆ ಹಾರ ಹಾಕಲು ಬಂದಿದ್ದು, ಹಾರ ಹಾಕಿದ ಕೂಡಲೇ ಕಾಂಗ್ರೆಸ್‌ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವು ಜನ ಅವರ ಮೇಲೆ ಮಸಿ ಎರಚಿದ್ದಾರೆ.

ಕನ್ಹಯ್ಯ ಕುಮಾರ್‌ ಅವರ ಮೇಲೆ ಹಲ್ಲೆ ನಡೆದ ಬಳಿಕ ಬ್ರಹ್ಮಪುರಿಯ ಆಪ್‌ ಕೌನ್ಸಿಲರ್‌ ಛಾಯಾ ಗೌರವ್‌ ಶರ್ಮಾ ಅವರು ದೂರು ದಾಖಲಿಸಿದ್ದಾರೆ. “ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕನ್ಹಯ್ಯ ಕುಮಾರ್‌ ಮೇಲೆ ದಾಳಿ ನಡೆಸಿದ ಏಳೆಂಟು ಜನರಲ್ಲಿ ಇಬ್ಬರು ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕೆಲ ವರ್ಷಗಳ ಹಿಂದೆ ಕನ್ಹಯ್ಯ ಕುಮಾರ್‌ ದೇಶ ಒಡೆಯುವ (ಟುಕ್ಡೆ ಗ್ಯಾಂಗ್‌ ಎಂದೇ ಖ್ಯಾತಿ) ಹೇಳಿಕೆ ನೀಡಿದ್ದು, ಸೇನೆಯ ವಿರುದ್ಧ ಮಾತನಾಡಿದ ಹಿನ್ನೆಲೆಯಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ದಾಳಿಗೆ ನಿಖರ ಕಾರಣ ಗೊತ್ತಾಗಿಲ್ಲ.

ಕನ್ಹಯ್ಯ ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ

ಕನ್ಹಯ್ಯ ಕುಮಾರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದಕ್ಕೆ ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಲ್ಲಿಯೇ ವಿರೋಧ ವ್ಯಕ್ತವಾಗಿತ್ತು. ಪಕ್ಷದ ಪ್ರಧಾನ ಕಚೇರಿ ಎದುರು ಜಮಾನಿಸಿದ ನೂರಾರು ಕಾಂಗ್ರೆಸ್‌ ಕಾಂಗ್ರೆಸಿಗರು ಹೊರಗಿನವರು ಬೇಡ, ಸ್ಥಳೀಯರನ್ನೇ ಕಣಕ್ಕಿಳಿಸಿ ಎಂದು ಒತ್ತಾಯಿಸಿದ್ದರು. ಮೌಜ್‌ಪುರ ಮೆಟ್ರೋ ಸ್ಟೇಷನ್ ಬಳಿ ಪ್ರತಿಭಟನೆ ನಡೆದಿದ್ದು, ನಮಗೆ ಸ್ಥಳೀಯ ನಾಯಕರೇ ಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.‌

ಈಶಾನ್ಯ ದೆಹಲಿಯಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸುತ್ತಿದ್ದು, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. 37 ವರ್ಷದ ಕುಮಾರ್ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ, ಅವರು ಬಿಹಾರದ ಬೆಗುಸರಾಯ್​ನಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲಿ ಅವರು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ಅವರು 2021ರಲ್ಲಿ ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading

ದೇಶ

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Narendra Modi: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra modi
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಮುಗಿದರೂ ಚುನಾವಣೆ ಅಬ್ಬರ ಮಾತ್ರ ಮುಗಿದಿಲ್ಲ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವುದರಿಂದ ರಾಜಕೀಯ ನಾಯಕರು ತೀಕ್ಷ್ಣ ಹೇಳಿಕೆ, ವಾಗ್ದಾಳಿ, ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಳ ವಿರುದ್ಧ ವಾಗ್ಬಾಣ ಬಿಡುತ್ತಿದ್ದಾರೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು (Ram Mandir) ನೆಲಸಮಗೊಳಿಸುತ್ತಾರೆ” ಎಂದು ಶುಕ್ರವಾರ (ಮೇ 17) ವಾಗ್ದಾಳಿ ನಡೆಸಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಅವರು ರಾಮಲಲ್ಲಾನನ್ನು ಮತ್ತೆ ಟೆಂಟ್‌ಗೆ ಕಳುಹಿಸುತ್ತಾರೆ. ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿ ಮೋದಿ ಕಾಂಗ್ರೆಸ್‌ಗೆ ಕುಟುಕಿದರು. “ದೇಶಾದ್ಯಂತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯುವಾಗ ದೇಶವನ್ನು ವಿಭಜನೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂತು. ಆಗ ಇಡೀ ದೇಶ ಅಚ್ಚರಿಗೀಡಾಯಿತು. ದೇಶವನ್ನು ವಿಭಜನೆ ಮಾಡಲಾಗುತ್ತದೆಯೇ ಎಂಬ ಆತಂಕ ಮೂಡಿತು. ಆದರೆ, ಕಾಂಗ್ರೆಸಿಗರು ದೇಶವನ್ನು ಇಬ್ಭಾಗ ಮಾಡಿದರು. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸಿಗರಿಗೆ ದೇಶ ಮುಖ್ಯವಲ್ಲ. ಅವರಿಗೆ ತಮ್ಮ ಕುಟುಂಬ ಮುಖ್ಯ, ಅಧಿಕಾರ ಮುಖ್ಯ” ಎಂದು ಟೀಕಿಸಿದರು.

ಬೀಗ ಜಡಿಯುತ್ತಾರೆ ಎಂದಿದ್ದ ಮೋದಿ

ಕೆಲ ದಿನಗಳ ಹಿಂದೆಯೂ ಮೋದಿ ಅವರು ರಾಮಮಂದಿರ ಹಾಗೂ ಕಾಂಗ್ರೆಸ್‌ ಬಗ್ಗೆ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂದಿದ್ದರು.

ಇದನ್ನೂ ಓದಿ: ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ದೇಶ

ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದ್ದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದ್ದರು. ಈಗ ಮೋದಿ ಕೂಡ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: “ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ಅದರ ಬಳಿ ಅಣು ಬಾಂಬ್‌ಗಳು ಇವೆ. ಹಾಗಾಗಿ, ಪಾಕಿಸ್ತಾನಕ್ಕೆ ಭಾರತ ಗೌರವ ನೀಡಬೇಕು” ಎಂಬುದಾಗಿ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಬಳಿ ಅಣು ಬಾಂಬ್‌ ಇವೆ ಎಂಬುದಾಗಿ ಕಾಂಗ್ರೆಸ್‌ (Congress) ಹೇಳುತ್ತದೆ. ಆದರೆ, ಅವುಗಳನ್ನು ನಿರ್ವಹಣೆ ಮಾಡುವಷ್ಟು ಹಣವೇ ಪಾಕಿಸ್ತಾನದ ಬಳಿ ಇಲ್ಲ” ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ನರೇಂದ್ರ ಮೋದಿ ಮಾತನಾಡಿದರು. “ಪಾಕಿಸ್ತಾನದ ಕುರಿತು ಕಾಂಗ್ರೆಸ್‌ ನಾಯಕರು ಹೆಚ್ಚು ಚಿಂತಿತರಾಗಿದ್ದಾರೆ. ನೆರೆಯ ರಾಷ್ಟ್ರದ ಬಳಿ ಅಣು ಬಾಂಬ್‌ಗಳಿವೆ ಎಂಬುದಾಗಿ ಅವರು ಹೆದರಿಸುತ್ತಾರೆ. ಆದರೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್‌ಗಳಿವೆ ಹಾಗೂ ಅವುಗಳನ್ನು ನಿರ್ವಹಣೆ ಮಾಡಲು ಆಗದಂತಹ, ಅದಕ್ಕೆ ಹಣವೇ ಇಲ್ಲದಂತಹ ಪರಿಸ್ಥಿತಿ ಪಾಕಿಸ್ತಾನಕ್ಕೆ ಎದುರಾಗಿದೆ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ನಾಯಕರನ್ನು ಜನ ಯಾವುದೇ ಕಾರಣಕ್ಕೂ ನಂಬಬಾರದು. ಅವರು ವೋಟ್‌ ಜಿಹಾದ್‌ಗೆ ಕರೆ ನೀಡುತ್ತಾರೆ. ಸಮಾಜವನ್ನು ಒಡೆಯುವುದು ಅವರ ಉದ್ದೇಶವಾಗಿದೆ. ಮಾಫಿಯಾವನ್ನು ಸಮಾಜವಾದಿ ಪಕ್ಷವು ಈಗಲೂ ಬೆಂಬಲಿಸುತ್ತದೆ. ಇನ್ನು, ಪಾಕಿಸ್ತಾನವು ಭಾರತದ ಮೇಲೆ ದಾಳಿ ಮಾಡುತ್ತಲೇ ಬಂದಿತು. ಆದರೆ, ಕಾಂಗ್ರೆಸ್‌ ದಾಳಿ ಮಾಡಿದವರಿಗೇ ಕ್ಲೀನ್‌ಚಿಟ್‌ ನೀಡುವ ಮೂಲಕ ತನ್ನ ನಿಲುವು ಯಾರ ಪರ ಎಂಬುದನ್ನು ಸಾಬೀತುಪಡಿಸಿತು” ಎಂದು ಮೋದಿ ಹೇಳಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Continue Reading
Advertisement
ipl 2024
ಪ್ರಮುಖ ಸುದ್ದಿ23 mins ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ46 mins ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ1 hour ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು1 hour ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ1 hour ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ2 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ2 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Virat Kohli
ಕ್ರೀಡೆ3 hours ago

Virat kohli : ಪಾಕಿಸ್ತಾನಕ್ಕೆ ಬರುವೆ ಎಂದು ಅಲ್ಲಿನ ಪರ್ವತಾರೋಹಿಗೆ ಭರವಸೆ ಕೊಟ್ಟಿದ್ದ ವಿರಾಟ್​ ಕೊಹ್ಲಿ! ಇಲ್ಲಿದೆ ವಿಡಿಯೊ

Narendra modi
ದೇಶ3 hours ago

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ5 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ19 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌