Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ! - Vistara News

Lok Sabha Election 2024

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭೆ ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

VISTARANEWS.COM


on

Lok Sabha Election 2024 Woman casts her vote with the help of oxygen elderly woman dies after casting her vote
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೊದಲೆರಡು ಗಂಟೆಗಳ ಮತದಾನ ಚುರುಕು, ಶೇ.9.21 ಚಲಾವಣೆ, ಕೆಲವೆಡೆ ಚಕಮಕಿ

ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಹೊತ್ತಿನಲ್ಲಿ ಚುರುಕಾಗಿ ನೆರವೇರಿತು. 7 ಗಂಟೆಗೆ ಮತದಾನ ಆರಂಭವಾಗಿದ್ದು, ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂತು.

ಯಾವ ಕ್ಷೇತ್ರದಲ್ಲಿ ಎಷ್ಟೆಷ್ಟು ಮತ ಚಲಾವಣೆ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಗಂಟೆಯವರೆಗೆ 14.33% ಹಾಗೂ ಉಡುಪಿ ಜಿಲ್ಲೆಯಲ್ಲಿ 12.82% ಮತದಾನ ದಾಖಲಾಗಿದೆ. ತುಮಕೂರು 9.6%, ಚಾಮರಾಜನಗರ 7.7%, ಮಂಡ್ಯ 7.70%, ಚಿಕ್ಕಬಳ್ಳಾಪುರ 8.70%, ಹಾಸನ 8.2%, ಚಿಕ್ಕಮಗಳೂರು 11.02%, ಮೈಸೂರು 11.04% ಮತದಾನ ನಡೆದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ 9.8%, ಬೆಂಗಳೂರು ಕೇಂದ್ರ 8.14%, ಬೆಂಗಳೂರು ಉತ್ತರ 8.64%, ಬೆಂಗಳೂರು ಗ್ರಾಮಾಂತರ 8.34% ಮತದಾನ ದಾಖಲಿಸಿವೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇಳಿಕೆಯಾಗಿ, ಸಂಜೆ ಮತ್ತೆ ಏರುವ ನಿರೀಕ್ಷೆ ಇದೆ. ರಾಜಧಾನಿಯಲ್ಲಿ ಹಲವಾರು ಗಣ್ಯರು ಮುಂಜಾನೆಯೇ ಮತ ಚಲಾಯಿಸಿದರು.

ಇನ್‌ಫೋಸಿಸ್‌ ಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಮುಂಜಾನೆ ಸರತಿ ಸಾಲಿನಲ್ಲಿ ನಿಂತು ಮತ ಹಾಕಿದರು. ನಾರಾಯಣ ಮೂರ್ತಿಯವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಿಸಿಕೊಂಡು ನೇರವಾಗಿ ಮತಗಟ್ಟೆಗೇ ಬಂದು ಮತ ಹಾಕಿ ತೆರಳಿದರು. ಕ್ರಿಕೆಟಿಗ ರಾಹುಲ್‌ ದ್ರಾವಿಡ್‌, ನಟ ನಟಿಯರಾದ ಸಪ್ತಮಿ ಗೌಡ, ಪ್ರಕಾಶ್‌ ರೈ, ಗೋಲ್ಡನ್‌ ಸ್ಟಾರ್‌ ಗಣೇಶ್, ಶರಣ್‌, ಧ್ರುವ ಸರ್ಜಾ, ಅಮೂಲ್ಯ ಮುಂತಾದವರು ಮತ ಹಾಕಿದರು. ಧಾರ್ಮಿಕ ಗಣ್ಯರಾದ ಉಡುಪಿಯ ಅಷ್ಟ ಮಠಾಧೀಶರು, ಸಿದ್ದಲಿಂಗ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ ಹಾಕಿದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ರಾಜಕೀಯ ನಾಯಕರು ಹಾಗೂ ಅಭ್ಯರ್ಥಿಗಳಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಕೆಜೆ ಜಾರ್ಜ್‌, ಜಮೀರ್‌ ಅಹಮದ್‌ ಖಾನ್‌, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ, ಸೋಮಣ್ಣ, ಪಿಸಿ ಮೋಹನ್‌ ಮೊದಲಾದವರು ಹಕ್ಕು ಚಲಾಯಿಸಿದರು. ಮತದಾನಕ್ಕೆ ಆಗಮಿಸುವ ಮುನ್ನ ಎಚ್‌ಡಿ ದೇವೇಗೌಡ, ಡಿ.ಕೆ. ಸುರೇಶ್‌, ಡಿ.ಕೆ. ಶಿವಕುಮಾರ್‌ ಮೊದಲಾದ ನಾಯಕರು ಟೆಂಪಲ್‌ ರನ್‌ ಮಾಡಿದರು.

ಇದನ್ನೂ ಓದಿ: Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

ಕೆಲವೆಡೆ ಸಣ್ಣ ಪ್ರಮಾಣದ ಚಕಮಕಿ ಕಂಡುಬಂತು. ಉಡುಪಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಮೋದ್‌ ಮತ ಹಾಕಲು ಸಂದರ್ಭ ಪ್ರಚಾರ ನಡೆಸಿದರು ಎಂದು ಬಿಜೆಪಿ ಕಾರ್ಯಕರ್ತರು ತಗಾದೆ ತೆಗೆದು ರಂಪಾಟ ನಡೆಸಿದರು. ಆನೇಕಲ್‌ನಲ್ಲಿ ಬಿಜೆಪಿ ಪೆಂಡಾಲ್‌ಗಳನ್ನು ತೆಗೆಸಿ ಕಾಂಗ್ರೆಸ್‌ ಪೆಂಡಾಲ್‌ ಹಾಕಿಸಿದ ಕುರಿತು ವಾಗ್ಯುದ್ಧ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ವ್ಯವಸ್ಥೆ ಮಾಡಲಾಗಿದ್ದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಕೆಲವೆಡೆ ಬಿಸಿಲಿನ ಝಳಕ್ಕೆ ಸರತಿಯಲ್ಲಿ ನಿಂತ ಮತದಾರರು ಅಸ್ವಸ್ಥಗೊಂಡರು. ಇವರಿಗೆ ಪ್ರಥಮ ಚಿಕಿತ್ಸೆ ಒದಗಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ಲೋಕಸಭಾ ಚುನಾವಣೆ 2024ರ 3ನೇ ಹಂತದ ಮತದಾನ ಮೇ 7 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಎಸ್‌ಪಿಯ ಅಖಿಲೇಶ್‌ ಯಾದವ್‌ ಪತ್ನಿ ಡಿಂಪಲ್ ಯಾದವ್, ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಎನ್‌ಸಿಪಿ ನಾಯಕ ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಪ್ರಮುಖರ ಅದೃಷ್ಟ ಪರೀಕ್ಷೆ (Lok Sabha Election 2024) ನಡೆಯಲಿದೆ. ಈ ಕುರಿತ ಚಿತ್ರಣ ಇಲ್ಲಿದೆ.

VISTARANEWS.COM


on

By

Lok Sabha Elections-2024
Koo

ಲೋಕಸಭಾ ಚುನಾವಣೆ 2024ರ (Lok Sabha Election 2024) 3ನೇ ಹಂತದ (3rd phase) ಮತದಾನ (voting) ಮೇ 7ರಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 95 ಸ್ಥಾನಗಳಿಗೆ ನಡೆಯಲಿದೆ. ಈ ಬಾರಿ ಕಣದಲ್ಲಿರುವ ಹಲವು ಪ್ರಮುಖ ನಾಯಕರ ಅದೃಷ್ಟ ಪರೀಕ್ಷೆ ನಡೆಯಲಿದೆ.

ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಂಡಾಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ( KS Eshwarappa), ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia), ಡಿಂಪಲ್ ಯಾದವ್ (Dimple Yadav), ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತು ಸುಪ್ರಿಯಾ ಸುಳೆ (Supriya Sule) ಸೇರಿದ್ದಾರೆ.


2024 ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಸ್ಪರ್ಧಿಸುವ ಪ್ರಮುಖ ಪಕ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಸಮಾಜವಾದಿ ಪಕ್ಷ (ಎಸ್‌ಪಿ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿವೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಅಮಿತ್ ಶಾ

ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗಾಂಧಿನಗರದಿಂದ ಎರಡನೇ ಬಾರಿಗೆ ಕಣಕ್ಕಿಳಿದಿರುವ ಅಮಿತ್ ಶಾ ಅವರಿಗೆ ಕಾಂಗ್ರೆಸ್‌ನ ಸೋನಾಲ್ ಪಟೇಲ್ ಸ್ಪರ್ಧೆ ನೀಡುತ್ತಿದ್ದಾರೆ. 1989ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಜೇಯವಾಗಿದೆ. 2019ರ ಚುನಾವಣೆಯಲ್ಲಿ ಅಮಿತ್ ಶಾ ಅವರು 5.55 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಸಿ.ಜೆ. ಚಾವ್ಡಾ ಅವರನ್ನು ಸೋಲಿಸಿದ್ದರು.

ಡಿಂಪಲ್ ಯಾದವ್

ಎಸ್‌ಪಿ ಅಭ್ಯರ್ಥಿ ಡಿಂಪಲ್ ಯಾದವ್ ಅವರು 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ‘ಮೈನ್‌ಪುರಿ’ಯಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರ ಸಮಾಜವಾದಿ ಪಕ್ಷದ ಭದ್ರಕೋಟೆ. ಡಿಂಪಲ್‌ ಯಾದವ್‌ ಅವರು ಎಸ್ಪಿ ವರಿಷ್ಠ ನಾಯಕ ಅಖಿಲೇಶ್‌ ಯಾದವ್‌ ಅವರ ಪತ್ನಿ. 2022ರಲ್ಲಿ ಎಸ್‌ಪಿ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮರಣದ ಅನಂತರ ಅವರ ಸೊಸೆ ಡಿಂಪಲ್ ಯಾದವ್ ಅವರು ಉಪಚುನಾವಣೆಯಲ್ಲಿ ಇಲ್ಲಿಂದ ಗೆದ್ದಿದ್ದರು. ಡಿಂಪಲ್ ಯಾದವ್ ಅವರು ಮೂರು ಬಾರಿ ಸಂಸದರಾಗಿದ್ದಾರೆ. ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ಜೈವೀರ್ ಸಿಂಗ್ ಕಣದಲ್ಲಿ ಇದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2024ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಮೇ 7ರಂದು ನಡೆಯಲಿರುವ ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ನ ರಾವ್ ಯದ್ವೇಂದ್ರ ಸಿಂಗ್ ಅವರ ವಿರುದ್ಧ ಕಣದಲ್ಲಿ ಇದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿಯ ಕೃಷ್ಣ ಪಾಲ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸೋಲಿಸಿದ್ದರು. ಆ ಬಳಿಕ ಸಿಂಧಿಯಾ ಬಿಜೆಪಿ ಸೇರಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ವಿದಿಶಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಮಧ್ಯಪ್ರದೇಶದಲ್ಲಿ ಬಹುಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ಸ್ಪರ್ಧಿಸುತ್ತಿದ್ದಾರೆ.

ಸುಪ್ರಿಯಾ ಸುಳೆ

ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಪವಾರ್‌ vs ಪವಾರ್‌ ಈ ಬಾರಿಯ ವಿಶೇಷ. ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಈಗ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿದ್ದಾರೆ. ಹಾಗಾಗಿ ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಹಾಲಿ ಸಂಸದೆ ಸುಪ್ರಿಯಾ ಸುಳೆ ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು.

ಕರ್ನಾಟಕದಲ್ಲಿ ಬಿಜೆಪಿ ಹಿರಿಯ ನಾಯಕ ಕೆ ಎಸ್‌ ಈಶ್ವರಪ್ಪ ಅವರು ಈ ಬಾರಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕೆ ಇಳಿದಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿಸ ಸಂಸದ ಬಿ ವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.

3ನೇ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಅಸ್ಸಾಂ: ಧುಬ್ರಿ, ಕೊಕ್ರಜಾರ್, ಬರ್ಪೇಟಾ, ಗೌಹಾಟಿ, ಬಿಹಾರದ ಝಂಜರ್ಪುರ್, ಸುಪೌಲ್, ಅರಾರಿಯಾ, ಮಾಧೆಪುರ, ಖಗಾರಿಯಾ

ಛತ್ತೀಸ್‌ಗಢ: ಸರ್ಗುಜಾ, ರಾಯ್‌ಗಢ, ಜಾಂಜ್‌ಗೀರ್-ಚಂಪಾ, ಕೊರ್ಬಾ, ಬಿಲಾಸ್‌ಪುರ್, ದುರ್ಗ್, ರಾಯ್‌ಪುರ್.

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು

ಗೋವಾ: ಉತ್ತರ ಗೋವಾ, ದಕ್ಷಿಣ ಗೋವಾ, ಗುಜರಾತ್ ನ ಕಚ್ಛ್, ಬನಸ್ಕಾಂತ, ಪಟಾನ್, ಮಹೇಶಾನಾ, ಸಬರ್ಕಾಂತ, ಗಾಂಧಿನಗರ, ಅಹಮದಾಬಾದ್ ಪೂರ್ವ, ಅಹಮದಾಬಾದ್ ಪಶ್ಚಿಮ, ಸುರೇಂದ್ರನಗರ, ರಾಜ್‌ಕೋಟ್, ಪೋರಬಂದರ್, ಜಾಮ್‌ನಗರ, ಜುನಾಗಢ, ಅಮ್ರೇಲಿ, ಭಾವನಗರ, ಆನಂದ್, ಖೇಡಾ, ಪಂಚಮಹಲ್, ದಾಹೋದ್, ವಡೋದರ, ಛೋಟಾ ಉದಯಪುರ, ಭರೂಚ್, ಭರೂಚ್, ನವಸಾರಿ, ವಲ್ಸಾದ್

ಕರ್ನಾಟಕ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

ಮಧ್ಯಪ್ರದೇಶ: ಬೇತುಲ್, ಮೊರೆನಾ, ಭಿಂಡ್, ಗ್ವಾಲಿಯರ್, ಗುಣ, ಸಾಗರ್, ವಿದಿಶಾ, ಭೋಪಾಲ್, ರಾಜ್‌ಗಢ್, ಬೇತುಲ್

ಮಹಾರಾಷ್ಟ್ರ: ಬಾರಾಮತಿ, ರಾಯಗಢ, ಧರಾಶಿವ, ಲಾತೂರ್ (SC), ಸೋಲಾಪುರ (SC), ಮಾಧಾ, ಸಾಂಗ್ಲಿ, ರತ್ನಗಿರಿ-ಸಿಂಧುದುರ್ಗ, ಕೊಲ್ಲಾಪುರ, ಹತ್ಕನಂಗಲೆ

ಉತ್ತರ ಪ್ರದೇಶ: ಸಂಭಾಲ್, ಹತ್ರಾಸ್, ಆಗ್ರಾ (SC), ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್‌ಪುರಿ, ಇಟಾಹ್, ಬುಡೌನ್, ಅಯೋನ್ಲಾ, ರಾಯ್‌ ಬರೇಲಿ

ಪಶ್ಚಿಮ ಬಂಗಾಳ: ಮಾಲ್ಡಾ ಉತ್ತರ, ಮಾಲ್ಡಾ ದಕ್ಷಿಣ, ಜಂಗಿಪುರ, ಮುರ್ಷಿದಾಬಾದ್

ಕಣದಲ್ಲಿ 1,351 ಅಭ್ಯರ್ಥಿಗಳು

ಮೇ 7ರಂದು ನಡೆಯಲಿರುವ ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 1,351 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

ಅತೀ ಹೆಚ್ಚು ನಾಮಪತ್ರ

ಮೂರನೇ ಹಂತದಲ್ಲಿ ಗುಜರಾತ್ 26 ಸಂಸದೀಯ ಕ್ಷೇತ್ರಗಳಿಂದ ಗರಿಷ್ಠ 658 ನಾಮನಿರ್ದೇಶನಗಳನ್ನು ಹೊಂದಿತ್ತು, ಅನಂತರ ಮಹಾರಾಷ್ಟ್ರವು 11 ಸ್ಥಾನಗಳಿಂದ 519 ನಾಮನಿರ್ದೇಶನಗಳನ್ನು ಹೊಂದಿದೆ. ಮಹಾರಾಷ್ಟ್ರದ ಒಸ್ಮಾನಾಬಾದ್ ಕ್ಷೇತ್ರಕ್ಕೆ ಗರಿಷ್ಠ 77 ನಾಮಪತ್ರಗಳು ಬಂದಿದ್ದು, ಛತ್ತೀಸ್‌ಗಢದ ಬಿಲಾಸ್‌ಪುರ ಕ್ಷೇತ್ರಕ್ಕೆ 68 ನಾಮಪತ್ರಗಳು ಬಂದಿವೆ ಎಂದು ಚುನಾವಣಾ ಸಮಿತಿ ತಿಳಿಸಿದೆ.

Continue Reading

ದೇಶ

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Crude Bomb:ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

VISTARANEWS.COM


on

Crude Bomb
Koo

ಪಶ್ಚಿಮ ಬಂಗಾಳ:ಲೋಕಸಭಾ ಚುನಾವಣೆ(Lok sabha Election 2024)ಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಇರುವಾಗಲೇ ಪಶ್ಚಿಮ ಬಂಗಾಳ(West Bengal)ದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಗುವೊಂದು ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಪಾಂಡುವಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಚ್ಚಾ ಬಾಂಬ್‌(Crude Bomb) ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎನ್ನಲಾಗಿದೆ.

ಘಟನೆಯ ವಿವರ:

ಇನ್ನು ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಇಂದು ಇದೇ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಳ್ಳಬೇಕಿತ್ತು. ಬೃಹತ್‌ ಸಾರ್ವಜನಿಕ ಸಭೆಯನ್ನೂ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಈ ಘಟನೆ ನಡೆದಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇನ್ನು ನಾಳೆ ನಡೆಯಲಿರುವ ಮೂರನೇ ಹಂತ ಚುನಾವಣೆಯಲ್ಲಿ ರಾಜ್ಯ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ವಾರ ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟು, ಟಿಎಂಸಿ(TMC)ಯ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಇದನ್ನೂ ಓದಿ:ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

ಮತ್ತೊಂದೆಡೆ ಅದೇ ದಿನ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ.

Continue Reading

ದೇಶ

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Terrorist Attack: ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದಾರೆ

VISTARANEWS.COM


on

Terrorist attack
Koo

ಚಂಡೀಗಡ: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ಎರಡು ದಿನಗಳ ಹಿಂದೆ ಭಾರತೀಯ ವಾಯುಪಡೆ(IAF) ಯೋಧರ ಮೇಲೆ ನಡೆದಿದ್ದ ಭಯೋತ್ಪಾದನಾ ದಾಳಿ(Terrorist Attack)ಯನ್ನು ಪ್ರತಿಪಕ್ಷದ ಇಬ್ಬರು ನಾಯಕರು ಇದೊಂದು ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್‌(Poll Stunt) ಎಂದು ಕರೆಯುವ ಮೂಲಕ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಸಿಂಗ್‌ ಚನ್ನಿ(Charanprit Singh Channi) ಮತ್ತು ರಾಷ್ಟ್ರೀಯ ಜನತಾದಳದ ತೇಜ್‌ ಪ್ರತಾಪ್‌ ಯಾದವ್‌ ಈ ದಾಳಿ ಯನ್ನು 2019ರಲ್ಲಿ ನಡೆದಿದ್ದ ಪುಲ್ವಾಮಾ ಭಯೋತ್ಪಾದನಾ ದಾಳಿಯ ಜೊತೆ ಹೋಲಿಸಿ ಇದೊಂದು ಬಿಜೆಪಿ ನಡೆಸುತ್ತಿರುವ ಚುನಾವಣಾ ಪೂರ್ವ ಸ್ಟಂಟ್‌ ಆಗಿದ್ದು ಬಿಜೆಪಿ ಇದನ್ನು ತನ್ನ ಗೆಲುವಿಗಾಗಿ ಬಳಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಪ್ರತಿಪಕ್ಷ ನಾಯಕರು ಹೇಳಿದ್ದೇನು?

ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದು, ಪುಲ್ವಾಮಾ ದಾಳಿಯಯನ್ನೂ ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ. ಚುನಾವಣೆ ಬಂದಾಗಲೆಲ್ಲಾ ಭಯೋತ್ಪಾದನಾ ದಾಳಿ ನಡೆದೇ ನಡೆಯುತ್ತದೆ

ಬಿಜೆಪಿ ನಾಯಕರು ಕಿಡಿ

ಪ್ರತಿಪಕ್ಷ ನಾಯಕರ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಬಿಜೆಪಿ ಕೆಂಡಾಮಂಡಲವಾಗಿದ್ದು, ವಾಗ್ದಾಳಿ ನಡೆಸಿದೆ. ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ ಮತ್ತು ಅದರ ಜೊತೆಗಿರುವ ಪಕ್ಷಗಳ ಮನಸ್ಥಿತಿಯನ್ನು ತೋರಿಸುತ್ತಿದೆ. ಕಳೆದ 70 ವರ್ಷಗಳಲ್ಲಿ ಸೇನೆಯನ್ನು ಬಲಪಡಿಸುವ ಬದಲು ಅದರ ಬಲವನ್ನು ಕುಗ್ಗಿಸುವ ಕೆಲಸವನ್ನೇ ಕಾಂಗ್ರೆಸ್‌ ಮಾಡಿತ್ತು. ನಾವು ಕಳೆದ 10ವರ್ಷಗಳಲ್ಲಿ ಸೇನೆಗೆ ಬಲ ತುಂಬಿದ್ದೇವೆ. ಪುಲ್ವಾಮಾದ ಬಳಿಕ ನಾವು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದೇವೆ. ಆದರೆ ಇವರು ಸಂಸತ್‌ ದಾಳಿಕೋರನ ಗಲ್ಲುಶಿಕ್ಷೆಯನ್ನು ತಪ್ಪಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದವರು ಜನ ಇದನ್ನು ಎಂದಿಗೂ ಮರೆಯಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

Continue Reading

ದೇಶ

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Narendra Modi: Narendra Modi: ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಂಡರು. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಲ್ಲೆಡೆ ಜೈಶ್ರೀರಾಮ್‌ ಎಂಬ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ ದೀರ್ಘದಂಡ ನಮಸ್ಕಾರ ಹಾಕಿದರು.

ಕಳೆದ ಜನವರಿ 22ರಂದು ನರೇಂದ್ರ ಮೋದಿ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿದ ಬಳಿಕ ಮಾಡಿದ ಬಳಿಕ ರಾಮಮಂದಿರಕ್ಕೆ ಮೊದಲ ಬಾರಿ ಭೇಟಿ ನೀಡಿದರು.

ರಾಮನಗರಿ ಅಯೋಧ್ಯೆಯಲ್ಲಿ ಭರ್ಜರಿ ರೋಡ್‌ ಶೋ ಕೈಗೊಳ್ಳುವ ಮೊದಲು ಮೋದಿ ಅವರು ರಾಮಲಲ್ಲಾನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ ಸುತ್ತ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಅಯೋಧ್ಯೆ ಭೇಟಿ ನೀಡುವ ಮೊದಲು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ದೌರಾಹ್ರ ಲೋಕಸಭೆ ಕ್ಷೇತ್ರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡರು.

ರಾಮಲಲ್ಲಾ ದರ್ಶನದ ಬಳಿಕ ಮೋದಿ ಅವರು ಅಯೋಧ್ಯೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ವರೆಗೆ ರೋಡ್‌ ಶೋ ನಡೆಸಿದರು. ಮಾರ್ಗದುದ್ದಕ್ಕೂ ನೆರೆದಿದ್ದ ಜನ ಹೂಮಳೆ ಸುರಿಸಿ ಅಭಿಮಾನ ಮೆರೆದರು.

ರೋಡ್‌ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ. ಇನ್ನು, ರೋಡ್‌ ಶೋ ಉದ್ದಕ್ಕೂ ಜನ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Continue Reading
Advertisement
The Goat Life OTT Release Date Fix
ಒಟಿಟಿ2 mins ago

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

No Diet Day
ಆರೋಗ್ಯ3 mins ago

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

Dead Body Found
ಕ್ರೈಂ9 mins ago

Dead Body Found: ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ

Medical Students
ದೇಶ13 mins ago

Medical Students: ಮದುವೆಗೆ ಹೋದವರು ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

India's T20 World Cup Jersey
ಕ್ರೀಡೆ21 mins ago

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Job Alert
ಉದ್ಯೋಗ25 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು2 hours ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

Pakistan Cricket
ಕ್ರೀಡೆ2 hours ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ23 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌