Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ - Vistara News

Lok Sabha Election 2024

Lok Sabha Election 2024: ಅಮಿತ್‌ ಶಾ ರೌಡಿ, ಗೂಂಡಾ ಎಂದ ಯತೀಂದ್ರ ಸಿದ್ದರಾಮಯ್ಯ; ಮೆಚ್ಯುರಿಟಿ, ಬುದ್ಧಿ ಇಲ್ಲವೆಂದ ಬಿಜೆಪಿ

Lok Sabha Election 2024: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗುಂಡಾ, ರೌಡಿಯಾಗಿದ್ದು, ಗುಜರಾತ್‌ನಲ್ಲಿ ನಡೆದಿದ್ದ ನರಮೇಧದ ರೂವಾರಿ ಎಂಬ ಆರೋಪವನ್ನು ಹೊತ್ತಿದ್ದಾರೆ. ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿಯಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಈಗಾಗಲೇ ರಾಹುಲ್ ಗಾಂಧಿ ಅವರು ಜೈಲು ಶಿಕ್ಷೆಯನ್ನು ಅನುಭವಿಸುವ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಇಂತಹ ವಿಚಾರಗಳು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

VISTARANEWS.COM


on

Lok Sabha Election 2024 Yathindra Siddaramaiah calls Amit Shah a goonda BJP says No maturity
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ/ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಾಕ್ಸಮರಗಳು ಹೆಚ್ಚುತ್ತಿವೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಹನೂರಿನ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಒಬ್ಬ ಗೂಂಡಾ, ರೌಡಿ ಎಂದು ಕರೆದಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಯತೀಂದ್ರ ಅವರಿಗೆ ಇನ್ನೂ ಮೆಚ್ಯುರಿಟಿಯೇ ಇಲ್ಲ ಎಂದು ಕಿಡಿಕಾರಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗುಂಡಾ, ರೌಡಿಯಾಗಿದ್ದು, ಗುಜರಾತ್‌ನಲ್ಲಿ ನಡೆದಿದ್ದ ನರಮೇಧದ ರೂವಾರಿ ಎಂಬ ಆರೋಪವನ್ನು ಹೊತ್ತಿದ್ದಾರೆ. ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದು, ಇಂತಹವರನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ ಎಂದು ಹನೂರಿನಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದಕ್ಕೆ ಈಗ ರಾಜ್ಯ ಬಿಜೆಪಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದೆ.

ಯತೀಂದ್ರ ವಿರುದ್ಧ ದೂರು ಕೊಡುತ್ತೇವೆ: ಅಶೋಕ್

ಯತೀಂದ್ರ ಸಿದ್ದರಾಮಯ್ಯ ಅವರಿಗೆ ಇನ್ನೂ ಮೆಚ್ಯುರಿಟಿ, ಬುದ್ಧಿ ಇಲ್ಲ. ಯಾರ ಬಗ್ಗೆ ಮಾತಾಡಬೇಕು ಎಂಬ ಬಗ್ಗೆ ಗೊತ್ತಿಲ್ಲ, ಸ್ಥಾನಮಾನ ಇಲ್ಲದ ವ್ಯಕ್ತಿ. ಅಮಿತ್ ಶಾ ಈ ದೇಶದ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಕಾಂಗ್ರೆಸ್ ಹಿಂದಿನಿಂದಲೂ ಕೊಟ್ಟುಕೊಂಡು ಬರುತ್ತಿದೆ. ಸಿದ್ದರಾಮಯ್ಯ ಅವರ ಮಗ ಎಂಬ ಕಾರಣಕ್ಕೆ ಬಾಲಿಶ ಹೇಳಿಕೆ ನೀಡಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ಅವರು ಜೈಲು ಶಿಕ್ಷೆಯನ್ನು ಅನುಭವಿಸುವ ಹಂತಕ್ಕೆ ಬಂದಿದ್ದಾರೆ. ಇವರ ಡಿಎನ್ಎನಲ್ಲೇ ಇಂತಹ ವಿಚಾರಗಳು ಬಂದಿದೆ. ಇವರ ವಿರುದ್ಧ ದೂರು ನೀಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಹೇಳಿದ್ದಾರೆ.

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆ: ಸಿಟಿ ರವಿ

ಅಪ್ಪನ ಹೆಸರ ಮೇಲೆ ಅಧಿಕಾರಕ್ಕೆ ಬಂದವರು ಹೀಗೆಯೇ ಮಾತನಾಡುತ್ತಾರೆ. ಎಂದಾದರೂ ಪಕ್ಷದ ಕೆಲಸ ಮಾಡಿದ್ದಾರಾ? 1982ರಲ್ಲಿ ಅಮಿತ್ ಶಾ ಬೂತ್ ಅಧ್ಯಕ್ಷ ಆಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಇವರು. ನಾವು ವಿದ್ಯಾರ್ಥಿಗಳಾಗಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಕೇಸ್‌ ಹಾಕಿದ್ದರು. ಹಾಗಾದರೆ ನಾನು ಗೂಂಡಾನಾ? ಅಪ್ಪನ ಹೆಸರು ಹೇಳಿಕೊಂಡು, ಅಧಿಕಾರ ಚಲಾಯಿಸುವವರಿಗೆ ಬಡವರ ಕಷ್ಟ ಕಾಣಿಸುತ್ತಾ? ಎಂದು ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಜತೆ ಚಾಟ್; ಭಾರತದ ಡಿಜಿಟಲ್ ಕ್ರಾಂತಿಗೆ ಬಿಲ್ ಗೇಟ್ಸ್ ಶ್ಲಾಘನೆ

ಕೂಡಲೇ ಯತೀಂದ್ರ ಕ್ಷಮೆ ಯಾಚಿಸಲಿ: ಅಶ್ವಥ್ ನಾರಾಯಣ್

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ರಾಜಕೀಯದಲ್ಲಿ ಮಾತಿನ ಮೇಲೆ, ನಡವಳಿಕೆ ಮೇಲೆ ನಿಲ್ಲಬೇಕು. ಮಾತಿನಲ್ಲಿ ಲಕ್ಷ್ಮಣ ರೇಖೆ ಇರಬೇಕು. ಎಲ್ಲಿಯೂ ಎಲ್ಲೆ ಮೀರಿದ ಮಾತನಾಡಬಾರದು. ಯತೀಂದ್ರ ಅವರ ಇಂಥ ಕೀಳು ಮಟ್ಟದ ರಾಜಕೀಯ ಹೇಳಿಕೆಯನ್ನು ವಿರೋಧಿಸುತ್ತೇವೆ. ಅಲ್ಲದೆ, ನಮ್ಮ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ ಎಂದು ಕರೆದಿದ್ದಕ್ಕೆ ಯತೀಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.

ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ: ಡಿವಿಎಸ್‌

ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಮಾತನಾಡಿ, ಬೈಗುಳದಿಂದ ರಾಜಕಾರಣ ಮಾಡುವುದಾದರೆ ಅನೇಕರು ರಾಜಕಾರಣವನ್ನು ಮಾಡಬಹುದಿತ್ತು. ಬೈಗುಳದಿಂದ ರಾಜಕಾರಣ ಮಾಡುವವರ ಸಾಲಿಗೆ ಯತೀಂದ್ರ ಸೇರಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ, ದೊಡ್ಡ ರಾಜಕಾರಣಿ ಆಗುತ್ತೇನೆ ಎಂದು ಭಾವಿಸಿದರೆ ಕೊನೇ ಮೊಳೆ ಆಗಲಿದೆ. ಅವರ ತಂದೆ ಮಂಡಿಸಿದ ಬಜೆಟ್ ಬಗ್ಗೆ ಮಾತಾಡಲಿ. ಅದು ಬಿಟ್ಟು ಬಿಜೆಪಿ, ಬಿಜೆಪಿ ನಾಯಕರ ಬಗ್ಗೆ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯ ಅವರ ಮಗನಾಗಿ, ಗೌರವಯುತವಾಗಿ ಮಾತನಾಡುವುದನ್ನು ಕಲಿಯಲಿ ಎಂದು ಕಿವಿಮಾತು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

Narendra Modi: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ (Lok Sabha Election 2024)ಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(Congress manifesto)ಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

“ಮಾಧ್ಯಮಗಳು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಣಾಳಿಕೆಗಳನ್ನು ಅಧ್ಯಯನ ನಡೆಸುತ್ತವೆ. ನಾನು ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸುವುದನ್ನು ಕಾಯುತ್ತಿದ್ದೆ. ನಾನು ಮೊದಲ ದಿನವೇ ಪ್ರಣಾಳಿಕೆಯ ಬಗ್ಗೆ ಮಾತನಾಡಿದ್ದೆ. ಪ್ರಣಾಳಿಕೆಯನ್ನು ಗಮನಿಸಿದ ಕೂಡಲೇ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ನಾನು ಕಂಡುಕೊಂಡಿದ್ದೆ. ಮಾಧ್ಯಮಗಳು ಈ ವಿಚಾರ ತಿಳಿದು ಆಘಾತಕ್ಕೊಳಗಾಗಬಹುದು ಎಂದು ಭಾವಿಸಿದ್ದೆʼʼ ಎಂದು ಮೋದಿ ಹೇಳಿದ್ದಾರೆ.

“ಇದು ವ್ಯವಸ್ಥೆಯ ದೊಡ್ಡ ಹಗರಣವೆಂದು ನನಗೆ ತಿಳಿಯಿತು. ಪ್ರಣಾಳಿಕೆಯಲ್ಲಿನ ದುಷ್ಕೃತ್ಯಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಯಾಕೆಂದರೆ ಅದನ್ನು ನಿಷ್ಪಕ್ಷಪಾತವಾಗಿ ಹೊರತಂದರೆ ಉತ್ತಮ. ಅಂತಿಮವಾಗಿ ಈ ಸತ್ಯಗಳನ್ನು ನಾನೇ ಹೊರತರಬೇಕೆಂದು ನಿರ್ಧರಿಸಿದೆʼʼ ಎಂದು ಅವರು ವಿವರಿಸಿದ್ದಾರೆ.

ಸಂಪತ್ತು ಮರುಹಂಚಿಕೆ

ಮುಸ್ಲಿಮರಿಗೆ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನುವ ವಿಚಾರ ಅಷ್ಟೊಂದು ಅಪಾಯಕಾರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ತಮ್ಮ ಚುನಾವಣಾ ಪ್ರಚಾರವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕರೆ ನೀಡಿದರು. “ನನ್ನ ಇಡೀ ಚುನಾವಣಾ ಪ್ರಚಾರವು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ ಎನ್ನುವುದನ್ನು ನೀವು ಗಮನಿಸಿರಬಹುದು. ನಾವು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇವೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿದೆ. ನೋಡಿ, ಕೆಟ್ಟದ್ದನ್ನು ಮಾಡಲು ಯಾವುದೇ ಸರ್ಕಾರವನ್ನು ರಚಿಸುವುದಿಲ್ಲ. ಸರ್ಕಾರ ಜನರಿಗೆ ಒಳ್ಳೆಯದನ್ನು ಮಾಡಲು ಬಯಸುತ್ತದೆ. ಕೆಲವು ಜನರಿಗೆ ಇತರರಿಗೆ ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದೆ. ಕೆಲವರು ನಮಗೂ ಒಳಿತಾಗಲಿ ಎಂದು ಕಾಯುತ್ತಾರೆ. ಕಷ್ಟಪಟ್ಟು ಕೆಲಸ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವುದನ್ನು ನಾನು ನಂಬುತ್ತೇನೆʼʼ ಎಂದು ಮೋದಿ ತಿಳಿಸಿದ್ದಾರೆ.

ಬಡವರಿಗಾಗಿ 4 ಕೋಟಿ ಮನೆ

ತಮ್ಮ ಸರ್ಕಾರ ಜನರಿಗಾಗಿ ಕೈಗೊಂಡ ಉಪಕ್ರಮಗಳನ್ನು ವಿವರಿಸಿದ ಪಿಎಂ ಮೋದಿ, “ನಾವು ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನೀವು ಚುನಾವಣಾ ಪ್ರಚಾರಕ್ಕೆ ಹೋದಾಗ ಇನ್ನೂ ವಸತಿ ರಹಿತರಾಗಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಿ ನನಗೆ ನೀಡಿ ಎಂದು ನಾನು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದೇನೆ. ನನ್ನ ಮೂರನೇ ಅವಧಿ ಪ್ರಾರಂಭವಾದ ಕೂಡಲೇ ಆದ್ಯತೆ ಮೇರೆಗೆ ನಾನು ಈ ಕೆಲಸ ಮುಂದುವರಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ʼʼನಾನು ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇನೆ. ಈಗ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿಕೊಂಡಿದೆ. ಇದು ಜನರಿಗೆ ಆರೋಗ್ಯದ ಭರವಸೆ ನೀಡುತ್ತದೆ. ಸುಮಾರು 55 ಕೋಟಿ ಮಂದಿಗೆ ಇದು ನೆರವಾಗುತ್ತದೆ. ಮೋದಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆ ಇದು. ಯಾವುದೇ ವರ್ಗ, ಸಮಾಜ, ಹಿನ್ನೆಲೆಗೆ ಸೇರಿದ 70 ವರ್ಷಕ್ಕಿಂತ ಮೇಲಿನ ಪುರುಷ ಅಥವಾ ಮಹಿಳೆಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಜತೆಗೆ ನಾವು ಈ ಪ್ರಯೋಜನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ತೃತೀಯ ಲಿಂಗಿಗಳಿಗೆ ಅವರ ವಯಸ್ಸು ಯಾವುದೇ ಇರಲಿ ನಾವು ನೆರವು ನೀಡಲು ಬದ್ಧʼʼ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

ಬ್ಯಾಂಕಿಂಗ್‌ ವ್ಯವಸ್ಥೆ

“ನಮ್ಮ ದೇಶದಲ್ಲಿ ಬ್ಯಾಂಕುಗಳ ಸ್ಥಿತಿ ಕಳಪೆಯಾಗಿತ್ತು. ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಣ ನೀಡಿದ್ದರೂ ಬ್ಯಾಂಕುಗಳಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆದಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ 52 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು. ಅನೇಕರು ಅದರ ಲಾಭವನ್ನು ಪಡೆದುಕೊಂಡರು. ಹಲವರಿಗೆ ಜನ್ ಧನ್ ಖಾತೆ ಮತ್ತು ನೇರ ಲಾಭ ವರ್ಗಾವಣೆಯ ಮೂಲಕ ಪ್ರಯೋಜನ ಲಭಿಸಿತು. 36 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವು ಜನರ ಖಾತೆಗಳಿಗೆ ನೇರ ವರ್ಗಾವಣೆಯಾಗಿದೆʼʼ ಎಂದು ತಿಳಿಸಿದ್ದಾರೆ.

ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು 2014ರ ಹಿಂದಿನ ಪರಿಸ್ಥಿತಿಗೆ ಹೋಲಿಸಿದ ಪ್ರಧಾನಿ ಮೋದಿ, “ನೋಡಿ 2014 ಕ್ಕಿಂತ ಮೊದಲು ದೇಶದ ಪರಿಸ್ಥಿತಿ ಹೇಗಿತ್ತು? ಆರ್ಥಿಕತೆ ದುರ್ಬಲವಾಗಿತ್ತು. ಇಂದು ನಾವು ಅದನ್ನು ಬದಲಾಯಿಸಿದ್ದೇವೆ. ಐಎಂಎಫ್‌ನಲ್ಲಿ ಈಗ ಚೀನಾ ಮತ್ತು ಭಾರತ ಸೇರಿದಂತೆ ವಿಶ್ವದ 150 ದೇಶಗಳ ಗುಂಪು ಇದೆ. ಇದನ್ನು ನಾವು ಅಭಿವೃದ್ಧಿಶೀಲ ದೇಶಗಳು ಅಥವಾ ಉದಯೋನ್ಮುಖ ಆರ್ಥಿಕತೆ ಹೊಂದಿರುವ ದೇಶಗಳು ಎಂದು ಕರೆಯಬಹುದುʼʼ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

ಪಿತ್ರಾರ್ಜಿತ ಆಸ್ತಿ ತೆರಿಗೆ

ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಮೋದಿ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸಂದರ್ಶನ ನೀಡಿದ ಅವರು ಪಿತ್ರಾರ್ಜಿತ ತೆರಿಗೆ ಬಗ್ಗೆ ಪ್ರಸ್ತಾವಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55% ತೆರಿಗೆ ವಿಧಿಸುವ ಬಗ್ಗೆ ಹೇಳಿದರು. ಈಗ ನಾನು ಅಭಿವೃದ್ಧಿ ಮತ್ತು ಉತ್ತರಾಧಿಕಾರದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪಿತ್ರಾರ್ಜಿತ ಆಸ್ತಿಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಸುವುದು ನನ್ನ ಜವಾಬ್ದಾರಿ. ಈಗ ಈ ಬಗ್ಗೆ ನಿರ್ಧರಿಸಬೇಕಾದವರು ನೀವುʼʼ ಎಂದು ಮೋದಿ ಹೇಳಿದ್ದಾರೆ.

Continue Reading

ಕರ್ನಾಟಕ

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Narendra Modi: ನರೇಂದ್ರ ಮೋದಿ ಅವರು ಸೋಮವಾರ ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಹಾಗೆಯೇ, ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿದೆ.

VISTARANEWS.COM


on

PM Narendra Modi
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70ರ ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಮೋದಿ ಅವರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Continue Reading

Lok Sabha Election 2024

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Lok Sabha Election 2024: ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಚುನಾವಣಾ ಕಣದಲ್ಲಿ (Lok Sabha Election 2024) ಪ್ರಮುಖ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಎಐಎಂಐಎಂ (AIMIM Hyderabad) ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಮೋದಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಆರು ಜನ ಸಹೋದರರಿದ್ದಾರೆ. ಅಮಿತ್ ಶಾ ಅವರಿಗೆ ಆರು ಸಹೋದರಿಯರು ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸುಮಾರು 10-12 ಸಹೋದರಿಯರು ಮತ್ತು ಸಹೋದರರು ಇದ್ದಾರೆ” ಎಂದು ಒವೈಸಿ ಟೀಕಿಸಿದ್ದಾರೆ.

“ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಎಂದಿಗೂ ಬಹುಸಂಖ್ಯಾತರಾಗುವುದಿಲ್ಲ. ನರೇಂದ್ರ ಮೋದಿ, ಮುಸ್ಲಿಮರ ಬಗೆಗಿನ ಈ ಭಯವನ್ನು ನೀವು ಎಷ್ಟು ದಿನ ಮುಂದುವರಿಸುತ್ತೀರಿ?ʼʼ ಎಂದು ಚುನಾವಣಾ ರ‍್ಯಾಲಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

ʼನುಸುಳುಕೋರರುʼ ಎಂಬ ಪದ ಬಳಕೆಗೆ ಅವರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು 17 ಕೋಟಿ ಭಾರತೀಯ ಮುಸ್ಲಿಮರನ್ನು ಗುಸ್ಪೆಟಿಯಾ (ಒಳನುಸುಳುಕೋರರು) ಎಂದು ಕರೆದಿದ್ದಾರೆ. ನೀವು ಗುಸ್ಪೆಟಿಯಾ ಆಗಿದ್ದೀರಾ?” ಎಂದು ಪ್ರಶ್ನಿಸಿದ ಅವರು, “ದಲಿತರು ಮತ್ತು ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ದ್ವೇಷ ಹರಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮಾಧವಿ ಲತಾ ವಿರುದ್ಧವೂ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ವಿರುದ್ಧವೂ ಒವೈಸಿ ವಾಗ್ದಾಳಿ ನಡೆಸಿದ್ದಾರೆ. ʼʼಹೈದರಾಬಾದ್‌ನ ಓಲ್ಡ್ ಸಿಟಿಯ ಮಸೀದಿಯೊಂದರ ಮೇಲೆ ಬಾಣ ಹೂಡುವಂತೆ ಮಾಧವಿ ಲತಾ ಅವರು ಸನ್ನೆ ಮಾಡಿದ್ದಾರೆ. ಬಿಜೆಪಿಯ ಮೆರವಣಿಗೆಯ ವಿಡಿಯೊದಲ್ಲಿ ಇದು ಸ್ಪಷ್ಟವಾಗಿ ಕಂಡು ಬಂದಿದೆ. ಇದು ಮಸೀದಿಯ ಮೇಲೆ ಹೂಡಿದ ಬಾಣವಲ್ಲ, ಬದಲಾಗಿ ನಗರದಲ್ಲಿ ಶಾಂತಿಯನ್ನು ಹಾಳು ಮಾಡುವ ಉದ್ದೇಶಿತ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ ʼʼದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ಹೇಳಿದೆ. ಯಾರಿಗೆ? ಈ ಹಿಂದೆ, ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಇದರರ್ಥ ಅವರು ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಒಳನುಸುಳುವವರಿಗೆ ವಿತರಿಸುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ?” ಎಂದು ಮೋದಿ ಕೇಳಿದ್ದರು. ಜತೆಗೆ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Continue Reading

ಕರ್ನಾಟಕ

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

PM Narendra Modi: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

VISTARANEWS.COM


on

PM Narendra Modi
Koo

ಹೊಸಪೇಟೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಭಾನುವಾರ ಕರ್ನಾಟಕದಲ್ಲಿ (Karnataka) ಸಾಲು ಸಾಲು ರ‍್ಯಾಲಿಗಳನ್ನು ಕೈಗೊಳ್ಳುತ್ತಿರುವ ನರೇಂದ್ರ ಮೋದಿ, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಸಮಾವೇಶದಲ್ಲೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಒಬ್ಬ ಪುಕ್ಕಲ ನಾಯಕ ದೇಶವನ್ನು ಆಳಬಲ್ಲನೆ” ಎಂದು ಪ್ರಶ್ನಿಸುವ ಮೂಲಕ ರಾಹುಲ್‌ ಗಾಂಧಿ (Rahul Gandhi) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ರಾಮಮಂದಿರ ನಿರ್ಮಾಣವಾದರೆ ದಂಗೆ ಸೃಷ್ಟಿಯಾಗುತ್ತದೆ. ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಯ ಹುಟ್ಟಿಸುತ್ತಿದ್ದರು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿದರೂ ಇದೇ ರೀತಿ ಆಗುತ್ತದೆ ಎಂದು ಸುಳ್ಳು ಹಬ್ಬಿಸಿದರು. ಆದರೆ, ಈಗ ರಾಮಮಂದಿರ ನಿರ್ಮಿಸಲಾಗಿದೆ. 370ನೇ ವಿಧಿಯನ್ನೂ ರದ್ದುಗೊಳಿಸಲಾಗಿದೆ. ಎಲ್ಲಾದರೂ ಗಲಾಟೆ ನಡೆಯಿತೇ? ಬೆಂಕಿ ಹೊತ್ತಿಕೊಂಡಿತೇ? ಅಷ್ಟಕ್ಕೂ, ಪುಕ್ಕಲ ನಾಯಕನೊಬ್ಬ ದೇಶದ ಪ್ರಧಾನಿಯಾಗಿ ಆಡಳಿತ ನಡೆಸಬಲ್ಲನೇ? ದೇಶ ಮುನ್ನಡೆಸಲು ಛಾತಿ ಇರುವ ನಾಯಕ ಬೇಕೇ ಹೊರತು, ಪುಕ್ಕಲ ನಾಯಕ” ಎಂದು ರಾಹುಲ್‌ ಗಾಂಧಿ ಪ್ರಸ್ತಾಪಿಸದೆ ಕುಟುಕಿದರು.

“ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿ ಗೆಲುವು ಸಾಧಿಸಿದರೆ ರೈತರು, ಬಡವರ ಪರವಾಗಿ ಕೆಲಸ ಮಾಡಲಾಗುತ್ತದೆ. ಹಾಗಾಗಿ, ಬಳ್ಳಾರಿಯಲ್ಲಿ ಬಿ.ಶ್ರೀರಾಮುಲು, ಕೊಪ್ಪಳದಲ್ಲಿ ಬಸವರಾಜ್‌ ಅವರನ್ನು ಗೆಲ್ಲಿಸಿ. ನೀವು ನೀಡುವ ಪ್ರತಿಯೊಂದು ಮತವೂ ಮೋದಿಯ ಕೈ ಬಲಪಡಿಸುತ್ತದೆ. ಇದು ದೇಶದಲ್ಲಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ. ನೀವು ನೀಡುವ ಮತವು ವಿಕಸಿತ ಭಾರತ, ವಿಕಸಿತ ಕರ್ನಾಟಕದ ಗ್ಯಾರಂಟಿಯಾಗಿದೆ” ಎಂದು ತಿಳಿಸಿದರು.

ಕೆಫೆ ಬಾಂಬ್‌ ಸ್ಫೋಟದ ಕುರಿತೂ ಉಲ್ಲೇಖ

ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಕುರಿತು ನರೇಂದ್ರ ಮೋದಿ ಪ್ರಸ್ತಾಪಿಸಿದರು. ಕೆಫೆ ಬಾಂಬ್‌ ಸ್ಫೋಟದ ಬಳಿಕ ಕಾಂಗ್ರೆಸ್‌ ನಾಯಕರು ಮೃದುವಾಗಿ ಮಾತನಾಡಲು ಶುರು ಮಾಡಿದರು. ಇದು ಸಿಲಿಂಡರ್‌ ಸ್ಫೋಟ ಎಂದರು, ಔದ್ಯಮಿಕ ವೈಷಮ್ಯದಿಂದ ಹೀಗೆ ಮಾಡಿದರು ಎಂದರು. ಆದರೆ, ದೋಷಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಯಿತು. ಆಗ ಕಾಂಗ್ರೆಸ್‌ ನಾಯಕರು ಓಲೈಸುವುದನ್ನು ನಿಲ್ಲಿಸಿದರು” ಎಂದು ಗುಡುಗಿದರು.

“ಬಿಜೆಪಿ ನೇತೃತ್ವದ ಸರ್ಕಾರವು ದೇಶದಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಮಂಗಳೂರು, ಅಯೋಧ್ಯೆ, ಮುಂಬೈ ಸೇರಿ ಯಾವುದೇ ನಗರಗಳಲ್ಲಿ ಬಾಂಬ್‌ ದಾಳಿಯನ್ನು ನಿಯಂತ್ರಿಸಿದೆ. ಬಾಂಬ್‌ ದಾಳಿಕೋರರನ್ನು ನಾವು ಮಟ್ಟಹಾಕಿದ್ದೇವೆ. ಒಂದು ಕಾಲದಲ್ಲಿ ಯೋಧರನ್ನು ಅಪಹರಿಸಿ, ಅವರ ರುಂಡ ಕತ್ತರಿಸಿ ಕಳುಹಿಸಲಾಗುತ್ತಿತ್ತು. ಆದರೆ, ಈಗ ಕೇಂದ್ರದಲ್ಲಿ ಮೋದಿ ಸರ್ಕಾರವಿದೆ. ಮನೆಯೊಳಗೆ ನುಗ್ಗಿ ಹೊಡೆಯುವ ಸಾಮರ್ಥ್ಯ ನಮ್ಮದಾಗಿದೆ” ಎಂದರು.

ಇದನ್ನೂ ಓದಿ: PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

Continue Reading
Advertisement
dina bhavishya read your daily horoscope predictions for April 29 2024
ಭವಿಷ್ಯ3 mins ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ5 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ5 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು5 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ6 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ6 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20246 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ6 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ6 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ6 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ3 mins ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202412 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202415 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202416 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202417 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ20 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌