First Time Voters: ಮೊದಲ ಬಾರಿ ಮತದಾನ ಮಾಡುತ್ತಿದ್ದೀರಾ? ಈ ಸಂಗತಿಗಳನ್ನು ಗಮನಿಸಿ - Vistara News

Lok Sabha Election 2024

First Time Voters: ಮೊದಲ ಬಾರಿ ಮತದಾನ ಮಾಡುತ್ತಿದ್ದೀರಾ? ಈ ಸಂಗತಿಗಳನ್ನು ಗಮನಿಸಿ

First Time Voters: ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಮತದಾರರೆಲ್ಲರೂ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಿದೆ. ರಾಷ್ಟ್ರದಾದ್ಯಂತ ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುವ ಮತದಾರರಲ್ಲಿ ಉತ್ಸಾಹ ಹೆಚ್ಚಾಗಿದೆ. ಭಾರತದ ಭವಿಷ್ಯವನ್ನು ರೂಪಿಸುವ ಯುವ ಶಕ್ತಿಗೆ ಮತ ಚಲಾಯಿಸುವುದು ಕೇವಲ ಕರ್ತವ್ಯವಲ್ಲ. ಅದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದು ಪ್ರಮುಖ ಹೆಜ್ಜೆ ಎಂಬುದನ್ನು ಅರ್ಥ ಮಾಡಿಸಬೇಕಿದೆ.

VISTARANEWS.COM


on

lok sabha election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶಾದ್ಯಂತ ಲೋಕಸಭಾ ಚುನಾವಣೆ (loksabha election-2024) ತಯಾರಿ ಕಾರ್ಯಗಳು ಜೋರಾಗಿಯೇ ನಡೆಯುತ್ತಿದೆ. ಒಂದೆಡೆ (First Time Voters)ವಿವಿಧ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರೆ, ಚುನಾವಣಾ ಆಯೋಗವು (election commission) ಹೆಚ್ಚಿನ ಮತದಾರರನ್ನು ಮತಗಟ್ಟೆಗೆ (Election booth) ಸೆಳೆಯುವ ಪ್ರಯತ್ನ ಮಾಡುತ್ತಿದೆ. ಇನ್ನು ಮತದಾರರು ಯಾರಿಗೆ ಈ ಬಾರಿ ಮತ ನೀಡಬಹುದು ಎಂಬ ಲೆಕ್ಕಾಚಾರದಲ್ಲಿದ್ದರೆ, ಹೊಸ ಮತದಾರರು (voters) ತಮ್ಮ ಮೊದಲ ಮತದಾನದ ಅನುಭವ ಹೇಗಿರಬಹುದು ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ.

ಭಾರತವು (india) ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಲೋಕಸಭಾ ಚುನಾವಣಾ ದಿನಾಂಕವನ್ನು ಭಾರತದ ಮುಖ್ಯ ಚುನಾವಣಾ ಅಧಿಕಾರಿಯು 2024ರ ಏಪ್ರಿಲ್ 16ರಂದು ಘೋಷಿಸಿದ್ದಾರೆ. 18 ವರ್ಷ ಮೇಲ್ಪಟ್ಟ ಭಾರತದ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಹಕ್ಕಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಯುವಕರು ದೇಶದ ಉಜ್ವಲ ಭವಿಷ್ಯಕ್ಕಾಗಿ ಹೆಚ್ಚು ಒಳ್ಳಗೊಳ್ಳಬೇಕು ಮಾತ್ರವಲ್ಲ ಮೊದಲ ಬಾರಿ ಮತದಾನ ಮಾಡುವ ಯುವ ಶಕ್ತಿ ಮತದಾನದ ಪ್ರಾಮುಖ್ಯವನ್ನು ಅರಿತು ತಿಳುವಳಿಕೆಯಿಂದ ಭಾಗವಹಿಸಬೇಕು ಎನ್ನುವ ಎನ್ನುವ ಆಶಯದೊಂದಿಗೆ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುವವರಿಗಾಗಿ ಕೆಲವು ಸಲಹೆಗಳು ಇಲ್ಲಿವೆ.

ಇದನ್ನೂ ಓದಿ: Hema Malini: ಪ್ರಚಾರದ ಮಧ್ಯೆಯೇ ಗದ್ದೆಗೆ ಇಳಿದು ಗೋಧಿ ಕಟಾವು ಮಾಡಿದ ಹೇಮಾಮಾಲಿನಿ!

1. ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ?

ಮತಗಟ್ಟೆಗೆ ತೆರಳುವ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ. ಭಾರತದ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಇದರ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಅರ್ಹತೆ ಮತ್ತು ನೋಂದಣಿ ಸ್ಥಿತಿಯನ್ನು ಇದರಲ್ಲಿ ತಿಳಿದುಕೊಳ್ಳಬಹುದು.


2. ಎಲ್ಲಿ, ಹೇಗೆ ?

ಮತದಾನ ಪ್ರಕ್ರಿಯೆ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಇದಕ್ಕಾಗಿ ಮತದಾನ ಕೇಂದ್ರದ ಸ್ಥಳ, ಮತದಾರರ ಗುರುತಿನ ಅವಶ್ಯಕತೆಗಳು ಮತ್ತು ನಿಮ್ಮ ಮತವನ್ನು ಹೇಗೆ ಚಲಾಯಿಸುವುದು ಸೇರಿದಂತೆ ಮತದಾನ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ತಿಳಿದವರಿಂದ ಕೇಳಿ ಪಡೆಯಿರಿ.

3. ಮಾಹಿತಿ ಪರಿಶೀಲಿಸಿ

ಮತದಾನ ಮಾಡುವ ಬಗ್ಗೆ ಯಾವುದೇ ಅಭಿಪ್ರಾಯವನ್ನು ತೆಗೆದುಕೊಳ್ಳುವ ಮೊದಲು ಬಹು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿಯನ್ನು ಪರಿಶೀಲಿಸಿಕೊಳ್ಳಿ. ವಿಭಿನ್ನ ದೃಷ್ಟಿಕೋನಗಳಿಗೆ ತೆರೆದುಕೊಳ್ಳಿ. ಸ್ನೇಹಿತರು, ಕುಟುಂಬ ಮತ್ತು ಸಮುದಾಯದ ಸದಸ್ಯರೊಂದಿಗೆ ಗೌರವಯುತವಾಗಿ ರಾಜಕೀಯದ ಬಗ್ಗೆ ಚರ್ಚೆ ನಡೆಸಿ.

4. ಸುಳ್ಳು ಮಾಹಿತಿ ಬಗ್ಗೆ ಎಚ್ಚರ

ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಸುಳ್ಳು ಮಾಹಿತಿ ಗಳು ಪ್ರಚಾರವಾಗುತ್ತಿರುತ್ತದೆ. ಮತಗಟ್ಟೆಗಳ ಬಳಿ ಸುಳ್ಳು ಮಾಹಿತಿಗಳಿಗೆ ಅವಕಾಶ ನೀಡಬೇಡಿ. ಯಾವುದೇ ರೀತಿಯ ಸುಳ್ಳು ಮಾಹಿತಿ ಹರಡದಂತೆ ಎಚ್ಚರಿಕೆ ವಹಿಸಬೇಕು. ಅಧಿಕೃತಭಾರತೀಯ ಚುನಾವಣಾ ಆಯೋಗ ನೀಡುವ ಮಾಹಿತಿ ಮತ್ತು ಮತಗಟ್ಟೆ ಅಧಿಕಾರಿಗಳು ನೀಡುವ ಮಾಹಿತಿಯನ್ನು ಮಾತ್ರ ನಂಬಿ.


5. ಮತದಾರರನ್ನು ಪ್ರೋತ್ಸಾಹಿಸಿ

ವಿಶ್ವಾಸಾರ್ಹ ಮಾಹಿತಿಯನ್ನು ಹಂಚಿಕೊಂಡು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತರರನ್ನು ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಮತದಾನದ ಅಗತ್ಯವನ್ನು ತಿಳಿಸಿ, ಅವರು ಮತದಾನ ಮಾಡಿ, ಇತರರಿಗೂ ಮತದಾನ ಮಾಡಲು ಪ್ರೋತ್ಸಾಹಿಸುವಂತೆ ತಿಳಿಸಿ.

6. ಗುರುತು ಚೀಟಿ ಇರಲಿ

ಮತಗಟ್ಟೆಗೆ ತೆರಳುವಾಗ ನಿಮಗೆ ನೀಡಿರುವ ಮತ ಪತ್ರ, ಮತದಾರರ ಗುರುತು ಚೀಟಿ, ಆಧಾರ್ ಅಥವಾ ಡ್ರೈವಿಂಗ್ ಲೈಸೆನ್ಸ್‌ನಂತಹ ಹೆಚ್ಚುವರಿ ಗುರುತು ಚೀಟಿಯನ್ನು ಇಟ್ಟುಕೊಂಡಿರಿ. ಅವಶ್ಯಕವಿದ್ದಾಗ ಇದನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

7. ಸರತಿ ಪಾಲಿಸಿ

ಮತಗಟ್ಟೆಯಲ್ಲಿ ಸರತಿಯನ್ನು ತಪ್ಪಿಸಬೇಡಿ. ಸರದಿಯನ್ನು ಪಾಲಿಸದೇ ಇರುವುದು ಇತರರಿಗೆ ಕಿರಿಕಿರಿ ಉಂಟು ಮಾಡಬಹುದು. ಅವಶ್ಯಕ ಕಾರ್ಯಗಳಿದ್ದರೆ ಬೇಗನೆ ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬನ್ನಿ.

8. ಮೊಬೈಲ್ ಕೊಂಡೊಯ್ಯಬೇಡಿ

ಮತದಾನ ಮಾಡುವ ಕೇಂದ್ರದೊಳಗೆ ಮುಖ್ಯವಾಗಿ ಎವಿಎಂ ಕೊಠಡಿಯೊಳಗೆ ಮೊಬೈಲ್ ಫೋನ್ ಅನ್ನು ಒಯ್ಯಬೇಡಿ. ಇವಿಎಂ ಬಟನ್ ಒತ್ತಿದಾಗ ಸೆಲ್ಫಿ ಕ್ಲಿಕ್ಕಿಸಬೇಡಿ. ಇಲ್ಲವಾದರೆ ತೊಂದರೆಗೆ ಸಿಕ್ಕಿಹಾಕಿಕೊಳ್ಳಬೇಕಾಗಬಹುದು.


9.ಇವಿಎಂ ಬಳಕೆ ಬಗ್ಗೆ ತಿಳಿಯಿರಿ

ಪ್ರತಿಯೊಂದು ಮತವೂ ಮುಖ್ಯವಾಗಿದೆ ಇದು ರಾಷ್ಟ್ರದ ಕಲ್ಯಾಣಕ್ಕಾಗಿ ಎಂಬುದನ್ನು ಮರೆಯದಿರಿ. ಇವಿಎಂ ನಲ್ಲಿ ಒಂದಕ್ಕಿಂತ ಹೆಚ್ಚು ಬಟನ್‌ಗಳನ್ನು ಒತ್ತಬೇಡಿ. ಯಾರಿಗೆ ಮತ ಚಲಾಯಿಸಬೇಕು ಎಂದುಕೊಂಡಿದ್ದೀರೋ ಆ ಅಭ್ಯರ್ಥಿಗಾಗಿ ಬಟನ್ ಅನ್ನು ಒತ್ತುವ ಸಂದರ್ಭದಲ್ಲಿ ಜಾಗರೂಕರಾಗಿರಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ದೇಶ

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

Tsering Namgyal: ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಐದನೇ ಹಂತದಲ್ಲಿ ಅಂದರೆ ಮೇ 20ರಂದು ಲಡಾಕ್‌ನಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Tsering Namgyal
Koo

ನವದೆಹಲಿ: ಕಾಂಗ್ರೆಸ್‌ ನಾಯಕ ತ್ಸೆರಿಂಗ್‌ ನಾಮ್‌ಗ್ಯಾಲ್‌ (Tsering Namgyal) ಅವರು ಲಡಾಕ್‌ (Ladakh) ಲೋಕಸಭೆ ಕ್ಷೇತ್ರದಲ್ಲಿ ಗುರುವಾರ (ಮೇ 2) ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚುನಾವಣೆ ಆಯೋಗವೂ ಅನುಮತಿ ನೀಡಿದೆ. ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ನಾಮಪತ್ರ ಸಲ್ಲಿಸುತ್ತಲೇ ತುಸು ಗೊಂದಲ ಉಂಟಾಗಿತ್ತು. ಇದಾದ ಬಳಿಕ ಚುನಾವಣೆ ಆಯೋಗವು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂದು ತಿಳಿಸಿದೆ. ಲಡಾಕ್‌ನಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಲಡಾಕ್‌ನಲ್ಲಿ ಹೈಡ್ರಾಮಾ

ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ಮುಗಿದರೂ, ಲಡಾಕ್‌ನಲ್ಲಿ ರಾಜಕೀಯ ಹೈಡ್ರಾಮಾ ಮಾತ್ರ ಮುಂದುವರಿದಿದೆ. ಲಡಾಕ್‌ನಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಹಾಜಿ ಹನಿಫಾ ಅವರು ಹೊರಹೊಮ್ಮಿದ್ದರು. ಆದರೆ, ಗುರುವಾರ (ಮೇ 2) ಬೆಳಗ್ಗೆ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಹೈಡ್ರಾಮಾಗೆ ಕಾರಣವಾಗಿತ್ತು. ಗೊಂದಲದ ಬಳಿಕ ಕಾಂಗ್ರೆಸ್‌ ನಾಯಕ ರಿಗ್ಜಿನ್‌ ಜೋರಾ ಅವರು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂಬುದಾಗಿ ಘೋಷಿಸಿದರು.

ಬಿಜೆಪಿಯಿಂದ ತಾಶಿ ಗ್ಯಾಲ್ಸನ್‌ ಅವರು ಬುಧವಾರ (ಮೇ 1) ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಲಡಾಕ್‌ನಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದು, ಇತ್ತೀಚೆಗೆ ಪಕ್ಷದಲ್ಲಿಯೇ ಅವರನ್ನು ಮರೆಗೆ ಸರಿಸಲಾಗುತ್ತಿತ್ತು. ಅಲ್ಲದೆ, ಅವರಿಗೆ ಟಿಕೆಟ್‌ ಕೂಡ ನಿರಾಕರಿಸಿದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಬಿಜೆಪಿ ಸಂಸದ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಇದಕ್ಕೂ ಮೊದಲು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಲಾಗುತ್ತಿತ್ತು. ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಮಾಸ್ಟರ್‌ ಸ್ಟ್ರೋಕ್‌ ಎಂದೇ ವರದಿಯಾಗಿತ್ತು. ಆದರೆ, ಕೆಲ ಹೊತ್ತಿನ ಬಳಿಕ ಕಣಕ್ಕಿಳಿದವರು ಕಾಂಗ್ರೆಸ್‌ ನಾಯಕನೇ ಹೊರತು, ಬಿಜೆಪಿ ಸಂಸದ ಅಲ್ಲ ಎಂಬ ವಿಷಯ ಗೊತ್ತಾಯಿತು. ಇಬ್ಬರ ಹೆಸರೂ ಒಂದೇ ಇರುವುದರಿಂದ ಗೊಂದಲ ಉಂಟಾಗಿತ್ತು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading

ದೇಶ

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Lok Sabha Election: ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

VISTARANEWS.COM


on

Lok Sabha Election
Koo

ಧಾರವಾಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್​ ಜೋಶಿ (pralhad joshi) ಪರ ಗುರುವಾರ ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ (Eknath Shinde) ಮುಖ್ಯಸ್ಥ ಏಕನಾಥ ಶಿಂಧೆ ಅವರು ಪ್ರಚಾರ ಭಾಷಣೆ ಮಾಡಿದರು. ನಗರದ ಮೃತ್ಯುಂಜಯ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಮೋದಿ (Narendra Modi) ನೀಡುವ ಗ್ಯಾರಂಟಿ ಪಡೆಯಲು ಪ್ರಲ್ಹಾದ್ ಜೋಶಿಯನ್ನು ಗೆಲ್ಲಿಸಿ ಎಂದು ಕರೆಕೊಟ್ಟರು.

ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಸಿಎಂ ಶಿಂಧೆ ಅವರು, ಧಾರವಾಡದ ಜನತೆಯನ್ನು ಭೇಟಿ ಮಾಡಿದ್ದು ಖುಷಿ ತಂದಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಅವರಿಗೂ ಧಾರವಾಡಕ್ಕೂ ಸಂಬಂಧ ಇದೆ. ಪುಣೆ ಹಾಗೂ ಧಾರವಾಡ ಸಾಂಸ್ಕೃತಿಕ, ಶೈಕ್ಷಣಿಕ ಕೇಂದ್ರ ಎಂಬುದಾಗಿ ನುಡಿದರು.

ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಅವರು ಗೆಲ್ಲುವ ಮೊದಲು ಏನೇನೋ ಕೊಡ್ತೀನಿ ಅಂಥ ಹೇಳಿದ್ದರು. ಆದರೆ ಈಗ ನಮ್ಮಲ್ಲಿ ದುಡ್ಡಿಲ್ಲ ಅಂತಾರೆ. ಆದ್ರೆ ದೇಶದಲ್ಲಿ ಚಾಲ್ತಿ ಇರೋದು ಮೋದಿ ಗ್ಯಾರಂಟಿ ಎಂದು ಅವರು ಹೇಳಿದರು.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ನಾವು 5ನೆಯ ಪಡೆಯಲು ಮೋದಿ ಕಾರಣ. ದೇಶದಲ್ಲಿ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಒಂದೇ ಒಂದು ರಜೆ ಸಹ ಪಡೆಯದೆ ಕೆಲಸ ಮಾಡಿದ್ದಾರೆ. ಸ್ವಲ್ಪ ಚಳಿ ಆದರೆ ವಿದೇಶಕ್ಕೆ ತೆರಳುವವರು ಬೇರೆ ಪಾರ್ಟಿಯ ಯುವರಾಜ (ರಾಹುಲ್ ಗಾಂಧಿ) ಎಂದು ಶಿಂಧೆ ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ದ್ವಜ ಹಾರಿಸಿದ ಕೀರ್ತಿ ಜೋಶಿ ಅವರಿಗೆ ಇದೆ. ಪಾಕಿಸ್ತಾನದವರು ಮೊದಲು ನಮ್ಮ ದೇಶದಲ್ಲಿ ಬಾಂಬ್ ಹಾಕುತ್ತಿದ್ದರು. ಈಗ ಭಾರತ ಮೋದಿ ನೇತೃತ್ವದಲ್ಲಿ ಪಾಕ್ ನ ಒಳಗೆ ಹೊಕ್ಕು ಸದೆಬಡಿಯುತ್ತಿದೆ ಎಂದು ಹೇಳಿದರು.

ದ್ವಾರಕಾ ನಗರದಲ್ಲಿ ಸಮುದ್ರದ ಒಳಗೆ ಹೋಗಿ ಮೋದಿ ದೇಶದ ಒಳಿತಿಗೆ ಪ್ರಾರ್ಥನೆ ಮಾಡಿದ್ದಾರೆ. ಮೋದಿ ದೇಶದ ಕೆಲಸಕ್ಕಾಗಿ ಅವರು ಇದ್ದಾರೆ. ಕೋಟ್ಯಾನುಕೋಟಿ ರಾಮನ ಭಕ್ತರ ಸಂಕಲ್ಪ ಪೂರ್ಣ ಆಗಿದೆ. ಈಗ ಎಲ್ಲರೂ ಖುಷಿಯಿಂದ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮಾಡಿದ ಚಂದ್ರಯಾನ ಫೇಲ್ ಆಗಿವೆ. ಪದೇ ಪದೇ ತಪ್ಪುಗಳನ್ನು ಮಾಡಿದ್ದಾರೆ. ಆದಾಗ್ಯೂ ಇಂಡಿಯಾ ಬಣ ಮೋದಿಯನ್ನು ಸೋಲಿಸುವುದಕ್ಕೆ ನಿಂತಿದೆ, ಅದು ಅದು ಎಂದಿಗೂ ಆಗುವುದಿಲ್ಲ ಎಂದು ನುಡಿದರು.

Continue Reading

ದೇಶ

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

Amit Shah: Lok Sabha Election 2024: ಚುನಾವಣೆ ಆಯೋಗದ ಅಂತಿಮ ಮಾಹಿತಿ ಪ್ರಕಾರ, ಹಂತ 1ರಲ್ಲಿ 66.1%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.7% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದೇ ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣದ ಪರಿಣಾಮದ ಕುರಿತು ಅಮಿತ್‌ ಶಾ ಮಾತನಾಡಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election) ಮೊದಲನೇ ಹಾಗೂ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡೂ ಹಂತಗಳಲ್ಲಿ ಕಳೆದ ಬಾರಿಗಿಂತ ಈ ಬಾರಿ ತಲಾ ಶೇ.3ರಷ್ಟು ಮತದಾನ ಪ್ರಮಾಣ ಕುಸಿತವಾಗಿದೆ. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ. ನರೇಂದ್ರ ಮೋದಿ (Narendra Modi) ಅವರ ಅಲೆ ಕಡಿಮೆಯಾಗಿದ್ದು, ಮತದಾನ ಪ್ರಮಾಣ ಕುಂಠಿತಗೊಂಡಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ, ಮತದಾನ ಪ್ರಮಾಣ ಕಡಿಮೆಯಾಗಿರುವ ಕಾರಣ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಿರಸ್ಕರಿಸಿದ್ದಾರೆ.

ನ್ಯೂಸ್‌ 18 ಸುದ್ದಿ ಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮತದಾನ ಪ್ರಮಾಣ ಕುಸಿತ, ಅದರಿಂದ ಬಿಜೆಪಿ ಮೇಲೆ ಉಂಟಾಗುವ ಪರಿಣಾಮ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಯಿತು ಎಂಬ ಮಾತ್ರಕ್ಕೆ ಫಲಿತಾಂಶದ ಮೇಲೆ ಅದು ಪರಿಣಾಮ ಬೀರುವುದಿಲ್ಲ. ಬಿಜೆಪಿಯು ಖಂಡಿತವಾಗಿಯೂ ಸರಿಯಾದ ಮಾರ್ಗದಲ್ಲಿದೆ. ನೀವು ಬೇಕಾದರೆ ಗಮನಿಸಿ, ಜೂನ್‌ 4ರಂದು ಫಲಿತಾಂಶ ಪ್ರಕಟವಾಗುವ ದಿನ ಮಧ್ಯಾಹ್ನ 12.30ರ ವೇಳೆಗೆ ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುತ್ತದೆ. ಅಷ್ಟಕ್ಕೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ” ಎಂದು ಹೇಳಿದರು.

ಮತದಾನ ಕುಸಿತಕ್ಕೆ 2 ಕಾರಣ ಕೊಟ್ಟ ಶಾ

ಎರಡು ಹಂತಗಳಲ್ಲಿ ಮತದಾನ ಕುಸಿತಗೊಂಡಿರುವುದಕ್ಕೆ ಅಮಿತ್‌ ಶಾ ಅವರು ಎರಡು ಪ್ರಮುಖ ಕಾರಣ ಕೊಟ್ಟಿದ್ದಾರೆ. “12 ವರ್ಷಗಳ ಬಳಿಕ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಬದಲಾವಣೆಗಳಾಗಿವೆ. ಇನ್ನು, ಬಿಜೆಪಿ ವಿರುದ್ಧ ಪ್ರಬಲ ಸ್ಪರ್ಧಿಗಳು ಇಲ್ಲದ ಕಾರಣ ಮತದಾನ ಕುಸಿತವಾಗಿದೆ. ಆದರೆ, ನಮ್ಮ ಪಕ್ಷ, ಪರಿಣತರು ಸೇರಿ ನಾವೊಂದು ವಿಶ್ಲೇಷಣೆ ಮಾಡಿದ್ದೇವೆ. ಎರಡು ಹಂತಗಳಲ್ಲಿ ಬಿಜೆಪಿಗೆ 100 ಸೀಟು ಸಿಗಲಿವೆ. 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 66.1%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.7%ರಷ್ಟು ಮತದಾನವಾಗಿದೆ. ಆದರೆ, 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇನ್ನೂ ಐದು ಹಂತಗಳ ಮತದಾನ ಬಾಕಿ ಇರುವ ಕಾರಣ ಮತದಾನ ಪ್ರಮಾಣದ ಮೇಲೆ ಎಲ್ಲರ ಗಮನ ಇದೆ.

ಇದನ್ನೂ ಓದಿ: Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

Continue Reading
Advertisement
Kaatera  Movie Rockline Venkatesh Gifts Car To Jadesh K Hampi Maasthi And Suraj
ಸ್ಯಾಂಡಲ್ ವುಡ್34 seconds ago

Kaatera  Movie:  ಕಾಟೇರ ಗೆಲುವು: ಮೂವರಿಗೆ ಉಡುಗೊರೆಯಾಗಿ ಸಿಕ್ತು ಕಾರುಗಳು!

Lok sabha Election
ದೇಶ23 mins ago

Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

prajwal revanna case arrest
ಪ್ರಮುಖ ಸುದ್ದಿ29 mins ago

Prajwal Revanna Case: ಪ್ರಜ್ವಲ್ ರೇವಣ್ಣ ಮೇಲೆ ಮತ್ತೊಂದು ಟೈಟ್‌ ಎಫ್‌ಐಆರ್‌, ಇದರಲ್ಲಿ ಬಂಧನ ಖಚಿತ!

Kim Jong Un
ವಿದೇಶ42 mins ago

Kim Jong Un: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಸುಖಕ್ಕೆ ಬೇಕು ಪ್ರತಿ ವರ್ಷ 25 ಹುಡುಗಿಯರು! ಏನಿದು ಆಹ್ಲಾದ ತಂಡ?

Hassan Pen Drive case Prajwal Revanna case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮೈಸೂರಿನಲ್ಲೂ ಒಂದು ಕೇಸ್‌; ತಾಯಿ ಮೇಲೆ ಲೈಂಗಿಕ ಕಿರುಕುಳ, ಅಪಹರಣ ಎಂದು ದೂರು ನೀಡಿದ ಮಗ

Health Tips Kannada
ಆರೋಗ್ಯ2 hours ago

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

Karnataka Weather Forecast
ಮಳೆ2 hours ago

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

Religious Freedom
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

Health Tips Kannada
ಆರೋಗ್ಯ3 hours ago

Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ14 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌