Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ - Vistara News

Lok Sabha Election 2024

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka: ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಹಲವು ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ? ಮತದಾರರನ್ನು ಹೇಗೆ ಮೋಡಿ ಮಾಡಲಿದ್ದಾರೆ ಎಂದು ಜನರು ಕಾಯುತ್ತಿದ್ದಾರೆ. ಇಲ್ಲಿದೆ ಲೈವ್‌ ವಿಡಿಯೊ.

VISTARANEWS.COM


on

Modi in Karnataka Here live video of Modi rally in Chikkaballapur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಶನಿವಾರ – ಏಪ್ರಿಲ್ 20) ಮೂರನೇ ಬಾರಿಗೆ ಕರ್ನಾಟಕಕ್ಕೆ (Modi in Karnataka) ಆಗಮಿಸಿದ್ದಾರೆ. ಈಗ ಮಧ್ಯಾಹ್ನ 3 ಗಂಟೆಯಿಂದ ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶದಲ್ಲಿ ಮಾತನಾಡಲಿರುವ ಮೋದಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬು ಪರವಾಗಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಹಲವು ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ? ಮತದಾರರನ್ನು ಹೇಗೆ ಮೋಡಿ ಮಾಡಲಿದ್ದಾರೆ ಎಂದು ಜನರು ಕಾಯುತ್ತಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ; LIVE ವಿಡಿಯೊ ಮುಖಾಂತರ ನೇರವಾಗಿ ವೀಕ್ಷಿಸಿ

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Narendra Modi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇರಳದ ವಯನಾಡಿನ ಜತೆಗೆ ರಾಯ್‌ ಬರೇಲಿಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕತ್ತಾ: ಕೊನೆಗೂ ಹಲವು ದಿನಗಳ ಕುತೂಹಲಕ್ಕೆ ತೆರೆ ಎಳೆದು ಶುಕ್ರವಾರ (ಮೇ 3) ಕಾಂಗ್ರೆಸ್‌ ರಾಯ್‌ ಬರೇಲಿ (Rae Bareli) ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ (Lok Sabha Election 2024). ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ರಾಹುಲ್‌ ಗಾಂಧಿ ಇದೀಗ ಉತ್ತರ ಪ್ರದೇಶದಲ್ಲಿಯೂ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಟೀಕಿಸಿದ್ದಾರೆ. ವಯನಾಡಿನಲ್ಲಿ ಸೋಲುವ ಭೀತಿಯಿಂದ ರಾಹುಲ್‌ ಗಾಂಧಿ ರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ʼʼರಾಹುಲ್​ ಗಾಂಧಿ ಅಮೇಥಿ ಬಿಟ್ಟು ರಾಯ್​ಬರೇಲಿಗೆ ಓಡಿದ್ದಾರೆ. ಭಯ ಪಡಬೇಡಿ, ಓಡಬೇಡಿʼʼ ಎಂದು ತಮಾಷೆ ಮಾಡಿದ್ದಾರೆ. ವಯನಾಡಿನಲ್ಲಿ ಮತದಾನ ಮುಗಿದ ತಕ್ಷಣ ರಾಹುಲ್‌ ಗಾಂಧಿ ಬೇರೆ ಕ್ಷೇತ್ರವನ್ನು ಹುಡುಕಲಿದ್ದಾರೆ ಎಂದು ತಾವು ಹಿಂದೆ ಹೇಳಿದ್ದನ್ನು ನೆನಪಿಸಿಕೊಂಡ ಮೋದಿ, ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

ನಿರಂತರವಾಗಿ ಆಯ್ಕೆಯಾಗುತ್ತಿದ್ದ ರಾಯ್‌ ಬರೇಲಿ ಕ್ಷೇತ್ರವನ್ನು ಬಿಟ್ಟು ರಾಜ್ಯಸಭೆಯತ್ತ ಮುಖ ಮಾಡಿದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ನಡೆಯನ್ನೂ ಮೋದಿ ಟೀಕಿಸಿದ್ದಾರೆ. ʼʼಕಾಂಗ್ರೆಸ್‌ನ ಹಿರಿಯ ನಾಯಕಿ ಚುನಾವಣೆಯಲ್ಲಿ ಸ್ಪರ್ಧಿಸಲು ಭಯಪಡುತ್ತಾರೆ ಮತ್ತು ಕಣದಿಂದ ಓಡಿ ಹೋಗುತ್ತಾರೆ ಎನ್ನುವ ವಿಚಾರವನ್ನು ನಾನು ಮೊದಲೇ ಪಾರ್ಲಿಮೆಂಟ್‌ನಲ್ಲಿ ಹೇಳಿದ್ದೆ. ಅದರಂತೆ ಅವರು (ಸೋನಿಯಾ ಗಾಂಧಿ) ರಾಯ್‌ ಬರೇಲಿಯಿಂದ ರಾಜ್ಯಸಭೆಗೆ ಪಲಾಯನ ಮಾಡಿದ್ದಾರೆʼʼ ಎಂದು ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ರಾಯ್‌ ಬರೇಲಿ ಮತ್ತು ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಕುತೂಹಲ ಕೆರಳಿಸಿದ್ದ ಕ್ಷೇತ್ರಗಳು

ರಾಯ್‌ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು. ಕೊನೆಗೂ ಇಂದು ಕಾಂಗ್ರೆಸ್‌ ಪಟ್ಟಿ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಹರಿದಾಡುತ್ತಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇತ್ತ ರಾಯ್‌ ಬರೇಲಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಬಿಜೆ ದಿನೇಶ್‌ ಪ್ರತಾಪ್‌ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಕಾಂಗ್ರೆಸ್‌ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Continue Reading

Lok Sabha Election 2024

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ. “ನನಗೆ ಮಂಗಳವಾರ ದೆಹಲಿ ಪೊಲೀಸರಿಂದ ನೋಟಿಸ್ ಬಂದಿದೆ. ಆದರೆ ಏಕೆ ನೋಟಿಸ್ ನೀಡಲಾಯಿತು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇದು ಅರಾಜಕತೆಯಲ್ಲದೆ ಬೇರೇನೂ ಅಲ್ಲ” ಎಂದು ಠಾಕೂರ್ ಹೇಳಿದ್ದಾರೆ.

ಏನಿದು ಪ್ರಕರಣ?

ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೊವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸೆಲ್ ಎಫ್ಐಆರ್ ದಾಖಲಿಸಿತ್ತು. ಸಮುದಾಯಗಳ ನಡುವೆ ಜಗಳ ಸೃಷ್ಟಿಸುವ ಉದ್ದೇಶದಿಂದ ಕೆಲವು ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ʼʼತೆಲಂಗಾಣ ಕಾಂಗ್ರೆಸ್​​​ ಅಧಿಕೃತ ಎಕ್ಸ್ ಹ್ಯಾಂಡಲ್ ಈ ವೀಡಿಯೊವನ್ನು ಹಂಚಿಕೊಂಡಿದೆ. ತರುವಾಯ, ಪಕ್ಷದ ಹಲವಾರು ನಾಯಕರು ಅದನ್ನು ಮರು ಪೋಸ್ಟ್ ಮಾಡಿದ್ದಾರೆʼʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Continue Reading

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ದೇಶ

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

Tsering Namgyal: ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಐದನೇ ಹಂತದಲ್ಲಿ ಅಂದರೆ ಮೇ 20ರಂದು ಲಡಾಕ್‌ನಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Tsering Namgyal
Koo

ನವದೆಹಲಿ: ಕಾಂಗ್ರೆಸ್‌ ನಾಯಕ ತ್ಸೆರಿಂಗ್‌ ನಾಮ್‌ಗ್ಯಾಲ್‌ (Tsering Namgyal) ಅವರು ಲಡಾಕ್‌ (Ladakh) ಲೋಕಸಭೆ ಕ್ಷೇತ್ರದಲ್ಲಿ ಗುರುವಾರ (ಮೇ 2) ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚುನಾವಣೆ ಆಯೋಗವೂ ಅನುಮತಿ ನೀಡಿದೆ. ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ನಾಮಪತ್ರ ಸಲ್ಲಿಸುತ್ತಲೇ ತುಸು ಗೊಂದಲ ಉಂಟಾಗಿತ್ತು. ಇದಾದ ಬಳಿಕ ಚುನಾವಣೆ ಆಯೋಗವು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂದು ತಿಳಿಸಿದೆ. ಲಡಾಕ್‌ನಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಲಡಾಕ್‌ನಲ್ಲಿ ಹೈಡ್ರಾಮಾ

ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ಮುಗಿದರೂ, ಲಡಾಕ್‌ನಲ್ಲಿ ರಾಜಕೀಯ ಹೈಡ್ರಾಮಾ ಮಾತ್ರ ಮುಂದುವರಿದಿದೆ. ಲಡಾಕ್‌ನಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಹಾಜಿ ಹನಿಫಾ ಅವರು ಹೊರಹೊಮ್ಮಿದ್ದರು. ಆದರೆ, ಗುರುವಾರ (ಮೇ 2) ಬೆಳಗ್ಗೆ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಹೈಡ್ರಾಮಾಗೆ ಕಾರಣವಾಗಿತ್ತು. ಗೊಂದಲದ ಬಳಿಕ ಕಾಂಗ್ರೆಸ್‌ ನಾಯಕ ರಿಗ್ಜಿನ್‌ ಜೋರಾ ಅವರು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂಬುದಾಗಿ ಘೋಷಿಸಿದರು.

ಬಿಜೆಪಿಯಿಂದ ತಾಶಿ ಗ್ಯಾಲ್ಸನ್‌ ಅವರು ಬುಧವಾರ (ಮೇ 1) ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಲಡಾಕ್‌ನಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದು, ಇತ್ತೀಚೆಗೆ ಪಕ್ಷದಲ್ಲಿಯೇ ಅವರನ್ನು ಮರೆಗೆ ಸರಿಸಲಾಗುತ್ತಿತ್ತು. ಅಲ್ಲದೆ, ಅವರಿಗೆ ಟಿಕೆಟ್‌ ಕೂಡ ನಿರಾಕರಿಸಿದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಬಿಜೆಪಿ ಸಂಸದ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಇದಕ್ಕೂ ಮೊದಲು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಲಾಗುತ್ತಿತ್ತು. ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಮಾಸ್ಟರ್‌ ಸ್ಟ್ರೋಕ್‌ ಎಂದೇ ವರದಿಯಾಗಿತ್ತು. ಆದರೆ, ಕೆಲ ಹೊತ್ತಿನ ಬಳಿಕ ಕಣಕ್ಕಿಳಿದವರು ಕಾಂಗ್ರೆಸ್‌ ನಾಯಕನೇ ಹೊರತು, ಬಿಜೆಪಿ ಸಂಸದ ಅಲ್ಲ ಎಂಬ ವಿಷಯ ಗೊತ್ತಾಯಿತು. ಇಬ್ಬರ ಹೆಸರೂ ಒಂದೇ ಇರುವುದರಿಂದ ಗೊಂದಲ ಉಂಟಾಗಿತ್ತು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

Continue Reading
Advertisement
Summer Tour
ಪ್ರವಾಸ6 mins ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ9 mins ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Tips for bedroom corner
ಲೈಫ್‌ಸ್ಟೈಲ್12 mins ago

Tips for Bedroom Corner: ಮಲಗುವ ಕೋಣೆಯ ಮೂಲೆಗಳನ್ನು ಆಕರ್ಷಕವಾಗಿಸಲು ಕೆಲವು ಟಿಪ್ಸ್

Viral Video
ವೈರಲ್ ನ್ಯೂಸ್15 mins ago

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Rohit Sharma
ಪ್ರಮುಖ ಸುದ್ದಿ24 mins ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Prajwal Revanna Case face not visible in videos says HD Kumaraswamy
ಕ್ರೈಂ29 mins ago

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Covishield Vaccine
ಪ್ರಮುಖ ಸುದ್ದಿ41 mins ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ46 mins ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Namesakes
ದೇಶ49 mins ago

Namesake: ರಾಹುಲ್‌ಗಳು, ಲಾಲುಗಳು; ಒಂದೇ ಹೆಸರಿನವರ ಸ್ಪರ್ಧೆ ಕುರಿತು ಕೋರ್ಟ್‌ ಮಹತ್ವದ ಹೇಳಿಕೆ

Saanya Iyer
ಫ್ಯಾಷನ್1 hour ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ2 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ13 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ23 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌