Narendra Modi: ಕಾಂಗ್ರೆಸ್, ಡಿಎಂಕೆಯಿಂದ ಹಿಂದೂ ಧರ್ಮಕ್ಕೆ ನಿರಂತರ ಅವಮಾನ; ಮೋದಿ ವಾಗ್ದಾಳಿ - Vistara News

Lok Sabha Election 2024

Narendra Modi: ಕಾಂಗ್ರೆಸ್, ಡಿಎಂಕೆಯಿಂದ ಹಿಂದೂ ಧರ್ಮಕ್ಕೆ ನಿರಂತರ ಅವಮಾನ; ಮೋದಿ ವಾಗ್ದಾಳಿ

Narendra Modi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬಳಿಸಿದ್ದ ಶಕ್ತಿ ಪದವನ್ನು ಬಳಿಸಿ ಪ್ರಧಾನ ಮಂತ್ರಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಮತ್ತು ಡಿಎಂಕೆ ನಿರಂತರವಾಗಿ ಹಿಂದೂ ಧರ್ಮವನ್ನು ಅವಮಾನಿಸುತ್ತಿವೆ ಎಂದು ಹೇಳಿದ್ದಾರೆ.

VISTARANEWS.COM


on

modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ಪಕ್ಷಗಳು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ಭಾನುವಾರ ನಡೆದ ರ‍್ಯಾಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi), ಎನ್‌ಡಿಎ ಸರ್ಕಾರವನ್ನು ಟೀಕಿಸಲು ʼಶಕ್ತಿʼ ಪದವನ್ನು ಪ್ರಯೋಗಿಸಿದ್ದರು. ಇದೀಗ ಬಿಜೆಪಿ (BJP) ಇದನ್ನೇ ಪ್ರತ್ಯಸ್ತ್ರವಾಗಿ ಕೈಗೆತ್ತಿಕೊಂಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಈ ಪದವನ್ನು ಬಳಸಿ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ (INDIA bloc)ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿನ ಸೇಲಂನಲ್ಲಿ ಮಾತನಾಡಿದ ಮೋದಿ, ʼʼಕಾಂಗ್ರೆಸ್ ಮತ್ತು ಡಿಎಂಕೆ ಹಿಂದೂ ಧರ್ಮವನ್ನು ಅವಮಾನಿಸುವ ಪ್ರವೃತ್ತಿಯನ್ನು ಹೊಂದಿವೆ. ಆ ಪಕ್ಷಗಳ ನಾಯಕರು ಎಂದಿಗೂ ಇತರ ಧರ್ಮಗಳ ವಿರುದ್ಧ ಮಾತನಾಡುವುದಿಲ್ಲʼʼ ಹೇಳಿದ್ದಾರೆ.

ಹಿಂದೂ ಧರ್ಮದ ವಿರುದ್ಧ ಹೇಳಿಕ

ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿ ಪ್ರಧಾನಿ, “ಇಂಡಿಯಾ ಮೈತ್ರಿಕೂಟ ಉದ್ದೇಶಪೂರ್ವಕವಾಗಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದೆ. ಹಿಂದೂ ಧರ್ಮದ ವಿರುದ್ಧ ಯೋಜನೆ ರೂಪಿಸಲಾಗುತ್ತಿದೆ. ಕಾಂಗ್ರೆಸ್-ಡಿಎಂಕೆ ಮೈತ್ರಿ ಎಂದಿಗೂ ಇತರ ಧರ್ಮಗಳ ವಿರುದ್ಧ ಮಾತನಾಡುವುದಿಲ್ಲ. ಆದರೆ ಅವರು ಹಿಂದೂ ಧರ್ಮವನ್ನು ಅವಮಾನಿಸಲು ಒಂದು ಕ್ಷಣವೂ ಯೋಚಿಸುವುದಿಲ್ಲ” ಎಂದು ಆರೋಪಿಸಿದ್ದಾರೆ.

ʼʼಡಿಎಂಕೆ, ಕಾಂಗ್ರೆಸ್‌ ಮತ್ತು ʼಇಂಡಿಯಾʼ ಮೈತ್ರಿ ಕೂಟಗಳು ಶಕ್ತಿಯನ್ನು ನಿರ್ನಾಮ ಮಾಡುತ್ತೇವೆ ಎಂದು ಹೇಳಿವೆ. “ತಮಿಳುನಾಡಿನಲ್ಲಿ ಮಾರಿಯಮ್ಮನ್, ಕಾಂಚಿ ಕಾಮಾಕ್ಷಿ, ಮಧುರೈ ಮೀನಾಕ್ಷಿ ಕೂಡ ‘ಶಕ್ತಿ’ಯೇ. ಕಾಂಗ್ರೆಸ್, ಡಿಎಂಕೆ ಮತ್ತು ʼಇಂಡಿಯಾʼ ಮೈತ್ರಿಕೂಟವು ಈ ಶಕ್ತಿಯನ್ನು ನಾಶಪಡಿಸುವುದಾಗಿ ಹೇಳುತ್ತಿವೆ. ಹಿಂದೂ ಧರ್ಮದಲ್ಲಿ ಶಕ್ತಿ ಎಂದರೆ ಮಹಿಳಾ ಶಕ್ತಿ, ತಾಯಿಯ ಶಕ್ತಿʼʼ ಎಂದು ಮೋದಿ ಹೇಳಿದ್ದಾರೆ.

ಒಂದೇ ನಾಣ್ಯದ ಎರಡು ಮುಖಗಳು

ಡಿಎಂಕೆ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣಕ್ಕೆ ಇವು ಒತ್ತು ನೀಡುತ್ತವೆ. ಕಾಂಗ್ರೆಸ್‌ನಿಂದ ಅಧಿಕಾರವನ್ನು ದೂರ ಇಟ್ಟಾಗ ದೇಶವು 5 ಜಿ ತಂತ್ರಜ್ಞಾನವನ್ನು ತಲುಪಿತು. ಆದರೆ ತಮಿಳುನಾಡಿನಲ್ಲಿ ಡಿಎಂಕೆ ತನ್ನದೇ ಆದ 5 ಜಿ ನಡೆಸುತ್ತಿದೆ- ಅಂದರೆ ಇಲ್ಲಿನ 5 ಜಿ ಎಂದರೆ ತಮಿಳುನಾಡಿನ ಮೇಲೆ ನಿಯಂತ್ರಣ ಸಾಧಿಸಲು ಒಂದು ಕುಟುಂಬದ ಐದನೇ ತಲೆಮಾರಿನ ಪ್ರಯತ್ನ ಎಂದರ್ಥʼʼ ಎಂದು ಅವರು ಟೀಕಿಸಿದ್ದಾರೆ.

“ಇಂಡಿಯಾʼ ಮೈತ್ರಿಕೂಟವು ಮಹಿಳೆಯರೊಂದಿಗೆ ಯಾವ ರೀತಿ ವರ್ತಿಸುತ್ತದೆ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಬದುಕಿದ್ದಾಗ ಡಿಎಂಕೆ ನಾಯಕರು ಅವರೊಂದಿಗೆ ಹೇಗೆ ವರ್ತಿಸಿದರು ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಇದು ಡಿಎಂಕೆಯ ನಿಜವಾದ ಮುಖ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಹುಲ್‌ ಗಾಂಧಿ ‘ಶಕ್ತಿ’ ಹೇಳಿಕೆಗೆ ತಿರುಗಿ ಬಿದ್ದ ಬಿಜೆಪಿ ನಾಯಕರು ಹೇಳಿದ್ದೇನು?

ರಾಹುಲ್‌ ಗಾಂಧಿ ಹೇಳಿದ್ದೇನು?

ಮುಂಬೈಯ ಶಿವಾಜಿ ಪಾರ್ಕ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಶಕ್ತಿ ಎಂಬ ಪದದ ಪ್ರಸ್ತಾವ ಮಾಡಿದ್ದರು. ಎನ್‌ಡಿಎ ಸರ್ಕಾರವನ್ನು ಶಕ್ತಿಗೆ ಹೋಲಿಸಿದ್ದ ಅವರು, ಆ ಶಕ್ತಿಯ ವಿರುದ್ಧ ಹೋರಾಡುತ್ತೇವೆ ಎಂದಿದ್ದರು. “ಹಿಂದಿಯಲ್ಲಿ ಶಕ್ತಿ ಎಂಬ ಪದ ಇದೆ. ನಾವು ಆ ಶಕ್ತಿಯ ವಿರುದ್ಧ ಹೋರಾಡುತ್ತೇವೆ. ಅಷ್ಟಕ್ಕೂ, ಈ ಶಕ್ತಿ ಎಂದರೇನು? ಇದು ನಮಗೆ ಏನು ಮಾಡುತ್ತದೆ? ವಿದ್ಯುನ್ಮಾನ ಮತಯಂತ್ರಗಳ ಆತ್ಮ ಹಾಗೂ ಸಮಗ್ರತೆಯನ್ನು ರಾಜನಿಗೆ (ಮೋದಿ) ವರ್ಗಾಯಿಸಲಾಗಿದೆ. ಇ.ಡಿ, ಸಿಬಿಐಗಳು ಕೂಡ ರಾಜನ ವಶವಾಗಿವೆ. ಇವಿಎಂ, ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲ್ಲದೆ ಪ್ರಧಾನಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kangana Ranaut: ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಲೋಕಸಭಾ (Lok Sabha Election) ಅಭ್ಯರ್ಥಿ ಕಂಗನಾ ರಣಾವತ್​ (Kangana Ranaut) ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

ಕ್ವೀನ್ ಸಿನಿಮಾದ ನಟಿ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಇದಲ್ಲದೆ, ಅವರು 53,000 ರೂ.ಗಳ ಮೌಲ್ಯದ ವೆಸ್ಪಾ ಸ್ಕೂಟರ್ ಅನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ಅವರು 2 ಲಕ್ಷ ರೂ ನಗದು ಮತ್ತು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ, 17 ಕೋಟಿ ರೂ.ಗಳ ಸಾಲವಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

2022-23ರ ಆರ್ಥಿಕ ವರ್ಷದಲ್ಲಿ ಅವರ ಆದಾಯ 4 ಕೋಟಿ ರೂ.ಗಳಾಗಿದ್ದರೆ, ಹಿಂದಿನ ವರ್ಷ ಅವರು 12.3 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಕಂಗನಾ ರಣಾವತ್ ಅವರ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಅವರು ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಚಂಡೀಗಢದ ಖಾಸಗಿ ಶಾಲೆಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರುವುದು ತನ್ನ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ಅವರು ಘೋಷಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Narendra Modi: ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಆದಾಯವು 2018-19ರಲ್ಲಿ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂ.ಗೆ ಏರಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಅಫಿಡವಿಟ್​ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.

ಪ್ರಧಾನಿ ಮೋದಿಯ ನಾಮಪತ್ರದ ​ ವಿವರ ಇಲ್ಲಿದೆ

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಒಟ್ಟು ಆದಾಯ 2018-19ರಲ್ಲಿ ಇದ್ದ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂಪಾಯಿಗೆ ಏರಿದೆ.

ಶೈಕ್ಷಣಿಕ ಅರ್ಹತೆ

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪೂರ್ಣಗೊಳಿಸಿದ್ದೇನೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗುತ್ತಿರುವ ವಾರಾಣಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ನಾನು ಭಾವಪರವಶನಾಗಿದ್ದೇನೆ. ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿದಿರಲಿಲ್ಲ. ‘ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೇ ಲಿಯಾ ಹೈ’ (ಇಂದು, ತಾಯಿ ಗಂಗಾ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ) ಎಂದು ಹೇಳಿದ್ದಾರೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು

Continue Reading

Lok Sabha Election 2024

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

CM Siddaramaiah: ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂದು ಸಲಹೆ ನೀಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಆರೋಪ ಮಾಡಿದ್ದಾರೆ.

VISTARANEWS.COM


on

CM Siddaramaiah says Our government is stable for 5 years BJP will disintegrate
Koo

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Maharashtra CM Eknath Shinde) ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಿರುಗೇಟು ನೀಡಿದ್ದು, ತಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ಚಿಂತೆ ಬೇಡ. ಆದರೆ, ಚುನಾವಣೆ ಬಳಿಕ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಳ್ಳಲಿದೆ. ಅಲ್ಲದೆ, ಚುನಾವಣಾ ಸೋಲನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಹಾಗೂ ಅವರ ಮಕ್ಕಳ ತಲೆಗೆ ಕಟ್ಟುವ ಎಲ್ಲ ಪ್ರಯತ್ನಗಳು ನಡೆದಿವೆ ಎಂದು ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು ಎಂಬ ಸಲಹೆಯನ್ನೂ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪೋಸ್ಟ್‌ನಲ್ಲೇನಿದೆ?

“ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ. ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ.

ವಿಜಯೇಂದ್ರ ತಲೆದಂಡಕ್ಕೆ ವ್ಯೂಹ ರಚನೆ

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಹತಾಶೆಯಿಂದ ಮಾತನಾಡಿರುವ ಶಿಂಧೆ

ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading
Advertisement
Mango Juice Benefits
ಆರೋಗ್ಯ52 mins ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ52 mins ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ7 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ7 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್7 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ8 hours ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ8 hours ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ12 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202414 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202417 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ18 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು19 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌