Nitish Kumar: ಎನ್‌ಡಿಎ ಸರ್ಕಾರಕ್ಕೆ ಜೆಡಿಯು, ಟಿಡಿಪಿ ಬೆಂಬಲ; ಸ್ಪೀಕರ್‌ ಹುದ್ದೆಗೆ ಎರಡೂ ಪಕ್ಷಗಳಿಂದ ಬೇಡಿಕೆ? - Vistara News

Lok Sabha Election 2024

Nitish Kumar: ಎನ್‌ಡಿಎ ಸರ್ಕಾರಕ್ಕೆ ಜೆಡಿಯು, ಟಿಡಿಪಿ ಬೆಂಬಲ; ಸ್ಪೀಕರ್‌ ಹುದ್ದೆಗೆ ಎರಡೂ ಪಕ್ಷಗಳಿಂದ ಬೇಡಿಕೆ?

Nitish Kumar: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು (Election Results 2024), ಬಿಜೆಪಿ ನೇತೃತ್ವದ ಎನ್‌ಡಿಎ (NDA) 292 ಸೀಟುಗಳನ್ನು ಗೆದ್ದುಕೊಂಡು ಅತೀ ದೊಡ್ಡ ಒಕ್ಕೂಟವಾಗಿ ಹೊರ ಹೊಮ್ಮಿದೆ. ಈಗಾಗಲೇ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಈಗಾಗಲೇ ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ವ್ಯಕ್ತಪಡಿಸಿದೆ. ಇದಕ್ಕೆ ಬದಲಾಗಿ ಎರಡೂ ಪಕ್ಷಗಳು ಹೊಸ ಸರ್ಕಾರದಲ್ಲಿ ಪ್ರಮುಖ ಹುದ್ದೆಯಾದ ಸ್ಪೀಕರ್‌ ಪೋಸ್ಟ್‌ ನೀಡುವಂತೆ ಬೇಡಿಕೆ ಮುಂದಿಡುವ ಸಾಧ್ಯತೆ ಇದೆ.

VISTARANEWS.COM


on

Nitish Kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು (Election Results 2024), ಬಿಜೆಪಿ ನೇತೃತ್ವದ ಎನ್‌ಡಿಎ (NDA) 292 ಸೀಟುಗಳನ್ನು ಗೆದ್ದುಕೊಂಡು ಅತೀ ದೊಡ್ಡ ಒಕ್ಕೂಟವಾಗಿ ಹೊರ ಹೊಮ್ಮಿದೆ. ಈ ಮೂಲಕ ಬಹುಮತಕ್ಕೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ ಅನ್ನು ದಾಟಿದ್ದು, ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು  (N Chandrababu Naidu) ನೇತೃತ್ವದ ಟಿಡಿಪಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೇತೃತ್ವದ ಜೆಡಿಯು ಈಗಾಗಲೇ ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ವ್ಯಕ್ತಪಡಿಸಿದೆ. ಈ ಮಧ್ಯೆ ಎರಡೂ ಪಕ್ಷಗಳು ಹೊಸ ಸರ್ಕಾರದಲ್ಲಿ ಪ್ರಮುಖ ಹುದ್ದೆಯಾದ ಸ್ಪೀಕರ್‌ ಪೋಸ್ಟ್‌ ನೀಡುವಂತೆ ಬೇಡಿಕೆ ಮುಂದಿಡುವ ಸಾಧ್ಯತೆ ಇದೆ.

ಸ್ಪೀಕರ್ ಹುದ್ದೆಯನ್ನು ಮೈತ್ರಿ ಕೂಟಗಳಿಗೆ ನೀಡಬೇಕು ಎಂದು ಉಭಯ ಪಕ್ಷಗಳು ಈಗಾಗಲೇ ಬಿಜೆಪಿ ನಾಯಕತ್ವಕ್ಕೆ ಸೂಚಿಸಿವೆ ಎಂದು ಮೂಲಗಳು ತಿಳಿಸಿವೆ. 1990ರ ದಶಕದ ಕೊನೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದಾಗ ಟಿಡಿಪಿಯ ಜಿಎಂಸಿ ಬಾಲಯೋಗಿ ಸ್ಪೀಕರ್ ಆಗಿದ್ದರು.

ಭವಿಷ್ಯದಲ್ಲಿ ಸಂಭವಿಸಬಹುದಾದ ವಿಭಜನೆಯಿಂದ ಮೈತ್ರಿಯನ್ನು ರಕ್ಷಿಸುವ ಉದ್ದೇಶದಿಂದ ಪಕ್ಷಗಳು ಈ ಬೇಡಿಕೆ ಸಲ್ಲಿಸಿವೆ ಎಂದು ಅಂದಾಜಿಸಲಾಗಿದೆ. ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಸ್ಪೀಕರ್ ಪಾತ್ರವು ನಿರ್ಣಾಯಕವಾಗಿದೆ. ಈ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಸ್ಪೀಕರ್‌ ತೆಗೆದುಕೊಳ್ಳಬಹುದಾಗಿದ್ದು, ಇದೇ ಕಾರಣಕ್ಕೆ ಸ್ಪೀಕರ್‌ ಹುದ್ದೆ ಮುಖ್ಯ ಎನಿಸಿಕೊಂಡಿದೆ.

ಪ್ರಮುಖ ಖಾತೆಗಳಿಗೆ ಬೇಡಿಕೆ?

ಇದರ ಜತೆಗೆ ಕಿಂಗ್‌ ಮೇಕರ್‌ ಆಗಿರುವ ಟಿಡಿಪಿ ಕೇಂದ್ರ ಸರ್ಕಾರದಲ್ಲಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಖಾತೆಗಳನ್ನು ಕೋರಬಹುದು ಎಂದು ಮೂಲಗಳು ತಿಳಿಸಿವೆ. ಮಾತ್ರವಲ್ಲ ಕೃಷಿ, ಜಲಶಕ್ತಿ, ಐಟಿ ಮತ್ತು ರಾಜ್ಯ ಹಣಕಾಸು ಖಾತೆಗಳಿಗೂ ಬೇಡಿಕೆ ಇಡುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಟಿಡಿಪಿ 5-6 ಖಾತೆಗಳಿಗಾಗಿ ಹಕ್ಕು ಮಂಡಿಸಲಿದೆ.

ಬಹುಮತಕ್ಕೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 272. ಕಳೆದ ಬಾರಿ ಬಿಜೆಪಿ ಒಂದೇ 303 ಸೀಟುಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ ಕಮಲ ಪಡೆಗೆ ಕೇವಲ 240 ಸ್ಥಾನ ಸಿಕ್ಕಿದೆ. ಹೀಗಾಗಿ ಸರ್ಕಾರ ರಚಿಸಲು ಮಿತ್ರಪಕ್ಷಗಳ ಸಹಕಾರ ಅನಿವಾರ್ಯ. ಮಿತ್ರಪಕ್ಷಗಳೆಲ್ಲ ಸೇರಿ ಎನ್‌ಡಿಎಗೆ 292 ಸ್ಥಾನಗಳಿವೆ. ಇತ್ತ ಪ್ರತಿಪಕ್ಷಗಳ ʼಇಂಡಿಯಾʼ ಒಕ್ಕೂಟ 234 ಸ್ಥಾನ ಪಡೆದುಕೊಂಡಿದ್ದು, ಸರ್ಕಾರ ರಚನೆಯ ಪ್ರಯತ್ನದಲ್ಲಿದೆ. ಎನ್‌ಡಿಎ ಮಿತ್ರಪಕ್ಷಗಳನ್ನು ಸೆಳೆಯುವ ಪ್ರಯತ್ನವನ್ನು ಈಗಾಗಲೇ ಆರಂಭಿಸಿದೆ. ಬುಧವಾರ ʼಇಂಡಿಯಾʼ ಒಕ್ಕೂಟ ಕೂಡ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದೆ.

ಇದನ್ನೂ ಓದಿ: Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

ಜೂನ್‌ 8ರಂದು ಮೋದಿ ಪ್ರಮಾಣ ವಚವ ಸ್ವೀಕಾರ?

ಉತ್ತರ ಪ್ರದೇಶದ ವಾರಾಣಾಸಿಯಿಂದ ಸ್ಪರ್ಧಿಸಿ ಸತತ ಮೂರನೇ ಬಾರಿಗೆ ಆಯ್ಕೆಯಾಗಿರುವ ನರೇಂದ್ರ ಮೋದಿ ಜೂನ್‌ 8ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಅಂದು ಸಂಜೆ 4 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

Bypolls For 13 Seats: 7 ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ಇಂದು ನಡೆಯುತ್ತಿದೆ ಮರುಚುನಾವಣೆ; ಬಲಾಬಲ ಹೇಗಿದೆ?

ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಮರುಚುನಾವಣೆ (Bypolls For 13 Seats) ಬುಧವಾರ ಪ್ರಾರಂಭಗೊಂಡಿದೆ. ಲೋಕಸಭಾ ಚುನಾವಣೆಯ ಬಳಿಕ ನಡೆಯುವ ಮೊದಲ ಚುನಾವಣೆ ಇದಾಗಿದ್ದು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಸೇರಿದಂತೆ ಹಲವಾರು ಅನುಭವಿ ರಾಜಕಾರಣಿಗಳ ಭವಿಷ್ಯವನ್ನು ಇದು ನಿರ್ಧರಿಸಲಿದೆ.

VISTARANEWS.COM


on

By

Bypolls for 13 Seats
Koo

ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಇಂದು ಉಪಚುನಾವಣೆ (Bypolls For 13 Seats) ನಡೆಯುತ್ತಿದೆ. ಇದು ಲೋಕಸಭಾ ಚುನಾವಣೆಯ (Lok Sabha election) ಅನಂತರ ನಡೆಯುವ ಮೊದಲ ಚುನಾವಣೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಬಹುಮತ ಕಡಿಮೆಯಾಗಿದ್ದು, ಪ್ರತಿಪಕ್ಷಗಳು ಶಕ್ತಿಯನ್ನು ಪ್ರದರ್ಶಿಸಿವೆ.

ಬಿಜೆಪಿ (BJP) 240 ಸ್ಥಾನಗಳನ್ನು ಗೆದ್ದುಕೊಂಡರೆ ಇಂಡಿಯಾ ಮೈತ್ರಿಕೂಟವು (INDIA alliance) 232 ಸ್ಥಾನಗಳನ್ನು ಗಳಿಸಿತು. 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿತ್ತು.

ಯಾವ ಕ್ಷೇತ್ರಗಳಲ್ಲಿ ಮತದಾನ?

ಪಶ್ಚಿಮ ಬಂಗಾಳದ ರಾಯಂಜ್, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್, ಪಂಜಾಬ್ ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಘರ್, ಬಿಹಾರದ ರುಪೌಲಿ, ಮಧ್ಯಪ್ರದೇಶದ ಅಮರ್ವಾರಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇದರಲ್ಲಿ ನಾಲ್ಕು ರಾಜ್ಯಗಳನ್ನು ಇಂಡಿಯಾ ಮೈತ್ರಿ ಕೂಟ ಆಳುತ್ತಿದ್ದರೆ, ಉಳಿದ ರಾಜ್ಯಗಳಲ್ಲಿ ಬಿಜೆಪಿ ಅಥವಾ ಎನ್‌ಡಿಎ ಸರ್ಕಾರವಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಸೇರಿದಂತೆ ಅನೇಕ ಅನುಭವಿಗಳು ಮತ್ತು ಕೆಲವು ಕ್ಷೇತ್ರಗಳಲ್ಲಿ ಮೊದಲ ಬಾರಿಗೆ ಚುನಾವಣೆ ಚುನಾವಣೆಯನ್ನು ಎದುರಿಸಲಿದ್ದಾರೆ.


ಯಾಕೆ ಈ ಉಪಚುನಾವಣೆ ?

ಕೆಲವು ಕ್ಷೇತ್ರಗಳ ಸದಸ್ಯರು ಸಾವನ್ನಪ್ಪಿದ್ದು ಅಥವಾ ರಾಜೀನಾಮೆಯಿಂದ ಖಾಲಿಯಾಗಿರುವುದರಿಂದ ಮರು ಚುನಾವಣೆ ನಡೆಸಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತದಲ್ಲಿರುವ ಟಿಎಂಸಿ ಲೋಕಸಭಾ ಚುನಾವಣೆಯಲ್ಲಿ ತನ್ನ ಕಾರ್ಯಕ್ಷಮತೆಯಲ್ಲಿ ಲಾಭ ಮಾಡಿಕೊಳ್ಳಲು ನೋಡುತ್ತಿದೆ. ಆದರೆ ಸಂಸತ್ತಿನ ಚುನಾವಣೆಯ ಸಮಯದಲ್ಲಿ ಮೇಲುಗೈ ಸಾಧಿಸಿದ್ದ ನಾಲ್ಕು ಕ್ಷೇತ್ರಗಳಲ್ಲಿ ತನ್ನ ಮಹತ್ವದ ಮುನ್ನಡೆ ಸಾಧಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ.

2022ರ ಫೆಬ್ರವರಿಯಲ್ಲಿ ಟಿಎಂಸಿ ಶಾಸಕ ಸಾಧನ್ ಪಾಂಡೆ ಅವರ ಸಾವಿನಿಂದ ಮಣಿಕ್ತಾಲಾ ಗೆ ಮರುಚುನಾವಣೆ ಅಗತ್ಯವಾಗಿತ್ತು. ಟಿಎಂಸಿ ಈ ಸ್ಥಾನಕ್ಕೆ ಈಗ ಪಾಂಡೆ ಅವರ ಪತ್ನಿ ಸುಪ್ತಿಯನ್ನು ಕಣಕ್ಕಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮೂವರು ಮಾಜಿ ಶಾಸಕರನ್ನು ಕಣಕ್ಕಿಳಿಸಿದೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಬಿಜೆಪಿಯ ಹೋಶಿಯಾರ್ ಸಿಂಗ್ ವಿರುದ್ಧ ಡೆಹ್ರಾದಿಂದ ಸ್ಪರ್ಧಿಸುತ್ತಿದ್ದಾರೆ.
ಉತ್ತರಾಖಂಡದ ಮಾಂಗ್ಲಾರ್ ಕ್ಷೇತ್ರವು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇದು ಬಿಎಸ್ಪಿ ಶಾಸಕ ಸರ್ವಾತ್ ಕರೀಮ್ ಅನ್ಸಾರಿ ಅವರ ಸಾವಿನಿಂದ ತೆರವಾದ ಕ್ಷೇತ್ರವಾಗಿದೆ. ಈ ಸ್ಥಾನವನ್ನು ಎಂದಿಗೂ ಗೆದ್ದಿಲ್ಲದ ಬಿಜೆಪಿ ಗುಜ್ಜರ್ ನಾಯಕ ಕಾರ್ತಾರ್ ಸಿಂಗ್ ಭದಾನಾ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: Pralhad Joshi: ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ರಾಜ್ಯ ಸರ್ಕಾರ: ಪ್ರಲ್ಹಾದ್‌ ಜೋಶಿ ಆಕ್ರೋಶ

ಪಂಜಾಬ್‌ನ ಜಲಂಧರ್ ವೆಸ್ಟ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕಠಿಣ ಪರೀಕ್ಷೆಯಾಗಿದೆ. ಎಎಪಿ ಮೊಹಿಂದರ್ ಭಗತ್ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ ಸುರಿಂದರ್ ಕೌರ್ ಅವರನ್ನು ಸ್ಪರ್ಧೆಗೆ ಇಳಿಸಿದೆ.
ಮರು ಚುನಾವಣೆಯ ಮತ ಎಣಿಕೆ ಜುಲೈ 13ರಂದು ನಡೆಯಲಿದೆ.

Continue Reading

Lok Sabha Election 2024

Lok Sabha Election 2024: ಲೋಕಸಭೆ ಚುನಾವಣೆಯಲ್ಲಿ 7 ಸಂಸದರಿಗೆ ಸಿಕ್ಕಿದ್ದು ಶೇ. 70ಕ್ಕಿಂತ ಹೆಚ್ಚು ಮತ; ಯಾರಿವರು?

ಲೋಕಸಭೆಗೆ (Lok Sabha Election 2024) ಆಯ್ಕೆಯಾಗಿರುವ 542 ಸಂಸದರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ ಸುಮಾರು 279 ಮಂದಿ ಶೇ. 50ಕ್ಕಿಂತ ಹೆಚ್ಚಿನ ಮತಗಳಿಂದ ಗೆದ್ದಿದ್ದರೆ, 263ರಷ್ಟು ಮಂದಿ ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳಿಂದ ಚುನಾವಣೆ ಗೆದ್ದಿದ್ದಾರೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ರಾಷ್ಟ್ರೀಯ ಚುನಾವಣಾ ವೀಕ್ಷಣೆಯ ಹೊಸ ವರದಿಗಳು ತಿಳಿಸಿವೆ. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Lok Sabha Election 2024
Koo

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕೇವಲ ಏಳು ಸಂಸದರು (MPs) ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 70ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಮತ್ತು ಅವರೆಲ್ಲರೂ ಭಾರತೀಯ ಜನತಾ ಪಕ್ಷದವರು (BJP) ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಮತ್ತು ರಾಷ್ಟ್ರೀಯ ಚುನಾವಣಾ ವೀಕ್ಷಣೆಯ ಹೊಸ ವರದಿಗಳು ತಿಳಿಸಿವೆ.

ಅದೇ ರೀತಿ ಕಾಂಗ್ರೆಸ್‌ನ (congress) ಮೂವರು ಸಂಸದರು ತಮ್ಮ ಸ್ಥಾನಗಳಲ್ಲಿ ಒಟ್ಟು ಶೇ. 30ಕ್ಕಿಂತ ಕಡಿಮೆ ಮತಗಳೊಂದಿಗೆ ವಿಜೇತರಾಗಿದ್ದಾರೆ ಎಂಬುದನ್ನು ಈ ವರದಿ ಉಲ್ಲೇಖಿಸಿದೆ. ಹೊಸ ಲೋಕಸಭಾ ಚುನಾವಣೆಯಲ್ಲಿ 543 ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಮತ ಹಂಚಿಕೆಯನ್ನು ಎಡಿಆರ್ ವಿಶ್ಲೇಷಿಸಿದೆ. ಸೂರತ್ ನಲ್ಲಿ ಬಿಜೆಪಿ ಸಂಸದರು ಅವಿರೋಧವಾಗಿ ಆಯ್ಕೆಯಾಗಿದ್ದರು.

ವರದಿಯ ಪ್ರಕಾರ 542 ಸಂಸದರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ ಸುಮಾರು 279 ಮಂದಿ ಶೇ. 50ಕ್ಕಿಂತ ಹೆಚ್ಚಿನ ಮತಗಳಿಂದ ಗೆದ್ದಿದ್ದರೆ 263ರಷ್ಟು ಮಂದಿ ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳಿಂದ ಚುನಾವಣೆ ಗೆದ್ದಿದ್ದಾರೆ.


ಬಿಜೆಪಿಯ 239 ವಿಜೇತರಲ್ಲಿ 75 ಮಂದಿ ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳನ್ನು ಗಳಿಸಿ ಗೆದ್ದಿದ್ದಾರೆ. ಐಎನ್‌ಸಿಯಿಂದ 99 ವಿಜೇತರಲ್ಲಿ 57 ಮಂದಿ ಶೇ. 58, ಎಸ್‌ಪಿಯಿಂದ 37 ವಿಜೇತರಲ್ಲಿ 32 ಮಂದಿ ಶೇ. 86, ಎಐಟಿಸಿಯಿಂದ 29 ವಿಜೇತರಲ್ಲಿ 21 ಮಂದಿ ಶೇ. 72 ಮತ್ತು ಡಿಎಂಕೆಯಿಂದ 22 ವಿಜೇತರಲ್ಲಿ 14 ಮಂದಿ ಶೇ. 64ಕ್ಕಿಂತ ಕಡಿಮೆ ಮತಗಳಿಂದ ಗೆದ್ದಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರದಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳು ಚಲಾವಣೆಯಾದವು ಎಂದು ಅಂಕಿ ಅಂಶ ಉಲ್ಲೇಖಿಸಿದೆ. ಮತ್ತೊಂದೆಡೆ ಬಿಜೆಪಿಯ 164 ಮತ್ತು ಕಾಂಗ್ರೆಸ್‌ನ 42 ಸಂಸದರು ಶೇ. 50ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ ಗೆದ್ದಿದ್ದಾರೆ. ತೆಲುಗು ದೇಶಂ ಪಕ್ಷವು ಶೇ. 50ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ 15 ಸಂಸದರೊಂದಿಗೆ ಮೂರನೇ ಸ್ಥಾನದಲ್ಲಿದೆ.

ಹೆಚ್ಚು ಮತ ಪಡೆದ ಸಂಸದರು

ಅತಿ ಹೆಚ್ಚು ಮತಗಳ ಹಂಚಿಕೆಯೊಂದಿಗೆ ಗೆದ್ದ ಬಿಜೆಪಿಯ ಅಗ್ರ ಏಳು ಸಂಸದರಲ್ಲಿ ಇಂದೋರ್ ಸಂಸದ ಶಂಕರ್ ಲಾಲ್ವಾನಿ ಅವರು ಒಟ್ಟು ಶೇ. 78.54ರಷ್ಟು ಮತಗಳನ್ನು ಪಡೆದರು. ಅನಂತರ ನವಸಾರಿ ಸಂಸದ ಸಿ.ಆರ್. ಪಾಟೀಲ್ ಅವರು ಶೇ. 77ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದ್ದಾರೆ. ಬಿಜೆಪಿಯ ಏಳು ಸ್ಥಾನಗಳ ಪಟ್ಟಿಯಲ್ಲಿ ಗುಜರಾತ್‌ನಲ್ಲಿ ನಾಲ್ಕು, ಮಧ್ಯಪ್ರದೇಶದಲ್ಲಿ ಎರಡು ಮತ್ತು ತ್ರಿಪುರಾದಲ್ಲಿ ಒಂದು ಸ್ಥಾನ ಸೇರಿದೆ.

ವಿಜೇತರಿಗೆ ಪಡೆದ ಮತಗಳನ್ನು ಒಟ್ಟು ಚಲಾವಣೆಯಾದ ಮಾನ್ಯವಾದ ಮತಗಳಿಂದ ಭಾಗಿಸುವ ಮೂಲಕ ಶೇಕಡಾವಾರು ಮತ ಹಂಚಿಕೆಯನ್ನು ಲೆಕ್ಕಹಾಕಲಾಗುತ್ತದೆ. ಹಾಗಾಗಿ ಶೇ. 77ರಷ್ಟು ಮತ ಹಂಚಿಕೆ ಎಂದರೆ ಸರಾಸರಿ ಪ್ರತಿ 100 ಮಾನ್ಯ ಮತಗಳಲ್ಲಿ 77 ಪಾಟೀಲರಿಗೆ ಬಂದಿವೆ.

ವಿದಿಶಾ ಸಂಸದ ಶಿವರಾಜ್ ಸಿಂಗ್ ಚೌಹಾಣ್ ಒಟ್ಟು ಮತಗಳಲ್ಲಿ ಸುಮಾರು ಶೇ. 77ರಷ್ಟು ಗಳಿಸಿದರೆ, ಗಾಂಧಿನಗರ ಸಂಸದ ಅಮಿತ್ ಶಾ ಶೇ. 76.5ರಷ್ಟು ಪಡೆದರು. ಈ ಪಟ್ಟಿಯಲ್ಲಿ ತ್ರಿಪುರಾ ಪಶ್ಚಿಮ ಸಂಸದ ಬಿಪ್ಲಬ್ ಕುಮಾರ್ ದೇಬ್ ಶೇ. 72.85, ವಡೋದರಾ ಸಂಸದ ಡಾ ಹೇಮಾಂಗ್ ಜೋಶಿ ಶೇ. 72.04 ಮತ್ತು ಪಂಚಮಹಲ್ ಸಂಸದ ರಾಜಪಾಲ್ಸಿನ್ಹ್ ಮಹೇಂದ್ರಸಿನ್ಹ್ ಜಾದವ್ ಶೇ. 70.22ರಷ್ಟು ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನು ರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ


ಕಡಿಮೆ ಮತ ಪಡೆದವರು

ಐದು ಸಂಸದರು ತಮ್ಮ ಸ್ಥಾನಗಳಿಗೆ ಒಟ್ಟು ಮತಗಳ ಶೇ. 30ಕ್ಕಿಂತ ಕಡಿಮೆ ಮತಗಳಿಸಿ ಸದನಕ್ಕೆ ಬಂದಿದ್ದಾರೆ. ಇದರಲ್ಲಿ ಮೂರು ಸ್ಥಾನಗಳನ್ನು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಗಳಿಸಿದ್ದಾರೆ. ಫಿರೋಜ್‌ಪುರದ ಶೇರ್ ಸಿಂಗ್ ಘುಬಾಯಾ ಶೇ. 23.70, ಪಟಿಯಾಲಾದ ಡಾ ಧರ್ಮವೀರ ಗಾಂಧಿ ಶೇ. 26.54 ಮತ್ತು ಅಮೃತಸರದ ಗುರ್ಜಿತ್ ಸಿಂಗ್ ಔಜ್ಲಾ ಶೇ. 28.18ರಷ್ಟು ಮತಗಳನ್ನು ಗಳಿಸಿದ್ದಾರೆ.

ಪಟ್ಟಿಯಲ್ಲಿರುವ ಇತರ ಇಬ್ಬರು ಸಂಸದರು ಪಂಜಾಬ್‌ನವರಾಗಿದ್ದರು. ಆಮ್ ಆದ್ಮಿ ಪಕ್ಷದ ಆನಂದ್‌ಪುರ ಸಾಹಿಬ್‌ನ ಮಲ್ವಿಂದರ್ ಸಿಂಗ್ ಕಾಂಗ್ ಮತ್ತು ಸ್ವತಂತ್ರ ಫರೀದ್‌ಕೋಟ್ ಶಾಸಕ ಸರಬ್ಜೀತ್ ಸಿಂಗ್ ಖಾಲ್ಸಾ ಅವರು ಒಟ್ಟು ಮತಗಳ ಸುಮಾರು ಶೇ. 29ರಷ್ಟನ್ನು ಗಳಿಸಿದರು.

Continue Reading

ರಾಜಕೀಯ

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಕೆ. ಅಣ್ಣಾಮಲೈ ( K Annamalai) ಅವರು ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

By

K Annamalai
Koo

ಲೋಕಸಭಾ ಚುನಾವಣೆಯಲ್ಲಿ (Lok sabha election) ಬಿಜೆಪಿಯಿಂದ (bjp) ತಮಿಳುನಾಡಿನಲ್ಲಿ (tamilnadu) ಸ್ಪರ್ಧಿಸಿ ಸೋತಿದ್ದ ಒಂದು ತಿಂಗಳ ಬಳಿಕ ಕೆ. ಅಣ್ಣಾಮಲೈ ( K Annamalai) ಅವರಿಗೆ ಯುಕೆ (UK) ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ.

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ 2020ರ ಆಗಸ್ಟ್ ನಲ್ಲಿ ಬಿಜೆಪಿ ಸೇರಿದ್ದರು. ‘ಪಕ್ಷದ ನಿಷ್ಠಾವಂತ ಸೈನಿಕ’ ಎಂದು ಗುರುತಿಸಿಕೊಂಡಿರುವ ಅವರು ಪಕ್ಷಕ್ಕೆ ಸೇರಿದಾಗಿನಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ.

Continue Reading

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading
Advertisement
BBMP plans to make arrangements for food in areas where stray dogs do not get food
ಬೆಂಗಳೂರು37 ನಿಮಿಷಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು50 ನಿಮಿಷಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು2 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು3 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು4 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು5 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ6 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Fraud Case
ಬೆಂಗಳೂರು6 ಗಂಟೆಗಳು ago

Fraud Case : ಆನ್‌ಲೈನ್ ಜಾಬ್, ಹೂಡಿಕೆ ಹೆಸರಲ್ಲಿ ವಂಚನೆ; ಕನ್ನ ಹಾಕಿದ ಕೋಟಿ ಹಣ ಚೈನಾ ವ್ಯಾಲೆಟ್‌ಗೆ ರವಾನೆ!

Dina Bhavishya
ಭವಿಷ್ಯ6 ಗಂಟೆಗಳು ago

Dina Bhavishya : ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ, ಅಪಾಯ ತಂದುಕೊಳ್ಳುವುದು ಬೇಡ

Siddeshwara Temple
ಬೆಂಗಳೂರು1 ದಿನ ago

Siddheshwar Temple : ಸೊಲ್ಲಾಪುರದ ಸಿದ್ದೇಶ್ವರ ದೇಗುಲದ ಆವರಣದಲ್ಲಿ ವಚನಕಾರ ಸಿದ್ದರಾಮನ ವಚನಗಳ ಅಳವಡಿಕೆಗೆ ಕಸಾಪ ಆಗ್ರಹ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌