PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ...ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌ - Vistara News

Lok Sabha Election 2024

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಭುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

PM Narendra Modi: ಉತ್ತರಪ್ರದೇಶದ ಶ್ರವಸ್ಥಿಯಲ್ಲಿ ನಿನ್ನೆ ಪ್ರಧಾನಿ ಮೋದಿ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು. ನೆಚ್ಚಿನ ನಾಯಕನನ್ನು ನೋಡಲು ಲಕ್ಷಾಂತರ ಜನ ಆಗಮಿಸಿದ್ದರು. ಸೇರಿದ್ದ ಜನಸ್ತೋಮದ ಏರಿಯಲ್‌ ವ್ಯೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ಆಗಿದೆ. ಈ ದೃಶ್ಯವನ್ನು ಸ್ವತಃ ಪ್ರಧಾನಿ ಮೋದಿಯೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಭಾರೀ ಜನಸ್ತೋಮದ ಮೂಲಕ ಪ್ರಧಾನಿ ಮೋದಿ ಶಕ್ತಿಪ್ರದರ್ಶನ ನಡೆಸಿದ್ದಾರೆ.

VISTARANEWS.COM


on

PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉತ್ತರಪ್ರದೇಶ: ಲೋಕಸಭೆ ಚುನಾವಣೆ(Lok Sabha Election 2024) ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರಾಜಕೀಯ ನಾಯಕರು ಒಂದರ ಮೇಲೊಂದರಂತೆ ರ್ಯಾಲಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಿನ್ನೆ ಉತ್ತರಪ್ರದೇಶ(Uttara Pradesh)ದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಚಾರ ಕಾರ್ಯಕ್ರಮದಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರಪ್ರದೇಶದ ಶ್ರವಸ್ಥಿಯಲ್ಲಿ ನಿನ್ನೆ ಪ್ರಧಾನಿ ಮೋದಿ ಬೃಹತ್‌ ಸಮಾವೇಶ ಆಯೋಜಿಸಲಾಗಿತ್ತು. ನೆಚ್ಚಿನ ನಾಯಕನನ್ನು ನೋಡಲು ಲಕ್ಷಾಂತರ ಜನ ಆಗಮಿಸಿದ್ದರು. ಸೇರಿದ್ದ ಜನಸ್ತೋಮದ ಏರಿಯಲ್‌ ವ್ಯೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ಆಗಿದೆ. ಈ ದೃಶ್ಯವನ್ನು ಸ್ವತಃ ಪ್ರಧಾನಿ ಮೋದಿಯೇ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಭಾರೀ ಜನಸ್ತೋಮದ ಮೂಲಕ ಪ್ರಧಾನಿ ಮೋದಿ ಶಕ್ತಿಪ್ರದರ್ಶನ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಕೋಮುವಾದ, ಜಾತಿವಾದ ಮತ್ತು ಸ್ವಜನಪಕ್ಷಪಾತ ಕ್ಯಾನ್ಸರ್‌ಗಿಂತಲೂ ಭೀಕರವಾಗಿದ್ದು, ಅದು ದೇಶವನ್ನೇ ಹಾಳು ಮಾಡುತ್ತವೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ. ಇಂಡಿಯಾ ಒಕ್ಕೂಟ ಕ್ಯಾನ್ಸರ್‌ಗೊಂತಲೂ ಭೀಕರವಾದ ಖಾಯಿಲೆಗಳನ್ನು ಹೊಂದಿದೆ. ಅವರು ದೇಶದೆಲ್ಲೆಡೆ ಹರಡಿದರೆ ದೇಶ ನಾಶವಾಗುವುದು ಖಚಿತ. ದೇಶದೆಲ್ಲೆಡೆ ಎಸ್‌ ಮತ್ತು ಕಾಂಗ್ರೆಸ್‌ ಸಂಪೂರಣವಾಗಿ ನಾಶವಾಗಿದೆ. ಇಡೀ ದೇಶವೇ ಮತ್ತೊಮ್ಮೆ ಮೋದಿ ಎಂಬ ಮಂತ್ರ ಪಠಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ರ್ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ

ಕಳೆದ ವಾರ ಉತ್ತರಪ್ರದೇಶದ ಪಡಿಲ ಮಹಾದೇವ್‌ನಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಮತ್ತು ಅಖಿಲೇಶ್‌ ಯಾದವ್‌(Akhilesh Yadav) ಭಾಗಿಯಾಗಿದ್ದ ಚುನಾವಣಾ ರ್ಯಲಿಯಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿ, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಫುಲ್‌ಫುರದಲ್ಲಿ ಸ್ವತಃ ನಾಯಕರೇ ಆಘಾತಕ್ಕೀಡಾಗುವಂತಹ ರೀತಿಯಲ್ಲಿ ಜನ ಭಾಗಿಯಾಗಿದ್ದರು. ನೆರೆದಿರುವ ಜನರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ: Lok Sabha Election 2024: ಉತ್ತರ ಕನ್ನಡ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂಇಎಸ್‌ನಿಂದ ನಿರಂಜನ್ ಸರ್ದೇಸಾಯಿ ಸ್ಪರ್ಧೆ

ಭಾರೀ ಜನಸ್ತೋಮ ಕಂಡು ದಂಗಾಗಿದ್ದ ರಾಹುಲ್‌ ಮತ್ತು ಅಖಿಲೇಶ್‌ ವೇದಿಕೆಯಿಂದ ನಿರ್ಗಮಿಸುವುದೇ ಸೂಕ್ತ ಎಂದು ಭಾವಿಸಿದರು. ಕಾರ್ಯಕರ್ತರ ಈ ರೀತಿಯಾದ ಅನುಚಿತ ವರ್ತನೆಯಿಂದ ಕುಪಿತಗೊಂಡ ಇಬ್ಬರೂ ನಾಯಕರು ಏನೂ ಮಾತನಾಡಲಿಲ್ಲ. ತಾವು ಮಾಡಬೇಕಾಗಿದ್ದ ಭಾಷಣವನ್ನೂ ಮಾಡದೇ ಇಬ್ಬರೂ ನಾಯಕರು ವೇದಿಕೆಯಿಂದ ನಿರ್ಗಮಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ayodhya Ram Mandir: ಅಯೋಧ್ಯೆ ಜನರ ಮನವೊಲಿಕೆಗೆ ಮುಂದಾದ ಬಿಜೆಪಿ; ಜಾಗ ಕಳೆದುಕೊಂಡ ವರ್ತಕರಿಗೆ ಭರ್ಜರಿ ಆಫರ್‌!

ಅಯೋಧ್ಯೆ ಪಟ್ಟಣದಲ್ಲಿ (Ayodhya Ram Mandir) ಸರ್ಕಾರ ನಿರ್ಮಿಸಿದ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ.

VISTARANEWS.COM


on

By

Ayodhya Ram Mandir
Koo

ಲಕ್ನೋ: ಉತ್ತರ ಪ್ರದೇಶದ (uttarapradesha) ಅಯೋಧ್ಯೆಯಲ್ಲಿ ರಾಮ ಮಂದಿರದ (Ayodhya Ram Mandir) ನಿರ್ಮಾಣದ ವೇಳೆ ಅಯೋಧ್ಯೆ (ayodhya) ಅಭಿವೃದ್ಧಿ ಪ್ರಾಧಿಕಾರವು (ADA) ಕೈಗೊಂಡ ರಸ್ತೆ ವಿಸ್ತರಣೆ ಕಾಮಗಾರಿಗಾಗಿ (road widening project) ಸ್ಥಳಾಂತರಗೊಂಡ ಅಂಗಡಿ ಮಾಲೀಕರಿಗೆ ಹಂಚಿಕೆಯಾಗಿರುವ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲ, ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ 500 ಅಂಗಡಿಗಳನ್ನು ಪಡೆಯುವವರಿಗೆ ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತುಗಳಲ್ಲಿ ಹಣ ಪಾವತಿಸುವ ಆಫರ್‌ ಕೂಡ ನೀಡಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಇರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಹೀನಾಯವಾಗಿ ಸೋತು ಹೋಗಿತ್ತು. ಅಭಿವೃದ್ಧಿ ಕಾಮಗಾರಿಗಾಗಿ ಸ್ಥಳ ಕಳೆದುಕೊಂಡ ಜನ ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ಸ್ಪಂದನೆ ಸಿಗದೆ ಆಕ್ರೋಶಗೊಂಡಿದ್ದರು. ಇದರಿಂದ ಕಳವಳಗೊಂಡಿರುವ ಬಿಜೆಪಿ, ಅಯೋಧ್ಯೆಯ ಜನರ ಮನವೊಲಿಸಲು ಮುಂದಾಗಿದೆ.

ಈ ಕುರಿತು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಯೋಧ್ಯೆ ವಿಭಾಗೀಯ ಆಯುಕ್ತ ಹಾಗೂ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ. ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದೇವೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ದಯಾಳ್ ಹೇಳಿದರು.

ರಾಮ್ ಪಥ್ ಎಂದು ಹೆಸರಿಸಲಾದ ಸಹದತ್‌ಗಂಜ್‌ನಿಂದ ನಯಾ ಘಾಟ್‌ವರೆಗಿನ 13 ಕಿ.ಮೀ. ರಸ್ತೆ ವಿಸ್ತರಣೆ ಯೋಜನೆಯಲ್ಲಿ ಸುತ್ತಲಿನ ಅಂಗಡಿದಾರರು ಸ್ಥಳಾಂತರಗೊಂಡಿದ್ದಾರೆ. ಯೋಜನೆಯು ಡಿಸೆಂಬರ್ 2023ರಲ್ಲಿ ಪೂರ್ಣಗೊಂಡಿತು. ಈ ಮೊದಲು, ಅಂಗಡಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಂಗಡಿ ಮಾಲೀಕರು ಸಂಪೂರ್ಣ ಹಣವನ್ನು ಎಡಿಎಗೆ ಪಾವತಿಸಬೇಕಾಗಿತ್ತು.

ಈ ಅಂಗಡಿಗಳ ಬೆಲೆ ಸುಮಾರು 15ರಿಂದ 20 ಲಕ್ಷ ರೂಪಾಯಿಗಳಾಗಿದ್ದು, ಅಂಗಡಿದಾರರು ಈ ದೊಡ್ಡ ಮೊತ್ತವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಅವರ ಮುಂದಿದ್ದ ಏಕೈಕ ಆಯ್ಕೆ ಬ್ಯಾಂಕ್‌ ಸಾಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಅಂಗಡಿಗಳು ಸಿದ್ಧವಾಗಿದ್ದವು. ಆದರೆ ಹಣಕಾಸಿನ ಅಡಚಣೆಯಿಂದಾಗಿ ಕಳೆದ ತಿಂಗಳವರೆಗೆ ಸುಮಾರು 75 ಅಂಗಡಿದಾರರು ಮಾತ್ರ ಅಂಗಡಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂಗಡಿಗಳ ಬೆಲೆಯನ್ನು ಶೇಕಡಾ 30ರಷ್ಟು ಇಳಿಸಿದ್ದಕ್ಕಾಗಿ ನಾವು ರಾಜ್ಯ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ. ಮತ್ತು ಉಳಿದ ಮೊತ್ತವನ್ನು 20 ವರ್ಷಗಳ ಸುಲಭ ಬಡ್ಡಿ ರಹಿತ ಕಂತುಗಳಲ್ಲಿ ಪಾವತಿಸಲಾಗುವುದು ಎಂದು ಅಯೋಧ್ಯೆಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅತ್ಯಂತ ಹೀನಾಯ ಸೋಲನ್ನು ಅನುಭವಿಸಿತು. ಎರಡು ಬಾರಿ ಸಂಸದರಾಗಿದ್ದ ಲಲ್ಲು ಸಿಂಗ್ ಅವರು ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ವಿರುದ್ಧ ಸೋತರು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ 54,567 ಮತಗಳ ಅಂತರದಿಂದ ಪ್ರತಿಷ್ಠಿತ ಸ್ಥಾನವನ್ನು ಗೆದ್ದಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಆವರಣದಲ್ಲೇ ಗುಂಡು ತಗುಲಿ ಯೋಧ ಸಾವು; ರಾತ್ರಿ ಏನಾಯ್ತು?

ಈ ವರ್ಷದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭವ್ಯವಾಗಿ ಉದ್ಘಾಟಿಸಿದ ಅನಂತರರೂ ಫೈಜಾಬಾದ್‌ನ ಜನರು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ್ದರು. ಅಯೋಧ್ಯೆ ಇರುವ ಈ ಕ್ಷೇತ್ರದಲ್ಲಿ ಪಕ್ಷದ ಸೋಲಿನ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳಲು ರಾಜ್ಯ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಚೌಧರಿ ಬುಧವಾರ ಎರಡು ದಿನಗಳ ಭೇಟಿಗಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ.

Continue Reading

ದೇಶ

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Narendra Modi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.

“ಕಳೆದ 60 ವರ್ಷದಲ್ಲಿಯೇ ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರವನ್ನು ಸತತ ಮೂರನೇ ಬಾರಿಗೆ ಆಯ್ಕೆ ಮಾಡಿರಲಿಲ್ಲ. ಆದರೆ, ದೇಶದ ಜನರು ನನ್ನನ್ನು ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ನೇಮಕ ಮಾಡಿದ್ದಾರೆ. ವಾರಾಣಸಿಯ ಜನರೂ ನನ್ನ ಜತೆ ನಿಂತಿದ್ದಾರೆ. ಇದು ಐತಿಹಾಸಿಕವಾಗಿದ್ದು, ಮುಂದಿನ 5 ವರ್ಷಗಳವರೆಗೆ ನಿಮ್ಮ ಸೇವೆ ಮಾಡುತ್ತೇನೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಶ್ರಮ ವಹಿಸುತ್ತೇನೆ. ರೈತರು, ಯುವಕರು ಹಾಗೂ ಮಹಿಳೆಯರು ದೇಶದ ಮೂರು ಸ್ತಂಭಗಳಾಗಿದ್ದು, ಇವರೆಲ್ಲರ ಏಳಿಗೆಗೆ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

“ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದೇಶದ 9.26 ಕೋಟಿ ರೈತರಿಗೆ ಹಣಕಾಸು ನೆರವು ನೀಡುವ ಕಡತಕ್ಕೆ ನಾನು ಮೊದಲು ಸಹಿ ಹಾಕಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡುವುದು ನಮ್ಮ ಉದ್ದೇಶವಾಗಿತ್ತು. ಇನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಬಡವರಿಗೆ ಮನೆ ನಿರ್ಮಿಸುವ ಕುರಿತು ಕೂಡ ತೀರ್ಮಾನಿಸಲಾಗಿದೆ. ಲಕ್‌ಪತಿ ದೀದಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರು ಸಕಲ ರೀತಿಯಲ್ಲಿ ಏಳಿಗೆ ಹೊಂದಲಿದ್ದಾರೆ” ಎಂದರು.

“ಮೂರನೇ ಅವಧಿಯಲ್ಲಿ ದೇಶದ ಏಳಿಗೆಗೆ ಜತೆಗೆ ವಾರಾಣಸಿಯನ್ನೂ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಕಾಶಿಯ ಯುವಕ, ಯುವತಿಯರು, ರೈತರ ಏಳಿಗೆಗೆ ಹತ್ತಾರು ಕ್ರಮಗಳು, ರೈಲು ನಿಲ್ದಾಣ ಅಭಿವೃದ್ಧಿ, ಸಾಂಸ್ಕೃತಿಕ ಹಿರಿಮೆ, ಪರಂಪರೆಯನ್ನು ಮರುಕಳಿಸಲಾಗಿದೆ. ಧಾರ್ಮಿಕ ನಗರಿಯು ಅಭಿವೃದ್ಧಿಯ ನಗರವಾಗಿಯೂ ರೂಪುಗೊಂಡಿದ್ದನ್ನು ಎಲ್ಲರೂ ಕಾಣಬಹುದು. ಕಾಶಿ ವಿಶ್ವನಾಥನ ಕೃಪಾಶೀರ್ವಾದದಿಂದ ಮುಂದಿನ ವರ್ಷಗಳಲ್ಲಿಯೂ ಏಳಿಗೆಗೆ ಶ್ರಮ ವಹಿಸುತ್ತೇವೆ. ನನಗೆ ಆಶೀರ್ವಾದ ಮಾಡಿದ ಎಲ್ಲರಿಗೂ ಮತ್ತೊಮ್ಮೆ ಹೃದಯಾಂತರಾಳದ ಧನ್ಯವಾದ” ಎಂದು ಹೇಳಿದರು.

ಇದನ್ನೂ ಓದಿ: ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Continue Reading

ರಾಜಕೀಯ

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Opposition Leader: ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಪ್ರತಿಪಕ್ಷ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದರಿಂದ ಅಧಿಕೃತವಾಗಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿವೆ.

VISTARANEWS.COM


on

By

Leader of the Opposition
Koo

ಲೋಕಸಭೆ ಚುನಾವಣೆ (loksabha election) ಫಲಿತಾಂಶ ಹೊರಬಿದ್ದು ಹದಿನೈದು ದಿನ ಕಳೆದಿದೆ. ಈಗ ಭಾರಿ ಚರ್ಚೆಯಲ್ಲಿರುವ ವಿಷಯ ವಿರೋಧ ಪಕ್ಷದ ನಾಯಕನ (Opposition Leader) ಸ್ಥಾನದ್ದು. ಯಾಕೆಂದರೆ 10 ವರ್ಷಗಳ ಬಳಿಕ ದೇಶದ ಕೆಳಮನೆಯಲ್ಲಿ (loksabha) ಪ್ರತಿಪಕ್ಷದ ನಾಯಕ ತನ್ನ ಸ್ಥಾನವನ್ನು ಅಲಂಕರಿಸಲಿದ್ದಾರೆ. 2014ರಿಂದ ಈ ಹುದ್ದೆ ಖಾಲಿಯಿತ್ತು. ಆದರೆ ಈ ಬಾರಿ ಕಾಂಗ್ರೆಸ್ (congress) ಸಾಕಷ್ಟು ಸ್ಥಾನಗಳನ್ನು ಗಳಿಸಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಶೀಘ್ರದಲ್ಲಿ ನಡೆಯಲಿದೆ.

ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ವಿಶೇಷವೆಂದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಇಂತಹ ಘಟನೆ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿದೆ.

ವಿರೋಧ ಪಕ್ಷದ ಮೊದಲ ನಾಯಕ

ಪಂಡಿತ್ ಜವಾಹರಲಾಲ್ ನೆಹರೂ ಪ್ರಧಾನಿ ಆಗಿದ್ದ ಮೊದಲ, ಎರಡನೇ ಮತ್ತು ಮೂರನೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಹುದ್ದೆ ಖಾಲಿ ಉಳಿದಿತ್ತು. ನಾಲ್ಕನೇ ಲೋಕಸಭೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದು ರಾಮ್ ಸುಭಾಗ್ ಅವರು ಈ ಸ್ಥಾನ ಪಡೆದರು.

ಎಂಟು ಬಾರಿ ಸ್ಥಾನ ಖಾಲಿಯಾಗಿತ್ತು

ಐದು, ಏಳು ಮತ್ತು ಎಂಟನೇ ಲೋಕಸಭೆಯಲ್ಲಿ ಈ ಹುದ್ದೆ ಖಾಲಿ ಉಳಿದಿತ್ತು. 16ನೇ ಲೋಕಸಭೆ ಚುನಾವಣೆ 2014 ಮತ್ತು 17ನೇ ಲೋಕಸಭೆ 2019ರಲ್ಲಿ ವಿರೋಧ ಪಕ್ಷಗಳು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. 18ನೇ ಲೋಕಸಭೆಯಲ್ಲಿ ಪ್ರಪ್ರಥಮ ಬಾರಿಗೆ ನರೇಂದ್ರ ಮೋದಿ ವಿರುದ್ಧ ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನು ನೇಮಿಸುವ ಅವಕಾಶ ವಿಪಕ್ಷಗಳಿಗೆ ಸಿಕ್ಕಿದೆ. ಲೋಕಸಭೆಯಲ್ಲಿ ಒಟ್ಟು ಎಂಟು ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಉಳಿದಿತ್ತು.

10 ವರ್ಷಗಳ ಅನಂತರ ಕಾಂಗ್ರೆಸ್‌ಗೆ ಅವಕಾಶ

2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 292 ಲೋಕಸಭಾ ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆಯಲು ಶಕ್ತವಾಗಿತ್ತು. ಆದರೆ ಈ ಬಾರಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಷ್ಟು ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ವಿರೋಧ ಪಕ್ಷದ ನಾಯಕನಿಗೆ ಸಿಗುವ ಸೌಲಭ್ಯಗಳೇನು?

ವಿರೋಧ ಪಕ್ಷದ ನಾಯಕನ ಹುದ್ದೆಯು ಕ್ಯಾಬಿನೆಟ್ ಸಚಿವರಿಗೆ ಸಮಾನವಾಗಿದೆ. ಅವರು ಕೇಂದ್ರ ಸಚಿವರಿಗೆ ಸಮಾನವಾದ ಸಂಬಳ, ಭತ್ಯೆಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ. ವಸತಿ ಮತ್ತು ಚಾಲಕನೊಂದಿಗೆ ಕಾರನ್ನು ಒದಗಿಸಲಾಗುತ್ತದೆ. ವಿರೋಧ ಪಕ್ಷದ ನಾಯಕರಿಗೂ ಸಿಬ್ಬಂದಿ ಸಿಗುತ್ತಾರೆ. ವಿರೋಧ ಪಕ್ಷದ ನಾಯಕರು ಸಾರ್ವಜನಿಕ ಖಾತೆಗಳು, ಸಾರ್ವಜನಿಕ ಉದ್ಯಮಗಳು ಮತ್ತು ಅಂದಾಜುಗಳಂತಹ ಪ್ರಮುಖ ಸಮಿತಿಗಳ ಸದಸ್ಯರಾಗಿರುತ್ತಾರೆ. ಅವರು ಹಲವಾರು ಇತರ ಜಂಟಿ ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ.

ಸಿಬಿಐ, ಎನ್‌ಎಚ್‌ಆರ್‌ಸಿ, ಕೇಂದ್ರ ಜಾಗೃತ ಆಯೋಗ, ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರನ್ನು ನೇಮಿಸುವ ಆಯ್ಕೆ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ಸದಸ್ಯರನ್ನಾಗಿ ಮಾಡಲಾಗುತ್ತದೆ. ಸಂಸತ್ತಿನಲ್ಲಿ ಸರ್ಕಾರದ ನೀತಿಗಳನ್ನು ಟೀಕಿಸುವ ಸ್ವಾತಂತ್ರ್ಯ ವಿರೋಧ ಪಕ್ಷದ ನಾಯಕನಿಗೆ ಇರುತ್ತದೆ.

Continue Reading

ಪ್ರಮುಖ ಸುದ್ದಿ

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

DK Shivakumar: ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ24 mins ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ1 hour ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ1 hour ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ1 hour ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ2 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ3 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ3 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ3 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌