Site icon Vistara News

Vistara News Polling Booth: ಚಿಕ್ಕೋಡಿ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ; ಮತದಾರನ ಮನದಾಳದಲ್ಲೇನಿದೆ?

chikkodi vistara poll

ಚಿಕ್ಕೋಡಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಶನಿವಾರ (ಮಾ. 23) ನಡೆಸಿದ ಪೋಲಿಂಗ್‌ ಬೂತ್‌ (Vistara news polling booth) ಸಮೀಕ್ಷೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ‌ ಮತ್ತೊಮ್ಮೆ ಬಿಜೆಪಿ ಪರ ಜನರು ಒಲವು ತೋರಿದ್ದಾರೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಇವುಗಳ ಪೈಕಿ ಒಟ್ಟು 6524 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ. 57ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇ.43ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ.

ವಿಸ್ತಾರ ನ್ಯೂಸ್‌ ನಡೆಸಿದ ಈ ಸಮೀಕ್ಷೆಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾವಿರಾರು ಕರೆಗಳು ಬಂದಿವೆ. ಅದರಲ್ಲಿ ಸ್ವೀಕರಿಸಿದ ಒಟ್ಟು 6524 ಕರೆಗಳ ಪೈಕಿ ಬಿಜೆಪಿಗೆ 3718 ಮತ, ಕಾಂಗ್ರೆಸ್‌ಗೆ 2806 ಮತ ಬಂದಿವೆ. ಇದರಿಂದ ಇಲ್ಲಿ ಮತ್ತೊಮ್ಮೆ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂಬುವುದು ಹೆಚ್ಚಿನ ಜನರ ಅಭಿಪ್ರಾಯವಾಗಿದೆ. ಆದರೆ, ಕಾಂಗ್ರೆಸ್‌ ಸಹ ತೀರಾ ಹಿಂದೆ ಬಿದ್ದಿಲ್ಲ. ಹೀಗಾಗಿ ಕಾಂಗ್ರೆಸ್‌ ಇಲ್ಲಿ ಗೆಲ್ಲಬೇಕಾದರೆ ಶಕ್ತಿ ಮೀರಿ ಪ್ರಯತ್ನವನ್ನು ಹಾಕಬೇಕಿದೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು : 6524
ಬಿಜೆಪಿ : 3718 (ಶೇ.57)
ಕಾಂಗ್ರೆಸ್ : 2806 (ಶೇ.43)
ಇತರೆ : 00

ಇದನ್ನೂ ಓದಿ | Vistara News Polling Booth: ಚಿತ್ರದುರ್ಗದಲ್ಲಿ ಮತ್ತೆ ಬಿಜೆಪಿ ಮೇಲುಗೈ; ಕಾಂಗ್ರೆಸ್‌ಗೆ ಹಿನ್ನಡೆ

ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಕಣಕ್ಕಿಳಿಯುತ್ತಿದ್ದು, ಕಾಂಗ್ರೆಸ್‌ನಿಂದ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುತ್ತಿದ್ದಾರೆ. ಅಣ್ಣಾ ಸಾಹೇಬ ಜೊಲ್ಲೆ ಅವರು ಲಿಂಗಾಯತ ಸಮುದಾಯದ ನಾಯಕರಾಗಿದ್ದು, ಎರಡನೇ ಬಾರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆದಿದ್ದಾರೆ. ಇನ್ನು ಕ್ಷೇತ್ರದ ವಾಲ್ಮೀಕಿ ಸಮುದಾಯದ ಪ್ರಭಾವಿ ಕಾಂಗ್ರೆಸ್‌ ನಾಯಕ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಲಿಂಗಾಯತ ಪ್ರಾಬಲ್ಯದ ಚಿಕ್ಕೋಡಿ ಕ್ಷೇತ್ರದಲ್ಲಿ ಲಿಂಗಾಯತ ಮತ 4.10 ಲಕ್ಷ, ಕುರುಬ- 1.70 ಲಕ್ಷ, ಎಸ್‌ಸಿ 1.65 ಲಕ್ಷ, ಎಸ್.ಟಿ-90,000, ಮುಸ್ಲಿಂ- 1,80,000 ಸೇರಿ ಸೇರಿ ಒಟ್ಟು 17,41,758 ಮತದಾರರು ಇದ್ದಾರೆ. ಕ್ಷೇತ್ರದಲ್ಲಿ 2004ರಲ್ಲಿ ರಮೇಶ್ ಜಿಗಜಿಣಗಿ (ಬಿಜೆಪಿ), 2009ರಲಿ ರಮೇಶ ಕತ್ತಿ (ಬಿಜೆಪಿ), 2014ರಲ್ಲಿ ಪ್ರಕಾಶ್ ಹುಕ್ಕೇರಿ (ಕಾಂಗ್ರೆಸ್‌) ಹಾಗೂ 2019ರಲ್ಲಿ ಅಣ್ಣಾಸಾಹೇಬ ಜೊಲ್ಲೆ (ಬಿಜೆಪಿ) ಗೆಲುವು ಪಡೆದಿದ್ದಾರೆ. ಈ ಹಿಂದೆ ಕ್ಷೇತ್ರದಿಂದ ಕಾಂಗ್ರೆಸ್‌ನ ಬಿ. ಶಂಕರಾನಂದ ಅವರು 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇದೀಗ ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ ಫಲಿತಾಂಶದ ಪ್ರಕಾರ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಜನ ಬೆಂಬಲ ವ್ಯಕ್ತವಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ | Vistara News Polling Booth: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸತತ 9ನೇ ಬಾರಿಯೂ ಅರಳಲಿದೆ ಕಮಲ!

ಮಾರ್ಚ್‌ 25, ಸೋಮವಾರ ಯಾವ ಕ್ಷೇತ್ರ?

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಕೊಪ್ಪಳ ಮತ್ತು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಬಾಗಲಕೋಟೆ ಕ್ಷೇತ್ರದ ಜನ ಫೋನ್‌ ಮಾಡಿ ಓಟ್‌ ಮಾಡಬಹುದು. ಮಧ್ಯಾಹ್ನ 2 ಮತ್ತು ರಾತ್ರಿ 8 ಗಂಟೆಗೆ ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version