Aadhaar card How to apply for Aadhaar card for children?Aadhaar card : ಮಕ್ಕಳಿಗೆ ಆಧಾರ್‌ ಕಾರ್ಡ್‌ ಮಾಡಿಸಲು ಅರ್ಜಿ ಸಲ್ಲಿಸುವುದು ಹೇಗೆ? - Vistara News Aadhaar card : ಮಕ್ಕಳಿಗೆ ಆಧಾರ್‌ ಕಾರ್ಡ್‌ ಮಾಡಿಸಲು ಅರ್ಜಿ ಸಲ್ಲಿಸುವುದು ಹೇಗೆ?

ಮನಿ-ಗೈಡ್

Aadhaar card : ಮಕ್ಕಳಿಗೆ ಆಧಾರ್‌ ಕಾರ್ಡ್‌ ಮಾಡಿಸಲು ಅರ್ಜಿ ಸಲ್ಲಿಸುವುದು ಹೇಗೆ?

ಆಧಾರ್‌ ಕಾರ್ಡ್‌ ನಾನಾ ಉದ್ದೇಶಗಳಿಗೆ ಬಳಕೆಯಾಗುತ್ತದೆ. ಶಾಲಾ ಮಕ್ಕಳಿಗೂ ಕೆಲವೊಮ್ಮೆ ಬೇಕಾಗುತ್ತದೆ. (miner Aadhar card) ಹಾಗಾದರೆ ಅಪ್ರಾಪ್ತರಿಗೆ ಆಧಾರ್‌ ಕಾರ್ಡ್‌ ಮಾಡಿಸುವುದು ಹೇಗೆ? ಇಲ್ಲಿದೆ ವಿವರ.

VISTARANEWS.COM


on

Aadhaar card Is your e-mail mobile linked with Aadhaar Be sure to do so
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗಿನ ದಿನಗಳಲ್ಲಿ ಆಧಾರ್‌ ಕಾರ್ಡ್‌ ನಾನಾ ಉದ್ದೇಶಗಳಿಗೆ ಗುರುತಿನ ಚೀಟಿಯಾಗಿ ಬಳಕೆಯಾಗುತ್ತದೆ. ಸರ್ಕಾರಿ ಯೋಜನೆಗಳು, ಸಬ್ಸಿಡಿ, ಬ್ಯಾಂಕ್‌ ಖಾತೆ ತೆರೆಯಲು, ಪಾಸ್‌ ಪೋರ್ಟ್‌ ಮಾಡಿಸಲು ಅಗತ್ಯ. ವಯಸ್ಕರಿಗೆ ಮುಖ್ಯವಾಗಿ ಬೇಕಿದ್ದರೂ, ಈಗ ಶಾಲಾ ಮಕ್ಕಳಿಗೂ ಆಧಾರ್‌ ಕಾರ್ಡ್‌ ( miner Aadhaar card ) ಮಾಡಿಸಬಹುದು. ಶಾಲೆಗಳಲ್ಲೂ ಆಧಾರ್‌ ಕಾರ್ಡ್‌ ಕೇಳುತ್ತಾರೆ. ಹಾಗಾದರೆ (Aadhaar card) ಅಪ್ರಾಪ್ತರಿಗೆ ಅಥವಾ ಸಣ್ಣ ವಯಸ್ಸಿನ ಮಕ್ಕಳಿಗೆ ಆಧಾರ್‌ ಕಾರ್ಡ್‌ ಮಾಡಿಸುವುದಿದ್ದರೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ Step -by-step ವಿವರ.

ಆಧಾರ್‌ ಕಾರ್ಡ್‌ 12 ಅಂಕಿಗಳ ವಿಶಿಷ್ಟ ಗುರುತಿನ ಚೀಟಿಯಾಗಿದ್ದು (12 digit unique identification number) ಭಾರತ ಸರ್ಕಾರ ತನ್ನ ನಾಗರಿಕರಿಗೆ ನೀಡುತ್ತದೆ. ಅಪ್ರಾಪ್ತರಿಗೆ ಆಧಾರ್‌ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವ ವಿಧಾನ ಇಂತಿದೆ.

aadhar blockchain

step 1: ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿ:

ಅಪ್ರಾಪ್ತರಿಗೆ ಆಧಾರ್‌ ಕಾರ್ಡ್‌ ಮಾಡಿಸಲು ಕೆಳಕಂಡ ದಾಖಲೆಗಳು ಅಗತ್ಯ:

  1. ಮಗುವಿನ ಜನನ ಪ್ರಮಾಣ ಪತ್ರ
  2. ಪೋಷಕರ ಆಧಾರ್‌ ಕಾರಡ್‌ ಅಥವಾ ಇತರ ಸರ್ಕಾರಿ ಐಡಿ ಪ್ರೂಫ್‌
  3. ಪೋಷಕರ ವಿಳಾಸದ ದೃಢೀಕರಣ ದಾಖಲೆ ( ವಿದುತ್‌ ಬಿಲ್‌, ನೀರಿನ ಬಿಲ್‌, ಟೆಲಿಫೋನ್‌ ಬಿಲ್‌, ಗ್ಯಾಸ್‌ ಬಿಲ್)‌
  4. ಮಗುವಿನ ಪಾಸ್‌ ಪೋರ್ಟ್‌ ಗಾತ್ರದ ಫೋಟೊ

step 2: ಸಮೀಪದ ಆಧಾರ್‌ ಎನ್‌ರೋಲ್‌ ಮೆಂಟ್‌ ಸೆಂಟರ್‌ ಪತ್ತೆ ಹಚ್ಚಿ:

ಎಲ್ಲ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ನೀವು ನಿಮಗೆ ಸಮೀಪದ ಆಧಾರ್‌ ಎನ್‌ರೋಲ್‌ಮೆಂಟ್‌ ಸೆಂಟರ್‌ (Aadhaar enrolment Centre) ಪತ್ತೆ ಹಚ್ಚಬೇಕು. UIDAI ವೆಬ್‌ಸೈಟ್‌ https://uidai.gov.in ಮೂಲಕ ಸಮೀಪದ ಆಧಾರ್‌ ಎನ್‌ ರೋಲ್‌ ಮೆಂಟ್‌ ಸೆಂಟರ್‌ ಅನ್ನು ಪತ್ತೆ ಹಚ್ಚಬಹುದು.

step 3:

ಎನ್‌ರೋಲ್‌ಮೆಂಟ್‌ ಸೆಂಟರ್‌ ಪತ್ತೆ ಹಚ್ಚಿದ ಬಳಿಕ ಮಗುವಿನಿಂದಿಗೆ ತೆರಳಿ. ಅಗತ್ಯ ದಾಖಲೆಗಳು ಜತೆಗಿರಲಿ. ಮಗುವಿನ ಹೆಸರು, ಜನ್ಮ ದಿನ, ವಿಳಾಸ ಕೇಳುತ್ತಾರೆ. ಮಗು ಅನಿವಾಸಿ ಭಾರತೀಯ (ಎನ್‌ಆರ್‌ಐ) ಆಗಿದ್ದರೆ ಮಗುವಿನ ಭಾರತೀಯ ಪಾಸ ಪೋರ್ಟ್‌ ಅವಶ್ಯಕ.

step 4:

ಎನ್‌ರೋಲ್‌ಮೆಂಟ್‌ ಫಾರ್ಮ್‌ ಭರ್ತಿಗೊಳಿಸಿದ ಬಳಿಕ ಮಗುವಿನ ಭಾವಚಿತ್ರ ತೆಗೆದುಕೊಳ್ಳುತ್ತಾರೆ. ಬೆರಳಚ್ಚು, ನೇತ್ರದ ಸ್ಕ್ಯಾನ್‌ ತೆಗೆದುಕೊಳ್ಳುತ್ತಾರೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ನೇತ್ರದ ಸ್ಕ್ಯಾನ್‌ ಮಾಡುವುದಿಲ್ಲ. ಐದು ವರ್ಷದ ಬಳಿಕ ಅಪ್‌ ಡೇಟ್‌ ಮಾಡಬೇಕಾಗುತ್ತದೆ.

step 5:

ಬಯೊಮೆಟ್ರಿಕ್‌ ಡೇಟಾ ಸಂಗ್ರಹಿಸಿದ ಬಳಿಕ acknowledgement slip ನೀಡುತ್ತಾರೆ.

step 6:

ಎನ್‌ರೋಲ್‌ಮೆಂಟ್‌ ಪ್ರಕ್ರಿಯೆ ಪೂರ್ಣವಾದ ಬಳಿಕ ಆಧಾರ್‌ ಕಾರ್ಡ್‌ ಪಡೆಯಲು ಕಾಯಬೇಕಾಗುತ್ತದೆ. ಅರ್ಜಿಯಲ್ಲಿ ನಮೂದಿಸಿದ ವಿಳಾಸಕ್ಕೆ ಆಧಾರ್‌ ಕಾರ್ಡ್‌ ಅನ್ನು ಕಳಿಸುತ್ತಾರೆ. ಎನ್‌ರೋಲ್‌ಮೆಂಟ್‌ ಆದ 90 ದಿನಗಳೊಳಗೆ ಸಾಮಾನ್ಯವಾಗಿ ಆಧಾರ್‌ ಕಾರ್ಡ್‌ ಸಿಗುತ್ತದೆ.

ಭಾರತದಲ್ಲಿ ಅಪ್ರಾಪ್ತರಿಗೆ ಆಧಾರ್‌ ಕಾರ್ಡ್‌ ಮಾಡಿಸುವ ಪ್ರಕ್ರಿಯೆ ಸರಳವಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಸಮೀಪದ ಆಧಾರ್‌ ಎನ್‌ರೋಲ್‌ಮೆಂಟ್‌ ಸೆಂಟರ್‌ಗೆ ತೆರಳಿ ಅರ್ಜಿ ಸಲ್ಲಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Bank FD Rates: ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಎಫ್‌ಡಿ ಬಡ್ಡಿ ದರ ಯಾವ ಬ್ಯಾಂಕ್‌ನಲ್ಲಿ ಎಷ್ಟಿದೆ?

ಎಫ್ ಡಿಯಲ್ಲಿ (Bank FD Rates) ಎಷ್ಟು ಸಮಯದವರೆಗೆ ಹೂಡಿಕೆ ಮಾಡುತ್ತೀರಿ ಎಂಬುದರ ಆಧಾರದ ಮೇಲೆ ಬ್ಯಾಂಕ್ ಗಳು ಸಾಮಾನ್ಯವಾಗಿ ಶೇ. 3 ರಿಂದ ಶೇ 7.50 ನಡುವಿನ ಬಡ್ಡಿ ದರಗಳನ್ನು ನೀಡುತ್ತವೆ. ಎಫ್ ಡಿಯಲ್ಲಿ ಎಲ್ಲಿ ಹೂಡಿಕೆ ಮಾಡಬೇಕೆಂದು ನಿರ್ಧರಿಸುವ ಮೊದಲು ವಿವಿಧ ಬ್ಯಾಂಕ್‌ಗಳು ನೀಡುವ ಬಡ್ಡಿ ದರಗಳನ್ನು ಹೋಲಿಸುವುದು ಮುಖ್ಯವಾಗಿದೆ. ದೇಶದ ಪ್ರಮುಖ ನಾಲ್ಕು ಬ್ಯಾಂಕ್ ಗಳು ಎಫ್ ಡಿಗಳಿಗೆ ನೀಡುವ ಬಡ್ಡಿ ದರಗಳ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Bank FD Rates
Koo

ಹೆಚ್ಚಿನ ಮಂದಿ ಎಫ್‌ಡಿಯಲ್ಲಿ (Bank FD Rates) ಹೂಡಿಕೆ ಮಾಡಲು ಆಸಕ್ತಿ ಹೊಂದಿರುತ್ತಾರೆ. ಸಮಯ ಅಥವಾ ಅವಧಿಯ ಠೇವಣಿ ಎಂದೂ ಕರೆಯಲ್ಪಡುವ ಸ್ಥಿರ ಠೇವಣಿಗಳು (Fixed deposits) ಅಂದರೆ ಎಫ್‌ಡಿಗಳು ಕಡಿಮೆ ರಿಸ್ಕ್‌ ಹೊಂದಿರುವುದರಿಂದ ಹೆಚ್ಚು ಜನಪ್ರಿಯವಾಗಿವೆ. ಎಫ್‌ಡಿಯಲ್ಲಿ ನಿಗದಿತ ಅವಧಿಗೆ ನಿರ್ದಿಷ್ಟ ಹಣವನ್ನು ಸುರಕ್ಷಿತವಾಗಿ ಹೂಡಿಕೆ ಮಾಡಬಹುದು ಮತ್ತು ನಿಯಮಿತ ಅಥವಾ ಠೇವಣಿ ಪಕ್ವವಾದಾಗ ಸ್ಥಿರ ಬಡ್ಡಿಯನ್ನು ಪಡೆಯಬಹುದು.

ಎಫ್‌ಡಿಯಲ್ಲಿ ಎಷ್ಟು ಸಮಯದವರೆಗೆ ಹೂಡಿಕೆ ಮಾಡುತ್ತೀರಿ ಎಂಬುದರ ಆಧಾರದ ಮೇಲೆ ಬ್ಯಾಂಕ್‌ಗಳು ಸಾಮಾನ್ಯವಾಗಿ ಶೇ. 3ರಿಂದ ಶೇ 7.50 ನಡುವಿನ ಬಡ್ಡಿ ದರಗಳನ್ನು ನೀಡುತ್ತವೆ. ಹಿರಿಯ ನಾಗರಿಕರಿಗೆ ಸಾಮಾನ್ಯವಾಗಿ ಹೆಚ್ಚುವರಿ ಶೇ. 0.5 ಬಡ್ಡಿ ದರವನ್ನು ಪಡೆಯುತ್ತಾರೆ. ಎಫ್ ಡಿಯಲ್ಲಿ ಎಲ್ಲಿ ಹೂಡಿಕೆ ಮಾಡಬೇಕೆಂದು ನಿರ್ಧರಿಸುವ ಮೊದಲು ವಿವಿಧ ಬ್ಯಾಂಕ್‌ಗಳ ಬಡ್ಡಿ ದರಗಳನ್ನು ಹೋಲಿಸುವುದು ಮುಖ್ಯವಾಗಿದೆ. ದೇಶದ ಪ್ರಮುಖ ನಾಲ್ಕು ಬ್ಯಾಂಕ್ ಗಳು ಎಫ್‌ಡಿಗಳಿಗೆ ನೀಡುವ ಬಡ್ಡಿ ದರಗಳು ಇಂತಿವೆ.


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಫಿಕ್ಸೆಡ್ ಡೆಪಾಸಿಟ್‌ಗಳಲ್ಲಿ (ಎಫ್‌ಡಿ) ಹೂಡಿಕೆ ಮಾಡಿದರೆ ಶೇ. 3 ಮತ್ತು ಶೇ. 7 ನಡುವಿನ ಬಡ್ಡಿ ದರಗಳನ್ನು ನಿರೀಕ್ಷಿಸಬಹುದು. ಹಿರಿಯ ನಾಗರಿಕರು ಹೆಚ್ಚುವರಿಯಾಗಿ ಶೇ. 0.50 ಬಡ್ಡಿ ದರವನ್ನು ಪಡೆಯುತ್ತಾರೆ. ಒಂದು ವರ್ಷ ಪೂರ್ಣಗೊಂಡ ಬಳಿಕ ಬ್ಯಾಂಕ್ ಎಫ್ ಡಿಗಳಿಗೆ ಶೇ. 6.80 ಬಡ್ಡಿ ದರವನ್ನು ಮತ್ತು ಎರಡು ವರ್ಷಗಳಿಂದ ಕೇವಲ ಮೂರು ವರ್ಷಗಳವರೆಗಿನ ಅವಧಿಗೆ ಶೇ. 7 ಬಡ್ಡಿ ದರವನ್ನು ನೀಡಲಾಗುತ್ತದೆ.


ಪಂಜಾಬ್ ನ್ಯಾಷನಲ್ ಬ್ಯಾಂಕ್

ಪಂಜಾಬ್ ನ್ಯಾಷನಲ್ ಬ್ಯಾಂಕ್ ಶೇ. 3.50ರಿಂದ ಶೇ. 7.50ವರೆಗಿನ ಸ್ಥಿರ ಠೇವಣಿ ಬಡ್ಡಿ ದರಗಳನ್ನು ನೀಡುತ್ತದೆ. ಒಂದು ವರ್ಷದ ಸ್ಥಿರ ಠೇವಣಿಗಳಿಗೆ ಸಾಮಾನ್ಯ ಹೂಡಿಕೆದಾರರು ಶೇ. 6.75 ಬಡ್ಡಿ ಗಳಿಸುತ್ತಾರೆ. ಆದರೆ ಹಿರಿಯ ನಾಗರಿಕರು ಶೇ. 7.25ಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪಡೆಯುತ್ತಾರೆ.


ಐಸಿಐಸಿಐ ಬ್ಯಾಂಕ್

ಐಸಿಐಸಿಐ ಬ್ಯಾಂಕ್ ತನ್ನ ನಿಶ್ಚಿತ ಠೇವಣಿ ಯೋಜನೆಗಳಿಗೆ ಶೇ. 3 ಮತ್ತು ಶೇ. 7.50ರ ನಡುವಿನ ಬಡ್ಡಿ ದರಗಳನ್ನು ನೀಡುತ್ತದೆ. ಹಿರಿಯ ನಾಗರಿಕರು 7 ದಿನಗಳಿಂದ 10 ವರ್ಷಗಳವರೆಗೆ ವಿವಿಧ ಅವಧಿಗಳಲ್ಲಿ ಶೇ. 3.50ರಿಂದ ಶೇ. 7.50ರವರೆಗೆ ಹೆಚ್ಚುವರಿ ಶೇ.0.5 ಬಡ್ಡಿ ದರವನ್ನು ಪಡೆಯುತ್ತಾರೆ. ಒಂದು ವರ್ಷದ ನಿಶ್ಚಿತ ಠೇವಣಿಗಳಿಗೆ ಸಾಮಾನ್ಯ ಗ್ರಾಹಕರಿಗೆ ಶೇ. 6.70 ಬಡ್ಡಿ ದರವನ್ನು ನೀಡಲಾಗುತ್ತದೆ.


ಇದನ್ನೂ ಓದಿ: Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

ಹೆಚ್‌ಡಿಎಫ್‌ಸಿ

ಹೆಚ್‌ಡಿಎಫ್‌ಸಿ ಒಂದು ವರ್ಷದ ಸ್ಥಿರ ಠೇವಣಿಗಳಿಗೆ ಸ್ಪರ್ಧಾತ್ಮಕ ಬಡ್ಡಿ ದರಗಳನ್ನು ನೀಡುತ್ತದೆ. ಸಾಮಾನ್ಯ ಹೂಡಿಕೆದಾರರು ಶೇ. 6.60 ಬಡ್ಡಿ ದರವನ್ನು ಗಳಿಸುತ್ತಾರೆ ಮತ್ತು ಹಿರಿಯ ನಾಗರಿಕರು ಶೇ. 7.10ಕ್ಕಿಂತ ಹೆಚ್ಚಿನ ಬಡ್ಡಿ ದರವನ್ನು ಪಡೆಯುತ್ತಾರೆ. ಮೆಚ್ಯೂರಿಟಿ ಅವಧಿಗೆ ಅನುಗುಣವಾಗಿ ಸಾಮಾನ್ಯ ಗ್ರಾಹಕರಿಗೆ ಶೇ. 3ರಿಂದ ಶೇ. 7.75ವರೆಗಿನ ಬಡ್ಡಿ ದರಗಳನ್ನು ಬ್ಯಾಂಕ್ ಒದಗಿಸುತ್ತದೆ.

Continue Reading

ಮನಿ-ಗೈಡ್

PM Kisan Samman Nidhi: ಈ ದಿನಾಂಕದಂದು ಜಮೆ ಆಗಲಿದೆ ಕಿಸಾನ್‌ ಸಮ್ಮಾನ್‌ ನಿಧಿಯ 18ನೇ ಕಂತು; ಹೊಸದಾಗಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ

PM Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದ ಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 18ನೇ ಕಂತಿನ ಹಣ ನವೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. ಅಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ 9.26 ಕೋಟಿ ಫಲಾನುಭವಿಗಳ ಖಾತೆಗೆ 21,000 ಕೋಟಿ ರೂ. ಜಮೆ ಮಾಡಿದ್ದರು. ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಹೊಸದಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

PM Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (PM Kisan Samman Nidhi) ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್‌ನಲ್ಲಿ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಆಗಲಿದೆ. 17ನೇ ಕಂತು ಜೂನ್‌ನಲ್ಲಿ ರಿಲೀಸ್‌ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Money Guide).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?

Continue Reading

ವಾಣಿಜ್ಯ

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

ಉದ್ಯೋಗ, ಆಶ್ರಯ ಬಯಸಿ ಒಂದೂರಿನಿಂದ ಇನ್ನೊಂದು ಊರಿಗೆ ಹೋಗುವವರು ತಮ್ಮ ಹೊಸ ಬದುಕನ್ನು ಬಾಡಿಗೆ ಮನೆಯಿಂದಲೇ ಆರಂಭಿಸುತ್ತಾರೆ. ಅದು ಚಿಕ್ಕದಾಗಿದ್ದರೂ ಸರಿ ಚೆನ್ನಾಗಿರಬೇಕು, ಅಗತ್ಯ ಸೌಕರ್ಯಗಳಿರಬೇಕು ಎಂದು ಬಯಸುತ್ತಾರೆ. ಬಾಡಿಗೆ ಒಪ್ಪಂದದ ಬಗ್ಗೆ ಹೆಚ್ಚಿನವರು ಯೋಚಿಸುವುದಿಲ್ಲ. ಮನೆ ಮಾಲೀಕ ಹೇಳುವ ಬಜೆಟ್ ಸೂಕ್ತ ಎನಿಸಿದರೆ ಒಪ್ಪಂದ ಪತ್ರಕ್ಕೆ ಸಹಿ ಹಾಕುತ್ತಾರೆ. ಈ ಬಾಡಿಗೆ ಒಪ್ಪಂದವನ್ನು (Rent Agreement) ಕೇವಲ 11 ತಿಂಗಳ ಅವಧಿಗೆ ಮಾತ್ರ ಮಾಡಲಾಗುತ್ತದೆ. ಇದು ಯಾಕೆ ಎಂದು ಎಂದಾದರೂ ಯೋಚಿಸಿದ್ದೀರಾ? ಅದಕ್ಕೆ ಇಲ್ಲಿದೆ ಉತ್ತರ.

VISTARANEWS.COM


on

By

Rent Agreement
Koo

ಮನೆ, ಅಂಗಡಿ, ಕಚೇರಿ ಬಾಡಿಗೆ ಒಪ್ಪಂದ ಪತ್ರಗಳನ್ನು (Tenancy agreement letter) ಎಂದಾದರೂ ಗಮನಿಸಿದ್ದೀರಾ? ಬಾಡಿಗೆ ಒಪ್ಪಂದವನ್ನು (Rent Agreement) ಕೇವಲ 11 ತಿಂಗಳ ಅವಧಿಗೆ ಮಾತ್ರ ಮಾಡಲಾಗುತ್ತದೆ. ಇದು ಯಾಕೆ ಎಂದು ಎಂದಾದರೂ ಯೋಚಿಸಿದ್ದೀರಾ? ಬಾಡಿಗೆ ಒಪ್ಪಂದ ಪತ್ರ ಓದಿರುವವರು ಇದು ಕಾನೂನಿನ ನಿಯಮ (rule of law) ಅಂದುಕೊಂಡು ಸುಮ್ಮನೆ ಸಹಿ ಮಾಡಿರುತ್ತಾರೆ. ಇಲ್ಲದವರು ಇದರ ಬಗ್ಗೆ ಯೋಚಿಸಲು ಹೋಗಿರಲಿಕ್ಕಿಲ್ಲ. ನಾವು ಇರಬೇಕಾದ ಸ್ಥಳ ಚೆನ್ನಾಗಿದೆ, ಎಲ್ಲ ಸವಲತ್ತು ಇದೆ, ಕಾನೂನು ಕಟ್ಟಳೆ ಏನೇ ಇದ್ದರೂ ಅದನ್ನು ಮಾಲೀಕರು ನೋಡಿಕೊಳ್ಳುತ್ತಾರೆ ಎಂದುಕೊಂಡು ಅದರ ಚಿಂತೆಗೆ ಹೋಗುವುದಿಲ್ಲ.

ಬಾಡಿಗೆ ಒಪ್ಪಂದ ಎಂದರೇನು?

ಬಾಡಿಗೆ ಒಪ್ಪಂದವು ನಿರ್ದಿಷ್ಟಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಒಳಗೊಂಡಿರುವ ದಾಖಲೆಯಾಗಿದೆ. ಆಸ್ತಿಯನ್ನು ಬಾಡಿಗೆಗೆ ನೀಡುವಾಗ ಆಸ್ತಿ ಮಾಲೀಕರಿಗೆ ಇರುವ ಅಧಿಕಾರವನ್ನು ಇದು ವ್ಯಾಖ್ಯಾನಿಸುತ್ತದೆ ಹಾಗೂ ಆಸ್ತಿ ಮಾಲೀಕ ಮತ್ತು ಬಾಡಿಗೆದಾರರಿಗೆ ಇರುವ ಸಂಬಂಧ, ಎರಡೂ ಕಡೆಯವರಿಗೆ ಇರುವ ಕಟ್ಟುಪಾಡುಗಳನ್ನು ಇದು ಉಲ್ಲೇಖಿಸುತ್ತದೆ.


ಬಾಡಿಗೆ ಒಪ್ಪಂದವು ಕೇವಲ 11 ತಿಂಗಳದ್ದಾಗಿರುತ್ತದೆ. 11 ತಿಂಗಳ ಬಳಿಕ ಅದನ್ನು ಮತ್ತೆ ನವೀಕರಿಸುವುದು ಮುಖ್ಯವಾಗಿರುತ್ತದೆ. ಇದಕ್ಕೆ ಮುಖ್ಯ ಕಾರಣ ಇದು ಕಾನೂನು ಸಂಬಂಧವನ್ನು ಹೊಂದಿದೆ. ಆಸ್ತಿ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜವಾಬ್ದಾರಿಗಳನ್ನು ಕಾನೂನು ನಿರ್ಧರಿಸುತ್ತದೆ. ಇದರಲ್ಲಿ ಬಾಡಿಗೆದಾರ ಮತ್ತು ಆಸ್ತಿ ಮಾಲೀಕರಿಗೆ ಇರುವ ಕಾನೂನು ನಿಯಮಗಳನ್ನು ಉಲ್ಲೇಖಿಸಲಾಗುತ್ತದೆ. ಇದರಲ್ಲಿ ಆಸ್ತಿಯ ಬಾಡಿಗೆ, ನಿರ್ವಹಣೆ, ಭದ್ರತೆ ಇತ್ಯಾದಿಗಳ ಷರತ್ತುಗಳ ಮೇಲೆ ಎರಡು ಪಕ್ಷದವರಿಗೂ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ.

ಭೂಮಾಲೀಕರು ಮತ್ತು ಹಿಡುವಳಿದಾರರು ಈ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಅನುಸರಿಸುವುದನ್ನು ಬಾಡಿಗೆ ಒಪ್ಪಂದವು ಖಚಿತಪಡಿಸುತ್ತದೆ. ಬಾಡಿಗೆ ಒಪ್ಪಂದವು ಕೆಲವೊಂದು ಸಂದರ್ಭದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಎರಡೂ ಪಕ್ಷಗಳ ನಡುವೆ ವಿವಾದ ಉಂಟಾದರೆ ಅದನ್ನು ಸುಲಭವಾಗಿ ಕಾನೂನಿನ ರೂಪದಲ್ಲಿ ಪ್ರಸ್ತುತಪಡಿಸಿ ತ್ವರಿತ ಪರಿಹಾರವನ್ನು ಪಡೆಯಲು ಇದು ಸಹಾಯ ಮಾಡುತ್ತದೆ.

11 ತಿಂಗಳ ಬಾಡಿಗೆ ಒಪ್ಪಂದವು ನ್ಯಾಯಾಲಯದಲ್ಲಿ ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಯಾವುದೇ ವಿವಾದಗಳ ಸಂದರ್ಭದಲ್ಲಿ ಅದನ್ನು ಪುರಾವೆಯಾಗಿ ಪರಿಗಣಿಸಬಹುದು.


ನಿಯಮಗಳು ಏನು?

100 ರೂ.ಯ ಸ್ಟ್ಯಾಂಪ್ ಡ್ಯೂಟಿ ಪೇಪರ್‌ನಲ್ಲಿ ಬರೆದಿರುವ ನಿಯಮಗಳನ್ನು ಓದಿ ಬಾಡಿಗೆದಾರರು ಮತ್ತು ಜಮೀನುದಾರರು ಅದರಲ್ಲಿ ಸಹಿ ಮಾಡಬೇಕು. ಜೊತೆಗೆ ಒಪ್ಪಂದಕ್ಕೆ ಇಬ್ಬರು ಸಾಕ್ಷಿಗಳಿರಬೇಕು. ಗುರುತು ಪತ್ರ, ಬಾಡಿಗೆ ಒಪ್ಪಂದವನ್ನು ಮಾನ್ಯ ಮಾಡಲು ಅವರ ಸಹಿಗಳು ಅಗತ್ಯವಿದೆ. 11 ತಿಂಗಳ ಬಾಡಿಗೆ ಒಪ್ಪಂದವನ್ನು ಕಾನೂನು ಪ್ರಕಾರ ಮುಕ್ತಾಯ ದಿನಾಂಕದ ಮೊದಲ 30 ದಿನಗಳಲ್ಲಿ ನವೀಕರಿಸಬೇಕಾಗಿದೆ.

11 ತಿಂಗಳ ಬಾಡಿಗೆ ಒಪ್ಪಂದಕ್ಕೆ ನೋಟರಿ ನೋಂದಣಿ ಮುಖ್ಯವಲ್ಲ. ಆದರೆ ಬಾಡಿಗೆ 11 ತಿಂಗಳುಗಳಿಗಿಂತ ಹೆಚ್ಚಿನ ಅವಧಿಯ ಒಪ್ಪಂದವಾಗಿದ್ದರೆ ಜಮೀನುದಾರ ಮತ್ತು ಹಿಡುವಳಿದಾರರ ಅಥವಾ ಮಾಲೀಕರು ಮತ್ತು ಬಾಡಿಗೆದಾರರ ಸಮ್ಮುಖದಲ್ಲಿ ಹತ್ತಿರದ ಉಪ-ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಲೇಬೇಕು.

ಬಾಡಿಗೆ ಒಪ್ಪಂದ 11 ತಿಂಗಳುಗಳ ಕಾಲ ಏಕೆ?

ಕೇವಲ 11 ತಿಂಗಳ ಬಾಡಿಗೆ ಒಪ್ಪಂದವನ್ನು ರಚಿಸಲು ಪ್ರಮುಖ ಕಾರಣಗಳಿವೆ. ಇದಕ್ಕೆ ಯಾವುದೇ ನೋಂದಣಿ ಅಗತ್ಯವಿಲ್ಲ. ನೋಂದಣಿ ಕಾಯಿದೆ 1908ರ ಪ್ರಕಾರ ಉಪ-ವಿಭಾಗ (1) ನ ಷರತ್ತು (ಡಿ) ಅಡಿಯಲ್ಲಿ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಬಾಡಿಗೆ ಒಪ್ಪಂದದ ನೋಂದಣಿ ಕಡ್ಡಾಯವಾಗಿದೆ. ಬಾಡಿಗೆ ನಿಯಂತ್ರಣ ಕಾಯಿದೆ ಅಡಿಯಲ್ಲಿ, ಒಳಗೊಂಡಿರುವ ಪಕ್ಷಗಳು ಯಾವುದೇ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗಿಲ್ಲ. 11 ತಿಂಗಳ ಬಾಡಿಗೆ ಒಪ್ಪಂದವನ್ನು ರಚಿಸಲು ಯಾವುದೇ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಪಾವತಿಸಬೇಕಿಲ್ಲ.

100 ರೂಪಾಯಿಯ ಸ್ಟ್ಯಾಂಪ್ ಡ್ಯೂಟಿ ಪೇಪರ್ ಅನ್ನು ಬಳಸಿಕೊಂಡು ಒಪ್ಪಂದಗಳನ್ನು ಸುಲಭವಾಗಿ ನವೀಕರಿಸಬಹುದು. ಬಾಡಿಗೆ ಒಪ್ಪಂದವನ್ನು ವಿಸ್ತರಿಸಲು ಇದರಲ್ಲಿ ಅವಕಾಶವಿದೆ. 11 ತಿಂಗಳ ಬಾಡಿಗೆ ಒಪ್ಪಂದದ ಸ್ವರೂಪವು ಭೂಮಾಲೀಕರಿಗೆ ಆಸ್ತಿಯ ಮೇಲಿನ ಭದ್ರತೆಯನ್ನು ಖಚಿತಪಡಿಸುತ್ತದೆ. ಒಂದು ವರ್ಷದೊಳಗೆ ಅವರಿಗೆ ಮಾರುಕಟ್ಟೆ ಪರಿಸ್ಥಿತಿಗಳು ಮತ್ತು ಅವರ ಹಣಕಾಸಿನ ಆದ್ಯತೆಗಳ ಆಧಾರದ ಮೇಲೆ ಮಾಸಿಕ ಬಾಡಿಗೆಯನ್ನು ಪರಿಶೀಲಿಸಬಹುದು.


11 ತಿಂಗಳಿಗಿಂತ ಹೆಚ್ಚು ಬಾಡಿಗೆ ಒಪ್ಪಂದಕ್ಕೆ ನೋಂದಣಿ ಕಡ್ಡಾಯವಾಗಿದೆ. ನೋಟರಿ ಮೂಲಕ ಮಾಡಬೇಕಾಗುತ್ತದೆ. ಯಾವುದೇ ವಿವಾದದ ಸಂದರ್ಭದಲ್ಲಿ ಎರಡೂ ಪಕ್ಷಗಳು ನಿರ್ದಿಷ್ಟ ಹಣವನ್ನು ಪಾವತಿಸಬೇಕಾಗಬಹುದು. ದಾಖಲಾತಿಯನ್ನು ನೋಂದಾಯಿಸದಿದ್ದಕ್ಕಾಗಿ ದಂಡವನ್ನೂ ವಿಧಿಸಬಹುದು. ಬಾಡಿಗೆಯನ್ನು ನೋಂದಾಯಿಸಲು ಆಸ್ತಿ ಮಾಲೀಕರು ಮುದ್ರಾಂಕ ಶುಲ್ಕವನ್ನು ಪಾವತಿಸಬೇಕು. ಒಪ್ಪಂದವು 11 ತಿಂಗಳಿಗಿಂತ ಹೆಚ್ಚು ಕಾಲ ಜಾರಿಯಲ್ಲಿದ್ದರೆ ಇವುಗಳ ಶುಲ್ಕಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗಿರಬಹುದು.

ಇದನ್ನೂ ಓದಿ: Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

11 ತಿಂಗಳ ಬಾಡಿಗೆ ಒಪ್ಪಂದವು ಮಾನ್ಯವೇ?

ಭಾರತೀಯ ನ್ಯಾಯಾಲಯಗಳಲ್ಲಿ 11 ತಿಂಗಳ ಬಾಡಿಗೆ ಒಪ್ಪಂದ ಮಾನ್ಯವಾಗಿದೆ. ಈ ಒಪ್ಪಂದವನ್ನು 100 ರೂ. ಮೌಲ್ಯದ ಸ್ಟಾಂಪ್ ಪೇಪರ್ ಮೇಲೆ ಮಾಡಿಸಲೇಬೇಕು. ಇದಕ್ಕೆ ಯಾವುದೇ ಮುದ್ರಾಂಕ ಶುಲ್ಕವಿಲ್ಲ. ಬಾಡಿಗೆ ಒಪ್ಪಂದವು 12 ತಿಂಗಳಿಗಿಂತ ಹಳೆಯದಾಗಿದ್ದರೆ ಮಾತ್ರ ಮುದ್ರಾಂಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

11 ತಿಂಗಳು ಪೂರ್ಣಗೊಳ್ಳುವ ಮೊದಲು ಆಸ್ತಿ ಬಿಡಬಹುದೇ?

ಹಿಡುವಳಿದಾರ ಅಥವಾ ಬಾಡಿಗೆದಾರ 11 ತಿಂಗಳುಗಳು ಪೂರ್ಣಗೊಳ್ಳುವ ಮೊದಲು ಆಸ್ತಿ ಖಾಲಿ ಮಾಡಿ ಹೋಗಬಹುದು. ಆದರೆ ಇದಕ್ಕೆ ನಿಯಮಗಳಿವೆ. ಬಾಡಿಗೆ ಒಪ್ಪಂದದಲ್ಲಿ ನಿರ್ದಿಷ್ಟಪಡಿಸಿದ ನಿಯಮಗಳನ್ನು ಅನುಸರಿಸಬೇಕು. ಇದರಲ್ಲಿ ಮುಖ್ಯವಾಗಿ ನೊಟೀಸ್ ನೀಡಬೇಕು. ಇಲ್ಲವಾದರೆ ಮಾಲೀಕರಿಗೆ ದಂಡವನ್ನು ಪಾವತಿಸಬೇಕಾಗಬಹುದು.

Continue Reading

ಮನಿ-ಗೈಡ್

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Money Guide: ಭಾರತ ಕೃಷಿ ಪ್ರಧಾನ ದೇಶ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಎದುರಿಸುತ್ತಾರೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಹಾಗಾದರೆ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಗಮನಿಸಬೇಕಾದ ಅಂಶಗಳು ಯಾವೆಲ್ಲ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶ. ಕೃಷಿಯೇ ಇಲ್ಲಿನ ಜೀವನಾಡಿ. ಇದು ದೇಶದ ಜಿಡಿಪಿಗೆ ಗಣನೀಯ ಪ್ರಮಾಣದಲ್ಲಿ ಕೊಡುಗೆ ನೀಡುವುದಷ್ಟೇ ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಗೂ ಕಾರಣವಾಗುತ್ತದೆ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಅವರ ಮುಂದಿರುತ್ತದೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು (Agriculture Loan) ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಕೃಷಿ ಸಾಲ ಪಡೆದುಕೊಳ್ಳುವುದು ಹೇಗೆ? ಎಷ್ಟು ಬಡ್ಡಿ ವಿಧಿಸಲಾಗುತ್ತದೆ? ಅರ್ಹತೆಗಳೇನು? ಯಾವೆಲ್ಲ ದಾಖಲೆಗಳು ಅಗತ್ಯ? ಮುಂತಾದ ಪ್ರಶ್ನೆಗಳಿಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಬಡ್ಡಿದರ

ದೇಶದಲ್ಲಿನ ವಿವಿಧ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳಿಗೆ ಹೊಂದಿಕೊಂಡು ಕೃಷಿ ಸಾಲಕ್ಕೆ ವಿಧಿಸುವ ಬಡ್ಡಿ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಮಾತ್ರವಲ್ಲ ಸಾಲ ಪಡೆದುಕೊಳ್ಳುವವರ ಪ್ರೊಫೈಲ್‌, ಅರ್ಹತೆ ಮತ್ತು ಉದ್ದೇಶಗಳು ಕೂಡ ಬಡ್ಡದರದ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (Reserve Bank of India) ಕೃಷಿ ಸಾಲಗಳ ಮೇಲೆ ವಿಧಿಸಬಹುದಾದ ಬಡ್ಡಿದರಗಳ ಬಗ್ಗೆ ಬ್ಯಾಂಕುಗಳಿಗೆ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ವಾಣಿಜ್ಯ ಸಾಲಗಳಿಗೆ ಹೋಲಿಸಿದರೆ ಈ ದರಗಳು ಸಾಮಾನ್ಯವಾಗಿ ಕಡಿಮೆಯಿರುತ್ತವೆ. ರೈತರಿಗೆ ಸುಲಭವಾಗಿ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಇದು ಹೊಂದಿದೆ. ಸಾಮಾನ್ಯವಾಗಿ ಮರುಪಾವತಿ ಅವಧಿಯನ್ನು ಅವಲಂಬಿಸಿ ವರ್ಷಕ್ಕೆ ಶೇ. 4ರಿಂದ ಶೇ. 14ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಕೆಲವೊಮ್ಮೆ ಸರ್ಕಾರ ಶೂನ್ಯ ಬಡ್ಡಿದರದಲ್ಲಿಯೂ ಕೃಷಿ ಸಾಲ ಒದಗಿಸುತ್ತದೆ.

ಅರ್ಹತೆ

ಕೃಷಿ ಸಾಲ ಹೊಂದಲು ಅಗತ್ಯವಾದ ಕೆಲವು ಸಾಮಾನ್ಯ ಅರ್ಹತೆಗಳು:

ಭೂ ಮಾಲೀಕತ್ವ: ಇದು ಮೊದಲ ಅರ್ಹತೆ. ರೈತರು ಕೃಷಿ ಭೂಮಿಯ ಸ್ಪಷ್ಟ ಮಾಲೀಕತ್ವವನ್ನು ಹೊಂದಿರಬೇಕು ಅಥವಾ ಸಾಲ ನೀಡುವ ಸಂಸ್ಥೆ ನಿರ್ದಿಷ್ಟಪಡಿಸಿದ ಕನಿಷ್ಠ ಅವಧಿಗೆ ಗುತ್ತಿಗೆ ಹಕ್ಕುಗಳನ್ನು ಹೊಂದಿರಬೇಕು. ಭೂಮಿಯನ್ನು ಹೆಚ್ಚಾಗಿ ಸಾಲದ ಆಧಾರವಾಗಿ ಬಳಸಲಾಗುತ್ತದೆ. ಭೂ ಮಾಲೀಕತ್ವ ಲಭ್ಯವಿಲ್ಲದ ಸಂದರ್ಭದಲ್ಲಿ, ಜಾಯಿಂಟ್‌ ಲಿಯಾಬಲಿಟಿ ಗ್ರೂಪ್‌ (Joint Liability Group) ಮತ್ತು ಸ್ವಸಹಾಯ ಗುಂಪುಗಳನ್ನು ರಚಿಸುವ ಮೂಲಕ ಗುಂಪು ಸಾಲ ನೀಡಲಾಗುತ್ತದೆ.
ವಯೋಮಿತಿ: ಸಾಮಾನ್ಯವಾಗಿ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಸಾಲದ ಇತಿಹಾಸ: ಹಣಕಾಸು ಸಂಸ್ಥೆಗಳು ಸಾಮಾನ್ಯವಾಗಿ ಅರ್ಜಿದಾರರ ಕ್ರೆಡಿಟ್ ಇತಿಹಾಸ (Credit History)ವನ್ನು ಗಮನಿಸುತ್ತವೆ. ಉತ್ತಮ ಕ್ರೆಡಿಟ್ ಸ್ಕೋರ್ ಸಾಲ ಅನುಮೋದನೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.
ಕೃಷಿಯಲ್ಲಿ ಅನುಭವ: ಕೆಲವೊಂದು ಬ್ಯಾಂಕ್‌ಗಳು ಸಾಲ ಅನುಮೋದನೆಗೆ ಕೃಷಿಯಲ್ಲಿ ಕನಿಷ್ಠ ವರ್ಷಗಳ ಅನುಭವವನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸುತ್ತವೆ. ಸಾಲದ ಪ್ರಕಾರ ಮತ್ತು ಸಂಸ್ಥೆಯನ್ನು ಅವಲಂಬಿಸಿ ಈ ಮಾನದಂಡವು ಬದಲಾಗುತ್ತದೆ.
ಮರುಪಾವತಿ ಸಾಮರ್ಥ್ಯ: ಉದ್ದೇಶಿತ ಕೃಷಿಯಿಂದ ಲಭಿಸಬಹುದಾದ ಆದಾಯ ಮತ್ತು ಸಾಲಗಾರನ ಇತರ ಆದಾಯದ ಮೂಲ ಲೆಕ್ಕ ಹಾಕಿ ಬ್ಯಾಂಕುಗಳು ಮರುಪಾವತಿ ಸಾಮರ್ಥ್ಯವನ್ನು ಪರಿಶೀಲಿಸುತ್ತವೆ.
ಆಧಾರ: ಸಾಮಾನ್ಯವಾಗಿ ಬ್ಯಾಂಕುಗಳು ನಿರ್ದಿಷ್ಟ ಮಿತಿ ಅಂದರೆ 1.6 ಲಕ್ಷ ರೂ.ವರೆಗಿನ ಸಾಲಗಳಿಗೆ ಭೂಮಿಯ ಆಧಾರ ಸಲ್ಲಿಸುವಂತೆ ಒತ್ತಾಯಿಸುವುದಿಲ್ಲ. ಆದಾಗ್ಯೂ, ಈ ಮೊತ್ತಕ್ಕಿಂತ ಹೆಚ್ಚಿನ ಸಾಲಗಳಿಗೆ ಕೃಷಿ ಭೂಮಿಯನ್ನು ಅಡಮಾನ ಇಡಲು ಕೇಳಲಾಗುತ್ತದೆ.
ದಾಖಲೆಗಳು: ಸಾಲದ ಅರ್ಜಿಯ ಜತೆಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಭೂ ಮಾಲೀಕತ್ವದ ದಾಖಲೆಗಳು, ಆದಾಯ ಪ್ರಮಾಣಪತ್ರಗಳು, ಬ್ಯಾಂಕ್ ಸ್ಟೇಟ್‌ಮೆಂಟ್‌ ಮತ್ತು ಉದ್ದೇಶಿತ ಕೃಷಿ ಚಟುವಟಿಕೆಗಳಂತಹ ಸಂಬಂಧಿತ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ನಿಮ್ಮ ಹಣಕಾಸಿನ ಆವಶ್ಯಕತೆಗಳನ್ನು ಗುರುತಿಸಿ: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಚಟುವಟಿಕೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎನ್ನುವುದನ್ನು ಲೆಕ್ಕ ಹಾಕಿ. ಉಪಕರಣ, ಬಿತ್ತನೆ ಬೀಜ, ಗೊಬ್ಬರ, ಜಾನುವಾರುಗಳು ಅಥವಾ ಭೂಮಿಯನ್ನು ಖರೀದಿಸಲು ಅಗತ್ಯವಿರುವ ಮೊತ್ತವನ್ನು ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಇತರ ವೆಚ್ಚಗಳನ್ನು ನಿರ್ಣಯಿಸಿ. ನಿಮ್ಮ ಹಣಕಾಸಿನ ಅವಶ್ಯಕತೆಗಳ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಸರಿಯಾದ ಸಾಲದ ಮೊತ್ತ ಆಯ್ಕೆ ಮಾಡಲು ನೆರವಾಗುತ್ತದೆ.

ವಿವಿಧ ಸಾಲ ಮತ್ತು ಸಂಸ್ಥೆಗಳ ಬಗ್ಗೆ ಮಾಹಿತಿ ಕಲೆ ಹಾಕಿ: ರೈತರಿಗೆ ಹಲವು ರೀತಿಯ ಸಾಲ ದೊರೆಯುತ್ತದೆ. ಪ್ರತಿಯೊಂದೂ ತನ್ನದೇ ಆದ ಅರ್ಹತಾ ಮಾನದಂಡಗಳು, ಬಡ್ಡಿದರಗಳು ಮತ್ತು ಪ್ರಯೋಜನಗಳನ್ನು ಹೊಂದಿದೆ. ಇವುಗಳ ಪೈಕಿ ನಿಮ್ಮ ಅಗತ್ಯಗಳಿಗೆ ಸೂಕ್ತವಾದ ಸಾಲದ ಯೋಜನೆಗಳನ್ನು ಆಯ್ಕೆ ಮಾಡಿ. ಭಾರತದ ಜನಪ್ರಿಯ ಸಾಲ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (KC), ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY), ಚಿನ್ನದ ಸಾಲ, ಸೌರ ಪಂಪ್ ಸಾಲಗಳು, ಡೈರಿ ಸಾಲಗಳು, ಎಸ್‌ಎಚ್‌ಜಿ ಸಾಲಗಳು ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೀಡುವ ವಿವಿಧ ಲೋನ್‌ಗಳು ಸೇರಿವೆ. ಹೆಚ್ಚುವರಿಯಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳನ್ನೂ ಸಾಲಕ್ಕಾಗಿ ಪರಿಗಣಿಸಿ.

ಬಡ್ಡದರ ಹೋಲಿಸಿ: ವಿವಿಧ ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿ ವಿಧಿಸಲಾಗುವ ಬಡ್ಡಿದರಗಳನ್ನು ಹೋಲಿಕೆ ಮಾಡಿ ನೋಡಿ. ಕಡಿಮೆ ಬಡ್ಡಿದರ ಇರುವ, ನಿಮ್ಮ ಅನುಕೂಲಕ್ಕೆ ತಕ್ಕಷ್ಟು ಕಾಲಾವಧಿ ನೀಡುವ ಸಾಲವನ್ನು ಆಯ್ಕೆ ಮಾಡಿ.

ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ: ಕೃಷಿಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ. ಇದರಿಂದ ಸಮಯ ವ್ಯರ್ಥವಾಗುವುದನ್ನು ತಡೆಯಬಹುದು. ಅಗತ್ಯ ದಾಖಲೆಗಳೆಂದರೆ ಮೊದಲೇ ಹೇಳಿದಂತೆ ಗುರುತಿನ ಚೀಟಿ (ಆಧಾರ್‌, ಪ್ಯಾನ್‌ ಕಾರ್ಡ್‌, ವೋಟರ್‌ ಐಡಿ ಇತ್ಯಾದಿ), ವಿಳಾಸದ ಪುರಾವೆ (ವಿದ್ಯುತ್‌ ಬಿಲ್‌, ರೇಷನ್‌ ಕಾರ್ಡ್‌, ಪಾಸ್‌ಪೋರ್ಟ್‌ ಇತ್ಯಾದಿ), ಭೂ ದಾಖಲೆಗಳು, ಆದಾಯದ ಪುರಾವೆ (ಬ್ಯಾಂಕ್‌ ಸ್ಟೇಟ್‌ಮೆಂಟ್‌, ಆದಾಯ ತೆರಿಗೆ ಸಲ್ಲಿಕ ಇತ್ಯಾದಿ), ಕೃಷಿ ಉತ್ಪನ್ನಗಳು, ಕೃಷಿ ಯೋಜನೆಗಳು ಇತ್ಯಾದಿ.

ಗಮನಿಸಿ; ನಿಮ್ಮ ಆದಾಯಕ್ಕೆ ಹೊಂದಿಕೆಯಾಗುವ ಸಾಲ ಮರುಪಾವತಿಯ ಅವಧಿಯನ್ನು ಆಯ್ಕೆ ಮಾಡಿಕೊಳ್ಳಿ. ನೀವು ಸಲ್ಲಿಸಿರುವ ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕುಗಳು ಸಾಲ ಮಂಜೂರು ಮಾಡುತ್ತವೆ.

ಇದನ್ನೂ ಓದಿ: Money Guide: ಕಾರು ಚಲಾಯಿಸಿದಷ್ಟೇ ವಿಮೆ ಪ್ರೀಮಿಯಂ ಪಾವತಿಸಿ; ಏನಿದು ಹೊಸ ಯೋಜನೆ? ಅನುಕೂಲಗಳೇನು?

Continue Reading
Advertisement
Pav Bhaji
Latest4 mins ago

Pav Bhaji: ಪಾವ್ ಭಾಜಿ ಮನೆಯಲ್ಲೇ ಮಾಡುವುದು ಹೇಗೆ? ಇಲ್ಲಿದೆ ಸರಳ ವಿಧಾನ

Doctors protest
ಕರ್ನಾಟಕ13 mins ago

Doctors Protest: ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

Medicine
ಆರೋಗ್ಯ19 mins ago

Red Line on Medicine Strip: ಔಷಧ ಪ್ಯಾಕೇಟ್‌ ಮೇಲೆ ಕೆಂಪು ಗೆರೆ ಏಕಿರುತ್ತದೆ ಅನ್ನೋದು ಗೊತ್ತಾ?

Vijay Surya drusti bottu serial will start
ಕಿರುತೆರೆ28 mins ago

Vijay Surya: `ದೃಷ್ಟಿಬೊಟ್ಟು’ ಧಾರಾವಾಹಿ ಮೂಲಕ ಖಡಕ್‌ ಎಂಟ್ರಿ ಕೊಟ್ಟ ವಿಜಯ್ ಸೂರ್ಯ!

Visa Free Countries
ಪ್ರವಾಸ31 mins ago

Visa Free Countries: ಪ್ರವಾಸಿ ತಾಣಗಳಿಗೆ ಹೆಸರಾದ ಈ 10 ದೇಶಗಳಿಗೆ ಹೋಗಲು ವೀಸಾ ಬೇಕಿಲ್ಲ!

Indian Economy
ಪ್ರಮುಖ ಸುದ್ದಿ1 hour ago

Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

Kolkata Doctor Murder Case
Latest1 hour ago

Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Shiva Rajkumar 131st film set on Varamahalakshmi festival
ಸ್ಯಾಂಡಲ್ ವುಡ್1 hour ago

Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

Vinesh Phogat
ಪ್ರಮುಖ ಸುದ್ದಿ1 hour ago

Vinesh Phogat : ವಿನೇಶ್​ ಫೈನಲ್ ತಲುಪಿದ್ದೇ ಹೆಮ್ಮೆಯ ವಿಷಯ; ಫೋಗಟ್ ಸಾಧನೆಯನ್ನು ಕೊಂಡಾಡಿದ ಮೋದಿ

Donald Trump
ಪ್ರಮುಖ ಸುದ್ದಿ2 hours ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌