ವಿಸ್ತಾರ MoneyGuide: 2022ರಲ್ಲಿ ತೆರಿಗೆ ಉಳಿತಾಯ ಮಾಡಿ ಕೊಡುವ ಉತ್ತಮ ಮ್ಯೂಚುವಲ್‌ ಫಂಡ್‌ಗಳು ಯಾವುವು? - Vistara News

ಮನಿ-ಗೈಡ್

ವಿಸ್ತಾರ MoneyGuide: 2022ರಲ್ಲಿ ತೆರಿಗೆ ಉಳಿತಾಯ ಮಾಡಿ ಕೊಡುವ ಉತ್ತಮ ಮ್ಯೂಚುವಲ್‌ ಫಂಡ್‌ಗಳು ಯಾವುವು?

ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರ ಮೂಲಕ ಆದಾಯ ತೆರಿಗೆ ಉಳಿತಾಯವನ್ನೂ ಮಾಡಬಹುದು. ಇದಕ್ಕಾಗಿಯೇ ELSS ಮ್ಯೂಚುವಲ್‌ ಫಂಡ್‌ ಯೋಜನೆಗಳಿವೆ. ಇದರ ಪ್ರಯೋಜನ ತಿಳಿಯುವುದು ಸೂಕ್ತ.

VISTARANEWS.COM


on

elss fund
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಆದಾಯ ತೆರಿಗೆಯಲ್ಲಿ ಉಳಿತಾಯವನ್ನೂ ಮಾಡಬಹುದು. ಒಂದು ಕಡೆ ಹೂಡಿಕೆಯ ಪ್ರಯೋಜನ ಸಿಕ್ಕಿದರೆ, ಮತ್ತೊಂದು ಕಡೆ ತೆರಿಗೆ ವಿಚಾರದಲ್ಲೂ ದುಡ್ಡು ಉಳಿಸಬಹುದು.

Tax saving mutual funds ಅಥವಾ Equity Linked Savings Schemes (ELSS) ಎಂಬ ಮ್ಯೂಚುವಲ್‌ ಫಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರ ಮೂಲಕ ನೀವು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್‌ 80 ಸಿ ಅಡಿಯಲ್ಲಿ ತೆರಿಗೆ ಉಳಿತಾಯ ಮಾಡಬಹುದು. ELSS ಯೋಜನೆಗಳ ಅಡಿಯಲ್ಲಿ ನೀವು ವಾರ್ಷಿಕ ಗರಿಷ್ಠ 1.5 ಲಕ್ಷ ರೂ. ಹೂಡಿಕೆ ಮಾಡಬಹುದು. ಮತ್ತು ತೆರಿಗೆ ಉಳಿತಾಯ ಸೌಲಭ್ಯ ಪಡೆಯಬಹುದು.

ELSS ಮ್ಯೂಚುವಲ್‌ ಫಂಡ್‌ಗಳು ಷೇರುಗಳಲ್ಲಿ ಹೂಡಿಕೆ ಮಾಡುತ್ತವೆ. ಆದ್ದರಿಂದ ಅವುಗಳಲ್ಲಿ ರಿಸ್ಕ್‌ ಕೂಡ ಇರುತ್ತದೆ. ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳಲ್ಲಿ ಮೊದಲ ಸಲ ಹೂಡಿಕೆ ಮಾಡುತ್ತಿದ್ದರೆ ಈ ಅಂಶವನ್ನು ಗಮನಿಸುವುದು ಸೂಕ್ತ. ಸಾರ್ವಜನಿಕ ಭವಿಷ್ಯನಿಧಿ, ಅಂಚೆ ಉಳಿತಾಯ ಯೋಜನೆಗಳ ಮಾದರಿಯಲ್ಲಿ ಖಾತರಿಯ ಆದಾಯವನ್ನು ಇದು ನೀಡದು. ಹಾಗಾದರೆ ELSS ಏಕೆ ಅಗತ್ಯ?

ಹೆಚ್ಚಿನ ಆದಾಯಕ್ಕಾಗಿ ELSS ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದು ಸೂಕ್ತ. ಸಾರ್ವಜನಿಕ ಭವಿಷ್ಯನಿಧಿ, ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಗಳಿಗಿಂತ ಹೆಚ್ಚು ಆದಾಯವನ್ನು ಇವುಗಳು ನೀಡುವ ಸಾಧ್ಯತೆ ಇದೆ. ಇವುಗಳು ಷೇರುಗಳಲ್ಲಿ ಹೂಡುವುದರಿಂದ ಹಾಗೂ ಷೇರುಗಳು ಕಾಲಕ್ರಮೇಣ ಹೆಚ್ಚು ಆದಾಯ ನೀಡುವುದರಿಂದ ELSS ಕೂಡ ಹೆಚ್ಚು ಆದಾಯ ನೀಡುತ್ತದೆ. ಉದಾಹರಣೆಗೆ ELSS ಕಳೆದ 10 ವರ್ಷಗಳಲ್ಲಿ ಸರಾಸರಿ 15% ಆದಾಯ ನೀಡಿವೆ.

ಎರಡನೆಯದಾಗಿ ELSS ಯೋಜನೆಗಳಲ್ಲಿ ಲಾಕ್‌ ಇನ್‌ ಅವಧಿ ಕಡಿಮೆ. ಸೆಕ್ಷನ್‌ 80 ಸಿ ಅಡಿಯಲ್ಲಿ ತೆರಿಗೆ ಉಳಿತಾಯಕ್ಕೆ ಸಹಕರಿಸುವ ಇತರ ಬಹುತೇಕ ಯೋಜನೆಗಳು ಸರಕಾರದ ಬೆಂಬಲಿತ ಯೋಜನೆಗಳು ಹಾಗೂ ಅವುಗಳಲ್ಲಿ ಲಾಕ್‌ ಇನ್‌ ಅವಧಿ ದೀರ್ಘವಾಗಿರುತ್ತದೆ. ಉದಾಹರಣೆಗೆ ಸಾರ್ವಜನಿಕ ಭವಿಷ್ಯನಿಧಿ (PPF) 15 ವರ್ಷಗಳ ಯೋಜನೆಯಾಗಿದ್ದು, 6 ವರ್ಷಗಳ ಲಾಕ್ ಇನ್‌ ಅವಧಿಯನ್ನು ಒಳಗೊಂಡಿದೆ.‌ ಅಂದರೆ 6 ವರ್ಷಗಳ ಬಳಿಕ ಭಾಗಶಃ ಹೂಡಿಕೆ ಹಿಂತೆಗೆತ ಸಾಧ್ಯ. ಎನ್‌ಎಸ್‌ಇ 5 ವರ್ಷಗಳ ಅವಧಿಯನ್ನು ಒಳಗೊಂಡಿದೆ. ಆದ್ದರಿಂದ ನೀವು 3 ವರ್ಷಗಳ ಅವಧಿಗೆ ಹೂಡಲು ಬಯಸುವುದಿದ್ದರೆ ELSS ಆಯ್ಕೆ ಮಾಡುವುದು ಒಳಿತು. ಹೀಗಿದ್ದರೂ, ಉತ್ತಮ ಆದಾಯಕ್ಕಾಗಿ ದೀರ್ಘಕಾಲೀನವಾಗಿ ELSSಗಳಲ್ಲಿ ಹೂಡಿಕೆ ಮಾಡುವುದು ಸೂಕ್ತ. ಕನಿಷ್ಠ 5-7 ವರ್ಷ ಹೂಡಿಕೆ ಮುಂದುವರಿಸಿದರೆ ಒಳ್ಳೆಯ ಆದಾಯ ಗಳಿಸಬಹುದು ಎನ್ನುತ್ತಾರೆ ತಜ್ಞರು.

ಆರಂಭಿಕ ಹೂಡಿಕೆಯಾಗಿ ಬೆಸ್ಟ್

ಮ್ಯೂಚುವಲ್‌ ಫಂಡ್‌ಗಳಲ್ಲಿ ಆರಂಭಿಕ ಹಂತದಲ್ಲಿ ಹೂಡಿಕೆ ಮಾಡಲು ಬಯಸುವವರು ELSS ಆಯ್ಕೆ ಮಾಡುವುದು ಉತ್ತಮ. ಮೂರು ವರ್ಷಗಳ ಲಾಕ್‌ ಇನ್‌ ಅವಧಿಯಲ್ಲಿ ಷೇರು ಮಾರುಕಟ್ಟೆಯ ಏರಿಳಿತಗಳ ವಿರುದ್ಧ ಫಂಡ್‌ ಹೇಗೆ ಲಾಭದಾಯಕ ಎಂಬುದು ಗೊತ್ತಾಗುತ್ತದೆ. ಹೂಡಿಕೆಯ ಶಿಸ್ತು ರೂಪಿಸಲು ಸಹಕಾರಿ.

2022ರಲ್ಲಿ ಹೂಡಿಕೆಗೆ ಪರಿಶೀಲಿಸಬಹುದಾದ ELSS ಮ್ಯೂಚುವಲ್‌ ಫಂಡ್‌ ಯೋಜನೆಗಳು

  • ಎಕ್ಸಿಸ್‌ ಲಾಂಗ್‌ ಟರ್ಮ್‌ ಈಕ್ವಿಟಿ ಫಂಡ್‌
  • ಕೆನರಾ ರೊಬೆಕೊ ಈಕ್ವಿಟಿ ಟ್ಯಾಕ್ಸ್‌ ಸೇವರ್‌ ಫಂಡ್‌
  • ಮಿರಾಯ್‌ ಅಸೆಟ್‌ ಟ್ಯಾಕ್ಸ್‌ ಸೇವರ್‌ ಫಂಡ್‌
  • ಇನ್ವೆಸ್ಕೊ ಇಂಡಿಯಾ ಟ್ಯಾಕ್ಸ್‌ ಪ್ಲಾನ್‌ ಫಂಡ್‌
  • ಡಿಎಸ್‌ಪಿ ಟ್ಯಾಕ್ಸ್‌ ಸೇವರ್‌ ಫಂಡ್
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ವಾಣಿಜ್ಯ

Rule Change: ಸೆಪ್ಟೆಂಬರ್ 1ರಿಂದ ನಮ್ಮ ಮೇಲೆ ಪರಿಣಾಮ ಬೀರುವ 6 ಮುಖ್ಯ ಬದಲಾವಣೆಗಳಿವು

ಎಲ್‌ಪಿಜಿ ಮತ್ತು ಆಧಾರ್ ಕಾರ್ಡ್‌ಗೆ ಸಂಬಂಧಿಸಿ ಪ್ರತಿಯೊಬ್ಬರ ಜೇಬಿನ ಮೇಲೆ ಪರಿಣಾಮ ಬೀರುವ ಪ್ರಮುಖ ಆರು ಬದಲಾವಣೆಗಳು ಆಗಲಿವೆ. ಸೆಪ್ಟೆಂಬರ್ 1ರಿಂದ ಜಾರಿಯಾಗಲಿರುವ ಈ ನಿಯಮಗಳು (Rule Change) ಎಲ್ಲರಿಗೂ ಅನ್ವಯವಾಗುವುದು. ಆ ಬದಲಾವಣೆಗಳು ಯಾವುದು ಎನ್ನುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

VISTARANEWS.COM


on

By

Rule Change
Koo

ಸೆಪ್ಟೆಂಬರ್ 1ರಿಂದ ಎಲ್‌ಪಿಜಿ (LPG) ಮತ್ತು ಆಧಾರ್ ಕಾರ್ಡ್‌ಗೆ (Aaadhar card) ಸಂಬಂಧಿಸಿ ಆರು ದೊಡ್ಡ ಬದಲಾವಣೆಗಳು (Rule Change) ಆಗಲಿವೆ. ಇದು ಪ್ರತಿಯೊಬ್ಬರ ಜೇಬಿನ ಮೇಲೂ ಪರಿಣಾಮ ಬೀರಲಿದೆ. ಈ ಬದಲಾವಣೆಗಳು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್‌ಗಳ (LPG cylinder) ಬೆಲೆ ಮತ್ತು ಕ್ರೆಡಿಟ್ ಕಾರ್ಡ್‌ಗಳ (Credit card) ನಿಯಮಗಳನ್ನು ಒಳಗೊಂಡಿವೆ. ಅಲ್ಲದೇ ತುಟ್ಟಿಭತ್ಯೆ ಕುರಿತು ಸರ್ಕಾರಿ ನೌಕರರಿಗೆ ವಿಶೇಷ ಪ್ರಕಟಣೆಗಳು ಸೇರಿವೆ.

ಆಗಸ್ಟ್ ತಿಂಗಳ ಅಂತ್ಯಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಇಂತಹ ಪರಿಸ್ಥಿತಿಯಲ್ಲಿ ಹೊಸ ತಿಂಗಳಿನಿಂದ ಅನೇಕ ದೊಡ್ಡ ಬದಲಾವಣೆಗಳು ನಡೆಯಲಿದೆ. ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಅಂತಹ ಕೆಲವು ವಿಶೇಷ ಬದಲಾವಣೆಗಳು ಸೆಪ್ಟೆಂಬರ್ ತಿಂಗಳಿನ ಆರಂಭದಲ್ಲೇ ನಡೆಯಲಿದೆ.

Rule Change
Rule Change


ಎಲ್ ಪಿ ಜಿ ಸಿಲಿಂಡರ್ ಬೆಲೆ

ಪ್ರತಿ ತಿಂಗಳ ಮೊದಲ ದಿನಾಂಕದಂದು ಸರ್ಕಾರವು ಎಲ್‌ಪಿಜಿ ಬೆಲೆಯನ್ನು ಬದಲಾಯಿಸುತ್ತದೆ. ಅಂತೆಯೇ ಅಡುಗೆ ಅನಿಲ, ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳಲ್ಲಿ ಬದಲಾವಣೆ ಸೆಪ್ಟೆಂಬರ್ ಮೊದಲ ದಿನವೇ ಕಾಣಬಹುದು. ಇಂತಹ ಪರಿಸ್ಥಿತಿಯಲ್ಲಿ ಈ ಬಾರಿಯೂ ಎಲ್ ಪಿ ಜಿ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ತಿಂಗಳು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 8.50 ರೂಪಾಯಿಯಷ್ಟು ಹೆಚ್ಚಿದ್ದರೆ, ಜುಲೈನಲ್ಲಿ ಅದರ ಬೆಲೆ 30 ರೂಪಾಯಿಗಳಷ್ಟು ಕಡಿಮೆಯಾಗಿದೆ.


ಎಟಿಎಫ್, ಸಿಎನ್‌‌ಜಿ, ಪಿಎನ್‌‌ಜಿ ದರಗಳು

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳೊಂದಿಗೆ ತೈಲ ಮಾರುಕಟ್ಟೆ ಕಂಪೆನಿಗಳು ಏರ್ ಟರ್ಬೈನ್ ಇಂಧನ (ಎಟಿಎಫ್) ಮತ್ತು ಸಿಎನ್‌ಜಿ-ಪಿಎನ್‌ಜಿ ಬೆಲೆಗಳನ್ನು ಸಹ ಪರಿಷ್ಕರಿಸುತ್ತವೆ. ಈ ಕಾರಣದಿಂದಾಗಿ ಸೆಪ್ಟೆಂಬರ್ ಮೊದಲ ದಿನಾಂಕದಂದು ಅವುಗಳ ಬೆಲೆಯಲ್ಲಿ ಬದಲಾವಣೆಗಳನ್ನು ಕಾಣಬಹುದು.

Rule Change
Rule Change


ನಕಲಿ ಕರೆಗಳಿಗೆ ಕಡಿವಾಣ

ಸೆಪ್ಟೆಂಬರ್ 1ರಿಂದ ನಕಲಿ ಕರೆ ಮತ್ತು ಸಂದೇಶಗಳಿಗೆ ಕಡಿವಾಣ ಬೀಳಲಿದೆ. ನಕಲಿ ಕರೆಗಳು ಮತ್ತು ನಕಲಿ ಸಂದೇಶಗಳಿಗೆ ಕಡಿವಾಣ ಹಾಕುವಂತೆ ಟಿಆರ್‌‌ಎಐ ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದೆ. ಇದಕ್ಕಾಗಿ ಟಿಆರ್‌‌ಎಐ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ಜಿಯೋ, ಏರ್‌ಟೆಲ್, ವೊಡಾಫೋನ್, ಐಡಿಯಾ, ಬಿಎಸ್‌ಎನ್‌ಎಲ್‌ನಂತಹ ಟೆಲಿಕಾಂ ಕಂಪನಿಗಳಿಗೆ ಟೆಲಿಮಾರ್ಕೆಟಿಂಗ್ ಕರೆಗಳು ಮತ್ತು 140 ಮೊಬೈಲ್ ಸಂಖ್ಯೆಗಳ ಸರಣಿಯಿಂದ ಪ್ರಾರಂಭವಾಗುವ ವಾಣಿಜ್ಯ ಸಂದೇಶಗಳನ್ನು ಬ್ಲಾಕ್‌ಚೇನ್ ಆಧಾರಿತ ಡಿಎಲ್‌ಟಿಗೆ ವರ್ಗಾಯಿಸಲು ಟಿಆರ್ ಎಐ ಕೇಳಿದೆ. ಅಂದರೆ ಸೆಪ್ಟೆಂಬರ್ 30 ರೊಳಗೆ ವಿತರಣಾ ಲೇಸರ್ ತಂತ್ರಜ್ಞಾನ ಪ್ಲಾಟ್‌ಫಾರ್ಮ್‌ಗೆ ಬದಲಾಯಿಸಲು ಟಿಆರ್‌‌ಎಐ ಕೇಳಿದೆ. ಇದು ನಕಲಿ ಕರೆಗಳನ್ನು ನಿಲ್ಲಿಸುವ ನಿರೀಕ್ಷೆಯಿದೆ.


ಕ್ರೆಡಿಟ್ ಕಾರ್ಡ್ ನಿಯಮಗಳು

ಸೆಪ್ಟೆಂಬರ್ 1ರಿಂದ ಎಚ್‌ಡಿಎಫ್‌ಸಿ ಬ್ಯಾಂಕ್ ಯುಟಿಲಿಟಿ ವಹಿವಾಟುಗಳ ರಿವಾರ್ಡ್ ಪಾಯಿಂಟ್‌ಗಳ ಮಿತಿಯನ್ನು ನಿಗದಿಪಡಿಸಲಿದೆ. ಇದರ ಅಡಿಯಲ್ಲಿ ಗ್ರಾಹಕರು ಈ ವಹಿವಾಟುಗಳಲ್ಲಿ ತಿಂಗಳಿಗೆ 2,000 ಪಾಯಿಂಟ್‌ಗಳವರೆಗೆ ಮಾತ್ರ ಪಡೆಯಬಹುದು. ಸೆಪ್ಟೆಂಬರ್ 2024ರಿಂದ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಪಾವತಿಸಬೇಕಾದ ಕನಿಷ್ಠ ಮೊತ್ತವನ್ನು ಕಡಿಮೆ ಮಾಡುತ್ತದೆ. ಪಾವತಿ ದಿನಾಂಕವನ್ನು 18 ರಿಂದ 15 ದಿನಗಳವರೆಗೆ ಕಡಿಮೆ ಮಾಡಲಾಗುತ್ತದೆ.

ಇದರ ಹೊರತಾಗಿ 2024ರ ಸೆಪ್ಟೆಂಬರ್ 1ರಿಂದ ಯುಪಿಐ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾವತಿಗಳಿಗಾಗಿ ರುಪೇ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರು ಇತರ ಪಾವತಿ ಸೇವಾ ಪೂರೈಕೆದಾರರ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವಂತೆಯೇ ರಿವಾರ್ಡ್ ಪಾಯಿಂಟ್‌ಗಳನ್ನು ಪಡೆಯುತ್ತಾರೆ.

Rule Change
Rule Change


ತುಟ್ಟಿಭತ್ಯೆ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಸರ್ಕಾರವು ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡಾ 3ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ಪ್ರಸ್ತುತ, ಸರ್ಕಾರಿ ನೌಕರರಿಗೆ ಶೇ. 50ರಷ್ಟು ತುಟ್ಟಿಭತ್ಯೆ (ಡಿಎ) ನೀಡಲಾಗುತ್ತಿದ್ದು, ಶೇ. 3ರಷ್ಟು ಹೆಚ್ಚಳದ ಅನಂತರ ಅದು ಶೇ. 53 ಆಗಲಿದೆ.


ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

ಆಧಾರ್ ಕಾರ್ಡ್ ಉಚಿತ ನವೀಕರಣ

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 14 ಎಂದು ನಿಗದಿಪಡಿಸಲಾಗಿದೆ. ಇದರ ಅನಂತರ, ಆಧಾರ್‌ಗೆ ಸಂಬಂಧಿಸಿದ ಕೆಲವು ವಿಷಯಗಳನ್ನು ಉಚಿತವಾಗಿ ನವೀಕರಿಸಲು ಸಾಧ್ಯವಾಗುವುದಿಲ್ಲ. ಸೆಪ್ಟೆಂಬರ್ 14ರ ಅನಂತರ ಆಧಾರ್ ಅನ್ನು ನವೀಕರಿಸಲು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Continue Reading

ವಾಣಿಜ್ಯ

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (Unified Pension Scheme) ಅರ್ಥೈಸಿಕೊಳ್ಳಲು ನೆರವಾಗುವ ಕೆಲವು ಪ್ರಮುಖ ಅಂಶಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹಂಚಿಕೊಂಡಿದ್ದಾರೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

VISTARANEWS.COM


on

By

Unified Pension Scheme
Koo

ನಿವೃತ್ತಿಯ ಬಳಿಕ ಸರ್ಕಾರಿ ನೌಕರರಿಗೆ (central government employees) ಆರ್ಥಿಕ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಉದ್ದೇಶದಿಂದ 23 ಲಕ್ಷ ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ʼಏಕೀಕೃತ ಪಿಂಚಣಿ ಯೋಜನೆʼಗೆ (Unified Pension Scheme) ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. 2004ರ ಜನವರಿ 1ರ ಅನಂತರ ಸೇವೆಗೆ ಸೇರಿದವರಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಈ ಯೋಜನೆ ಕುರಿತ ಮತ್ತಷ್ಟು ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಯುಪಿಎಸ್‌ ವೈಶಿಷ್ಟ್ಯಗಳೇನು?

1. ಖಚಿತ ಪಿಂಚಣಿ

ಕನಿಷ್ಠ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉದ್ಯೋಗಿಗಳು ನಿವೃತ್ತಿಯ ಹಿಂದಿನ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ ಶೇ. 50ರಷ್ಟು ಖಚಿತವಾದ ಪಿಂಚಣಿಯನ್ನು ಪಡೆಯುತ್ತಾರೆ. 25 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರ ಪಿಂಚಣಿಯು ಅವರ ಅವಧಿಗೆ ಅನುಗುಣವಾಗಿರುತ್ತದೆ. ಕನಿಷ್ಠ ಅರ್ಹತಾ ಸೇವಾ ಅವಧಿಯನ್ನು 10 ವರ್ಷಗಳಿಗೆ ನಿಗದಿಪಡಿಸಲಾಗಿದೆ.

2. ಖಚಿತವಾದ ಕುಟುಂಬ ಪಿಂಚಣಿ

ಅಪಘಾತದಿಂದ ನೌಕರ ಮರಣ ಹೊಂದಿದರೆ ಅವರ ಸಂಗಾತಿಯು ಅಥವಾ ಅವಲಂಬಿತರು ಕುಟುಂಬ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಮರಣದ ಮೊದಲು ಉದ್ಯೋಗಿ ಪಡೆಯುತ್ತಿದ್ದ ಪಿಂಚಣಿಯ ಶೇ. 60ರಷ್ಟು ಅವರ ಸಂಗಾತಿಗೆ ಕುಟುಂಬ ಪಿಂಚಣಿಯಾಗಿ ದೊರೆಯುತ್ತದೆ.

3. ಖಚಿತವಾದ ಕನಿಷ್ಠ ಪಿಂಚಣಿ

ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನೌಕರರಿಗೆ ನಿವೃತ್ತಿಯ ಅನಂತರ ತಿಂಗಳಿಗೆ 10,000 ರೂ. ಕನಿಷ್ಠ ಪಿಂಚಣಿಯ ಖಾತರಿ ಇದೆ.

4. ಹಣದುಬ್ಬರ ಸೂಚ್ಯಂಕ

ಖಚಿತ ಮತ್ತು ಕುಟುಂಬ ಪಿಂಚಣಿ ಎರಡೂ ಹಣದುಬ್ಬರ ಸೂಚ್ಯಂಕಕ್ಕೆ ಒಳಪಟ್ಟಿರುತ್ತವೆ. ಈ ಹೊಂದಾಣಿಕೆಯು ಪಿಂಚಣಿಗಳು ಹಣದುಬ್ಬರಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸುತ್ತದೆ.

5. ದರ ಏರಿಕೆ ಪರಿಹಾರ

ಸೇವೆಯಲ್ಲಿರುವ ಉದ್ಯೋಗಿಗಳಂತೆಯೇ ಯುಪಿಎಸ್ ಅಡಿಯಲ್ಲಿ ನಿವೃತ್ತರಾದ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ದರ ಏರಿಕೆ ಪರಿಹಾರವನ್ನು ಪಡೆಯುತ್ತಾರೆ.


6. ನಿವೃತ್ತಿಯ ಮೇಲೆ ಒಟ್ಟು ಮೊತ್ತ

ಗ್ರಾಚ್ಯುಟಿ ಜೊತೆಗೆ ಉದ್ಯೋಗಿಗಳು ನಿವೃತ್ತಿಯ ಸಮಯದಲ್ಲಿ ಒಂದು ದೊಡ್ಡ ಮೊತ್ತದ ಪಾವತಿಯನ್ನು ಸ್ವೀಕರಿಸುತ್ತಾರೆ. ಈ ಪಾವತಿಯು ವೇತನ ಮತ್ತು ತುಟ್ಟಿ ಭತ್ಯೆ ಸೇರಿ ನಿವೃತ್ತಿಯ ದಿನಾಂಕ ಪೂರ್ಣಗೊಂಡ ಪ್ರತಿ ಆರು ತಿಂಗಳ ಸೇವೆಗೆ ಉದ್ಯೋಗಿಯ ಮಾಸಿಕ ವೇತನದ 1/10 ಭಾಗವಾಗಿರುತ್ತದೆ. ಈ ಒಟ್ಟು ಮೊತ್ತದ ಪಾವತಿಯು ಖಚಿತವಾದ ಪಿಂಚಣಿಯ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ.

7. ಸರ್ಕಾರದ ಕೊಡುಗೆ

ಈ ಪಿಂಚಣಿ ಯೋಜನೆಯಡಿ ಸರ್ಕಾರವು ತನ್ನ ಕೊಡುಗೆಯನ್ನು ಶೇ. 14ರಿಂದ ಶೇ.18.5ಕ್ಕೆ ಹೆಚ್ಚಿಸುತ್ತಿದೆ. ಆದರೆ ನೌಕರರ ಕೈಯಿಂದ ಈಗಿರುವ ಪ್ರಮಾಣದಷ್ಟೇ ಹಣ ಈ ಯೋಜನೆಗೆ ಸಂದಾಯವಾಗುತ್ತದೆ. ಹಾಗಾಗಿ ಇದರಿಂದ ನೌಕರರಿಗೆ ಹೆಚ್ಚು ಪ್ರಯೋಜನ ಸಿಗುವಂತಾಗುತ್ತದೆ.


8. ನಿವೃತ್ತಿ ಹೊಂದಿದವರಿಗೂ ಅನ್ವಯ

ಏಕೀಕೃತ ಪಿಂಚಣಿ ಯೋಜನೆಯ ನಿಬಂಧನೆಗಳು ರಾಷ್ಟ್ರೀಯ ಪಿಂಚಣಿ ಯೋಜನೆ ಹೊಂದಿರುವ ಹಿಂದಿನ ನಿವೃತ್ತರಿಗೆ ಅಂದರೆ ಈಗಾಗಲೇ ನಿವೃತ್ತಿ ಹೊಂದಿದವರಿಗೂ ಅನ್ವಯಿಸುತ್ತದೆ. ಹಿಂದಿನ ಅವಧಿಯ ಬಾಕಿಯನ್ನು ಪಿಪಿಎಫ್ ದರಗಳಲ್ಲಿ ಬಡ್ಡಿಯೊಂದಿಗೆ ಪಾವತಿಸಲಾಗುತ್ತದೆ.

ಇದನ್ನೂ ಓದಿ: Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

9. ಏಕೀಕೃತ ಪಿಂಚಣಿ ಯೋಜನೆಗೆ ಸೇರುವ ಆಯ್ಕೆ

ಅಸ್ತಿತ್ವದಲ್ಲಿರುವ ಎನ್‌ಪಿಎಸ್, ವಿಆರ್‌ಎಸ್ ಜೊತೆಗೆ ಎನ್‌ಪಿಎಸ್ ಜೊತೆಗೆ ಭವಿಷ್ಯದ ಉದ್ಯೋಗಿಗಳು ಯುಪಿಎಸ್‌ಗೆ ಸೇರುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಆಯ್ಕೆಯನ್ನು ಒಮ್ಮೆ ಮಾಡಿಕೊಂಡರೆ ಅದೇ ಅಂತಿಮವಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಯುಪಿಎಸ್ ಅನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು ರಾಜ್ಯ ಸರ್ಕಾರಗಳೂ ಅಳವಡಿಸಿಕೊಳ್ಳಬಹುದಾಗಿದೆ. ಆದರೆ ಕೇಂದ್ರದಂತೆ ರಾಜ್ಯ ಸರ್ಕಾರವೂ ಹೆಚ್ಚುವರಿ ಮೊತ್ತ ಪಾವತಿಸಬೇಕಾಗುತ್ತದೆ.

Continue Reading

ಮನಿ-ಗೈಡ್

Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆ; ನಿಮ್ಮ ಮಗಳು 71 ಲಕ್ಷ ರೂ. ಪಡೆಯಲು ಸಾಧ್ಯ!

ಸುಕನ್ಯಾ ಸಮೃದ್ಧಿ ಯೋಜನೆಯನ್ನು (Sukanya Samriddhi Yojana) ಕೇಂದ್ರ ಸರ್ಕಾರ ಹೆಣ್ಣುಮಕ್ಕಳಿಗಾಗಿ ಮಾಡಿರುವ ಯೋಜನೆಯಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದರ ಅಡಿಯಲ್ಲಿ ಹೂಡಿಕೆ ಮಾಡಿದರೆ ಮಗಳಿಗೆ 21 ವರ್ಷವಾದಾಗ ಅವಳನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಅದು ಹೇಗೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Sukanya Samriddhi Yojana
Koo

ಹಣವನ್ನು ತ್ವರಿತವಾಗಿ ಹೆಚ್ಚಿಸಬೇಕು ಎನ್ನುವ ಯೋಚನೆ ಇದ್ದರೆ ಅದನ್ನು ಬ್ಯಾಂಕ್ ನಲ್ಲಿ ಸುಮ್ಮನೆ ಇರಿಸುವ ಬದಲು ಪೋಸ್ಟ್ ಆಫೀಸ್ ನ (post office) ವಿವಿಧ ಯೋಜನೆಗಳಲ್ಲಿ ಒಂದಾದ ಸುಕನ್ಯಾ ಸಮೃದ್ಧಿ ಯೋಜನೆಯಂತಹ (Sukanya Samriddhi Yojana) ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆ. ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆ (share market), ಮ್ಯೂಚುವಲ್ ಫಂಡ್‌ಗಳಂತಹ (mutual fund) ಯೋಜನೆಗಳಲ್ಲಿ ಹೂಡಿಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದು ಇದೇ ಕಾರಣಕ್ಕೆ.

ಹೂಡಿಕೆ ಮಾಡಲು ಜೊತೆಗೆ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದಾರೆ ಅನೇಕ ಸರ್ಕಾರಿ ಯೋಜನೆಗಳಿವೆ. ಭಾರತ ಸರ್ಕಾರವು ಮಕ್ಕಳ ಭವಿಷ್ಯದ ಮೇಲೆ ಕೇಂದ್ರೀಕೃತವಾಗಿರುವ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಇದು ಉತ್ತಮ ಆದಾಯವನ್ನು ನೀಡುತ್ತದೆ. ಇಲ್ಲಿ ಅಂತಹ ಒಂದು ಸರ್ಕಾರಿ ಯೋಜನೆಯ ಬಗ್ಗೆ ತಿಳಿಸುತ್ತೇವೆ.

ಕೇಂದ್ರ ಸರ್ಕಾರದ ಈ ಯೋಜನೆಯು ಹೆಣ್ಣುಮಕ್ಕಳ ಮೇಲೆ ಕೇಂದ್ರೀಕೃತವಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದು ಸುಕನ್ಯಾ ಸಮೃದ್ಧಿ ಯೋಜನೆ. ಇದರ ಅಡಿಯಲ್ಲಿ ಯಾರಾದರೂ ವಾರ್ಷಿಕವಾಗಿ ಕನಿಷ್ಠ 250 ರೂ. ನಿಂದ ಗರಿಷ್ಠ 1.5 ಲಕ್ಷ ರೂ. ವರೆಗೆ ಠೇವಣಿ ಮಾಡಬಹುದು.

ಬಡ್ಡಿ ದರ

ಸುಕನ್ಯಾ ಸಮೃದ್ಧಿ ಯೋಜನೆಯ ದೊಡ್ಡ ವೈಶಿಷ್ಟ್ಯವೆಂದರೆ ದೇಶಾದ್ಯಂತ ನಡೆಯುತ್ತಿರುವ ಸರ್ಕಾರಿ ಯೋಜನೆಗಳಲ್ಲಿ ಇದು ಹೆಚ್ಚಿನ ಬಡ್ಡಿಯನ್ನು ನೀಡುವ ಯೋಜನೆಗಳಲ್ಲಿ ಒಂದಾಗಿದೆ. ಖಾತೆದಾರರಿಗೆ ಪ್ರತಿ ವರ್ಷ ಶೇ. 8.2 ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ವರ್ಷಗಳವರೆಗೆ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಮಗಳಿಗಾಗಿ 71 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಸಿದ್ಧಪಡಿಸಬಹುದು.

Sukanya Samriddhi Yojana
Sukanya Samriddhi Yojana


ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು?

ಕೇಂದ್ರ ಸರ್ಕಾರ ಆರಂಭಿಸಿರುವ ಈ ಯೋಜನೆಯಡಿ ಯಾವುದೇ ಭಾರತೀಯ ಪ್ರಜೆ ತಮ್ಮ ಮಗಳ ಹೆಸರಿನಲ್ಲಿ ಈ ಯೋಜನೆಯನ್ನು ಆರಂಭಿಸಬಹುದು. ಈ ಯೋಜನೆಗೆ ಅರ್ಹರಾಗಲು ಮಗಳ ವಯಸ್ಸು 0 ರಿಂದ 10 ವರ್ಷಗಳ ನಡುವೆ ಇರಬೇಕು. ಈ ಯೋಜನೆಯನ್ನು ಅಂಚೆ ಕಚೇರಿಯ ಯಾವುದೇ ಶಾಖೆಯಲ್ಲಿ ತೆರೆಯಬಹುದು. ಈ ಯೋಜನೆಯಡಿಯಲ್ಲಿ, ನೀವು ಒಟ್ಟು 15 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಅದರ ಅನಂತರ 21 ವರ್ಷಗಳು ಪೂರ್ಣಗೊಂಡ ತಕ್ಷಣ ಪೂರ್ಣ ಮೊತ್ತವನ್ನು ಮುಕ್ತಾಯದ ಮೇಲೆ ನೀಡಲಾಗುತ್ತದೆ.

ವಿಶೇಷ ನಿಯಮಗಳು

ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ನೀಡುವ ಬಡ್ಡಿಯನ್ನು ಪರಿಷ್ಕರಿಸುತ್ತದೆ. ಬಡ್ಡಿಯ ಹೆಚ್ಚಳ ಅಥವಾ ಇಳಿಕೆಯು ಮುಕ್ತಾಯದ ಮೇಲೆ ಸ್ವೀಕರಿಸಿದ ಮೊತ್ತದ ಮೇಲೆ ಪರಿಣಾಮ ಬೀರುತ್ತದೆ. ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಹೂಡಿಕೆ ಮಾಡಿದ ಮೊತ್ತವನ್ನು ಪ್ರತಿ ವರ್ಷ ಏಪ್ರಿಲ್ 5 ರ ಮೊದಲು ಠೇವಣಿ ಮಾಡಬೇಕು. ಇದರಿಂದ ಮಗಳು ಗರಿಷ್ಠ ಬಡ್ಡಿ ಪಡೆಯಬಹುದು.

ಖಾತೆಯನ್ನು ತೆರೆಯುವ ಸಮಯದಲ್ಲಿ ಮಗಳಿಗೆ ಒಂದು ವರ್ಷವೂ ಆಗದೇ ಇದ್ದರೆ ಖಾತೆಯು 21 ವರ್ಷಗಳನ್ನು ಪೂರೈಸಿದಾಗ ಮಗಳು ಮೆಚ್ಯೂರಿಟಿ ಮೊತ್ತವನ್ನು ಪಡೆಯುತ್ತಾಳೆ. ಇದರ ಅರ್ಥ ಮಗಳು 21 ವರ್ಷಕ್ಕೆ ಬಂದಾಗ ಅಲ್ಲ. ಖಾತೆಯನ್ನು ತೆರೆದು 21 ವರ್ಷ ಪೂರ್ಣಗೊಂಡಾಗ.

ಇದನ್ನೂ ಓದಿ Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

71 ಲಕ್ಷ ಹೇಗೆ ಸಿಗುತ್ತದೆ?

ಈ ಯೋಜನೆಯಡಿಯಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂಪಾಯಿಗಳನ್ನು 15 ವರ್ಷಗಳವರೆಗೆ ಠೇವಣಿ ಮಾಡಬಹುದು. ಅದರ ಮೇಲೆ ನಿಮಗೆ ಗರಿಷ್ಠ ಪ್ರಯೋಜನವನ್ನು ನೀಡಲಾಗುತ್ತದೆ. ಈ ಮೊತ್ತವನ್ನು 15 ವರ್ಷಗಳವರೆಗೆ ಠೇವಣಿ ಮಾಡಿದರೆ ಒಟ್ಟು 22,50,000 ರೂ. ಮುಕ್ತಾಯದ ಅನಂತರ 71,82,119 ರೂ. ಗಳನ್ನು ಪಡೆಯಬಹುದು. ಇದರಲ್ಲಿ ಬಡ್ಡಿಯಿಂದ ಪಡೆದ ಒಟ್ಟು ಮೊತ್ತ 49,32,119 ರೂ. ಮೆಚ್ಯೂರಿಟಿಯಲ್ಲಿ ಪಡೆದ ಈ ಮೊತ್ತದ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ.

Continue Reading

ಮನಿ-ಗೈಡ್

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

ಪೋಸ್ಟ್ ಆಫೀಸ್‌ನಲ್ಲಿರುವ ಆರ್‌ಡಿ (Recurring Deposit) ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಮಾತ್ರವಲ್ಲದೆ ಇನ್ನೂ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಯೋಜನೆಯ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Recurring Deposit
Koo

ಪ್ರತಿಯೊಬ್ಬರಿಗೂ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ (investment) ಮಾಡುವುದು ಸಾಧ್ಯವಿಲ್ಲ. ವಿಶೇಷವಾಗಿ ಉದ್ಯೋಗಕ್ಕೆ ಇತ್ತೀಚೆಗಷ್ಟೇ ಸೇರಿದವರು, ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರಿಗಾಗಿ (small investors or beginners) ಸಹಾಯ ಮಾಡಲು ಕೇಂದ್ರ ಸರ್ಕಾರವು (Indian Govt) ಉಳಿತಾಯ ಯೋಜನೆಯೊಂದನ್ನು (Recurring Deposit) ಪರಿಚಯಿಸಿದೆ.

ಇದು ಕೇಂದ್ರ ಸರ್ಕಾರದಿಂದ ನಿಯಂತ್ರಿಸಲ್ಪಟ್ಟಿರುವುದರಿಂದ ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯಾಗಿದೆ. ಹಾಗಾದರೆ ಈ ಉಳಿತಾಯ ಯೋಜನೆ ಯಾವುದು, ಅದರ ವಿಶೇಷತೆಗಳು ಏನು ಎಂಬುದನ್ನು ನೋಡೋಣ.
ಪೋಸ್ಟ್ ಆಫೀಸ್‌ನಲ್ಲಿರುವ ಆರ್ ಡಿ ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ.

ಆರ್ ಡಿ ಯೋಜನೆ

ಈ ಉಳಿತಾಯ ಯೋಜನೆಯು ನಿರ್ದಿಷ್ಟವಾಗಿ ಸಣ್ಣ ಹೂಡಿಕೆದಾರರಿಗಾಗಿ ಮಾಡಲ್ಪಟ್ಟಿದೆ. ಇದರಿಂದ ಅವರು ತಮ್ಮ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಇದಲ್ಲದೆ, ಠೇವಣಿಯ ಮೇಲೆ ಯಾವುದೇ ಗರಿಷ್ಠ ಮಿತಿಯಿಲ್ಲ.

ಯೋಜನೆ ಅವಧಿ ಎಷ್ಟು?

ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯು 5 ವರ್ಷಗಳ ಮೆಚುರಿಟಿ ಅವಧಿಯ ಸಣ್ಣ ಉಳಿತಾಯ ಯೋಜನೆಯಾಗಿದೆ. ಈ ಉಳಿತಾಯ ಯೋಜನೆಯೊಂದಿಗೆ ಮಾಸಿಕ ಆಧಾರದ ಮೇಲೆ ಹೂಡಿಕೆ ಮಾಡಬಹುದು. ಇದಲ್ಲದೆ ಈ ಯೋಜನೆಯು ಒಬ್ಬ ವ್ಯಕ್ತಿಗೆ ಏಕ ಮತ್ತು ಜಂಟಿ ಖಾತೆಯನ್ನು ತೆರೆಯಲು ಅನುಮತಿಸುತ್ತದೆ.


ಹೂಡಿಕೆ ಹೇಗೆ?

ತಿಂಗಳಿಗೆ ಕನಿಷ್ಠ 100 ರೂ.ನಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಯಾವುದೇ ಗರಿಷ್ಠ ಮಿತಿ ಇಲ್ಲದಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಹೂಡಿಕೆ ಮಾಡಬಹುದು. ಆದರೆ ಕ್ಯಾಲೆಂಡರ್ ತಿಂಗಳ 15ರಂದು ಖಾತೆಯನ್ನು ತೆರೆದರೆ ತಿಂಗಳ 15ನೇ ದಿನದವರೆಗೆ ಠೇವಣಿ ಮಾಡಬೇಕು ಎಂಬುದನ್ನು ಗಮನಿಸಬೇಕು. ಕ್ಯಾಲೆಂಡರ್ ತಿಂಗಳ 16ನೇ ದಿನ ಮತ್ತು ಕೊನೆಯ ಕೆಲಸದ ದಿನದ ನಡುವೆ ಖಾತೆಯನ್ನು ತೆರೆದರೆ, ಅನಂತರದ ಠೇವಣಿ ತಿಂಗಳ ಕೊನೆಯ ಕೆಲಸದ ದಿನದವರೆಗೆ ಮಾಡಲಾಗುತ್ತದೆ.

ಖಾತೆಯ ಬಡ್ಡಿ ದರ

ಈ ಉಳಿತಾಯ ಯೋಜನೆಯು ವಾರ್ಷಿಕ ಶೇ. 6.7ರಷ್ಟು ಬಡ್ಡಿ ದರವನ್ನು ನೀಡುತ್ತದೆ. ಐದು ವರ್ಷಗಳವರೆಗೆ 10,000 ರೂ. ಮಾಸಿಕ ಹೂಡಿಕೆಯೊಂದಿಗೆ 7 ಲಕ್ಷ ರೂ.ಗಳಿಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು.

ಇದನ್ನೂ ಓದಿ: Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

ಯಾರು ಅರ್ಜಿ ಸಲ್ಲಿಸಬಹುದು?

ಯಾವುದೇ ಒಬ್ಬ ವಯಸ್ಕ, ಅಪ್ರಾಪ್ತ ವಯಸ್ಕ, ಅಸ್ವಸ್ಥ ಮನಸ್ಸಿನ ವ್ಯಕ್ತಿಯ ಪರವಾಗಿ ಪೋಷಕರು, 10 ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ತಮ್ಮ ಹೆಸರಿನಲ್ಲಿ ಈ ಖಾತೆಯನ್ನು ತೆರೆಯಬಹುದು. ಇದರ ಹೊರತಾಗಿ ಈ ಯೋಜನೆಯು ಹೂಡಿಕೆದಾರರಿಗೆ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಇದಲ್ಲದೆ ಬಹು ಖಾತೆಗಳನ್ನು ತೆರೆಯಲು ಅವಕಾಶವಿದೆ.

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ5 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು6 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು9 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು9 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ10 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು10 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು12 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು12 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು13 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು14 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ5 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌