EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ - Vistara News

ಮನಿ-ಗೈಡ್

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

ಉದ್ಯೋಗಿಗಳ ಭವಿಷ್ಯ ನಿಧಿ ಹೊಂದಿರುವ ಸದಸ್ಯರಿಗೆ ಇಲ್ಲಿದೆ ಗುಡ್ ನ್ಯೂಸ್. ಶಿಕ್ಷಣ, ಮದುವೆ ಮತ್ತು ವಸತಿಗಾಗಿ ಪಿಎಫ್ ನಿಂದ ಮುಂಗಡ ಹಣವನ್ನು ಪಡೆಯುವುದು ಈಗ ಸುಲಭವಾಗಿದೆ. ಈ ಬಗ್ಗೆ ನಿಯಮಗಳು (EPF Withdraw Rule) ಏನು ಹೇಳಿವೆ ಗೊತ್ತೇ? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

EPF Withdrawal Rule
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPF Withdraw Rule) ಶಿಕ್ಷಣ, ಮದುವೆ ಮತ್ತು ವಸತಿಗೆ ಸಂಬಂಧಿಸಿ ಮುಂಗಡ ಕ್ಲೈಮ್‌ಗಳಿಗಾಗಿ (advance claims) ಸ್ವಯಂ-ಮೋಡ್ ಸೆಟಲ್‌ಮೆಂಟ್ (auto-mode settlement ) ಅನ್ನು ಪರಿಚಯಿಸುವುದಾಗಿ ಘೋಷಿಸಿದೆ. ಈ ವ್ಯವಸ್ಥೆಯಲ್ಲಿ ಯಾರದೇ ಹಸ್ತಕ್ಷೇಪವಿಲ್ಲದೆ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯಬಹುದು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಹೇಳಿಕೆಯ ಪ್ರಕಾರ, ಅನಿರುದ್ಧ್ ಪ್ರಸಾದ್ ಎಂಬುವರು 2024ರ ಮೇ 9ರಂದು ಪ್ಯಾರಾ 68J ಅಡಿಯಲ್ಲಿ ಅನಾರೋಗ್ಯಕ್ಕಾಗಿ ಮುಂಗಡವಾಗಿ ಅರ್ಜಿ ಸಲ್ಲಿಸಿದ್ದರು. ಅವರ ಮುಂಗಡ ಕ್ಲೈಮ್ ಅನ್ನು 2024ರ ಮೇ 11 ರಂದು 92,143 ರೂ. ಅನ್ನು ಮೂರು ದಿನಗಳ ಒಳಗೆ ಇತ್ಯರ್ಥಪಡಿಸಲಾಗಿದೆ. ಇಂತಹ ಹಲವು ಮಂದಿ ಇಪಿಎಫ್‌ಒನಲ್ಲಿ ಮುಂಗಡ ಕ್ಲೈಮ್ ಪಾವತಿಯ ಪ್ರಯೋಜನವನ್ನು ಪಡೆದಿದ್ದಾರೆ.

ಇಪಿಎಫ್‌ಒ ಆಟೋ ಮೋಡ್ ಸೆಟಲ್ಮೆಂಟ್

ಅನಾರೋಗ್ಯದ ಕಾರಣಕ್ಕಾಗಿ ಮುಂಗಡ ಕ್ಲೈಮ್ ಮಾಡಲು 2020ರ ಏಪ್ರಿಲ್ ನಲ್ಲಿ ಕ್ಲೈಮ್ ಸೆಟ್ಲ್ ಮೆಂಟ್ ಸ್ವಯಂ ಮೋಡ್ ಅನ್ನು ಪರಿಚಯಿಸಲಾಯಿತು. ಈಗ ಈ ಮಿತಿಯನ್ನು 1 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸುಮಾರು 2.25 ಕೋಟಿ ಸದಸ್ಯರು ಈ ಸೌಲಭ್ಯದ ಲಾಭವನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

2023- 24ರ ಹಣಕಾಸು ವರ್ಷದಲ್ಲಿ ಇಪಿಎಫ್‌ಒ ಸುಮಾರು 4.45 ಕೋಟಿ ಕ್ಲೈಮ್‌ಗಳನ್ನು ಇತ್ಯರ್ಥಪಡಿಸಿದೆ. ಅದರಲ್ಲಿ ಶೇ. 60ಕ್ಕಿಂತ ಹೆಚ್ಚು ಮಂದಿ ಒಟ್ಟು 2.84 ಕೋಟಿ ಕ್ಲೈಮ್‌ಗಳು ಮುಂಗಡ ಕ್ಲೈಮ್‌ಗಳಾಗಿವೆ. ವರ್ಷದಲ್ಲಿ ಇತ್ಯರ್ಥವಾದ ಒಟ್ಟು ಮುಂಗಡ ಕ್ಲೇಮ್‌ಗಳಲ್ಲಿ ಸುಮಾರು 89.52 ಲಕ್ಷ ಕ್ಲೇಮ್‌ಗಳನ್ನು ಇತ್ಯರ್ಥಗೊಳಿಸಲಾಗಿದೆ.

ಪಿಎಫ್ ಹಿಂಪಡೆಯುವುದು ಹೇಗೆ?

ಇಪಿಎಫ್ ಸದಸ್ಯರು ನಿಯಮ 68J ಅಡಿಯಲ್ಲಿ ವೈದ್ಯಕೀಯ ಕಾಯಿಲೆಗಳಿಗೆ ಇಪಿಎಫ್ ಹಿಂತೆಗೆದುಕೊಳ್ಳುವಿಕೆಗೆ ಅನ್ವಯಿಸಲು ನಿಯಮಗಳನ್ನು ತಿಳಿದಿರಬೇಕು, ನಿಯಮ 68K ಅಡಿಯಲ್ಲಿ ಮದುವೆ ಅಥವಾ ಉನ್ನತ ಶಿಕ್ಷಣ ಮತ್ತು ನಿಯಮ 68B ಅಡಿಯಲ್ಲಿ ವಸತಿ ಸೌಲಭ್ಯಕ್ಕಾಗಿ ಮುಂಗಡವನ್ನು ಪಡೆಯಬಹುದು.

ನಿಯಮ 68 ಜೆ

ಇಪಿಎಫ್ ಸದಸ್ಯರು ಉದ್ಯೋಗದಾತ ಅಥವಾ ವೈದ್ಯರಿಂದ ಸಹಿ ಮಾಡಿದ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ವೈದ್ಯಕೀಯ ಕ್ಲೈಮ್‌ಗಾಗಿ, ಇಪಿಎಫ್ ಯೋಜನೆಗೆ ಎಷ್ಟು ವರ್ಷಗಳವರೆಗೆ ಅನ್ವಯಿಸಲಾಗಿದೆ ಎಂಬ ನಿಯಮವಿಲ್ಲ.

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ನಿಯಮ 68K

ಮದುವೆ ಅಥವಾ ಉನ್ನತ ಶಿಕ್ಷಣದ ಉದ್ದೇಶಗಳಿಗಾಗಿ ಪಿಎಫ್ ಹಣವನ್ನು ಹಿಂಪಡೆಯಲು ಇಪಿಎಫ್ ಸದಸ್ಯರು ಇಪಿಎಫ್‌ಒನೊಂದಿಗೆ 7 ವರ್ಷಗಳನ್ನು ಪೂರ್ಣಗೊಳಿಸಬೇಕು. ಇಪಿಎಫ್ ಸದಸ್ಯರು ಅದನ್ನು ಆನ್‌ಲೈನ್ ಸ್ವರೂಪದಲ್ಲಿ ಘೋಷಿಸಬೇಕಾಗುತ್ತದೆ. ಆದ್ದರಿಂದ ಅವರು ತಮ್ಮ ಷೇರಿನ ಗರಿಷ್ಠ ಶೇ. 50ರಷ್ಟನ್ನು ಬಡ್ಡಿಯೊಂದಿಗೆ ಹಿಂತೆಗೆದುಕೊಳ್ಳಬಹುದು.

ನಿಯಮ 68B

ಫ್ಲಾಟ್/ಮನೆಯನ್ನು ಖರೀದಿಸಲು ಅಥವಾ ನಿರ್ಮಿಸಲು, ಇಪಿಎಫ್ ಸದಸ್ಯರು ಇಪಿಎಫ್‌ಒನೊಂದಿಗೆ ಐದು ವರ್ಷಗಳನ್ನು ಪೂರ್ಣಗೊಳಿಸಬೇಕು. ಇಪಿಎಫ್‌ಒ ಮನೆಯ ದುರಸ್ತಿ ಮತ್ತು ನವೀಕರಣಕ್ಕಾಗಿ ಮುಂಗಡ ಹಿಂತೆಗೆದುಕೊಳ್ಳುವಿಕೆಯನ್ನು ಸಹ ಅನುಮತಿಸುತ್ತದೆ. ಇದನ್ನು ಎರಡು ಬಾರಿ ಮಾಡಬಹುದು. ಹಿಂಪಡೆಯಬಹುದಾದ ಮೊತ್ತವು ಉದ್ದೇಶವನ್ನು ಅವಲಂಬಿಸಿರುತ್ತದೆ. ಶೇ.90ರವರೆಗೂ ಹಣ ಹಿಂಪಡೆಯಲು ಸಾಧ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Money Guide: ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ದಿನ ಕಳೆದ ಹಾಗೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಎಷ್ಟು ದುಡಿದರೂ ಕಡಿಮೆಯೇ ಎನ್ನುವಂತಾಗಿದೆ. ಅದರಲ್ಲಿಯೂ ಈಗಷ್ಟೇ ಉದ್ಯೋಗಕ್ಕೆ ಸೇರಿದವರಿಗೆ ಇನ್ನಷ್ಟು ಚಿಂತೆ. ತಮ್ಮ ಖರ್ಚು ನೋಡಬೇಕು, ಮನೆಯವರಿಗೂ ಹಣ ಕಳುಹಿಸಬೇಕು, ಲೋನ್‌ ಇದ್ದರೆ ಅದನ್ನೂ ತುಂಬಬೇಕು. ಇಷ್ಟರ ನಡುವೆ ಉಳಿತಾಯ ಎನ್ನುವುದು ಕನಸಿನ ಮಾತು ಎಂದುಕೊಳ್ಳುತ್ತಾರೆ. ಆದರೆ ನೆನಪಿಡಿ ಸಂಬಳ ಎಷ್ಟೇ ಬರಲಿ ಅದರಲ್ಲಿ ಪ್ರತಿ ತಿಂಗಳು ಒಂದಷ್ಟು ಹಣವನ್ನು ಉಳಿತಾಯ ಮಾಡಲೇ ಬೇಕು. ಯಾವಾಗ, ಯಾವ ರೀತಿಯಲ್ಲಿ ಅಪಾಯ ಎದುರಾಗುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಬಜೆಟ್‌ ತಯಾರಿಸಿ

ಮೊದಲಿಗೆ ಬಜೆಟ್‌ ತಯಾರಿಸಿಕೊಳ್ಳಿ. ಕೈಗೆ ಎಷ್ಟು ಸಂಬಳ ಬರುತ್ತದೆ ಎನ್ನುವುದನ್ನು ಗಮನಿಸಿ ಬಜೆಟ್‌ ತಯಾರಿಸಿ. ತಿಂಗಳ ಆರಂಭದಲ್ಲೇ ಸಂಬಳದ ಮೊತ್ತವನ್ನು ಪ್ರತಿ ಖರ್ಚಿಗೆ ಇಷ್ಟೆಂದು ನಿರ್ಧರಿಸಿ. ಇದರಿಂದ ಅನಗತ್ಯ ಖರ್ಚನ್ನು ತಪ್ಪಿಸಬಹುದು. ಇದೇ ಕಾರಣಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಬಜೆಟ್‌ಗೆ ಒತ್ತು ನೀಡುತ್ತವೆ.

ಎಮರ್ಜೆನ್ಸಿ ಫಂಡ್‌

ಜೀವನ ಎನ್ನುವುದು ಅನಿರೀಕ್ಷಿತಗಳ ಆಗರ. ಇಲ್ಲಿ ಯಾವಾಗ, ಏನು ಸಂಭವಿಸುತ್ತದೆ ಎನ್ನುವುದನ್ನು ಮೊದಲೇ ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಎಮರ್ಜೆನ್ಸಿ ಫಂಡ್‌ ಹೊಂದಿರುವುದು ಅತ್ಯಗತ್ಯ. ಅಂದರೆ 4-5 ತಿಂಗಳ ಸಂಬಳದಷ್ಟು ಹಣ ನಮ್ಮ ಸೇವಿಂಗ್ ಅಕೌಂಟ್‌ನಲ್ಲಿ ಯಾವತ್ತೂ ಇರಬೇಕು. ಅನಿರೀಕ್ಷಿತ ಅಗತ್ಯಗಳಿಗೆ ಇದು ನೆರವಾಗುತ್ತದೆ. ತಕ್ಷಣ ದುಡ್ಡು ಕೈಗೆ ಬರುವಂತಿರಬೇಕು. ಇದರಿಂದ ಕಷ್ಟ ಕಾಲದಲ್ಲಿ ಸಾಲಕ್ಕಾಗಿ ಇತರರ ಮುಂದೆ ಕೈ ಚಾಚುವುದು ತಪ್ಪುತ್ತದೆ.

ಸಾಧ್ಯವಿರುವಲ್ಲೆಲ್ಲ ಖರ್ಚು ಕಡಿಮೆ ಮಾಡಿ

ನಿಮ್ಮ ಸಂಬಳವನ್ನು ಉಳಿಸಲು ಇದೊಂದು ಅತ್ಯುತ್ತಮ ಮಾರ್ಗ. ಸಾಧ್ಯವಾದಷ್ಟು ಮನೆಯಲ್ಲೇ ಆಹಾರ ತಯಾರಿಸಿ. ಪ್ರತಿ ದಿನ ಹೋಟೆಲ್‌ ಆಹಾರ ಸೇವಿಸುವುದರಿಂದ ಖರ್ಚು ಅಧಿಕ. ಮಾತ್ರವಲ್ಲ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಆದಷ್ಟು ಕರೆಂಟ್‌ ಉಳಿತಾಯ ಮಾಡಿ. ಅನಗತ್ಯ ಬಳಕೆ ತಪ್ಪಿಸಿ. ಮನೆ ಸಮೀಪದಲ್ಲೇ ಆಫೀಸ್‌ ಇದ್ದರೆ ಆದಷ್ಟು ನಡೆದುಕೊಂಡೇ ಹೋಗಿ. ಇದರಿಂದ ವಾಕಿಂಗ್‌ ಮಾಡಿದಂತೂ ಆಗುತ್ತದೆ. ಇನ್ನು ಅಗತ್ಯ ವಸ್ತುಗಳನ್ನು ಆನ್‌ಲೈನ್‌ / ಆಫ್‌ಲೈನ್‌ನಲ್ಲಿ ಆಫರ್‌ ಇದ್ದಾಗ ಕಂಡುಕೊಳ್ಳಿ.

ವಿಮೆ ಮಾಡಿಸಿ

ಜೀವ ವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಲ್ಲ ಎಂದಾದರೆ ಮೊದಲು ಇದನ್ನು ಮಾಡಿಸಿ. ಇದು ಅನಿವಾರ್ಯವೂ ಹೌದು. ಆರೋಗ್ಯ ವಿಮೆ ಕಠಿಣ ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುತ್ತದೆ. ನಿಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ವಿಮೆ ವ್ಯಾಪ್ತಿಗೆ ಒಳಪಡುತ್ತಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಜತೆಗೆ ಜೀವ ವಿಮೆಯೂ ಪ್ರಮುಖವಾದುದು. ನಿಮ್ಮ ಜೀವ ವಿಮಾ ರಕ್ಷಣೆಯು ವಾರ್ಷಿಕ ಮನೆಯ ವೆಚ್ಚಗಳ ಮೂರು ಪಟ್ಟು ಇರುವಂತೆ ನೋಡಿಕೊಳ್ಳಿ. ಇದರಿಂದ ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಅಕೌಂಟ್‌ನಲ್ಲಿರುವ ಹಣವನ್ನು ಹಾಗೇ ಉಳಿಸಬಹುದು.

ಕಂಡದ್ದೆಲ್ಲ ಕೊಂಡು ಗುಡ್ಡೆ ಹಾಕಬೇಡಿ

ಶಾಪಿಂಗ್‌ ಹೋದಾಗ ಅಥವಾ ಆನ್‌ಲೈನ್‌ನಲ್ಲಿ ಆಕರ್ಷಕವಾಗಿ ಕಂಡದ್ದನ್ನೆಲ್ಲ ಕೊಂಡುಕೊಳ್ಳುವ ಅಭ್ಯಾಸ ಕೆಲವರಿಗಿರುತ್ತದೆ. ಅದರ ಉಪಯೋಗವೇನು, ತಾವೆಷ್ಟು ಅದನ್ನು ಬಳಸುತ್ತೇವೆ ಎನ್ನುವ ಬಗ್ಗೆ ಯೋಚನೆಯನ್ನೂ ಮಾಡದೆ ಖರೀದಿಸಿ ಗುಡ್ಡೆ ಹಾಕುತ್ತಾರೆ. ಈ ಅಭ್ಯಾಸವನ್ನು ನಿಲ್ಲಿಸಿ. ಯಾವುದೇ ವಸ್ತು ಕಂಡುಕೊಳ್ಳಬೇಕಾದರೆ ನಿಜವಾಗಿಯೂ ಅಗತ್ಯ ಉಂಟಾ ಎನ್ನುವುದನ್ನು ಹಲವು ಬಾರಿ ಯೋಚಿಸಿ.

ಹೂಡಿಕೆ ಮಾಡಿ

ಇಂದಿನ ಉಳಿತಾಯವೇ ನಾಳೆಯ ಆದಾಯ. ಹೀಗಾಗಿ ನಿಮ್ಮ ಆದಾಯದ 10% ಅನ್ನು ಹೂಡಿಕೆ ಮಾಡಿ. ಆದರೆ ಎಲ್ಲವನ್ನೂ ಒಂದೇ ಕಡೆ ಹೂಡಿಕೆ ಮಾಡಬೇಡಿ. ಇದಕ್ಕಾಗಿ ಈಕ್ವಿಟಿ, ಚಿನ್ನ, ಮ್ಯೂಚುವಲ್‌ ಫಂಡ್‌ನಂತಹ ವೈವಿಧ್ಯಮಯ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಿ. ಮ್ಯೂಚುವಲ್‌ ಫಂಡ್‌ ಎಂದರೆ ಸಾಮೂಹಿಕ ಹೂಡಿಕೆಯ ಸಾಧನ. ಹಲವಾರು ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿ, ಅದನ್ನು ವೃತ್ತಿಪರ ಫಂಡ್ ಮ್ಯಾನೇಜರ್‌ಗಳ ನೆರವಿನಿಂದ ಈಕ್ವಿಟಿ, ಬಾಂಡ್‌, ಸರ್ಕಾರಿ ಸೆಕ್ಯುರಿಟೀಸ್‌, ಮನಿ ಮಾರ್ಕೆಟ್‌ ಸಾಧನಗಳಲ್ಲಿ ಹೂಡಿಕೆ ಮಾಡುವುದು.‌ ಪ್ರತಿ ಮ್ಯೂಚುವಲ್‌ ಫಂಡ್‌ ಯೋಜನೆಗೂ ಅದರದ್ದೇ ಆದ ಉದ್ದೇಶ ಇರುತ್ತದೆ. ಸ್ಟಾಕ್‌ ಮಾರ್ಕೆಟ್‌ ಬಗ್ಗೆ ಸಾಕಷ್ಟು ತಿಳುವಳಿಕೆ ಇಲ್ಲದವರು ಹಾಗೂ ತಿಳಿಯಲು ಸಮಯದ ಅಭಾವ ಇರುವವರು ಮ್ಯೂಚುವಲ್‌ ಫಂಡ್‌ ಆಯ್ಕೆ ಮಾಡಬಹುದು. ನೆನಪಿಡಿ ಹೂಡಿಕೆಯಲ್ಲಿ ತೊಡಗುವ ಮುನ್ನ ಹಣಕಾಸು ಸಲಹೆಗಾರರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇಎಂಐ ತಪ್ಪಿಸಬೇಡಿ

ದಂಡದ ಮೂಲಕ ನಿಮ್ಮ ಒಂದಷ್ಟು ಹಣ ಪೋಲಾಗುವುದನ್ನು ತಡೆಯುವ ಅತ್ಯುತ್ತಮ ಮಾರ್ಗ ಎಂದರೆ ಸರಿಯಾದ ಸಮಯಕ್ಕೆ ಇಎಂಐ ಪಾವತಿಸುವುದು. ಸರಿಯಾಗಿ ಇಎಂಐ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಇದರಿಂದ ನಿಮ್ಮ ಹಣ ವ್ಯರ್ಥವಾದಂತಾಗುತ್ತದೆ. ಅಲ್ಲದೆ ವಾಹನದಲ್ಲಿ ಸಂಚರಿಸುವಾಗ ದಾಖಲೆಗಳು ತಪ್ಪದೆ ನಿಮ್ಮ ಬಳಿ ಇರಲಿ. ಹೆಲ್ಮೆಟ್‌, ಸೀಟ್‌ ಬೆಲ್ಟ್‌ ಧರಿಸುವುದು ಮುಂತಾದ ನಿಯಮಗಳನ್ನು ಉಲ್ಲಂಘಿಸಲೇಬೇಡಿ.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading

ಮನಿ-ಗೈಡ್

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Money Guide: ಈ ದುಬಾರಿ ದುನಿಯಾದಲ್ಲಿ, ಬೆಲೆ ಏರಿಕೆಯ ಈ ದಿನಗಳಲ್ಲಿ ಐಷಾರಾಮಿ ಬಿಡಿ ತೀರಾ ಅಗತ್ಯ ವಸ್ತುಗಳನ್ನು ಕೊಳ್ಳಲೂ ಸಾಲ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕೆ ತಕ್ಕಂತೆ ವಿವಿಧ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಸರಳ ವಿಧಾನಗಳ ಮೂಲ ಲೋನ್‌ ನೀಡಲು ಮುಂದೆ ಬರುತ್ತಿವೆ. ನೆನಪಿಡಿ ತೀರಾ ಅನಿವಾರ್ಯವಲ್ಲದ ಹೊರತು ಸಾಲಕ್ಕೆ ಮುಂದಾಗಬೇಡಿ. ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ʼಸಾಲ ಮಾಡಿಯಾದ್ರೂ ತುಪ್ಪ ತಿನ್ನುʼ ಎನ್ನುವ ಗಾದೆ ಮಾತಿದೆ. ಅಂದರೆ ಐಷಾರಾಮಿ ಬುದುಕು ಬೇಕೆಂದಿದ್ದರೆ ಸಾಲ ಮಾಡಬೇಕಾಗುತ್ತದೆ ಎನ್ನುವ ಅರ್ಥದಲ್ಲಿ ಹಿರಿಯರು ಈ ಮಾತನ್ನು ಹೇಳಿದ್ದರು. ಆದರೆ ಈ ದುಬಾರಿ ದುನಿಯಾದಲ್ಲಿ, ಬೆಲೆ ಏರಿಕೆಯ ಈ ದಿನಗಳಲ್ಲಿ ಐಷಾರಾಮಿ ಬಿಡಿ ತೀರಾ ಅಗತ್ಯ ವಸ್ತುಗಳನ್ನು ಕೊಳ್ಳಲೂ ಸಾಲ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕೆ ತಕ್ಕಂತೆ ವಿವಿಧ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಸರಳ ವಿಧಾನಗಳ ಮೂಲ ಲೋನ್‌ ನೀಡಲು ಮುಂದೆ ಬರುತ್ತಿವೆ. ನೆನಪಿಡಿ ತೀರಾ ಅನಿವಾರ್ಯವಲ್ಲದ ಹೊರತು ಸಾಲಕ್ಕೆ ಮುಂದಾಗಬೇಡಿ. ಇಂದಿನ ಮನಿಗೈಡ್‌ (Money Guide)ನಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವುದನ್ನು ನೋಡೋಣ.

ಅಗತ್ಯ ನೋಡಿಕೊಳ್ಳಿ

ಮೊದಲಿನಂತೆ ಈಗ ಸಾಲ ಪಡೆದುಕೊಳ್ಳಲು ಅನೇಕ ಬಾರಿ ಬ್ಯಾಂಕ್‌ ಬಾಗಿಲಿಗೆ ಓಡಾಡಬೇಕಿಲ್ಲ, ದಿನಗಟ್ಟಲೆ ಕಾಯಬೇಕಾಗಿಲ್ಲ. ಅಗತ್ಯ ಡಾಕ್ಯುಮೆಂಟ್‌ ಹಾಜರುಪಡಿಸಿ ಆನ್‌ಲೈನ್‌ನಲ್ಲೇ, ಮನೆಯಲ್ಲಿ ಕುಳಿತು ಲೋನ್‌ಗೆ ಅಪ್ಲೈ ಮಾಡಬಹುದು. ಹಾಗಂತ ಸುಲಭವಾಗಿ ದೊರೆಯುತ್ತದೆ ಎನ್ನುವ ಕಾರಣಕ್ಕ ತೀರಾ ಸಣ್ಣ ಪುಟ್ಟ ವಿಚಾರಕ್ಕೂ ಸಾಲ ಮಾಡಬೇಡಿ. ತೀರಾ ಅನಿವಾರ್ಯವಲ್ಲದೆ ಹೊರತು ಲೋನ್‌ ತೆರೆಗೆದುಕೊಳ್ಳಲೇಬೇಡಿ. ಸಾಲ ಮಾಡಬೇಕಾ ಎನ್ನುವ ಬಗ್ಗೆ ಒಂದಲ್ಲ ನೂರಾರು ಬಾರಿ ಆಲೋಚಿಸಿ. ಮನೆಯ ಇತರ ಸದಸ್ಯರು, ಸ್ನೇಹಿತರ ಜತೆ ಚರ್ಚಿಸಿ. ಬೇಕೇ ಬೇಕೆ ಎಂದಾದರೆ ಮಾತ್ರ ಸಾಲಕ್ಕೆ ಅರ್ಜಿ ಸಲ್ಲಿಸಿ. ಸಾಧ್ಯವಾದಷ್ಟು ಹಾಸಿಗೆ ಇದ್ದಷ್ಟೇ ಕಾಲು ಚಾಚು ಪಾಲಿಸಿ ಫಾಲೋ ಮಾಡಿ.

ಕಡಿಮೆ ಅವಧಿಯನ್ನು ಅಯ್ದುಕೊಳ್ಳಿ

ಸರಿ, ನೀವು ಸಾಲ ಪಡೆದುಕೊಳ್ಳಲೇ ಬೇಕು ಎನ್ನುವ ತೀರ್ಮಾನಕ್ಕೆ ಬಂದಿದ್ದೀರಿ ಎಂದಿಟ್ಟುಕೊಳ್ಳೋಣ. ಈಗ ನೀವು ಗಮನಿಸಬೇಕಾದ ಇನ್ನೊಂದು ಮುಖ್ಯ ಅಂಶ ಎಂದರೆ ಸಾಲದ ಅವಧಿ. ಅಂದರೆ ನೀವು ಸಾಲ ತೀರಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎನ್ನುವುದು ಕೂಡ ನಿಮ್ಮ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಅಂದರೆ ಅವಧಿ ದೀರ್ಘವಾಗದ್ದಷ್ಟು ಬಡ್ಡಿ ಹೆಚ್ಚಾಗುತ್ತದೆ. ಆದ್ದರಿಂದ ಕಡಿಮೆ ಅವಧಿಯ ಸಾಲ ಮರುಪಾವತಿ ಆಯ್ಕೆಯನ್ನು ಆಯ್ದುಕೊಳ್ಳಿ. ಉದಾಹರಣೆಗೆ: ಹೋಮ್‌ ಲೋನ್‌ನ ಅವಧಿ ಗರಿಷ್ಠ 30 ವರ್ಷ ತನಕ ಇರುತ್ತದೆ. ಸಹಜವಾಗಿ ದೀರ್ಘ ಅವಧಿ ಹೊಂದಿದ್ದರೆ ಇಎಂಐ ಪಾವತಿಸಬೇಕಾದ ಮೊತ್ತವೂ ಕಡಿಮೆ ಇರುತ್ತದೆ. ಆದರೆ ನೀವು ಪಾವತಿಸಬೇಕಾದ ಬಡ್ಡಿಯ ಮೊತ್ತ ಹೆಚ್ಚಿರುತ್ತದೆ. 10 ವರ್ಷಗಳ ಸಾಲಕ್ಕೆ ನೀವು ಪಡೆದ ಮೊತ್ತದ ಜತೆಗೆ ಅದರ ಶೇ. 57ರಷ್ಟು ಬಡ್ಡಿ ಪಾವತಿಸಬೇಕು. ಇನ್ನು 20 ವರ್ಷಕ್ಕೆ ಇದೇ ಮೊತ್ತ ಶೇ. 128. ಒಂದುವೇಳೆ ನೀವು 50 ಲಕ್ಷ ರೂ. ಸಾಲವನ್ನು 25 ವರ್ಷಗಳ ಅವಧಿಗೆ ಪಡೆದುಕೊಂಡರೆ ನೀವು ಸುಮಾರು 83.5 ಲಕ್ಷ ರೂ. (ಶೇ. 167) ಪಾವತಿಸಬೇಕಾಗುತ್ತದೆ.

ಕೆಲವು ಸಂದರ್ಭದಲ್ಲಿ ಕಡಿಮೆ ಆದಾಯ ಹೊಂದಿದ್ದರೆ ದೀರ್ಘ ಅವಧಿಯ ಮರುಪಾವತಿಯನ್ನು ಆಯ್ದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದನ್ನು ಆಯ್ದುಕೊಂಡಿದ್ದರೂ ಪ್ರತಿವರ್ಷ ಸಾಲ ಮರುಪಾವತಿಸುವ ಆಯ್ಕೆಯನ್ನು ಹೆಚ್ಚಿಸಬೇಕು. ಆದಾಯ ಹೆಚ್ಚುತ್ತಿದ್ದಂತೆ ಇಎಂಐ ಮೊತ್ತವನ್ನೂ ಜಾಸ್ತಿ ಮಾಡಬೇಕು.

ನಿಯಮಿತ ಪಾವತಿ

ಇಎಂಐಯನ್ನು ನಿಯಮಿತವಾಗಿ ಪಾವತಿಸಿ. ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಬೇಡಿ. ಮರುಪಾವತಿ ಕಂತು ಸೂಕ್ತವಾಗಿ ಪಾವತಿಸದಿದ್ದರೆ ಅದು ನಿಮ್ಮ ಕ್ರೆಡಿಟ್‌ ಸ್ಕೋರ್‌ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಲ್ಲದೆ ಇದು ಭಾರೀ ದಂಡಕ್ಕೂ ಕಾರಣವಾಗಬಹುದು.

ಹೂಡಿಕೆಗಾಗಿ ಸಾಲ ಮಾಡಬೇಡಿ

ಸಾಲ ಪಡೆದ ಹಣವನ್ನು ಹೂಡಿಕೆ ಮಾಡಲು ಎಂದಿಗೂ ಬಳಸಬೇಡಿ. ಈಕ್ವಿಟಿಗಳಂತಹ ಹೆಚ್ಚಿನ ಆದಾಯವನ್ನು ನೀಡುವ ಹೂಡಿಕೆಗಳು ತುಂಬಾ ಅಸ್ಥಿರವಾಗಿರುತ್ತವೆ. ಮಾರುಕಟ್ಟೆಗಳು ಕುಸಿದರೆ, ನೀವು ನಷ್ಟವನ್ನು ಅನುಭವಿಸಬೇಕಾಗುತ್ತದೆ.

ದೊಡ್ಡ ಮೊತ್ತದ ಸಾಲಕ್ಕೆ ವಿಮೆ ಮಾಡಿಸಿ

ಹೋಮ್‌ ಲೋನ್‌ ಮತ್ತು ವೆಹಿಕಲ್‌ ಲೋನ್‌ನಂತಗ ದೊಡ್ಡ ಮೊತ್ತದ ಸಾಲ ಪಡೆಯುವಾಗ ಅಷ್ಟೂ ಮೊತ್ತಕ್ಕೆ ವಿಮೆ ಮಾಡಿಸಿ. ಇದಕ್ಕಾಗಿ ಟರ್ಮ್‌ ಇನ್ಶೂರೆನ್ಸ್‌ ಉತ್ತಮ. ಇದರಿಂದ ಒಂದು ವೇಳೆ ನಿಮಗೆ ಏನಾದರೂ ಸಂಭವಿಸಿದರೆ ಸಾಲವು ನಿಮ್ಮ ಕುಟುಂಬ ಹೊರೆ ಆಗುವುದಿಲ್ಲ. ಇಎಂಐ ಪಾವತಿಸಲು ಸಾಧ್ಯವಾಗದಿದ್ದರೆ ಬ್ಯಾಂಕ್‌ನವರು ಮನೆ ಅಥವಾ ಕಾರು ಸ್ವಾಧೀನಪಡಿಸಿಕೊಳ್ಳುತ್ತಾರೆ. ಹೀಗಾಗಿ 50 ಲಕ್ಷ ರೂ.ಗಳ ಟರ್ಮ್ ಇನ್ಶೂರೆನ್ಸ್ ಯೋಜನೆ ಮಾಡಿಸುವುದು ಉತ್ತಮ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಬಡ್ಡಿ ಮೊತ್ತ ಲೆಕ್ಕ ಹಾಕಿ

ಸಾಲ ಪಡೆದುಕೊಳ್ಳಲು ನಿರ್ಧರಿಸಿದ ಬಳಿಕ ಬಡ್ಡಿದರವನ್ನು ಹೋಲಿಸಿ ನೋಡಿ. ವಿವಿಧ ಬ್ಯಾಂಕ್‌, ಸಾಲದಾತ ಸಂಸ್ಥೆಗಳ ಬಡ್ಡಿದರವನ್ನು ಗಮನಿಸಿ. ಜತೆಗೆ ಪ್ರತಿಯೊಂದು ಬ್ಯಾಂಕ್‌ ಕೂಡ ತನ್ನದೇ ಆದ ನಿಯಮಗಳನ್ನು ಹೊಂದಿರುತ್ತದೆ. ಆದ್ದರಿಂದ ಷರತ್ತುಗಳನ್ನು ಗಮನವಿಟ್ಟು ಓದಿ. ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಕೇಳಿ ತಿಳಿದುಕೊಳ್ಳಿ.

ಅಗತ್ಯ ದಾಖಲೆಗಳನ್ನು ಮುಂಚಿತವಾಗಿ ಸಿದ್ಧಪಡಿಸಿ

ತ್ವರಿತ ಲೋನ್ ಮಂಜೂರಾತಿಗಾಗಿ ಮುಂಚಿತವಾಗಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವುದು ಅತ್ಯಗತ್ಯ. ಸಾಮಾನ್ಯವಾಗಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್‌, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಮತದಾರರ ಗುರುತಿನ ಚೀಟಿ ಮತ್ತು ಎರಡು ವರ್ಷಗಳ ಆದಾಯ ತೆರಿಗೆ ರಿಟರ್ನ್ (ಐಟಿಆರ್)ನಂತಹ ಗುರುತಿನ ಪುರಾವೆಗಳನ್ನು ಬ್ಯಾಂಕ್‌ಗಳು ಕೇಳುತ್ತವೆ. ಈ ದಾಖಲೆಗಳನ್ನು ಎಷ್ಟು ಬೇಗ ಸಲ್ಲಿಸುತ್ತೀರೋ ಅಷ್ಟು ಬೇಗ ಸಾಲ ಮಂಜೂರಾಗುತ್ತದೆ. ಜತೆಗೆ ಆದಾಯದ ಮೂಲ (ಸ್ಯಾಲರಿ ಸ್ಲಿಪ್‌ ಅಥವಾ ಬ್ಯಾಂಕ್‌ ಸ್ಟೇಟ್‌ಮೆಂಟ್‌) ಸಿದ್ಧವಾಗಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಮುನ್ನ ಮತ್ತೊಮ್ಮೆ ಗಮನಿಸಿ

ಭರ್ತಿ ಮಾಡಿದ ನಿಮ್ಮ ಪರ್ಸನಲ್‌ ಲೋನ್‌ ಅಪ್ಲಿಕೇಷನ್‌ ಫಾರಂ ಅನ್ನು ಕೂಡಲೇ ಸಲ್ಲಿಸಬೇಡಿ. ಮತ್ತೊಮ್ಮೆ ವಿವರಗಳನ್ನು ಕಣ್ಣಾಡಿಸಿ ಮಾಹಿತಿ ಸರಿಯಾಗಿದೆ ಎನ್ನುವುದು ಖಚಿತಪಡಿಸಿಕೊಳ್ಳಿ. ಕೆಲವೊಂದು ಬ್ಯಾಂಕ್‌ಗಳು ಡಾಕ್ಯಮೆಂಟ್‌ ಅಪ್‌ಲೋಡ್‌ ಮಾಡಲು ಕೇಳುತ್ತವೆ. ಇದನ್ನೂ ಗಮನಿಸಿ. ಪೂರ್ಣವಾಗದ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಇದೆ. ಹೀಗಾಗಿ ಷರತ್ತುಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ.

ಇದನ್ನೂ ಓದಿ: Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

Continue Reading

ವಾಣಿಜ್ಯ

Income Tax Returns: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡದಿದ್ದರೆ ಏನಾಗುತ್ತದೆ?

ಆರ್ಥಿಕ ಮೌಲ್ಯಮಾಪನ ವರ್ಷ 2024- 25 ಅಥವಾ ಹಣಕಾಸು ವರ್ಷ 2023- 24 ಕ್ಕಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಆದಾಯ ತೆರಿಗೆ ನಿಯಮಗಳ ಬಗ್ಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ವರ್ಷ ಆದಾಯ ತೆರಿಗೆ ರಿಟರ್ನ್ಸ್ (Income Tax Returns) ಅನ್ನು ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನು ನೀವು ನಿರ್ಧರಿಸಲು ಬೇಕಾದ ಸಮಗ್ರ ಮಾಹಿತಿ ಇಲ್ಲಿದೆ.

VISTARANEWS.COM


on

By

Income Tax Returns
Koo

ಪ್ರತಿ ವರ್ಷ ಆದಾಯ ತೆರಿಗೆ ವಿವರ (Income Tax Returns) ಸಲ್ಲಿಸುತ್ತಿದ್ದರೂ ಇನ್ನೂ ಹಲವಾರು ಗೊಂದಲಗಳು ನಮ್ಮನ್ನು ಕಾಡುತ್ತಿರುತ್ತವೆ. ಮುಖ್ಯವಾಗಿ ಪ್ರತಿ ವರ್ಷ ಆದಾಯ ತೆರಿಗೆ (Income Tax) ವಿವರವನ್ನು ಸಲ್ಲಿಸಲೇಬೇಕೇ ? ಎನ್ನುವುದು. ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವುದು ಅನೇಕ ಭಾರತೀಯ (Indian’s) ತೆರಿಗೆದಾರರ (taxpayers) ಕರ್ತವ್ಯವಾಗಿದೆ.

ಆರ್ಥಿಕ ಮೌಲ್ಯಮಾಪನ ವರ್ಷ 2024- 25 ಅಥವಾ ಹಣಕಾಸು ವರ್ಷ 2023- 24 ಕ್ಕಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಆದಾಯ ತೆರಿಗೆ ನಿಯಮಗಳ ಬಗ್ಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ವರ್ಷ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನು ನೀವು ನಿರ್ಧರಿಸಲು ಬೇಕಾದ ಸಮಗ್ರ ಮಾಹಿತಿ ಇಲ್ಲಿದೆ.

ಆದಾಯದ ಮಿತಿಗಳು

ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಪ್ರಾಥಮಿಕ ಮಾನದಂಡವು ಆದಾಯದ ಮಟ್ಟವನ್ನು ಆಧರಿಸಿದೆ. ಆರ್ಥಿಕ ವರ್ಷ 2024- 25ರ ಆದಾಯ ಮಿತಿಗಳು ಈ ಕೆಳಗಿನಂತಿವೆ.

60 ವರ್ಷಕ್ಕಿಂತ ಕೆಳಗಿನ ವ್ಯಕ್ತಿಗಳು ಒಟ್ಟು ಆದಾಯ 2.5 ಲಕ್ಷ ರೂ., 60- 80 ವರ್ಷದ ಹಿರಿಯ ನಾಗರಿಕರ ಒಟ್ಟು ಆದಾಯ 3 ಲಕ್ಷ ರೂ., 80 ವರ್ಷ ಮೇಲ್ಪಟ್ಟ ಸೂಪರ್ ಸೀನಿಯರ್ ಸಿಟಿಜನ್ಸ್ ಒಟ್ಟು ಆದಾಯ 5 ಲಕ್ಷ ರೂ. ಗಳಿದ್ದರೆ ಸೆಕ್ಷನ್ 80C ನಿಂದ 80U ವರೆಗಿನ ಕಡಿತಗಳ ಮೊದಲು ನಿಮ್ಮ ಒಟ್ಟು ಆದಾಯವು ಈ ಮಿತಿಗಳನ್ನು ಮೀರಿದರೆ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕು.

ಆದಾಯದ ವಿಧಗಳು

ಮೂಲ ಆದಾಯದ ಮಿತಿಗಳನ್ನು ಮೀರಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಅಗತ್ಯವು ವಿವಿಧ ರೀತಿಯ ಆದಾಯಗಳಿಗೆ ವಿಸ್ತರಿಸುತ್ತದೆ. ಇದರರ್ಥ ಕೆಳಗಿನ ಆದಾಯವನ್ನು ವರ್ಷವಿಡೀ ನಿಮ್ಮ ಆದಾಯವೆಂದು ಪರಿಗಣಿಸಲಾಗುತ್ತದೆ.

ಸಂಬಳ ಪಡೆಯುವ ವ್ಯಕ್ತಿಗಳು ನಿಗದಿತ ಮಿತಿಯನ್ನು ಮೀರಿದ ಸಂಬಳದಿಂದ ಬರುವ ಆದಾಯ, ಮನೆ ಆಸ್ತಿಯಿಂದ ಬಾಡಿಗೆ ಅಥವಾ ಇತರ ಆದಾಯ, ಆಸ್ತಿ, ಷೇರುಗಳು, ಮ್ಯೂಚುಯಲ್ ಫಂಡ್ಗಳು ಇತ್ಯಾದಿಗಳ ಮಾರಾಟದಿಂದ ಗಳಿಕೆಗಳು, ವ್ಯಾಪಾರ ಅಥವಾ ವೃತ್ತಿಪರ ಚಟುವಟಿಕೆಗಳಿಂದ ಆದಾಯ, ಬಡ್ಡಿ, ಲಾಭಾಂಶಗಳು, ಲಾಟರಿಗಳಿಂದ ಗೆಲುವುಗಳು ಇತ್ಯಾದಿಗಳಿಂದ ಬರುವ ಆದಾಯ.

ಷರತ್ತುಗಳು

ಆದಾಯವು ಮಿತಿಗಿಂತ ಕೆಳಗಿದ್ದರೂ ಕೆಲವು ಷರತ್ತುಗಳಿಗಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಅಗತ್ಯವಿದೆ.

ಚಾಲ್ತಿ ಖಾತೆಗಳಿಗೆ, ಒಂದು ಅಥವಾ ಹೆಚ್ಚಿನ ಬ್ಯಾಂಕ್ ಖಾತೆಗಳಲ್ಲಿ 1 ಕೋಟಿ ರೂ. ಉಳಿತಾಯ ಖಾತೆಗಳಿಗೆ, 50 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಠೇವಣಿ, ವಿದೇಶಿ ಪ್ರಯಾಣಕ್ಕೆ 2 ಲಕ್ಷ ರೂ. ವೆಚ್ಚ, ವಿದ್ಯುತ್ ಬಿಲ್‌ಗಳ ಮೇಲೆ ರೂ 1 ಲಕ್ಷಕ್ಕಿಂತ ಹೆಚ್ಚಿನ ಪಾವತಿಗಳು, ಹೆಚ್ಚುವರಿಯಾಗಿ ವಿದೇಶಿ ಆಸ್ತಿ ಅಥವಾ ಆದಾಯವನ್ನು ಹೊಂದಿದ್ದರೆ ಅಥವಾ ಭಾರತದ ಹೊರಗಿನ ಯಾವುದೇ ಖಾತೆಯಲ್ಲಿ ಸಹಿ ಮಾಡುವ ಅಧಿಕಾರವನ್ನು ಹೊಂದಿದ್ದರೆ ಆದಾಯದ ಮಟ್ಟವನ್ನು ಲೆಕ್ಕಿಸದೆ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಬೇಕು.

ಹೂಡಿಕೆ ಲಾಭ ಮತ್ತು ನಷ್ಟ

ಸ್ಟಾಕ್‌, ಮ್ಯೂಚುವಲ್ ಫಂಡ್‌ ಅಥವಾ ಇತರ ಸೆಕ್ಯುರಿಟಿಗಳಲ್ಲಿನ ಹೂಡಿಕೆದಾರರು ಐಟಿಆರ್ ಅನ್ನು ಫೈಲ್ ಮಾಡಬೇಕಾಗುತ್ತದೆ. ಅಲ್ಪಾವಧಿಯ ಅಥವಾ ದೀರ್ಘಾವಧಿಯ ಬಂಡವಾಳ ಲಾಭವನ್ನು ಗಳಿಸುತ್ತಿದ್ದರೆ, 10 ಲಕ್ಷದವರೆಗೆ ತೆರಿಗೆ-ಮುಕ್ತವಾಗಿದ್ದರೂ ಸಹ ಲಾಭಾಂಶವನ್ನು ಸ್ವೀಕರಿಸಿದ್ದರೆ, ಹೂಡಿಕೆಯ ನಷ್ಟವನ್ನು ವರದಿ ಮಾಡುವುದು ಸಹ ನಿರ್ಣಾಯಕವಾಗಿದೆ. ಏಕೆಂದರೆ ಇದು ಭವಿಷ್ಯದ ಲಾಭಗಳನ್ನು ಸರಿದೂಗಿಸಲು ನಷ್ಟವನ್ನು ಮುಂದಕ್ಕೆ ಸಾಗಿಸಲು ಅನುವು ಮಾಡಿಕೊಡುತ್ತದೆ. ಅನಂತರದ ವರ್ಷಗಳಲ್ಲಿ ನಿಮ್ಮ ತೆರಿಗೆ ಹೊಣೆಗಾರಿಕೆಯನ್ನು ಕಡಿಮೆ ಮಾಡುತ್ತದೆ.

ಮರುಪಾವತಿಗಳಿಗಾಗಿ ಕ್ಲೈಮ್

ತೆರಿಗೆ ಕಡಿತಗೊಳಿಸಲಾದ (ಟಿಡಿಎಸ್) ಅಥವಾ ಮುಂಗಡ ತೆರಿಗೆಯ ಮೂಲಕ ನೀವು ಹೆಚ್ಚುವರಿ ತೆರಿಗೆಯನ್ನು ಪಾವತಿಸಿದ್ದರೆ, ಮರುಪಾವತಿಯನ್ನು ಕ್ಲೈಮ್ ಮಾಡಲು ಐಟಿಆರ್ ಅನ್ನು ಸಲ್ಲಿಸುವುದು ಅವಶ್ಯಕ. ಸಲ್ಲಿಸದೆಯೇ, ಪಾವತಿಸಿದ ಹೆಚ್ಚುವರಿ ತೆರಿಗೆಯನ್ನು ಮರುಪಡೆಯಲು ಸಾಧ್ಯವಿಲ್ಲ.

ಯಾರಿಗೆ ಕಡ್ಡಾಯ?

ಆದಾಯದ ಮಟ್ಟವನ್ನು ಲೆಕ್ಕಿಸದೆ ಕೆಲವು ವರ್ಗದ ವ್ಯಕ್ತಿಗಳು ಮತ್ತು ಘಟಕಗಳು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಲು ಕಡ್ಡಾಯವಾಗಿ ಅಗತ್ಯವಿದೆ.

ಎಲ್ಲಾ ಕಂಪೆನಿ, ಸಂಸ್ಥೆಗಳು ಆದಾಯ ಅಥವಾ ನಷ್ಟವನ್ನು ಲೆಕ್ಕಿಸದೆ ಆದಾಯ ತೆರಿಗೆ ಸಲ್ಲಿಸಲೇಬೇಕು.
ಚಾರಿಟಬಲ್ ಟ್ರಸ್ಟ್‌ಗಳು ಮತ್ತು ಧಾರ್ಮಿಕ ಸಂಸ್ಥೆಗಳು ಸೆಕ್ಷನ್ 10 ರ ಅಡಿಯಲ್ಲಿ ವಿನಾಯಿತಿಯನ್ನು ಕ್ಲೈಮ್ ಮಾಡುತ್ತಿದ್ದರೆ ಆದಾಯ ತೆರಿಗೆ ಸಲ್ಲಿಸಬೇಕು.

ಇದನ್ನೂ ಓದಿ: PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡದಿದ್ದರೆ ಏನಾಗುತ್ತದೆ?

ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸಲು ವಿಫಲವಾದರೆ ದಂಡ ಮತ್ತು ಕಾನೂನು ಕ್ರಮಕ್ಕೆ ಕಾರಣವಾಗಬಹುದು. ತಡವಾಗಿ ಫೈಲಿಂಗ್ ಮಾಡಿದರೆ ದಂಡ ವಿಧಿಸಲಾಗುತ್ತದೆ. ನಿಗದಿತ ದಿನಾಂಕದ ಅನಂತರ ಆದರೆ ಮೌಲ್ಯಮಾಪನ ವರ್ಷದ ಡಿಸೆಂಬರ್ 31 ರ ಮೊದಲು ಸಲ್ಲಿಸಿದರೆ 5,000 ರೂ. ದಂಡ ಮತ್ತು ಅನಂತರ ಸಲ್ಲಿಸಿದರೆ ದಂಡ ಮೊತ್ತ ಹೆಚ್ಚಾಗುತ್ತದೆ. ಬಾಕಿ ಮೊತ್ತದ ಮೇಲಿನ ಬಡ್ಡಿ, ನಿಗದಿತ ದಿನಾಂಕದಿಂದ ಮಾಸಿಕವಾಗಿ ಲೆಕ್ಕಹಾಕಲಾಗುತ್ತದೆ.

ತೀವ್ರತರವಾದ ಪ್ರಕರಣಗಳಲ್ಲಿ ಪಾಲಿಸದಿರುವುದು ಕಾನೂನು ಕ್ರಮಕ್ಕೆ ಕಾರಣವಾಗಬಹುದು. ಮೂರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದು.

Continue Reading

ಮನಿ-ಗೈಡ್

Money Guide: 30 ಸಾವಿರ ಸಂಬಳ ಪಡೆಯುವವರೂ ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆಗಲು ಸಾಧ್ಯ!

ತಿಂಗಳಿಗೆ ಇರುವುದು ಕೇವಲ 25 ರಿಂದ 30 ಸಾವಿರ ಸಂಬಳ. ಇನ್ನು ಕೋಟ್ಯಧಿಪತಿ ಆಗುವುದು ಕನಸಿನ ಮಾತು ಎಂದು ನಿರಾಶೆಗೆ ಒಳಗಾಗುವರೇ ಹೆಚ್ಚು. ಆದರೆ ಮನಸ್ಸು ಮಾಡಿದರೆ ಕಡಿಮೆ ಸಂಬಳವಿದ್ದರೂ ಸರಿಯಾದ ಯೋಜನೆ (Money Guide) ಹಾಕಿಕೊಂಡರೆ ಕೆಲವೇ ವರ್ಷಗಳಲ್ಲಿ ಕೋಟ್ಯಾಧಿಪತಿಗಳಾಗಬಹುದು. ಕಡಿಮೆ ಸಂಬಳ ಇರುವವರೂ ಹೆಚ್ಚು ಸಂಪಾದನೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಇಲ್ಲಿದೆ ಕೆಲವು ಉಪಯುಕ್ತ ಟಿಪ್ಸ್.

VISTARANEWS.COM


on

By

Money Guide
Koo

ಕೋಟ್ಯಧಿಪತಿ (Crorepati) ಆಗುವ ಕನಸು (dream) ಪ್ರತಿಯೊಬ್ಬರಿಗೂ ಇದೆ. ಆದರೆ ಬರುವ ಸಂಬಳ (salary) ಮನೆ ಖರ್ಚಿಗೂ ಸಾಲುವುದಿಲ್ಲ ಎಂದು ದುಃಖಿಸುವವರೇ ಹೆಚ್ಚು. ಆದರೆ ಸರಿಯಾದ ಯೋಜನೆ (Money Guide ) ರೂಪಿಸಿಕೊಂಡರೆ ಇದು ಕಷ್ಟವೇನಲ್ಲ. ಹಣಕಾಸಿನ ಲೆಕ್ಕಾಚಾರದ ಜೊತೆಜೊತೆಗೆ ಒಂದಷ್ಟು ಯೋಜನೆ ಹಾಕಿಕೊಂಡರೆ ಬಹುತೇಕ ಎಲ್ಲರೂ ಕೋಟ್ಯಧಿಪತಿಗಳಬಹುದು.

ಈಗ ಬಹುತೇಕ ಮಂದಿ ದುಡಿಯುವವರೇ. ಇದರಲ್ಲಿ ಬಹುಪಾಲು ಮಂದಿ ದೊಡ್ಡದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಸಾಕಷ್ಟು ಹಣವನ್ನೂ ಗಳಿಸುತ್ತಿದ್ದಾರೆ. ಕೆಲವು ವರ್ಗದವರ ಆದಾಯ ಬಹುತೇಕ 1 ಕೋಟಿ ರೂ. ಹತ್ತಿರವೂ ಇದೆ. ತಿಂಗಳಿಗೆ 25 ರಿಂದ 30,000 ರೂಪಾಯಿ ಸಂಬಳ ಪಡೆಯುವವರಿಗೆ ಕೋಟ್ಯಾಧಿಪತಿ ಆಗುವ ಕನಸಿದೆ. ಆದರೆ ಇದು ಅಸಾಧ್ಯ ಎಂದು ಬಹುತೇಕ ಮಂದಿ ಕೈಚೆಲ್ಲುತ್ತಾರೆ. ಆದರೆ ಸರಿಯಾದ ಹಣಕಾಸು ಯೋಜನೆಯನ್ನು ರೂಪಿಸಿದರೆ ಇಂದಿನ ಕಾಲದಲ್ಲಿ ಕೋಟ್ಯಾಧಿಪತಿಯಾಗುವುದು ಕಷ್ಟವೇನಲ್ಲ.

ಕೋಟ್ಯಧಿಪತಿಗಳಾಗುವುದು ಇಂದಿನ ಕಾಲದಲ್ಲಿ ಕಷ್ಟವಲ್ಲ. ಇದಕ್ಕಾಗಿ ಅನೇಕ ಹೂಡಿಕೆಯ ವಿಧಾನಗಳಿವೆ. ಅದರ ಮೂಲಕ ಕಡಿಮೆ ಸಂಬಳ ಪಡೆಯುವ ಜನರೂ ಕೋಟ್ಯಾಧಿಪತಿಯಾಗುವ ತಮ್ಮ ಕನಸನ್ನು ನನಸಾಗಿಸಬಹುದು.
ಮ್ಯೂಚುವಲ್ ಫಂಡ್‌ಗಳಲ್ಲಿ ಎಸ್ ಐಪಿ ನಿಮ್ಮ ಕೋಟ್ಯಾಧಿಪತಿಯಾಗುವ ಕನಸನ್ನು ನನಸು ಮಾಡಬಹುದು. ಎಸ್ ಐಪಿ ಮಾಸಿಕ 30,000 ರೂಪಾಯಿಗಳನ್ನು ಗಳಿಸುವ ವ್ಯಕ್ತಿಯನ್ನು ಸಹ ಕೋಟ್ಯಾಧಿಪತಿಯನ್ನಾಗಿ ಮಾಡುತ್ತದೆ.

ಎಸ್ ಐ ಪಿ ಹೇಗೆ ಪ್ರಯೋಜನಕಾರಿ?

ಮ್ಯೂಚುವಲ್ ಫಂಡ್‌ಗಳು ಎಸ್ ಐ ಪಿ ಮಾರುಕಟ್ಟೆ- ಸಂಯೋಜಿತ ಯೋಜನೆಯಾಗಿದೆ. ಆದ್ದರಿಂದ ಅದರಲ್ಲಿ ಲಾಭದ ಗ್ಯಾರಂಟಿ ಇಲ್ಲ. ಆದರೆ ನೇರವಾಗಿ ಷೇರುಗಳಲ್ಲಿ ಹಣವನ್ನು ಹೂಡಿಕೆ ಮಾಡುವುದಕ್ಕೆ ಹೋಲಿಸಿದರೆ ಅಪಾಯವು ಕಡಿಮೆ. ದೀರ್ಘಾವಧಿಯಲ್ಲಿ ಅದರ ಸರಾಸರಿ ಆದಾಯವು ಸುಮಾರು ಶೇ. 12ರಷ್ಟು ಇದೆ ಎಂದು ತಜ್ಞರು ಹೇಳುತ್ತಾರೆ.

Money Guide


ಇದು ಯಾವುದೇ ಇತರ ಯೋಜನೆಗಳಿಗಿಂತ ಹೆಚ್ಚು ಲಾಭಕರ. ಕೆಲವೊಮ್ಮೆ ಅದರಿಂದ ಉತ್ತಮ ಆದಾಯ ಪಡೆಯುವ ಅವಕಾಶವಿರುತ್ತದೆ. ಈ ಸಂಯೋಜನೆಯಿಂದಾಗಿ ದೀರ್ಘಾವಧಿಯಲ್ಲಿ ಮ್ಯೂಚುವಲ್ ಫಂಡ್‌ಗಳಲ್ಲಿ ಹಣವು ವೇಗವಾಗಿ ಬೆಳೆಯುತ್ತದೆ. ಆದ್ದರಿಂದ, ಇಂದಿನ ಸಮಯದಲ್ಲಿ ಜನರು ಇದನ್ನು ಲಾಭದಾಯಕ ವ್ಯವಹಾರವೆಂದು ಪರಿಗಣಿಸುತ್ತಾರೆ ಮತ್ತು ಹೆಚ್ಚಿನ ತಜ್ಞರು ಅದನ್ನು ಪೋರ್ಟ್ ಫೋಲಿಯೋದಲ್ಲಿ ಸೇರಿಸಲು ಹೇಳುತ್ತಾರೆ.

ಮಿಲಿಯನೇರ್ ಆಗುವುದು ಹೇಗೆ?

ತಿಂಗಳಿಗೆ 30,000 ರೂ. ಸಂಬಳ ಪಡೆಯುವವರೂ ಮಿಲಿಯನೇರ್ ಆಗಬಹುದು. ಇದಕ್ಕಾಗಿ 50- 30- 20 ನಿಯಮವನ್ನು ಅನುಸರಿಸಬೇಕು. ಅಂದರೆ ಆದಾಯದ ಶೇ. 20ರಷ್ಟನ್ನು ಎಸ್ ಐ ಪಿಯಲ್ಲಿ ಹೂಡಿಕೆ ಮಾಡಬೇಕು. 30,000 ರೂ. ಶೇ. 20ರಷ್ಟು ಎಂದರೆ 6,000 ರೂ. ಆಗಿರುತ್ತದೆ. ಎಸ್ ಐಪಿಯಲ್ಲಿ ಪ್ರತಿ ತಿಂಗಳು 6,000 ರೂ. ಹೂಡಿಕೆ ಮಾಡಿದರೆ 24 ವರ್ಷಗಳಲ್ಲಿ ಕೋಟ್ಯಧಿಪತಿ ಆಗಬಹುದು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

24 ವರ್ಷಗಳಲ್ಲಿ ಒಟ್ಟು 17,28,000 ರೂ. ಅಂದರೆ ಶೇ.12ರಷ್ಟು ಬಡ್ಡಿ ದರದಲ್ಲಿ 83,08,123 ರೂ. ಆಗುತ್ತದೆ. ಸಮಯದೊಂದಿಗೆ ಆದಾಯವೂ ಹೆಚ್ಚಾಗುವುದರಿಂದ ಹೂಡಿಕೆಯನ್ನು ಹೆಚ್ಚಿಸಿ 24 ವರ್ಷಗಳಲ್ಲಿ 1,00,36,123 ರೂ. ಗಳಿಸಿ 24 ವರ್ಷಗಳ ಮುಂಚೆಯೇ ಮಿಲಿಯನೇರ್ ಆಗಬಹುದು!

Continue Reading
Advertisement
Birla Opus
ವಾಣಿಜ್ಯ3 mins ago

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Kalki 2898 AD Prabhas Film Hits Jackpot 500 Cr WW In Opening
ಟಾಲಿವುಡ್17 mins ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

hosur airport
ಪ್ರಮುಖ ಸುದ್ದಿ22 mins ago

Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

Healthy Foods For Kidney
ಆರೋಗ್ಯ42 mins ago

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

bengal assault case
ಕ್ರೈಂ57 mins ago

Assault Case: ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

karnataka Weather Forecast
ಮಳೆ2 hours ago

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Vastu Tips
ಧಾರ್ಮಿಕ3 hours ago

Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?

Bengaluru-Mysuru highway
ಕರ್ನಾಟಕ3 hours ago

Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

New criminal law
ಪ್ರಮುಖ ಸುದ್ದಿ4 hours ago

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

dina Bhavishya
ಭವಿಷ್ಯ4 hours ago

Dina Bhavishya : ಯಾರನ್ನೂ ನಂಬಿ ಈ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗಬೇಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು20 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌